LIVE NOW
Published : Jan 29, 2026, 07:29 AM ISTUpdated : Jan 29, 2026, 10:46 AM IST

State News Live: Adnan Sami - 16 ವರ್ಷಗಳ ಹಿಂದೆ, ನನ್ನ ಸುಂದರಿ ರೋಯಾ ನನಗೆ 'ಹೌದು' ಎಂದು ಒಪ್ಪಿಗೆ ನೀಡಿದಳು

ಸಾರಾಂಶ

ಬೆಂಗಳೂರು (ಜ.29): ರಾಜ್ಯ ಸರ್ಕಾರವು ಕೇಂದ್ರ ಹಾಗೂ ರಾಜಭವನದ ನಡುವಿನ ದೂರವಾಣಿ ಕದ್ದಾಲಿಕೆ ಮಾಡಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಗದ್ದಲ ಸೃಷ್ಟಿಸಿದ್ದು, ದೆಹಲಿಯಿಂದ ರಾಜ್ಯಪಾಲರಿಗೆ ಕರೆ ಬಂದಿದೆ ಎಂದಿರುವ ಸಚಿವ ಎಚ್.ಕೆ.ಪಾಟೀಲ್ ಅವರ ಕ್ಷಮೆ ಯಾಚನೆಗೆ ಪಟ್ಟು ಹಿಡಿದ ಘಟನೆ ಬುಧವಾರ ಸದನದಲ್ಲಿ ನಡೆದಿದೆ. ಭಾಷಣ ನಿಲ್ಲಿಸಲು ಗವರ್ನರ್‌ಗೆ ದೇಶವಕೃಪಾ, ದೆಹಲಿಯಿಂದ ಒತ್ತಡ ಎಂದು ಎಚ್‌ಕೆ ಪಾಟೀಲ್‌ ಹಾಗೂ ಪ್ರಿಯಾಂಕ್‌ ಖರ್ಗೆ ಹೇಳಿದರೆ, ಅದಕ್ಕೆ ಪ್ರತಿಯಾಗಿ ಸರ್ಕಾರ ಈ ಆರೋಪ ಮಾಡುತ್ತಿದೆ ಎಂದಾದಲ್ಲಿ ಫೋನ್‌ ಕದ್ದಾಲಿಕೆ ಆಗಿದೆ ಎಂದರ್ಥ. ಈ ಬಗ್ಗೆ ತನಿಖೆ ಆಗಲಿ ಎಂದು ವಿಪಕ್ಷ ನಾಯಕ ಅಶೋಕ್‌ ಹೇಳಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್‌ಲೈವ್‌ ಬ್ಲಾಗ್‌

Adnan Sami

10:46 AM (IST) Jan 29

Adnan Sami - 16 ವರ್ಷಗಳ ಹಿಂದೆ, ನನ್ನ ಸುಂದರಿ ರೋಯಾ ನನಗೆ 'ಹೌದು' ಎಂದು ಒಪ್ಪಿಗೆ ನೀಡಿದಳು

"ನಮ್ಮ ಪಾಲಿನ ಅತ್ಯಮೂಲ್ಯ ಉಡುಗೊರೆಯಾದ ಮದೀನಾಳಿಗೆ ನೀನು ಅತ್ಯುತ್ತಮ ತಾಯಿಯಾಗಿದ್ದೀಯಾ. ಅವಳನ್ನು ನೀನು ಪ್ರೀತಿಸುವ ಮತ್ತು ಅವಳಿಗಾಗಿ ನಿನ್ನ ಜೀವನವನ್ನೇ ಸಮರ್ಪಿಸಿಕೊಂಡಿರುವ ರೀತಿಗೆ ನಾನು ಬೆರಗಾಗಿದ್ದೇನೆ. ಇದನ್ನು ನೋಡಿ ಪ್ರೀತಿಗೆ ಇರುವ ಹೊಸ ಮತ್ತು ಆಳವಾದ ಅರ್ಥವನ್ನು ನಾನು ತಿಳಿದುಕೊಂಡೆ.

Read Full Story

10:37 AM (IST) Jan 29

ರಾಯಚೂರು - 5 ತಿಂಗಳ ಗರ್ಭಿಣಿಯನ್ನು ಕತ್ತು ಸೀಳಿ ಕೊಂದ ಮಾವ, ಮನೆ ಜಗಲಿಯಲ್ಲಿ ನರಳಾಡಿ ಪ್ರಾಣ ಬಿಟ್ಟ ಸೊಸೆ

ರಾಯಚೂರಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಐದು ತಿಂಗಳ ಗರ್ಭಿಣಿ ಸೊಸೆಯನ್ನು, ಆಕೆಯ ಮಾವ  ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಮನೆಯಿಂದ ಹೊರಬಂದು ಜಗಲಿಯ ಮೇಲೆ ಪ್ರಾಣ ಬಿಟ್ಟ ಆಕೆಯ ಸಾವಿಗೆ ಇಡೀ ಗ್ರಾಮವೇ ಮರುಗಿದೆ. ಪೊಲೀಸರು ಆರೋಪಿ ಮಾವನನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

Read Full Story

10:20 AM (IST) Jan 29

ಬರಡು ನೆಲದಲ್ಲಿ ದೇಶದ ಬೃಹತ್‌ ಸಾಮ್ರಾಜ್ಯ!

ನಾಲ್ಕನೇ ಆವೃತ್ತಿಯ ‘ಇಂಡಿಯಾ ಎನರ್ಜಿ ವೀಕ್‌ (ಭಾರತ ಇಂಧನ ಸಪ್ತಾಹ)- 2026’ ದಕ್ಷಿಣ ಗೋವಾದ ಬೇತೂಲ್‌ನಲ್ಲಿರುವ ಒಎನ್‌ಜಿಸಿಗೆ ಸೇರಿದ ದೇಶದ ಅತಿದೊಡ್ಡ ಹಾಗೂ ವಿಶ್ವದರ್ಜೆಯ ಅಡ್ವಾನ್ಸ್ಡ್‌ ಟ್ರೇನಿಂಗ್‌ ಇನ್ಸ್‌ಟಿಟ್ಯೂಟ್‌ನಲ್ಲಿ ಆಯೋಜನೆಗೊಂಡಿದೆ.

Read Full Story

10:14 AM (IST) Jan 29

ದಿಲ್ಲಿ, ಪಂಜಾಬಲ್ಲಿ ಕಾರ್‌ ಕದ್ದು ಬೆಂಗ್ಳೂರಲ್ಲಿ ಮಾರ್ತಿದ್ರು!

ದೆಹಲಿ, ಪಂಜಾಬ್‌, ಉತ್ತರ ಪ್ರದೇಶಗಳಲ್ಲಿ ಐಷಾರಾಮಿ ಕಾರುಗಳನ್ನು ಕದ್ದು, ಅವುಗಳನ್ನು ರಾಜ್ಯಕ್ಕೆ ತಂದು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ.

Read Full Story

10:07 AM (IST) Jan 29

Tumakur - 70 ಲಕ್ಷ ವಿದ್ಯುತ್‌ ಬಿಲ್‌ ಪಾವತಿಸಲು ಬಡವಾದ ಸರ್ಕಾರ, ಸಿದ್ದಗಂಗಾ ಮಠಕ್ಕೆ ನೀರು ಬಂದ್!

ರಾಜ್ಯ ಸರ್ಕಾರವು 70 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಪಾವತಿಸಲು ವಿಫಲವಾದ ಕಾರಣ, ಹೊನ್ನೆನಹಳ್ಳಿ ಕೆರೆಯಿಂದ ನೀರು ಪೂರೈಕೆ ಸ್ಥಗಿತಗೊಂಡಿದೆ. ಇದರಿಂದಾಗಿ ತುಮಕೂರಿನ ಪ್ರಸಿದ್ಧ ಸಿದ್ದಗಂಗಾ ಮಠದಲ್ಲಿ ತೀವ್ರ ನೀರಿನ ಅಭಾವ ಸೃಷ್ಟಿಯಾಗಿದೆ.

Read Full Story

09:57 AM (IST) Jan 29

ಲಕ್ಕುಂಡಿ ಉತ್ಖನನ 12ನೇ ದಿನ - ಕೆಲಸ ಆರಂಭಿಸುತ್ತಿದ್ದಂತೆಯೇ ಅಡಿಕೆ ಆಕಾರದ ಶಿಲೆ ಪತ್ತೆ, ಹೆಚ್ಚಿದ ಕುತೂಹಲ

ಗದಗದ ಐತಿಹಾಸಿಕ ತಾಣ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನದ 12ನೇ ದಿನದಂದು ಅಡಿಕೆ ಆಕಾರದ ಶಿಲೆ ಪತ್ತೆಯಾಗಿದೆ. ಈವರೆಗೆ ಶಿವಲಿಂಗದ ಪೀಠ, ನಾಗರ ಕಲ್ಲುಗಳು ಸೇರಿದಂತೆ 40ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ದೊರೆತಿದ್ದು, ಚಾಲುಕ್ಯರ ಕಾಲದ ವೈಭವವನ್ನು ಅನಾವರಣಗೊಳಿಸುವ ನಿರೀಕ್ಷೆ ಹೆಚ್ಚಿಸಿದೆ.
Read Full Story

09:46 AM (IST) Jan 29

ಬದಲಾಗುತ್ತಾ ಮತ್ತೆ ಬಿಪಿಎಲ್ ಮಾನದಂಡ ?

ಸರ್ಕಾರ ಅನರ್ಹರ ಪಡಿತರ ಚೀಟಿಗಳನ್ನು ಗುರುತಿಸುವ ಪ್ರಕ್ರಿಯೆಯಲ್ಲಿ ಅರ್ಹರ ಬಿಪಿಎಲ್‌ ಕಾರ್ಡುಗಳನ್ನೂ ಎಪಿಎಲ್‌ಗೆ ಬದಲಾವಣೆ ಮಾಡುತ್ತಿದೆ. ಇದರಿಂದ ಕ್ಷೇತ್ರದಲ್ಲಿ ಜನರು ನಮ್ಮನ್ನು ಓಡಾಡಲು ಬಿಡುತ್ತಿಲ್ಲ ಎಂದು ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರು ವಿಧಾನಸಭೆಯಲ್ಲಿ ಅಳಲು ತೋಡಿಕೊಂಡ ಘಟನೆ ನಡೆಯಿತು.

Read Full Story

09:31 AM (IST) Jan 29

ಟಿ20 ವಿಶ್ವಕಪ್ ಗೆಲುವಿಗೆ ಭಾರತ ದಾಟಬೇಕಿದೆ 9 ಅಗ್ನಿಪರೀಕ್ಷೆ! ಈ ಸಮಸ್ಯೆಗಳಿಟ್ಟುಕೊಂಡು ಕಪ್ ಗೆಲ್ಲುತ್ತಾ?

ಟಿ20 ವಿಶ್ವಕಪ್‌ಗೆ ಸಜ್ಜಾಗುತ್ತಿರುವ ಭಾರತ ತಂಡವು ಹೊರನೋಟಕ್ಕೆ ಬಲಿಷ್ಠವಾಗಿ ಕಂಡರೂ, ಆಂತರಿಕವಾಗಿ 9 ಪ್ರಮುಖ ಸಮಸ್ಯೆಗಳನ್ನು ಎದುರಿಸುತ್ತಿದೆ. ಆಟಗಾರರ ಕಳಪೆ ಫಾರ್ಮ್, ಗಾಯ, ಆಯ್ಕೆ ಗೊಂದಲಗಳು ಹಾಗೂ ಕೋಚ್ ಮೇಲಿನ ಒತ್ತಡವು ತಂಡದ ವಿಶ್ವಕಪ್ ಗೆಲುವಿನ ಕನಸಿಗೆ ಅಡ್ಡಿಯಾಗುವ ಸಾಧ್ಯತೆಯಿದೆ.

Read Full Story

09:08 AM (IST) Jan 29

ಪೆನ್‌ ಪಾಯಿಂಟ್‌ ಕ್ರಿಕೆಟ್‌ - ಎಮಾರ್‌ ಸ್ಟ್ರೈಕರ್ಸ್‌ ಚಾಂಪಿಯನ್‌, ಅಟ್ಯಾಕರ್ಸ್‌ ರನ್ನರ್‌-ಅಪ್‌

'ಪೆನ್‌ ಪಾಯಿಂಟ್‌ ಸ್ನೇಹ ವೇದಿಕೆ' ಆಯೋಜಿಸಿದ್ದ 5ನೇ ಆವೃತ್ತಿಯ ಕ್ರಿಕೆಟ್‌ ಫೆಸ್ಟ್‌ನಲ್ಲಿ ಎಮಾರ್‌ ಸ್ಟ್ರೈಕರ್ಸ್‌ ತಂಡವು ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಕಾಸರಗೋಡಿನ ಲಾರ್ಡ್ಸ್‌ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ, ಅಟ್ಯಾಕರ್ಸ್‌ ತಂಡವನ್ನು ಸೋಲಿಸಿ ಎಮಾರ್‌ ಸ್ಟ್ರೈಕರ್ಸ್‌ ಚಾಂಪಿಯನ್ ಆಯಿತು.

Read Full Story

08:45 AM (IST) Jan 29

HPL Season 05 - ಟ್ರೋಫಿ ಗೆದ್ದ ಸಮನ್ವಯ ಸ್ಟಾರ್ಸ್; ಫೈನಲ್‌ನಲ್ಲಿ ಕಲ್ಲೂರು ಕಲಿಗಳಿಗೆ ನಿರಾಸೆ!

ಶಿವಮೊಗ್ಗದ ಹೆದ್ದಾರಿಪುರದಲ್ಲಿ ನಡೆದ ಐದನೇ ಸೀಸನ್ ಹೆದ್ದಾರಿಪುರ ಪ್ರೀಮಿಯರ್ ಲೀಗ್ (HPL) ಕ್ರಿಕೆಟ್ ಟೂರ್ನಿಯಲ್ಲಿ, ಸಮನ್ವಯ ಸ್ಟಾರ್ಸ್ ಕೊಡಸೆ-ಗಿಣಿಸೆ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್‌ನಲ್ಲಿ ಕಲ್ಲೂರು ಕಲಿಗಳ ತಂಡವನ್ನು 25 ರನ್‌ಗಳಿಂದ ಮಣಿಸಿ ಪ್ರಶಸ್ತಿ ಗೆದ್ದುಕೊಂಡಿತು. 

Read Full Story

08:44 AM (IST) Jan 29

ಸರ್ಕಾರಿ ಅಧಿಕಾರಿ, ನೌಕರರಿಗೆ ಖಾದಿ ದಿರಿಸು ಕಡ್ಡಾಯ ?

ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಖಾದಿ ಉಡುಪು ಧರಿಸುವುದನ್ನು ಕಡ್ಡಾಯಗೊಳಿಸುವ ಸಂಬಂಧ ನಿರ್ಧರಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸರ್ಕಾರಿ ನೌಕರರ ಸಂಘಗಳ ಪ್ರಮುಖರೊಂದಿಗೆ ಗುರುವಾರ ಸಭೆ ನಡೆಸಲಾಗುತ್ತಿದೆ.

Read Full Story

08:26 AM (IST) Jan 29

ದಿಲ್ಲಿ ಪಂಜಾಬಲ್ಲಿ ಐಷಾರಾಮಿ ಕಾರ್ ಕದ್ದು ಬೆಂಗ್ಳೂರಲ್ಲಿ ಮಾರ್ತಿದ್ರು! ಇವರು ಸಿಕ್ಕಿಬಿದ್ದಿದ್ದೇ ಇಂಟ್ರೆಸ್ಟಿಂಗ್ ಸ್ಟೋರಿ

ದೆಹಲಿ, ಪಂಜಾಬ್‌ನಂತಹ ರಾಜ್ಯಗಳಲ್ಲಿ ಐಷಾರಾಮಿ ಕಾರುಗಳನ್ನು ಕದ್ದು, ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಸ್ಕೂಟರ್ ಕಳ್ಳತನದ ತನಿಖೆ ವೇಳೆ ಇಬ್ಬರು ಡೀಲರ್‌ಗಳನ್ನು ಬಂಧಿಸಲಾಗಿದೆ.

Read Full Story

08:16 AM (IST) Jan 29

ದುಬಾರಿ ಸೀರೆ ಉಟ್ಟು ಕಿಸೆಗಳ್ಳತನ, ಮೇಕಪ್‌ಗೆ ₹5 ಲಕ್ಷ ಖರ್ಚು ಮಾಡೋ ಕಳ್ಳಿ ಸೆರೆ!

ಬೆಂಗಳೂರಿನಲ್ಲಿ ಜಾತ್ರೆ ಮತ್ತು ದೇವಾಲಯಗಳಲ್ಲಿ ಜೇಬುಗಳ್ಳತನ ಮಾಡುತ್ತಿದ್ದ ದಂಪತಿಯನ್ನು ಕೆ.ಆರ್.ಪುರ ಪೊಲೀಸರು ಬಂಧಿಸಿದ್ದಾರೆ. ತನ್ನ ಮೇಲೆ ಅನುಮಾನ ಬಾರದಿರಲು ಆರೋಪಿ ಮಹಿಳೆ ಪ್ರತಿ ತಿಂಗಳು ಮೇಕಪ್‌ಗಾಗಿ 5 ಲಕ್ಷ ರೂಪಾಯಿ ಖರ್ಚು ಮಾಡುತ್ತಿದ್ದಳು. 

Read Full Story

08:01 AM (IST) Jan 29

ಜೈಲಲ್ಲೂ ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ಗೆ ಅಭಿಮಾನಿ ಕಾಟ, ವಾರ್ಡನ್‌ ಎತ್ತಂಗಡಿ ಮಾಡಿದ ಅಲೋಕ್‌ ಕುಮಾರ್‌!

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಅವರನ್ನು ನಿಯಮಬಾಹಿರವಾಗಿ ಭೇಟಿ ಮಾಡಲು ಸ್ನೇಹಿತನಿಗೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಜೈಲು ವಾರ್ಡನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಡಿಜಿಪಿ ಅಲೋಕ್ ಕುಮಾರ್ ಅವರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಈ ಕರ್ತವ್ಯಲೋಪ ಬೆಳಕಿಗೆ ಬಂದಿದೆ.

Read Full Story

07:36 AM (IST) Jan 29

ಜನರೇ, ಈ ಸಲ ಸುಡು ಬಿಸಿಲು ಎದುರಿಸಲು ಸಜ್ಜಾಗಿ! ವಾರ್ನಿಂಗ್ !

ಈ ವರ್ಷದ ಬೇಸಿಗೆಯಲ್ಲಿ ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿರಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಷ್ಣಾಂಶ ಸರಾಸರಿಗಿಂತ 1 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಿಅರಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

Read Full Story

07:36 AM (IST) Jan 29

ಉತ್ಪನ್ನ ಮೌಲ್ಯವರ್ಧನೆಗೆ ಒತ್ತು ನೀಡಿ: ಶಿವಪ್ರಕಾಶ್‌

ನವುಲೆಯ ಕೃಷಿ ಕಾಲೇಜಿನಲ್ಲಿ ಅಡಕೆ ಸಮೃದ್ಧಿಗಾಗಿ ಕಾಳು ಮೆಣಸಿನ ಅಂತರ ಬೆಳೆ ಎಂಬ ವಿಷಯದ ಬಗ್ಗೆ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ‘ಅಡಕೆಯಲ್ಲಿ ಅಂತರ ಬೆಳೆಯಾಗಿ ಕಾಳುಮೆಣಸು’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.ಕೆಪೆಕ್‌ ಎಂ.ಡಿ. ಸಿ.ಎನ್. ಶಿವಪ್ರಕಾಶ್ ಮತ್ತಿತರರು ಹಾಜರಿದ್ದರು.

 

Read Full Story

07:36 AM (IST) Jan 29

ಫಾರಿನ್‌ ಟೂರ್‌ ಡ್ರಗ್ಸ್ ಮಾಫಿಯಾ ವಿರುದ್ಧ ಭರ್ಜರಿ ಬೇಟೆ

ಡ್ರಗ್ಸ್ ಮಾಫಿಯಾ ವಿರುದ್ಧ ಕಾರ್ಯಾಚರಣೆ ನಡೆಸಿದ ಅಮೃತಹಳ್ಳಿ ಠಾಣೆ ಪೊಲೀಸರು, ‘ಥೈಲ್ಯಾಂಡ್ ಪ್ರವಾಸ’ಕ್ಕೆ ಕಳುಹಿಸಿ ಅಲ್ಲಿಂದ ಕಳ್ಳ ಹಾದಿಯಲ್ಲಿ ವಿಮಾನದ ಮೂಲಕ ಕೆಜಿಗಟ್ಟಲೇ ಡ್ರಗ್ಸ್ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಭೇದಿಸಿ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ 10 ಮಂದಿ ಸೆರೆ

 

Read Full Story

07:35 AM (IST) Jan 29

ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ : 8 ತಿಂಗಳಲ್ಲಿ ₹3 ಲಕ್ಷ ಹೆಚ್ಚಳ!

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯ ನಾಗಲೋಟ ಮುಂದುವರೆದಿದ್ದು ಬುಧವಾರ ಚೆನ್ನೈ ಮತ್ತು ಹೈದರಾಬಾದ್‌ ಮಾರುಕಟ್ಟೆಯಲ್ಲಿ 1 ಕೇಜಿ ಬೆಳ್ಳಿ ಬೆಲೆಯು 4 ಲಕ್ಷ ರು.ಗೆ ತಲುಪಿದೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಬೆಳ್ಳಿ ದರ ಒಂದೇ ದಿನ 10,000 ರು. ಏರಿಕೆ

 

Read Full Story

07:35 AM (IST) Jan 29

4 ದಿನದಲ್ಲಿ 37 ಜನರಿಗೆ ನಾಯಿ ಕಡಿತ, ಬಾಲಕಿ ಗಂಭೀರ - 4 ನಗರಗಳಲ್ಲಿ ಬೀದಿ ನಾಯಿ, ಹುಚ್ಚು ನಾಯಿ ಕಡಿತ

ಬೀದಿ ನಾಯಿಗಳ ತೆರವಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು, ನಾಯಿ ಕಡಿತದಿಂದ ಸಂಭವಿಸುವ ಗಾಯ ಅಥವಾ ಸಾವಿಗೆ ರಾಜ್ಯ ಸರ್ಕಾರಗಳೇ ನೇರ ಹೊಣೆಗಾರರು ಎಂಬ ಸುಪ್ರೀಂಕೋರ್ಟ್ ಎಚ್ಚರಿಕೆಯ ನಡುವೆಯೂ ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ತಡೆಯುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.

 

Read Full Story

07:35 AM (IST) Jan 29

ವಿಧಾನಸಭೆಯಲ್ಲಿ ಗಂಭೀರ ಆರೋಪ - ಮತ್ತೆ ಟೆಲಿಫೋನ್‌ ಕದ್ದಾಲಿಕೆ ಗದ್ದಲ!

ರಾಜ್ಯ ಸರ್ಕಾರವು ಕೇಂದ್ರ ಹಾಗೂ ರಾಜಭವನದ ನಡುವಿನ ದೂರವಾಣಿ ಕದ್ದಾಲಿಕೆ ಮಾಡಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಗದ್ದಲ ಸೃಷ್ಟಿಸಿದ್ದು, ದೆಹಲಿಯಿಂದ ರಾಜ್ಯಪಾಲರಿಗೆ ಕರೆ ಬಂದಿದೆ ಎಂದಿರುವ ಸಚಿವ ಎಚ್.ಕೆ.ಪಾಟೀಲ್‌ ಅವರ ಕ್ಷಮೆಯಾಚನೆಗೆ ಪಟ್ಟು.

Read Full Story

More Trending News