ಕೊಪ್ಪಳ: ಇಸ್ಲಾಂ ಧರ್ಮದ ಕುರಿತ ತಮ್ಮ ಹೇಳಿಕೆಗೆ ಎರಡು ದಿನಗಳಿಂದ ವ್ಯಾಪಕ ಪ್ರಚಾರ ಕೊಟ್ಟಿರುವುದಕ್ಕೆ ಧನ್ಯವಾದ, ಇಲ್ಲದಿದ್ದರೆ ಬಸವರಾಜ ರಾಯರೆಡ್ಡಿ ಅಂದರೆ ಯಾರಿಗೂ ಗೊತ್ತಿರಲಿಲ್ಲ. ಸೌದಿ ಅರೇಬಿಯಾ, ಇರಾನ್ನಲ್ಲೆಲ್ಲ ಪ್ರಚಾರ ಸಿಕ್ಕಿದೆ ಎಂದು ಮುಖ್ಯಮಂತ್ರಿ ಅವರೂ ಹೇಳಿದ್ದಾರೆ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.
ಯಲಬುರ್ಗಾ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಮಾತನಾಡಿದ ಅವರು, 2 ದಿನ ಪ್ರಚಾರ ಕೊಟ್ಟಿದ್ದಕ್ಕೆ ಧನ್ಯವಾದ. ಧರ್ಮದ ವಿಚಾರವಾಗಿ ನನ್ನ ಹೇಳಿಕೆಯಿಂದ ನನಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಸಿಕ್ಕಿದೆ. ದೇಶದ ಬೇರೆ ಬೇರೆ ನಾಯಕರು ಮಾತನಾಡುತ್ತಾರೆ. ನನ್ನ ಹೇಳಿಕೆಯನ್ನು ಅರ್ಧ ಬಳಸಿದ್ದರಿಂದ ಖ್ಯಾತಿ, ಅಪಖ್ಯಾತಿ ಉಂಟಾಗಿದೆ. ದಯವಿಟ್ಟು ಮಾಧ್ಯಮದವರು ಹೇಳಿಕೆಯನ್ನು ಪೂರ್ಣವಾಗಿ ಪ್ರಸಾರ ಮಾಡುವಂತೆ ಮನವಿ ಮಾಡಿದರು.
08:57 AM (IST) Sep 03
08:43 AM (IST) Sep 03
08:14 AM (IST) Sep 03
ಬೆಳಗಾವಿ ದಂಡುಮಂಡಳಿ ಪ್ರದೇಶವನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಕುರಿತು ಯಾವುದೇ ಅಂತಿಮ ನಿರ್ಧಾರವಾಗಿಲ್ಲ ಎಂದು ಸಿಇಒ ಮಂಚಲವಾರ ಸುದಾಮ ಸ್ಪಷ್ಟಪಡಿಸಿದ್ದಾರೆ. ಈ ಪ್ರಸ್ತಾವನೆಯು ಇನ್ನೂ ಪರಿಶೀಲನಾ ಹಂತದಲ್ಲಿದ್ದು, ಅಂತಿಮ ತೀರ್ಮಾನ ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ಸೇರಿದೆ ಎಂದು ಅವರು ತಿಳಿಸಿದ್ದಾರೆ.
07:52 AM (IST) Sep 03
07:19 AM (IST) Sep 03
ಸಚಿವ ಬಸವರಾಜ ರಾಯರಡ್ಡಿ ಅವರು ಇಸ್ಲಾಂ ಧರ್ಮ ಶ್ರೇಷ್ಠ ಎಂದು ನೀಡಿದ್ದಾರೆ ಎನ್ನಲಾದ ಹೇಳಿಕೆಗೆ ಮಾಜಿ ಸಚಿವ ಹಾಲಪ್ಪ ಆಚಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಯರಡ್ಡಿ ಮೊದಲು ತಮ್ಮ ತಂದೆ-ತಾಯಿಯ ಧರ್ಮವನ್ನು ಅಧ್ಯಯನ ಮಾಡಲಿ, ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು.
06:56 AM (IST) Sep 03
ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ವಾಲ್ಮೀಕಿ ನಿಗಮ ಹಗರಣ ಸಂಬಂಧ ಬಿ. ನಾಗೇಂದ್ರ, ಅಕ್ರಮ ಆಸ್ತಿ ಪ್ರಕರಣದಲ್ಲಿ ರೇಣುಕಾಚಾರ್ಯ ಮತ್ತು ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಬಗ್ಗೆ ಚರ್ಚೆಯಾಗುವ ಸಾಧ್ಯತೆಗಳಿವೆ.
06:43 AM (IST) Sep 03
06:29 AM (IST) Sep 03
06:19 AM (IST) Sep 03
06:06 AM (IST) Sep 03