ಬೆಂಗಳೂರು: ಬಿರಿಯಾನಿ ಸವಿಯಲು ಬುಲೆಟ್ನಲ್ಲಿ ಹೊರಟಿದ್ದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಲಾರಿಗೆ ಬೈಕ್ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಭೀಕರ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ.
ಬೆಂಗಳೂರಿನ ಸಪ್ತಗಿರಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ, ದಾವಣಗೆರೆ ಮೂಲದ ಮನೋಜ್ (21), ಹಾಸನ ಜಿಲ್ಲೆ ಬೇಲೂರು ಮೂಲದ ಅಭಿಲಾಷ್ (21), ಆಚಾರ್ಯ ಕಾಲೇಜಿನ ವಿದ್ಯಾರ್ಥಿ, ರಾಯಚೂರು ಮೂಲದ ನವೀನ್ (21) ಮೃತರು. ಅಪಘಾತದ ತೀವ್ರತೆಗೆ ಮನೋಜ್ ಮತ್ತು ಅಭಿಲಾಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ನವೀನ್ ಅವರನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನಲ್ಲಿ ನೆಲೆಸಿದ್ದ ಇವರು ಶನಿವಾರ ಮುಂಜಾನೆ 4ರ ಸುಮಾರಿಗೆ ಕುಣಿಗಲ್ಗೆ ಬಿರಿಯಾನಿ ತಿನ್ನಲು ಬುಲೆಟ್ನಲ್ಲಿ ತೆರಳುತ್ತಿದ್ದರು. ರಾಗಿ ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಬೈಕ್ ಡಿಕ್ಕಿದೆ.
11:33 PM (IST) Mar 29
ಪುಟ್ಟಕ್ಕನ ಮಕ್ಕಳು ಧಾರಾವಾಹಿ ಖ್ಯಾತಿಯ ನಟಿ ಸಂಜನಾ ಬುರ್ಲಿ ಅವರು ವೈದ್ಯರಾದ ಸಮರ್ಥ ಚೆನ್ನಗಿರಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಮದುವೆಗೂ ಮುನ್ನ ಪ್ರೀ ವೆಡ್ಡಿಂಗ್ನಲ್ಲಿ ತೆಗೆದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
09:48 PM (IST) Mar 29
ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗಳಲ್ಲಿ ಜನಾಕ್ರೋಶ ಬಿಜೆಪಿಗೆ ಮತವಾಗಿ ಪರಿವರ್ತಿತವಾಗುವ ನಿರೀಕ್ಷೆಯಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
08:36 PM (IST) Mar 29
ಕೇಂದ್ರದ ಬಿಜೆಪಿ ಸರ್ಕಾರ ಮಾಡುತ್ತಿರುವ ತಾರತಮ್ಯ ನಿವಾರಣೆಗೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದರು.
06:21 PM (IST) Mar 29
ಬಿಗ್ಬಾಸ್ ಖ್ಯಾತಿಯ ಗಿಲ್ಲಿ ನಟ 'ಗೌರಿ ಕಲ್ಯಾಣ' ಸೀರಿಯಲ್ ಸಂತೆಯಲ್ಲಿ ಭಾಗವಹಿಸಿದ್ದರು. ಈ ವೇಳೆ, ಪ್ರೀತಿಯಲ್ಲಿ ಸೋತ ಯುವಕನೊಬ್ಬ ಸಲಹೆ ಕೇಳಿದಾಗ, ತನಗಾದ ಐದು ಬ್ರೇಕಪ್ಗಳ ಬಗ್ಗೆ ಹೇಳಿ ತಮಾಷೆಯಾಗಿ ಉತ್ತರಿಸಿದ್ದಾರೆ.
06:19 PM (IST) Mar 29
ವಿಕ್ಟರಿ ವೆಂಕಟೇಶ್ ತೆಲುಗು ಚಿತ್ರರಂಗದಲ್ಲಿ ಯಾವುದೇ ವಿವಾದಗಳಿಲ್ಲದ ನಟ. ಸದ್ಯ ಅವರು ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ವಿದ್ಯಾರ್ಥಿ ಭವನಕ್ಕೆ ಭೇಟಿ ಕೊಟ್ಟು ಅಲ್ಲಿನ ಫೇಮಸ್ ಮಸಾಲೆ ದೋಸೆ ಸೇರಿದಂತೆ ಇತರ ಉಪಹಾರಗಳನ್ನು ಸವಿದಿದ್ದಾರೆ.
05:32 PM (IST) Mar 29
ಒಂದು ಕಮಿಟೆಡ್ ಸಂಬಂಧದಲ್ಲಿ ಇಬ್ಬರಿಗೂ ಸ್ಪಷ್ಟತೆ, ನಂಬಿಕೆ ಮತ್ತು ಭವಿಷ್ಯದ ಬಗ್ಗೆ ಯೋಚನೆಗಳಿರುತ್ತವೆ. ಆದರೆ ಸಿಚುಯೇಷನ್ಶಿಪ್ನಲ್ಲಿ ಪರಿಸ್ಥಿತಿ ಬೇರೆಯೇ ಇರುತ್ತೆ. ಸಂಬಂಧಕ್ಕೆ ಒಂದು ಹೆಸರಿರುವುದಿಲ್ಲ.
04:24 PM (IST) Mar 29
ನಟಿ ಅಮೃತಾ ಅಯ್ಯಂಗಾರ್ ಅವರು ತಮ್ಮ ವೃತ್ತಿಜೀವನದ ಸಾಧನೆಗಳನ್ನು ಕಡೆಗಣಿಸಿ, ಮಾಧ್ಯಮಗಳು ತಮ್ಮ ಹಿಂದಿನ ಬ್ರೇಕಪ್ ವಿಷಯವನ್ನೇ ನಿರಂತರವಾಗಿ ಹೈಲೈಟ್ ಮಾಡುವುದರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಕಾರಾತ್ಮಕ ಪ್ರಚಾರವು ತಮ್ಮ ಗುರುತಾಗಿ ಬದಲಾಗುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ
01:49 PM (IST) Mar 29
ಬಿಗ್ಬಾಸ್ ಸೀಸನ್ 10ರ ಜನಪ್ರಿಯ ಸ್ಪರ್ಧಿ ಸಂಗೀತಾ ಶೃಂಗೇರಿ, ಶೋನಿಂದ ಹೊರಬಂದ ನಂತರ ಅಭಿಮಾನಿಗಳು ಕಾಯ್ತದ್ದ ಗುಡ್ನ್ಯೂಸ್ ಕೊಟ್ಟಿದ್ದಾರೆ. ಈ ಕುರಿತು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾರೆ ನಟಿ.
01:29 PM (IST) Mar 29
ವಾಸ್ತು ಶಾಸ್ತ್ರದಲ್ಲಿ T ಜಂಕ್ಷನ್ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಹೊಸ ಮನೆ ಕಟ್ಟುವವರು ಅಥವಾ ಜಾಗ ಖರೀದಿಸುವವರು ಮೊದಲು ನೋಡುವುದೇ T ಜಂಕ್ಷನ್ ಇದೆಯಾ ಇಲ್ವಾ ಅಂತ. ಹಾಗಿದ್ರೆ T ಜಂಕ್ಷನ್ ಅಂದ್ರೆ ಏನು? ಇದರಿಂದ ಆಗುವ ನಷ್ಟಗಳೇನು? ಇದರ ಹಿಂದಿನ ವೈಜ್ಞಾನಿಕ ಕಾರಣವೇನು? ನೋಡೋಣ ಬನ್ನಿ
01:16 PM (IST) Mar 29
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರವು ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೆ ಈ ಭಾಗದ ಜನರಿಗೆ ಅನ್ಯಾಯ ಮಾಡಿದೆ ಹಾಗೂ ಗ್ಯಾರಂಟಿ ಯೋಜನೆಗಳಿಗಾಗಿ ಸಾಲ ಮಾಡಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿಲ್ಲಿಸಿದೆ
12:42 PM (IST) Mar 29
12:09 PM (IST) Mar 29
ನಿನ್ನೆ ಉಳಿದ ಪಿಜ್ಜಾ, ಚಿಕನ್ ಅಥವಾ ಅನ್ನವನ್ನು ಇಂದು ತಿನ್ನುವುದು ಸುರಕ್ಷಿತವೇ? ಮೈಕ್ರೋಬಯಾಲಜಿಸ್ಟ್ ಒಬ್ಬರು ಇದರಲ್ಲಿರುವ ಗುಪ್ತ ಅಪಾಯಗಳ ಬಗ್ಗೆ ವಿವರಿಸಿದ್ದಾರೆ. ಆಹಾರವನ್ನು ಸರಿಯಾಗಿ ಶೇಖರಿಸಿಡದಿದ್ದರೆ ಫುಡ್ ಪಾಯ್ಸನಿಂಗ್ ಆಗುವ ಸಾಧ್ಯತೆ ಇದೆ. ಸುರಕ್ಷಿತವಾಗಿರುವುದು ಹೇಗೆಂದು ತಿಳಿಯಿರಿ.
11:39 AM (IST) Mar 29
11:20 AM (IST) Mar 29
ಗೋಕಾಕದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, 2028ರ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರಧಾನಿ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದರು.
10:04 AM (IST) Mar 29
ಅಮೆರಿಕ, ಇಸ್ರೇಲ್ ಮೈತ್ರಿಕೂಟವನ್ನು ಬೆಂಬಲಿಸುವ ಗಲ್ಫ್ ರಾಷ್ಟ್ರಗಳಿಗೆ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಎಚ್ಚರಿಕೆ ನೀಡಿದದ್ದಾರೆ. ನಿಮ್ಮ ರಾಷ್ಟ್ರದಲ್ಲಿ ಅಭಿವೃದ್ಧಿ ಭದ್ರತೆ ಇರಬೇಕು ಎಂದು ಬಯಸಿದರೆ ಅಮೆರಿಕ ಮತ್ತು ಇಸ್ರೇಲ್ಗೆ ನಿಮ್ಮ ಭೂಮಿ ಬಳಸಲು ಅನುಮತಿಸಬೇಡಿ ಎಂದು ಎಚ್ಚರಿಸಿದ್ದಾರೆ.
09:56 AM (IST) Mar 29
09:50 AM (IST) Mar 29
ದುಬೈನಲ್ಲಿರುವ 2 ಅಮೆರಿಕ ಸೈನ್ಯದ ಅಡಗುತಾಣಗಳ ಮೇಲೆ ದಾಳಿ ಮಾಡಿರುವುದಾಗಿ ಇರಾನ್ ಹೇಳಿಕೊಂಡಿದೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನ್ ಗಾರ್ಡ್ಸ್ ಕೋರ್, 500ಕ್ಕೂ ಹೆಚ್ಚು ಅಮೆರಿಕ ಸೇನಾ ಸಿಬ್ಬಂದಿಯನ್ನು ಹೊಂದಿದ್ದ ಈ ಸ್ಥಳಗಳ ಮೇಲೆ ನಿಖರವಾದ ಕ್ಷಿಪಣಿಗಳು ಮತ್ತು ಡ್ರೋನ್ ದಾಳಿ
09:02 AM (IST) Mar 29
ಪಾಲಹಳ್ಳಿಯ 80 ವರ್ಷದ ವೃದ್ಧೆ ರುದ್ರಮ್ಮ, ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿನ ಆಮಿಷಗಳಿಗೆ ಬೇಸತ್ತು 'ನಮ್ಮ ಓಟು ಮಾರಾಟಕ್ಕಿಲ್ಲ, ಖರೀದಿಗೆ ಬಂದವರಿಗೆ ಓಟಿಲ್ಲ' ಎಂಬ ನಾಮಫಲಕವನ್ನು ತಮ್ಮ ಮನೆ ಮುಂದೆ ಹಾಕಿದ್ದಾರೆ.
08:44 AM (IST) Mar 29
ನಾನು ಭಾರತ ನಡುವಿನ ಪಾಕಿಸ್ತಾನ ಸಂಘರ್ಷವೂ ಸೇರಿ ಎಂಟು ಯುದ್ಧಗಳನ್ನು ನಿಲ್ಲಿಸಿದ್ದೇನೆ. ಜನ ನನ್ನನ್ನು ಮಹಾನ್ ಶಾಂತಿದೂತನಾಗಿ ಸ್ಮರಿಸಬೇಕೆನ್ನುವುದು ನನ್ನ ಬಯಕೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
08:36 AM (IST) Mar 29
08:33 AM (IST) Mar 29
ದೇಶದ ಅತಿ ದೊಡ್ಡ ಏರ್ಪೋರ್ಟ್ ಎಂಬ ಖ್ಯಾತಿಗೆ ಭವಿಷ್ಯದಲ್ಲಿ ಭಾಜನವಾಗಲಿರುವ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹಂತ1 ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೋಯ್ಡಾ ಸನಿಹದ ಜೆವಾರ್ನಲ್ಲಿ ಉದ್ಘಾಟಿಸಿದರು.
08:22 AM (IST) Mar 29
ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯ ಚೇತರಿಕೆಗಾಗಿ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ವತಿಯಿಂದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಜ್ವರ ಹಾಗೂ ಸೋಂಕಿನಿಂದ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
08:02 AM (IST) Mar 29
ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ, ಈ ಬಾರಿಯ ಚುನಾವಣೆಯನ್ನು ಶ್ರೀಮಂತರು ಮತ್ತು ಬಡವರ ನಡುವಿನ ಹೋರಾಟ ಎಂದು ಬಣ್ಣಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ಶ್ರೀಮಂತ ಹಿನ್ನೆಲೆಯನ್ನು ಟೀಕಿಸಿರುವ ಅವರು, ಹಮಾಲಿ ಮಾಡುವವರ ಮಗನಾದ ನನಗೆ ಜನ ಬೆಂಬಲ ಇದೆ ಎಂದಿದ್ದಾರೆ.
07:45 AM (IST) Mar 29
ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಎಂ.ಶಾಮನೂರು, ಶ್ರೀಮಂತ ವರ್ಸಸ್ ಬಡವರ ಚುನಾವಣೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ಗಳನ್ನು ಹೋಲಿಸಿದರೆ, ಬಿಜೆಪಿ ಅಭ್ಯರ್ಥಿಯ ಆಸ್ತಿಯೇ ತಮಗಿಂತ ಎರಡು ಪಟ್ಟು ಹೆಚ್ಚಿದೆ ಎಂದಿದ್ದಾರೆ.
07:41 AM (IST) Mar 29
Bollywood Actress Kiara Advani in Toxic movie: ಯಶ್ ಅಭಿನಯದ 'ಟಾಕ್ಸಿಕ್' ಚಿತ್ರಕ್ಕೆ ನಾಯಕಿಯಾಗಿ ಕಿಯಾರಾ ಅಡ್ವಾಣಿ ಆಯ್ಕೆಯಾಗಲು ನಿರ್ದೇಶಕಿ ಗೀತು ಮೋಹನ್ ದಾಸ್ ಮೂರು ಪ್ರಮುಖ ಕಾರಣಗಳನ್ನು ಬಹಿರಂಗಪಡಿಸಿದ್ದಾರೆ.
07:28 AM (IST) Mar 29
ಬೆಳಗಾವಿಯ ಮೂಡಲಗಿ ಪಟ್ಟಣದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ನಿಯಮಬಾಹಿರವಾಗಿ ಬೈಕ್ನಲ್ಲಿ ಸಾಗಿಸಲಾಗಿದೆ. ಉಮಾಬಾಯಿ ಪ್ರೌಢಶಾಲೆಯಿಂದ ಬಿಇಒ ಕಚೇರಿಗೆ ಯಾವುದೇ ಪೊಲೀಸ್ ಭದ್ರತೆ ಇಲ್ಲದೆ ಪತ್ರಿಕೆಗಳನ್ನು ಕೊಂಡೊಯ್ದಿದ್ದು, ಶಿಕ್ಷಣ ಇಲಾಖೆ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ
07:27 AM (IST) Mar 29
ಬೆಂಗಳೂರಿನ ಆನೇಕಲ್ ಬಳಿ ಸಾಲದ ಬಾಧೆ ತಾಳಲಾರದೆ ಒಂದೇ ಕುಟುಂಬದ ನಾಲ್ವರು ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆಯಲ್ಲಿ ತಾಯಿ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.