ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸುತ್ತಿದೆ ಎನ್ನುವುದು ಸುಳ್ಳು. ಗ್ಯಾರಂಟಿಗಳನ್ನು ಯಾರಿಂದಲೂ ನಿಲ್ಲಿಸಲಾಗದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಭಾನುವಾರ ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ ಜಾತಿ ಆಧಾರಿತ ಜನಗಣತಿ ಮಾಡುತ್ತಿರುವುದೇ ಗ್ಯಾರಂಟಿ ಕಡಿತಕ್ಕೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆಗಳು ನಮ್ಮ ರಾಜ್ಯದ ಜನರಿಗೆ ಬದುಕನ್ನು ಕಟ್ಟಿಕೊಡುತ್ತಿದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಇಡೀ ಭಾರತ ದೇಶಕ್ಕೇ ಗ್ಯಾರಂಟಿಯಿದ್ದಂತೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

11:14 PM (IST) Sep 29
ವರ್ಷಾನುಗಟ್ಟಲೇ ಕನ್ನಡ ಕಿರುತೆರೆಯಲ್ಲಿ ಟಿಆರ್ಪಿಯಲ್ಲಿ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಟಾಪ್ ರೇಟಿಂಗ್ ಸ್ಥಾನದಲ್ಲಿತ್ತು. ಈ ಧಾರಾವಾಹಿಯ ಸ್ನೇಹಾ ಪಾತ್ರ ಕಂಡರೆ ಅನೇಕರಿಗೆ ಇಷ್ಟ. ಇಂಥ ಪಾತ್ರಕ್ಕೆ ನಟಿ ಸಂಜನಾ ಬುರ್ಲಿ ಗುಡ್ಬೈ ಹೇಳಿದ್ದರು. ಅದಕ್ಕೀಗ ಸಂಜನಾ ಬುರ್ಲಿ ಉತ್ತರ ಕೊಟ್ಟಿದ್ದಾರೆ.
10:43 PM (IST) Sep 29
‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ವಿಶ್ವ ಪಾತ್ರದಲ್ಲಿ ನಟ ಭವಿಷ್ ಗೌಡ ಅಭಿನಯಿಸುತ್ತಿದ್ದರು. ವಿಶ್ವ ಆಗಿ ಅವರು ವೀಕ್ಷಕರಿಗೆ ಹತ್ತಿರ ಆಗಿದ್ದರು. ಇಷ್ಟು ಜನಪ್ರಿಯತೆ ನೀಡಿದ ಧಾರಾವಾಹಿಯನ್ನು ಯಾವ ಕಾರಣಕ್ಕೆ ಬಿಟ್ಟೆ, ನಿಜಕ್ಕೂ ಏನಾಯ್ತು ಎಂದು ಅವರು Asianet Suvarna News ಜೊತೆಗೆ ಮಾತನಾಡಿದ್ದಾರೆ.
10:22 PM (IST) Sep 29
10:19 PM (IST) Sep 29
Bengaluru to Introduce Congestion Tax: ಬೆಂಗಳೂರಿನ ತೀವ್ರ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಲು, ಕರ್ನಾಟಕ ಸರ್ಕಾರವು ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವವರಿಗೆ ದಟ್ಟಣೆ ತೆರಿಗೆ ವಿಧಿಸಲು ಚಿಂತನೆ ನಡೆಸಿದೆ. ಈ ಪ್ರಸ್ತಾವಿತ ನಿಯಮವನ್ನು ಮೊದಲು ಔಟರ್ ರಿಂಗ್ ರಸ್ತೆಯಲ್ಲಿ ಜಾರಿಗೆ ತರಲು ಯೋಜಿಸಲಾಗಿದೆ.
10:09 PM (IST) Sep 29
Bigg Boss Kannada Season 12: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಮೊದಲ ದಿನವೇ ಓರ್ವ ಸ್ಪರ್ಧಿ ಎಲಿಮಿನೇಟ್ ಆಗಿದ್ದಾರೆ. ಆದರೆ ಅವರಾರು? ನಿಜಕ್ಕೂ ಎಲಿಮಿನೇಟ್ ಆದರಾ? ಸೀಕ್ರೇಟ್ ರೂಮ್ಗೆ ಹೋದರಾ?
09:50 PM (IST) Sep 29
ಬಿಗ್ಬಾಸ್ ಕನ್ನಡ ಸೀಸನ್ 12 ರ ಮನೆಯು ಈ ಬಾರಿ ಮೈಸೂರು ಅರಮನೆಯ ಶೈಲಿಯಲ್ಲಿ ಅದ್ಭುತವಾಗಿ ವಿನ್ಯಾಸಗೊಂಡಿದೆ. ಕನ್ನಡದ ಸಂಸ್ಕೃತಿ, ಯಕ್ಷಗಾನ, ಹೊಯ್ಸಳ ಸಾಮ್ರಾಜ್ಯದ ಛಾಯೆಗಳನ್ನು ಹೊಂದಿರುವ ಈ ಮನೆಯ ವಿಶೇಷತೆಗಳನ್ನು ನೋಡಿ ಕುಣಿದಾಡಿದ ಜನರು. ಬಿಗ್ಬಾಸ್ ಮನೆಯೊಳಕ್ಕೆ ಹೋಗಿ ಬಂದೋರು ಹೇಳಿದ್ದೇನು?
09:32 PM (IST) Sep 29
09:01 PM (IST) Sep 29
ಬಿಗ್ಬಾಸ್ ಕನ್ನಡ ಸೀಸನ್ 12 ಅದ್ದೂರಿಯಾಗಿ ಆರಂಭವಾಗಿದ್ದು, ಸ್ಪರ್ಧಿಗಳ ಕುರಿತಾದ ಊಹಾಪೋಹಗಳಿಗೆ ತೆರೆಬಿದ್ದಿದೆ. ನಟಿ ಸುಧಾರಾಣಿ ಪ್ರವೇಶದ ಸುದ್ದಿ ಸುಳ್ಳಾಗಿದ್ದು, ಅಚ್ಚರಿಯ ಸ್ಪರ್ಧಿಗಳು ದೊಡ್ಮನೆ ಪ್ರವೇಶಿಸಿದ್ದಾರೆ.
08:52 PM (IST) Sep 29
08:21 PM (IST) Sep 29
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣ . ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಹಿಳಾ ಆಯೋಗ, ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
07:33 PM (IST) Sep 29
ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಸೈಬರ್ ವಂಚನೆಗೆ ಒಳಗಾಗಿದ್ದಾರೆ. "ರಕ್ತ ಕಾಶ್ಮೀರ" ಸಿನಿಮಾದ ತೆಲುಗು ರೈಟ್ಸ್ ನೀಡುವುದಾಗಿ ನಂಬಿಸಿದ ವಂಚಕರು, ಅವರಿಂದ ಬ್ಯಾಂಕ್ ವಿವರಗಳನ್ನು ಪಡೆದು ಸುಮಾರು 4.25 ಲಕ್ಷ ರೂಪಾಯಿ ದೋಚಿದ್ದಾರೆ.
07:33 PM (IST) Sep 29
Trump Announces 100% Tariff on Foreign Films ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಯುನೈಟೆಡ್ ಸ್ಟೇಟ್ಸ್ನ ಹೊರಗೆ ನಿರ್ಮಿಸಲಾದ ಎಲ್ಲಾ ಚಲನಚಿತ್ರಗಳ ಮೇಲೆ 100% ಸುಂಕವನ್ನು ಘೋಷಿಸಿದ್ದಾರೆ.
06:37 PM (IST) Sep 29
ಲೈಂಗಿಕ ಹಗರಣ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣ, ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ತಮ್ಮ ಮೇಲಿನ ಆರೋಪಗಳು ರಾಜಕೀಯ ಪ್ರೇರಿತ ಸಾಕ್ಷ್ಯಗಳಲ್ಲಿ ಹಲವಾರು ವೈರುಧ್ಯಗಳಿವೆ ವಾದಿಸಿದ್ದಾರೆ.
04:55 PM (IST) Sep 29
CC Patil criticizes Vijayanand Kashappanavar: ಬಸವ ಜಯಮೃತ್ಯುಂಜಯ ಶ್ರೀಗಳ ಬಗ್ಗೆ ಕಾಶಪ್ಪನವರ ನೀಡಿದ ಹೇಳಿಕೆಗೆ ಮಾಜಿ ಸಚಿವ ಸಿಸಿ ಪಾಟೀಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಟಿಕೆಟ್ಗಾಗಿ ಸ್ವಾಮೀಜಿ ಬಳಸಿಕೊಂಡು ಈಗ ಅವರ ಬಗ್ಗೆ ಮನಬಂದಂತೆ ಮಾತಾಡೋದು ಸರಿಯಲ್ಲ ಎಂದು ಕಾಶಪ್ಪನವರಿಗೆ ತಿರುಗೇಟು.
04:52 PM (IST) Sep 29
04:18 PM (IST) Sep 29
Teacher heart attack during caste census duty: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಜಾತಿ ಗಣತಿ ಕರ್ತವ್ಯದಲ್ಲಿದ್ದ ಮುಖ್ಯ ಶಿಕ್ಷಕ ರಾಮಕೃಷ್ಣಪ್ಪ (57) ಹೃದಯಾಘಾತದಿಂದ ನಿಧನರಾಗಿದ್ದಾರೆ. ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ನಿಧನ
03:38 PM (IST) Sep 29
ರಾಜ್ಯ ಸರ್ಕಾರವು ಹಲವು ನಿಗಮ ಮಂಡಳಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕಾತಿಯಲ್ಲಿ ಬದಲಾವಣೆ ಮಾಡಿದೆ. ಬಿಎಂಟಿಸಿ ಅಧ್ಯಕ್ಷರಾಗಿ ವಿ.ಎಸ್. ಆರಾಧ್ಯ ಅವರನ್ನು ನೇಮಿಸಲಾಗಿದ್ದು, ನಿಕೇತ್ ರಾಜ್ ಮೌರ್ಯ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡಲಾಗಿದೆ.
03:03 PM (IST) Sep 29
Bigg Boss Kannada Season 12: ಮೊದಲ ದಿನವೇ ಎಲಿಮಿನೇಷನ್ ಪ್ರಕ್ರಿಯೆ ಆರಂಭಿಸಿ ಸ್ಪರ್ಧಿಗಳಿಗೆ ಬಿಗ್ಬಾಸ್ ಶಾಕ್ ನೀಡಿದ್ದಾರೆ. ಸ್ಪಂದನಾ ಸೋಮಣ್ಣ, ಮಾಳು ನಿಪನಾಳ ಮತ್ತು ರಕ್ಷಿತಾ ಶೆಟ್ಟಿ ನಾಮಿನೇಟ್ ಆಗಿದ್ದು, ಇವರಲ್ಲಿ ಯಾರು ಮನೆಯಿಂದ ಹೊರಹೋಗಲಿದ್ದಾರೆ ಎಂಬ ಕುತೂಹಲ ಮೂಡಿದೆ.
01:43 PM (IST) Sep 29
ಧಾರವಾಡದಲ್ಲಿ ಊಟದ ಬಿಲ್ ಕೇಳಿದ ಮಾಜಿ ಸೈನಿಕನ ಮೇಲೆ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘೋರ ಕೃತ್ಯದಲ್ಲಿ ಎಎಸ್ಐ ಸೇರಿದಂತೆ ಐವರು ಪೊಲೀಸರು ಭಾಗಿಯಾಗಿದ್ದು, ಸಾಕ್ಷ್ಯ ನಾಶಪಡಿಸಲು ಸಿಸಿಟಿವಿ ಡಿವಿಆರ್ ಅನ್ನು ಕೊಂಡೊಯ್ದಿದ್ದಾರೆ ಎಂಬ ಆರೋಪವಿದೆ.
01:37 PM (IST) Sep 29
BK Hariprasad: ಜಾತಿ ಗಣತಿಗೆ ಅಸಹಕಾರ ತೋರುವ ಸರ್ಕಾರಿ ನೌಕರರಿಗೆ ಬಿ.ಕೆ. ಹರಿಪ್ರಸಾದ್ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನದೊಂದಿಗೆ ಕ್ರಿಕೆಟ್ ಆಡುತ್ತಾರೆ. ಇದು ಹಣಕ್ಕಾಗಿ ನಡೆಸುತ್ತಿರುವ ವ್ಯವಹಾರವೇ ಹೊರತು ದೇಶಪ್ರೇಮವಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
01:02 PM (IST) Sep 29
Kalyana Karnataka flood update :ಮಹಾರಾಷ್ಟ್ರದಲ್ಲಿನ ಭಾರೀ ಮಳೆ. ಭೀಮಾ ನದಿಗೆ 5.10 ಲಕ್ಷ ಕ್ಯುಸೆಕ್ ನೀರು ಬಿಡುಗಡೆ., ಕಲ್ಯಾಣ ಯಾದಗಿರಿ, ವಿಜಯಪುರ ಕಲಬುರಗಿ ಜಿಲ್ಲೆ ತೀವ್ರ ಪ್ರವಾಹಕ್ಕೆ ಇಬ್ಬರು ಮೃತಪಟ್ಟಿದ್ದು, 95ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ, 2.60 ಲಕ್ಷ ಹೆಕ್ಟೇರ್ ಬೆಳೆ ನಾಶ.
12:39 PM (IST) Sep 29
Congress protest march in Kateel: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಅಪಪ್ರಚಾರವನ್ನು ವಿರೋಧಿಸಿ, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಕಾಂಗ್ರೆಸ್ ಕಟೀಲಿಗೆ ಧರ್ಮ ಜಾಗೃತಿ ಪಾದಯಾತ್ರೆ ನಡೆಸಿತು. ಅಪಪ್ರಚಾರ ಮಾಡುವವರಿಗೆ ಸದ್ಬುದ್ಧಿ ನೀಡಲೆಂದು ದುರ್ಗಾಪರಮೇಶ್ವರಿಯಲ್ಲಿ ಪ್ರಾರ್ಥಿಸಲಾಯಿತು.
12:33 PM (IST) Sep 29
ಕನ್ನಡ ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆಯ ಹಿರಿಯ ಕಲಾವಿದ ಯಶವಂತ ಸರದೇಶಪಾಂಡೆ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಾಸ್ಯನಟ, ನಿರ್ದೇಶಕ, ಹಾಗೂ ನಾಟಕಕಾರರಾಗಿ ಗುರುತಿಸಿಕೊಂಡಿದ್ದರು.
12:16 PM (IST) Sep 29
ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭೀಮಾ ನದಿಗೆ ಅಪಾರ ನೀರು ಬಿಡುಗಡೆ ಮಾಡಲಾಗಿದ್ದು, ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ, ರಾಯಚೂರು, ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನದಿ ತೀರದ ಗ್ರಾಮಗಳು ಜಲಾವೃತಗೊಂಡಿದೆ.
12:07 PM (IST) Sep 29
World Heart Day 2025: ಇಂದಿನ ಜೀವನಶೈಲಿಯಿಂದ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಹೃದಯಾಘಾತದಿಂದ ಚೇತರಿಸಿಕೊಳ್ಳುವ ಮೊದಲ 90 ದಿನಗಳು ಅತ್ಯಂತ ನಿರ್ಣಾಯಕವಾಗಿದ್ದು, ಈ ಸಮಯದಲ್ಲಿ ಸರಿಯಾದ ಆರೈಕೆ, ಆಹಾರ ಪದ್ಧತಿ ಮತ್ತು ವ್ಯಾಯಾಮದಿಂದ ಎರಡನೇ ಹೃದಯಾಘಾತದ ಅಪಾಯವನ್ನುತಪ್ಪಿಸಬಹುದು.
11:27 AM (IST) Sep 29
India refuses Asia Cup trophy: 2025ರ ಏಷ್ಯಾಕಪ್ ಫೈನಲ್ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಭಾರತ ಚಾಂಪಿಯನ್ ಆಗಿದೆ. ಆದರೆ, ಎಸಿಸಿ ಅಧ್ಯಕ್ಷ ಮತ್ತು ಪಾಕಿಸ್ತಾನದ ಸಚಿವರಾದ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ್ದು, ಈ ಘಟನೆಯು ಕ್ರೀಡಾ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
11:24 AM (IST) Sep 29
ಬಿಗ್ಬಾಸ್ ಮನೆಗೆ ಹೊಸದಾಗಿ ಎಂಟ್ರಿ ಕೊಟ್ಟಿರುವ ಮಲ್ಲಮ್ಮ, ತಮ್ಮ ಫಿಲ್ಟರ್ ಇಲ್ಲದ ಮಾತುಗಳಿಂದ ಸಂಚಲನ ಸೃಷ್ಟಿಸಿದ್ದಾರೆ. ವೇದಿಕೆಯ ಮೇಲೆ ಸೂಪರ್ ಸ್ಟಾರ್ ಸುದೀಪ್ ಅವರೊಂದಿಗೆ ತಮಾಷೆಯ ಒಪ್ಪಂದವೊಂದನ್ನು ಮಾಡಿಕೊಂಡಿದ್ದು ಎಲ್ಲರ ಗಮನ ಸೆಳೆದಿದೆ.
10:24 AM (IST) Sep 29
Amruthadhaare Serial News: ಜೈದೇವ್ಗೆ ತಾಯಿ ಶಕುಂತಲಾ ಕ್ಲಾಸ್ ತೆಗೆದುಕೊಂಡಿದ್ದಾರೆ. ಪತ್ನಿ ದಿಯಾಳ ಕುತಂತ್ರದ ಮಾತಿನಿಂದಾಗಿ, ಮನೆಯ ಒಳಿತಿಗಾಗಿ ಶ್ರಮಿಸುತ್ತಿರುವ ತಮ್ಮ ಪಾರ್ಥನ ಮೇಲೆಯೇ ಜೈದೇವ್ ದ್ವೇಷ ಸಾಧಿಸಲು ಮುಂದಾಗಿದ್ದಾನೆ.
10:17 AM (IST) Sep 29
ಕಲಬುರಗಿ, ವಿಜಯಪುರ, ಮತ್ತು ಯಾದಗಿರಿ ಜಿಲ್ಲೆಗಳ ಜೀವನದಿಯಾದ ಭೀಮಾ, ಮಳೆಗಾಲ ಪ್ರವಾಹ ಬೇಸಿಗೆಯಲ್ಲಿ ಅನಾವೃಷ್ಟಿ ಸೃಷ್ಟಿಸುತ್ತಿದೆ. ಮಹಾರಾಷ್ಟ್ರದ ನೀರಿನ ನಿಯಂತ್ರಣ, ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ನಮ್ಮ ಪಾಲಿನ ನೀರನ್ನು ಬಳಸಿಕೊಳ್ಳಲಾಗದೆ ಈ ಭಾಗದ ಜನರು ನಿರಂತರ ಸಂಕಷ್ಟ ಅನುಭವಿಸುತ್ತಿದ್ದಾರೆ.
09:27 AM (IST) Sep 29
ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಹಿಂದೂ ಕುಟುಂಬದ ಮೇಲಿನ ದಾಳಿಯನ್ನು ಖಂಡಿಸಿ ಹಿಂದೂ ಸುರಕ್ಷಾ ಸಮಿತಿಯು ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಸಂಘ ಪರಿವಾರದ ಮುಖಂಡರು, ಹಿಂದೂಗಳ ಹಬ್ಬ, ಆಚರಣೆಗಳನ್ನು ಬಂದ್ ಮಾಡುವ ಮತ್ತು ಭಾವನೆಗಳನ್ನು ನಿರಂತರವಾಗಿ ಕೆಣಕುವ ಹುನ್ನಾರ ನಡೆಯುತ್ತಿದೆ ಎಂದರು..
09:05 AM (IST) Sep 29
Bengaluru cinematic robbery case: ಬೆಂಗಳೂರಿನ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಸಿನಿಮೀಯ ಶೈಲಿಯಲ್ಲಿ ಅಪಹರಿಸಿ 1.1 ಕೋಟಿ ರೂಪಾಯಿ ದರೋಡೆ ಮಾಡಿದ್ದ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಹುಳಿಮಾವು ಪೊಲೀಸರು. ರೋಚಕ ಕಾರ್ಯಾಚರಣೆ ವಿವರ..
08:51 AM (IST) Sep 29
Bigg Boss Kannada 12: ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 12 ಅದ್ಧೂರಿಯಾಗಿ ಆರಂಭವಾಗಿದ್ದು, ಸ್ಟಾರ್ ನಟ ಮೊದಲ ಅತಿಥಿಯಾಗಿ ಆಗಮಿಸುವ ನಿರೀಕ್ಷೆಯಿದೆ. ಇದರ ನಡುವೆ ಸ್ಪರ್ಧಿಗಳಿಗೆ ಬಿಗ್ಬಾಸ್ ದೊಡ್ಡ ಶಾಕ್ ನೀಡಿದ್ದಾರೆ.
08:42 AM (IST) Sep 29
ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಇದೇ ರೀತಿ, ದಾವಣಗೆರೆಯಲ್ಲೂ ಸಮೀಕ್ಷಾ ಕಾರ್ಯದಲ್ಲಿ ನಿರಾಸಕ್ತಿ ತೋರಿದ್ದಕ್ಕಾಗಿ ಇಬ್ಬರು ಶಿಕ್ಷಕರು ಮತ್ತು ಓರ್ವ ಸಿಬ್ಬಂದಿ ಅಮಾನತು.
08:23 AM (IST) Sep 29
Bigg Boss Kannada first day elimination: ಬಿಗ್ಬಾಸ್ ಮನೆಗೆ ಪ್ರವೇಶಿಸಿದ ಮೊದಲ ದಿನವೇ ಸ್ಪರ್ಧಿಗಳಿಗೆ ಅನಿರೀಕ್ಷಿತ ಆಘಾತ ಎದುರಾಗಿದೆ. ನಿಮ್ಮಲ್ಲೊಬ್ಬರು ಮನೆಯಿಂದ ಹೊರಹೋಗಬೇಕೆಂದು ಬಿಗ್ಬಾಸ್ ಸೂಚಿಸಿದ್ದು, ಇದು ಸ್ಪರ್ಧಿಗಳಲ್ಲಿ ತೀವ್ರ ಚರ್ಚೆ ಮತ್ತು ಆತಂಕಕ್ಕೆ ಕಾರಣವಾಗಿದೆ.
07:42 AM (IST) Sep 29
Darshan fans threaten teacher: ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಗುರಿಯಾಗಿಸಿ ಫೇಸ್ಬುಕ್ನಲ್ಲಿ ಅಶ್ಲೀಲ ಪೋಸ್ಟ್ ಹಾಕಿ ಅತ್ಯ೧ಚಾರ ಬೆದರಿಕೆ ಒಡ್ಡಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿಗಳು ಎನ್ನಲಾದವರ ವಿರುದ್ಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಟಿ ಕಾಯ್ದೆಯಡಿ ಪ್ರಕರಣ ದಾಖಲು
07:35 AM (IST) Sep 29
top headlines highlights in kannada: 'ಐ ಲವ್ ಮೊಹಮ್ಮದ್' ಅಭಿಯಾನವನ್ನು ಕಾಂಗ್ರೆಸ್ ಸಮರ್ಥಿಸಿಕೊಂಡರೆ, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಮೀಕ್ಷೆ ನಡೆಸುತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.