ಕಲಬುರಗಿ: ಕಲಬುರಗಿಯಿಂದ ಜೇವರ್ಗಿಗೆ ಹೋಗುವ ರಸ್ತೆಯಲ್ಲಿನ ವಾಜಪೇಯಿ ಬಡಾವಣೆಯಲ್ಲಿ ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಲೋಕಾರ್ಪಣೆಗೊಂಡಿದ್ದ ‘ಪ್ರಬುದ್ಧ ಅಕಾಡೆಮಿ’ಯ ಕಟ್ಟಡದಲ್ಲಿದ್ದ ಉಪಾಹಾರ ಕೊಠಡಿಯಲ್ಲಿ ಚಾವಣಿ ಕುಸಿದಿದ್ದು ವಿದ್ಯಾರ್ಥಿನಿಯೋರ್ವಳು ಪಾರಾಗಿರುವ ಘಟನೆ ಸೋಮವಾರ ನಡೆದಿದೆ. ಕಳೆದ ಜನವರಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಬುದ್ಧ ಅಕಾಡೆಮಿ ಕೇಂದ್ರವನ್ನು ಉದ್ಘಾಟಿಸಿದ್ದರು. ಒಂದೇ ತಿಂಗಳಲ್ಲೇ ಕುಸಿದು ಬೀಳುವ ಹಂತಕ್ಕೆ ಕಟ್ಟಡವನ್ನು ಕಟ್ಟಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತರಬೇತಿ ಕೇಂದ್ರದ ಉಸ್ತುವಾರಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ ಪ್ರತಿಕ್ರಿಯಿಸಿದ್ದು, "ಮೇಲ್ಚಾವಣಿ ಕುಸಿದಿರುವ ಬಗ್ಗೆ ಕಟ್ಟಡ ಕಂಟ್ರಾಕ್ಟರ್ ಆಗಿರುವ ಕೆಆರ್ ಐಡಿಎಲ್ ಇಲಾಖೆಗೆ ತಿಳಿಸಿದ್ದೇವೆ. ಉಪಾಹಾರ ಕೇಂದ್ರ ಉಪಯೋಗಿಸದ ಕಾರಣ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ.
09:52 PM (IST) Mar 03
08:46 PM (IST) Mar 03
08:12 PM (IST) Mar 03
ನಟ ಕಿಶೋರ್ ಕುಮಾರ್, ಇರಾನ್ ಮೇಲಿನ ಅಮೆರಿಕ-ಇಸ್ರೇಲ್ ದಾಳಿಗೆ ಭಾರತದ ಮೌನವನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ 'ಜೀ ಹುಜೂರ್' ಸಂಸ್ಕೃತಿಯಿಂದಾಗಿ ಜಾಗತಿಕ ಮಟ್ಟದಲ್ಲಿ ಭಾರತವನ್ನು 'ಹೇಡಿ, ಅವಕಾಶವಾದಿಗಳ ದೇಶ' ಎಂದು ಕರೆಯುವಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
08:08 PM (IST) Mar 03
ಬೆಂಗಳೂರಿನಲ್ಲಿ ಜಾರಿಗೆ ತಂದಿರುವ ಹೊಸ 'ಪ್ರೀಮಿಯಂ ಎಫ್ಎಆರ್' ಮತ್ತು 'ಟಿಡಿಆರ್' ನೀತಿಗೆ ವಿರೋಧ ವ್ಯಕ್ತವಾಗಿದೆ. ಇದು ಡೆವಲಪರ್ಗಳಿಗೆ ಮಾತ್ರ ಲಾಭದಾಯಕವಾಗಿದ್ದು, ಭೂಮಾಲೀಕರಿಗೆ ಅನ್ಯಾಯ ಮಾಡುತ್ತದೆ ಎಂದು ಆರೋಪಿಸಿ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಲಾಗಿದೆ.
07:51 PM (IST) Mar 03
ಯುವರಾಜ್ ಕುಮಾರ್ ಜೊತೆಗಿನ ವಿಚ್ಛೇದನ ಪ್ರಕರಣದ ನಡುವೆ, ಶ್ರೀದೇವಿ ಬೈರಪ್ಪ ಅವರು ಹಂಚಿಕೊಂಡಿರುವ ಸೋಶಿಯಲ್ ಮೀಡಿಯಾ ಪೋಸ್ಟ್ ಕುತೂಹಲ ಮೂಡಿಸಿದೆ. ಮಹಿಳೆಯರನ್ನು 'ಗೋಲ್ಡ್ ಡಿಗ್ಗರ್' ಎಂದು ಕರೆಯುವುದರ ವಿರುದ್ಧ ಅವರ ಪೋಸ್ಟ್, ತಮ್ಮ ವೈಯಕ್ತಿಕ ಜೀವನದ ಸನ್ನಿವೇಶಗಳಿಗೆ ಉತ್ತರ ಎಂದು ಚರ್ಚೆಯಾಗುತ್ತಿದೆ.
07:34 PM (IST) Mar 03
ಕೇಂದ್ರ-ರಾಜ್ಯ ಸಂಬಂಧಗಳ ಕುರಿತ ತಮಿಳುನಾಡು ಸರ್ಕಾರದ ವರದಿ ಬೆಂಬಲಿಸಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ಗೆ ಪತ್ರ ಬರೆದಿದ್ದಾರೆ. ಒಕ್ಕೂಟ ವ್ಯವಸ್ಥೆ 'ಸಹಕಾರ'ದಿಂದ 'ಬಲಾತ್ಕಾರ'ದತ್ತ ಸಾಗುತ್ತಿದ್ದು, ರಾಜ್ಯಗಳ ಹಣಕಾಸು ಸ್ವಾಯತ್ತತೆಗೆ ಧಕ್ಕೆಯಾಗುತ್ತಿದೆ ಎಂದಿದ್ದಾರೆ.
06:23 PM (IST) Mar 03
ಡಾ.ಪಿ.ವೈ.ರಾಜೇಂದ್ರಕುಮಾರ್ ಅವರ 'ಗ್ರಾಮೀಣ ಜ್ಞಾನ ಸಮುಚ್ಚಯಗಳು' ಪುಸ್ತಕ ಬಿಡುಗಡೆ ಸಮಾರಂಭದಲ್ಲಿ, ಗ್ರಂಥಾಲಯಗಳಿಗೆ ಸರ್ಕಾರದ ಪುಸ್ತಕ ಖರೀದಿ ಸ್ಥಗಿತಗೊಂಡಿರುವ ಬಗ್ಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಳವಳ ವ್ಯಕ್ತಪಡಿಸಿದರು.
06:07 PM (IST) Mar 03
ಚಿಕ್ಕಮಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನಲ್ಲಿ ಡೀಸೆಲ್ ಸೋರಿಕೆಯಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 32 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
05:41 PM (IST) Mar 03
ವರ್ಷದ ಮೊದಲ ಖಗ್ರಾಸ್ ಚಂದ್ರಗ್ರಹಣದಂದು, ದೇಶದ ಹಲವು ದೇಗುಲಗಳು ಮುಚ್ಚಿದರೆ, ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠವು ಭಕ್ತರ ದರ್ಶನಕ್ಕೆ ತೆರೆದಿರುತ್ತದೆ. ಕೇವಲ 21 ನಿಮಿಷಗಳ ಕಾಲ ಗ್ರಹಣದ ಅನುಷ್ಠಾನವಿದ್ದು, ದರ್ಶನಕ್ಕೆ ಯಾವುದೇ ನಿರ್ಬಂಧವಿಲ್ಲದಿದ್ದರೂ, ಕೆಲವು ವಿಶೇಷ ಸೇವೆ ಬದಲಾವಣೆಯಾಗಿದೆ.
05:18 PM (IST) Mar 03
ಐಪಿಎಲ್ನ ಹಾಲಿ ಚಾಂಪಿಯನ್ಸ್ 'ರಾಯಲ್ ಚಾಲೆಂಜರ್ಸ್ ಬೆಂಗಳೂರು' (RCB) ತಂಡವು ತನ್ನ 5 ತವರು ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ ಎಂದು ಅಧಿಕೃತವಾಗಿ ಘೋಷಿಸಿದೆ. ಕರ್ನಾಟಕ ಸರ್ಕಾರ, ಕೆಎಸ್ಸಿಎ ಮತ್ತು ಪೊಲೀಸರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದಿದೆ.
05:17 PM (IST) Mar 03
ಥೈಲ್ಯಾಂಡ್ನ 37 ವರ್ಷದ ಮಹಿಳೆಯೊಬ್ಬರು ಒಂದೇ ಮಂಟಪದಲ್ಲಿ ಇಬ್ಬರು ಆಸ್ಟ್ರೇಲಿಯಾದ ಪುರುಷರನ್ನು ವಿವಾಹವಾಗಿದ್ದಾರೆ. ಹಲವು ವರ್ಷಗಳ ಸಂಬಂಧದ ನಂತರ, ಕುಟುಂಬದವರ ಒಪ್ಪಿಗೆಯೊಂದಿಗೆ ಸ್ಥಳೀಯ ಸಂಪ್ರದಾಯದಂತೆ ಈ ಮದುವೆ ನಡೆದಿದೆ. ಆದರೆ ಥಾಯ್ ಕಾನೂನಿನಡಿ ಇದಕ್ಕೆ ಮಾನ್ಯತೆ ಇಲ್ಲ.
05:02 PM (IST) Mar 03
ಫೋನ್ ಟ್ಯಾಪಿಂಗ್ ಆರೋಪದ ಕುರಿತು ಸಿಎಂ ಸಿದ್ದರಾಮಯ್ಯಗೆ ಚಲವಾದಿ ನಾರಾಯಣಸ್ವಾಮಿ ಸವಾಲು ಹಾಕಿದ್ದಾರೆ. ತಾವು ಫೋನ್ ಟ್ಯಾಪ್ ಮಾಡಿಲ್ಲವೆಂದು ದೇವರ ಮೇಲೆ ಪ್ರಮಾಣ ಮಾಡುವಂತೆ ಆಗ್ರಹಿಸಿದ್ದು, ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ ಎಂದು ಗುತ್ತಿಗೆದಾರರ ಸಮಸ್ಯೆ ಮತ್ತು ಕಟ್ಟಡ ಕುಸಿತದ ವಿಚಾರವಾಗಿ ವಾಗ್ದಾಳಿ
04:55 PM (IST) Mar 03
How to Check LPG Gas Level at Home? Simple Cylinder Tricks ಎಲ್ಪಿಜಿ ಸಿಲಿಂಡರ್ನಲ್ಲಿ ಎಷ್ಟು ಗ್ಯಾಸ್ ಉಳಿದಿದೆ ಎಂದು ತಿಳಿಯಲು ಯಾವುದೇ ಯಂತ್ರದ ಅಗತ್ಯವಿಲ್ಲ. ಒದ್ದೆ ಬಟ್ಟೆ, ಗ್ಯಾಸ್ ಜ್ವಾಲೆಯ ಬಣ್ಣ ಮತ್ತು ಸಿಲಿಂಡರ್ ಅಲ್ಲಾಡಿಸುವಂತಹ ಟ್ರಿಕ್ ಬಳಸಿ ಇದನ್ನ ಅಂದಾಜಿಸಬಹುದು.
04:24 PM (IST) Mar 03
04:19 PM (IST) Mar 03
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಫೋನ್ ಟ್ಯಾಪಿಂಗ್ ಆರೋಪ ಮಾಡಿದ್ದು, ಈ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಕಾನೂನು ಸಲಹೆಗಾರ ಪೊನ್ನಣ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಆಧಾರ ನೀಡಿದರೆ ತನಿಖೆಗೆ ಸಿದ್ಧ ಎಂದು ಸವಾಲು ಹಾಕಿದ್ದಾರೆ.
03:41 PM (IST) Mar 03
03:39 PM (IST) Mar 03
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಮಾಡಿದ ಫೋನ್ ಟ್ಯಾಪಿಂಗ್ ಆರೋಪಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಮೇಲೆ ಗೂಢಚರ್ಯೆ ನಡೆಸಲಾಗುತ್ತಿದೆ ಎಂಬುದು 'ಹತಾಶೆಯ ಹೇಳಿಕೆ' ಎಂದರು.
03:38 PM (IST) Mar 03
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಫೋನ್ ಟ್ಯಾಪಿಂಗ್ಆರೋಪವನ್ನು ತಳ್ಳಿಹಾಕಿದ CM ಸಿದ್ದರಾಮಯ್ಯ, ಇದು ವಿಪಕ್ಷಗಳ ಹತಾಶ ಹೇಳಿಕೆಯಾಗಿದ್ದು, ತಮ್ಮ ಹಿಂದಿನ ಅನುಭವದಿಂದಲೇ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಅಲ್ಲದೆ, HDK ಸ್ವಾಮೀಜಿಗಳ ಫೋನ್ ಕದ್ದಾಲಿಸಿದ್ದರು ಎಂದು ಆರೋಪಿಸಿದ್ದಾರೆ.
03:07 PM (IST) Mar 03
Iran Likely to Boycott FIFA World Cup 2026 ಅಮೆರಿಕ ಆತಿಥ್ಯದ 2026ರ ಫಿಫಾ ವಿಶ್ವಕಪ್ನಿಂದ ಹಿಂದೆ ಸರಿಯಲು ಇರಾನ್ ಚಿಂತನೆ ನಡೆಸಿದೆ. ಅಮೆರಿಕ-ಇಸ್ರೇಲ್ ದಾಳಿ ಮತ್ತು ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಉಂಟಾದ ರಾಜಕೀಯ ಉದ್ವಿಗ್ನತೆಯೇ ಇದಕ್ಕೆ ಕಾರಣ.
02:40 PM (IST) Mar 03
02:14 PM (IST) Mar 03
ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ, ಸದಸ್ಯರ ವಿರೋಧದ ನಡುವೆಯೂ ಶೇ.3ರಷ್ಟು ತೆರಿಗೆ ಹೆಚ್ಚಳಕ್ಕೆ ನಿರ್ಧರಿಸಲಾಯಿತು. ಘನತ್ಯಾಜ್ಯ ನಿರ್ವಹಣೆ ಯೋಜನೆಗೆ ರಾಜ್ಯ ಸರ್ಕಾರದ ಅನುದಾನ ವಿಳಂಬ ಮತ್ತು ಅಧಿಕಾರಿಗಳು ಮಾಹಿತಿ ನೀಡದಿರುವ ಬಗ್ಗೆಯೂ ತೀವ್ರ ಚರ್ಚೆ ನಡೆಯಿತು.
02:12 PM (IST) Mar 03
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಸೇತುವೆ ಮೇಲೆ ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ಅರಣ್ಯ ಭೂಮಿ ಸಾಗುವಳಿದಾರರು ತಮ್ಮ ಭೂಮಿಯ ಹಕ್ಕಿಗಾಗಿ ಪ್ರತಿಭಟನೆ ನಡೆಸಿದರು. ಮದನ್ ಗೋಪಾಲ್ ಸಮಿತಿ ವರದಿ ಜಾರಿಗೊಳಿಸುವಂತೆ ಆಗ್ರಹಿಸಿದರು.
02:12 PM (IST) Mar 03
ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ರಥೋತ್ಸವದಲ್ಲಿ ರಥದ ಬಟ್ಟೆಯ ವಿಚಾರ ರಾಜಕೀಯ ಜಟಾಪಟಿಗೆ ಕಾರಣವಾಗಿತ್ತು. ಜಿಲ್ಲಾಡಳಿತದ ಮಧ್ಯಪ್ರವೇಶದಿಂದ, ಯಾವುದೇ ಬಟ್ಟೆ ಬಳಸದೆ ರಥವನ್ನು ಸಂಪೂರ್ಣವಾಗಿ ಹೂವುಗಳಿಂದ ಅಲಂಕರಿಸಿ ಉತ್ಸವವನ್ನು ಶಾಂತಿಯುತವಾಗಿ ನಡೆಸಲಾಯಿತು.
02:01 PM (IST) Mar 03
ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ, ವಿದೇಶಾಂಗ ನೀತಿಯ ಕುರಿತು ಕಾಂಗ್ರೆಸ್ನ ಟೀಕೆಗೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ರಾಷ್ಟ್ರದ ಹಿತಾಸಕ್ತಿಯೇ ಮುಖ್ಯವಾಗಿದ್ದು, ಹಳೆಯ ಅಲಿಪ್ತ ನೀತಿಗೆ ಅಂಟಿಕೊಳ್ಳುವ ಅಗತ್ಯವಿಲ್ಲ ಎಂದರು..
01:49 PM (IST) Mar 03
01:46 PM (IST) Mar 03
01:12 PM (IST) Mar 03
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಎ.ಕೆ.ನಾಗೇಂದ್ರಪ್ಪ ಹಾಗೂ ಮಧ್ಯವರ್ತಿಯೊಬ್ಬರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 1 ಲಕ್ಷ ರೂ. ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇಬ್ಬರೂ ಸಿಕ್ಕಿಬಿದ್ದಿದ್ದಾರೆ.
01:07 PM (IST) Mar 03
ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ಕಟುವಾಗಿ ಟೀಕಿಸಿದ್ದು, ಇದು ರಾಷ್ಟ್ರದ ಘನತೆಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿದ್ದಾರೆ. 'ಎಪ್ಸ್ಟೀನ್ ಫೈಲ್' ಮೂಲಕ ಅಮೆರಿಕ ಇಸ್ರೇಲ್ ಪ್ರಧಾನಿ ಮೋದಿಯವರನ್ನು ಬ್ಲ್ಯಾಕ್ಮೇಲ್ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.
01:05 PM (IST) Mar 03
01:04 PM (IST) Mar 03
ಬೆಂಗಳೂರಿನ ಗೋರಗುಂಟೆಪಾಳ್ಯ ಜಂಕ್ಷನ್ನಲ್ಲಿನ ತೀವ್ರ ಸಂಚಾರ ದಟ್ಟಣೆಯನ್ನು ನಿವಾರಿಸಲು, ನಗರ ನಿಗಮವು ಸಣ್ಣ ಸುರಂಗ ರಸ್ತೆ ನಿರ್ಮಾಣದ ಪ್ರಸ್ತಾವನೆಯನ್ನು ಮುಂದಿಟ್ಟಿದೆ. ಈ ದೀರ್ಘಾವಧಿ ಯೋಜನೆಯ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಅಧ್ಯಯನ ನಡೆಯುತ್ತಿದೆ.
12:28 PM (IST) Mar 03
ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್ಮೆಂಟ್ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, 10 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ. ಈ ಅಂತರಾಷ್ಟ್ರೀಯ ಡ್ರಗ್ಸ್ ಜಾಲದಲ್ಲಿ ಕೇರಳ ಮೂಲದ ಯುವಕ-ಯುವತಿಯನ್ನು ಬಂಧಿಸಲಾಗಿದೆ.
12:02 PM (IST) Mar 03
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ರಂಜಾನ್ ಹಬ್ಬದ ದೇಣಿಗೆ ಸಂಗ್ರಹದ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಕಲ್ಲು ತೂರಾಟ ನಡೆದಿದೆ. ಪ್ರತಿ ಕುಟುಂಬಕ್ಕೆ ₹1000 ದೇಣಿಗೆ ನಿಗದಿಪಡಿಸಿದ್ದನ್ನು ವಿರೋಧಿಸಿದಾಗ ಈ ಘರ್ಷಣೆ ಉಂಟಾಗಿದ್ದು, ಪೊಲೀಸರು 10 ಜನರನ್ನು ಬಂಧಿಸಿದ್ದಾರೆ.
11:36 AM (IST) Mar 03
Business couple takes sanyasa ದಾವಣಗೆರೆಯ ಪ್ರಖ್ಯಾತ ಉದ್ಯಮಿ ದಂಪತಿ ಭರತ್ ಜೈನ್ ಆರತಿ, ಇಬ್ಬರು ಉನ್ನತ ಶಿಕ್ಷಿತ ಯುವತಿಯರೊಂದಿಗೆ ಐಷಾರಾಮಿ ಜೀವನ ತ್ಯಜಿಸಿ ಜೈನ ಸನ್ಯಾಸತ್ವ ಸ್ವೀಕಾರ. ಈಗಾಗಲೇ ಸನ್ಯಾಸ ಸ್ವೀಕರಿಸಿರುವ ತಮ್ಮ ಮಕ್ಕಳ ಹಾದಿಯಲ್ಲೇ ಸಾಗುತ್ತಿರುವ ಈ ಪೋಷಕರ ನಿರ್ಧಾರ ಗಮನ ಸೆಳೆದಿದೆ.
11:31 AM (IST) Mar 03
ಒಂದನೇ ತರಗತಿ ಪ್ರವೇಶಕ್ಕೆ ನಿಗದಿಪಡಿಸಿರುವ 6 ವರ್ಷದ ವಯೋಮಿತಿಯಲ್ಲಿ 90 ದಿನಗಳ ಸಡಿಲಿಕೆ ನೀಡುವಂತೆ ಯುಕೆಜಿ ಪೋಷಕರ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದೆ. ಜೂನ್ 1ರ ಕಟ್-ಆಫ್ ದಿನಾಂಕದಿಂದಾಗಿ ಸುಮಾರು 2.30 ಲಕ್ಷ ಮಕ್ಕಳು ಒಂದು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳುವ ಆತಂಕದಲ್ಲಿದೆ.
11:19 AM (IST) Mar 03
ಒಂದೂವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದು ಹೋಗಿದ್ದ ಪುನೀತ್ ಪೂಜಾರಿ , ಒಮನ್ನಲ್ಲಿ ಕೆಲಸ ಮಾಡಿಕೊಂಡಿದ್ದನು. ಕಳೆದ ಕೆಲವು ದಿನಗಳಿಂದ ಯುವತಿ ಫೋನ್ ಕಾಲ್ಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಮೆಸೇಜ್ ಸಹ ಕಳುಹಿಸುತ್ತಿರಲಿಲ್ಲ.
10:48 AM (IST) Mar 03
ಕಲಬುರಗಿಯಲ್ಲಿ ಬೀಗ ಹಾಕಿದ್ದ ಮನೆಗಳನ್ನೇ ನೋಡಿ ಕಳ್ಳತನ ಮಾಡುವ ಕಳ್ಳಿಯರ ಗ್ಯಾಂಗೊಂದು ಕಾರ್ಯಾಚರಿಸುತ್ತಿದ್ದು, ಈ ಕಳ್ಳಿಯರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳ್ಳಿಯರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ..
10:07 AM (IST) Mar 03
ಪ್ರಜ್ವಲ್ ಜೈಲಿಗೆ ಹೋಗಲು ನೂರಕ್ಕೆ ನೂರು ಕುಮಾರಸ್ವಾಮಿ ಕಾರಣ. ಸಿಡಿ ಬಿಡಿಸಿದ್ದೆ ಕುಮಾರಸ್ವಾಮಿ. ಎಂತೆಂತೊರೊ ಜೈಲಿಂದ ಹೊರ ಬಂದಿದ್ದಾರೆ. ಮಾಜಿ ಪ್ರಧಾನಿ ಮನಸ್ಸು ಮಾಡಿದ್ರೆ ಬಿಡಿಸಬಹುದಿತ್ತು. ಷಡ್ಯಂತ್ರ ಮಾಡಿ ಪ್ರಜ್ವಲ್ನ ಜೈಲಿಗೆ ಹಾಕಿಸಿದ್ದಾರೆ
09:41 AM (IST) Mar 03
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕುರಂಕೋಟೆ ಗ್ರಾಮದಲ್ಲಿ, ಸಿದ್ದರಾಜಯ್ಯ ಎಂಬುವವರು ಸಾಲ ಪಾವತಿಸಿಲ್ಲ ಎಂದು ಊರೆಲ್ಲಾ ಪೋಸ್ಟರ್ ಅಂಟಿಸಿ ಅವಮಾನಿಸಲಾಗಿದೆ. ಕೃತ್ಯದ ಹಿಂದೆ, ತಮ್ಮಿಂದ ಹಣ ಪಡೆದು ವಂಚಿಸಿದ್ದ ಚಿಟ್ಸ್ ಕಂಪನಿ ಮ್ಯಾನೇಜರ್ ಗೌತಮ್ ರಾಜ್ ಕೈವಾಡವಿದೆ ಎಂದು ಸಿದ್ದರಾಜಯ್ಯ ಆರೋಪಿಸಿದ್ದಾರೆ.
09:39 AM (IST) Mar 03
ರಾಮನಗರ ಗ್ರಾಮಾಂತರ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ, ಇಬ್ಬರು ಕುಖ್ಯಾತ ಅಂತರಾಜ್ಯ ವಾಹನ ಕಳ್ಳರನ್ನು ಬಂಧಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 15ಕ್ಕೂ ಹೆಚ್ಚು ಕಳವು ಮಾಡಲಾಗಿದ್ದ ವಾಹನಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ.
09:24 AM (IST) Mar 03
ಇರಾನ್- ಅಮೆರಿಕ- ಇಸ್ರೇಲ್ ಸಂಘರ್ಷ ತೀವ್ರವಾದ ಬೆನ್ನಲ್ಲೇ ‘ಇರಾನ್ ಪರವಾದ ಪ್ರಚೋದನಾಕಾರಿ ಭಾಷಣ, ಹೇಳಿಕೆಗಳ ಬಗ್ಗೆ ನಿಗಾ ವಹಿಸಿ. ಇರಾನ್ ಪರವಾದ ವಿದೇಶಿ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಿ’ ಎಂದು ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಸೂಚಿಸಿದೆ.