LIVE NOW
Published : Dec 29, 2025, 06:51 AM ISTUpdated : Dec 29, 2025, 10:26 PM IST

Karnataka News Live: ಬೆಂಗಳೂರಿನ ಪಿಜಿ ಕಟ್ಟದಲ್ಲಿ ಸಿಲಿಂಡರ್ ಸ್ಫೋಟ, ಎಂಜಿನೀಯರ್ ಸಾವು, ಮೂವರಿಗೆ ಗಾಯ

ಸಾರಾಂಶ

ಮಂಡ್ಯ: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಕ್ರಾಂತಿ ಎಬ್ಬಿಸುತ್ತದೆ. ಅಲ್ಲಿಯವರೆಗೂ ಯಾವ ಕ್ರಾಂತಿಯೂ ಆಗುವುದಿಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ನವೆಂಬರ್ ಕ್ರಾಂತಿ ಆಗಲಿಲ್ಲ. ಸಂಕ್ರಾಂತಿ ಕ್ರಾಂತಿಯೂ ಇಲ್ಲ, ಯುಗಾದಿಗೂ ಕ್ರಾಂತಿ ಇಲ್ಲ. 2028ಕ್ಕೆ ನಾವೇ ಅಧಿಕಾರಕ್ಕೆ ಬಂದು ಕ್ರಾಂತಿ ಮಾಡುತ್ತೇವೆ. ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಎಐಸಿಸಿ ವರಿಷ್ಠ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒಟ್ಟಾಗಿ ಕುಳಿತು ತೀರ್ಮಾನ ಮಾಡುತ್ತಾರೆ. ಯಾರ ಬಳಿಯೂ ಅನಿಸಿಕೆಗಳನ್ನು ಕೇಳುವುದಿಲ್ಲ. ಪಕ್ಷದ ನಿರ್ಧಾರಕ್ಕೆ ನಾವು ಸಂಪೂರ್ಣ ಬದ್ಧರಾಗಿರುತ್ತೇವೆ ಎಂದು ಅವರು ಪುನರುಚ್ಚರಿಸಿದರು.

Bengaluru PG Cylinder Blast

10:26 PM (IST) Dec 29

ಬೆಂಗಳೂರಿನ ಪಿಜಿ ಕಟ್ಟದಲ್ಲಿ ಸಿಲಿಂಡರ್ ಸ್ಫೋಟ, ಎಂಜಿನೀಯರ್ ಸಾವು, ಮೂವರಿಗೆ ಗಾಯ

ಬೆಂಗಳೂರಿನ ಪಿಜಿ ಕಟ್ಟದಲ್ಲಿ ಸಿಲಿಂಡರ್ ಸ್ಫೋಟ, ಎಂಜಿನೀಯರ್ ಸಾವು, ಮೂವರಿಗೆ ಗಾಯ, ಕಿಚಕ್ ಹಾಗೂ ಡೈನಿಂಗ್ ಹಾಲ್ ಬಳಿ ಈ ಘಟನೆ ನಡೆದಿದೆ. 50ಕ್ಕೂ ಹೆಚ್ಚು ಮಂದಿ ಇರುವ ಪಿಜಿಯಲ್ಲಿ ಈ ಘಟನೆ ಸಂಭವಿಸಿದ್ದು, ಮತ್ತೆ ಸುರಕ್ಷತಾ ಪ್ರಶ್ನೆ ಎದ್ದಿದೆ.

 

Read Full Story

09:56 PM (IST) Dec 29

ನಟಿ ದುರಂತ ಅಂತ್ಯ ಪ್ರಕರಣ, ಡೆತ್ ನೋಟ್‌ನಲ್ಲಿ ಮದುವೆ ಸೇರಿ ಮಹತ್ವದ ವಿಚಾರ ಪ್ರಸ್ತಾಪ

ನಟಿ ದುರಂತ ಅಂತ್ಯ ಪ್ರಕರಣ, ಡೆತ್ ನೋಟ್‌ನಲ್ಲಿ ಮದುವೆ ಸೇರಿ ಮಹತ್ವದ ವಿಚಾರ ಪ್ರಸ್ತಾಪ ಮಾಡಲಾಗಿದೆ. ಪೊಲೀಸರು ಕೈಸೇರಿರುವ ಡೆತ್ ನೋಟ್ ನಂದಿನ ಸಾವಿನ ಹಿಂದಿನ ಕಾರಣಗಳನ್ನು ಹೇಳುತ್ತಿದೆ. ನಟನೆ, ಬ್ಯೂಟಿ ಮೂಲಕ ಗಮನಸೆಳೆದ ನಟಿ ಸಾವಿನ ಹಿಂದಿನ ರಹಸ್ಯ.

Read Full Story

08:30 PM (IST) Dec 29

ದಕ್ಷಿಣ ಭಾರತದ ಉದಯೋನ್ಮುಖ ನಟಿ ಕೊಟ್ಟೂರಿನ ನಂದಿನಿ ಆತ್ಮ*ಹತ್ಯೆ; ಸರ್ಕಾರಿ ನೌಕರಿ ಬೇಡವೆಂದು ಸಾವಿನ ನಿರ್ಧಾರ?

ಕನ್ನಡ ಹಾಗೂ ತಮಿಳು ಕಿರುತೆರೆ ನಟಿ ನಂದಿನಿ, ಬೆಂಗಳೂರಿನ ಪಿಜಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಒತ್ತಡ ಮತ್ತು ವೃತ್ತಿಜೀವನದ ಸಮಸ್ಯೆಗಳಿಂದ ನೊಂದು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಪೊಲೀಸರು ಡೆತ್‌ನೋಟ್ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.

Read Full Story

07:57 PM (IST) Dec 29

ನ್ಯಾಯವೂ ಹೊರಗುತ್ತಿಗೆ? - ಬೆಂಗಳೂರಿನ ಕಾನೂನು ಕೆಲಸ ಮಾಡಿದ ಮಹಾರಾಷ್ಟ್ರ ಪೊಲೀಸರು!

ನ್ಯಾಯವೂ ಹೊರಗುತ್ತಿಗೆ? ಬೆಂಗಳೂರಿನ ಕಾನೂನು ಕೆಲಸ ಮಾಡಿದ ಮಹಾರಾಷ್ಟ್ರ ಪೊಲೀಸರು!ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ ಬೆಂಗಳೂರಿನ ಪೊಲೀಸ್‌ ಪ್ರಕ್ರಿಯೆಯಲ್ಲಿನ ಹುಳುಕುಗಳನ್ನು ಪ್ರದರ್ಶಿಸಿದೆ.   ಸಾರ್ವಜನಿಕರ ವಿಶ್ವಾಸವನ್ನು ಕುಂದಿಸಿ, ಯುವಕರನ್ನು ಅಪಾಯದ ಅಂಚಿಗೆ ತಳ್ಳಿದೆ.

 

Read Full Story

07:07 PM (IST) Dec 29

ಕೋಗಿಲು ಅಕ್ರಮ ನಿವಾಸಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ - ನೈಜ ಫಲಾನುಭವಿಗಳಿಗೆ ಪರ್ಯಾಯ ವ್ಯವಸ್ಥೆ!

ಯಲಹಂಕದ ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಜಾಗದಲ್ಲಿದ್ದ 167 ಅಕ್ರಮ ಶೆಡ್‌ಗಳನ್ನು ತೆರವುಗೊಳಿಸಲಾಗಿದೆ. ಈ ಕಾರ್ಯಾಚರಣೆಯಿಂದ ನಿರಾಶ್ರಿತರಾದ ನೈಜ ಸಂತ್ರಸ್ತರಿಗೆ ಪರ್ಯಾಯ ವಸತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

Read Full Story

06:33 PM (IST) Dec 29

ಹೊಸ ವರ್ಷಕ್ಕೆ ನಮ್ಮ ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ; ಆದ್ರೆ ಎಂ.ಜಿ. ರೋಡ್ ನಿಲ್ದಾಣ 10ಕ್ಕೆ ಕ್ಲೋಸ್!

ಹೊಸ ವರ್ಷದ ಸಂಭ್ರಮಾಚರಣೆಗಾಗಿ ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ಡಿಸೆಂಬರ್ 31ರ ರಾತ್ರಿ ಮೆಟ್ರೋ ಸೇವೆಯನ್ನು ವಿಸ್ತರಿಸಿದೆ. ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಬೆಳಗಿನ ಜಾವದವರೆಗೆ ರೈಲುಗಳು ಸಂಚರಿಸಲಿದ್ದು, ಎಂ.ಜಿ. ರಸ್ತೆ ನಿಲ್ದಾಣವನ್ನು ರಾತ್ರಿ 10 ಗಂಟೆಯ ನಂತರ ಮುಚ್ಚಲಾಗುತ್ತದೆ.
Read Full Story

06:06 PM (IST) Dec 29

ಟಾಕ್ಸಿಕ್ ಸಿನಿಮಾದಲ್ಲಿ ಎಲಿಜಬೆತ್- ನಾದಿಯಾ, ಕತೆ ಸುಳಿವು ನೀಡಿದ ರಾಕಿಂಗ್ ಸ್ಟಾರ್ ಯಶ್

ಟಾಕ್ಸಿಕ್ ಸಿನಿಮಾದಲ್ಲಿ ಎಲಿಜಬೆತ್- ನಾದಿಯಾ, ಬುಹು ನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಎರಡು ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದೇ ವೇಳೆ ಸಿನಿಮಾ ಕತೆಯ ಸಣ್ಣ ಸುಳಿವನ್ನು ನೀಡಿದ್ದಾರೆ. ಟಾಕ್ಸಿಕ್ ಸಿನಿಮಾ ಕುರಿತು ಯಶ್ ನೀಡಿದ ಅಪ್‌ಡೇಟ್ ಏನು?

 

Read Full Story

06:06 PM (IST) Dec 29

ಸೀರಿಯಲ್‌ನಲ್ಲಿ ಸಾಯುವ ದೃಶ್ಯ ಮಾಡಿ, ರಿಯಲ್‌ ಆಗಿ ಆತ್ಮ*ಹತ್ಯೆ ಮಾಡ್ಕೊಂಡ ಕನ್ನಡ ನಟಿ ನಂದಿನಿ

kannada actress nandini cm death: ಸೀರಿಯಲ್‌ನಲ್ಲಿ ಸಾಯುವ ದೃಶ್ಯವಿತ್ತು, ರಿಯಲ್‌ ಆಗಿಯೂ ಕನ್ನಡ ನಟಿ ನಂದಿನಿ ಅವರು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಕೊಟ್ಟೂರು ಮೂಲದ ನಟಿ ನಂದಿನಿ ಅವರು ಅಸು ನೀಗಿದ್ದಾರೆ. 

Read Full Story

05:36 PM (IST) Dec 29

'ನಮ್ಮಮ್ಮ ರೆಡಿಯಾಗವ್ರೇನೋ..' ಮೇಕಪ್‌ ಟೈಮ್‌ನಲ್ಲೂ ನೆನೆದಿದ್ದ ಸೂರಜ್‌, ಅದ್ದೂರಿತನಕ್ಕೆ ಸಾಕ್ಷಿಯಾಗಿತ್ತು ಗಾನವಿ ಮದುವೆ!

Suraj-Ganavi Case: Viral Wedding Video Shows Suraj Recalling His Mother During Makeup ನವವಿವಾಹಿತರಾದ ಗಾನವಿ ಮತ್ತು ಸೂರಜ್ ಆ*ತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೂರಜ್ ಅವರ ಮದುವೆಯ ಮೇಕಪ್ ವಿಡಿಯೋವೊಂದು ವೈರಲ್ ಆಗಿದೆ. 

Read Full Story

05:35 PM (IST) Dec 29

ದೊಡ್ಡವರ ಫ್ರೂಟಿ, ಹೊಸವರ್ಷ ಸಂಭ್ರಮಾಚರಣೆ ಬೆನ್ನಲ್ಲೇ ರಮ್ ಪ್ಯಾಕಿಂಗ್‌ಗೆ ಮನಸೋತ ಮದ್ಯಪ್ರಿಯರು

ದೊಡ್ಡವರ ಫ್ರೂಟಿ, ಫ್ರೂಟಿ ಜ್ಯೂಸ್ ಬಗ್ಗೆ ಎಲ್ಲರಿಗೂ ಗೊತ್ತೆ ಇದೆ. ಆದರೆ ದೊಡ್ಡವರ ಫ್ರೂಟಿ ಜ್ಯೂಸ್ ನೋಡಿದ್ದೀರಾ? ಹೊಸವರ್ಷ ಸಂಭ್ರಮಾಚರಣೆ ಬೆನ್ನಲ್ಲೇ ಇದೀಗ ದೊಡ್ಡವ ಫ್ರೂಟಿ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.

 

Read Full Story

05:21 PM (IST) Dec 29

Bigg Boss​ ಗೆಲ್ಲಲು ಯಾರೂ ಅರ್ಹರೇ ಅಲ್ಲ - ಶಾಕಿಂಗ್​ ಸ್ಟೇಟ್​ಮೆಂಟ್​ ಕೊಟ್ಟ ಮಾಳು ಹೇಳಿದ್ದೇನು?

ಬಿಗ್​ಬಾಸ್​ 12ರ ಫೈನಲ್​ ಹಂತಕ್ಕೂ ಮುನ್ನ ಮಾಳು ನಿಪನಾಳ ಮನೆಯಿಂದ ಹೊರಬಂದಿದ್ದಾರೆ. ತಮ್ಮ ಎಲಿಮಿನೇಷನ್​ ಒಂದು ಅನ್ಯಾಯ ಎಂದಿರುವ ಅವರು, ಮನೆಯಲ್ಲಿರುವ ಯಾರೊಬ್ಬರೂ ವಿನ್ನರ್​ ಆಗಲು ಅರ್ಹರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read Full Story

04:52 PM (IST) Dec 29

ಪ್ಲೀಸ್,​ ದೆವ್ವಕ್ಕೆ ಬೇರೆ ಸೀರೆ ಕೊಡಿಸ್ರಪ್ಪಾ? ಹರಿದ ಸೀರೆ ತೋರಿಸಿ ನೋವು ತೋಡಿಕೊಂಡ Naa Ninna Bidalaare ಅಂಬಿಕಾ

'ನಾ ನಿನ್ನ ಬಿಡಲಾರೆ' ಧಾರಾವಾಹಿಯಲ್ಲಿ ದೆವ್ವದ ಪಾತ್ರಧಾರಿ ನೀತಾ ಅಶೋಕ್, ತಮ್ಮ ಪಾತ್ರದ ಹರಿದ ಸೀರೆಯ ಫೋಟೋ ಹಂಚಿಕೊಂಡು ತಮಾಷೆ ಮಾಡಿದ್ದಾರೆ. 'ವಿಕ್ರಾಂತ್ ರೋಣ' ಚಿತ್ರದ ಪನ್ನಾ ಪಾತ್ರದ ಮೂಲಕವೂ ಖ್ಯಾತಿ ಗಳಿಸಿದ್ದಾರೆ  ನೀತಾ

Read Full Story

04:14 PM (IST) Dec 29

ರೇಖಾ ಜೊತೆ 'ನವಾಬ್ ಸುಲ್ತಾನ್' ಮಲಗಿದ್ದ ದೃಶ್ಯ ನೋಡಲು ಇಡೀ ಊರು ಸೇರಿಬಿಟ್ಟಿತ್ತು..! ಫೈನಲೀ ಹಾಗಾಯ್ತು...

ಏನೇ ಪ್ರಯತ್ನಿಸಿದರೂ ಜನಸಂದಣಿ ನಿಯಂತ್ರಣಕ್ಕೆ ಬರದಿದ್ದಾಗ, ಭದ್ರತಾ ದೃಷ್ಟಿಯಿಂದ ಗುಂಡು ಹಾರಿಸಬೇಕಾಯ್ತು. ಕೆಲವು ಜನರು ಬಂದೂಕುಗಳೊಂದಿಗೆ ಕಾಣಿಸಿಕೊಂಡಿದ್ದರಿಂದ, ವಾತಾವರಣ ತಿಳಿಯಾಗುವ ಬದಲು ಇನ್ನಷ್ಟು ಭಯಾನಕವಾಯಿತು. ಜನರು ಭಯಭೀತರಾಗಿ ಹೋಗುವ ಬದಲು ಅಲ್ಲೇ ಕಲ್ಲಿನಂತೆ ನಿಂತೇಬಿಟ್ಟರು. ಮುಂದೇನಾಯ್ತು?

Read Full Story

04:04 PM (IST) Dec 29

ಬೆಂಗಳೂರು - ಮಗಳನ್ನ ಮದುವೆ ಮಾಡಿಕೊಡದ ತಾಯಿಗೆ ಬೆಂಕಿ ಹಚ್ಚಿದ್ದ ಕಿರಾತಕ ತಮಿಳುನಾಡಿನಲ್ಲಿ ಅರೆಸ್ಟ್!

ತನ್ನ ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಮಹಿಳೆಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘೋರ ಕೃತ್ಯ ಎಸಗಿದ ಆರೋಪಿಯನ್ನು ಬಸವೇಶ್ವರ ನಗರ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.
Read Full Story

03:39 PM (IST) Dec 29

ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್; ಚಿಕ್ಕಮಗಳೂರಿನ 22 ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ!

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ, ಚಿಕ್ಕಮಗಳೂರು ಜಿಲ್ಲಾಡಳಿತವು ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ ಸೇರಿದಂತೆ 22 ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವೇಶನಿರ್ಬಂಧಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಡಿಸೆಂಬರ್ 31ರ ಸಂಜೆಯಿಂದ ಜನವರಿ 1ರ ಬೆಳಗ್ಗೆಯವರೆಗೆ ಆದೇಶ ಜಾರಿಯಲ್ಲಿರುತ್ತದೆ.

Read Full Story

03:25 PM (IST) Dec 29

Bigg Boss ಕಾವ್ಯಾಗೆ ಧರ್ಮ ಸಂಕಟ- ಆ ಮಾತು ಕೇಳಿದ್ರೆ ಹೊರ ಬರೋದು ಗ್ಯಾರೆಂಟಿ! ಸೂರಜ್​ ಸಿಂಗ್​ ಹೇಳಿದ್ದೇನು?

ಬಿಗ್​ಬಾಸ್​ ಮನೆಯಿಂದ ಎಲಿಮಿನೇಟ್​ ಆದ ಸೂರಜ್​ ಸಿಂಗ್​, ಕಾವ್ಯಾ ಶೈವ ಅವರ ಆಟದ ಬಗ್ಗೆ ಮಾತನಾಡಿದ್ದಾರೆ.  ತಮ್ಮ ಆಟವನ್ನು ಬದಲಿಸಿಕೊಂಡರೆ, ಅದು ಅವರ ಬಿಗ್​ಬಾಸ್​ ಪಯಣಕ್ಕೆ ಕಷ್ಟವಾಗಲಿದೆ ಎಂದು ಸೂರಜ್ ಎಚ್ಚರಿಸಿದ್ದಾರೆ. ಏನದು?

Read Full Story

02:41 PM (IST) Dec 29

Bigg Boss ವಿನ್​ ಆಗೋರು ಇವರೇ, ಆದ್ರೆ ಆಗಬೇಕಾಗಿದ್ದು ಅವರು- ಸೂರಜ್​ ಸಿಂಗ್​ ಹೇಳಿದ ಆ ಹೆಸರು ಯಾವುದು?

ಬಿಗ್​ಬಾಸ್​ ಮನೆಯಿಂದ ಎಲಿಮಿನೇಟ್​ ಆಗಿರುವ ಸೂರಜ್​ ಸಿಂಗ್​, ತಮ್ಮ ಪಯಣದ ಅನುಭವ ಹಂಚಿಕೊಂಡಿದ್ದಾರೆ. ಈ ಬಾರಿ  ವಿನ್ನರ್ ಆಗುವುದು ಅವರೇ ಖಚಿತ ಎಂದಿರುವ ಅವರು, ಆದರೆ ತಮ್ಮ ಪ್ರಕಾರ ಬೇರೆಯವರ ಹೆಸರನ್ನು ತೆಗೆದುಕೊಂಡಿದ್ದಾರೆ. ಅವರು ಹೇಳಿದ್ದು ಯಾರ ಹೆಸರನ್ನು? 

Read Full Story

02:35 PM (IST) Dec 29

BBK 12 - ನಾಮಿನೇಷನ್‌ನಲ್ಲಿ ಕಾವ್ಯಾ ಹಿಂದೆ ಹೋಗಿ ತನ್ನ ಗುಂಡಿ ತಾನೇ ತೋಡಿಕೊಂಡ್ರಾ ಗಿಲ್ಲಿ ನಟ?

ಈ ವಾರದ ಕ್ಯಾಪ್ಟನ್ ಗಿಲ್ಲಿ ನಟ, ನಾಮಿನೇಷನ್ ಪ್ರಕ್ರಿಯೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಅವರ ನಿರ್ಧಾರಕ್ಕೆ ಅಶ್ವಿನಿ ಗೌಡ ವ್ಯಂಗ್ಯವಾಗಿ ಚಪ್ಪಾಳೆ ತಟ್ಟಿದ್ದು, ಗಿಲ್ಲಿ ನಟ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

Read Full Story

02:34 PM (IST) Dec 29

ಕೆನರಾ ಬ್ಯಾಂಕ್ ಗ್ರಾಹಕರಿಗೆ ₹3 ಕೋಟಿ ಪಂಗನಾಮ; ಗ್ರಾಹಕರ ಹೆಸರಲ್ಲಿ ಸಾಲ ಪಡೆದು ಮ್ಯಾನೇಜರ್ ಎಸ್ಕೇಪ್!

ಬೆಂಗಳೂರಿನ ಮಲ್ಲೇಶ್ವರದ ಕೆನರಾ ಬ್ಯಾಂಕ್‌ನ ಸೀನಿಯರ್ ಮ್ಯಾನೇಜರ್, 21 ಗ್ರಾಹಕರಿಗೆ ನಂಬಿಕೆ ದ್ರೋಹ ಬಗೆದು ಅವರ ಹೆಸರಿನಲ್ಲಿ 3 ಕೋಟಿ ರೂ.ಗೂ ಅಧಿಕ ಸಾಲ ಪಡೆದು ವಂಚಿಸಿದ್ದಾನೆ. ಗ್ರಾಹಕರ ಸಹಿಗಳನ್ನು ದುರುಪಯೋಗಪಡಿಸಿಕೊಂಡು, ಯಾವುದೇ ಚಿನ್ನ ಅಡವಿಡದೆ ಹಣ ಪಡೆದು ಆರೋಪಿ ಪರಾರಿಯಾಗಿದ್ದಾರೆ.

Read Full Story

02:10 PM (IST) Dec 29

Bigg Boss ಮನೆಯಿಂದ ಹೊರಬರಲು ಆ ಒಂದು ತಪ್ಪು ಕಾರಣವಾಯ್ತು ಎನ್ನಿಸುತ್ತೆ - ಸೂರಜ್​ ಸಿಂಗ್​ ಹೇಳಿದ್ದೇನು?

ವೈಲ್ಡ್​ಕಾರ್ಡ್​ ಮೂಲಕ ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದ ಸೂರಜ್​ ಸಿಂಗ್​ ಇದೀಗ ಮನೆಯಿಂದ ಹೊರಬಂದಿದ್ದಾರೆ. ಸ್ಪಂದನಾಗಿಂತ ತಮಗೆ ಹೆಚ್ಚು ಅರ್ಹತೆ ಇತ್ತು ಎಂದು ಹೇಳಿಕೊಂಡಿರುವ ಅವರು, ಹೆಚ್ಚು ಜನರೊಂದಿಗೆ ಬೆರೆಯದ ತಮ್ಮ ಸ್ವಭಾವವೇ ಆಟಕ್ಕೆ ಮುಳುವಾಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
Read Full Story

01:38 PM (IST) Dec 29

Bengaluru - ಹೊಸ ವರ್ಷದ ಪಾರ್ಟಿಗೆ KORA ಕಡೆ ಹೋಗೋ ಪ್ಲ್ಯಾನ್‌ ಇದ್ಯಾ, ಸಂಚಾರ ಬದಲಾವಣೆ ನೋಡಿಕೊಳ್ಳಿ..

ಬೆಂಗಳೂರಿನ ಕೋರಮಂಗಲದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ, ಸಂಚಾರ ಪೊಲೀಸರು ಪ್ರಮುಖ ಬದಲಾವಣೆಗಳನ್ನು ಪ್ರಕಟಿಸಿದ್ದಾರೆ. ವೈ.ಡಿ ಮಠ ರಸ್ತೆ ಸೇರಿದಂತೆ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳು ಮತ್ತು ಪಾರ್ಕಿಂಗ್ ಸ್ಥಳಗಳ ಬಗ್ಗೆ ಮಾಹಿತಿ ನೀಡಲಾಗಿದೆ.
Read Full Story

01:30 PM (IST) Dec 29

Viral Video - ಬೊಲೆರೊ ಮೇಲೆ ಉರುಳಿಬಿದ್ದ ಹುಲ್ಲಿನ ಟ್ರಕ್; ಮೃತ ಚಾಲಕನ ವಿವರ ರಿವೀಲ್ ಮಾಡಿದ ಸರ್ಕಾರ!

ರಾಂಪುರದಲ್ಲಿ, ಹುಲ್ಲು ತುಂಬಿದ ಟ್ರಕ್ ನಿಯಂತ್ರಣ ತಪ್ಪಿ ವಿದ್ಯುತ್ ಇಲಾಖೆಯ ಅಧಿಕಾರಿಯ ಬೊಲೆರೋ ವಾಹನದ ಮೇಲೆ ಉರುಳಿಬಿದ್ದಿದೆ. ಈ ಭೀಕರ ಅಪಘಾತದಲ್ಲಿ ಬೊಲೆರೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಈ ದುರಂತವು ರಸ್ತೆ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

Read Full Story

01:30 PM (IST) Dec 29

ಚಳಿಗಾಲದಲ್ಲಿಯೇ ಹಾರ್ಟ್ ಅಟ್ಯಾಕ್ ಆಗೋದು ಯಾಕೆ ಹೆಚ್ಚು? ಮುನ್ನೆಚ್ಚರಿಕೆ ಕ್ರಮ ಏನು?

ಚಳಿಗಾಲ ಬಂತೆಂದರೆ ವಾತಾವರಣದಲ್ಲಿ ಚಳಿ ಹೆಚ್ಚಾಗುತ್ತದೆ. ಈ ಸಮಯದಲ್ಲಿ ಸಾಮಾನ್ಯವಾಗಿ ಶೀತ, ಕೆಮ್ಮಿನಂತಹ ಸಮಸ್ಯೆಗಳ ಜೊತೆಗೆ ಹೃದಯ ಸಂಬಂಧಿ ಸಮಸ್ಯೆಗಳೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ ಎಂದು ವೈದ್ಯರು ಹೇಳುತ್ತಾರೆ. ಅದರಲ್ಲೂ ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಹೆಚ್ಚು ಎಂದು ಹಲವು ಅಧ್ಯಯನಗಳು ತಿಳಿಸಿವೆ.

Read Full Story

01:16 PM (IST) Dec 29

ಹೊಸ ವರ್ಷದ ಸಂಭ್ರಮಕ್ಕೆ ಎಂಜಿ ರಸ್ತೆಯಲ್ಲಿ ಸಂಚಾರ ಭಾರೀ ಬದಲು, ಇಲ್ಲಿದೆ ವಿವರ!

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಗಾಗಿ ಡಿ.31ರ ರಾತ್ರಿಯಿಂದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಹಲವು ಕಡೆ ವಾಹನ ಪ್ರವೇಶ ಮತ್ತು ನಿಲುಗಡೆಯನ್ನು ನಿಷೇಧಿಸಲಾಗಿದೆ.

Read Full Story

01:16 PM (IST) Dec 29

BBK 12 - ಚೆನ್ನಾಗಿ ಆಡದೇ ಇದ್ರೂ ಅವ್ರನ್ನು ಯಾಕೆ ಮನೆಯಲ್ಲಿ ಇನ್ನೂ ಇಟ್ಕೊಂಡಿದ್ದಾರೋ ಗೊತ್ತಿಲ್ಲ - ಎಲಿಮಿನೇಷನ್​ ಬಗ್ಗೆ ಮಾಳು ಬೇಸರ

ಬಿಗ್​ಬಾಸ್​ ಮನೆಯಿಂದ ಎಲಿಮಿನೇಟ್ ಆಗಿರುವ ಮಾಳು ನಿಪನಾಳ್, ತಮ್ಮ ಎಲಿಮಿನೇಷನ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಪಂದನಾ ಸೋಮಣ್ಣ ಅವರು ಸರಿಯಾಗಿ ಆಡದಿದ್ದರೂ ಮನೆಯಲ್ಲಿ ಉಳಿದುಕೊಂಡಿದ್ದು, ತಮ್ಮನ್ನು ಮತ್ತು ಸೂರಜ್ ಅವರನ್ನು ಹೊರಹಾಕಿದ್ದು ವಿಚಿತ್ರ ಎನಿಸುತ್ತಿದೆ ಎಂದು ಅವರು ಹೇಳಿದ್ದಾರೆ.
Read Full Story

01:04 PM (IST) Dec 29

ಗೃಹಲಕ್ಷ್ಮಿ ಯೋಜನೆ ₹2000 ಹಣ ಬಂದಿಲ್ವಾ? ಇನ್ಮೇಲೆ ಕಚೇರಿಗೆ ಅಲೆದಾಡಬೇಕಿಲ್ಲ, ಈ ಸಹಾಯವಾಣಿ ಕರೆ ಮಾಡಿ!

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಸುಮಾರು 5500 ಕೋಟಿ ರೂಪಾಯಿ ಬಾಕಿ ಹಣವು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು ಮತ್ತು ಮಹಿಳೆಯರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು, ಸರ್ಕಾರವು ಇದೀಗ '181' ಸಹಾಯವಾಣಿಯನ್ನು ಆರಂಭಿಸಿದೆ.
Read Full Story

12:47 PM (IST) Dec 29

Bigg Boss ಕಾರ್ತಿಕ್​ ಮಹೇಶ್​- ನಮ್ರತಾ ಗೌಡ ಶೀಘ್ರ ಮದುವೆ ? ಕೊನೆಗೂ ಮೌನ ಮುರಿದ ನಟಿ ಹೇಳಿದ್ದೇನು?

ಬಿಗ್ ಬಾಸ್ ಖ್ಯಾತಿಯ ನಮ್ರತಾ ಗೌಡ ಮತ್ತು ಕಾರ್ತಿಕ್ ಮಹೇಶ್ ನಡುವಿನ ಸಂಬಂಧದ ಬಗ್ಗೆ ಗಾಸಿಪ್ ಹಬ್ಬಿದೆ. ಈ ಹಿಂದೆ ಕಾರ್ತಿಕ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದರೂ, ಇದೀಗ ನಮ್ರತಾ ಗೌಡ ಅವರು ಮದುವೆಯ ಪ್ರಶ್ನೆಗೆ ನಿಗೂಢವಾಗಿ ಉತ್ತರಿಸಿದ್ದಾರೆ.  

Read Full Story

12:36 PM (IST) Dec 29

ಶಾಸಕ ಶರಣು ಸಲಗರ್ ಮೇಲೆ FIR - ಚುನಾವಣೆ ವೇಳೆ ಉದ್ಯಮಿಯಿಂದ ₹99 ಲಕ್ಷ ಸಾಲ ಪಡೆದು ವಂಚಿನೆ ಆರೋಪ!

ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಅವರು ಚುನಾವಣಾ ವೆಚ್ಚಕ್ಕಾಗಿ ಪಡೆದ 99 ಲಕ್ಷ ರೂ. ಸಾಲ ಮರುಪಾವತಿಸದೆ ವಂಚಿಸಿದ್ದಾರೆಂದು ಉದ್ಯಮಿಯೊಬ್ಬರು ದೂರು ನೀಡಿದ್ದಾರೆ. ಶಾಸಕರು ನೀಡಿದ ಚೆಕ್ ಬೌನ್ಸ್ ಆಗಿದ್ದು, ಖಾತೆ ಮುಚ್ಚಿರುವುದು ಬೆಳಕಿಗೆ ಬಂದಿದೆ. ಈಗ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Read Full Story

11:55 AM (IST) Dec 29

Gold Price - ಬಂಗಾರದ ಓಟಕ್ಕೆ ಬ್ರೇಕ್ - ದಿಢೀರ್ ಕುಸಿದ ಚಿನ್ನದ ಬೆಲೆ, ಹೂಡಿಕೆದಾರರಲ್ಲಿ ಸಂಚಲನ

ಹತ್ತು ದಿನಗಳ ನಿರಂತರ ಏರಿಕೆಯ ನಂತರ ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಚಿನ್ನದ ಜೊತೆಗೆ, ಆರು ದಿನಗಳಿಂದ ಏರುತ್ತಿದ್ದ ಬೆಳ್ಳಿ ಬೆಲೆಯಲ್ಲೂ ಕುಸಿತವಾಗಿದ್ದು, ಹೂಡಿಕೆದಾರರಲ್ಲಿ ಹೊಸ ಸಂಚಲನ ಮೂಡಿಸಿದೆ. ಇಂದಿನ 22 ಮತ್ತು 24 ಕ್ಯಾರಟ್ ಚಿನ್ನ ಹಾಗೂ ಬೆಳ್ಳಿಯ ನಿಖರ ದರಗಳನ್ನು ವಿವರಿಸುತ್ತದೆ.

Read Full Story

11:31 AM (IST) Dec 29

ಗಾನವಿ-ಸೂರಜ್ ಪ್ರಕರಣ - ಹನಿಮೂನ್‌ನಿಂದ ಅರ್ಧಕ್ಕೆ ಬಂದಿದ್ಯಾಕೆ? ಬಯಲಾಯ್ತು ರಹಸ್ಯ?

ಬೆಂಗಳೂರಿನ ನವವಿವಾಹಿತರಾದ ಗಾನವಿ ಮತ್ತು ಸೂರಜ್ ಅವರ ಆತ್ಮ*ಹತ್ಯೆ ಪ್ರಕರಣವು ಹಲವು ತಿರುವುಗಳನ್ನು ಪಡೆದುಕೊಂಡಿದೆ. ಹನಿಮೂನ್‌ನಿಂದ ಅರ್ಧಕ್ಕೆ ಮರಳಿದ ನಂತರ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ.

Read Full Story

09:56 AM (IST) Dec 29

BBK 12 ಬಿಗ್‌ಬಾಸ್ ಮನೆಯಲ್ಲಿ ಅನಿರೀಕ್ಷಿತ ತಿರುವು; ಜಾನ್ವಿ ಹೇಳಿದ ಮಾತು ಸತ್ಯ ಎಂದ ನೆಟ್ಟಿಗರು

ಬಿಗ್‌ಬಾಸ್ ಮನೆಯಿಂದ 13ನೇ ವಾರದಲ್ಲಿ ಸೂರಜ್ ಸಿಂಗ್ ಮತ್ತು ಮಾಳು ನಿಪನಾಳ ಹೊರಬಂದಿದ್ದಾರೆ. ಸ್ಪಂದನಾ ಸೋಮಣ್ಣ ಅವರಿಗಿಂತ ಮಾಳು ಹೆಚ್ಚು ಯೋಗ್ಯರಾಗಿದ್ದರೂ ಅವರನ್ನು ಉಳಿಸಿಕೊಳ್ಳದ ಕಾರಣ, ನೆಟ್ಟಿಗರು ಕಲರ್ಸ್ ಕನ್ನಡ ವಾಹಿನಿಯನ್ನು ಟ್ರೋಲ್ ಮಾಡುತ್ತಿದ್ದಾರೆ.

Read Full Story

09:39 AM (IST) Dec 29

3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ - ಆಕ್ರೋಶ

ತನ್ನ ಮೂರು ವರ್ಷದ ಮೊಮ್ಮಗನಿಗೆ ಅಜ್ಜನೇ ಸಾರಾಯಿ ಕುಡಿಸಿದ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ಪಟ್ಟಣದ ಬಾರ್ ವೊಂದರಲ್ಲಿ ನಡೆದಿದೆ.

ಮಗುವಿನ ಎದುರು ತಾನೂ ಸಾರಾಯಿ ಕುಡಿದದ್ದಲ್ಲದೆ ಎಳೆ ವಯಸ್ಸಿನ ಮೊಮ್ಮಗನಿಗೂ ಸಾರಾಯಿಯ ರುಚಿ ತೋರಿಸಿದ್ದಕ್ಕೆ ವೃದ್ಧನ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read Full Story

09:24 AM (IST) Dec 29

ಔಷಧ ಇಲ್ಲದೇ ರೋಗ ದೂರ ಮಾಡುವ ಆಯುರ್ವೇದ - ಕಜೆ

ಆಯುರ್ವೇದವು ಸಾವಿರಾರು ವರ್ಷಗಳಿಂದ ಪರೀಕ್ಷಿತ ಪದ್ಧತಿಯಾಗಿದ್ದು, ಔಷಧಿಯೇ ಇಲ್ಲದೇ ರೋಗವನ್ನು ದೂರಮಾಡುವ ಪ್ರಪಂಚದ ಏಕೈಕ ಆರೋಗ್ಯ ಪದ್ಧತಿಯಾಗಿದೆ ಎಂದು ಎರಡನೇ ವಿಶ್ವ ಆಯುರ್ವೇದ ಸಮ್ಮೇಳನದ ರೂವಾರಿ ಡಾ.ಗಿರಿಧರ ಕಜೆ ಅಭಿಪ್ರಾಯಪಟ್ಟರು.

Read Full Story

09:22 AM (IST) Dec 29

ಗುಡುಗಿದ ಶಫಾಲಿ, ಮಂಧನಾ; ಕ್ಯಾಚ್ ಬಿಟ್ಟರೂ ಮ್ಯಾಚ್ ಬಿಡದ ಭಾರತ!

ಶ್ರೀಲಂಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಅವರ ದಾಖಲೆಯ ಜೊತೆಯಾಟದ ನೆರವಿನಿಂದ ಭಾರತ 221 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು. ಆದರೆ, ಕಳಪೆ ಫೀಲ್ಡಿಂಗ್ ಪ್ರದರ್ಶಿಸಿದರೂ ಭಾರತ 30 ರನ್‌ಗಳ ಜಯ ಸಾಧಿಸಿ ಸರಣಿಯಲ್ಲಿ 4-0 ಮುನ್ನಡೆ ಸಾಧಿಸಿತು.
Read Full Story

09:16 AM (IST) Dec 29

ಕೋಗಿಲು ಸಂತ್ರಸ್ತರ ಬಗ್ಗೆ ಚರ್ಚೆಗೆ ಇಂದು ಸಿಎಂ ಸಭೆ

ನಗರದ ಕೋಗಿಲು ಬಳಿಯ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯು ತೀವ್ರ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಸಂತ್ರಸ್ತರಿಗೆ ಪುನರ್‌ವಸತಿ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಲಿದೆ.

Read Full Story

08:53 AM (IST) Dec 29

BBK 12 - ಗಿಲ್ಲಿ ನಟನ ಮೇಲೆ ರಕ್ಷಿತಾಗೆ ಆಯ್ತು ಕ್ರಶ್? ಬಾಯ್ತಪ್ಪಿ ಸತ್ಯ ಹೇಳಿದ ಪುಟ್ಟಿ

ಬಿಗ್‌ಬಾಸ್ ಮನೆಯಲ್ಲಿ 'ಗೌರಿ ಕಲ್ಯಾಣ' ಕಲಾವಿದರ ಮುಂದೆ ರಕ್ಷಿತಾ ಶೆಟ್ಟಿ, ತನಗೆ ಗಿಲ್ಲಿ ನಟನಂತೆಯೇ ಸಂಗಾತಿ ಬೇಕೆಂದು ಬಾಯ್ತಪ್ಪಿ ಹೇಳಿದ್ದಾರೆ. ನಂತರ ಅವರು ಕೇವಲ ಬೆಸ್ಟ್ ಫ್ರೆಂಡ್ಸ್ ಎಂದು ಸ್ಪಷ್ಟನೆ ನೀಡಿದರೂ, ಗಿಲ್ಲಿ ನಟ ತಾನು ಕಮಿಟೆಡ್ ಎಂದು ಹೇಳಿ ಚರ್ಚೆಗೆ ಅಂತ್ಯ ಹಾಡಿದ್ದಾರೆ.
Read Full Story

08:18 AM (IST) Dec 29

ಗಾಂಧಿ ಹೆಸರ ಅಳಿಸಲು ಬಿಜೆಪಿ ಪಿತೂರಿ - ಸಿಎಂ

‘ರಾಷ್ಟ್ರಪಿತ ಗಾಂಧೀಜಿ ಅವರ ಹೆಸರನ್ನೇ ಅಳಿಸುವ ಪಿತೂರಿಯನ್ನು ಬಿಜೆಪಿ ಮಾಡುತ್ತಿದೆ. ಈ ದ್ವೇಷ ರಾಜಕಾರಣ ಸೋಲಿಸಲು ಜ.5 ರಿಂದ ಗ್ರಾಮ ಪಂಚಾಯ್ತಿಯಿಂದ ರಾಜ್ಯಮಟ್ಟದವರೆಗೆ ಹೋರಾಟ ಹಮ್ಮಿಕೊಂಡಿದ್ದು, ಎಲ್ಲರೂ ಕೈಜೋಡಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

Read Full Story

08:07 AM (IST) Dec 29

ಸಬ್ ಮರೀನ್‌ನಲ್ಲಿ ರಾಷ್ಟ್ರಪತಿ ಯಾನ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಇಲ್ಲಿಯ ಐಎನ್‌ಎಸ್ ಕದಂಬ ನೌಕಾನೆಲೆಗೆ ಆಗಮಿಸಿ ಐಎನ್ಎಸ್ ವಾಗ್ಶೀರ್ ಸಬ್ ಮರೀನ್‌ನಲ್ಲಿ ಪ್ರಯಾಣಿಸಿದರು. ಆ ಮೂಲಕ ಸಬ್ ಮರೀನ್‌ನಲ್ಲಿ ಪ್ರಯಾಣಿಸಿದ ಎರಡನೇ ಹಾಗೂ ಮೊದಲ ಮಹಿಳಾ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು

Read Full Story

08:02 AM (IST) Dec 29

ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ - ಬಿ.ಎಲ್. ಶಂಕರ್ ಲೇಖನ

ಇಂದಿನ ರಾಜಕೀಯದಲ್ಲಿ ವೈಯಕ್ತಿಕ ನಿಂದನೆ ಮತ್ತು ದ್ವೇಷ ಭಾಷಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರದ ಹೊಸ ದ್ವೇಷ ಭಾಷಣ ವಿರೋಧಿ ಕಾನೂನಿನ ಅಗತ್ಯತೆ, ಉದ್ದೇಶ ಮತ್ತು ಸಾರ್ವಜನಿಕ ಜೀವನದಲ್ಲಿ ಘನತೆಯನ್ನು ಮರುಸ್ಥಾಪಿಸುವ ಅದರ ಪಾತ್ರವನ್ನು ಈ ಲೇಖನ ವಿಮರ್ಶಿಸುತ್ತದೆ. 

Read Full Story

07:48 AM (IST) Dec 29

ಜಾಗೃತ ಜನರೇ ಆಯುರ್ವೇದ ಪಸರಿಸಲಿ - ರಾಘವೇಶ್ವರ ಶ್ರೀ

ಸರ್ಕಾರವೇ ಎಲ್ಲವನ್ನೂ ಮಾಡುತ್ತದೆ ಎಂದು ಕುಳಿತುಕೊಳ್ಳಲು ಆಗುವುದಿಲ್ಲ, ಸಮಾಜಕ್ಕೆ ಬೇಕಾದ ಆಯುರ್ವೇದ ಪದ್ಧತಿಯನ್ನು ಜಾಗೃತಿಗೊಂಡ ಜನರೇ ಪಸರಿಸಲಿ ಎಂದು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಸಲಹೆ ನೀಡಿದರು.

Read Full Story

More Trending News