LIVE NOW
Published : Feb 03, 2026, 06:56 AM ISTUpdated : Feb 03, 2026, 09:51 AM IST

Karnataka News Live: ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಮತ್ತೆ ಕೊಕ್! ಕನ್ನಡಿಗರಿಗೆ ತಪ್ಪದ ಅನ್ಯಾಯ; ಹಿಂದಿ-ಇಂಗ್ಲಿಷ್ ಹೇರಿಕೆಗೆ ಆಕ್ರೋಶ

ಸಾರಾಂಶ

ಬೆಂಗಳೂರು: ರಂಜಾನ್‌ ಮಾಸದ ಪ್ರಯುಕ್ತ ರಾಜ್ಯದ ಉರ್ದು ಮಾಧ್ಯಮದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತರಗತಿ ಬೋಧನಾ ಅವಧಿಯನ್ನು ಮಾರ್ಪಡಿಸಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. 2025-26ನೇ ಶೈಕ್ಷಣಿಕ ಸಾಲಿನ ವೇಳಾಪಟ್ಟಿಯಂತೆ ಎಲ್ಲ ಮಾದರಿಯ ಶಾಲೆಗಳಿಗೂ ಬೆಳಗ್ಗೆ 10ರಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿಪಡಿಸಲಾಗಿತ್ತು. ಆದರೆ, ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ರಂಜಾನ್‌ ಮಾಸ ಆರಂಭವಾದ ದಿನದಿಂದ ಒಂದು ತಿಂಗಳ ಕಾಲ ಅಥವಾ ಮಾ.20ರವರೆಗೆ ಉರ್ದು ಶಾಲೆಗಳನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 12.45ರವರೆಗೆ ನಡೆಸಲು ಕ್ರಮ ವಹಿಸುವಂತೆ ಜಿಲ್ಲಾ ಡಿಡಿಪಿಐ, ಬಿಇಒಗಳಿಗೆ ಸೂಚಿಸಲಾಗಿದೆ.

Railway Exams Kannada excluded again Kannadigas protest Hindi imposition

09:51 AM (IST) Feb 03

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಮತ್ತೆ ಕೊಕ್! ಕನ್ನಡಿಗರಿಗೆ ತಪ್ಪದ ಅನ್ಯಾಯ; ಹಿಂದಿ-ಇಂಗ್ಲಿಷ್ ಹೇರಿಕೆಗೆ ಆಕ್ರೋಶ

ಭಾರತೀಯ ರೈಲ್ವೆ ಇಲಾಖೆಯು ತನ್ನ ಬಡ್ತಿ ಹುದ್ದೆಗಳ ಪರೀಕ್ಷೆಗಳಿಂದ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದೆ. ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಬೇಕೆಂಬ ನಿಯಮದಿಂದಾಗಿ, ಬಡ್ತಿಯ ನಿರೀಕ್ಷೆಯಲ್ಲಿದ್ದ ಸಾವಿರಾರು ಕನ್ನಡಿಗ ಅಭ್ಯರ್ಥಿಗಳ ಭವಿಷ್ಯ ಅತಂತ್ರವಾಗಿದೆ.
Read Full Story

09:42 AM (IST) Feb 03

ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ

ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂಬ ಕಾರಣದಿಂದ ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, ಉಳಿದವರ ಸಮಸ್ಯೆ ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ

Read Full Story

09:14 AM (IST) Feb 03

ಮಧ್ಯಾಹ್ನ 3 - 18ರ ನಂತರ 5 ರಾಶಿಯವರಿಗೆ ಅಶುಭ ಕಂಟಕ ಕಾಲ ಆರಂಭ - ಈ ಕೆಲಸಗಳನ್ನ ಮಾಡ್ಬೇಡಿ

ಇಂದಿನ ಪಂಚಾಂಗದ ಪ್ರಕಾರ, ಮಧ್ಯಾಹ್ನ 3:18 ರ ನಂತರ ರಾಹು ಕಾಲ ಆರಂಭವಾಗುವುದರಿಂದ ಐದು ರಾಶಿ ಚಕ್ರದವರಿಗೆ ಅಶುಭ ಕಾಲ ಎದುರಾಗಲಿದೆ. ಸಿಂಹ ರಾಶಿಯಲ್ಲಿ ಚಂದ್ರನ ಸಂಚಾರದಿಂದಾಗಿ 5 ರಾಶಿಯವರು ಈ ಸಮಯದಲ್ಲಿ ಎಚ್ಚರಿಕೆಯಿಂದ ಇರಬೇಕು ಮತ್ತು ಪ್ರಮುಖ ನಿರ್ಧಾರಗಳನ್ನು ಮುಂದೂಡುವುದು ಉತ್ತಮ.

Read Full Story

09:02 AM (IST) Feb 03

ಚೆನ್ನೈ- ಬೆಂಗಳೂರಿಗೆ ಬರೀ 1.30 ಗಂಟೆ - ಬೆಂಗಳೂರು-ಹೈದ್ರಾಬಾದ್‌ಗೆ ಬರೀ 2 ಗಂಟೆ ಪ್ರಯಾಣ

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರೈಲ್ವೆಗೆ ಬರೋಬ್ಬರಿ ₹7,748 ಕೋಟಿ ಅನುದಾನ ಮೀಸಲಿಟ್ಟಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ₹184 ಕೋಟಿ ಹೆಚ್ಚುವರಿಯಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನ್‌ ವೈಷ್ಣವ್‌ ತಿಳಿಸಿದರು.

Read Full Story

08:45 AM (IST) Feb 03

6 ನೇ ಕ್ಲಾಸ್ ವಿದ್ಯಾರ್ಥಿ ಮೇಲೆ ಪೊಲೀಸ್ ಹಲ್ಲೆ? ಬಲವಂತದ ಸಾಕ್ಷಿ ವಿಡಿಯೋ ಚಿತ್ರಿಕರಣ

ಚಿನ್ನ ಕದ್ದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬನನ್ನು ಪರಪ್ಪನ ಅಗ್ರಹಾರ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಆರನೇ ತರಗತಿ ವಿದ್ಯಾರ್ಥಿಯಾಗಿರುವ 11 ವರ್ಷದ ಬಾಲಕನ ಮೇಲೆ 120 ಗ್ರಾಂ ಚಿನ್ನ ಕಳ್ಳತನ ಮಾಡಿದ್ದಾನೆ ಎಂದು ಆರೋಪ ಹೊರಿಸಿ ಆತನ ಮೇಲೆ ಹಲ್ಲೆ

Read Full Story

08:42 AM (IST) Feb 03

ಕರ್ನಾಟಕದ ಮತ್ತೊಂದು 'ಕೆಜಿಎಫ್' ಆಗಿತ್ತೇ ಕಪ್ಪತಗುಡ್ಡ? ಬಯಲಾಯ್ತು ನೂರಾರು ವರ್ಷಗಳ ಗೋಲ್ಡ್ ಮೈನಿಂಗ್ ಹಿಸ್ಟರಿ!

Kappatagudda gold mining history ಗದಗ ಜಿಲ್ಲೆಯ ಕಪ್ಪತಗುಡ್ಡವು ವಿಜಯನಗರ ಮತ್ತು ಬ್ರಿಟಿಷರ ಕಾಲದಿಂದಲೂ ಚಿನ್ನದ ಗಣಿಗಾರಿಕೆಯ ಶ್ರೀಮಂತ ಇತಿಹಾಸವನ್ನು ಹೊಂದಿದೆ ಎಂದು ಇತಿಹಾಸಜ್ಞ ಡಾ. ದತ್ತಪ್ರಸನ್ನ ಪಾಟೀಲ್ ಬಹಿರಂಗಪಡಿಸಿದ್ದಾರೆ. 

Read Full Story

08:35 AM (IST) Feb 03

BWSSB - ಬೆಂಗಳೂರಿನ ಪ್ರಮುಖ ಭಾಗಗಳಲ್ಲಿ ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

Water supply will be disrupted: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ತುರ್ತು ನಿರ್ವಹಣೆ ಕಾಮಗಾರಿಯಿಂದಾಗಿ ಫೆಬ್ರವರಿ 5 ಮತ್ತು 6 ರಂದು ನಗರದ ಹಲವು ಭಾಗಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

Read Full Story

08:11 AM (IST) Feb 03

ಲಕ್ಕುಂಡಿಗೆ ರಾಜ್ಯ ಸರ್ಕಾರದಿಂದ 2.25 ಕೋಟಿ; 15 ದಿನದ ಉತ್ಖನನದಲ್ಲಿ ಸಿಕ್ಕಿದ್ದೇನು?

ಗದಗ ಜಿಲ್ಲೆಯ ಐತಿಹಾಸಿಕ ತಾಣ ಲಕ್ಕುಂಡಿಗೆ ವಿದೇಶಿ ತಜ್ಞರು ಭೇಟಿ ನೀಡಿ ಅಭಿವೃದ್ಧಿ ಯೋಜನೆ ರೂಪಿಸುತ್ತಿದ್ದಾರೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ ನಡೆಯುತ್ತಿರುವ ಉತ್ಖನನದಲ್ಲಿ ಪಚ್ಚೆ ಹರಳುಗಳು ಸೇರಿದಂತೆ 40ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ.
Read Full Story

08:10 AM (IST) Feb 03

ಸರ್ಕಾರಿ ಶಾಲಾ ಮಕ್ಕಳಿಗೂ ಇನ್ನು ಹೈಟೆಕ್ ಶಿಕ್ಷಣ; ರಾಜ್ಯಾದ್ಯಂತ ಸ್ಮಾರ್ಟ್ ಕ್ಲಾಸ್ ಯೋಜನೆಗೆ ಗ್ರೀನ್ ಸಿಗ್ನಲ್!

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಡಿಜಿಟಲ್ ಶಿಕ್ಷಣ ನೀಡಲು 'ಸಮಗ್ರ ಶಿಕ್ಷಣ ಕರ್ನಾಟಕ' ಯೋಜನೆಯಡಿ ಸ್ಮಾರ್ಟ್ ಕ್ಲಾಸ್‌ಗಳನ್ನು ಸ್ಥಾಪಿಸಲು ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಯಡಿ ಒಟ್ಟು 3,862 ಹಿರಿಯ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ KGBV ಗಳಿಗೆ ₹9,154.80 ಲಕ್ಷ ಅನುದಾನ ಮೀಸಲಿಡಲಾಗಿದೆ.
Read Full Story

07:50 AM (IST) Feb 03

ಮಂಡ್ಯ - ಪದವಿ ಪರೀಕ್ಷೆಗಳು ಮುಗಿದ ದಿನವೇ ರಿಸಲ್ಟ್‌ ನೀಡಿದ ಸರ್ಕಾರಿ ಕಾಲೇಜು!

ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) 2025-26ನೇ ಸಾಲಿನ ಪದವಿ ಪರೀಕ್ಷೆಗಳ ಫಲಿತಾಂಶವನ್ನು ಕೊನೆಯ ಪರೀಕ್ಷೆ ನಡೆದ ದಿನವೇ ಪ್ರಕಟಿಸಿ ಹೊಸ ಶೈಕ್ಷಣಿಕ ದಾಖಲೆ ನಿರ್ಮಿಸಿದೆ. ಪರೀಕ್ಷೆಗಳು ಮುಗಿದ ಕೆಲವೇ ಗಂಟೆಗಳಲ್ಲಿ ಮೌಲ್ಯಮಾಪನ ಪೂರ್ಣಗೊಳಿಸಿ ಫಲಿತಾಂಶ ನೀಡಿರುವುದು ರಾಜ್ಯದ ಗಮನ ಸೆಳೆದಿದೆ.
Read Full Story

07:48 AM (IST) Feb 03

BBK 12 - ಇಂದಿಗೂ ಆ ನೋವು ಮನಸ್ಸಿನಲ್ಲಿ ಉಳಿದಿದೆ - 15 ದಿನಗಳ ನಂತ್ರ ರಕ್ಷಿತಾ ಶೆಟ್ಟಿ ಪೋಸ್ಟ್

ಬಿಗ್‌ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ, ತಮ್ಮ ಬಿಗ್‌ಬಾಸ್ ಮನೆಯ ಪಯಣದ ಬಗ್ಗೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಮೂರು ತಿಂಗಳ ಸಂತೋಷ, ನೋವು, ಮತ್ತು ಬಾಂಧವ್ಯಗಳನ್ನು ನೆನಪಿಸಿಕೊಂಡ ಅವರು, ಮನೆಯನ್ನು ಬಿಟ್ಟು ಬರುವ ಕ್ಷಣ ಅತ್ಯಂತ ಕಠಿಣವಾಗಿತ್ತು ಎಂದು ಹೇಳಿಕೊಂಡಿದ್ದಾರೆ.

Read Full Story

07:39 AM (IST) Feb 03

ಭಾರತ-ಪಾಕ್‌ ಪಂದ್ಯ ರದ್ದಾದ್ರೆ ₹2200 ಕೋಟಿ ನಷ್ಟ ಸಂಭವ!

ಫೆ.15ರಂದು ಭಾರತ ವಿರುದ್ಧ ಶ್ರೀಲಂಕಾದ ಕೊಲಂಬೊದಲ್ಲಿ ನಿಗದಿಯಾಗಿರುವ ಟಿ20 ವಿಶ್ವಕಪ್‌ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ ಘೋಷಿಸಿದ ಬೆನ್ನಲ್ಲೇ, ಇದರಿಂದಾಗುವ ಪರಿಣಾಮ ಹಾಗೂ ಆರ್ಥಿಕ ನಷ್ಟವನ್ನು ಅಂದಾಜಿಸಲಾಗುತ್ತಿದೆ

Read Full Story

07:33 AM (IST) Feb 03

ಸಿ.ಜೆ.ರಾಯ್‌ ಕೇಸ್‌ - ಸಚಿವೆ ನಿರ್ಮಲಾಗೆ ಕೇರಳ ಸಿಎಂ ಪತ್ರ

ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಆತ್ಮ*ತ್ಯೆ ಮಾಡಿಕೊಂಡ ಕಾನ್ಫಿಡೆಂಟ್‌ ಗ್ರೂಫ್‌ ಮುಖ್ಯಸ್ಥ ಸಿ.ಜೆ.ರಾಯ್‌ ಸಾವಿನ ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಆಗ್ರಹಿಸಿದ್ದಾರೆ.

Read Full Story

07:28 AM (IST) Feb 03

ರಾಜ್ಯಪಾಲರನ್ನೇ ಶಾಸಕರು ಅಡ್ಡಗಟ್ಟಿದ್ದು ಸರಿಯೇ? ಗೆಹಲೋತ್‌ ಮಾಡಿದ್ದು ತಪ್ಪು ಎನ್ನುವವರು ಹಂಸರಾಜ್‌ ಬಗ್ಗೆ ಮೌನವಾಗಿರುವುದು ಏಕೆ?

ಲೇಖಕರು ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ಎರಡು ಘಟನೆಗಳನ್ನು ಹೋಲಿಸುತ್ತಾರೆ. 2011ರಲ್ಲಿ ರಾಜ್ಯಪಾಲರು ಭಾಷಣ ಮೊಟಕುಗೊಳಿಸಿದಾಗ ಅಂದಿನ ಬಿಜೆಪಿ ಸರ್ಕಾರ ಗೌರವ ನೀಡಿತ್ತು. ಆದರೆ ಇತ್ತೀಚೆಗೆ, ರಾಜ್ಯಪಾಲರಿಗೆ ಕಾಂಗ್ರೆಸ್ ಶಾಸಕರು ಅಗೌರವ ತೋರಿದ್ದಾರೆ. ಬಿಜೆಪಿ-ಕಾಂಗ್ರೆಸ್ ನಡುವಿನ ವ್ಯತ್ಯಾಸವಿದು.

Read Full Story

07:26 AM (IST) Feb 03

ಹಾಸನ ನಿವೇಶನ ಗಲಾಟೆ; ಒಂದು ಹೆಜ್ಜೆ ಮುಂದಿಟ್ಟ ನಿರ್ಮಾಪಕಿ ಪುಷ್ಪಾ ಅರುಣ್‌ ಕುಮಾರ್

ಹಾಸನದಲ್ಲಿ ನಿರ್ಮಾಪಕಿ ಪುಷ್ಪಾ ಅವರು ತಮ್ಮ ನಿವೇಶನದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಅಪರ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. 2020ರಲ್ಲಿ ತಾವು ಕಾನೂನುಬದ್ಧವಾಗಿ ಖರೀದಿಸಿದ ಜಾಗಕ್ಕೆ ಈಗ ಕೆಲವರು ಉದ್ದೇಶಪೂರ್ವಕವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ ಎಂದಿದ್ದಾರೆ.

Read Full Story

07:25 AM (IST) Feb 03

ಕರ್ನಾಟಕಕ್ಕೆ ಇನ್ನೊಂದು ‘ಜಲಸಮರ’ದ ಕಂಟಕ!

ಕರ್ನಾಟಕದಲ್ಲಿ ಉಗಮವಾಗಿ ತಮಿಳುನಾಡಿನತ್ತ ಹರಿಯುವ ದಕ್ಷಿಣ ಪಿನಾಕಿನಿ ಅಥವಾ ಮಾರ್ಕಾಂಡೇಯ ಎಂದೂ ಕರೆಯಲಾಗುವ (ಪೆನ್ನಿಯಾರ್‌) ನದಿ ನೀರು ಹಂಚಿಕೆ ವಿವಾದವನ್ನು ಬಗೆಹರಿಸಲು ನ್ಯಾಯಾಧಿಕರಣ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚಿಸಿದೆ

Read Full Story

07:19 AM (IST) Feb 03

ಕೇಂದ್ರದ ತೆರಿಗೆ ಪಾಲು ಏರಿಕೆಯಲ್ಲಿ ರಾಜ್ಯ ನಂ.1

ಕೇಂದ್ರ ಸರ್ಕಾರ ಭಾನುವಾರ ಮಂಡಿಸಿದ ಬಜೆಟ್‌ನಲ್ಲಿ ಕರ್ನಾಟಕಕ್ಕೆ 63,050 ಕೋಟಿ ರು. ಅನುದಾನವನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಇದರೊಂದಿಗೆ 16ನೇ ಹಣಕಾಸು ಆಯೋಗದ ಶಿಫಾರಸಿನ ಅನ್ವಯ, ಆದಾಯ ಹಂಚಿಕೆಯ ಹೊಸ ಫಾರ್ಮುಲಾದಡಿ ಅತಿ ಹೆಚ್ಚು ಲಾಭ ಪಡೆದ ನಂ.1 ರಾಜ್ಯವಾಗಿ ಹೊರಹೊಮ್ಮಿದೆ.

Read Full Story

07:12 AM (IST) Feb 03

ಸದನದಲ್ಲಿ ಇಂದು, ನಾಳೆ ಜಿ ರಾಮ್‌ ಜಿ ಸಂಗ್ರಾಮ

ಕೇಂದ್ರ ಸರ್ಕಾರ ಹೊಸದಾಗಿ ತಂದಿರುವ ‘ವಿಬಿ ಜಿ ರಾಮ್‌ ಜಿ’ ಕಾಯ್ದೆಯ ಪರ, ವಿರುದ್ಧ ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ಚರ್ಚೆ ನಡೆಯಲಿದೆ.

Read Full Story

07:06 AM (IST) Feb 03

ಮುಖ್ಯಮಂತ್ರಿ ಗಾದಿ ಬಗ್ಗೆ ಕೆಣಕಿದ್ದಕ್ಕೆ ಗೂಢಾರ್ಥದಲ್ಲಿ ಡಿಕೆಶಿ ಎದಿರೇಟು

ಸಿದ್ದು ಸೇರಿ 139 ಶಾಸಕರೂ ನನ್ನ ಬಲ. ಸಿದ್ದು 100% ನನ್ನ ಜತೆಗಿದ್ದಾರೆ. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ. ನಾವಿಬ್ಬರೂ ಪರಸ್ಪರ ಕೈಜೋಡಿಸಿ, ಜತೆಯಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ, ಮುಂದೆಯೂ ಕೆಲಸ ಮಾಡುತ್ತೇವೆ.

Read Full Story

More Trending News