Published : Apr 29, 2026, 05:18 AM ISTUpdated : Apr 29, 2026, 11:42 PM IST

Karnataka News Live: ಬೆಂಗಳೂರು - 'AI' ಅಬ್ಬರಕ್ಕೆ ನಲುಗಿದ ಸಾಫ್ಟ್‌ವೇರ್ ಪ್ರಾಜೆಕ್ಟ್; ಐಟಿ ಕಂಪನಿಗೆ ಮೀಸಲಾಗಿದ್ದ ಜಾಗ ಈಗ ವೈದ್ಯಕೀಯ ಕಾಲೇಜು ಪಾಲು!

ಸಾರಾಂಶ

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ‘ಪಂದ್ರಹ ದಿನ್‌ ಕಿ ಸರದಾರ’. ಅವರು 15 ದಿನದ ಬಳಿಕ ಈ ರಾಜ್ಯದ ಮುಖ್ಯಮಂತ್ರಿ ಆಗಿರುವುದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಕುರ್ಚಿ ಕಿತ್ತಾಟದಲ್ಲಿ ತೊಡಗಿದ್ದು, ವಿಧಾನಸೌಧದಲ್ಲಿ ಆಡಳಿತವೇ ಇಲ್ಲದಂತಾಗಿದೆ.

ಮೇ 4ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಬರಲಿದ್ದು, ಅಂದು ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಕೂಡ ಬರುತ್ತದೆ. ಅದರ ಜೊತೆಗೆ ಸಿದ್ದರಾಮಯ್ಯ ಅವರ ಕುರ್ಚಿಯ ಫಲಿತಾಂಶ ಕೂಡ ಪ್ರಕಟವಾಗುತ್ತದೆ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಬೆಂಬಲಿಗರಾದ 40 ಶಾಸಕರು ಹೈಕಮಾಂಡ್‌ ಬಳಿ ಹೋಗಿ ಲಾಬಿ ಮಾಡುತ್ತಿದ್ದು, ಡಿ.ಕೆ.ಶಿವಕುಮಾರ್ ಅವರ ಪರವಾಗಿ 50 ಜನ ಲಾಬಿ ಮಾಡುತ್ತಿದ್ದಾರೆ. ಆಡಳಿತ ಸಂಪೂರ್ಣವಾಗಿ ಕುಸಿದು ಹೋಗಿದೆ ಎಂದು ಕಿಡಿಕಾರಿದರು.

11:42 PM (IST) Apr 29

ಬೆಂಗಳೂರು - 'AI' ಅಬ್ಬರಕ್ಕೆ ನಲುಗಿದ ಸಾಫ್ಟ್‌ವೇರ್ ಪ್ರಾಜೆಕ್ಟ್; ಐಟಿ ಕಂಪನಿಗೆ ಮೀಸಲಾಗಿದ್ದ ಜಾಗ ಈಗ ವೈದ್ಯಕೀಯ ಕಾಲೇಜು ಪಾಲು!

ಕೃತಕ ಬುದ್ಧಿಮತ್ತೆಯ (AI) ಪ್ರಭಾವದಿಂದಾಗಿ ಬೆಂಗಳೂರಿನಲ್ಲಿ ದಶಕದ ಹಿಂದಿನ ಐಟಿ ಪಾರ್ಕ್ ಯೋಜನೆಯನ್ನು ಕೈಬಿಡಲಾಗಿದೆ. ಇದರ ಪರಿಣಾಮವಾಗಿ, ಕಾಡುಬೀಸನಹಳ್ಳಿಯ 9 ಎಕರೆ ಭೂಮಿಯಲ್ಲಿ ಸಾಫ್ಟ್‌ವೇರ್ ಕಂಪನಿಯ ಬದಲು, 410 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಸರ್ಕಾರ ಅನುಮತಿ ನೀಡಿದೆ.

Read Full Story

11:07 PM (IST) Apr 29

ಸೌಜನ್ಯ ಅ*ತ್ಯಾಚಾರ-ಕೊ*ಲೆ ಪ್ರಕರಣ - ಸುಪ್ರೀಂ ಅಂಗಳದಲ್ಲಿ ಮಹತ್ವದ ತಿರುವು ಪಡೆದುಕೊಂಡ ಕೇಸ್‌!

ಧರ್ಮಸ್ಥಳದ ಸೌಜನ್ಯ ಅ*ತ್ಯಾಚಾರ ಮತ್ತು ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮರು ತನಿಖೆ ಕುರಿತು ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ. ಪ್ರಕರಣದ ಸಾಕ್ಷಿಗಳಿಗೆ ಸೂಕ್ತ ರಕ್ಷಣೆ ನೀಡುವಂತೆಯೂ ನ್ಯಾಯಾಲಯ ನಿರ್ದೇಶನ ನೀಡಿದೆ.

Read Full Story

10:34 PM (IST) Apr 29

ಬೆಂಗಳೂರು ಮಳೆಗೆ ದುರಂತಗಳ ಸರಮಾಲೆ, ಗೋಡೆ ಬಿದ್ದ 100 ಮೀಟರ್ ಅಂತರದಲ್ಲೇ ಮತ್ತೊಂದು ಸಾವು

ಬೆಂಗಳೂರು ಮಳೆಗೆ ದುರಂತಗಳ ಸರಮಾಲೆ, ಗೋಡೆ ಬಿದ್ದ 100 ಮೀಟರ್ ಅಂತರದಲ್ಲೇ ಮತ್ತೊಂದು ಸಾವು, ತಾಯಿ ಜೊತೆ ಆಗಮಿಸಿದ ಯುವಕ ಗಾಡಿ ಪಾರ್ಕಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಸಾವು ಕಂಡಿದ್ದಾನೆ.

Read Full Story

09:51 PM (IST) Apr 29

ಬೆಂಗಳೂರು ಮಳೆಗೆ ಮತ್ತೊಂದು ಬಲಿ, ಜೆಪಿ ನಗರ ಬಳಿ ವಿದ್ಯುತ್ ಕಂಬ ಸ್ಪರ್ಶಿಸಿ ವ್ಯಕ್ತಿ ಸಾವು

ಬೆಂಗಳೂರು ಮಳೆಗೆ ಮತ್ತೊಂದು ಬಲಿ, ಜೆಪಿ ನಗರ ಬಳಿ ವಿದ್ಯುತ್ ಕಂಬ ಸ್ಪರ್ಶಿಸಿ ವ್ಯಕ್ತಿ ಸಾವು, ಕಾಂಪೌಂಡ್ ಕುಸಿದು 7 ಮಂದಿ ಮತೃಪಟ್ಟ ಬೆನ್ನಲ್ಲೇ ಇದೀಗ ವಿದ್ಯುತ್ ಸ್ಪರ್ಶಿಸಿ ಸಾವಾಗಿದೆ. ಒಂದೇ ಮಳೆ 8 ಮಂದಿಯನ್ನು ಬಲಿ ಪಡೆದಿದೆ.

Read Full Story

09:47 PM (IST) Apr 29

ಹುಲಿಕಲ್ ಘಾಟ್ ಮಣ್ಣು ಕುಸಿತ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ - ಸಚಿವ ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ ಅವಘಡದ ಕುರಿತು ಸಮಗ್ರ ವಿವರ ಪಡೆದು, ತಪ್ಪಿತಸ್ಥರ ವಿರುದ್ದ ಕಾನೂನಾತ್ಮಕ ಕ್ರಮ ವಹಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

Read Full Story

08:44 PM (IST) Apr 29

ಬೆಂಗಳೂರು ಮಳೆಗೆ ಪ್ರಖ್ಯಾತ ಪುಸ್ತಕ ಮಳಿಗೆಗೆ ನುಗ್ಗಿದ ನೀರು, 14 ಲಕ್ಷ ಮೌಲ್ಯದ 5000 ಬುಕ್ ನಾಶ

ಬೆಂಗಳೂರು ಮಳೆಗೆ ಪ್ರಖ್ಯಾತ ಪುಸ್ತಕ ಮಳಿಗೆಗೆ ನುಗ್ಗಿದ ನೀರು, 14 ಲಕ್ಷ ಮೌಲ್ಯದ 5000 ಬುಕ್ ನಾಶ, ದಿಡೀರ್ ಮಳೆಯಿಂದ ಮಳಿಗೆಗ ನೀರು ನುಗ್ಗಿದೆ. ಕಳೆದ ಮೂರು ದಶಕಗಳಿಂದ ಬೆಂಗಳೂರಿನಲ್ಲಿ ಜನಪ್ರಿಯ ಪುಸ್ತಕ ಮಳಿಗೆಯಾಗಿ ಗರುತಿಸಿಕೊಂಡಿದೆ.

Read Full Story

08:06 PM (IST) Apr 29

ಬೆಂಗಳೂರು ಮಳೆಗೆ ಬಲಿಯಾದ ಮೃತರ ಪಟ್ಟಿ ಬಿಡುಗಡೆ, ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಣೆ

ಬೆಂಗಳೂರು ಮಳೆಗೆ ಬಲಿಯಾದ ಮೃತರ ಪಟ್ಟಿ ಬಿಡುಗಡೆ, ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಣೆ, ಭಾರಿ ಮಳೆಗೆ ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲು ಸೂಚಿಸಲಾಗಿದೆ.

Read Full Story

07:38 PM (IST) Apr 29

ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬೆಂಗಳೂರು, 2 ಗಂಟೆಯಲ್ಲಿ 78MM ಮಳೆ 50ಕ್ಕೂ ಹೆಚ್ಚು ಮರ ಧರಶಾಹಿ, ಪ್ರಾಣಹಾನಿ!

ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ 50ಕ್ಕೂ ಹೆಚ್ಚು ಮರಗಳು ಉರುಳಿ, ರಸ್ತೆಗಳು ಜಲಾವೃತಗೊಂಡಿದ್ದು, ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದಾರೆ.

Read Full Story

07:12 PM (IST) Apr 29

Exit Poll 2026 - ದೀದಿ ಕೋಟೆಗೆ ಲಗ್ಗೆ ಇಟ್ಟ ಕಮಲ; ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದು ಖಚಿತ ಎಂದ ಸಮೀಕ್ಷೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನ ಮುಗಿದಿದ್ದು, ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬಿದ್ದಿವೆ. ಬಹುತೇಕ ಸಮೀಕ್ಷೆಗಳು ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಭವಿಷ್ಯ ನುಡಿದರೆ, ಪೀಪಲ್ಸ್ ಪಲ್ಸ್ ಸಮೀಕ್ಷೆಯು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಜಯ ಎಂದು ಹೇಳಿದೆ.
Read Full Story

06:57 PM (IST) Apr 29

ಒಂದೇ ಮಳೆಗೆ ಹಾಳೂರಾದ ಬೆಂಗಳೂರು, 7 ಸಾವು, ಸಂಪೂರ್ಣ ಅಸ್ತವ್ಯಸ್ತಕ್ಕೆ ಯಾರು ಹೊಣೆ?

ಒಂದೇ ಮಳೆಗೆ ಹಾಳೂರಾದ ಬೆಂಗಳೂರು, 7 ಸಾವು, ಸಂಪೂರ್ಣ ಅಸ್ತವ್ಯಸ್ತಕ್ಕೆ ಯಾರು ಹೊಣೆ? ಕಾಂಪೌಂಡ್ ಕುಸಿತ, ಧರೆಗುರುಳಿದ ಮರಗಳು, ವಾಹನಗಳ ಮೇಲೆ ಬಿದ್ದ ಮರ ಸೇರಿದಂತೆ ಒಂದು ಮಳೆ ಬೆಂಗಳೂರಲ್ಲಿ ಅವಾಂತರ ಸೃಷ್ಟಿಸಿದೆ.

 

Read Full Story

06:45 PM (IST) Apr 29

ಬೆಂಗಳೂರು ಮಹಾಮಳೆಗೆ 7 ಬಲಿ - ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಭೀಕರ ದುರಂತ; ಮೂವರು ಪುಟ್ಟ ಮಕ್ಕಳೂ ಸಾವು!

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು, ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ದುರಂತ ನಗರದಲ್ಲಿ ಆಘಾತವನ್ನುಂಟು ಮಾಡಿದ್ದು, ಹಳೆಯ ಗೋಡೆಯ ನಿರ್ವಹಣೆ ಕೊರತೆಯೇ ಘಟನೆಗೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.

Read Full Story

06:38 PM (IST) Apr 29

ಚಾಮರಾಜನಗರದಲ್ಲಿ ರಣಾಂಗಣವಾದ ಮದುವೆ ಮನೆ - ಚಿನ್ನಾಭರಣ ವಿಚಾರಕ್ಕೆ ಪರಸ್ಪರ ಚಾಕು ಇರಿತ!

ವಧು, ವರ ಎರಡೂ ಕಡೆಯವರು ಚಾಕುವಿನಿಂದ ಪರಸ್ಪರ ಇರಿದುಕೊಂಡಿದ್ದಾರೆ. ಒಬ್ಬರಿಗೊಬ್ಬರು ಬಡಿದಾಡಿಕೊಂಡು ರಕ್ತದ ಕೋಡಿ ಹರಿಸಿದ್ದಾರೆ. ಈ ಘಟನೆ ನಡೆದಿರೋದು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ.

Read Full Story

06:29 PM (IST) Apr 29

Cognizant Q1 revenue rises - ಲೇ-ಆಫ್‌ಗಳ ಮಧ್ಯೆ ಕಾಗ್ನಿಜೆಂಟ್‌ನ ಹೊಸ ಅಧ್ಯಾಯ! ಒಂದೇ ವರ್ಷದಲ್ಲಿ 21,000 ನೇಮಕಾತಿ

ಟೆಕ್ ದೈತ್ಯ 'ಕಾಗ್ನಿಜೆಂಟ್' ಹೊಸ ನೇಮಕಾತಿಗಳನ್ನು ಮಾಡುವ ಮೂಲಕ ತನ್ನ ಉದ್ಯೋಗಿಗಳ ಸಂಖ್ಯೆಯನ್ನು 3.5 ಲಕ್ಷಕ್ಕೆ ಹೆಚ್ಚಿಸಿದೆ. ಕಂಪನಿಯು ಮೊದಲ ತ್ರೈಮಾಸಿಕದಲ್ಲಿ ನಿರೀಕ್ಷೆಗೂ ಮೀರಿದ ಆದಾಯ ಗಳಿಸಿದ್ದು, ಎಐ ಆಧಾರಿತ ಯೋಜನೆಗಳು ಮತ್ತು ಬೃಹತ್ ಒಪ್ಪಂದಗಳ ಮೂಲಕ ಐಟಿ ವಲಯಕ್ಕೆ ಹೊಸ ಭರವಸೆ ಮೂಡಿಸಿದೆ.

Read Full Story

06:24 PM (IST) Apr 29

ಗಂಗಾವತಿಯಲ್ಲಿ ಫುಟ್‌ಪಾತ್ ಆಕ್ರಮಣಕ್ಕೆ ಬ್ರೇಕ್ - 150ಕ್ಕೂ ಹೆಚ್ಚು ಅಂಗಡಿಗಳ ತೆರವು

ಗಂಗಾವತಿ ನಗರದ ವಿವಿಧ ವೃತ್ತಗಳು ಮತ್ತು ರಸ್ತೆ ಪಕ್ಕದ ಚರಂಡಿಗಳ ಮೇಲೆ ನಿರ್ಮಿಸಲಾಗಿದ್ದ ಫುಟ್‌ಪಾತ್‌ಗಳಲ್ಲಿರುವ 150ಕ್ಕು ಹೆಚ್ಚು ಅಂಗಡಿಗಳನ್ನು ನಗರಸಭೆಯವರು ತೆರವು ಕಾರ್ಯಾಚರಣೆ ನಡೆಸಿದರು.

Read Full Story

05:53 PM (IST) Apr 29

ಕರ್ನಾಟಕದಲ್ಲಿ 56,834 ಹುದ್ದೆಗಳ ನೇಮಕಾತಿಗೆ ಶೀಘ್ರವೇ ಗ್ರೀನ್ ಸಿಗ್ನಲ್ - ಗೃಹ ಸಚಿವ ಪರಮೇಶ್ವರ

ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,834 ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಕಲಬುರಗಿಯಲ್ಲಿ ಘೋಷಿಸಿದ್ದಾರೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 8 ಸಾವಿರ ಪೊಲೀಸ್ ಕಾನ್ಸ್ಟೇಬಲ್ ಮತ್ತು 600 ಪಿಎಸ್‌ಐ ಹುದ್ದೆಗಳು ಸೇರಿದ್ದು, ಒಳಮೀಸಲಾತಿ ಸಮಸ್ಯೆ ಬಗೆಹರಿದ ನಂತರ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.
Read Full Story

05:28 PM (IST) Apr 29

ಇನ್ನೆರಡು ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ - ಸಂಸದ ಬೊಮ್ಮಾಯಿ

ಇನ್ನೆರಡು ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ನಾನು ಸಿಎಂ ಇದ್ದಾಗ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ಮಾಡಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

Read Full Story

05:11 PM (IST) Apr 29

ಸಿದ್ದರಾಮಯ್ಯ ಮಾಡಿದ ಮೀಸಲು ಒಳಮೀಸಲೇ ಅಲ್ಲ - ಸಂಸದ ಗೋವಿಂದ ಕಾರಜೋಳ

ಒಳ ಮೀಸಲಾತಿಯೆಂದರೆ ಎಷ್ಟೇ ಹುದ್ದೆಗಳಿದ್ದರೂ ಆ ಹುದ್ದೆಗಳಿಗೆ ಅದು ಅನ್ವಯ ಆಗಬೇಕು. ತಾರತಮ್ಯ ಆಗಬಾರದು. ಆದರೆ, ಈ ತಾರತಮ್ಯ ನಿಮ್ಮವರಿಂದಲೇ ಆಗಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪ ಮಾಡಿದರು.

Read Full Story

05:04 PM (IST) Apr 29

ಮಡಿಕೇರಿ ಜೈಲಿನಲ್ಲಿ ನಿವೃತ್ತ ಅಧಿಕಾರಿ ಸಾವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ - ಕೇರ್ ಟೇಕರ್ ಮಹಿಳೆಯಿಂದಲೇ ಹನಿಟ್ರ್ಯಾಪ್ ಆರೋಪ!

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಬಂಧಿತರಾಗಿದ್ದ ಕೊಡಗಿನ ವಿಚಾರಣಾಧೀನ ಕೈದಿ ಚಂಗಪ್ಪ ಜೈಲಿನಲ್ಲಿ ಸಾವನ್ನಪ್ಪಿದ್ದಾರೆ. ಇದು ಕೇರ್ ಟೇಕರ್ ಮಹಿಳೆಯ ಬ್ಲಾಕ್‌ಮೇಲ್ ಮತ್ತು ವಕೀಲರೊಬ್ಬರ ಹಣಕಾಸು ವಂಚನೆಯಿಂದ ಮಾನಸಿಕ ಆಘಾತಕ್ಕೊಳಗಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಆರೋಪಿಸಿದೆ.

Read Full Story

04:52 PM (IST) Apr 29

ಗಂಗಾವತಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಂಗ್ರಹ ಪ್ರಕರಣ - ಮೂವರಿಗೆ 3 ವರ್ಷ ಜೈಲು ಶಿಕ್ಷೆ

ಅಕ್ರಮ ಪಡಿತರ ಅಕ್ಕಿ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರೋಪಿಗಳಿಗೆ ಮೂರು ವರ್ಷ ಸೆರೆಮನೆವಾಸ ಮತ್ತು ಪ್ರತಿಯೊಬ್ಬರಿಗೆ 10 ಸಾವಿರ ದಂಡವನ್ನು ಇಲ್ಲಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಲಯ ತೀರ್ಪು ನೀಡಿದೆ.

Read Full Story

04:43 PM (IST) Apr 29

ಹಾಸನದಲ್ಲಿ ಕರುಳು ಹಿಂಡುವ ದುರಂತ - ಧರ್ಮಸ್ಥಳದಿಂದ ಹಿಂತಿರುಗುತ್ತಿದ್ದ ತಾಯಿ-ಮಗುವನ್ನು ಬಲಿ ಪಡೆದ ನಾಲೆ!

ಹಾಸನದ ಚನ್ನರಾಯಪಟ್ಟಣ ಬಳಿ ಕಾರೊಂದು ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಉರುಳಿಬಿದ್ದ ಪರಿಣಾಮ ತಾಯಿ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧರ್ಮಸ್ಥಳದಿಂದ ದೇವನಹಳ್ಳಿಗೆ ತೆರಳುತ್ತಿದ್ದ ಕುಟುಂಬದ ಇತರ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
Read Full Story

04:02 PM (IST) Apr 29

ಬೆಂಗಳೂರಿನ ಕನಸಿನ ಮನೆಗೆ ಕಂಟಕ, ವಸತಿ ಯೋಜನೆಯಡಿ ಫ್ಲಾಟ್ ಖರೀದಿ ಮಾಡಿದ್ದವರಿಗೆ ಶಾಕ್ ಕೊಟ್ಟ ಇಲಾಖೆ!

ಬೆಂಗಳೂರಿನ 1 ಲಕ್ಷ ಬಹುಮಹಡಿ ವಸತಿ ಯೋಜನೆಯಡಿ, ನಿಗದಿತ ಅವಧಿಯಲ್ಲಿ ಪೂರ್ಣ ಹಣ ಪಾವತಿಸದ ಫಲಾನುಭವಿಗಳ ಫ್ಲಾಟ್‌ಗಳನ್ನು ರದ್ದುಗೊಳಿಸಲು ವಸತಿ ಇಲಾಖೆ ಆದೇಶಿಸಿದೆ. ಸುಮಾರು 5 ಸಾವಿರ ಫಲಾನುಭವಿಗಳ ಹಂಚಿಕೆಯನ್ನು ರದ್ದುಗೊಳಿಸಿ, ಅವರ ಮುಂಗಡ ಹಣವನ್ನು ಹಿಂದಿರುಗಿಸಲು ಇಲಾಖೆ ನಿರ್ಧರಿಸಿದೆ.
Read Full Story

04:01 PM (IST) Apr 29

ಟ್ರೇಡ್ ಲೈಸೆನ್ಸ್‌ ನೀಡಲು 3 ತಿಂಗಳಿಂದ ಲಂಚಕ್ಕೆ ಸತಾಯಿಸಿದ್ದ SDA - ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾ ಬಲೆಗೆ

ಕೊಪ್ಪಳ ಆರ್‌ಟಿಒ ಕಚೇರಿಯಲ್ಲಿ ಶೋರೂಮ್ ಟ್ರೇಡ್ ಲೈಸನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಸ್‌ಡಿಎ ರಂಜಿತ್ ಎಂಬ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಯೀಮ್ ಎಂಬುವವರ ದೂರಿನ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಸಿಬ್ಬಂದಿಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ.

Read Full Story

03:17 PM (IST) Apr 29

ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರ ಸ್ಕ್ಯಾನಿಂಗ್ - ಮೂವರು ವೈದ್ಯರ ಬಂಧನ - 17 ಆರೋಪಿಗಳ ವಿರುದ್ಧ 12 FIR

ಅಪ್ರಾಪ್ತ ಗರ್ಭಿಣಿಯರಿಗೆ ಭ್ರೂಣ ಲಿಂಗ ಪತ್ತೆಗಾಗಿ ಸ್ಕ್ಯಾನಿಂಗ್ ಮಾಡಿದ ಆರೋಪದ ಮೇಲೆ ಮಂಡ್ಯ ಜಿಲ್ಲೆಯಲ್ಲಿ ಮೂವರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ., ಒಟ್ಟು 17 ಆರೋಪಿಗಳ ವಿರುದ್ಧ 12 ಎಫ್‌ಐಆರ್ ದಾಖಲಾಗಿದೆ. ಈ ಬಗ್ಗೆ ಲೋಕಾಯುಕ್ತ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು.

Read Full Story

03:15 PM (IST) Apr 29

ಉಡುಪಿ - ತ್ರಾಸಿ ಬಳಿ ಟ್ಯಾಂಕರ್-ಬಸ್ ಭೀಕರ ಅಪಘಾತ, ಕರಾವಳಿಗೆ ಪ್ರವಾಸ ಹೊರಟಿದ್ದ ವಿದ್ಯಾರ್ಥಿಗಳ ದುರಂತ ಅಂತ್ಯ!

ಉಡುಪಿಯ ಬೈಂದೂರು ತಾಲೂಕಿನ ತ್ರಾಸಿ ಬಳಿ, ಪ್ರವಾಸಕ್ಕೆ ಬಂದಿದ್ದ ಭದ್ರಾವತಿ ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
Read Full Story

02:45 PM (IST) Apr 29

ಪ್ರವಾಸಿಗರೇ ಇಲ್ಲಿ ಸಂಚರಿಸುವಾಗ ಎಚ್ಚರ, ಚಾರ್ಮಾಡಿ ಘಾಟ್ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದ ಒಂಟಿ ಸಲಗ!

ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡವನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಒಂಟಿ ಕಾಡಾನೆಯೊಂದು ಪ್ರತ್ಯಕ್ಷವಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ. ರಸ್ತೆಯ ಸಮೀಪವೇ ಕೆಲಕಾಲ ನಿಂತಿದ್ದ ಸಲಗದಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ಅರಣ್ಯ ಇಲಾಖೆಯು ಈ ಮಾರ್ಗದಲ್ಲಿ ಸಂಚರಿಸುವವರಿಗೆ ಜಾಗರೂಕರಾಗಿರಲು ಎಚ್ಚರಿಕೆ ನೀಡಿದೆ.
Read Full Story

01:41 PM (IST) Apr 29

ಬೆಂಗಳೂರು ಟೆಕ್ಕಿ ಪೂಜಾ ದತ್ತ ಸಾವು ಪ್ರಕರಣ - ಗೋಡೆ ಮೇಲಿದ್ದ ಆ ಪದಗಳೇ ನಿಗೂಢ ಸಾವಿಗೆ ಕಾರಣ ಹೇಳ್ತಿದೆಯಾ?

ಬೆಂಗಳೂರಿನಲ್ಲಿ ಟೆಕ್ಕಿ ಪೂಜಾ ದತ್ತ ಅವರ ಅನುಮಾನಾಸ್ಪದ ಸಾವು ಸಂಭವಿಸಿದೆ. ಒಂದು ವರ್ಷದ ಹಿಂದೆ ಕೆಲಸಕ್ಕೆ ರಾಜೀನಾಮೆ ನೀಡಿ, ಎಲ್ಲರಿಂದ ದೂರವಾಗಿ ಒಂಟಿ ಜೀವನ ನಡೆಸುತ್ತಿದ್ದ ಅವರ ಸಾವಿನ ಸುತ್ತ ಹಲವು ಅನುಮಾನಗಳು ಮೂಡಿವೆ. ಕೊಠಡಿಯ ಗೋಡೆಗಳ ಮೇಲೆ ಅಂಟಿಸಲಾಗಿದ್ದ ವಿಚಿತ್ರ ಪದಗಳು ಮತ್ತು ಅವರ ಖಿನ್ನತೆಯ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read Full Story

12:29 PM (IST) Apr 29

ರಾಯಚೂರು - ಚಿಕ್ಕಪ್ಪನಿಂದ ಅಮ್ಮನ ಜೀವ ಉಳಿಸಲು ಹೋಗಿ 12 ವರ್ಷದ ಬಾಲಕ ಸಾವು

ಹುಟ್ಟುತ್ತಾ ಅಣ್ಣತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎಂಬ ಮಾತಿನಂತೆ ಆಸ್ತಿಗಾಗಿ ಅಣ್ಣ ತಮ್ಮಂದಿರ ನಡುವೆ ನಡೆದ ಜಗಳವೊಂದು ಪುಟ್ಟ ಬಾಲಕನ ಕೊಲೆಯಲ್ಲಿ ಅಂತ್ಯವಾಗಿದೆ. ಪಿತ್ರಾರ್ಜಿತ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಅಣ್ಣನ ಮಗನನ್ನೇ ಚಿಕ್ಕಪ್ಪ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

Read Full Story

12:19 PM (IST) Apr 29

ಉತ್ತರ ಕನ್ನಡ - ನಿವೃತ್ತ ಎಲ್‌ಐಸಿ ಏಜೆಂಟ್‌ ಗೆ ಮುಂಬೈನಿಂದ ಡಿಜಿಟಲ್ ಅರೆಸ್ಟ್ ₹1.74 ಕೋಟಿ ಕಳೆದುಕೊಂಡ ವೃದ್ಧ!

ಯಲ್ಲಾಪುರದ ನಿವೃತ್ತ ಎಲ್‌ಐಸಿ ಏಜೆಂಟ್ ಶಿವಾನಂದ ಹೆಗಡೆ ಅವರು 'ಡಿಜಿಟಲ್ ಅರೆಸ್ಟ್' ಎಂಬ ಸೈಬರ್ ವಂಚನೆಗೆ ಒಳಗಾಗಿದ್ದಾರೆ. ನಕಲಿ ಪೊಲೀಸ್ ಅಧಿಕಾರಿಗಳೆಂದು ಹೇಳಿಕೊಂಡ ವಂಚಕರು, ಉಗ್ರರೊಂದಿಗೆ ಸಂಪರ್ಕದ ಆರೋಪ ಹೊರಿಸಿ, ಅವರಿಂದ ಹಂತ ಹಂತವಾಗಿ ₹1.74 ಕೋಟಿ ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಈ ಘಟನೆಯು ಸೈಬರ್ ವಂಚನೆಯ ಹೊಸ ಮುಖವನ್ನು ಅನಾವರಣಗೊಳಿಸಿದೆ.
Read Full Story

12:03 PM (IST) Apr 29

Hassan - ಕಲ್ಯಾಣಕ್ಕೆ ವಧು ಸಿಗದ್ದಕ್ಕೆ ಕಲ್ಯಾಣಿಗೆ ಬಿದ್ದು ಪ್ರಾಣ ಬಿಟ್ಟ ಹಾಸನದ ಯುವಕ

ಹಾಸನ ಜಿಲ್ಲೆಯ ಬೇಲೂರಿನಲ್ಲಿ, ಮದುವೆಯಾಗಲು ಹೆಣ್ಣು ಸಿಗದ ಕಾರಣಕ್ಕೆ ಮನನೊಂದು 35 ವರ್ಷದ ಯುವಕನೊಬ್ಬ ಕಲ್ಯಾಣಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ವಧು ಹುಡುಕಾಟದಲ್ಲಿದ್ದ ಪದವೀಧರ ವಿನಯ್, ಪೋಷಕರು ಬೈದಿದ್ದರಿಂದಲೂ ನೊಂದಿದ್ದ ಎಂದು ಹೇಳಲಾಗಿದೆ.
Read Full Story

11:42 AM (IST) Apr 29

ದರ್ಶನ್‌ಗೆ ಮತ್ತೆ ಸಿಗುತ್ತಾ ರಿಲೀಫ್? ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸ್ತಿರೋದು ಇದು ಎಷ್ಟನೇ ಬಾರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ, ಇದೀಗ ಮತ್ತೊಮ್ಮೆ ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.  ಈ ಪ್ರಕರಣದಲ್ಲಿ ಇದುವರೆಗೆ ದರ್ಶನ್ ಎಷ್ಟನೇ ಬಾರಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಡಿಟೇಲ್ ಇಲ್ಲಿದೆ.

Read Full Story

11:38 AM (IST) Apr 29

ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ಸೌಲಭ್ಯ, ಮೇಕ್‌ ಮೈ ಟ್ರಿಪ್‌ ಮೂಲಕ ಆನ್‌ಲೈನ್‌ನಲ್ಲೇ ಡ್ಯೂಟಿ-ಫ್ರೀ, ಪ್ರೀ-ಬುಕಿಂಗ್!

ಅದಾನಿ ಏರ್‌ಪೋರ್ಟ್ ಹೋಲ್ಡಿಂಗ್ಸ್ ಲಿ. ಮತ್ತು ಮೇಕ್‌ ಮೈ ಟ್ರಿಪ್ ಹೊಸ ಒಪ್ಪಂದ ಮಾಡಿಕೊಂಡಿವೆ. ಈ ಮೂಲಕ ಮಂಗಳೂರು ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರು 'ಡ್ಯೂಟಿ-ಫ್ರೀ' ಉತ್ಪನ್ನಗಳನ್ನು ಆನ್‌ಲೈನ್‌ನಲ್ಲಿ ಮುಂಗಡವಾಗಿ ಕಾಯ್ದಿರಿಸಬಹುದು. ಇದು ಪ್ರಯಾಣಿಕರ ಸಮಯ ಉಳಿತಾಯ ಮಾಡುವುದಲ್ಲದೆ, ವಿಶೇಷ ರಿಯಾಯಿತಿಗಳನ್ನು ಸಹ ನೀಡುತ್ತದೆ.
Read Full Story

11:36 AM (IST) Apr 29

ನೀವು ಖರೀದಿಸುವ ಮಟನ್ ತಾಜಾವೇ? ಮೋಸ ಹೋಗುವ ಮೊದಲು ಈ 4 ವಿಧಾನದಿಂದ ಸುಲಭವಾಗಿ ಪತ್ತೆಹಚ್ಚಿ!

ಮಾಂಸ: ತಾಜಾ ಮಟನ್ ಮತ್ತು ಹಳಸಿದ ಮಾಂಸವನ್ನು ಗುರುತಿಸುವುದು ಹೇಗೆಂದು ತಿಳಿಯುವುದು ಬಹಳ ಮುಖ್ಯ. ನಿಮ್ಮ ಆರೋಗ್ಯ ಕೆಡದಂತೆ ಇರಬೇಕಾದರೆ, ಮಟನ್ ಖರೀದಿಸುವ ಮೊದಲು ಈ ಸಣ್ಣ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ.

Read Full Story

11:01 AM (IST) Apr 29

Exclusive - ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್

ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಜೈಲುವಾಸದಿಂದ ಮುಕ್ತಿ ನೀಡುವಂತೆ ದರ್ಶನ್ ಮನವಿ ಮಾಡಿಕೊಂಡಿರುವ ಮಾಹಿತಿ ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಲಭ್ಯವಾಗಿದೆ.

Read Full Story

10:51 AM (IST) Apr 29

ಮತ್ತೆ ಮುಂದೋಯ್ತು ಬಹು ನಿರೀಕ್ಷಿತ 'ಟಾಕ್ಸಿಕ್' ಬಿಡುಗಡೆ ದಿನಾಂಕ; ಯಶ್ ಮಹತ್ವದ ಅಪ್‌ಡೇಟ್‌

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ 'ದಿ ಟಾಕ್ಸಿಕ್' ಸಿನಿಮಾದ ಬಿಡುಗಡೆ ದಿನಾಂಕ ಮತ್ತೊಮ್ಮೆ ಮುಂದೂಡಿಕೆಯಾಗಿದೆ. ಈ ಹಿಂದೆ ಜೂನ್ 4ಕ್ಕೆ ನಿಗದಿಯಾಗಿದ್ದ ದಿನಾಂಕವನ್ನು ಮತ್ತೆ ಮುಂದೂಡಲಾಗಿದ್ದು, ಹೊಸ ದಿನಾಂಕವನ್ನು ಚಿತ್ರತಂಡ ಇನ್ನೂ ಪ್ರಕಟಿಸಿಲ್ಲ. 

Read Full Story

10:34 AM (IST) Apr 29

ಗದಗ - ಕಾರು ಚಾಲಕನ ನಿದ್ದೆ ಮಂಪರಿಗೆ ವಾಕಿಂಗ್ ಮಾಡುತ್ತಿದ್ದ ಇಬ್ಬರು ಪಾದಚಾರಿಗಳು ಬಲಿ

ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಚಾಲಕನ ನಿದ್ದೆ ಮಂಪರಿನಿಂದಾಗಿ ಕಾರೊಂದು ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.

Read Full Story

10:27 AM (IST) Apr 29

Mangaluru - ಯೆನೆಪೋಯ ಆಸ್ಪತ್ರೆಯಲ್ಲಿ ಐತಿಹಾಸಿಕ ಶಸ್ತ್ರಚಿಕಿತ್ಸೆ; ಇದು ದೇಶದಲ್ಲಿಯೇ ಮೊದಲು

ಕ್ಯಾನ್ಸರ್‌ನಿಂದಾಗಿ ಕಾಲು ಕಳೆದುಕೊಳ್ಳುವ ಹಂತದಲ್ಲಿದ್ದ ರೋಗಿಗೆ ಯೆನೆಪೋಯ ಆಸ್ಪತ್ರೆಯ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಭಾರತದಲ್ಲೇ ಪ್ರಥಮ ಎನ್ನಲಾದ ಈ 13 ಗಂಟೆಗಳ ಸಂಕೀರ್ಣ ಶಸ್ತ್ರಚಿಕಿತ್ಸೆಯ ಮೂಲಕ, ಕ್ಯಾನ್ಸರ್ ಪೀಡಿತ ಮೂಳೆ ಮತ್ತು ಸ್ನಾಯುಗಳನ್ನು ತೆಗೆದು, ಕಾಲನ್ನು ಪುನರ್ ನಿರ್ಮಿಸಿ ರೋಗಿ ಮತ್ತೆ ನಡೆಯುವಂತೆ ಮಾಡುವಲ್ಲಿ ವೈದ್ಯರ ತಂಡ ಯಶಸ್ವಿಯಾಗಿದೆ.
Read Full Story

10:12 AM (IST) Apr 29

ಕೇವಲ 36 ಎಸೆತಗಳಲ್ಲಿ ಶತಕ, ಧೋನಿ ತಂಡಕ್ಕೆ ಮುಂಬೈ 'ಬಾಹುಬಲಿ'! ಯಾರು ಈ ಆಯುಷ್ ವರ್ತಕ್?

36 ಎಸೆತಗಳಲ್ಲಿ ಶತಕ ಸಿಡಿಸಿ ಮಿಂಚಿದ್ದ ಮುಂಬೈನ ಯುವ ಆಟಗಾರ ಆಯುಷ್ ವರ್ತಕ್‌ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟ್ರಯಲ್ಸ್‌ಗೆ ಬರುವಂತೆ ಆಹ್ವಾನ ನೀಡಿದೆ. ಇದು ಧೋನಿಯ ಮತ್ತೊಂದು ಮಾಸ್ಟರ್ ಪ್ಲಾನ್ ಎಂದೇ ಹೇಳಲಾಗುತ್ತಿದೆ. ಹಾಗಿದ್ರೆ, ಯಾರು ಈ ಆಯುಷ್ ವರ್ತಕ್?
Read Full Story

08:57 AM (IST) Apr 29

ಬಿಸಿಲಿಗೆ ಬಳಲಿರೋ ಸಿಲಿಕಾನ್‌ ಸಿಟಿ ಮಂದಿಗೆ ಗುಡ್‌ನ್ಯೂಸ್ - ಬೆಂಗಳೂರಿಗೆ ಬರಲಿದೆ ಮಳೆ

ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟಿರುವ ಬೆಂಗಳೂರು ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ 26 ಜಿಲ್ಲೆಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ.
Read Full Story

08:57 AM (IST) Apr 29

ಸಬ್ ಇನ್ಸ್‌ಪೆಕ್ಟರ್ ತಿಪ್ಪೇಶ್ ಪತ್ನಿ ನೇಣಿಗೆ ಶರಣು; ಪ್ರೀತಿಸಿ ಮದುವೆಯಾಗಿದ್ದ ಜೋಡಿ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ತಿಪ್ಪೇಶ್ ಅವರ 35 ವರ್ಷದ ಪತ್ನಿ ಪದ್ಮಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read Full Story

08:52 AM (IST) Apr 29

ಬಿಬಿಎಂಪಿ ಬ್ರಹ್ಮಾಂಡ ಭ್ರಷ್ಟಾಚಾರ..! ₹20,000 ಕೋಟಿ ಟಿಡಿಆರ್‌ ಕೇಸ್‌ ದಾಖಲೆ ನಾಪತ್ತೆ! ಇ.ಡಿಗೆ ದೂರು

ಬೆಂಗಳೂರಿನಲ್ಲಿ 20 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಟಿಡಿಆರ್‌ ಹಗರಣ ಬೆಳಕಿಗೆ ಬಂದಿದ್ದು, ಬಿಬಿಎಂಪಿ ಕಚೇರಿಯಿಂದ 2014-17ರ ಅವಧಿಯ ಮಹತ್ವದ ದಾಖಲೆಗಳು ನಾಪತ್ತೆಯಾಗಿವೆ. ಈ ಸಂಬಂಧ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಅವರು ಇ.ಡಿ ಮತ್ತು ಲೋಕಾಯುಕ್ತಕ್ಕೆ ದೂರು ನೀಡಿದ್ದು, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ.
Read Full Story

More Trending News