ನವದೆಹಲಿ: ಕರ್ನಾಟಕದ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯರನ್ನಾಗಿ ನೇಮಕ ಮಾಡಿ ಪಕ್ಷವು ಮಂಗಳವಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ಬಗ್ಗೆ ಪ್ರಕಟಣೆ ನೀಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ. ಈವರೆಗೆ ಸಿಎಂ ಆಗಿದ್ದ ಸಿದ್ದರಾಮಯ್ಯ ಸಿಡಬ್ಲ್ಯುಸಿಯ ಪದನಿಮಿತ್ತ ಸದಸ್ಯರಾಗಿದ್ದರು. ಈಗ ಸಿಎಂ ಸ್ಥಾನದಿಂದ ನಿರ್ಗಮನದ ಕಾರಣ ಕಾಯಂ ಸದಸ್ಯರೆಂದು ನೇಮಿಸಲಾಗಿದೆ.

08:27 AM (IST) Jun 03
08:12 AM (IST) Jun 03
ಬೆಂಗಳೂರಿನ ಕೆ.ಆರ್. ಸರ್ಕಲ್ ಅಂಡರ್ಪಾಸ್ನಲ್ಲಿ ಮಳೆ ನೀರು ನಿಲ್ಲುವ ದೀರ್ಘಕಾಲದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಪಾಲಿಕೆ ಮುಂದಾಗಿದೆ. ಅಂಡರ್ಪಾಸ್ನಿಂದ ಬೃಹತ್ ನೀರುಗಾಲುವೆಗೆ 900 ಮಿ.ಮೀ ಪೈಪ್ಲೈನ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ.
07:46 AM (IST) Jun 03
07:27 AM (IST) Jun 03
ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದರೆಡ್ಡಿ ಅವರನ್ನು ಬೆಂಗಳೂರಿನ ಆನೇಕಲ್ ಬಳಿ ಕೇರಳ ಮೂಲದ ಗ್ಯಾಂಗ್ ಅಪಹರಿಸಿದೆ. ₹10 ಕೋಟಿ ಸುಪಾರಿ ನೀಡಲಾಗಿದೆ ಎಂದು ಬೆದರಿಸಿ, ನಂತರ ₹2 ಕೋಟಿಗೆ ಬೇಡಿಕೆಯಿಟ್ಟು, ಹಣ ನೀಡುವುದಾಗಿ ಒಪ್ಪಿದ ನಂತರ ಅವರನ್ನು ಬಿಟ್ಟು ಕಳುಹಿಸಿದ್ದಾರೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
07:06 AM (IST) Jun 03