ನವದೆಹಲಿ: ಕರ್ನಾಟಕದ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯರನ್ನಾಗಿ ನೇಮಕ ಮಾಡಿ ಪಕ್ಷವು ಮಂಗಳವಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ಬಗ್ಗೆ ಪ್ರಕಟಣೆ ನೀಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ. ಈವರೆಗೆ ಸಿಎಂ ಆಗಿದ್ದ ಸಿದ್ದರಾಮಯ್ಯ ಸಿಡಬ್ಲ್ಯುಸಿಯ ಪದನಿಮಿತ್ತ ಸದಸ್ಯರಾಗಿದ್ದರು. ಈಗ ಸಿಎಂ ಸ್ಥಾನದಿಂದ ನಿರ್ಗಮನದ ಕಾರಣ ಕಾಯಂ ಸದಸ್ಯರೆಂದು ನೇಮಿಸಲಾಗಿದೆ.

10:13 PM (IST) Jun 03
ಕರ್ಪೂರ ಸ್ನಾನವು ಆರೋಗ್ಯಕರವಾಗಿದ್ದರೂ, ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸ್ನಾನದ ನೀರಿಗೆ ಅತಿಯಾದ ಕರ್ಪೂರ ಹಾಕಬೇಡಿ; ಒಂದು ಚಿಟಿಕೆ ಪುಡಿ ಸಾಕು. ಈ ನೀರು ನೇರವಾಗಿ ಕಣ್ಣುಗಳಿಗೆ ಬೀಳದಂತೆ ಜಾಗ್ರತೆ ವಹಿಸಿ.
09:29 PM (IST) Jun 03
09:12 PM (IST) Jun 03
ಮನೆ ನಿರ್ಮಾಣಕ್ಕೆ ಒಸಿ ಸಿಸಿ ತಲೆನೋವಿಲ್ಲ, ನಿರುದ್ಯೋಗಿಗಳಿಗೆ ತರಬೇತಿ ಹಾಗೂ ಉದ್ಯೋಗ ಅವಕಾಶ, ಉಚಿತ ಬಸ್ ಬಾಸ್ ಸೇರಿ 6 ಮಹತ್ವದ ಘೋಷಣೆ ಹೊರಬಿದ್ದಿದೆ. ಸಿಎಂ ಡಿಕೆ ಶಿವಕುಮಾರ್ ಮಾಡಿದ 6 ಘೋಷಣೆ ವಿವರ ಇಲ್ಲಿದೆ.
09:06 PM (IST) Jun 03
08:43 PM (IST) Jun 03
08:39 PM (IST) Jun 03
ಮುಖ್ಯಮಂತ್ರಿಯಾಗಿ ಸಚಿವ ಸಂಪುಟ ಸಭೆ ನಡೆಸಿದ ಡಿಕೆ ಶಿವಕುಮಾರ್ ಬಳಿಕ ಸುದ್ದಿಗೋಷ್ಠಿ ನಡೆಸಿದ್ದಾರೆ. ಮೊದಲ ಸುದ್ದಿಗೋಷ್ಠಿಯಲ್ಲಿ ಬಂಪರ್ ಕೊಡುಗೆ ಘೋಷಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಿಸಿದ್ದಾರೆ.
08:37 PM (IST) Jun 03
ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅವರು, ಕೊಡಗು ಜಿಲ್ಲೆಯ ಮೂಲಕ ಯಾವುದೇ ಹೊಸ ರೈಲು ಮಾರ್ಗದ ಪ್ರಸ್ತಾವನೆ ಸದ್ಯಕ್ಕೆ ರೈಲ್ವೆ ಸಚಿವಾಲಯದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವರೊಂದಿಗಿನ ಭೇಟಿಯ ನಂತರ, ಈ ಹಿಂದೆ ಹರಿದಾಡುತ್ತಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ.
08:04 PM (IST) Jun 03
ಡಿ.ಕೆ.ಶಿವಕುಮಾರ್.. ರಾಜಕೀಯದಲ್ಲಿ ಪಕ್ಕಾ ಚದುರಂಗದಾಟಗಾರ.. ಯಾವ ಸಮಯದಲ್ಲಿ ಯಾವ ಕಾಯಿನ್ ಮೂವ್ ಮಾಡಿದ್ರೆ ಏನಾಗುತ್ತೆ ಅನ್ನೋದರ ಕ್ಲಾರಿಟಿ ಅವರಿಗಿದೆ. ಅದೇ ಕ್ಲಾರಿಟಿಯನ್ನ ಇಡ್ಕೊಂಡು, ಪ್ಲಾನ್ ಮಾಡಿ ಸಿಎಂ ಸಿಂಹಾಸನವನ್ನ ತಮ್ಮದಾಗಿಕೊಂಡಿದ್ದಾರೆ ಕನಕಾಧಿಪತಿ.
07:31 PM (IST) Jun 03
07:27 PM (IST) Jun 03
ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದ್ದಾರೆ.
07:15 PM (IST) Jun 03
ಮಂಗಳೂರಿನಲ್ಲಿ ಅರಣ್ಯ ಇಲಾಖೆಯ ಜೀಪನ್ನೇ ಎಗರಿಸಿದ ಖದೀಮನನ್ನು ಕೆಲವೇ ಗಂಟೆಗಳಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಪತ್ತೆಮಾಡಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ಪಡೀಲ್ ಅರಣ್ಯ ಇಲಾಖೆಯ ವಸತಿಗೃಹ..
06:39 PM (IST) Jun 03
05:37 PM (IST) Jun 03
ಡಿಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಡಿಕೆಶಿ ಜೊತೆಗೆ 13 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಂತ್ರಿಗಳ ಪ್ರಮಾಣವಚನ ಸ್ವೀಕಾರದ ಫೋಟೋ ಇಲ್ಲಿದೆ.
05:31 PM (IST) Jun 03
05:29 PM (IST) Jun 03
ಬೆಂಗಳೂರಿನ ಟ್ರಾಫಿಕ್ ಮತ್ತು ಮೂಲಸೌಕರ್ಯ ಸಮಸ್ಯೆಗಳು ಹೊಸತೇನಲ್ಲ. ಆದರೆ, ಆಸ್ಪತ್ರೆಗೆ ಹೋಗುತ್ತಿದ್ದ ಮಹಿಳೆಯೊಬ್ಬರಿದ್ದ ಆಂಬುಲೆನ್ಸ್ ಟ್ರಾಫಿಕ್ನಲ್ಲಿ ಸಿಲುಕಿಕೊಂಡ ಘಟನೆಯೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ..
05:28 PM (IST) Jun 03
ಡಿ.ಕೆ. ಶಿವಕುಮಾರ್ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ, ಜ್ಯೋತಿಷಿಗಳ ಸಲಹೆಯಂತೆ ವಾಸ್ತು ಪ್ರಕಾರ ವಿಧಾನಸೌಧದ ಸಾಂಪ್ರದಾಯಿಕ ಪಶ್ಚಿಮ ದ್ವಾರದ ಬದಲು 'ಉತ್ತರ ದ್ವಾರ'ದ ಮೂಲಕ ಪ್ರವೇಶಿಸಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಿದ್ದಾರೆ.
04:39 PM (IST) Jun 03
04:38 PM (IST) Jun 03
ಮೂರು ದಿನದ ಹಿಂದೆ ಕೊಡಗಿನ ಜೈಲಿನಲ್ಲಿ ಇರಿತಕ್ಕೆ ಒಳಗಾಗಿದ್ದ ವಿಚಾರಣಾಧೀನ ಖೈದಿ ಇಂದು ಮೈಸೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಖೈದಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರು..
04:19 PM (IST) Jun 03
ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದ ಆರ್ವಿ ರಸ್ತೆ ಮತ್ತು ಜಯನಗರ ನಿಲ್ದಾಣಗಳ ನಡುವೆ 'ಹನಿಕಾಂಬ್' ಎಂಬ ಗಂಭೀರ ರಚನಾತ್ಮಕ ದೋಷ ಪತ್ತೆಯಾಗಿದೆ. ಈ ಕಾರಣದಿಂದ ರೈಲುಗಳ ವೇಗವನ್ನು ಕಡಿಮೆ ಮಾಡಲಾಗಿದೆ.
04:19 PM (IST) Jun 03
03:35 PM (IST) Jun 03
ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ, ಅವರ ಪುತ್ರಿ ಐಶ್ವರ್ಯಾ ಇನ್ಸ್ಟಾಗ್ರಾಮ್ನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ತಮ್ಮ ತಂದೆಯನ್ನು 'ಬಂಡೆ' ಎಂದು ಕರೆಯುವುದರ ಹಿಂದಿನ ಕಠಿಣ ಶ್ರಮವನ್ನು ನೆನಪಿಸಿಕೊಂಡಿದ್ದಾರೆ.
01:58 PM (IST) Jun 03
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ತಮ್ಮ ಬಳಿ ಇಟ್ಟುಕೊಳ್ಳುತ್ತಾರೆಯೇ ಅಥವಾ ಹಿರಿಯ ಶಾಸಕ ರಾಮಲಿಂಗಾರೆಡ್ಡಿಗೆ ನೀಡುತ್ತಾರೆಯೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಿದೆ.
12:57 PM (IST) Jun 03
12:56 PM (IST) Jun 03
12:53 PM (IST) Jun 03
12:37 PM (IST) Jun 03
12:04 PM (IST) Jun 03
11:33 AM (IST) Jun 03
ಕಾಂಗ್ರೆಸ್ ಪಕ್ಷದ 'ಟ್ರಬಲ್ ಶೂಟರ್' ಎಂದೇ ಖ್ಯಾತರಾದ ಡಿ.ಕೆ. ಶಿವಕುಮಾರ್, ತಮ್ಮ ರಾಜಕೀಯ ಚಾಕಚಕ್ಯತೆಯಿಂದ ಗುರುತಿಸಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಹಿಂದೆ ಹಲವು ಖಾತೆಗಳ ಸಚಿವರಾಗಿದ್ದರು.
11:06 AM (IST) Jun 03
ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿದೆ ಎನ್ನಲಾಗಿದೆ. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರೇ ಖುದ್ದು ಕರೆ ಮಾಡಿ ಸೂಚನೆ ನೀಡಿದ್ದು, ಹರಿಪ್ರಸಾದ್ ಅವರು ಈ ಹುದ್ದೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
10:46 AM (IST) Jun 03
ಬೆಂಗಳೂರಿನ ಲೋಕಭವನದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭಕ್ಕೆ ಭಾರೀ ಭದ್ರತೆ ಒದಗಿಸಲಾಗಿದೆ. ಸುಮಾರು 4,800ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದ್ದು, ಶ್ವಾನದಳ ಮತ್ತು ಬಾಂಬ್ ಪತ್ತೆ ದಳದಿಂದ ತಪಾಸಣೆ ನಡೆಸಲಾಗುತ್ತಿದೆ. ಸಮಾರಂಭದ ವೇಳೆ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ
10:06 AM (IST) Jun 03
09:52 AM (IST) Jun 03
09:00 AM (IST) Jun 03
ಡಿ.ಕೆ.ಶಿವಕುಮಾರ್ ಅವರ ಆಪ್ತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಆರಾಧ್ಯ ಅವರು ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕೊಠಡಿಯ ವಾಸ್ತು ಪರಿಶೀಲನೆ ನಡೆಸಿದ್ದಾರೆ. ಡಿಕೆಶಿ ಆರಾಧ್ಯ ದೈವ ನೊಣವಿನಕೆರೆ ಅಜ್ಜಯ್ಯನ ಫೋಟೋ ಇಟ್ಟು ವಿಶೇಷ ಪೂಜೆ ನೆರವೇರಿಸಲಾಗಿದೆ.
08:28 AM (IST) Jun 03
08:27 AM (IST) Jun 03
08:12 AM (IST) Jun 03
ಬೆಂಗಳೂರಿನ ಕೆ.ಆರ್. ಸರ್ಕಲ್ ಅಂಡರ್ಪಾಸ್ನಲ್ಲಿ ಮಳೆ ನೀರು ನಿಲ್ಲುವ ದೀರ್ಘಕಾಲದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಪಾಲಿಕೆ ಮುಂದಾಗಿದೆ. ಅಂಡರ್ಪಾಸ್ನಿಂದ ಬೃಹತ್ ನೀರುಗಾಲುವೆಗೆ 900 ಮಿ.ಮೀ ಪೈಪ್ಲೈನ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ.
07:46 AM (IST) Jun 03
07:27 AM (IST) Jun 03
ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದರೆಡ್ಡಿ ಅವರನ್ನು ಬೆಂಗಳೂರಿನ ಆನೇಕಲ್ ಬಳಿ ಕೇರಳ ಮೂಲದ ಗ್ಯಾಂಗ್ ಅಪಹರಿಸಿದೆ. ₹10 ಕೋಟಿ ಸುಪಾರಿ ನೀಡಲಾಗಿದೆ ಎಂದು ಬೆದರಿಸಿ, ನಂತರ ₹2 ಕೋಟಿಗೆ ಬೇಡಿಕೆಯಿಟ್ಟು, ಹಣ ನೀಡುವುದಾಗಿ ಒಪ್ಪಿದ ನಂತರ ಅವರನ್ನು ಬಿಟ್ಟು ಕಳುಹಿಸಿದ್ದಾರೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
07:06 AM (IST) Jun 03