LIVE NOW
Published : Jan 29, 2026, 07:29 AM ISTUpdated : Jan 29, 2026, 11:55 PM IST

State News Live: ಸಿಎಂ ಡಿಸಿಎಂ ಫೋಟೋ ಬಳಸಿ ಬಿಜೆಪಿ 'ಸ್ಕ್ಯಾಮ್ ಲಾರ್ಡ್' ಪೋಸ್ಟ್ - ಸೈಬರ್ ಕ್ರೈಂ ಠಾಣೆ ಮೆಟ್ಟಿಲೇರಿದ ಕಾಂಗ್ರೆಸ್

ಸಾರಾಂಶ

ಬೆಂಗಳೂರು (ಜ.29): ರಾಜ್ಯ ಸರ್ಕಾರವು ಕೇಂದ್ರ ಹಾಗೂ ರಾಜಭವನದ ನಡುವಿನ ದೂರವಾಣಿ ಕದ್ದಾಲಿಕೆ ಮಾಡಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಗದ್ದಲ ಸೃಷ್ಟಿಸಿದ್ದು, ದೆಹಲಿಯಿಂದ ರಾಜ್ಯಪಾಲರಿಗೆ ಕರೆ ಬಂದಿದೆ ಎಂದಿರುವ ಸಚಿವ ಎಚ್.ಕೆ.ಪಾಟೀಲ್ ಅವರ ಕ್ಷಮೆ ಯಾಚನೆಗೆ ಪಟ್ಟು ಹಿಡಿದ ಘಟನೆ ಬುಧವಾರ ಸದನದಲ್ಲಿ ನಡೆದಿದೆ. ಭಾಷಣ ನಿಲ್ಲಿಸಲು ಗವರ್ನರ್‌ಗೆ ದೇಶವಕೃಪಾ, ದೆಹಲಿಯಿಂದ ಒತ್ತಡ ಎಂದು ಎಚ್‌ಕೆ ಪಾಟೀಲ್‌ ಹಾಗೂ ಪ್ರಿಯಾಂಕ್‌ ಖರ್ಗೆ ಹೇಳಿದರೆ, ಅದಕ್ಕೆ ಪ್ರತಿಯಾಗಿ ಸರ್ಕಾರ ಈ ಆರೋಪ ಮಾಡುತ್ತಿದೆ ಎಂದಾದಲ್ಲಿ ಫೋನ್‌ ಕದ್ದಾಲಿಕೆ ಆಗಿದೆ ಎಂದರ್ಥ. ಈ ಬಗ್ಗೆ ತನಿಖೆ ಆಗಲಿ ಎಂದು ವಿಪಕ್ಷ ನಾಯಕ ಅಶೋಕ್‌ ಹೇಳಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್‌ಲೈವ್‌ ಬ್ಲಾಗ್‌

Congress files complaint against BJP s Scam Lord post targeting CM DCM

11:55 PM (IST) Jan 29

ಸಿಎಂ ಡಿಸಿಎಂ ಫೋಟೋ ಬಳಸಿ ಬಿಜೆಪಿ 'ಸ್ಕ್ಯಾಮ್ ಲಾರ್ಡ್' ಪೋಸ್ಟ್ - ಸೈಬರ್ ಕ್ರೈಂ ಠಾಣೆ ಮೆಟ್ಟಿಲೇರಿದ ಕಾಂಗ್ರೆಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ 'ಸ್ಕ್ಯಾಮ್ ಲಾರ್ಡ್' ಶೀರ್ಷಿಕೆಯಡಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕಾಗಿ ಬಿಜೆಪಿ ವಿರುದ್ಧ ಕೆಪಿಸಿಸಿ ದೂರು ದಾಖಲಿಸಿದೆ. ಈ ಪೋಸ್ಟ್ ಸರ್ಕಾರದ ಗಣ್ಯರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದೆ ಎಂಬ ಆರೋಪ.

Read Full Story

11:23 PM (IST) Jan 29

ಬೆಂಗಳೂರಿನಲ್ಲಿ ರಾಯಲ್ ಎನ್‌ಫೀಲ್ಡ್ ಜಿಮ್‌ಖಾನ ಆರಂಭ, ವೀಕೆಂಡ್‌ಗೆ ಪರ್ಫೆಕ್ಟ್ ಸ್ಪಾಟ್

ಬೆಂಗಳೂರಿನಲ್ಲಿ ರಾಯಲ್ ಎನ್‌ಫೀಲ್ಡ್ ಜಿಮ್‌ಖಾನ ಆರಂಭ, ಇಲ್ಲಿ ಆಫ್ ರೋಡ್, ಡ್ರಿಫ್ಟ್, ಜಂಪಿಂಗ್, ಕಂಟ್ರೋಲ್ ಸೇರಿದಂತೆ ಎಲ್ಲಾ ಸ್ಕಿಲ್ ಕಲಿಯಲು ಸಾಧ್ಯವಿದೆ. ಏನಿದು ರಾಯಲ್ ಎನ್‌ಫೀಲ್ಡ್ ಜಿಮ್‌ಖಾನ?

Read Full Story

11:07 PM (IST) Jan 29

ಗಾಂಧೀಜಿಯನ್ನು ಕೊಂದವರು ಈಗ ಅವರ ಹೆಸರನ್ನೇ ಬದಲಿಸುತ್ತಿದ್ದಾರೆ - ಶಿವಮೊಗ್ಗದಲ್ಲಿ ಕೇಂದ್ರದ ವಿರುದ್ಧ ಡಿಕೆಶಿ ವಾಗ್ದಾಳಿ

ಭದ್ರಾವತಿಯ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ನರೇಗಾ ಯೋಜನೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 

Read Full Story

09:55 PM (IST) Jan 29

ಪಶ್ಚಿಮ ಘಟ್ಟದ ಎದೆ ಬಗೆದ ಸತ್ಯ - ಅಧ್ಯಯನ ವರದಿ ಬಿಚ್ಚಿಟ್ಟ ಮಹಾ ಅಪಾಯ, ಶೇ. 60.7ರಷ್ಟು ಭೂಕುಸಿತ!

ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ ಕಳೆದ ಎರಡು ದಶಕಗಳಲ್ಲಿ 1,200ಕ್ಕೂ ಹೆಚ್ಚು ಭೂಕುಸಿತಗಳು ಸಂಭವಿಸಿವೆ. ಉತ್ತರ ಕನ್ನಡ ಜಿಲ್ಲೆಯು ಅತಿ ಹೆಚ್ಚು ಅಪಾಯದಲ್ಲಿದ್ದು, ಅವೈಜ್ಞಾನಿಕ ಅಭಿವೃದ್ಧಿ ಮತ್ತು ಮಳೆಯಿಂದಾಗಿ ಭವಿಷ್ಯದಲ್ಲಿ ಶೇ. 60.7ರಷ್ಟು ಭೂಕುಸಿತದ ಸಂಭಾವ್ಯ ಅಪಾಯವಿದೆ.

Read Full Story

09:52 PM (IST) Jan 29

CCL ಪಂದ್ಯದಲ್ಲಿ ಸುದೀಪ್​ ಕೆಟ್ಟ ಬೈಗುಳ ವಿವಾದ - ಜೋಗಿ ಪ್ರೇಮ್​ ಬುಡಕ್ಕೆ ತಂದಿಟ್ಟ ಕಿಚ್ಚ- ಆಗಿದ್ದೇನು ನೋಡಿ

ಸೆಲೆಬ್ರಿಟಿ ಕ್ರಿಕೇಟ್​ ಲೀಗ್​ ಪಂದ್ಯದಲ್ಲಿ ಬಳಸಿದ ಅವಾಚ್ಯ ಶಬ್ದದ ಬಗ್ಗೆ ಎದ್ದಿದ್ದ ಚರ್ಚೆಗೆ ನಟ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಮಾತಿಗೆ ನಿರ್ದೇಶಕ ಜೋಗಿ ಪ್ರೇಮ್ ಅವರೇ ಗುರು ಎಂದು  ಹೇಳಿದ ಅವರು, ಕ್ರಿಕೆಟ್ ಮೈದಾನದ ವಾತಾವರಣ ಹಾಗೂ ಕೌಟುಂಬಿಕ ಕಾರ್ಯಕ್ರಮದ ಬಗ್ಗೆ ಹೇಳಿದ್ದೇನು?

Read Full Story

09:37 PM (IST) Jan 29

ಬೆಂಗಳೂರು - ಫೆ.1ರಂದು ‘ಬ್ಯಾರಿ ಕೂಟ’ದ ಸಂಭ್ರಮ; 15 ಲಕ್ಷ ಮೌಲ್ಯದ ವಿದ್ಯಾರ್ಥಿ ವೇತನ ವಿತರಣೆ, ಆ್ಯಂಬ್ಯುಲೆನ್ಸ್ ಲೋಕಾರ್ಪಣೆ!

ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಭಾಗದ ಬ್ಯಾರಿ ಸಮುದಾಯವನ್ನು ಒಗ್ಗೂಡಿಸಲು 'ಬ್ಯಾರಿಸ್ ಸೆಂಟ್ರಲ್ ಕಮಿಟಿ'ಯು 'ಬ್ಯಾರಿ ಕೂಟ 2026' ಅನ್ನು ಆಯೋಜಿಸುತ್ತಿದೆ. ಫೆಬ್ರವರಿ 1, 2026 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಣೆ, ಆಂಬ್ಯುಲೆನ್ಸ್ ಲೋಕಾರ್ಪಣೆ.

Read Full Story

09:16 PM (IST) Jan 29

ನಿವೃತ್ತರ ಸರ್ಗದಿಂದ ಡ್ರಗ್ ತಯಾರಿಕರ ಸ್ವರ್ಗವಾಗುತ್ತಿರುವ ಮೈಸೂರು ನಗರ! ಎನ್‌ಸಿಬಿಯಿಂದ ಓರ್ವನ ಬಂಧನ

ಮೈಸೂರಿನ ಹೆಬ್ಬಾಳು ಪ್ರದೇಶದಲ್ಲಿ ಡ್ರಗ್ಸ್ ತಯಾರಿಕಾ ಘಟಕದ ಶಂಕೆಯ ಮೇಲೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗುಜರಾತ್ ಡ್ರಗ್ಸ್ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಓರ್ವನನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.  

Read Full Story

09:10 PM (IST) Jan 29

ರಿಶೆಲ್ ಡಿಸೋಜಾ ದುರಂತ ಸಾವು ಕೇಸ್, ಜೆಡಿಎಸ್ ಮುಖಂಡೆ ಪುತ್ರ ಚಿರಾಗ್ ಕೋಠಾರಕರ್ ಅರೆಸ್ಟ್

ರಿಶೆಲ್ ಡಿಸೋಜಾ ದುರಂತ ಸಾವು ಕೇಸ್, ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿತ್ತು. ರಿಶೆಲ್ ಸಾವಿಗೆ ಕಾರಣವಾಗಿದ್ದ ಆರೋಪಿ ಚಿರಾಗ್ ಕೋಠಾರಕರ್‌ನನ್ನು ಪೊಲೀಸರು 20 ದಿನಗಳ ಹುಡುಕಾಟದ ಬಳಿಕ ಅರೆಸ್ಟ್ ಮಾಡಿದ್ದಾರೆ.

Read Full Story

09:05 PM (IST) Jan 29

ಒಳ ನುಸುಳುವಿಕೆ ತಡೆಯದ ಕೇಂದ್ರ, ಪತ್ತೆ ಹಚ್ಚದ ರಾಜ್ಯ - ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪರಸ್ಪರ ದೂಷಣೆ!

ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿ ಸುಮಾರು 25 ಲಕ್ಷ ಅಕ್ರಮ ಬಾಂಗ್ಲಾ ನಿವಾಸಿಗಳಿದ್ದು, ಅವರಿಂದ ಭದ್ರತೆಗೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರವು ವಿಶೇಷ ತಂಡ ರಚಿಸುವ ಭರವಸೆ ನೀಡಿದೆ.

Read Full Story

08:23 PM (IST) Jan 29

ಲೋಕಾಯುಕ್ತರ ಭರ್ಜರಿ ಬೇಟೆ - ಅರಣ್ಯ ಇಲಾಖೆ ಅಧಿಕಾರಿ ಮನೆಯಲ್ಲಿ ಸಿಕ್ತು ಕೋಟಿ ಕೋಟಿ ಹಣ!

ಅರಣ್ಯ ಇಲಾಖೆಯ ಸಹಾಯಕ ಆಯುಕ್ತ ತೇಜಸ್ ಕುಮಾರ್ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಚಿತ್ರದುರ್ಗದ ರೆಸಾರ್ಟ್ ಸೇರಿದಂತೆ ಐದು ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅಧಿಕಾರಿಗಳು 26.55 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ, 8 ಐಷಾರಾಮಿ ಮನೆಗಳು ಮತ್ತು 16 ಎಕರೆ ಕೃಷಿ ಜಮೀನಿನ ದಾಖಲೆ ಪತ್ತೆ

Read Full Story

08:13 PM (IST) Jan 29

ಸುದೀಪ್​ ತಲೆ ಏರಿತು ಲೇಡೀಸ್​ ಹೇರ್​ ಕ್ಲಿಪ್! ಪುರುಷರಿಂದ ಭಾರಿ ಡಿಮಾಂಡು - ಇದೆಲ್ಲಿ ಸಿಗತ್ತೆ?

ಫ್ಯಾಷನ್ ಜಗತ್ತಿನಲ್ಲಿ ಹೆಣ್ಣು-ಗಂಡಿನ ವೇಷಭೂಷಣಗಳು ಅದಲು ಬದಲಾಗುತ್ತಿವೆ. ಹೆಣ್ಣುಮಕ್ಕಳು ಪುರುಷರ ಉಡುಪುಗಳನ್ನು ಅಳವಡಿಸಿಕೊಂಡರೆ, ಇದೀಗ ನಟ ಕಿಚ್ಚ ಸುದೀಪ್ ಅವರ ಹೊಸ ಹೇರ್ ಕ್ಲಿಪ್ ಸ್ಟೈಲ್ ಪುರುಷರಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದೆ. ಈ ಕ್ಲಿಪ್‌ಗಾಗಿ ಅವರ ಅಭಿಮಾನಿಗಳಿಂದ ಭಾರಿ ಬೇಡಿಕೆ ಶುರುವಾಗಿದೆ.
Read Full Story

08:13 PM (IST) Jan 29

ಬೆಂಗಳೂರು ರಸ್ತೆಯಲ್ಲಿ ವಿದೇಶಿಗನ ಹುಚ್ಚಾಟ, ಕೈಯಲ್ಲಿ ಸಿಗರೇಟ್, ತಲೆಯಲ್ಲಿ ಹೆಡ್‌ಸೆಟ್‌, ನೋ ಹೆಲ್ಮೆಟ್‌!

ಬೆಂಗಳೂರಿನ ಸಿಲ್ಕ್ ಬೋರ್ಡ್ ಫ್ಲೈಓವರ್ ಬಳಿ ವಿದೇಶಿಗನೊಬ್ಬ ಹೆಡ್‌ಫೋನ್ ಧರಿಸಿ, ಸಿಗರೇಟ್ ಸೇದುತ್ತಾ ಅಪಾಯಕಾರಿಯಾಗಿ ಬೈಕ್ ಚಲಾಯಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆಯು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಚಾರ ನಿಯಮ ಉಲ್ಲಂಘಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ.
Read Full Story

08:07 PM (IST) Jan 29

ರಿಯಲ್ ಆಗೋಯ್ತಾ 45 ಸಿನಿಮಾ ಕಥೆ..? ಅಜಿತ್ ಪವಾರ್ ಸಾವಿಗೂ- 45 ಚಿತ್ರಕ್ಕೂ ಲಿಂಕ್ ಇದ್ಯಾ?

45 ಸಿನಿಮಾ ತೆರೆಕಂಡು, ಓಟಿಟಿಗೂ ಎಂಟ್ರಿ ಕೊಟ್ಟಿದೆ. ಆದ್ರೆ ಈಗ ಅಜಿತ್ ಪವಾರ್ ಅಪಘಾತದಲ್ಲಿ ತೀರಿದ ಬಳಿಕ, 45 ಸಿನಿಮಾ ಬಗ್ಗೆ ಚರ್ಚೆಯಾಗ್ತಾ ಇದೆ. ಅದು ಕಾಕತಾಳಿಯವೇ ಅಥವಾ ನಿಜವೇ? ಪವಾರ್ ಅಪಘಾತಕ್ಕೂ 45 ಸಂಖ್ಯೆಗೂ ನಂಟಿದೆ. ಥೇಟ್ ಸಿನಿಮಾದ ದೃಶ್ಯದಂತೆ ಕಾಣ್ತಾ ಇದೆ ಈ ಸನ್ನಿವೇಶ..!

Read Full Story

07:47 PM (IST) Jan 29

ನಿಮ್ಹಾನ್ಸ್‌ ಆಸ್ಪತ್ರೆಗೆ ಅನಂತ್ ಸುಬ್ಬರಾವ್ ದೇಹದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ಹೋರಾಟಗಾರ!

ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಹಾಗೂ ಹಿರಿಯ ಕಾರ್ಮಿಕ ನಾಯಕ ಅನಂತ್ ಸುಬ್ಬರಾವ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬದುಕಿದ್ದಾಗ ಕಾರ್ಮಿಕರ ಹಕ್ಕಿಗಾಗಿ ಹೋರಾಡಿದ್ದ ಅವರು, ಸಾವಿನ ನಂತರವೂ  ಶರೀರವನ್ನು ನಿಮ್ಹಾನ್ಸ್‌ ಆಸ್ಪತ್ರೆಗೆ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.

Read Full Story

07:22 PM (IST) Jan 29

ಇಂಧನ ಇಲಾಖೆಯಲ್ಲಿ ವರ್ಗಾವಣೆಗೆ ಸಿಎಂ ಪುತ್ರ ಹಸ್ತಕ್ಷೇಪ, ಯಾವ ಸಚಿವರೂ ಕೂಡ ಸ್ವತಂತ್ರವಾಗಿ ಕೆಲಸ ಮಾಡುತ್ತಿಲ್ಲವೇ?

ಇಂಧನ ಇಲಾಖೆಯ ಅಧಿಕಾರಿಗಳ ವರ್ಗಾವಣೆಯಲ್ಲಿ ಮುಖ್ಯಮಂತ್ರಿ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ಮಾಡಿದ್ದಾರೆಂಬ ಕಾರಣಕ್ಕೆ ಸಚಿವ ಕೆ.ಜೆ. ಜಾರ್ಜ್ ಅಸಮಾಧಾನಗೊಂಡು ರಾಜೀನಾಮೆಗೆ ಮುಂದಾಗಿದ್ದರು ಎಂದು ವರದಿಯಾಗಿದೆ.  

Read Full Story

07:21 PM (IST) Jan 29

ಗ್ರಾಮ ಪಂಚಾಯತ್ ಸಮರಕ್ಕೆ ಮುಹೂರ್ತ ಫಿಕ್ಸ್? ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ಮಹತ್ವದ ಸೂಚನೆ!

Gram Panchayat Elections 2026 ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಲಿವೆ. 2026-31ನೇ ಸಾಲಿನ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರ ಅಧಿಕೃತ ಸೂಚನೆ ಹೊರಡಿಸಿದೆ

Read Full Story

07:02 PM (IST) Jan 29

ಬೆಂಗಳೂರು ಚೀಟಿ ವ್ಯವಹಾರ ಇತ್ಯರ್ಥಕ್ಕೆ ₹4 ಲಕ್ಷ ಲಂಚ ಬೇಡಿಕೆ; ಹಣ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್!

ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು, ಚೀಟಿ ವ್ಯವಹಾರದ ಪ್ರಕರಣವೊಂದನ್ನು ಇತ್ಯರ್ಥಪಡಿಸಲು ₹4 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಹಣ ಸಮೇತ ಆರೋಪಿ ಇನ್ಸ್‌ಪೆಕ್ಟರ್‌ನನ್ನು ಬಂಧಿಸಿದ್ದಾರೆ.

Read Full Story

06:55 PM (IST) Jan 29

ಬಾಗಲಕೋಟೆ - ಮೇಲ್ತಂತಿ ತಗುಲಿ ಧಗಧಗ ಹೊತ್ತಿ ಉರಿದ ಟ್ರ್ಯಾಕ್ಟರ್; ಕಣ್ಣೆದುರೇ ಸುಟ್ಟು ಕರಕಲಾಯ್ತು ಅನ್ನದಾತನ ಆಸ್ತಿ!

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಳಿ, ಕಬ್ಬಿನ ರವದಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಈ ದುರ್ಘಟನೆಯಲ್ಲಿ ಟ್ರ್ಯಾಕ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ವಿದ್ಯುತ್ ಇಲಾಖೆಯ ನಿರ್ಲಕ್ಷ್ಯವೇ ಈ ಅನಾಹುತಕ್ಕೆ ಕಾರಣ?

Read Full Story

06:46 PM (IST) Jan 29

ನೀವೇ 5 ವರ್ಷ ಸಿಎಂ ಆಗಿರಿ, ಆದ್ರೆ ಬಳ್ಳಾರಿ ರೌಡಿಸಂ ಮಟ್ಟಹಾಕಿ - ಸಿದ್ದರಾಮಯ್ಯಗೆ ಮನವಿ ಮಾಡಿದ ಜನಾರ್ದನ ರೆಡ್ಡಿ

ವಿಧಾನಸಭೆಯಲ್ಲಿ ಬಳ್ಳಾರಿ ಹಿಂಸಾಚಾರದ ಬಗ್ಗೆ ಮಾತನಾಡಿದ ಜನಾರ್ದನ ರೆಡ್ಡಿ, ಅಲ್ಲಿನ ಗನ್ ಮತ್ತು ಬಾಂಬ್ ಸಂಸ್ಕೃತಿಗೆ ಅಂತ್ಯ ಹಾಡಲು ಆಗ್ರಹಿಸಿದರು. ಸಿದ್ದರಾಮಯ್ಯನವರು ಪೂರ್ಣಾವಧಿ ಸಿಎಂ ಆಗಿ ಮುಂದುವರಿಯಲಿ ಎಂದರು. ಜೊತೆಗೆ, ಡಿಸಿಎಂ ವಿರುದ್ಧ ಹರಿಹಾಯ್ದು, ಪ್ರಕರಣದ ಸಿಬಿಐ ತನಿಖೆಗೆ ಒತ್ತಾಯಿಸಿದರು.

Read Full Story

06:35 PM (IST) Jan 29

ಗಂಡನಿಂದಲೇ ಸ್ವಾಟ್ ಕಮಾಂಡೋ ಆಗಿದ್ದ 24 ವರ್ಷದ ಗರ್ಭಿಣಿ ಪತ್ನಿಯ ಭೀಕರ ಹತ್ಯೆ - ಒಂದೂವರೆ ವರ್ಷದ ಮಗು ಅನಾಥ

4 ತಿಂಗಳ ಗರ್ಭಿಣಿಯಾಗಿದ್ದ ಸ್ವಾಟ್ ಕಮಾಂಡೋ ಆಗಿದ್ದ 24 ವರ್ಷದ ಮಹಿಳೆಯನ್ನು ಆಕೆಯ ಪತಿ ಡಂಬಲ್ಸ್‌ನಿಂದ ತಲೆಗೆ ಹೊಡೆದು ಕೊಂದಂತಹ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

Read Full Story

06:17 PM (IST) Jan 29

ಕೋಲಾರ - ತಂಗಿಯನ್ನು ನಿಂದಿಸಿದ್ದಕ್ಕೆ 5 ಬಾರಿ ದೂರು ಕೊಟ್ಟರೂ ಪೊಲೀಸರು ಕ್ಯಾರೇ ಅನ್ನಲಿಲ್ಲ ಅದಕ್ಕಾಗಿ ಕೊಂದೆ!

ಕೋಲಾರದ ಮೆಟ್ಟುಬಂಡೆ ಬಳಿ ನಡೆದ ಯಲ್ಲೇಶ್ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಆರೋಪಿ ಬಿಂದು ಕುಮಾರ್, ತನ್ನ ತಂಗಿಗೆ ಯಲ್ಲೇಶ್ ಕಿರುಕುಳ ನೀಡುತ್ತಿದ್ದ ಕಾರಣ, ತಾನೇ ಈ ಕೊಲೆ ಮಾಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಮೂಲಕ ತಪ್ಪೊಪ್ಪಿಕೊಂಡಿದ್ದಾನೆ.  

Read Full Story

05:57 PM (IST) Jan 29

ಪೆಂಗ್ವಿನ್ ಶೆಟ್ಟಿ! ವೃತ್ತಿಜೀವನದ ಉತ್ತುಂಗ, ಚಿತ್ರರಂಗದಿಂದ ಮಾಯ..! ಫೆ.26ಕ್ಕೆ ರಶ್ಮಿಕಾ ಕಲ್ಯಾಣ, ರಕ್ಷಿತ್‌ಗ್ಯಾವಾಗ ಕಂಕಣ ಬಲ?

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಒಂಟಿ ಪೆಂಗ್ವಿನ್ ಕಥೆಯನ್ನು ನಟ ರಕ್ಷಿತ್ ಶೆಟ್ಟಿಯವರ ಬದುಕಿಗೆ ಹೋಲಿಸಲಾಗುತ್ತಿದೆ. ಗುಂಪು ತೊರೆದು ತನ್ನದೇ ದಾರಿ ಹಿಡಿದ ಪೆಂಗ್ವಿನ್‌ನಂತೆ, ರಕ್ಷಿತ್ ಕೂಡ ತಮ್ಮ ವೃತ್ತಿ ಹಾಗೂ ವೈಯಕ್ತಿಕ ಜೀವನದಲ್ಲಿ ವಿಭಿನ್ನ ಹಾದಿ ಹಿಡಿದಿರುವುದೇ ಈ ಹೋಲಿಕೆಗೆ ಕಾರಣವಾಗಿದೆ.
Read Full Story

05:33 PM (IST) Jan 29

ದಿವ್ಯಾಂಗರ ಸಬಲೀಕರಣಕ್ಕೆ ಸರ್ಕಾರ ಮಾಸ್ಟರ್ ಪ್ಲಾನ್, ಬೃಹತ್ ಉದ್ಯೋಗ ಮೇಳಕ್ಕೆ ಸಜ್ಜು, ಸಚಿವ ಶರಣಪ್ರಕಾಶ್ ಪಾಟೀಲ್ ಮಹತ್ವದ ಘೋಷಣೆ

ಕರ್ನಾಟಕ ಸರ್ಕಾರವು ದಿವ್ಯಾಂಗರ ಸಬಲೀಕರಣಕ್ಕಾಗಿ ಮುಂದಿನ ಮೂರು ತಿಂಗಳೊಳಗೆ ಬೆಂಗಳೂರಿನಲ್ಲಿ ವಿಶೇಷ ಉದ್ಯೋಗ ಮೇಳವನ್ನು ಆಯೋಜಿಸಲಿದೆ. ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಘೋಷಿಸಿದರು.

Read Full Story

05:30 PM (IST) Jan 29

ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ - ಸರ್ಕಾರದ ಮಹತ್ವದ ಆದೇಶ

ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಶಾಲಾ ಶಿಕ್ಷಣ ಇಲಾಖೆಯು ಋತುಚಕ್ರ ರಜೆ ಸೌಲಭ್ಯವನ್ನು ಅಧಿಕೃತವಾಗಿ ಘೋಷಿಸಿದೆ. ಈ ಆದೇಶದ ಅನ್ವಯ, 18 ರಿಂದ 52 ವರ್ಷ ವಯಸ್ಸಿನ ಶಿಕ್ಷಕಿಯರು ಪ್ರತಿ ತಿಂಗಳು ಒಂದು ದಿನದ ರಜೆಯನ್ನು  ಪಡೆಯಬಹುದಾಗಿದೆ.

Read Full Story

05:22 PM (IST) Jan 29

ಮಾರತ್ತಹಳ್ಳಿ 'ಮಿನಿ ಆಂಧ್ರ' - ಯುವತಿಯ ವಿಡಿಯೋ ವೈರಲ್, ಕನ್ನಡಿಗರ ಕೆಂಗಣ್ಣು; 'ವಲಸೆ ನಿಯಂತ್ರಣ ಕಾಯ್ದೆ'ಗೆ ಒತ್ತಾಯ

ಮಾರತ್ತಹಳ್ಳಿಯಲ್ಲಿ ಶೇ.99 ರಷ್ಟು ಆಂಧ್ರದವರೇ ಇದ್ದೇವೆ, ಇದು 'ಮಿನಿ ಆಂಧ್ರ' ಎಂದು ಯುವತಿ ಹೇಳಿರುವ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ವಲಸೆ ನಿಯಂತ್ರಣ ಕಾಯ್ದೆ ಜಾರಿಗೆ ತರುವಂತೆ ಕನ್ನಡಿಗರು ಒತ್ತಾಯಿಸಿದ್ದಾರೆ.

Read Full Story

05:09 PM (IST) Jan 29

ಕೇಳದೇ ಇರೋರಿಗೆ ಬಿಟ್ಟಿ ಭಾಗ್ಯ ಕೊಡ್ತೀರಿ, ಎತ್ತುಗಳಿಗೆ ಯಾಕಿಲ್ಲ ಅನುದಾನ?- ಸರ್ಕಾರಕ್ಕೆ ಕನ್ನೇರಿ ಶ್ರೀ ನೇರ ಪ್ರಶ್ನೆ!

ವಿಜಯಪುರದ ಬಸವನ ಬಾಗೇವಾಡಿಯಲ್ಲಿ ನಡೆದ ಎತ್ತಿನ ಬಂಡಿ ಸಮಾವೇಶದಲ್ಲಿ, ಕನ್ನೇರಿ ಶ್ರೀಗಳು ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಕೃಷಿಯ ಆಧಾರಸ್ತಂಭಗಳಾದ ಎತ್ತು ಮತ್ತು ಆಕಳುಗಳ ಸಂರಕ್ಷಣೆಗೆ ವಿಶೇಷ ಅನುದಾನ ನೀಡುವಂತೆ ಮತ್ತು 'ನಂದಿ ಅಭಿಯಾನ'ವನ್ನು ಚುರುಕುಗೊಳಿಸುವಂತೆ ಆಗ್ರಹಿಸಿದರು.
Read Full Story

04:46 PM (IST) Jan 29

ಎನ್‌ಟಿಆರ್‌ಗೆ ಚಳ್ಳೆಹಣ್ಣು ತಿನ್ನಿಸಿದ ಕಥೆ - ಚಿರಂಜೀವಿ ಬ್ಲಾಕ್‌ಬಸ್ಟರ್ ಹಿಟ್ ಸಿನಿಮಾ ಯಾವುದು ಗೊತ್ತಾ?

ಕೆಲವು ಸಿನಿಮಾಗಳ ಹಿಂದಿನ ಕಥೆಗಳು ತುಂಬಾ ವಿಚಿತ್ರವಾಗಿರುತ್ತವೆ. ಸಣ್ಣ ಸಿನಿಮಾಗಳಾದರೂ ದೊಡ್ಡ ಹೀರೋಗಳಿಗೂ ಬೆವರಿಳಿಸುವ ಸಾಧ್ಯತೆ ಇರುತ್ತದೆ. ಮೆಗಾಸ್ಟಾರ್ ಚಿರಂಜೀವಿ ನಟಿಸಿದ ಬ್ಲಾಕ್‌ಬಸ್ಟರ್ ಚಿತ್ರದ ಕಥೆ, ಒಂದು ಕಾಲದಲ್ಲಿ ಎನ್‌ಟಿಆರ್‌ಗೆ ಚಳ್ಳೆಹಣ್ಣು ತಿನ್ನಿಸಿತ್ತು ಎಂಬುದು ನಿಮಗೆ ಗೊತ್ತಾ?

Read Full Story

04:40 PM (IST) Jan 29

ಸರ್ಕಾರಿ ನೌಕರರಿಗೆ ಇನ್ಮುಂದೆ 'ಖಾದಿ ಉಡುಪು' ಕಡ್ಡಾಯ; ಶಾಲಿನಿ ರಜನೀಶ್ ಸಭೆಯಲ್ಲಿ ಮಹತ್ವದ ತೀರ್ಮಾನ!

ರಾಜ್ಯ ಸರ್ಕಾರವು ಸ್ವದೇಶಿ ಪ್ರೇಮ ಉತ್ತೇಜಿಸಲು, ಪ್ರತಿ ತಿಂಗಳ ಮೊದಲ ಶನಿವಾರದಂದು ಸರ್ಕಾರಿ ನೌಕರರಿಗೆ ಖಾದಿ ಉಡುಪು ಧರಿಸುವುದು ಕಡ್ಡಾಯ. ಈ ಯೋಜನೆಯಡಿ ನೌಕರರಿಗೆ ಖಾದಿ ಖರೀದಿಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದ್ದು, ಸೇನಾ ಮಾದರಿಯಲ್ಲಿ 'ಸರ್ಕಾರಿ ನೌಕರರ ಕ್ಯಾಂಟೀನ್' ಸ್ಥಾಪಿಸುವ ಚಿಂತನೆಯೂ ಇದೆ.

Read Full Story

04:20 PM (IST) Jan 29

ಕೇವಲ 2 ನಿಮಿಷ 42 ಸೆಕೆಂಡ್ ಮಾತ್ರ ಮಾತನಾಡಿದ್ದು, ಮಿಕ್ಕಿದ್ದು ನಾನಲ್ಲ - ಅಶ್ಲೀಲ ಆಡಿಯೋ ಬಗ್ಗೆ ಶಿವರಾಮೇಗೌಡ ಸ್ಪಷ್ಟನೆ

ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ತಮ್ಮದೆಂದು ಹೇಳಲಾಗುತ್ತಿರುವ ವೈರಲ್ ಆಡಿಯೋವನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಇದು ತಮ್ಮ ತೇಜೋವಧೆ ಮಾಡುವ ಉದ್ದೇಶದಿಂದ ಎಐ ತಂತ್ರಜ್ಞಾನ ಬಳಸಿ ಕೃತಕವಾಗಿ ಸೃಷ್ಟಿಸಿದ ಆಡಿಯೋ ಎಂದು ಆರೋಪಿಸಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Read Full Story

04:07 PM (IST) Jan 29

ಖಾಕಿ ಪಡೆಗೆ ಭರ್ಜರಿ ಗಿಫ್ಟ್ - ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ 'ಸಾಂದರ್ಭಿಕ ರಜೆ' ಕೊಡಿ - ಡಿಜಿ ಸಲೀಂ ಆದೇಶ

ರಾಜ್ಯ ಪೊಲೀಸ್ ಇಲಾಖೆಯು ತನ್ನ ಸಿಬ್ಬಂದಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಇನ್ನು ಮುಂದೆ ಅವರ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದೊಂದಿಗೆ ಸಮಯ ಕಳೆಯಲು ಅನುಕೂಲವಾಗುವಂತೆ ಸಾಂದರ್ಭಿಕ ರಜೆ ನೀಡಲು ಮಹತ್ವದ ಆದೇಶ ಹೊರಡಿಸಿದೆ.

Read Full Story

04:06 PM (IST) Jan 29

ಮೊರಾರ್ಜಿ ದೇಶಾಯಿ ವಸತಿ ಶಾಲೆಯಲ್ಲಿ ಮೀಸೆ ಚಿಗುರದ ಮಕ್ಕಳ ಧಮ್ ಮಾರೋ ಧಮ್ - ವಿಡಿಯೋ ವೈರಲ್

ವಿಜಯಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳು ಸಾಮೂಹಿಕವಾಗಿ ಸಿಗರೇಟ್ ಸೇದುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಹಾಸ್ಟೆಲ್ ವಾರ್ಡನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

Read Full Story

03:30 PM (IST) Jan 29

ಲಕ್ಕುಂಡಿ ಉತ್ಖನನ - ನಾಗಮಣಿಯುಳ್ಳ 3 ತಲೆ ಸರ್ಪ ಶಿಲೆ ಪತ್ತೆ, ಬಂಗಾರದ ನಿಧಿಯತ್ತ ಸಮೀಪಿಸುತ್ತಿದೆಯೇ ಶೋಧಕಾರ್ಯ!

ಗದಗ ಜಿಲ್ಲೆಯ ಲಕ್ಕುಂಡಿಯ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಉತ್ಖನನದಲ್ಲಿ ಅಪರೂಪದ ಮೂರು ಹೆಡೆಯ ನಾಗರ ಹಾವಿನ ಶಿಲ್ಪ ಪತ್ತೆಯಾಗಿದೆ. ಹಸಿರು ಬಳಪದ ಕಲ್ಲಿನಲ್ಲಿ ಕೆತ್ತಲಾದ ಈ ಶಿಲ್ಪದಲ್ಲಿ 'ನಾಗಮಣಿ'ಯಂತಹ ರಚನೆಯಿದೆ.

Read Full Story

02:42 PM (IST) Jan 29

ಬೆಂಗಳೂರಿನ ಕೆಫೆಯಲ್ಲಿ ದೀರ್ಘಕಾಲ ಮೀಟಿಂಗ್‌ ಮಾಡ್ತೀರಾ? ಗಂಟೆಗೆ 1 ಸಾವಿರ ರೂಪಾಯಿ ಚಾರ್ಜ್‌, ವೈರಲ್‌ ಆದ ನೋಟಿಸ್‌!

Bengaluru Cafe Charges ₹1,000 Per Hour for Long Meetings ಸ್ಟಾರ್ಟ್‌ಅಪ್‌ ಕಲ್ಚರ್‌, ರಿಮೋಟ್‌ ವರ್ಕಿಂಗ್‌ ಹಾಗೂ ದೀರ್ಘ ಕಾಲದ ಕಾಫಿ ಮೀಟಿಂಗ್‌ಗಳಿಗೆ ಉದ್ಯಾನನಗರಿ ಬೆಂಗಳೂರು ಹೆಸರುವಾಸಿಯಾಗಿದೆ.

Read Full Story

02:37 PM (IST) Jan 29

ಸಿದ್ದರಾಮಯ್ಯ ಕುಟುಂಬ ಜಮೀನು ಕಳೆದುಕೊಂಡದ್ದರಿಂದ ಮುಡಾದಿಂದ ಸೈಟ್ ಪಡೆದರು, ವಿಜಯೋತ್ಸವದ ವೇಳೆ ಲಕ್ಷ್ಮಣ್ ಹೇಳಿಕೆ

ಮುಡಾ 50:50 ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ‘ಬಿ ರಿಪೋರ್ಟ್’ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು 'ಸತ್ಯಮೇವ ಜಯತೆ' ಎಂದು ವಿಜಯೋತ್ಸವ ಆಚರಿಸಿದರು.

Read Full Story

02:28 PM (IST) Jan 29

ಪ್ರೇಮ ವಿವಾಹ-ದುರಂತ ಜೀವನ; ಮನೆಯಲ್ಲಿ ಹೆಂಡತಿ ಸತ್ತರೂ, ಐಸಿಯುನಲ್ಲಿ ಎದ್ದು ಬರಲಾರದ ಸ್ಥಿತಿಯಲ್ಲಿರೋ ಗಂಡ!

ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಹಾಸನದ ದಂಪತಿ ಕೌಟುಂಬಿಕ ಕಲಹದಿಂದಾಗಿ ದುರಂತ ಅಂತ್ಯ ಕಂಡಿದ್ದಾರೆ. ಪತಿ ಮಾತ್ರೆ ಸೇವಿಸಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೆ, ಇದನ್ನು ಕಂಡು ಮನನೊಂದ ಪತ್ನಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

Read Full Story

01:51 PM (IST) Jan 29

ಸುಳ್ವಾಡಿ ವಿಷ ದುರಂತ ಪ್ರಕರಣ - ಆರೋಪಿ ಇಮ್ಮಡಿ ಮಹದೇವಸ್ವಾಮಿ‌ ಮಲೆ ಮಹದೇಶ್ವರ ಬೆಟ್ಟ ಪ್ರವೇಶ ನಿಷೇಧ

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಅವರಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿ ಹನೂರು ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ. 

Read Full Story

01:50 PM (IST) Jan 29

ಅತಿಯಾದ ಹಣದ ವ್ಯಾಮೋಹದಿಂದ ನೆಮ್ಮದಿ ಹಾಳು - ಕೃಷ್ಣ ಬೈರೇಗೌಡ

ಹೋಬಳಿಯ ಕಲ್ಲೇ ಸೋಮನಹಳ್ಳಿ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಲೋಕಾರ್ಪಣೆಗೊಳಿಸಿದರು. ಹಣ, ಅಧಿಕಾರದಿಂದ ಸಿಗದ ಮನಸ್ಸಿನ ನೆಮ್ಮದಿಯು ಕೇವಲ ದೇವಾಲಯಗಳಿಗೆ ಭೇಟಿ ನೀಡುವುದರಿಂದ ಮಾತ್ರ ಸಾಧ್ಯ ಎಂದು ಅವರು ಹೇಳಿದರು.

Read Full Story

01:27 PM (IST) Jan 29

ದಾವಣಗೆರೆ ಒಂದು ಮದುವೆ-ಎರಡು ಹೆಣ - ಪತಿ ಹಾಗೂ ಮಾವನ ಸಾವಿಗೆ ಕಾರಣರಾದ ಪತ್ನಿ, ಪ್ರಿಯಕರ ಅರೆಸ್ಟ್!

ದಾವಣಗೆರೆಯಲ್ಲಿ ನವವಿವಾಹಿತೆಯೊಬ್ಬಳು ಪ್ರಿಯಕರನೊಂದಿಗೆ ಓಡಿಹೋದ ಕಾರಣ, ಮನನೊಂದ ಆಕೆಯ ಪತಿ ಹಾಗೂ ಮದುವೆ ಮಾಡಿಸಿದ್ದ ಸೋದರಮಾವ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಈ ಜೋಡಿ ಆತ್ಮ*ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಮಹಿಳೆ ಮತ್ತು ಆಕೆ ಪ್ರಿಯಕರನನ್ನು ಬಂಧಿಸಿದ್ದಾರೆ.

Read Full Story

12:16 PM (IST) Jan 29

ಚಿನ್ನದ ದರ ಇಳಿಯಲೆಂದು ಹರಕೆ, ಮುನಿದ ಚಿನ್ನ ಒಲಿಯಲಿ - ದೇವಿಗೆ ಅಪರೂಪದ ಬೇಡಿಕೆ ಇಟ್ಟ ಭಕ್ತ!

ವಿಜಯನಗರ ಜಿಲ್ಲೆಯಲ್ಲಿ ಗಗನಕ್ಕೇರುತ್ತಿರುವ ಚಿನ್ನದ ದರ ಇಳಿಕೆಯಾಗಬೇಕೆಂದು ಭಕ್ತನೊಬ್ಬ ಚಿಮ್ನಳ್ಳಿ ದುರ್ಗಮ್ಮ ದೇವಿಗೆ ವಿಶಿಷ್ಟ ಹರಕೆ ಸಲ್ಲಿಸಿದ್ದಾನೆ. "ಚಿನ್ನದ ದರ ಇಳಿಯಲಿ, ಮುನಿದ ಚಿನ್ನ ಒಲಿಯಲಿ" ಎಂದು ಬಾಳೆಹಣ್ಣಿನ ಮೇಲೆ ಬರೆದು ದೇವಿಗೆ ಅರ್ಪಿಸುವ ಮೂಲಕ  ಪ್ರಾರ್ಥಿಸಿದ್ದಾನೆ.

Read Full Story

12:11 PM (IST) Jan 29

ಬಳ್ಳಾರಿ ಡಿವೈಎಸ್ಪಿ ವರ್ಗಾವಣೆ ಜಾಗಕ್ಕೆ ಬಂದ ಐಪಿಎಸ್ ಅಧಿಕಾರಿನ್ನೇ ವಾಪಸ್ ಕಳಿಸಿದ 'ರಾಜಕೀಯ ಪವರ್'!

ಬಳ್ಳಾರಿ ಬ್ಯಾನರ್ ಗಲಾಟೆ ಹಿನ್ನೆಲೆಯಲ್ಲಿ ವರ್ಗಾವಣೆಯಾಗಿದ್ದ ಡಿವೈಎಸ್ಪಿ ನಂದಾರೆಡ್ಡಿ, ರಾಜಕೀಯ ಪ್ರಭಾವದಿಂದ ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆಯಿದೆ. ಅಧಿಕಾರ ಸ್ವೀಕರಿಸಲು ಬಂದ ನೂತನ ಐಪಿಎಸ್ ಅಧಿಕಾರಿ, ಸರ್ಕಾರದ ಮೌಖಿಕ ಆದೇಶದ ಮೇರೆಗೆ ಅಧಿಕಾರ ವಹಿಸಿಕೊಳ್ಳದೆ ವಾಪಸ್ಸಾಗಿದ್ದಾರೆ ಎನ್ನಲಾಗುತ್ತಿದೆ.

Read Full Story

More Trending News