ಮೈಸೂರು : ಬೆಂಗಳೂರು, ಮಂಗಳೂರು, ಬೆಳಗಾವಿ ಬಳಿಕ ಈಗ ಮೈಸೂರಲ್ಲೂ ಡ್ರಗ್ಸ್ ಜಾಲದ ನಂಟು ಬಯಲಾಗಿದ್ದು, ಮೈಸೂರಿನಲ್ಲೇ ಮಾದಕ ವಸ್ತು ತಯಾರಿಕಾ ಫ್ಯಾಕ್ಟರಿ ನಡೆಯುತ್ತಿದ್ದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಖಚಿತ ಸುಳಿವಿನ ಮೇರೆಗೆ ಮಹಾರಾಷ್ಟ್ರ ಪೊಲೀಸರು ಮೈಸೂರು ಹೊರವಲಯದ ರಿಂಗ್ ರಸ್ತೆ ಬಳಿ ಭಾನುವಾರ ಎಂಡಿಎಂಎ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, 13 ಕೆ.ಜಿ.ಎಂಡಿಎಂಎ, 50 ಕೆ.ಜಿ. ದ್ರವರೂಪದ ಡ್ರಗ್ಸ್ ಪತ್ತೆಯಾಗಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ಸರಿಸುಮಾರು 100 ಕೋಟಿ ರು. ಎಂದು ಅಂದಾಜಿಸಲಾಗಿದೆ. ವಿಶೇಷವೆಂದರೆ, ಇಲ್ಲಿನ ಡ್ರಗ್ಸ್ ತಯಾರಿಕಾ ಘಟಕದಿಂದ ಮಹಾರಾಷ್ಟ್ರಕ್ಕೆ ಡ್ರಗ್ಸ್ ಪೂರೈಸಲಾಗುತ್ತಿತ್ತು ಎಂಬ ಸಂಗತಿ ಬೆಳಕಿಗೆ ಬಂದಿದೆ. ದಾಳಿ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಅವರನ್ನು ಅಮಾನತುಗೊಳಿಸಲಾಗಿದೆ.
10:43 PM (IST) Jul 28
ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಕಾಮೆಟ್ ಪ್ರಕರಣ ಸಂಬಂಧ ನಟಿ ರಮ್ಯಾ ನೀಡಿದ ದೂರಿನ ಅನ್ವಯ ಎಫ್ಐಆರ್ ದಾಖಲಾಗಿದೆ. ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
09:39 PM (IST) Jul 28
ಬಳ್ಳಾರಿಯ ದೇವಿನಗರ ಕ್ಯಾಂಪ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
09:16 PM (IST) Jul 28
ಅತ್ಯಂತ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಎರಡು ದಿನಗಳ ಕಾಲ ವಾಹನ ಸಂಚಾರ ನಿಷೇಧಿಸಲಾಗಿದೆ. ಯಾವ ಎರಡು ದಿನ ವಾಹನ ಸಂಚಾರ ನಿಷೇಧ? ಕಾರಣವೇನು?
08:26 PM (IST) Jul 28
ತೆಲುಗು ನಟಿ ಅನಸೂಯ ಒಂದು ಖಾಸಗಿ ವಾಹಿನಿ ಸಂದರ್ಶನವೊಂದರಲ್ಲಿ ತಾನು ಸೋಶಿಯಲ್ ಮೀಡಿಯಾದಲ್ಲಿ, ಕಾಮೆಂಟ್ ಮಾಡುತ್ತಿದ್ದ 30 ಲಕ್ಷ ಜನರನ್ನ ಬ್ಲಾಕ್ ಮಾಡಿದ್ದಾಗಿ ಹೇಳಿದ್ದಾರೆ. ಇದನ್ನ ಕೇಳಿ ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.
08:10 PM (IST) Jul 28
ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರು ಮತ್ತು ಬಾಲಕಿಯರ ಶವ ಹೂತಿರುವ ಬಗ್ಗೆ ಆರೋಪ ಮಾಡಿರುವ ಅನಾಮಿಕ ವ್ಯಕ್ತಿ ಎಸ್ಐಟಿ ತಂಡಕ್ಕೆ 13 ಶವಗಳ ಸ್ಥಳಗಳನ್ನು ತೋರಿಸಿದ್ದಾರೆ. ಈ ಸ್ಥಳಗಳನ್ನು ಗುರುತಿಸಿ ಮಹಜರು ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಉತ್ಖನನ ಕಾರ್ಯ ನಡೆಯಲಿದೆ.
08:09 PM (IST) Jul 28
ಮದುವೆಯಾಗಲು ಹುಡುಗ-ಹುಡುಗಿ ಒಪ್ಪಿಗೆ ಮಾತ್ರವಲ್ಲ, ಇದೀಗ ಹೆಚ್ಐವಿ-ಏಡ್ಸ್ ಪರೀಕ್ಷೆ ಕಡ್ಡಾಯವಾಗಿ ಮಾಡಬೇಕು. ಮದುವೆಗೂ ಮೊದಲು ಪರೀಕ್ಷೆ ಮಾಡಿ ಸರ್ಟಿಫಿಕೇಟ್ ಪಡೆದುಕೊಳ್ಳಬೇಕು.ಹೊಸ ನಿಯಮ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.
07:20 PM (IST) Jul 28
ದಿವ್ಯಾ ದೇಶ್ಮುಖ್ ಫಿಡೆ ಮಹಿಳಾ ವಿಶ್ವಕಪ್ 2025 ಗೆದ್ದಿದ್ದಾರೆ. ಫೈನಲ್ನಲ್ಲಿ ಕೊನೇರು ಹಂಪಿಯವರನ್ನ ಸೋಲಿಸಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಮಹಿಳೆ ಎನಿಸಿಕೊಂಡಿದ್ದಾರೆ.
07:14 PM (IST) Jul 28
ನೀತಾ ಅಂಬಾನಿ, ಮುಕೇಶ್ ಅಂಬಾನಿ ಕುಟುಂಬ ಪ್ರತಿ ದಿನ ಒಂದೇ ತಳಿ ಹಸುವಿನ ಹಾಲು ಬಳಕೆ ಮಾಡುತ್ತಿದೆ. ಈ ಹಸುಗಳನ್ನು ವಿಶೇಷ ಆರೈಕೆ ಹಾಗೂ ಮೇವು ನೀಡಲಾಗುತ್ತದೆ. ಅಂಬಾನಿ ಕುಟುಂಬಕ್ಕೆ ಹಾಲು ಸರಬರಾಜಾಗುತ್ತಿರುವುದು ಎಲ್ಲಿಂದ?
07:14 PM (IST) Jul 28
ನಟ ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯವನ್ನು ನೀಡಿ ಅಭಿಮಾನಿ ಆಗಿದ್ದ ಬೇಕರಿ ರಘು, ಇದೀಗ ನಟ ಪ್ರಥಮ್ಗೆ ಡ್ರ್ಯಾಗರ್ ತೋರಿಸಿ ಕೊಲೆ ಬೆದರಿಕೆ ಹಾಕಿದ್ದಾನೆ. ದರ್ಶನ್ ಬಗ್ಗೆ ಮಾತನಾಡಿದ್ದಕ್ಕೆ ಪ್ರಥಮ್ಗೆ ಬೆದರಿಕೆ ಹಾಕಲಾಗಿದೆ. ಈ ಘಟನೆ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯದಲ್ಲಿ ನಡೆದಿದೆ.
06:19 PM (IST) Jul 28
ಪೆಹಲ್ಗಾಂನಲ್ಲಿ ಹಿಂದೂಗಳ ಟಾರ್ಗೆಟ್ ಮಾಡಿ ನಡೆಸಿದ ಉಗ್ರದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ. ಆಪರೇಶನ್ ಮಹಾದೇವ್ ಹೆಸರಿನಲ್ಲಿ ಸೇನೆ ಕಾರ್ಯಾಚರಣೆ ನಡೆಸಿ ಉಗ್ರರ ಹತ್ಯೆ ಮಾಡಿದೆ. ಈ ಕಾರ್ಯಾಚರಣೆಗೆ ಆಪರೇಶನ್ ಮಹಾದೇವ್ ಹೆಸರಿಟ್ಟಿದ್ದೇಕೆ?
06:15 PM (IST) Jul 28
ಆರ್ಸಿಬಿ ವಿಜಯೋತ್ಸವದ ಕಾಲ್ತುಳಿತ ದುರಂತದಲ್ಲಿ ಅಮಾನತುಗೊಂಡಿದ್ದ ಪೊಲೀಸ್ ಅಧಿಕಾರಿಗಳ ಅಮಾನತು ರದ್ದತಿಯಾಗಿದೆ. ಒಬ್ಬ ಅಧಿಕಾರಿಯನ್ನು ಹೊರತುಪಡಿಸಿ ಉಳಿದ ನಾಲ್ವರು ಅಧಿಕಾರಿಗಳಿಗೆ ಸೇವೆಗೆ ಮರಳಲು ಸರ್ಕಾರ ಅನುಮತಿ ನೀಡಿದೆ. ಆರ್ಸಿಬಿ, ಕೆಎಸ್ಸಿಎ, ಡಿಎನ್ಎ ಸಂಸ್ಥೆಗಳ ಮುಖ್ಯಸ್ಥರನ್ನ ಬಂಧಿಸಲಾಗಿತ್ತು.
05:13 PM (IST) Jul 28
ಏರ್ ಇಂಡಿಯಾ ವಿಮಾನ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 8 ತಿಂಗಳ ಮಗು ಹಾಗೂ ಮಗುವಿಗೆ ಬೆಂಕಿ ತಗುಲದಂತೆ ರಕ್ಷಣೆ ಒದಗಿಸಿದ ತಾಯಿ ಇಬ್ಬರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದುರಂತ ನಡೆದ ಕ್ಷಣದಿಂದ ಚಿಕಿತ್ಸೆ ವರೆಗೆ ತಾಯಿಯ ತ್ಯಾಗ ಎಂತವರನ್ನು ಕಣ್ಣೀರಾಗಿಸುತ್ತದೆ.
04:49 PM (IST) Jul 28
Actress Ramya And Darshan Fans: ನಟಿ ರಮ್ಯಾ ಅವರ ಸಾಮಾಜಿಕ ಜಾಲತಾಣ ಪೋಸ್ಟ್ಗೆ ಅಸಭ್ಯ ಕಾಮೆಂಟ್ಗಳನ್ನು ಖಂಡಿಸಿ FIRE ಸಂಸ್ಥೆ ಗೃಹ ಸಚಿವರಿಗೆ ಪತ್ರ ಬರೆದಿದೆ. ದರ್ಶನ್ ಅಭಿಮಾನಿಗಳೆಂದು ಹೇಳಲಾದವರಿಂದ ಈ ಟ್ರೋಲಿಂಗ್ ನಡೆದಿದ್ದು, ಪ್ರಥಮ್ ಸೇರಿದಂತೆ ಹಲವರು ರಮ್ಯಾ ಪರ ನಿಂತಿದ್ದಾರೆ.
04:47 PM (IST) Jul 28
04:22 PM (IST) Jul 28
ಪ್ರಿಯಕರನಿಂದ ಗರ್ಭಿಣಿಯಾಗಿದ್ದ ಪತ್ನಿಯ ಹೊಟ್ಟೆಗೆ ಗಂಡನೇ ಒದ್ದಿದ್ದರಿಂದ ಮಗು ಗರ್ಭಪಾತವಾಗಿತ್ತು. ಇದರಿಂದ ಸೇಡಿಗಾಗಿ ಪತ್ನಿ ಮತ್ತು ಆಕೆಯ ಪ್ರಿಯಕರ ಸೇರಿ ಗಂಡನನ್ನು ಕೊಲೆ ಮಾಡಿದ್ದಾರೆ. ಗಂಡನ ಕೊಲೆ ಬಳಿಕ ಕೇರಳಕ್ಕೆ ಹೋಗಿ ನೆಲೆಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ.
04:18 PM (IST) Jul 28
ಕಾರ್ಗಿಲ್ ಯುದ್ಧ ಗೆದ್ದದ ಅಮೂಲ್ಯ ನೆನಪನ್ನು ಭಾರತಯ ಕಾರ್ಗಿಲ್ ವಿಜಯ್ ದಿವಸ್ ಮೂಲಕ ಆಚರಿಸಿದೆ ಇದರ ಬೆನ್ನಲ್ಲೇ ಟಿವಿಎಸ್ ಮೋಟಾರ್ ಇದೀಗ ಟಿವಿಎಸ್ ಎನ್ಟಾರ್ಕ್ 125 ಸೋಲ್ಜರ್ ಆವೃತ್ತಿ ಬಿಡುಗಡೆ ಮಾಡಿದೆ. ಏನಿದರ ವಿಶೇಷತೆ?
04:07 PM (IST) Jul 28
ಅತೀ ದೊಡ್ಡ ಟೆಕ್ ಕಂಪನಿ ಟಿಸಿಎಸ್ ಉದ್ಯೋಗ ಕಡಿತ ಘೋಷಿಸಿದೆ. ಬರೋಬ್ಬರಿ 12,000 ಉದ್ಯೋಗ ಕಡಿತ ಮಾಡುವುದಾಗಿ ಹೇಳಿದೆ. ಇದರ ಬೆನ್ನಲ್ಲೇ ಟಿಸಿಎಸ್ ಷೇರು ಮೌಲ್ಯ ಕುಸಿತಗೊಂಡಿದೆ. ಇಷ್ಟೇ ಅಲ್ಲ ಇದೀಗ ಈ ಉದ್ಯೋಗ ಕಡಿತ ಬೆಂಗಳೂರಿಗೆ ನಡುಕ ಹುಟ್ಟಿಸಿದೆ. ಕಾರಣವೇನು?
03:09 PM (IST) Jul 28
ಈ ರೀತಿ ಭಾರತದಲ್ಲಿ ಮಾತ್ರ ಸಾಧ್ಯ. ಸತ್ತವರ ಹೆಸರಲ್ಲಿ, ಇಲ್ಲದೇ ಇರುವವರ ಹೆಸರಲ್ಲಿ ಪ್ರಮಾಣಪತ್ರ, ಸೌಲಭ್ಯ ಪಡೆಯುವುದು ನೋಡಿದ್ದೇವೆ. ಆದರೆ ಕುತ್ತಾ ಬಾಬು-ಕುತಿಯಾ ದೇವಿ ಮಗ ಡಾಗ್ ಬಾಬು ಹೆಸರಲ್ಲಿ ಸರ್ಕಾರ ನಾಯಿಗೂ ನಿವಾಸ ಪ್ರಮಾಣ ಪತ್ರ ನೀಡಿರುವುದು ಬೆಳಕಿಗೆ ಬಂದಿದೆ.
02:46 PM (IST) Jul 28
01:52 PM (IST) Jul 28
ನಟಿ ಸೌಂದರ್ಯ ಚಿತ್ರದಿಂದ ಒಬ್ಬ ನಿರ್ಮಾಪಕರಿಗೆ ದೊಡ್ಡ ಹೊಡೆತ ಬಿದ್ದಿತ್ತು. ಈಗ ಟಾಲಿವುಡ್ನಲ್ಲಿ ಅವರು ದೊಡ್ಡ ನಿರ್ಮಾಪಕರಾಗಿದ್ದಾರೆ.
01:28 PM (IST) Jul 28
ಬೆಂಗಳೂರಿನಲ್ಲಿ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಟೆಕ್ಕಿಯನ್ನು ಲೈಂಗಿಕ ಸಂಪರ್ಕದ ಆಮಿಷವೊಡ್ಡಿ ತನ್ನ ರೂಮಿಗೆ ಕರೆದೊಯ್ದು, ಸ್ನೇಹಿತರ ಜೊತೆ ಸೇರಿ 2 ಲಕ್ಷ ರೂ. ದರೋಡೆ ಮಾಡಿದ್ದಾರೆ. ಪೊಲೀಸರಿಂದ 6 ಮಂದಿ ಆರೋಪಿಗಳ ಬಂಧನ. ಬೇಕಿಂಗ್ ಸೋಡಾವನ್ನು ಡ್ರಗ್ಸ್ ಎಂದು ಬಿಂಬಿಸಿ ಹಣ ದೋಚಿದ್ದಾರೆ.
01:24 PM (IST) Jul 28
ಕೇಂದ್ರ ಸರ್ಕಾರ ಹೆಚ್ಚುವರಿ ಗೊಬ್ಬರ ಪೂರೈಸಿದ್ದರೂ ಬೇರೆಡೆ ಮಾರಾಟ ಮಾಡಿಕೊಂಡಿರುವ ಶಂಕೆ ಇದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.
12:51 PM (IST) Jul 28
12:27 PM (IST) Jul 28
ಬಾಲಿವುಡ್ ಸಿನಿಮಾವೊಂದರಲ್ಲಿ ರಣ್ವೀರ್ ಸಿಂಗ್ ಜೊತೆಗೆ ನಟಿ ಶ್ರೀಲೀಲಾ ತೆರೆ ಹಂಚಿಕೊಳ್ಳಲಿದ್ದಾರೆ. ಪ್ರಖ್ಯಾತ ನಟ ಬಾಬ್ಬಿ ಡಿಯೋಲ್ ಈ ಚಿತ್ರದ ಮುಖ್ಯ ಪಾತ್ರದಲ್ಲಿದ್ದಾರೆ.
11:55 AM (IST) Jul 28
ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ಪಂಚ ಪೀಠದ ಶ್ರೀಗಳ ಶೃಂಗಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳಿಗೆ ಪಂಚಮಸಾಲಿ ಸಮಾಜ ಒಪ್ಪಿಗೆ ಇಲ್ಲ ಎಂದು ವಚನಾನಂದಶ್ರೀ ತಿಳಿಸಿದರು.
11:51 AM (IST) Jul 28
ರಮ್ಯಾ ದರ್ಶನ್ ವಿರುದ್ಧ ಸುಪ್ರೀಂ ತೀರ್ಪು ಬೆಂಬಲಿಸಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೋರಿದರು. ಆದರೆ, ದರ್ಶನ್ ಸ್ನೇಹಿತೆ ರಕ್ಷಿತಾ ಪ್ರೇಮ್, ರಮ್ಯಾ ಹೆಸರೆತ್ತದೆ, ಮಾನವೀಯತೆ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
11:23 AM (IST) Jul 28
ಸಿಲ್ಕ್ ಸಿಟಿ ತೈಲ ಉತ್ಪನ್ನಗಳು ವಾರ್ಷಿಕ 2 ಕೋಟಿ ರೂ. ವಹಿವಾಟು ತಲುಪಿದೆ. ಆರು ಗೆಳೆಯರು ಕೆಲಸಗಳನ್ನು ಹಂಚಿಕೊಂಡಿದ್ದಾರೆ. ಒಬ್ಬರು ಉತ್ಪಾದನಾ ಘಟಕದ ಉಸ್ತುವಾರಿ ನೋಡಿಕೊಂಡರೆ, ಮತ್ತೊಬ್ಬರು ಎಣ್ಣೆ ಕಾಳು ಖರೀದಿ ನೋಡಿಕೊಳ್ತಾರೆ.
10:51 AM (IST) Jul 28
ಕರ್ನಾಟಕದ ಕೃಷಿ ಕ್ಷೇತ್ರವು ರಾಜ್ಯದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ರೈತರ ಕಷ್ಟಕರ ಶ್ರಮದಿಂದಾಗಿ ನಮ್ಮ ರಾಜ್ಯವು ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ.
10:40 AM (IST) Jul 28
Darshan And Gang Case: ರೇಣುಕಾಸ್ವಾಮಿ ಪ್ರಕರಣದಲ್ಲಿ ರಮ್ಯಾ ಮತ್ತು ದರ್ಶನ್ ಅಭಿಮಾನಿಗಳ ನಡುವಿನ ಸಾಮಾಜಿಕ ಜಾಲತಾಣದ ವಾಗ್ಯುದ್ಧಕ್ಕೆ ವಿಜಯಲಕ್ಷ್ಮೀ ಅವರ ಪ್ರವೇಶವು ಹೊಸ ತಿರುವು ನೀಡಿದೆ.
10:37 AM (IST) Jul 28
ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಕೃಷ್ಣಾ, ತುಂಗಭದ್ರಾ, ಕಾವೇರಿ, ಶರಾವತಿ, ಭೀಮಾ ಸೇರಿ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ.
10:11 AM (IST) Jul 28
ಏಯ್....ಸುಮ್ನಿರಮ್ಮ..., ಏನೇನೋ ಹೇಳಬೇಡ. ಆಂಜನೇಯನ ಹೆಸ್ರು ಹಾಳ್ಮ್ಯಾಡಬೇಡ! ಎಂದು ಮಹಿಳೆ ಮಾತನ್ನು ಅರ್ಧದಲ್ಲೇ ತುಂಡರಿಸಿದ್ರು! ಆ ಮಾತೇನೋ ಅಲ್ಲಿಗೆ ನಿಲ್ತು.
09:58 AM (IST) Jul 28
ಮೈಸೂರು ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸರಿಸಾಟಿಯಾಗುವವರು ಯಾರೂ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು.
09:55 AM (IST) Jul 28
ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕೋಮಾ ಸ್ಥಿತಿಯಲ್ಲಿದ್ದು, ತಾನಾಗಿಯೇ ಜೀವ ಕಳೆದುಕೊಳ್ಳುವ ಸರ್ಕಾರವನ್ನು ಆಪರೇಷನ್ ಕಮಲ ಮಾಡಿ ಸಾಯಿಸುವ ಅಗತ್ಯವಿಲ್ಲ. ಅಕ್ಟೋಬರ್ ವೇಳೆಗೆ ಈ ಸರ್ಕಾರ ಸಾಯುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭವಿಷ್ಯ
09:29 AM (IST) Jul 28
ದೇವಾಲಯಗಳಲ್ಲಿ ರಾಜಕೀಯ ದುರುದ್ದೇಶ ಈಡೇರಿಸಲು ಧಾರ್ಮಿಕತೆ ಬಳಕೆ ಮಾಡುವ ಕೆಲಸ ಆಗಬಾರದು ಎಂದು ಆರೋಗ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಲಹೆ ನೀಡಿದ್ದಾರೆ.
09:23 AM (IST) Jul 28
ಬಿಎಲ್ಡಿಇ ಸಂಸ್ಥೆಯ ಕೆಡಿಸುವ ಪ್ರಯತ್ನ ನಡೆದಾಗ ದಿ.ಬಿ.ಎಂ.ಪಾಟೀಲರು ಶಕ್ತಿಮೀರಿ ಗಟ್ಟಿಯಾಗಿ ನಿಂತರು. ಶಿಕ್ಷಣ ಸಂಸ್ಥೆಗಳಲ್ಲಿ ರಾಜಕಾರಣ ಯಾವತ್ತೂ ಬರಬಾರದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
08:43 AM (IST) Jul 28
ನನ್ನ ಬಗ್ಗೆ ಮಾತನಾಡುವವರಿಗೆ ಸಿಗಂದೂರು ಚೌಡೇಶ್ವರಿ ಮುಂದಿನ ದಿನಗಳಲ್ಲಿ ತಕ್ಕ ಬುದ್ಧಿ ಕಲಿಸಲಿದ್ದಾಳೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು
08:31 AM (IST) Jul 28
ಕೌಟುಂಬಿಕ ವಿಚಾರಕ್ಕೆ ಸಂಬಂಧಿಕರು ಗಲಾಟೆ ಮಾಡಿಕೊಳ್ಳುವಾಗ ಬಿಡಿಸಲು ಮುಂದಾದ ಗಸ್ತು ಪೊಲೀಸ್ ಸಿಬ್ಬಂದಿಗೆ ಡ್ರ್ಯಾಗರ್ನಿಂದ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಈ ಸಂಬಂಧ ಅಪ್ರಾಪ್ತ ಸೇರಿ ನಾಲ್ವರು ಆರೋಪಿಗಳನ್ನು ಚಾಮರಾಜಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
08:28 AM (IST) Jul 28
ಪ್ರಧಾನಿ ಮೋದಿ ಭಾನುವಾರ ತಮ್ಮ ‘ಮನ್ಕೀ ಬಾತ್’ ಭಾಷಣದಲ್ಲಿ ಮಂಗಳೂರಿನಲ್ಲಿ ನಡೆಯುತ್ತಿರುವ ಅತ್ಯಾಧುನಿಕ ತ್ಯಾಜ್ಯ ನಿರ್ವಹಣೆ ಬಗ್ಗೆ ಪ್ರಸ್ತಾಪಿಸಿ ಶ್ಲಾಘನೆ ವ್ಯಕ್ತಪಡಿಸಿದ್ದು, ಇದೊಂದು ಮಾದರಿ ಎಂಬರ್ಥದಲ್ಲಿ ಮಾತನಾಡಿದ್ದಾರೆ.
08:23 AM (IST) Jul 28
ಭೀಮನ ಅಮಾವಾಸ್ಯೆಯಂದು ಗಂಡನ ಪೂಜೆ ಬಳಿಕ ಮಹಿಳೆಯ ಆತ್ಮಹ* ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪತಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಆ ಮಹಿಳೆ ನೇಣಿ* ಬಲಿಯಾಗಿರುವುದು ತನಿಖೆ ವೇಳೆ ಬಯಲಾಗಿದೆ.
08:16 AM (IST) Jul 28
ನಾಲ್ವಡಿ ಕೃಷ್ಣರಾಜ ಒಡೆಯರ್, ಶಾಹು ಮಹಾರಾಜರು ಜನಪರ, ಸಾಮಾಜಿಕ ನ್ಯಾಯದ ಪರವಾಗಿ ಇದ್ದವರಾಗಿದ್ದರು. ಮಹತ್ವದ ನಿಲುವುಗಳಿಂದ ಸಮಸಮಾಜದ ಸಲುವಾಗಿ ಕೆಲಸ ಮಾಡಿದವರು. ಅವರವರಿಗೆ ಅವರೇ ಸಾಟಿ ಎಂದು ಮಹದೇವಪ್ಪ ಹೇಳಿದರು.