Published : Apr 02, 2025, 07:27 AM ISTUpdated : Apr 02, 2025, 11:19 PM IST

Karnataka News Live 2nd April: ನನ್ನ ಗೆಲುವಿನಲ್ಲಿ ಯಡಿಯೂರಪ್ಪ ಶ್ರಮವಿದೆ: ಸಂಸದ ಗೋವಿಂದ ಕಾರಜೋಳ

ಸಾರಾಂಶ

ಬೆಂಗಳೂರು (ಮಾ.11): ಗ್ಯಾರಂಟಿ ಬಿಸಿಯನ್ನು ರಾಜ್ಯ ಸರ್ಕಾರ ಈಗ ನೇರವಾಗಿ ಜನರಿಗೆ ವರ್ಗಾವಣೆ ಮಾಡಿದೆ. ಖಾಲಿಯಾಗಿರುವ ಸರ್ಕಾರದ ಬೊಕ್ಕಸವನ್ನು ಜನರಿಂದಲೇ ತುಂಬಿಸುವ ನಿಟ್ಟಿನಲ್ಲಿ ಹಾಲು, ವಿದ್ಯುತ್‌, ಬಸ್‌ ದರ ಏರಿಕೆಯ ಬಳಿಕ ಈಗ ಮತ್ತೊಂದು ಸುತ್ತಿನಲ್ಲಿ ಡೀಸೆಲ್‌ ದರವನ್ನು ಏರಿಕೆ ಮಾಡಿದೆ. ಖಜಾನೆಗೆ 2 ಸಾವಿರ ಕೋಟಿ ಆದಾಯ ಬರುವ ನಿರೀಕ್ಷೆಯಲ್ಲಿ ಡೀಸೆಲ್‌ ದರವನ್ನು ಇಂದಿನಿಂದಲೇ ಜಾರಿಗೆ ಬರುವಂತೆ 2 ರೂಪಾಯಿ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಅದರೊಂದಗೆ ಎಂದಿನಂತೆ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲೇ ಅಗ್ಗ ಎನ್ನುವ ಹಳೇ ಹೇಳಿಕೆಯನ್ನೇ ಸಮರ್ಥನೆಗೆ ಬಳಸಿಕೊಂಡಿದೆ.

Karnataka News Live 2nd April: ನನ್ನ ಗೆಲುವಿನಲ್ಲಿ ಯಡಿಯೂರಪ್ಪ ಶ್ರಮವಿದೆ: ಸಂಸದ ಗೋವಿಂದ ಕಾರಜೋಳ

11:19 PM (IST) Apr 02

ನನ್ನ ಗೆಲುವಿನಲ್ಲಿ ಯಡಿಯೂರಪ್ಪ ಶ್ರಮವಿದೆ: ಸಂಸದ ಗೋವಿಂದ ಕಾರಜೋಳ

ಎಲ್ಲರೂ ಸೇರಿ ಪ್ರಯತ್ನ ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ. ನನ್ನ ಗೆಲುವಿಗೆ ಎಲ್ಲ ಕಾರ್ಯಕರ್ತರು, ವರಿಷ್ಠರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು. 

ಪೂರ್ತಿ ಓದಿ

11:14 PM (IST) Apr 02

ಚಿಕ್ಕಮಗಳೂರು ಹಸಿರ ಕಾನನದಲ್ಲಿ ರಕ್ತದೋಕುಳಿ! ಮೂರು ಕೊಲೆ, ಒಂದು ಆತ್ಮಹತ್ಯೆಗೆ ಕಾರಣವಾದ ಹೆಂಡತಿ!

ಚಿಕ್ಕಮಗಳೂರಿನಲ್ಲಿ ರತ್ನಾಕರ್ ಎಂಬಾತ ತನ್ನ ಅತ್ತೆ, ಮಗಳು ಮತ್ತು ನಾದಿನಿಯನ್ನು ಗುಂಡಿಕ್ಕಿ ಕೊಂದಿದ್ದಾನೆ. ಹೆಂಡತಿ ಬಿಟ್ಟು ಹೋದ ನೋವಿನಿಂದ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದ್ದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೂರ್ತಿ ಓದಿ

11:06 PM (IST) Apr 02

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಬೆಲೆ ಏರಿಕೆ: ಮಾಜಿ ಶಾಸಕ ಎಲ್.ನಾಗೇಂದ್ರ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ ಎಂದು ಬಿಜೆಪಿ ನಗರಾಧಕ್ಷರಾದ ಮಾಜಿ ಶಾಸಕ ಎಲ್. ನಾಗೇಂದ್ರ ಕಿಡಿಕಾರಿದರು. 
 

ಪೂರ್ತಿ ಓದಿ

11:00 PM (IST) Apr 02

ರಂಜಾನ್‌ ಸಹಾಯಾರ್ಥ: ₹2.5 ಲಕ್ಷ ಖರ್ಚು ಮಾಡಿ ಬೋರ್‌ವೆಲ್ ಕೊರೆಸಿ 250 ಮಕ್ಕಳಿಗೆ ಕುಡಿಯುವ ನೀರು ಕೊಟ್ಟ ಶಿಕ್ಷಕಿಯರು!

ಚಿಕ್ಕಮಗಳೂರಿನ ಸರ್ಕಾರಿ ಶಾಲೆಯ ಶಿಕ್ಷಕಿಯರು ರಂಜಾನ್ ಹಬ್ಬದ ಸಂದರ್ಭದಲ್ಲಿ 2.5 ಲಕ್ಷ ರೂ. ಖರ್ಚು ಮಾಡಿ ಬೋರ್‌ವೆಲ್ ಕೊರೆಸಿ ವಿದ್ಯಾರ್ಥಿಗಳ ನೀರಿನ ಸಮಸ್ಯೆಯನ್ನು ಪರಿಹರಿಸಿದ್ದಾರೆ. ಮೂರು ವರ್ಷಗಳಿಂದ ನೀರಿನ ತೊಂದರೆಯಿಂದ ಬಳಲುತ್ತಿದ್ದ ಮಕ್ಕಳಿಗೆ ಶಿಕ್ಷಕಿಯರ ಈ ಕಾರ್ಯವು ಸಹಾಯವಾಗಿದೆ. ಇದಕ್ಕೂ ಶಾಲೆ ಮಕ್ಕಳು ಅನುಭವಿಸಿ ಸಂಕಷ್ಟ ಒಮ್ಮೆ ನೋಡಿ..

ಪೂರ್ತಿ ಓದಿ

10:44 PM (IST) Apr 02

ಡೋನಾಲ್ಡ್ ಟ್ರಂಪ್ ಸರ್ಕಾರದಿಂದ ಶೀಘ್ರದಲ್ಲೇ ಎಲಾನ್ ಮಸ್ಕ್ ಹೊರಕ್ಕೆ?

ಡೋನಾಲ್ಡ್ ಟ್ರಂಪ್ ಸರ್ಕಾರದ DOGE ಹುದ್ದೆಯಲ್ಲಿದ್ದ ಆಪ್ತ ಎಲಾನ್ ಮಸ್ಕ್‌ಗೆ ಕೊಕ್ ನೀಡಲಾಗುತ್ತಿದೆಯಾ? ಹೌದು ಎನ್ನುತ್ತಿದೆ ಸರ್ಕಾರದ ಮೂಲಗಳು. ಕಾರಣವೇನು?

ಪೂರ್ತಿ ಓದಿ

10:40 PM (IST) Apr 02

ಇ-ಖಾತೆ ಮಾಡಿಸಲು ಮಧ್ಯವರ್ತಿಗಳ ಹಾವಳಿ: ಎಚ್.ಡಿ.ರೇವಣ್ಣ ಕಿಡಿ

ಪುರಸಭೆ ವ್ಯಾಪ್ತಿಯಲ್ಲಿ 18 ವಾರ್ಡ್‌ಗಳನ್ನು ಸ್ಲಂ ಬೋರ್ಡ್ ವ್ಯಾಪ್ತಿಗೆ ಒಳಪಡಿಸಿ, ಬಡವರ ಏಳಿಗೆಗೆ ಶ್ರಮಿಸಲಾಗಿದೆ. ಇತ್ತೀಚಿಗೆ ಈ ಖಾತೆ ಮಾಡಿಸಲು ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ದೂರುಗಳು ಬರುತ್ತಿದ್ದು, ಇದೇ ರೀತಿಯಾದರೇ ಲೋಕಾಯುಕ್ತಕ್ಕೆ ದೂರು ನೀಡಿ, ಅಗತ್ಯ ಕ್ರಮಕ್ಕೆ ಸೂಚಿಸುತ್ತೇವೆ. 

ಪೂರ್ತಿ ಓದಿ

10:16 PM (IST) Apr 02

ಶ್ರೀಲಂಕಾದ ಸಮುದ್ರ ಪಾಲಾದ ಸೈಕೋ ಜಯಂತನ ಚಿನ್ನುಮರಿ! ಗಂಡನಿಗೆ ಬುದ್ಧಿ ಕಲಿಸದ ಜಾಹ್ನವಿ ಸಾವು ನ್ಯಾಯವೇ?

ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ, ಸೈಕೋ ಗಂಡನ ಕಿರುಕುಳ ತಾಳಲಾರದೆ ಚಿನ್ನುಮರಿ ಸಮುದ್ರಕ್ಕೆ ಹಾರಿದ್ದಾಳೆ. ಆಕೆ ಬದುಕಿದ್ದಾಳೋ, ಸತ್ತಳೋ ಎಂಬುದು ತಿಳಿದಿಲ್ಲ. ಆದರೆ ಜಯಂತ್ ಹುಚ್ಚನಂತೆ ವರ್ತಿಸುತ್ತಿದ್ದಾನೆ.

ಪೂರ್ತಿ ಓದಿ

09:44 PM (IST) Apr 02

ರತನ್ ಟಾಟಾ ಮುದ್ದಿನ ನಾಯಿ ಖರ್ಚಿಗೆ ಲಕ್ಷ ಲಕ್ಷ ರೂ, ವಿಲ್‌ನಲ್ಲಿ ಹೃದಯಶ್ರೀಮಂತಿಗೆ ಮೆರೆದ ಉದ್ಯಮಿ

ರತನ್ ಟಾಟಾ ಬಿಟ್ಟು ಹೋದ ಸುಮಾರು 3,800 ಕೋಟಿ ರೂಪಾಯಿ ಆಸ್ತಿಯನ್ನು ಯಾರಿಗೆಲ್ಲಾ ಹಂಚಿಕೆ ಮಾಡಿದ್ದಾರೆ ಅನ್ನೋ ವಿವರ ಹಲವರು ಕಣ್ಣಾಲಿ ತೇವಗೊಳಿಸಿದೆ. ಈ ಆಸ್ತಿಯ ಪಾಲಿನಲ್ಲಿ ರತನ್ ಟಾಟಾ ಮುದ್ದಿನ ನಾಯಿ ಟಿಟೂಗೆ ಲಕ್ಷ ಲಕ್ಷ ರೂಪಾಯಿ ತೆಗೆದಿಟ್ಟಿದ್ದಾರೆ. ಇದರ ತಿಂಗಳ ಖರ್ಚಿಗೆ ಎಷ್ಟು ರೂಪಾಯಿ ಇದೆ ಗೊತ್ತಾ?

ಪೂರ್ತಿ ಓದಿ

09:40 PM (IST) Apr 02

ಪರ್ಯಾಯ ರಾಜಕೀಯ ವ್ಯವಸ್ಥೆ ರೂಪುಗೊಳ್ಳುವುದು ಅನಿವಾರ್ಯ: ನಟ ಚೇತನ್ ಅಹಿಂಸಾ

ಪರ್ಯಾಯ ರಾಜಕೀಯ ವ್ಯವಸ್ಥೆ ರೂಪುಗೊಳ್ಳುವುದು ಅನಿವಾರ್ಯ. ಪ್ರಸ್ತುತ ಪರ್ಯಾಯವಾದ ರಾಜಕೀಯ ವ್ಯವಸ್ಥೆ ಕಟ್ಟುವ ಅವಶ್ಯಕತೆ ಇದೆ. ಸಮ ಸಮಾಜಕ್ಕಾಗಿ ರಾಜಕೀಯ ಚಳವಳಿ ಆರಂಭವಾಗಬೇಕಿದೆ ಎಂದು ಸಾಮಾಜಿಕ ಹೋರಾಟಗಾರ, ನಟ ಅಹಿಂಸಾ ಚೇತನ್ ತಿಳಿಸಿದರು. 
 

ಪೂರ್ತಿ ಓದಿ

09:24 PM (IST) Apr 02

ಧಾರವಾಡ ನೀರಾವರಿ ನಿಗಮದ ಇಂದುಮತಿ ಕಾಂಬಳೆ ಇನ್ನಿಲ್ಲ! ಬಸ್‌ನಲ್ಲಿ ಪ್ರಯಾಣಿಸುವಾಗ ಹಾರ್ಟ್ ಅಟ್ಯಾಕ್

ಧಾರವಾಡದಲ್ಲಿ ನೀರಾವರಿ ನಿಗಮದ ಇಂದುಮತಿ ಕಾಂಬಳೆ ಎಂಬ ಬಸ್‌ನಲ್ಲಿ ಪ್ರಯಾಣಿಸುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಘಟನೆ ಬಸ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅವರು ಕುಳಿತಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.

ಪೂರ್ತಿ ಓದಿ

09:21 PM (IST) Apr 02

ಹನಿಟ್ರ್ಯಾಪ್ ಪ್ರಕರಣ.. ಯಾವ ತನಿಖೆ ಮಾಡುತ್ತಾರೋ ಮಾಡಲಿ: ಸಚಿವ ಕೆ.ಎನ್.ರಾಜಣ್ಣ

ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ಕೊಡುತ್ತಾರೋ ಮತ್ತೊಂದು ಮಾಡುತ್ತಾರೋ  ಮಾಡಲಿ. ಅದು ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಬಿಟ್ಟದ್ದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. 

ಪೂರ್ತಿ ಓದಿ

09:20 PM (IST) Apr 02

ಆರಂಭದಲ್ಲಿ ಆರ್‌ಸಿಬಿ ಸೈಲೆಂಟ್ ಬಳಿಕ ವೈಲೆಂಟ್, ಗುಜರಾತ್‌ಗೆ 169 ರನ್ ಟಾರ್ಗೆಟ್

ಗುಜರಾತ್ ಟೈಟಾನ್ಸ್ ವಿರುದ್ದ ಆರ್‌ಸಿಬಿ ಆರಂಭದಲ್ಲಿ ಸೈಲೆಂಟ್ ಆಗಿದ್ದು ಬಳಿಕ ಅಬ್ಬರಿಸಿದೆ. ಈ ಮೂಲಕ 169 ರನ್ ಸಿಡಿಸಿದೆ. ಇದೀಗ ಈ ಅಲ್ಪ ಟಾರ್ಗೆಟನ್ನು ಆರ್‌ಸಿಬಿ ಡಿಫೆಂಡ್ ಮಾಡಿಕೊಳ್ಳುತ್ತಾ?

ಪೂರ್ತಿ ಓದಿ

09:03 PM (IST) Apr 02

ಶಾಸಕ ಯತ್ನಾಳ ಬಗ್ಗೆ ಹೈಕಮಾಂಡ್‌ನಿಂದ ಸಕಾಲದಲ್ಲಿ ತೀರ್ಮಾನ: ಬಿ.ಶ್ರೀರಾಮುಲು

ಬಿಜೆಪಿಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ವಿಚಾರದಲ್ಲಿ ಪಕ್ಷದ ಹೈಕಮಾಂಡ್‌ ಸೂಕ್ತ ಸಂದರ್ಭದಲ್ಲಿ, ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. 

ಪೂರ್ತಿ ಓದಿ

08:52 PM (IST) Apr 02

ಶಾಸಕ ಯತ್ನಾಳ್ ಆರೋಪಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ: ಬಿ.ವೈ.ವಿಜಯೇಂದ್ರ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಳ ಫ್ರೀಯಾಗಿದ್ದಾರೆ. ಅವರು ಏನೇ ಆರೋಪ ಮಾಡಲಿ, ದಾಳಿ ಮಾಡಲಿ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. 

ಪೂರ್ತಿ ಓದಿ

08:45 PM (IST) Apr 02

ರೈತರ ಬಹುದಿನಗಳ ಕನಸು ನನಸು: ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಕಳೆದ 25 ವರ್ಷಗಳಿಂದ ಈ ಭಾಗದ ರೈತರು ನೀರಾವರಿ ಯೋಜನೆಗಳ ಬಗ್ಗೆ ಅತೀ ಆಶಯ ಹೊಂದಿದ್ದರು. ಅದರಂತೆಯೇ ಈಗ ಅವರ ಆಶಯ ಈಡೇರಿದ್ದು, ಸತ್ತಿಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರುವ ಮೂಲಕ ಅವರ ಕನಸು ಸಾಕಾರಗೊಳ್ಳುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. 

ಪೂರ್ತಿ ಓದಿ

08:24 PM (IST) Apr 02

ಮಂಗಳೂರು ಹೈಟೆಕ್‌ ವೇಶ್ಯಾವಾಟಿಕೆ ಪ್ರಕರಣ, 17 ಆರೋಪಿಗಳು ಖುಲಾಸೆ!

ಮಂಗಳೂರಿನ ಅತ್ತಾವರದಲ್ಲಿ 2022ರಲ್ಲಿ ನಡೆದ ವೇಶ್ಯಾವಾಟಿಕೆ ಪ್ರಕರಣದ 17 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯ ಖುಲಾಸೆಗೊಳಿಸಿದೆ. ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದರೂ, ಪ್ರಮುಖ ಸಾಕ್ಷಿಗಳು ಹಾಜರಾಗದ ಕಾರಣ ಆರೋಪಿಗಳು ಖುಲಾಸೆಯಾಗಿದ್ದಾರೆ.

ಪೂರ್ತಿ ಓದಿ

08:21 PM (IST) Apr 02

ಈ ಫೋಟೋದಲ್ಲಿರುವ ಬಿಗ್ ಬಾಸ್ ವಿನ್ನರ್ ಯಾರು? ಚಾಣಾಕ್ಷರಾಗಿದ್ದರೆ 5 ಸೆಕೆಂಡ್‌ನಲ್ಲಿ ಗೆಸ್ ಮಾಡಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಎಐ ಘಿಬ್ಲಿ ಇಮೇಜ್‌ನಲ್ಲಿರುವ ವ್ಯಕ್ತಿ ಕನ್ನಡ ಕಿರುತೆರೆಯ ಬಿಗ್ ಬಾಸ್ ವಿನ್ನರ್ ಯಾರೆಂದು ಗೆಸ್ ಮಾಡಿ..

ಪೂರ್ತಿ ಓದಿ

08:09 PM (IST) Apr 02

ನಟಿ ರನ್ಯಾ ರಾವ್ ಚಿನ್ನದ ಕೇಸ್‌, ಬಂಧಿತ ಸಾಹಿಲ್ ಜೈನ್‌ಗೆ ನ್ಯಾಂಯಾಂಗ ಬಂಧನ

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತನಾಗಿದ್ದ ಸಾಹಿಲ್ ಜೈನ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರನ್ಯಾ ಚಿನ್ನ ಸಾಗಣೆಗೆ ಸಹಾಯ ಮಾಡಿದ್ದ ಆರೋಪ ಸಾಹಿಲ್ ಮೇಲಿದೆ.

ಪೂರ್ತಿ ಓದಿ

08:05 PM (IST) Apr 02

ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರ ತುಷ್ಟೀಕರಣ: ಮಾಜಿ ಸಂಸದ ಎಸ್.ಮುನಿಸ್ವಾಮಿ

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಮುಸ್ಲಿಮರ ತುಷ್ಟೀಕರಣ, ಹಾಲು, ವಿದ್ಯುತ್, ಪ್ರಯಾಣ, ಮುದ್ರಾಂಕ ದರ ಏರಿಕೆ, ಪರಿಶಿಷ್ಟರ ಹಣ ದುರ್ಬಳಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. 

ಪೂರ್ತಿ ಓದಿ

07:40 PM (IST) Apr 02

ಶಾಸಕ ಯತ್ನಾಳ್‌ ಕಾಂಗ್ರೆಸ್‌ಗೆ ಸೂಟ್ ಆಗಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬಿಜೆಪಿಯ ಉಚ್ಚಾಟಿತ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಹೊಸ ಪಕ್ಷ ಕಟ್ಟುವುದು ಶುದ್ಧ ಸುಳ್ಳು. ಒಂದೇ ವರ್ಷದಲ್ಲಿ ಮರಳಿ ಗೂಡಿಗೆ ಬರುತ್ತಾರೆ. ಅವರ ಸಿದ್ಧಾಂತ, ಹೋರಾಟ ಬಿಜೆಪಿಗೇ ಸೂಟ್ ಆಗುತ್ತದೆ. 

ಪೂರ್ತಿ ಓದಿ

07:33 PM (IST) Apr 02

ಶಾಸಕ ಯತ್ನಾಳ ವಿಚಾರದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ: ಸಂಸದ ಜಗದೀಶ್ ಶೆಟ್ಟರ್‌

ಕಳೆದ ಒಂದು ವರ್ಷದ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆ ಗಮನಿಸಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿಚಾರದಲ್ಲಿ ಪಕ್ಷದ ಹೈಕಮಾಂಡ್‌ ಅಂತಿಮ ನಿರ್ಧಾರ ಕೈಗೊಂಡಿದೆ. ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ ಹೇಳಿದರು. 
 

ಪೂರ್ತಿ ಓದಿ

07:28 PM (IST) Apr 02

ರಾಜಕಾರಣದಲ್ಲಿ ಏನು ಬೇಕಾದರೂ ಆಗ್ಬಹುದು: ಮುರುಗೇಶ ನಿರಾಣಿ

ರಾಜಕಾರಣದಲ್ಲಿ ಏನು ಬೇಕಾದರೂ ಆಗ್ತದ, ಯಾವತ್ತೂ ಸೂರ್ಯ ಪೂರ್ವಕ್ಕೆ ಹುಟ್ಟೋದು ನಿಸರ್ಗ ನಿಯಮ. ಆದ್ರೆ ರಾಜಕಾರಣದಲ್ಲಿ ಏನು ಬೇಕಾದರೂ ಆಗುತ್ತದೆ. ಇಲ್ಲಿ ಯಾವತ್ತೂ ಮೆಥಾಮೆಟಿಕ್ಸ್ ಅಪ್ಲೈ ಆಗಲ್ಲ. ಏನೇ ಇದ್ದರೂ ಅದು ಕೆಮಿಷ್ಟ್ರಿ, ಟು ಪ್ಲಸ್ ಟು ಫೋರ್ ಆಗಬಹುದು. 

ಪೂರ್ತಿ ಓದಿ

07:19 PM (IST) Apr 02

ಗುಜರಾತ್ ವಿರುದ್ಧ ಆರ್‌ಸಿಬಿ ಟಾಸ್ ಸೋತಿದ್ದೇ ಒಳ್ಳೇದಾಯ್ತಾ? ಪ್ಲೇಯಿಂಗ್ 11 ಬದಲಾವಣೆ ಏನು?

ಗುಜರಾತ್ ಟೈಟಾನ್ಸ್ ವಿರುದ್ದ ಆರ್‌ಸಿಬಿ ಟಾಸ್ ಸೋತಿದೆ. ಆದರೆ ಇದರಿಂದ ತಂಡಕ್ಕಿದೆಯಾ ಲಾಭ? ಪ್ಲೇಯಿಂಗ್ 11ನಲ್ಲಿ ಯಾರು ಸ್ಥಾನ ಪಡೆದಿದ್ದಾರೆ?

ಪೂರ್ತಿ ಓದಿ

07:06 PM (IST) Apr 02

ಶೀಘ್ರದಲ್ಲೇ ಅಬುಧಾಬಿ ವಿಶ್ವದ ಮೊದಲ ಸಂಪೂರ್ಣ AI ಚಾಲಿತ ಸರ್ಕಾರ, ಏನಿದು ಎಐ ನೇಟೀವ್ ಸಿಟಿ?

ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಎಲ್ಲಾ ಕ್ಷೇತ್ರದಲ್ಲಿ ಬಳಕೆಯಾಗುತ್ತಿದೆ. ಆದರೆ ಅಬುಧಾಬಿ ಎಲ್ಲರಿಗಿಂತ ಹಲವು ಹೆಜ್ಜೆ ಮುಂದಿದೆ. ಕಾರಣ ಅಬುಧಾಬಿ ಶೀಘ್ರದಲ್ಲೇ ಸಂಪೂರ್ಣ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಚಾಲಿತ ಸರ್ಕಾರ ಹಾಗೂ ಆಡಳಿತಕ್ಕೆ ಸಾಕ್ಷಿಯಾಗುತ್ತಿದೆ. ಏನಿದು ನೇಟೀವ್ ಎಐ ಸಿಟಿ?

ಪೂರ್ತಿ ಓದಿ

06:55 PM (IST) Apr 02

Uber for Teens ಟೀನೆಜ್ ಮಕ್ಕಳ ಸುರಕ್ಷತೆಗಾಗಿ ಹೊಸ ಸೇವೆ ಆರಂಭಿಸಿದ ಊಬರ್‌!

Uber ಭಾರತದಲ್ಲಿ 13-17 ವರ್ಷ ವಯಸ್ಸಿನ ಮಕ್ಕಳಿಗಾಗಿ 'Uber for Teens' ಸೇವೆಯನ್ನು ಪ್ರಾರಂಭಿಸಿದೆ. ಇದು ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸುರಕ್ಷಿತ ಸಾರಿಗೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. GPS ಟ್ರ್ಯಾಕಿಂಗ್ ಮತ್ತು ತುರ್ತು ಬಟನ್‌ನಂತಹ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಪೂರ್ತಿ ಓದಿ

06:38 PM (IST) Apr 02

ರೀಲ್ಸ್ ಮಾಡ್ತಿದ್ದ ಹುಡುಗಿಯ ಕೂದಲು ಹಿಡಿದು ಎಳೆದಾಡಿದ ಕೋತಿ: ವೀಡಿಯೋ ವೈರಲ್

ಯುವತಿಯೊಬ್ಬಳು ರೀಲ್ಸ್ ಮಾಡುತ್ತಿದ್ದಾಗ ಕೋತಿಯೊಂದು ಆಕೆಯ ಕೂದಲನ್ನು ಹಿಡಿದು ಎಳೆದಾಡಿದ ವಿಡಿಯೋ ವೈರಲ್ ಆಗಿದೆ. ಟ್ರೆಂಡಿಂಗ್ ಹಾಡಿಗೆ ರೀಲ್ಸ್ ಮಾಡಲು ಮುಂದಾದಾಗ ಈ ಘಟನೆ ನಡೆದಿದೆ.

ಪೂರ್ತಿ ಓದಿ

06:34 PM (IST) Apr 02

ಕಾಂಗ್ರೆಸ್‌ನಿಂದ ಬೆಲೆ ಏರಿಕೆ ಲೂಟಿ; ರೈತರಿಗೆ ರಿಲೀಫ್ ಕೊಟ್ಟ ಕೇಂದ್ರದ ವಕ್ಫ್ ಕಾಯ್ದೆ ತಿದ್ದುಪಡಿ: ಆರ್. ಅಶೋಕ

ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮೂಲಕ ಲೂಟಿ ಮಾಡುತ್ತಿದೆ ಎಂದು ಆರ್. ಅಶೋಕ ಆರೋಪಿಸಿದ್ದಾರೆ. ಐದು ಗ್ಯಾರಂಟಿಗಳಿಗಾಗಿ ಮನೆ ಮನೆ ಲೂಟಿ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪೂರ್ತಿ ಓದಿ

06:15 PM (IST) Apr 02

ಮುಂದೂಡಿದ್ರಾ ರಿಷಬ್ ಶೆಟ್ಟಿ ಕಾಂತಾರಾ 1 ಬಿಡುಗಡೆ ? ಚಿತ್ರತಂಡದಿಂದ ಮಹತ್ವದ ಅಪ್‌ಡೇಟ್

ರಿಷಬ್ ಶೆಟ್ಟಿ ಕಾಂತಾರ 1 ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಮತ್ತೊಮ್ಮೆ ಪ್ಯಾನ್ ಇಂಡಿಯಾ ಮೂಲಕ ಅಬ್ಬರ ನೋಡಲು ಸ್ಯಾಂಡಲ್‌ವುಡ್ ಕೂಡ ಸಜ್ಜಾಗಿದೆ. ಇದರ ನಡುವೆ ಕಾಂತಾರ 1 ಸಿನಿಮಾ ಬಿಡುಗಡೆ ಮುಂದೂಡಲಾಗುತ್ತಿದೆ ಅನ್ನೋ ಮಾತುಗಳು ಕೇಳಿಬಂದಿದೆ. ಇದಕ್ಕೆ ಚಿತ್ರತಂಡ ಮಹತ್ವದ ಅಪ್‌ಡೇಟ್ ನೀಡಿದೆ.

ಪೂರ್ತಿ ಓದಿ

05:49 PM (IST) Apr 02

ಇನ್ಮುಂದೆ ಕರ್ನಾಟಕದಲ್ಲಿ ಓಲಾ ಊಬರ್ ರ್ಯಾಪಿಡೊ ಬೈಕ್‌ ಸೇವೆ ಬಂದ್‌! ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರಿನಲ್ಲಿ ಓಲಾ, ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆರು ವಾರಗಳಲ್ಲಿ ಈ ಸೇವೆಗಳನ್ನು ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಪೂರ್ತಿ ಓದಿ

05:21 PM (IST) Apr 02

ನಮಗೆ ಕಾಣದ ಭೂಮಿಯ ಪೋಲ್ಸ್ ಬಾಹ್ಯಾಕಾಶದಿಂದ ಹೇಗೆ ಕಾಣುತ್ತೆ? ಅದ್ಭುತ ವಿಡಿಯೋ ಸೆರೆ

ಎಲಾನ್ ಮಸ್ಕ್ ಸ್ಪೇಸ್ ಎಕ್ಸ್ ಮಿಶನ್ ಸೆರೆ ಹಿಡಿದ ವಿಡಿಯೋ ಇದೀಗ ಹಲವು ಕುತೂಹಲ ಹುಟ್ಟು ಹಾಕಿದೆ. ಭೂಮಿಯ ಪೋಲ್ಸ್ ಬಾಹ್ಯಾಕಾಶದಿಂದ ಹೇಗೆ ಕಾಣುತ್ತೆ? ಈ ವಿಡಿಯೋ ಇದೀಗ ಬಾರಿ ಸಂಚಲನ ಸೃಷ್ಟಿಸಿದೆ. 

ಪೂರ್ತಿ ಓದಿ

05:17 PM (IST) Apr 02

ಗೆಳತಿಗೆ ವಂಚಿಸಿ, ತಲೆ ತಗ್ಗಿಸಿದ ಕೊರಿಯನ್ ಮಹಾನ್ ನಟ ಬೀದಿಗೆ, ಇಲ್ಲಿ ಮೆರೆಯುತ್ತಿರೋ ಸ್ಟಾರ್ ನಟ! ಶೋಭಾ ಮಳವಳ್ಳಿ ಬರಹ!

ತಪ್ಪು ಮಾಡಿದ ನಟನನ್ನು ಕೊರಿಯಾ ಜನತೆ ಯಾವ ಮಟ್ಟಕ್ಕೆ ತಂದು ಕೂರಿಸಿದೆ ಎನ್ನೋದಕ್ಕೆ ಕಿಮ್‌ ಉದಾಹರಣೆ. 

ಪೂರ್ತಿ ಓದಿ

05:15 PM (IST) Apr 02

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿಂದು ಅಪರೂಪದ ದಾಖಲೆ ಬರೆಯಲು ವಿರಾಟ್ ಕೊಹ್ಲಿ ರೆಡಿ

RCB ಮತ್ತು GT ನಡುವಿನ ಪಂದ್ಯದಲ್ಲಿ ಕೊಹ್ಲಿ 24 ರನ್ ಗಳಿಸಿದರೆ ಟಿ20 ಕ್ರಿಕೆಟ್‌ನಲ್ಲಿ 13,000 ರನ್ ಗಳಿಸಿದ ಮೊದಲ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ, ಅತಿವೇಗವಾಗಿ ಈ ಸಾಧನೆ ಮಾಡಿದ ವಿಶ್ವದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ.

ಪೂರ್ತಿ ಓದಿ

04:55 PM (IST) Apr 02

ಗಂಡು ಮಗುವಿಗ ಜನ್ಮ ನೀಡಿದ ಕಾಲೇಜು ವಿದ್ಯಾರ್ಥಿನಿ: 17ರ ಪ್ರಾಯದ ಗೆಳೆಯನ ಬಂಧನ

ಕೇರಳದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದು, ಆಕೆಯ ಸಹಪಾಠಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೂರ್ತಿ ಓದಿ

04:46 PM (IST) Apr 02

ಆರಂಭಿಸಿದ ಎರಡೇ ದಿನಕ್ಕೆ 10 ಕೋಟಿ ರೂ ಹೂಡಿಕೆ ಆಕರ್ಷಿಸಿದ ಕುಶಾ ಕಪಿಲಾ ಅಂಡರ್‌ನೀಟ್ ಬ್ರ್ಯಾಂಡ್

ಇನ್‌ಫ್ಲುಯೆನ್ಸ್ ಕುಶಾ ಕಪಿಲಾ ಅವರ ಜನಪ್ರಿಯ ಅಂಡರ್‌ನೀಟ್ ಬ್ರ್ಯಾಂಡ್ ಮೇಲೆ ಇದೀಗ ವಿಶ್ವದದ ಜನಪ್ರಿಯ ಫೈರ್‌ಸೈಡ್ ಹಾಗೂ ಮಾಮಾಅರ್ಥ್ ಹೂಡಿಕೆ ಮಾಡಿದೆ. ಬರೋಬ್ಬರಿ 8 ರಿಂದ 10 ಕೋಟಿ ರೂಪಾಯಿ ವರೆಗೆ ಸೀಡ್ ಫಂಡಿಂಗ್ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.

ಪೂರ್ತಿ ಓದಿ

04:29 PM (IST) Apr 02

KSDL ದಾಖಲೆ ವಹಿವಾಟು: ಮೈಸೂರು ಸ್ಯಾಂಡಲ್ ಫ್ಯಾಕ್ಟರಿಗೆ 416 ಕೋಟಿ ರೂ. ಲಾಭ!

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ವಹಿವಾಟು ಮತ್ತು 416 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಸಂಸ್ಥೆಯು ಉತ್ಪಾದನೆ, ಮಾರಾಟ ಮತ್ತು ಲಾಭದಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ.

ಪೂರ್ತಿ ಓದಿ

04:23 PM (IST) Apr 02

ಐಪಿಎಲ್‌ ನಡುವೆಯೇ ಮಹತ್ವದ ಬೆಳವಣಿಗೆ; ಈ ತಂಡ ತೊರೆಯಲು ಮುಂದಾದ ಯಶಸ್ವಿ ಜೈಸ್ವಾಲ್!

ಯಶಸ್ವಿ ಜೈಸ್ವಾಲ್ ಮುಂಬೈ ಕ್ರಿಕೆಟ್ ಸಂಸ್ಥೆಗೆ ಇ-ಮೇಲ್ ರವಾನಿಸಿದ್ದು, ಗೋವಾ ಪರ ಕಣಕ್ಕಿಳಿಯಲು ನಿರಪೇಕ್ಷಣ ಪತ್ರ(ಎನ್‌ಒಸಿ) ನೀಡುವಂತೆ ಮನವಿ ಮಾಡಿದ್ದಾರೆ. ರಣಜಿ ಟ್ರೋಫಿ ಟೂರ್ನಿಯಲ್ಲಿ ಗೋವಾ ಪರ ಕಣಕ್ಕಿಳಿಯಲು ಬಯಸಿದ್ದಾರೆ. ನಾಯಕತ್ವಕ್ಕಾಗಿ ತಂಡ ತೊರೆಯುತ್ತಿದ್ದಾರಾ ಜೈಸ್ವಾಲ್?

ಪೂರ್ತಿ ಓದಿ

04:09 PM (IST) Apr 02

ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯ ಸಾವು ಪ್ರಕರಣ: ಶಿಕ್ಷೆಗೆ ತಡೆ ನೀಡುವಂತೆ ಆರೋಪಿಯಿಂದ ಸುಪ್ರೀಂಗೆ ಅರ್ಜಿ

ಕೇರಳದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯ ಸಾವಿನ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ ಶಿಕ್ಷೆಗೆ ತಡೆ ನೀಡುವಂತೆ ಆರೋಪಿ ಕಿರಣ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾನೆ. ಸುಪ್ರೀಂಕೋರ್ಟ್ ಕೇರಳ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ವರದಕ್ಷಿಣೆ ಕಿರುಕುಳದಿಂದ ಬೇಸತ್ತು ವಿಸ್ಮಯ 2021 ಜೂನ್‌ನಲ್ಲಿ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಳು.

ಪೂರ್ತಿ ಓದಿ

03:52 PM (IST) Apr 02

ನಿಮ್ಮ ವ್ಯಾಟ್ಸಾಪ್ ಸ್ಟೇಟಸ್ ಯಾರು ನೋಡಬೇಕು, ನೀವೇ ಆಯ್ಕೆ ಮಾಡಿ? ಹೊಸ ಫೀಚರ್

ವ್ಯಾಟ್ಸಾಪ್ ಸ್ಟೇಟಸ್ ಹಾಕಿದ ಬಳಿಕ ಯಾರು ನೋಡಿದ್ದಾರೆ? ಎಷ್ಟು ಲೈಕ್ಸ್ ಬಂದಿದೆ, ಯಾರು ಪ್ರತಿಕ್ರಿಯಿಸಿದ್ದಾರೆ ಎಂದು ನೋಡೋದರಲ್ಲೇ ಆನಂದ ಇದೆ. ಇದೀಗ ನಿಮ್ಮ ವ್ಯಾಟ್ಸಾಪ್ ಸ್ಟೇಟಸ್ ಯಾರು ನೋಡಬೇಕು ಅನ್ನೋದನ್ನು ನೀವೇ ಆಯ್ಕೆ ಮಾಡುವ ಫೀಚರ್ ಇದೆ. 
 

ಪೂರ್ತಿ ಓದಿ

03:50 PM (IST) Apr 02

ಕರ್ನಾಟಕದಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ! ಬೇಸಿಗೆಯಲ್ಲಿ ನೌಕರರಿಗೆ ರಿಲೀಫ್ ಕೊಟ್ಟ ಸರ್ಕಾರ!

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬೇಸಿಗೆಯ ತಾಪಮಾನದ ಹಿನ್ನೆಲೆಯಲ್ಲಿ, ಸರ್ಕಾರಿ ನೌಕರರು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಬದಲಾಯಿಸಲಾಗಿದೆ. ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಒಟ್ಟು 9 ಜಿಲ್ಲೆಗಳಲ್ಲಿ ಈ ಬದಲಾವಣೆ ಅನ್ವಯವಾಗಲಿದೆ.

ಪೂರ್ತಿ ಓದಿ

03:45 PM (IST) Apr 02

ವಕ್ಫ್‌ನ ಕ್ರೂರ ಸೆಕ್ಷನ್‌ 40 ಇನ್ನು ಇತಿಹಾಸ, ರಾತ್ರೋರಾತ್ರಿ ಇನ್ನು ವಕ್ಫ್‌ ಆಸ್ತಿ ಘೋಷಣೆ ಸಾಧ್ಯವಿಲ್ಲ!

ಲೋಕಸಭೆಯಲ್ಲಿ ಮಂಡಿಸಲಾದ ವಕ್ಫ್ (ತಿದ್ದುಪಡಿ) ಮಸೂದೆ, 2024, ವಕ್ಫ್ ಕಾಯ್ದೆಯ ಸೆಕ್ಷನ್ 40 ಅನ್ನು ರದ್ದುಗೊಳಿಸಲು ತೀರ್ಮಾನಿಸಿದೆ. ಈ ಸೆಕ್ಷನ್ ವಕ್ಫ್ ಮಂಡಳಿ ಮತ್ತು ನ್ಯಾಯಮಂಡಳಿಗೆ ಯಾವುದೇ ಭೂಮಿಯನ್ನು ವಕ್ಫ್ ಆಸ್ತಿ ಎಂದು ಘೋಷಿಸಲು ಅವಕಾಶ ನೀಡಿತ್ತು.

ಪೂರ್ತಿ ಓದಿ

More Trending News