ಬಳ್ಳಾರಿ: ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಕೆ ಹಿನ್ನೆಲೆಯಲ್ಲಿ ನಡೆದ ಗುಂಪು ಘರ್ಷಣೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ರೆಡ್ಡಿ ಸಾವಿಗೆ ಸಂಬಂಧಿಸಿದಂತೆ ನಗರದ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ.ಪ್ರತ್ಯೇಕ ದೂರು ಆಧರಿಸಿ ಮೂರು (01/2026, 02/2026, 03/2026) ಎಫ್ಐಆರ್ ಮತ್ತು ಬಳ್ಳಾರಿ ನಗರ ಡಿವೈಎಸ್ಪಿ ಚಂದ್ರಕಾಂತ ನಂದಾ ರೆಡ್ಡಿ ಅವರ ದೂರಿನ ಆಧಾರದಲ್ಲಿ ಒಂದು ಸ್ವಯಂ ಪ್ರೇರಿತ ಪ್ರಕರಣ (04/2026)ವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರನ ಕೊಲೆ, ಜಾತಿ ನಿಂದನೆ, ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ನೀಡಲಾದ ದೂರು ಆಧರಿಸಿ ಪ್ರಕರಣ ಎಫ್ಐಆರ್ ದಾಖಲು ಮಾಡಲಾಗಿದೆ.
ಎಲ್ಲ ಪ್ರಕರಣಗಳಲ್ಲಿಯೂ ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ ರೆಡ್ಡಿ ಮತ್ತು ಶ್ರೀರಾಮುಲು ಅವರನ್ನು ಕ್ರಮವಾಗಿ ಎ1, ಎ2, ಎ3 ಆರೋಪಿಗಳನ್ನಾಗಿ ಮಾಡಲಾಗಿದೆ. ಪೊಲೀಸರು ದಾಖಲು ಮಾಡಿಕೊಂಡಿರುವ ಸ್ವಯಂಪ್ರೇರಿತ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಮತ್ತು ಸಹಚರರ ಜೊತೆಗೆ, ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿ ಅವರನ್ನೂ ಆರೋಪಿಯನ್ನಾಗಿ ಮಾಡಲಾಗಿದ
11:46 PM (IST) Jan 03
ಬೆಂಗಳೂರಿನಲ್ಲಿ, ಎರಡು ತಿಂಗಳ ಬಾಕಿ ಸಂಬಳ ಕೇಳಿದ ಆಂಬ್ಯುಲೆನ್ಸ್ ಚಾಲಕ ಕಿರಣ್ ಮೇಲೆ ಮಾಲೀಕ ನಾಗರಾಜ್ ಮತ್ತು ಇನ್ನೊಬ್ಬ ಚಾಲಕ ಸೇರಿ ನೈಸ್ ರಸ್ತೆಯಲ್ಲಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಸಂಬಳ ಕೊಡುವ ನೆಪದಲ್ಲಿ ಕರೆಸಿ ದೌರ್ಜನ್ಯ ಎಸಗಲಾಗಿದ್ದು, ಸಂತ್ರಸ್ತರು ಬ್ಯಾಟರಾಯನಪುರ ಠಾಣೆಯಲ್ಲಿ ದೂರು ದಾಖಲು
11:03 PM (IST) Jan 03
10:47 PM (IST) Jan 03
ಸುದ್ದಿ ನಿಷೇಧಕ್ಕೆ ದುರುದ್ದೇಶದ ಅರ್ಜಿ, ರಿಪೋರ್ಟರ್ ಟಿವಿಗೆ ದಂಡ ವಿಧಿಸಿದ ಬೆಂಗಳೂರು ಕೋರ್ಟ್, ರಿಪೋರ್ಟ್ ಟಿವಿ ವಾಹನಿ ತೀವ್ರ ಮುಖಭಂಗಕ್ಕೀಡಾಗಿದೆ. ರಿಪೋರ್ಟ್ ಟಿವಿಗೆ ಛೀಮಾರಿ ಹಾಕಿದ್ದು ಮಾತ್ರವಲ್ಲ ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ.
10:38 PM (IST) Jan 03
ಅಥಣಿ ಶಾಸಕ ಲಕ್ಷ್ಮಣ್ ಸವದಿ ಅವರು ತಮ್ಮ ವಿರುದ್ಧ ಕಳೆದ ಎರಡು ತಿಂಗಳಿಂದ ವ್ಯವಸ್ಥಿತ ರಾಜಕೀಯ ಸಂಚು ನಡೆಯುತ್ತಿದೆ ಎಂದು ಗಂಭೀರ ಆರೋಪ. ಡಿಸಿಸಿ ಬ್ಯಾಂಕ್ ಅಧಿಕಾರಿಯಾಗಿದ್ದ ತಮ್ಮ ಸಂಬಂಧಿಕನ ವರ್ಗಾವಣೆ ಹಿಂದೆ ಷಡ್ಯಂತ್ರವಿದೆ ಎಂದು ಹೇಳುವ ಮೂಲಕ, ಪರೋಕ್ಷವಾಗಿ ಜಾರಕಿಹೊಳಿ ಸಹೋದರರ ವಿರುದ್ಧ ವಾಗ್ದಾಳಿ
10:18 PM (IST) Jan 03
ಅಮಾನತ್ತಿನಿಂದ ಆಘಾತ ಆದ್ರೆ ಆತ್ಮ0ತ್ಯೆಗೆ ಪ್ರಯತ್ನಿಸಿಲ್ಲ, ಸ್ಫೋಟಕ ಮಾಹಿತಿ ಹಂಚಿಕೊಂಡ SP ನೆಜ್ಜೂರು ತಂದೆ, ಬಳ್ಳಾರಿ ಗಲಭೆ ಪ್ರಕರಣ , ದಕ್ಷ ಅಧಿಕಾರಿ ಪವನ್ ನೆಜ್ಜೂರ್ ನಿರ್ವಹಿಸಿದ ರೀತಿ ಹಾಗೂ ನಂತರದ ಬೆಳವಣಿಗೆ ಕುರಿತು ಪೊಲೀಸ್ ಅಧಿಕಾರಿ ತಂದೆ ಮಾಹಿತಿ ಹಂಚಿಕೊಂಡಿದ್ದಾರೆ.
09:38 PM (IST) Jan 03
09:13 PM (IST) Jan 03
ಬೀದರ್ ಜಿಲ್ಲೆಯ ಸಂತಪೂರ್ ಪೊಲೀಸರು ತೆಲಂಗಾಣದಿಂದ ನಡೆಯುತ್ತಿದ್ದ ಅಕ್ರಮ ಗಾಂಜಾ ಸಾಗಾಟ ಜಾಲವನ್ನು ಯಶಸ್ವಿಯಾಗಿ ಬೇಧಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ನಡೆಸಿದ ದಾಳಿಯಲ್ಲಿ, ಮೂವರು ಆರೋಪಿಗಳನ್ನು ಬಂಧಿಸಿ 10 ಲಕ್ಷ ಮೌಲ್ಯದ 20.63 ಕೆಜಿ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ್ದ ಆಟೋ ವಶಪಡಿಸಿಕೊಂಡಿದ್ದಾರೆ.
08:43 PM (IST) Jan 03
08:06 PM (IST) Jan 03
08:04 PM (IST) Jan 03
07:41 PM (IST) Jan 03
Gadag Ayurvedic Hospital incident: ಗದಗ ಜಿಲ್ಲೆಯ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಡಿ ಗ್ರೂಪ್ ನೌಕರ ಮಹಾಲಿಂಗೇಶ್ವರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಅಸ್ಪಷ್ಟವಾಗಿ ಬರೆದ ಡೆತ್ ನೋಟ್ ಪತ್ತೆಯಾಗಿದೆ.
07:14 PM (IST) Jan 03
ಬಿಗ್ ಬಾಸ್ ಫೈನಲಿಸ್ಟ್ ರಕ್ಷಿತಾ ಶೆಟ್ಟಿ ಅವರು ತಮ್ಮ ಪ್ರೀತಿ ಹಾಗೂ ಲವ್ ಬ್ರೇಕಪ್ ಕುರಿತು ಮಾತನಾಡಿದ್ದಾರೆ. ಹುಡುಗನನ್ನು ನೋಡಿ ಪ್ರೀತಿಯಾಗಿ, ಮನಸ್ಸಿಗೆ ಖುಷಿಯಾಗಿ, ನಂತರ ಬ್ರೇಕಪ್ ಆದಾಗ ಹೃದಯ ಒಡೆಯುತ್ತದೆ. ಅಂತಿಮವಾಗಿ, ನೋಡಿದ ಕಣ್ಣುಗಳೇ ಅಳುವ ಮೂಲಕ ಶಿಕ್ಷೆ ಅನುಭವಿಸುತ್ತವೆ ಎಂದಿದ್ದಾರೆ.
07:06 PM (IST) Jan 03
ಅಥಣಿ ಶಾಸಕ ಲಕ್ಷ್ಮಣ ಸವದಿ ಮತ್ತು ಅವರ ಪುತ್ರ ಚಿದಾನಂದ ಸವದಿ ಅವರು ಡಿಸಿಸಿ ಬ್ಯಾಂಕ್ ನೌಕರ ಹಾಗೂ ಹಾಲುಮತ ಸಮಾಜದ ಮುಖಂಡರೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಸತ್ಯಪ್ಪ ಬಾಗನ್ನವರ್ ಗಂಭೀರ ಆರೋಪ ಮಾಡಿದ್ದಾರೆ. ಶಾಸಕ ಮತ್ತು ಅವರ ಪುತ್ರನ ತಕ್ಷಣದ ಬಂಧನಕ್ಕೆ ಆಗ್ರಹಿಸಲಾಗಿದೆ.
07:06 PM (IST) Jan 03
ಲೋಕಲ್ ಕ್ರಿಕೆಟ್ ಟೂರ್ನಿಯಲ್ಲಿ ಪುಟ್ಟ ಬಾಲಕನ ಕನ್ನಡ-ಇಂಗ್ಲೀಷ್ ಕಮೆಂಟರಿ ವಿಡಿಯೋ ಜನ ಪಿಧಾ, ಈ ಬಾಲಕನಿಗೆ ರವಿ ಶಾಸ್ತ್ರಿ ಹಾಗೂ ಹರ್ಷಾ ಬೋಗ್ಲೆ ಕೋಚಿಂಗ್ ನೀಡಿದ್ದಾರೆ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.
06:52 PM (IST) Jan 03
06:36 PM (IST) Jan 03
ವಂದೇ ಭಾರತ್ ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿ ವೈರಲ್ ಆಗಿದ್ದ ಜೋಡಿಯ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ವಿಡಿಯೋ ವೈರಲ್ ಆಗಿ ತೀವ್ರ ಆಕ್ರೋಶ ವ್ಯಕ್ತವಾದ ನಂತರ, ಎರಡೂ ಕುಟುಂಬದವರು ಸೇರಿ ಈ ಜೋಡಿಗೆ ಮದುವೆ ಮಾಡಲು ಮುಂದಾಗಿದ್ದಾರೆ.
06:30 PM (IST) Jan 03
ಚಿಕ್ಕಮಗಳೂರು ನಗರದ ನೆಹರೂ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಕಟ್ಟಡದ ಮೇಲೇರಿ ಆತ್ಮ*ಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಆತಂಕ ಸೃಷ್ಟಿಸಿದ್ದ. ಸುಮಾರು ಒಂದು ಗಂಟೆಗಳ ಕಾಲ ನಡೆದ ಈ ಹೈಡ್ರಾಮಾದಲ್ಲಿ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆತನನ್ನು ಯಶಸ್ವಿಯಾಗಿ ರಕ್ಷಿಸಿದರು.
06:23 PM (IST) Jan 03
ಸಕಾಲ ಯೋಜನೆಯಡಿ ಡಿಸೆಂಬರ್ ತಿಂಗಳಿನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದೆ. ಜಿಲ್ಲೆಯಲ್ಲಿ ಸ್ವೀಕರಿಸಿದ 57,001 ಅರ್ಜಿಗಳ ಪೈಕಿ 53,955 ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡುವ ಮೂಲಕ ಈ ಐತಿಹಾಸಿಕ ಸಾಧನೆ ಮಾಡಲಾಗಿದೆ.
06:04 PM (IST) Jan 03
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಬಳ್ಳಾರಿ ಗುಂಡಿನ ಚಕಮಕಿ ಮತ್ತು ಕೋಗಿಲು ಬಡಾವಣೆ ತೆರವು ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವ ಬದಲು ಶಾಸಕರನ್ನು ರಕ್ಷಿಸುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು.
06:02 PM (IST) Jan 03
05:51 PM (IST) Jan 03
05:43 PM (IST) Jan 03
ಹೊಸ ವರ್ಷದ ಪಾರ್ಟಿ ನಂತರ 'ಸಕ್ಕರೆ ನಾಡು ಕೆಂಪಣ್ಣ' ಮತ್ತು 'ಕಬ್ಜಾ ಶರಣ್' ಎಂಬ ರೀಲ್ಸ್ ಸ್ಟಾರ್ಗಳು ಮಾಗಡಿಯಲ್ಲಿ ಸಾರ್ವಜನಿಕರಿಂದ ಹಲ್ಲೆಗೊಳಗಾಗಿದ್ದಾರೆ. ಆದರೆ, ಜನರು ಯಾಕೆ ಹಲ್ಲೆ ಮಾಡಿದ್ದಕ್ಕೆ ಕಾರಣ ರಿವೀಲ್ ಆಗಿದೆ. ಜೊತೆಗೆ, ಘಟನೆಯಿಂದ ಕಬ್ಜಾ ಶರಣ್ ಸೋಶಿಯಲ್ ಮೀಡಿಯಾಗೆ ವಿದಾಯ ಹೇಳಿದ್ದಾರೆ.
05:18 PM (IST) Jan 03
ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕರ್ತವ್ಯಲೋಪದ ಮೇಲೆ ಅಮಾನತುಗೊಂಡಿರುವ ಎಸ್ಪಿ ಪವನ್ ನೆಜ್ಜೂರ್ ಅವರು ಆತ್ಮಹ೧ತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಯನ್ನು ಗೃಹ ಸಚಿವ ಪರಮೇಶ್ವರ್ ತಳ್ಳಿಹಾಕಿದ್ದಾರೆ. ಪವನ್ ನೆಜ್ಜೂರ್ ಸಂಪೂರ್ಣ ಆರೋಗ್ಯವಾಗಿದ್ದು, ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾರೆ ಎಂದು ಅವರು ಸ್ಪಷ್ತನೆ.
05:14 PM (IST) Jan 03
ಕರ್ನಾಟಕ ಸಚಿವ ಸಂಪುಟವು ಕಾರ್ಪೊರೇಟ್ ಕಂಪನಿಗಳ ಸಿಎಸ್ಆರ್ ನಿಧಿಯನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಡ್ಡಾಯವಾಗಿ ಬಳಸುವ ಹೊಸ ನೀತಿಗೆ ಅನುಮೋದನೆ ನೀಡಿದೆ. ಈ ನೀತಿಯಡಿ, ವಾರ್ಷಿಕ 8500 ಕೋಟಿ ರೂ. ನಿಧಿಯನ್ನು ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಮತ್ತು ಮೂಲಸೌಕರ್ಯಕ್ಕೆ ಬಳಸಲಾಗುವುದು.
05:06 PM (IST) Jan 03
04:48 PM (IST) Jan 03
ಸಂಸದ ರಾಘವೇಂದ್ರ ಅವರು, ಎಸ್ಪಿ ಪವನ್ ನೆಜ್ಜೂರ್ ಆತ್ಮಹ೧ತ್ಯೆ ಯತ್ನಕ್ಕೆ ಸರ್ಕಾರದ ಒತ್ತಡವೇ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೆ, ಜನಾರ್ದನ ರೆಡ್ಡಿ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ, ಕೋಗಿಲು ಬಡಾವಣೆ ಅಕ್ರಮ ನಿವಾಸಿಗಳಿಗೆ ಮನೆ ನೀಡುವುದನ್ನು ವಿರೋಧಿಸಿ, ಇವಿಎಂ ಆರೋಪಗಳಿಗೆ ತಿರುಗೇಟು ನೀಡಿದರು.
04:15 PM (IST) Jan 03
Bigg Boss Kannada Season 12 Episode: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಈ ವಾರ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದರು. ಬೇರೆಯವರ ಕ್ಯಾಪ್ಟನ್ಸಿಯಲ್ಲಿ ಗಿಲ್ಲಿ ನಟ ಅವರು ಕೆಲಸ ಮಾಡಿರಲಿಲ್ಲ. ಈ ಬಾರಿ ಅವರು ಬೇರೆಯವರ ಬಳಿ ಕೆಲಸ ಮಾಡಿಸಬೇಕಿತ್ತು.
04:07 PM (IST) Jan 03
ರಾಣೆಬೆನ್ನೂರಿನಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮದ ಬಳಿಕ, ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಸುಂಟರಗಾಳಿಗೆ ಬೃಹತ್ ಪೆಂಡಾಲ್ ಕುಸಿದುಬಿದ್ದಿದೆ. ಈ ಘಟನೆಯಲ್ಲಿ ಸಚಿವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಬಗ್ಗೆ ವಿವರ ತಿಳಿಯಿರಿ.
03:13 PM (IST) Jan 03
03:11 PM (IST) Jan 03
Kannada Actor Movies: ತೆಲುಗು ಚಿತ್ರರಂಗದಲ್ಲಿ ಅನೇಕ ಹಿರಿಯ ನಟರಿದ್ದಾರೆ. ಅವರಲ್ಲಿ ಪ್ರತಿಯೊಬ್ಬರಿಗೂ ತಮ್ಮದೇ ಆದ ಪ್ರತಿಭೆ, ತಮ್ಮದೇ ಆದ ದಾಖಲೆಗಳಿವೆ. ಸ್ಟಾರ್ಡಮ್ ಇಲ್ಲದಿದ್ದರೂ ಅದ್ಭುತಗಳನ್ನು ಮಾಡಿದ ಅನೇಕರಿದ್ದಾರೆ. ಅವರಲ್ಲಿ 1000 ಚಿತ್ರಗಳ ದಾಖಲೆ ಹೊಂದಿರುವ ನಟನ ಬಗ್ಗೆ ನಿಮಗೆ ಗೊತ್ತಾ?
02:38 PM (IST) Jan 03
ಇನ್ನೇನು ಹದಿನೈದು ದಿನಗಳಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 12 ಶೋಗೆ ತೆರೆ ಬೀಳುವುದು. ಯಾರು ವಿಜೇತರಾಗುತ್ತಾರೆ ಎಂಬ ಕುತೂಹಲವಿದೆ. ಇನ್ನು ಗಿಲ್ಲಿ ನಟ ಅವರಿಗೆ ದೊಡ್ಡ ಮಟ್ಟದ ಅಭಿಮಾನಿ ಬಳಗ ಕೂಡ ಇದೆ. ಇವರು ವಿನ್ ಆಗ್ತಾರೆ ಎಂಬ ನಿರೀಕ್ಷೆ ಮಧ್ಯೆ ಕೆಲ ತಪ್ಪುಗಳನ್ನು ಮಾಡಿಕೊಂಡಿದ್ದಾರೆ.
02:38 PM (IST) Jan 03
ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಸಿ, ಗರ್ಭವತಿಯನ್ನಾಗಿಸಿ ವಂಚಿಸಿದ ಪ್ರಕರಣಕ್ಕೆ ರಾಜಕೀಯ ತಿರುವು ಸಿಕ್ಕಿದೆ. ಡಿಎನ್ಎ ಪರೀಕ್ಷೆಯಲ್ಲಿ ಮಗುವಿನ ತಂದೆ ಎಂದು ಸಾಬೀತಾದರೂ, ಮದುವೆಗೆ ನಿರಾಕರಿಸಿ 50 ಲಕ್ಷ ರೂ. ಆಮಿಷವೊಡ್ಡಿದ್ದಾರೆ ಎನ್ನಲಾಗಿದೆ.
02:11 PM (IST) Jan 03
ಬಳ್ಳಾರಿ ಹಿಂಸಾಚಾರದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಎಸ್ಪಿ ಪವನ್ ನೆಜ್ಜೂರು ಅವರು ತೀವ್ರ ಮನನೊಂದು ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ. ತುಮಕೂರಿನ ತಮ್ಮ ನಿವಾಸದಲ್ಲಿ ಅತಿಯಾದ ಮಾತ್ರೆ ಸೇವಿಸಿದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
01:34 PM (IST) Jan 03
ಬಳ್ಳಾರಿಯಲ್ಲಿ ನಡೆದ ಗಲಾಟೆಗೆ ಜನಾರ್ಧನ ರೆಡ್ಡಿ ಕಾರಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಅವರ ಕೊಲೆ ಯತ್ನದ ಆರೋಪವನ್ನು 'ಡ್ರಾಮಾ' ಎಂದು ತಳ್ಳಿಹಾಕಿ, ಕೋಟೆ ಕಟ್ಟಿಕೊಂಡು ಕುಳಿತಿರುವ ಅವರಿಗೆ ಯಾರಿಂದಲೂ ಭಯವಿಲ್ಲ, ಬದಲಿಗೆ ಅವರಿಂದಲೇ ಜನರಿಗೆ ಭಯವಿದೆ ಎಂದು ಹೇಳಿದರು.
01:24 PM (IST) Jan 03
01:20 PM (IST) Jan 03
12:54 PM (IST) Jan 03
ಛತ್ತೀಸ್ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಬೃಹತ್ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಕನಿಷ್ಠ 14 ನಕ್ಸಲರು ಹತರಾಗಿದ್ದಾರೆ. ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಈ ಘಟನೆ ನಡೆದಿದೆ.
12:41 PM (IST) Jan 03
12:33 PM (IST) Jan 03
BBK 12 Gilli Nata: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿರುವ ಗಿಲ್ಲಿ ನಟ ಈಗಾಗಲೇ ಸಾಕಷ್ಟು ಜನರ ಮನಸ್ಸನ್ನು ಗೆದ್ದಿದ್ದಾರೆ. ಅವರು ಈ ಶೋನಲ್ಲಿ ಕಾಮಿಡಿ ಮಾಡಿ, ತಕ್ಷಣ ಪ್ರತಿಕ್ರಿಯೆ ನೀಡಿ ಹೆಸರು ಗಳಿಸಿದ್ದಾರೆ. ಆಟದ ವಿಚಾರದಲ್ಲಿ ಕೂಡ ಅವರು ಬುದ್ಧಿವಂತಿಕೆ ತೋರಿಸಿದ್ದರು.
12:29 PM (IST) Jan 03
ಬಿಗ್ಬಾಸ್ 19ರ ಫೈನಲಿಸ್ಟ್ ತಮಗೆ 150 ಅಂಗರಕ್ಷಕರು ಇದ್ದಾರೆ ಎಂದು ಹೇಳಿ ಸುದ್ದಿಯಾಗಿದ್ದರು. ಆದರೆ, ಶೋ ಮುಗಿದ ನಂತರ ತಮ್ಮ ಹೇಳಿಕೆಯನ್ನು ನಿರಾಕರಿಸಿರುವ ಅವರು, ತನ್ನ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಯಾರೀಕೆ?