ಬೆಂಗಳೂರು: ರಂಜಾನ್ ಮಾಸದ ಪ್ರಯುಕ್ತ ರಾಜ್ಯದ ಉರ್ದು ಮಾಧ್ಯಮದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತರಗತಿ ಬೋಧನಾ ಅವಧಿಯನ್ನು ಮಾರ್ಪಡಿಸಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. 2025-26ನೇ ಶೈಕ್ಷಣಿಕ ಸಾಲಿನ ವೇಳಾಪಟ್ಟಿಯಂತೆ ಎಲ್ಲ ಮಾದರಿಯ ಶಾಲೆಗಳಿಗೂ ಬೆಳಗ್ಗೆ 10ರಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿಪಡಿಸಲಾಗಿತ್ತು. ಆದರೆ, ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ರಂಜಾನ್ ಮಾಸ ಆರಂಭವಾದ ದಿನದಿಂದ ಒಂದು ತಿಂಗಳ ಕಾಲ ಅಥವಾ ಮಾ.20ರವರೆಗೆ ಉರ್ದು ಶಾಲೆಗಳನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 12.45ರವರೆಗೆ ನಡೆಸಲು ಕ್ರಮ ವಹಿಸುವಂತೆ ಜಿಲ್ಲಾ ಡಿಡಿಪಿಐ, ಬಿಇಒಗಳಿಗೆ ಸೂಚಿಸಲಾಗಿದೆ.

09:51 AM (IST) Feb 03
09:42 AM (IST) Feb 03
ಜಿಎಸ್ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂಬ ಕಾರಣದಿಂದ ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, ಉಳಿದವರ ಸಮಸ್ಯೆ ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ
09:14 AM (IST) Feb 03
ಇಂದಿನ ಪಂಚಾಂಗದ ಪ್ರಕಾರ, ಮಧ್ಯಾಹ್ನ 3:18 ರ ನಂತರ ರಾಹು ಕಾಲ ಆರಂಭವಾಗುವುದರಿಂದ ಐದು ರಾಶಿ ಚಕ್ರದವರಿಗೆ ಅಶುಭ ಕಾಲ ಎದುರಾಗಲಿದೆ. ಸಿಂಹ ರಾಶಿಯಲ್ಲಿ ಚಂದ್ರನ ಸಂಚಾರದಿಂದಾಗಿ 5 ರಾಶಿಯವರು ಈ ಸಮಯದಲ್ಲಿ ಎಚ್ಚರಿಕೆಯಿಂದ ಇರಬೇಕು ಮತ್ತು ಪ್ರಮುಖ ನಿರ್ಧಾರಗಳನ್ನು ಮುಂದೂಡುವುದು ಉತ್ತಮ.
09:02 AM (IST) Feb 03
ಕೇಂದ್ರ ಬಜೆಟ್ನಲ್ಲಿ ಕರ್ನಾಟಕ ರೈಲ್ವೆಗೆ ಬರೋಬ್ಬರಿ ₹7,748 ಕೋಟಿ ಅನುದಾನ ಮೀಸಲಿಟ್ಟಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ₹184 ಕೋಟಿ ಹೆಚ್ಚುವರಿಯಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನ್ ವೈಷ್ಣವ್ ತಿಳಿಸಿದರು.
08:45 AM (IST) Feb 03
ಚಿನ್ನ ಕದ್ದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬನನ್ನು ಪರಪ್ಪನ ಅಗ್ರಹಾರ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಆರನೇ ತರಗತಿ ವಿದ್ಯಾರ್ಥಿಯಾಗಿರುವ 11 ವರ್ಷದ ಬಾಲಕನ ಮೇಲೆ 120 ಗ್ರಾಂ ಚಿನ್ನ ಕಳ್ಳತನ ಮಾಡಿದ್ದಾನೆ ಎಂದು ಆರೋಪ ಹೊರಿಸಿ ಆತನ ಮೇಲೆ ಹಲ್ಲೆ
08:42 AM (IST) Feb 03
Kappatagudda gold mining history ಗದಗ ಜಿಲ್ಲೆಯ ಕಪ್ಪತಗುಡ್ಡವು ವಿಜಯನಗರ ಮತ್ತು ಬ್ರಿಟಿಷರ ಕಾಲದಿಂದಲೂ ಚಿನ್ನದ ಗಣಿಗಾರಿಕೆಯ ಶ್ರೀಮಂತ ಇತಿಹಾಸವನ್ನು ಹೊಂದಿದೆ ಎಂದು ಇತಿಹಾಸಜ್ಞ ಡಾ. ದತ್ತಪ್ರಸನ್ನ ಪಾಟೀಲ್ ಬಹಿರಂಗಪಡಿಸಿದ್ದಾರೆ.
08:35 AM (IST) Feb 03
Water supply will be disrupted: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ತುರ್ತು ನಿರ್ವಹಣೆ ಕಾಮಗಾರಿಯಿಂದಾಗಿ ಫೆಬ್ರವರಿ 5 ಮತ್ತು 6 ರಂದು ನಗರದ ಹಲವು ಭಾಗಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
08:11 AM (IST) Feb 03
08:10 AM (IST) Feb 03
07:50 AM (IST) Feb 03
07:48 AM (IST) Feb 03
ಬಿಗ್ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ, ತಮ್ಮ ಬಿಗ್ಬಾಸ್ ಮನೆಯ ಪಯಣದ ಬಗ್ಗೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಮೂರು ತಿಂಗಳ ಸಂತೋಷ, ನೋವು, ಮತ್ತು ಬಾಂಧವ್ಯಗಳನ್ನು ನೆನಪಿಸಿಕೊಂಡ ಅವರು, ಮನೆಯನ್ನು ಬಿಟ್ಟು ಬರುವ ಕ್ಷಣ ಅತ್ಯಂತ ಕಠಿಣವಾಗಿತ್ತು ಎಂದು ಹೇಳಿಕೊಂಡಿದ್ದಾರೆ.
07:39 AM (IST) Feb 03
ಫೆ.15ರಂದು ಭಾರತ ವಿರುದ್ಧ ಶ್ರೀಲಂಕಾದ ಕೊಲಂಬೊದಲ್ಲಿ ನಿಗದಿಯಾಗಿರುವ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ ಘೋಷಿಸಿದ ಬೆನ್ನಲ್ಲೇ, ಇದರಿಂದಾಗುವ ಪರಿಣಾಮ ಹಾಗೂ ಆರ್ಥಿಕ ನಷ್ಟವನ್ನು ಅಂದಾಜಿಸಲಾಗುತ್ತಿದೆ
07:33 AM (IST) Feb 03
ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಆತ್ಮ*ತ್ಯೆ ಮಾಡಿಕೊಂಡ ಕಾನ್ಫಿಡೆಂಟ್ ಗ್ರೂಫ್ ಮುಖ್ಯಸ್ಥ ಸಿ.ಜೆ.ರಾಯ್ ಸಾವಿನ ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಆಗ್ರಹಿಸಿದ್ದಾರೆ.
07:28 AM (IST) Feb 03
ಲೇಖಕರು ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ಎರಡು ಘಟನೆಗಳನ್ನು ಹೋಲಿಸುತ್ತಾರೆ. 2011ರಲ್ಲಿ ರಾಜ್ಯಪಾಲರು ಭಾಷಣ ಮೊಟಕುಗೊಳಿಸಿದಾಗ ಅಂದಿನ ಬಿಜೆಪಿ ಸರ್ಕಾರ ಗೌರವ ನೀಡಿತ್ತು. ಆದರೆ ಇತ್ತೀಚೆಗೆ, ರಾಜ್ಯಪಾಲರಿಗೆ ಕಾಂಗ್ರೆಸ್ ಶಾಸಕರು ಅಗೌರವ ತೋರಿದ್ದಾರೆ. ಬಿಜೆಪಿ-ಕಾಂಗ್ರೆಸ್ ನಡುವಿನ ವ್ಯತ್ಯಾಸವಿದು.
07:26 AM (IST) Feb 03
ಹಾಸನದಲ್ಲಿ ನಿರ್ಮಾಪಕಿ ಪುಷ್ಪಾ ಅವರು ತಮ್ಮ ನಿವೇಶನದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಅಪರ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. 2020ರಲ್ಲಿ ತಾವು ಕಾನೂನುಬದ್ಧವಾಗಿ ಖರೀದಿಸಿದ ಜಾಗಕ್ಕೆ ಈಗ ಕೆಲವರು ಉದ್ದೇಶಪೂರ್ವಕವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ ಎಂದಿದ್ದಾರೆ.
07:25 AM (IST) Feb 03
ಕರ್ನಾಟಕದಲ್ಲಿ ಉಗಮವಾಗಿ ತಮಿಳುನಾಡಿನತ್ತ ಹರಿಯುವ ದಕ್ಷಿಣ ಪಿನಾಕಿನಿ ಅಥವಾ ಮಾರ್ಕಾಂಡೇಯ ಎಂದೂ ಕರೆಯಲಾಗುವ (ಪೆನ್ನಿಯಾರ್) ನದಿ ನೀರು ಹಂಚಿಕೆ ವಿವಾದವನ್ನು ಬಗೆಹರಿಸಲು ನ್ಯಾಯಾಧಿಕರಣ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ
07:19 AM (IST) Feb 03
ಕೇಂದ್ರ ಸರ್ಕಾರ ಭಾನುವಾರ ಮಂಡಿಸಿದ ಬಜೆಟ್ನಲ್ಲಿ ಕರ್ನಾಟಕಕ್ಕೆ 63,050 ಕೋಟಿ ರು. ಅನುದಾನವನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಇದರೊಂದಿಗೆ 16ನೇ ಹಣಕಾಸು ಆಯೋಗದ ಶಿಫಾರಸಿನ ಅನ್ವಯ, ಆದಾಯ ಹಂಚಿಕೆಯ ಹೊಸ ಫಾರ್ಮುಲಾದಡಿ ಅತಿ ಹೆಚ್ಚು ಲಾಭ ಪಡೆದ ನಂ.1 ರಾಜ್ಯವಾಗಿ ಹೊರಹೊಮ್ಮಿದೆ.
07:12 AM (IST) Feb 03
ಕೇಂದ್ರ ಸರ್ಕಾರ ಹೊಸದಾಗಿ ತಂದಿರುವ ‘ವಿಬಿ ಜಿ ರಾಮ್ ಜಿ’ ಕಾಯ್ದೆಯ ಪರ, ವಿರುದ್ಧ ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ಚರ್ಚೆ ನಡೆಯಲಿದೆ.
07:06 AM (IST) Feb 03
ಸಿದ್ದು ಸೇರಿ 139 ಶಾಸಕರೂ ನನ್ನ ಬಲ. ಸಿದ್ದು 100% ನನ್ನ ಜತೆಗಿದ್ದಾರೆ. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ. ನಾವಿಬ್ಬರೂ ಪರಸ್ಪರ ಕೈಜೋಡಿಸಿ, ಜತೆಯಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ, ಮುಂದೆಯೂ ಕೆಲಸ ಮಾಡುತ್ತೇವೆ.