ಮಂಡ್ಯ: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಕ್ರಾಂತಿ ಎಬ್ಬಿಸುತ್ತದೆ. ಅಲ್ಲಿಯವರೆಗೂ ಯಾವ ಕ್ರಾಂತಿಯೂ ಆಗುವುದಿಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ನವೆಂಬರ್ ಕ್ರಾಂತಿ ಆಗಲಿಲ್ಲ. ಸಂಕ್ರಾಂತಿ ಕ್ರಾಂತಿಯೂ ಇಲ್ಲ, ಯುಗಾದಿಗೂ ಕ್ರಾಂತಿ ಇಲ್ಲ. 2028ಕ್ಕೆ ನಾವೇ ಅಧಿಕಾರಕ್ಕೆ ಬಂದು ಕ್ರಾಂತಿ ಮಾಡುತ್ತೇವೆ. ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒಟ್ಟಾಗಿ ಕುಳಿತು ತೀರ್ಮಾನ ಮಾಡುತ್ತಾರೆ. ಯಾರ ಬಳಿಯೂ ಅನಿಸಿಕೆಗಳನ್ನು ಕೇಳುವುದಿಲ್ಲ. ಪಕ್ಷದ ನಿರ್ಧಾರಕ್ಕೆ ನಾವು ಸಂಪೂರ್ಣ ಬದ್ಧರಾಗಿರುತ್ತೇವೆ ಎಂದು ಅವರು ಪುನರುಚ್ಚರಿಸಿದರು.

10:26 PM (IST) Dec 29
ಬೆಂಗಳೂರಿನ ಪಿಜಿ ಕಟ್ಟದಲ್ಲಿ ಸಿಲಿಂಡರ್ ಸ್ಫೋಟ, ಎಂಜಿನೀಯರ್ ಸಾವು, ಮೂವರಿಗೆ ಗಾಯ, ಕಿಚಕ್ ಹಾಗೂ ಡೈನಿಂಗ್ ಹಾಲ್ ಬಳಿ ಈ ಘಟನೆ ನಡೆದಿದೆ. 50ಕ್ಕೂ ಹೆಚ್ಚು ಮಂದಿ ಇರುವ ಪಿಜಿಯಲ್ಲಿ ಈ ಘಟನೆ ಸಂಭವಿಸಿದ್ದು, ಮತ್ತೆ ಸುರಕ್ಷತಾ ಪ್ರಶ್ನೆ ಎದ್ದಿದೆ.
09:56 PM (IST) Dec 29
ನಟಿ ದುರಂತ ಅಂತ್ಯ ಪ್ರಕರಣ, ಡೆತ್ ನೋಟ್ನಲ್ಲಿ ಮದುವೆ ಸೇರಿ ಮಹತ್ವದ ವಿಚಾರ ಪ್ರಸ್ತಾಪ ಮಾಡಲಾಗಿದೆ. ಪೊಲೀಸರು ಕೈಸೇರಿರುವ ಡೆತ್ ನೋಟ್ ನಂದಿನ ಸಾವಿನ ಹಿಂದಿನ ಕಾರಣಗಳನ್ನು ಹೇಳುತ್ತಿದೆ. ನಟನೆ, ಬ್ಯೂಟಿ ಮೂಲಕ ಗಮನಸೆಳೆದ ನಟಿ ಸಾವಿನ ಹಿಂದಿನ ರಹಸ್ಯ.
08:30 PM (IST) Dec 29
ಕನ್ನಡ ಹಾಗೂ ತಮಿಳು ಕಿರುತೆರೆ ನಟಿ ನಂದಿನಿ, ಬೆಂಗಳೂರಿನ ಪಿಜಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಒತ್ತಡ ಮತ್ತು ವೃತ್ತಿಜೀವನದ ಸಮಸ್ಯೆಗಳಿಂದ ನೊಂದು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಪೊಲೀಸರು ಡೆತ್ನೋಟ್ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.
07:57 PM (IST) Dec 29
ನ್ಯಾಯವೂ ಹೊರಗುತ್ತಿಗೆ? ಬೆಂಗಳೂರಿನ ಕಾನೂನು ಕೆಲಸ ಮಾಡಿದ ಮಹಾರಾಷ್ಟ್ರ ಪೊಲೀಸರು!ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ ಬೆಂಗಳೂರಿನ ಪೊಲೀಸ್ ಪ್ರಕ್ರಿಯೆಯಲ್ಲಿನ ಹುಳುಕುಗಳನ್ನು ಪ್ರದರ್ಶಿಸಿದೆ. ಸಾರ್ವಜನಿಕರ ವಿಶ್ವಾಸವನ್ನು ಕುಂದಿಸಿ, ಯುವಕರನ್ನು ಅಪಾಯದ ಅಂಚಿಗೆ ತಳ್ಳಿದೆ.
07:07 PM (IST) Dec 29
ಯಲಹಂಕದ ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಜಾಗದಲ್ಲಿದ್ದ 167 ಅಕ್ರಮ ಶೆಡ್ಗಳನ್ನು ತೆರವುಗೊಳಿಸಲಾಗಿದೆ. ಈ ಕಾರ್ಯಾಚರಣೆಯಿಂದ ನಿರಾಶ್ರಿತರಾದ ನೈಜ ಸಂತ್ರಸ್ತರಿಗೆ ಪರ್ಯಾಯ ವಸತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
06:33 PM (IST) Dec 29
06:06 PM (IST) Dec 29
ಟಾಕ್ಸಿಕ್ ಸಿನಿಮಾದಲ್ಲಿ ಎಲಿಜಬೆತ್- ನಾದಿಯಾ, ಬುಹು ನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಎರಡು ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದೇ ವೇಳೆ ಸಿನಿಮಾ ಕತೆಯ ಸಣ್ಣ ಸುಳಿವನ್ನು ನೀಡಿದ್ದಾರೆ. ಟಾಕ್ಸಿಕ್ ಸಿನಿಮಾ ಕುರಿತು ಯಶ್ ನೀಡಿದ ಅಪ್ಡೇಟ್ ಏನು?
06:06 PM (IST) Dec 29
kannada actress nandini cm death: ಸೀರಿಯಲ್ನಲ್ಲಿ ಸಾಯುವ ದೃಶ್ಯವಿತ್ತು, ರಿಯಲ್ ಆಗಿಯೂ ಕನ್ನಡ ನಟಿ ನಂದಿನಿ ಅವರು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಕೊಟ್ಟೂರು ಮೂಲದ ನಟಿ ನಂದಿನಿ ಅವರು ಅಸು ನೀಗಿದ್ದಾರೆ.
05:36 PM (IST) Dec 29
Suraj-Ganavi Case: Viral Wedding Video Shows Suraj Recalling His Mother During Makeup ನವವಿವಾಹಿತರಾದ ಗಾನವಿ ಮತ್ತು ಸೂರಜ್ ಆ*ತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೂರಜ್ ಅವರ ಮದುವೆಯ ಮೇಕಪ್ ವಿಡಿಯೋವೊಂದು ವೈರಲ್ ಆಗಿದೆ.
05:35 PM (IST) Dec 29
ದೊಡ್ಡವರ ಫ್ರೂಟಿ, ಫ್ರೂಟಿ ಜ್ಯೂಸ್ ಬಗ್ಗೆ ಎಲ್ಲರಿಗೂ ಗೊತ್ತೆ ಇದೆ. ಆದರೆ ದೊಡ್ಡವರ ಫ್ರೂಟಿ ಜ್ಯೂಸ್ ನೋಡಿದ್ದೀರಾ? ಹೊಸವರ್ಷ ಸಂಭ್ರಮಾಚರಣೆ ಬೆನ್ನಲ್ಲೇ ಇದೀಗ ದೊಡ್ಡವ ಫ್ರೂಟಿ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.
05:21 PM (IST) Dec 29
04:52 PM (IST) Dec 29
'ನಾ ನಿನ್ನ ಬಿಡಲಾರೆ' ಧಾರಾವಾಹಿಯಲ್ಲಿ ದೆವ್ವದ ಪಾತ್ರಧಾರಿ ನೀತಾ ಅಶೋಕ್, ತಮ್ಮ ಪಾತ್ರದ ಹರಿದ ಸೀರೆಯ ಫೋಟೋ ಹಂಚಿಕೊಂಡು ತಮಾಷೆ ಮಾಡಿದ್ದಾರೆ. 'ವಿಕ್ರಾಂತ್ ರೋಣ' ಚಿತ್ರದ ಪನ್ನಾ ಪಾತ್ರದ ಮೂಲಕವೂ ಖ್ಯಾತಿ ಗಳಿಸಿದ್ದಾರೆ ನೀತಾ
04:14 PM (IST) Dec 29
ಏನೇ ಪ್ರಯತ್ನಿಸಿದರೂ ಜನಸಂದಣಿ ನಿಯಂತ್ರಣಕ್ಕೆ ಬರದಿದ್ದಾಗ, ಭದ್ರತಾ ದೃಷ್ಟಿಯಿಂದ ಗುಂಡು ಹಾರಿಸಬೇಕಾಯ್ತು. ಕೆಲವು ಜನರು ಬಂದೂಕುಗಳೊಂದಿಗೆ ಕಾಣಿಸಿಕೊಂಡಿದ್ದರಿಂದ, ವಾತಾವರಣ ತಿಳಿಯಾಗುವ ಬದಲು ಇನ್ನಷ್ಟು ಭಯಾನಕವಾಯಿತು. ಜನರು ಭಯಭೀತರಾಗಿ ಹೋಗುವ ಬದಲು ಅಲ್ಲೇ ಕಲ್ಲಿನಂತೆ ನಿಂತೇಬಿಟ್ಟರು. ಮುಂದೇನಾಯ್ತು?
04:04 PM (IST) Dec 29
03:39 PM (IST) Dec 29
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ, ಚಿಕ್ಕಮಗಳೂರು ಜಿಲ್ಲಾಡಳಿತವು ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ ಸೇರಿದಂತೆ 22 ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವೇಶನಿರ್ಬಂಧಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಡಿಸೆಂಬರ್ 31ರ ಸಂಜೆಯಿಂದ ಜನವರಿ 1ರ ಬೆಳಗ್ಗೆಯವರೆಗೆ ಆದೇಶ ಜಾರಿಯಲ್ಲಿರುತ್ತದೆ.
03:25 PM (IST) Dec 29
ಬಿಗ್ಬಾಸ್ ಮನೆಯಿಂದ ಎಲಿಮಿನೇಟ್ ಆದ ಸೂರಜ್ ಸಿಂಗ್, ಕಾವ್ಯಾ ಶೈವ ಅವರ ಆಟದ ಬಗ್ಗೆ ಮಾತನಾಡಿದ್ದಾರೆ. ತಮ್ಮ ಆಟವನ್ನು ಬದಲಿಸಿಕೊಂಡರೆ, ಅದು ಅವರ ಬಿಗ್ಬಾಸ್ ಪಯಣಕ್ಕೆ ಕಷ್ಟವಾಗಲಿದೆ ಎಂದು ಸೂರಜ್ ಎಚ್ಚರಿಸಿದ್ದಾರೆ. ಏನದು?
02:41 PM (IST) Dec 29
ಬಿಗ್ಬಾಸ್ ಮನೆಯಿಂದ ಎಲಿಮಿನೇಟ್ ಆಗಿರುವ ಸೂರಜ್ ಸಿಂಗ್, ತಮ್ಮ ಪಯಣದ ಅನುಭವ ಹಂಚಿಕೊಂಡಿದ್ದಾರೆ. ಈ ಬಾರಿ ವಿನ್ನರ್ ಆಗುವುದು ಅವರೇ ಖಚಿತ ಎಂದಿರುವ ಅವರು, ಆದರೆ ತಮ್ಮ ಪ್ರಕಾರ ಬೇರೆಯವರ ಹೆಸರನ್ನು ತೆಗೆದುಕೊಂಡಿದ್ದಾರೆ. ಅವರು ಹೇಳಿದ್ದು ಯಾರ ಹೆಸರನ್ನು?
02:35 PM (IST) Dec 29
ಈ ವಾರದ ಕ್ಯಾಪ್ಟನ್ ಗಿಲ್ಲಿ ನಟ, ನಾಮಿನೇಷನ್ ಪ್ರಕ್ರಿಯೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಅವರ ನಿರ್ಧಾರಕ್ಕೆ ಅಶ್ವಿನಿ ಗೌಡ ವ್ಯಂಗ್ಯವಾಗಿ ಚಪ್ಪಾಳೆ ತಟ್ಟಿದ್ದು, ಗಿಲ್ಲಿ ನಟ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
02:34 PM (IST) Dec 29
ಬೆಂಗಳೂರಿನ ಮಲ್ಲೇಶ್ವರದ ಕೆನರಾ ಬ್ಯಾಂಕ್ನ ಸೀನಿಯರ್ ಮ್ಯಾನೇಜರ್, 21 ಗ್ರಾಹಕರಿಗೆ ನಂಬಿಕೆ ದ್ರೋಹ ಬಗೆದು ಅವರ ಹೆಸರಿನಲ್ಲಿ 3 ಕೋಟಿ ರೂ.ಗೂ ಅಧಿಕ ಸಾಲ ಪಡೆದು ವಂಚಿಸಿದ್ದಾನೆ. ಗ್ರಾಹಕರ ಸಹಿಗಳನ್ನು ದುರುಪಯೋಗಪಡಿಸಿಕೊಂಡು, ಯಾವುದೇ ಚಿನ್ನ ಅಡವಿಡದೆ ಹಣ ಪಡೆದು ಆರೋಪಿ ಪರಾರಿಯಾಗಿದ್ದಾರೆ.
02:10 PM (IST) Dec 29
01:38 PM (IST) Dec 29
01:30 PM (IST) Dec 29
ರಾಂಪುರದಲ್ಲಿ, ಹುಲ್ಲು ತುಂಬಿದ ಟ್ರಕ್ ನಿಯಂತ್ರಣ ತಪ್ಪಿ ವಿದ್ಯುತ್ ಇಲಾಖೆಯ ಅಧಿಕಾರಿಯ ಬೊಲೆರೋ ವಾಹನದ ಮೇಲೆ ಉರುಳಿಬಿದ್ದಿದೆ. ಈ ಭೀಕರ ಅಪಘಾತದಲ್ಲಿ ಬೊಲೆರೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಈ ದುರಂತವು ರಸ್ತೆ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.
01:30 PM (IST) Dec 29
ಚಳಿಗಾಲ ಬಂತೆಂದರೆ ವಾತಾವರಣದಲ್ಲಿ ಚಳಿ ಹೆಚ್ಚಾಗುತ್ತದೆ. ಈ ಸಮಯದಲ್ಲಿ ಸಾಮಾನ್ಯವಾಗಿ ಶೀತ, ಕೆಮ್ಮಿನಂತಹ ಸಮಸ್ಯೆಗಳ ಜೊತೆಗೆ ಹೃದಯ ಸಂಬಂಧಿ ಸಮಸ್ಯೆಗಳೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ ಎಂದು ವೈದ್ಯರು ಹೇಳುತ್ತಾರೆ. ಅದರಲ್ಲೂ ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಹೆಚ್ಚು ಎಂದು ಹಲವು ಅಧ್ಯಯನಗಳು ತಿಳಿಸಿವೆ.
01:16 PM (IST) Dec 29
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಗಾಗಿ ಡಿ.31ರ ರಾತ್ರಿಯಿಂದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಹಲವು ಕಡೆ ವಾಹನ ಪ್ರವೇಶ ಮತ್ತು ನಿಲುಗಡೆಯನ್ನು ನಿಷೇಧಿಸಲಾಗಿದೆ.
01:16 PM (IST) Dec 29
01:04 PM (IST) Dec 29
12:47 PM (IST) Dec 29
ಬಿಗ್ ಬಾಸ್ ಖ್ಯಾತಿಯ ನಮ್ರತಾ ಗೌಡ ಮತ್ತು ಕಾರ್ತಿಕ್ ಮಹೇಶ್ ನಡುವಿನ ಸಂಬಂಧದ ಬಗ್ಗೆ ಗಾಸಿಪ್ ಹಬ್ಬಿದೆ. ಈ ಹಿಂದೆ ಕಾರ್ತಿಕ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದರೂ, ಇದೀಗ ನಮ್ರತಾ ಗೌಡ ಅವರು ಮದುವೆಯ ಪ್ರಶ್ನೆಗೆ ನಿಗೂಢವಾಗಿ ಉತ್ತರಿಸಿದ್ದಾರೆ.
12:36 PM (IST) Dec 29
ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಅವರು ಚುನಾವಣಾ ವೆಚ್ಚಕ್ಕಾಗಿ ಪಡೆದ 99 ಲಕ್ಷ ರೂ. ಸಾಲ ಮರುಪಾವತಿಸದೆ ವಂಚಿಸಿದ್ದಾರೆಂದು ಉದ್ಯಮಿಯೊಬ್ಬರು ದೂರು ನೀಡಿದ್ದಾರೆ. ಶಾಸಕರು ನೀಡಿದ ಚೆಕ್ ಬೌನ್ಸ್ ಆಗಿದ್ದು, ಖಾತೆ ಮುಚ್ಚಿರುವುದು ಬೆಳಕಿಗೆ ಬಂದಿದೆ. ಈಗ ಶಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
11:55 AM (IST) Dec 29
ಹತ್ತು ದಿನಗಳ ನಿರಂತರ ಏರಿಕೆಯ ನಂತರ ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಚಿನ್ನದ ಜೊತೆಗೆ, ಆರು ದಿನಗಳಿಂದ ಏರುತ್ತಿದ್ದ ಬೆಳ್ಳಿ ಬೆಲೆಯಲ್ಲೂ ಕುಸಿತವಾಗಿದ್ದು, ಹೂಡಿಕೆದಾರರಲ್ಲಿ ಹೊಸ ಸಂಚಲನ ಮೂಡಿಸಿದೆ. ಇಂದಿನ 22 ಮತ್ತು 24 ಕ್ಯಾರಟ್ ಚಿನ್ನ ಹಾಗೂ ಬೆಳ್ಳಿಯ ನಿಖರ ದರಗಳನ್ನು ವಿವರಿಸುತ್ತದೆ.
11:31 AM (IST) Dec 29
ಬೆಂಗಳೂರಿನ ನವವಿವಾಹಿತರಾದ ಗಾನವಿ ಮತ್ತು ಸೂರಜ್ ಅವರ ಆತ್ಮ*ಹತ್ಯೆ ಪ್ರಕರಣವು ಹಲವು ತಿರುವುಗಳನ್ನು ಪಡೆದುಕೊಂಡಿದೆ. ಹನಿಮೂನ್ನಿಂದ ಅರ್ಧಕ್ಕೆ ಮರಳಿದ ನಂತರ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ.
09:56 AM (IST) Dec 29
ಬಿಗ್ಬಾಸ್ ಮನೆಯಿಂದ 13ನೇ ವಾರದಲ್ಲಿ ಸೂರಜ್ ಸಿಂಗ್ ಮತ್ತು ಮಾಳು ನಿಪನಾಳ ಹೊರಬಂದಿದ್ದಾರೆ. ಸ್ಪಂದನಾ ಸೋಮಣ್ಣ ಅವರಿಗಿಂತ ಮಾಳು ಹೆಚ್ಚು ಯೋಗ್ಯರಾಗಿದ್ದರೂ ಅವರನ್ನು ಉಳಿಸಿಕೊಳ್ಳದ ಕಾರಣ, ನೆಟ್ಟಿಗರು ಕಲರ್ಸ್ ಕನ್ನಡ ವಾಹಿನಿಯನ್ನು ಟ್ರೋಲ್ ಮಾಡುತ್ತಿದ್ದಾರೆ.
09:39 AM (IST) Dec 29
ತನ್ನ ಮೂರು ವರ್ಷದ ಮೊಮ್ಮಗನಿಗೆ ಅಜ್ಜನೇ ಸಾರಾಯಿ ಕುಡಿಸಿದ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ಪಟ್ಟಣದ ಬಾರ್ ವೊಂದರಲ್ಲಿ ನಡೆದಿದೆ.
ಮಗುವಿನ ಎದುರು ತಾನೂ ಸಾರಾಯಿ ಕುಡಿದದ್ದಲ್ಲದೆ ಎಳೆ ವಯಸ್ಸಿನ ಮೊಮ್ಮಗನಿಗೂ ಸಾರಾಯಿಯ ರುಚಿ ತೋರಿಸಿದ್ದಕ್ಕೆ ವೃದ್ಧನ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
09:24 AM (IST) Dec 29
ಆಯುರ್ವೇದವು ಸಾವಿರಾರು ವರ್ಷಗಳಿಂದ ಪರೀಕ್ಷಿತ ಪದ್ಧತಿಯಾಗಿದ್ದು, ಔಷಧಿಯೇ ಇಲ್ಲದೇ ರೋಗವನ್ನು ದೂರಮಾಡುವ ಪ್ರಪಂಚದ ಏಕೈಕ ಆರೋಗ್ಯ ಪದ್ಧತಿಯಾಗಿದೆ ಎಂದು ಎರಡನೇ ವಿಶ್ವ ಆಯುರ್ವೇದ ಸಮ್ಮೇಳನದ ರೂವಾರಿ ಡಾ.ಗಿರಿಧರ ಕಜೆ ಅಭಿಪ್ರಾಯಪಟ್ಟರು.
09:22 AM (IST) Dec 29
09:16 AM (IST) Dec 29
ನಗರದ ಕೋಗಿಲು ಬಳಿಯ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯು ತೀವ್ರ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಲಿದೆ.
08:53 AM (IST) Dec 29
08:18 AM (IST) Dec 29
‘ರಾಷ್ಟ್ರಪಿತ ಗಾಂಧೀಜಿ ಅವರ ಹೆಸರನ್ನೇ ಅಳಿಸುವ ಪಿತೂರಿಯನ್ನು ಬಿಜೆಪಿ ಮಾಡುತ್ತಿದೆ. ಈ ದ್ವೇಷ ರಾಜಕಾರಣ ಸೋಲಿಸಲು ಜ.5 ರಿಂದ ಗ್ರಾಮ ಪಂಚಾಯ್ತಿಯಿಂದ ರಾಜ್ಯಮಟ್ಟದವರೆಗೆ ಹೋರಾಟ ಹಮ್ಮಿಕೊಂಡಿದ್ದು, ಎಲ್ಲರೂ ಕೈಜೋಡಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
08:07 AM (IST) Dec 29
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಇಲ್ಲಿಯ ಐಎನ್ಎಸ್ ಕದಂಬ ನೌಕಾನೆಲೆಗೆ ಆಗಮಿಸಿ ಐಎನ್ಎಸ್ ವಾಗ್ಶೀರ್ ಸಬ್ ಮರೀನ್ನಲ್ಲಿ ಪ್ರಯಾಣಿಸಿದರು. ಆ ಮೂಲಕ ಸಬ್ ಮರೀನ್ನಲ್ಲಿ ಪ್ರಯಾಣಿಸಿದ ಎರಡನೇ ಹಾಗೂ ಮೊದಲ ಮಹಿಳಾ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು
08:02 AM (IST) Dec 29
ಇಂದಿನ ರಾಜಕೀಯದಲ್ಲಿ ವೈಯಕ್ತಿಕ ನಿಂದನೆ ಮತ್ತು ದ್ವೇಷ ಭಾಷಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರದ ಹೊಸ ದ್ವೇಷ ಭಾಷಣ ವಿರೋಧಿ ಕಾನೂನಿನ ಅಗತ್ಯತೆ, ಉದ್ದೇಶ ಮತ್ತು ಸಾರ್ವಜನಿಕ ಜೀವನದಲ್ಲಿ ಘನತೆಯನ್ನು ಮರುಸ್ಥಾಪಿಸುವ ಅದರ ಪಾತ್ರವನ್ನು ಈ ಲೇಖನ ವಿಮರ್ಶಿಸುತ್ತದೆ.
07:48 AM (IST) Dec 29
ಸರ್ಕಾರವೇ ಎಲ್ಲವನ್ನೂ ಮಾಡುತ್ತದೆ ಎಂದು ಕುಳಿತುಕೊಳ್ಳಲು ಆಗುವುದಿಲ್ಲ, ಸಮಾಜಕ್ಕೆ ಬೇಕಾದ ಆಯುರ್ವೇದ ಪದ್ಧತಿಯನ್ನು ಜಾಗೃತಿಗೊಂಡ ಜನರೇ ಪಸರಿಸಲಿ ಎಂದು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಸಲಹೆ ನೀಡಿದರು.