ಕಲಬುರಗಿ: ಕಲಬುರಗಿಯಿಂದ ಜೇವರ್ಗಿಗೆ ಹೋಗುವ ರಸ್ತೆಯಲ್ಲಿನ ವಾಜಪೇಯಿ ಬಡಾವಣೆಯಲ್ಲಿ ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಲೋಕಾರ್ಪಣೆಗೊಂಡಿದ್ದ ‘ಪ್ರಬುದ್ಧ ಅಕಾಡೆಮಿ’ಯ ಕಟ್ಟಡದಲ್ಲಿದ್ದ ಉಪಾಹಾರ ಕೊಠಡಿಯಲ್ಲಿ ಚಾವಣಿ ಕುಸಿದಿದ್ದು ವಿದ್ಯಾರ್ಥಿನಿಯೋರ್ವಳು ಪಾರಾಗಿರುವ ಘಟನೆ ಸೋಮವಾರ ನಡೆದಿದೆ. ಕಳೆದ ಜನವರಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಬುದ್ಧ ಅಕಾಡೆಮಿ ಕೇಂದ್ರವನ್ನು ಉದ್ಘಾಟಿಸಿದ್ದರು. ಒಂದೇ ತಿಂಗಳಲ್ಲೇ ಕುಸಿದು ಬೀಳುವ ಹಂತಕ್ಕೆ ಕಟ್ಟಡವನ್ನು ಕಟ್ಟಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತರಬೇತಿ ಕೇಂದ್ರದ ಉಸ್ತುವಾರಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ ಪ್ರತಿಕ್ರಿಯಿಸಿದ್ದು, "ಮೇಲ್ಚಾವಣಿ ಕುಸಿದಿರುವ ಬಗ್ಗೆ ಕಟ್ಟಡ ಕಂಟ್ರಾಕ್ಟರ್ ಆಗಿರುವ ಕೆಆರ್ ಐಡಿಎಲ್ ಇಲಾಖೆಗೆ ತಿಳಿಸಿದ್ದೇವೆ. ಉಪಾಹಾರ ಕೇಂದ್ರ ಉಪಯೋಗಿಸದ ಕಾರಣ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ.
09:41 AM (IST) Mar 03
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕುರಂಕೋಟೆ ಗ್ರಾಮದಲ್ಲಿ, ಸಿದ್ದರಾಜಯ್ಯ ಎಂಬುವವರು ಸಾಲ ಪಾವತಿಸಿಲ್ಲ ಎಂದು ಊರೆಲ್ಲಾ ಪೋಸ್ಟರ್ ಅಂಟಿಸಿ ಅವಮಾನಿಸಲಾಗಿದೆ. ಕೃತ್ಯದ ಹಿಂದೆ, ತಮ್ಮಿಂದ ಹಣ ಪಡೆದು ವಂಚಿಸಿದ್ದ ಚಿಟ್ಸ್ ಕಂಪನಿ ಮ್ಯಾನೇಜರ್ ಗೌತಮ್ ರಾಜ್ ಕೈವಾಡವಿದೆ ಎಂದು ಸಿದ್ದರಾಜಯ್ಯ ಆರೋಪಿಸಿದ್ದಾರೆ.
09:39 AM (IST) Mar 03
ರಾಮನಗರ ಗ್ರಾಮಾಂತರ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ, ಇಬ್ಬರು ಕುಖ್ಯಾತ ಅಂತರಾಜ್ಯ ವಾಹನ ಕಳ್ಳರನ್ನು ಬಂಧಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 15ಕ್ಕೂ ಹೆಚ್ಚು ಕಳವು ಮಾಡಲಾಗಿದ್ದ ವಾಹನಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ.
09:24 AM (IST) Mar 03
ಇರಾನ್- ಅಮೆರಿಕ- ಇಸ್ರೇಲ್ ಸಂಘರ್ಷ ತೀವ್ರವಾದ ಬೆನ್ನಲ್ಲೇ ‘ಇರಾನ್ ಪರವಾದ ಪ್ರಚೋದನಾಕಾರಿ ಭಾಷಣ, ಹೇಳಿಕೆಗಳ ಬಗ್ಗೆ ನಿಗಾ ವಹಿಸಿ. ಇರಾನ್ ಪರವಾದ ವಿದೇಶಿ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಿ’ ಎಂದು ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಸೂಚಿಸಿದೆ.
09:00 AM (IST) Mar 03
09:00 AM (IST) Mar 03
ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಕಣ್ಣೀರಿಟ್ಟಿದ್ದಾರೆ. ತಮ್ಮ ಕುಟುಂಬವನ್ನು ಬೀದಿಗೆ ತಂದು ನಿತ್ಯ ಕೋರ್ಟ್ಗೆ ಅಲೆದಾಡುವ ಸ್ಥಿತಿ ನಿರ್ಮಿಸಿದ್ದಾರೆ ಎಂದು ಆರೋಪಿಸಿ ಶಾಸಕರು ಕಣ್ಣೀರಿಟ್ಟಿದ್ದಾರೆ. ಶಾಸಕರನ್ನೇ ಅಲೆದಾಡಿಸಿದವರು ಯಾರು?
08:24 AM (IST) Mar 03
ಬೆಳಗಾವಿ ತಾಲೂಕಿನ ಸತ್ತಿ ಗ್ರಾಮದ 8ನೇ ತರಗತಿ ವಿದ್ಯಾರ್ಥಿ ಶ್ರೀಶೈಲ ಕಲಗೌಡ ಜಗದೇವ, ಮನೆಯಲ್ಲಿನ ನಿರುಪಯುಕ್ತ ವಸ್ತುಗಳನ್ನು ಬಳಸಿ 80 ಕೆಜಿ ಭಾರ ಎಳೆಯಬಲ್ಲ ಟ್ರ್ಯಾಕ್ಟರ್ ಅನ್ನು ಸಂಶೋಧಿಸಿದ್ದಾನೆ. ಈ ಬಾಲಕನ ವೈಜ್ಞಾನಿಕ ಮನೋಭಾವ ಮತ್ತು ಸಾಧನೆಗೆ ಶಾಲೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.
08:11 AM (IST) Mar 03
ಸಾಮೂಹಿಕ ಅತ್ಯಾ*ಚಾರ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಅಮೃತಹಳ್ಳಿ ಪೊಲೀಸರು, ಆರೋಪಿ ನಿಖಿಲ್ ಗ್ಯಾಂಗ್ ಈ ಹಿಂದೆ ನಗರದ ಹೊರವಲಯದ ವಿಲ್ಲಾಗಳಲ್ಲಿ ಆಯೋಜಿಸಿದ್ದ ಹಲವು ಪಾರ್ಟಿಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.
07:57 AM (IST) Mar 03
07:48 AM (IST) Mar 03
ಮಧ್ಯಪ್ರಾಚ್ಯ ದೇಶಗಳಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದ ತೊಂದರೆಗೊಳಗಾದ ಕನ್ನಡಿಗರು ಮತ್ತು ಇತರೆ ಭಾರತೀಯರನ್ನು ರಕ್ಷಿಸಲು ತುರ್ತು ಕ್ರಮ ಕೈಗೊಳ್ಳಬೇಕು, ವಿಶೇಷ ವಿಮಾನ ವ್ಯವಸ್ಥೆ ಮಾಡಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
07:44 AM (IST) Mar 03
ಬಾಗಲಕೋಟೆ ಹೋಳಿ ಹಬ್ಬ ಆಚರಣೆ ಮಂಗಳವಾರ ಉದ್ಘಾಟನೆಗೊಳ್ಳಲಿದೆ. ಈ ಉತ್ಸವದಲ್ಲಿ ಕಾಮದಹನ, ಮಾ.5 ರಿಂದ 7ರವರೆಗೆ ಮೂರು ದಿನಗಳ ಬಣ್ಣದಾಟ, ಸೋಗಿನ ಪ್ರದರ್ಶನ ಹಾಗೂ ಮಾ.6 ರಂದು ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆಯೊಂದಿಗೆ ವಿಶೇಷ ರೇನ್ ಡ್ಯಾನ್ಸ್ ಕಾರ್ಯಕ್ರಮಗಳು ಜರುಗಲಿವೆ.
07:36 AM (IST) Mar 03
ಬೇಯಿಸಿದ ಆಲೂಗಡ್ಡೆ ಸಿಪ್ಪೆ ತೆಗೆಯುವುದು ಹಲವರಿಗೆ ಕಷ್ಟದ ಕೆಲಸ. ಆದರೆ, ಖ್ಯಾತ ಶೆಫ್ ಪಂಕಜ್ ಬದೌರಿಯಾ ಹಂಚಿಕೊಂಡಿರುವ ಒಂದು ಸರಳ ಕಿಚನ್ ಹ್ಯಾಕ್ ಬಳಸಿ ಈ ಕೆಲಸವನ್ನು ಸುಲಭವಾಗಿಸಬಹುದು.
07:07 AM (IST) Mar 03
ಧಾರವಾಡದಲ್ಲಿ ಅಪಘಾತವೆಂದು ಬಿಂಬಿಸಲಾಗಿದ್ದ ಮಹಿಳೆಯ ಸಾವಿನ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಅಪಘಾತ ಮಾಡಿದ ವಾಹನದ ಹಿಂದಿದ್ದ ಬಸ್ನಲ್ಲಿರುವ ಡ್ಯಾಶ್ ಕ್ಯಾಮರಾದಲ್ಲಿ ಈ ಭಯಾನಕ ದೃಶ್ಯ ಸೆರೆಯಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
07:04 AM (IST) Mar 03
ಬಾರ್ಕೂರು ಸಮೀಪದ ಬೆಣ್ಣೆಕುದ್ರು ಸೇತುವೆಯ ಮೇಲೆ ಬುಧ, ಶುಕ್ರ, ಮಂಗಳ, ಗುರು, ಶನಿ, ಯುರೇನೆಸ್ ಮತ್ತು ನೆಪ್ಚೂನ್ ಗ್ರಹಗಳು ಒಂದೇ ರೇಖೆಯಲ್ಲಿ ಬಂದ ಅಪರೂಪದ 'ಪ್ಲಾನೆಟರಿ ಪರೇಡ್' ನಡೆಯಿತು. ಖಗೋಳಾಸಕ್ತರು, ವಿದ್ಯಾರ್ಥಿಗಳು ಮತ್ತು ಸ್ಥಳೀಯರು ದೂರದರ್ಶಕದ ಮೂಲಕ ವಿಸ್ಮಯವನ್ನು ವೀಕ್ಷಿಸಿ ಸಂತಸಪಟ್ಟರು.
06:55 AM (IST) Mar 03