ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ‘ಪಂದ್ರಹ ದಿನ್ ಕಿ ಸರದಾರ’. ಅವರು 15 ದಿನದ ಬಳಿಕ ಈ ರಾಜ್ಯದ ಮುಖ್ಯಮಂತ್ರಿ ಆಗಿರುವುದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕುರ್ಚಿ ಕಿತ್ತಾಟದಲ್ಲಿ ತೊಡಗಿದ್ದು, ವಿಧಾನಸೌಧದಲ್ಲಿ ಆಡಳಿತವೇ ಇಲ್ಲದಂತಾಗಿದೆ.
ಮೇ 4ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಬರಲಿದ್ದು, ಅಂದು ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಕೂಡ ಬರುತ್ತದೆ. ಅದರ ಜೊತೆಗೆ ಸಿದ್ದರಾಮಯ್ಯ ಅವರ ಕುರ್ಚಿಯ ಫಲಿತಾಂಶ ಕೂಡ ಪ್ರಕಟವಾಗುತ್ತದೆ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಬೆಂಬಲಿಗರಾದ 40 ಶಾಸಕರು ಹೈಕಮಾಂಡ್ ಬಳಿ ಹೋಗಿ ಲಾಬಿ ಮಾಡುತ್ತಿದ್ದು, ಡಿ.ಕೆ.ಶಿವಕುಮಾರ್ ಅವರ ಪರವಾಗಿ 50 ಜನ ಲಾಬಿ ಮಾಡುತ್ತಿದ್ದಾರೆ. ಆಡಳಿತ ಸಂಪೂರ್ಣವಾಗಿ ಕುಸಿದು ಹೋಗಿದೆ ಎಂದು ಕಿಡಿಕಾರಿದರು.
07:19 AM (IST) Apr 29
ಮಧ್ಯಪ್ರಾಚ್ಯ ಯುದ್ಧದ ನಂತರ ಧಾರವಾಡ ಜಿಲ್ಲೆಯಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಪೆಟ್ರೋಲ್ ಬಂಕ್ಗಳು ಸಂಕಷ್ಟಕ್ಕೆ ಸಿಲುಕಿವೆ. ಮುಂಗಡ ಹಣ ಪಾವತಿಸಿದರೂ ಡಿಪೋಗಳಿಂದ ಸಮರ್ಪಕ ತೈಲ ಪೂರೈಕೆಯಾಗದ ಕಾರಣ, ಗ್ರಾಮೀಣ ಭಾಗದ ಹಲವು ಬಂಕ್ಗಳು 'ನೋ ಸ್ಟಾಕ್' ಬೋರ್ಡ್ ಹಾಕಿ ಮುಚ್ಚುತ್ತಿವೆ.
07:09 AM (IST) Apr 29
06:45 AM (IST) Apr 29
06:31 AM (IST) Apr 29
ಬೆಂಗಳೂರಿನ ಮೂಲಸೌಕರ್ಯ ನಿರ್ವಹಣೆಗೆ ವಾರ್ಷಿಕವಾಗಿ 38,455 ಕೋಟಿ ರೂ.ಗೂ ಹೆಚ್ಚು ಖರ್ಚಾಗುತ್ತಿದೆ ಎಂದು ಜನಾಗ್ರಹ ಸಂಸ್ಥೆ ವರದಿ ಮಾಡಿದೆ. ಈ ಅಪಾರ ಪ್ರಮಾಣದ ಸಾರ್ವಜನಿಕ ಹಣದ ಖರ್ಚಿನ ಬಗ್ಗೆ ಬಿಬಿಎಂಪಿ, ಬೆಸ್ಕಾಂ ಸೇರಿದಂತೆ ಸರ್ಕಾರಿ ಸಂಸ್ಥೆಗಳು ಜನರಿಗೆ ಯಾವುದೇ ಸೂಕ್ತ ಮಾಹಿತಿ ಅಥವಾ ಲೆಕ್ಕವನ್ನು ನೀಡುತ್ತಿಲ್ಲ ಎಂದು ಆರೋಪಿಸಿದೆ.
06:21 AM (IST) Apr 29
06:16 AM (IST) Apr 29
ದಾಖಲೆಗಳಿಲ್ಲದ 995 ಜನವಸತಿ ಪ್ರದೇಶಗಳನ್ನು ಗ್ರಾಮ ಠಾಣಾ ವ್ಯಾಪ್ತಿಗೆ ತರಲು ಉಪಗ್ರಾಮಗಳಾಗಿ ರಚಿಸಲಾಗುತ್ತಿದೆ. ಈ ಯೋಜನೆಯು ನಿವಾಸಿಗಳಿಗೆ ಇ-ಖಾತೆ, ನಮೂನೆ 11 ನಂತಹ ಅಧಿಕೃತ ದಾಖಲೆಗಳನ್ನು ಒದಗಿಸಿ, ಸರ್ಕಾರದ ಸೌಲಭ್ಯಗಳನ್ನು ಮತ್ತು ಅಭಿವೃದ್ಧಿ ಕಾರ್ಯಗಳನ್ನು ಸುಲಭಗೊಳಿಸುವ ಗುರಿ ಹೊಂದಿದೆ
06:01 AM (IST) Apr 29
ಅಡಕೆ ಬೆಳೆಗಾರರ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೋ ಚಾಕೋಲೆಟ್, ಗೂಗಲ್ನಲ್ಲಿ ಪ್ರಕಟವಾದ ಸಮೀಕ್ಷೆಯಲ್ಲಿ ಭಾರತದ ಟಾಪ್-10 ಚಾಕೋಲೆಟ್ ಬ್ರ್ಯಾಂಡ್ಗಳಲ್ಲಿ ಸ್ಥಾನ ಪಡೆದಿದೆ. ಈ ಯಶಸ್ಸಿನೊಂದಿಗೆ, ಸಂಸ್ಥೆ ಮಿಲೆಟ್ ಎನರ್ಜಿ ಬಾರ್ ಮತ್ತು ಡಾರ್ಕ್ ಚಾಕೋಲೆಟ್ಗಳಂತಹ ಹೊಸ ಉತ್ಪನ್ನಗಳನ್ನು ಪರಿಚಯಿಸಲು ಸಜ್ಜಾಗಿದೆ
05:50 AM (IST) Apr 29
ಶಾಸಕ ಇಕ್ಬಾಲ್ ಹುಸೇನ್ ಅವರು ಮೇ 15 ರಂದು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ, ಈ ಹೇಳಿಕೆಯನ್ನು ಇತರ ನಾಯಕರು ಅಲ್ಲಗಳೆದಿದ್ದು, ನಾಯಕತ್ವ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದಿದ್ದಾರೆ.
05:41 AM (IST) Apr 29
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿಶೇಷ ಕರ್ತವ್ಯಾಧಿಕಾರಿ ಎಂದು ಹೇಳಿಕೊಂಡು ಜಮ್ಮು ಕಾಶ್ಮೀರದ ವೈದ್ಯರಿಗೆ ಜಮೀನು ಕೊಡಿಸುವುದಾಗಿ ನಂಬಿಸಿ 2.70 ಕೋಟಿ ರೂ. ವಂಚಿಸಿದ್ದ ಪ್ರಕರಣದಲ್ಲಿ, ಆರೋಪಿ ಎಚ್.ಎನ್.ಸುಜಯೇಂದ್ರ ವಿರುದ್ಧ ವಿಜಯನಗರ ಠಾಣೆ ಪೊಲೀಸರು ದೋಷಾರೋಪಟ್ಟಿ ಸಲ್ಲಿಸಿದ್ದಾರೆ.