ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ‘ಪಂದ್ರಹ ದಿನ್ ಕಿ ಸರದಾರ’. ಅವರು 15 ದಿನದ ಬಳಿಕ ಈ ರಾಜ್ಯದ ಮುಖ್ಯಮಂತ್ರಿ ಆಗಿರುವುದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕುರ್ಚಿ ಕಿತ್ತಾಟದಲ್ಲಿ ತೊಡಗಿದ್ದು, ವಿಧಾನಸೌಧದಲ್ಲಿ ಆಡಳಿತವೇ ಇಲ್ಲದಂತಾಗಿದೆ.
ಮೇ 4ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಬರಲಿದ್ದು, ಅಂದು ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಕೂಡ ಬರುತ್ತದೆ. ಅದರ ಜೊತೆಗೆ ಸಿದ್ದರಾಮಯ್ಯ ಅವರ ಕುರ್ಚಿಯ ಫಲಿತಾಂಶ ಕೂಡ ಪ್ರಕಟವಾಗುತ್ತದೆ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಬೆಂಬಲಿಗರಾದ 40 ಶಾಸಕರು ಹೈಕಮಾಂಡ್ ಬಳಿ ಹೋಗಿ ಲಾಬಿ ಮಾಡುತ್ತಿದ್ದು, ಡಿ.ಕೆ.ಶಿವಕುಮಾರ್ ಅವರ ಪರವಾಗಿ 50 ಜನ ಲಾಬಿ ಮಾಡುತ್ತಿದ್ದಾರೆ. ಆಡಳಿತ ಸಂಪೂರ್ಣವಾಗಿ ಕುಸಿದು ಹೋಗಿದೆ ಎಂದು ಕಿಡಿಕಾರಿದರು.
11:42 PM (IST) Apr 29
ಕೃತಕ ಬುದ್ಧಿಮತ್ತೆಯ (AI) ಪ್ರಭಾವದಿಂದಾಗಿ ಬೆಂಗಳೂರಿನಲ್ಲಿ ದಶಕದ ಹಿಂದಿನ ಐಟಿ ಪಾರ್ಕ್ ಯೋಜನೆಯನ್ನು ಕೈಬಿಡಲಾಗಿದೆ. ಇದರ ಪರಿಣಾಮವಾಗಿ, ಕಾಡುಬೀಸನಹಳ್ಳಿಯ 9 ಎಕರೆ ಭೂಮಿಯಲ್ಲಿ ಸಾಫ್ಟ್ವೇರ್ ಕಂಪನಿಯ ಬದಲು, 410 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಸರ್ಕಾರ ಅನುಮತಿ ನೀಡಿದೆ.
11:07 PM (IST) Apr 29
ಧರ್ಮಸ್ಥಳದ ಸೌಜನ್ಯ ಅ*ತ್ಯಾಚಾರ ಮತ್ತು ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮರು ತನಿಖೆ ಕುರಿತು ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ. ಪ್ರಕರಣದ ಸಾಕ್ಷಿಗಳಿಗೆ ಸೂಕ್ತ ರಕ್ಷಣೆ ನೀಡುವಂತೆಯೂ ನ್ಯಾಯಾಲಯ ನಿರ್ದೇಶನ ನೀಡಿದೆ.
10:34 PM (IST) Apr 29
ಬೆಂಗಳೂರು ಮಳೆಗೆ ದುರಂತಗಳ ಸರಮಾಲೆ, ಗೋಡೆ ಬಿದ್ದ 100 ಮೀಟರ್ ಅಂತರದಲ್ಲೇ ಮತ್ತೊಂದು ಸಾವು, ತಾಯಿ ಜೊತೆ ಆಗಮಿಸಿದ ಯುವಕ ಗಾಡಿ ಪಾರ್ಕಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಸಾವು ಕಂಡಿದ್ದಾನೆ.
09:51 PM (IST) Apr 29
ಬೆಂಗಳೂರು ಮಳೆಗೆ ಮತ್ತೊಂದು ಬಲಿ, ಜೆಪಿ ನಗರ ಬಳಿ ವಿದ್ಯುತ್ ಕಂಬ ಸ್ಪರ್ಶಿಸಿ ವ್ಯಕ್ತಿ ಸಾವು, ಕಾಂಪೌಂಡ್ ಕುಸಿದು 7 ಮಂದಿ ಮತೃಪಟ್ಟ ಬೆನ್ನಲ್ಲೇ ಇದೀಗ ವಿದ್ಯುತ್ ಸ್ಪರ್ಶಿಸಿ ಸಾವಾಗಿದೆ. ಒಂದೇ ಮಳೆ 8 ಮಂದಿಯನ್ನು ಬಲಿ ಪಡೆದಿದೆ.
09:47 PM (IST) Apr 29
ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ ಅವಘಡದ ಕುರಿತು ಸಮಗ್ರ ವಿವರ ಪಡೆದು, ತಪ್ಪಿತಸ್ಥರ ವಿರುದ್ದ ಕಾನೂನಾತ್ಮಕ ಕ್ರಮ ವಹಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
08:44 PM (IST) Apr 29
ಬೆಂಗಳೂರು ಮಳೆಗೆ ಪ್ರಖ್ಯಾತ ಪುಸ್ತಕ ಮಳಿಗೆಗೆ ನುಗ್ಗಿದ ನೀರು, 14 ಲಕ್ಷ ಮೌಲ್ಯದ 5000 ಬುಕ್ ನಾಶ, ದಿಡೀರ್ ಮಳೆಯಿಂದ ಮಳಿಗೆಗ ನೀರು ನುಗ್ಗಿದೆ. ಕಳೆದ ಮೂರು ದಶಕಗಳಿಂದ ಬೆಂಗಳೂರಿನಲ್ಲಿ ಜನಪ್ರಿಯ ಪುಸ್ತಕ ಮಳಿಗೆಯಾಗಿ ಗರುತಿಸಿಕೊಂಡಿದೆ.
08:06 PM (IST) Apr 29
ಬೆಂಗಳೂರು ಮಳೆಗೆ ಬಲಿಯಾದ ಮೃತರ ಪಟ್ಟಿ ಬಿಡುಗಡೆ, ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಣೆ, ಭಾರಿ ಮಳೆಗೆ ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲು ಸೂಚಿಸಲಾಗಿದೆ.
07:38 PM (IST) Apr 29
ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ 50ಕ್ಕೂ ಹೆಚ್ಚು ಮರಗಳು ಉರುಳಿ, ರಸ್ತೆಗಳು ಜಲಾವೃತಗೊಂಡಿದ್ದು, ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದಾರೆ.
07:12 PM (IST) Apr 29
06:57 PM (IST) Apr 29
ಒಂದೇ ಮಳೆಗೆ ಹಾಳೂರಾದ ಬೆಂಗಳೂರು, 7 ಸಾವು, ಸಂಪೂರ್ಣ ಅಸ್ತವ್ಯಸ್ತಕ್ಕೆ ಯಾರು ಹೊಣೆ? ಕಾಂಪೌಂಡ್ ಕುಸಿತ, ಧರೆಗುರುಳಿದ ಮರಗಳು, ವಾಹನಗಳ ಮೇಲೆ ಬಿದ್ದ ಮರ ಸೇರಿದಂತೆ ಒಂದು ಮಳೆ ಬೆಂಗಳೂರಲ್ಲಿ ಅವಾಂತರ ಸೃಷ್ಟಿಸಿದೆ.
06:45 PM (IST) Apr 29
ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು, ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ದುರಂತ ನಗರದಲ್ಲಿ ಆಘಾತವನ್ನುಂಟು ಮಾಡಿದ್ದು, ಹಳೆಯ ಗೋಡೆಯ ನಿರ್ವಹಣೆ ಕೊರತೆಯೇ ಘಟನೆಗೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.
06:38 PM (IST) Apr 29
ವಧು, ವರ ಎರಡೂ ಕಡೆಯವರು ಚಾಕುವಿನಿಂದ ಪರಸ್ಪರ ಇರಿದುಕೊಂಡಿದ್ದಾರೆ. ಒಬ್ಬರಿಗೊಬ್ಬರು ಬಡಿದಾಡಿಕೊಂಡು ರಕ್ತದ ಕೋಡಿ ಹರಿಸಿದ್ದಾರೆ. ಈ ಘಟನೆ ನಡೆದಿರೋದು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ.
06:29 PM (IST) Apr 29
ಟೆಕ್ ದೈತ್ಯ 'ಕಾಗ್ನಿಜೆಂಟ್' ಹೊಸ ನೇಮಕಾತಿಗಳನ್ನು ಮಾಡುವ ಮೂಲಕ ತನ್ನ ಉದ್ಯೋಗಿಗಳ ಸಂಖ್ಯೆಯನ್ನು 3.5 ಲಕ್ಷಕ್ಕೆ ಹೆಚ್ಚಿಸಿದೆ. ಕಂಪನಿಯು ಮೊದಲ ತ್ರೈಮಾಸಿಕದಲ್ಲಿ ನಿರೀಕ್ಷೆಗೂ ಮೀರಿದ ಆದಾಯ ಗಳಿಸಿದ್ದು, ಎಐ ಆಧಾರಿತ ಯೋಜನೆಗಳು ಮತ್ತು ಬೃಹತ್ ಒಪ್ಪಂದಗಳ ಮೂಲಕ ಐಟಿ ವಲಯಕ್ಕೆ ಹೊಸ ಭರವಸೆ ಮೂಡಿಸಿದೆ.
06:24 PM (IST) Apr 29
ಗಂಗಾವತಿ ನಗರದ ವಿವಿಧ ವೃತ್ತಗಳು ಮತ್ತು ರಸ್ತೆ ಪಕ್ಕದ ಚರಂಡಿಗಳ ಮೇಲೆ ನಿರ್ಮಿಸಲಾಗಿದ್ದ ಫುಟ್ಪಾತ್ಗಳಲ್ಲಿರುವ 150ಕ್ಕು ಹೆಚ್ಚು ಅಂಗಡಿಗಳನ್ನು ನಗರಸಭೆಯವರು ತೆರವು ಕಾರ್ಯಾಚರಣೆ ನಡೆಸಿದರು.
05:53 PM (IST) Apr 29
05:28 PM (IST) Apr 29
ಇನ್ನೆರಡು ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ನಾನು ಸಿಎಂ ಇದ್ದಾಗ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ಮಾಡಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
05:11 PM (IST) Apr 29
ಒಳ ಮೀಸಲಾತಿಯೆಂದರೆ ಎಷ್ಟೇ ಹುದ್ದೆಗಳಿದ್ದರೂ ಆ ಹುದ್ದೆಗಳಿಗೆ ಅದು ಅನ್ವಯ ಆಗಬೇಕು. ತಾರತಮ್ಯ ಆಗಬಾರದು. ಆದರೆ, ಈ ತಾರತಮ್ಯ ನಿಮ್ಮವರಿಂದಲೇ ಆಗಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪ ಮಾಡಿದರು.
05:04 PM (IST) Apr 29
ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಬಂಧಿತರಾಗಿದ್ದ ಕೊಡಗಿನ ವಿಚಾರಣಾಧೀನ ಕೈದಿ ಚಂಗಪ್ಪ ಜೈಲಿನಲ್ಲಿ ಸಾವನ್ನಪ್ಪಿದ್ದಾರೆ. ಇದು ಕೇರ್ ಟೇಕರ್ ಮಹಿಳೆಯ ಬ್ಲಾಕ್ಮೇಲ್ ಮತ್ತು ವಕೀಲರೊಬ್ಬರ ಹಣಕಾಸು ವಂಚನೆಯಿಂದ ಮಾನಸಿಕ ಆಘಾತಕ್ಕೊಳಗಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಆರೋಪಿಸಿದೆ.
04:52 PM (IST) Apr 29
ಅಕ್ರಮ ಪಡಿತರ ಅಕ್ಕಿ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರೋಪಿಗಳಿಗೆ ಮೂರು ವರ್ಷ ಸೆರೆಮನೆವಾಸ ಮತ್ತು ಪ್ರತಿಯೊಬ್ಬರಿಗೆ 10 ಸಾವಿರ ದಂಡವನ್ನು ಇಲ್ಲಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಲಯ ತೀರ್ಪು ನೀಡಿದೆ.
04:43 PM (IST) Apr 29
04:02 PM (IST) Apr 29
04:01 PM (IST) Apr 29
ಕೊಪ್ಪಳ ಆರ್ಟಿಒ ಕಚೇರಿಯಲ್ಲಿ ಶೋರೂಮ್ ಟ್ರೇಡ್ ಲೈಸನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಸ್ಡಿಎ ರಂಜಿತ್ ಎಂಬ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಯೀಮ್ ಎಂಬುವವರ ದೂರಿನ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಸಿಬ್ಬಂದಿಯನ್ನು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ.
03:17 PM (IST) Apr 29
ಅಪ್ರಾಪ್ತ ಗರ್ಭಿಣಿಯರಿಗೆ ಭ್ರೂಣ ಲಿಂಗ ಪತ್ತೆಗಾಗಿ ಸ್ಕ್ಯಾನಿಂಗ್ ಮಾಡಿದ ಆರೋಪದ ಮೇಲೆ ಮಂಡ್ಯ ಜಿಲ್ಲೆಯಲ್ಲಿ ಮೂವರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ., ಒಟ್ಟು 17 ಆರೋಪಿಗಳ ವಿರುದ್ಧ 12 ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ಲೋಕಾಯುಕ್ತ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು.
03:15 PM (IST) Apr 29
02:45 PM (IST) Apr 29
01:41 PM (IST) Apr 29
12:29 PM (IST) Apr 29
ಹುಟ್ಟುತ್ತಾ ಅಣ್ಣತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎಂಬ ಮಾತಿನಂತೆ ಆಸ್ತಿಗಾಗಿ ಅಣ್ಣ ತಮ್ಮಂದಿರ ನಡುವೆ ನಡೆದ ಜಗಳವೊಂದು ಪುಟ್ಟ ಬಾಲಕನ ಕೊಲೆಯಲ್ಲಿ ಅಂತ್ಯವಾಗಿದೆ. ಪಿತ್ರಾರ್ಜಿತ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಅಣ್ಣನ ಮಗನನ್ನೇ ಚಿಕ್ಕಪ್ಪ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
12:19 PM (IST) Apr 29
12:03 PM (IST) Apr 29
11:42 AM (IST) Apr 29
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ, ಇದೀಗ ಮತ್ತೊಮ್ಮೆ ಜಾಮೀನು ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ದರ್ಶನ್ ಎಷ್ಟನೇ ಬಾರಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಡಿಟೇಲ್ ಇಲ್ಲಿದೆ.
11:38 AM (IST) Apr 29
11:36 AM (IST) Apr 29
ಮಾಂಸ: ತಾಜಾ ಮಟನ್ ಮತ್ತು ಹಳಸಿದ ಮಾಂಸವನ್ನು ಗುರುತಿಸುವುದು ಹೇಗೆಂದು ತಿಳಿಯುವುದು ಬಹಳ ಮುಖ್ಯ. ನಿಮ್ಮ ಆರೋಗ್ಯ ಕೆಡದಂತೆ ಇರಬೇಕಾದರೆ, ಮಟನ್ ಖರೀದಿಸುವ ಮೊದಲು ಈ ಸಣ್ಣ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ.
11:01 AM (IST) Apr 29
ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಜೈಲುವಾಸದಿಂದ ಮುಕ್ತಿ ನೀಡುವಂತೆ ದರ್ಶನ್ ಮನವಿ ಮಾಡಿಕೊಂಡಿರುವ ಮಾಹಿತಿ ಏಷ್ಯಾನೆಟ್ ಸುವರ್ಣನ್ಯೂಸ್ಗೆ ಲಭ್ಯವಾಗಿದೆ.
10:51 AM (IST) Apr 29
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ 'ದಿ ಟಾಕ್ಸಿಕ್' ಸಿನಿಮಾದ ಬಿಡುಗಡೆ ದಿನಾಂಕ ಮತ್ತೊಮ್ಮೆ ಮುಂದೂಡಿಕೆಯಾಗಿದೆ. ಈ ಹಿಂದೆ ಜೂನ್ 4ಕ್ಕೆ ನಿಗದಿಯಾಗಿದ್ದ ದಿನಾಂಕವನ್ನು ಮತ್ತೆ ಮುಂದೂಡಲಾಗಿದ್ದು, ಹೊಸ ದಿನಾಂಕವನ್ನು ಚಿತ್ರತಂಡ ಇನ್ನೂ ಪ್ರಕಟಿಸಿಲ್ಲ.
10:34 AM (IST) Apr 29
ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಚಾಲಕನ ನಿದ್ದೆ ಮಂಪರಿನಿಂದಾಗಿ ಕಾರೊಂದು ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.
10:27 AM (IST) Apr 29
10:12 AM (IST) Apr 29
08:57 AM (IST) Apr 29
08:57 AM (IST) Apr 29
08:52 AM (IST) Apr 29