LIVE NOW
Published : Aug 30, 2026, 06:59 AM ISTUpdated : Aug 30, 2026, 09:35 AM IST

Karnataka News Live: Mysuru - ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಕೃಷಿ ಭೂಮಿ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ

ಸಾರಾಂಶ

ಗದಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಬಾಗಿಲು ಹಾಕಿ ಒತ್ತಾಯಪೂರ್ವಕವಾಗಿ ರಾಜೀನಾಮೆ ಸಲ್ಲಿಸುವಂತೆ ಮಾಡಿದರು ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು. ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಒತ್ತಡ ಹೇರುವ ಮೂಲಕ ರಾಜೀನಾಮೆ ಪಡೆಯುವುದು ಸರಿಯಾದ ಕ್ರಮವಲ್ಲ. ನಾನು ಯಾವುದೇ ತಪ್ಪು ಮಾಡದಿದ್ದರೂ ರಾಜೀನಾಮೆ ನೀಡುವಂತೆ ಒತ್ತಾಯಿಸಲಾಯಿತು. ಬಾಗಿಲು ಹಾಕಿಕೊಂಡು ಈ ರೀತಿಯಾಗಿ ರಾಜೀನಾಮೆ ಪಡೆಯುವ ಪರಿಸ್ಥಿತಿ ಎದುರಾಗಿದ್ದು ನೋವು ತಂದಿತ್ತು. ರಾಜಕೀಯದಲ್ಲಿ ಅಧಿಕಾರಕ್ಕಿಂತ ಪ್ರಜಾಪ್ರಭುತ್ವದ ಮೌಲ್ಯಗಳು, ಪರಸ್ಪರ ಗೌರವ ಹಾಗೂ ಪಾರದರ್ಶಕತೆ ಮುಖ್ಯವಾಗಬೇಕು. ನಾನು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು, ಅದೇ ಹುದ್ದೆಗೆ ಏರುವೆ ಎಂದರು.

ಸಭಾಪತಿ ಸ್ಥಾನದಲ್ಲಿ ಕುಳಿತುಕೊಂಡು ಯಾವುದೇ ರೀತಿಯ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮಾಡದೇ ಆ ಸ್ಥಾನಕ್ಕೆ ಗೌರವ ತರುವ ರೀತಿಯಲ್ಲಿ ನಡೆದುಕೊಂಡಿದ್ದೇನೆ. ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಸಂಬಂಧಿಸಿದಂತೆ ಪತ್ರ ನೀಡಿದ್ದರೆ, ಅದನ್ನು ಎರಡು ನಿಮಿಷದಲ್ಲೇ ತಿರಸ್ಕರಿಸುತ್ತಿದ್ದೆ. ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಅವಿಶ್ವಾಸ ನಿರ್ಣಯದ ಕಾನೂನುಬದ್ಧ ಮಾರ್ಗವನ್ನು ಅನುಸರಿಸಿದ್ದರೆ ಅದನ್ನು ಎದುರಿಸಲು ಸಿದ್ಧನಿದ್ದೆ ಎಂದರು.

09:35 AM (IST) Aug 30

Mysuru - ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಕೃಷಿ ಭೂಮಿ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ

ಮೈಸೂರಿನಲ್ಲಿ ಸಿದ್ದರಾಮಯ್ಯ ಹಾಗೂ ಡಾ. ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ, ವಿದ್ಯುತ್ ಮಾರ್ಗಕ್ಕಾಗಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರು ದಿಢೀರ್ ಪ್ರತಿಭಟನೆ ನಡೆಸಿದರು. ತಮ್ಮ 165 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಡುವಂತೆ ಆಗ್ರಹಿಸಿ, ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
Read Full Story

09:25 AM (IST) Aug 30

ಚಿಕ್ಕಮಗಳೂರಿನ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ; ಹಿಂದೂ ಸಂಘಟನೆ ವಿರುದ್ಧ ಕೇಸ್ ದಾಖಲು

ಚಿಕ್ಕಮಗಳೂರಿನ ಎಂ.ಇ.ಎಸ್. ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಈದ್ ಮಿಲಾದ್ ಆಚರಣೆ ವಿಚಾರವಾಗಿ ಹಿಂದೂ ಪರ ಸಂಘಟನೆಗಳು ಮತ್ತು ಶಾಲಾ ಸಿಬ್ಬಂದಿ ನಡುವೆ ವಿವಾದ ಉಂಟಾಯಿತು. ಈ ಘಟನೆ ಮಾತಿನ ಚಕಮಕಿಗೆ ಕಾರಣವಾಗಿ, ಪ್ರಾಂಶುಪಾಲರ ದೂರಿನ ಮೇರೆಗೆ ಹಲವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read Full Story

09:12 AM (IST) Aug 30

ಕುಮಾರಸ್ವಾಮಿ ತಮ್ಮ ಹೆಂಡ್ತಿಯ ಫೋನನ್ನೇ ಟ್ಯಾಪ್‌ ಮಾಡಿಸಿದ್ದರು; ಬೇಕಿದ್ರೆ ದಾಖಲೆ ಕೊಡ್ತೇನೆ - ಸಚಿವ ಬಾಲಕೃಷ್ಣ ಗಂಭೀರ ಆರೋಪ

ಕೇಂದ್ರ ಸಚಿವ ಕುಮಾರಸ್ವಾಮಿಯವರು ತಮ್ಮ ಪತ್ನಿಯ ಫೋನ್ ಕೂಡ ಟ್ಯಾಪಿಂಗ್ ಮಾಡಿಸಿದ್ದಾರೆ ಎಂದು ಸಚಿವ ಎಚ್.ಸಿ.ಬಾಲಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಮೇಲಿನ ಗನ್ ಪಾಯಿಂಟ್ ಆರೋಪವನ್ನು ನಿರಾಕರಿಸಿದ ಅವರು, ಕುಮಾರಸ್ವಾಮಿಯವರು ತಮ್ಮ ಮಗನ ಬೆಳವಣಿಗೆಯನ್ನೂ ಸಹಿಸುವುದಿಲ್ಲ ಎಂದು ಟೀಕಿಸಿದ್ದಾರೆ.
Read Full Story

09:12 AM (IST) Aug 30

ಶ್ರೀನಿವಾಸಪುರದಲ್ಲಿ ರೈಲ್ವೆ ಕೋಚ್‌ ಕಾರ್ಖಾನೆ ಸ್ಥಾಪನೆಗೆ ಮನವಿ

ಕೋಲಾರ ಜಿಲ್ಲೆಯ ಹಲವು ವರ್ಷಗಳ ರೈಲ್ವೆ ಬೇಡಿಕೆಗಳು ಗುದ್ದಲಿ ಪೂಜೆಗೇ ಸೀಮಿತವಾಗಿವೆ. ಶ್ರೀನಿವಾಸಪುರ ಕೋಚ್ ಕಾರ್ಖಾನೆ, ಮೇಲ್ಸೇತುವೆಗಳ ನಿರ್ಮಾಣದಂತಹ ಯೋಜನೆಗಳಿಗೆ ಮರುಜೀವ ನೀಡುವಂತೆ ರೈತ ಸಂಘವು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣನವರಿಗೆ ಮನವಿ ಸಲ್ಲಿಸಿದೆ.
Read Full Story

08:50 AM (IST) Aug 30

Belagavi - 24 ಎಕ್ರೆ ಜಾಗದಲ್ಲಿ ಐಟಿ ಪಾರ್ಕ್ ನಿರ್ಮಾಣ; ಅಂದಾಜು ವೆಚ್ಚ ₹1223 ಕೋಟಿ

ಬೆಳಗಾವಿಯ 24 ಎಕರೆ ಪ್ರದೇಶದಲ್ಲಿ ಬೃಹತ್ ಐಟಿ ಪಾರ್ಕ್ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿ ಹೊಂದಿರುವ ಈ ಯೋಜನೆಯ ಜೊತೆಗೆ, ಆಸ್ಪತ್ರೆ, ಮಹಿಳಾ ಜಿಮ್‌ಗಳು ಮತ್ತು ನಗರ ಸೌಂದರ್ಯೀಕರಣದಂತಹ ಇತರ ಅಭಿವೃದ್ಧಿ ಯೋಜನೆಗಳಿಗೂ ಚಾಲನೆ ನೀಡಲು ನಿರ್ಧರಿಸಲಾಗಿದೆ.

Read Full Story

08:36 AM (IST) Aug 30

ಮಂತ್ರಾಲಯ - ಇಂದು ರಾಯರ 355ನೇ ಆರಾಧನಾ ಮಹೋತ್ಸವ; ಕಾರ್ಯಕ್ರಮಗಳ ವಿವರ ಇಲ್ಲಿದೆ

ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಮಂತ್ರಾಲಯದಲ್ಲಿ ಮಧ್ಯಾರಾಧನೆಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ವಿಶೇಷ ದಿನದಂದು, ಶ್ರೀ ಸುಬುಧೇಂದ್ರ ತೀರ್ಥರು ರಾಯರ ಮೂಲ ಬೃಂದಾವನಕ್ಕೆ ಮಹಾ ಪಂಚಾಮೃತ ಅಭಿಷೇಕ ನಡೆಯಲಿದೆ..

Read Full Story

08:34 AM (IST) Aug 30

Kalaburagi ಮಹಾನಗರ ಪಾಲಿಕೆಗೆ ನೂತನ ಮೇಯರ್, ಉಪ ಮೇಯರ್ ಆಯ್ಕೆ - ಗೆದ್ದ ಕಾಂಗ್ರೆಸ್

ರಾಜಕೀಯವಾಗಿ ತೀವ್ರ ಕುತೂಹಲ ಮೂಡಿಸಿದ್ದ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಜ್ಮಲ್ ಅಹಮದ್ ಗೋಳಾ ಅವರು ನೂತನ ಮೇಯರ್ ಆಗಿ ಮತ್ತು ಫರ್ಹಾನಾಜ್ ಖುಸ್ರೋ ಜಹಗೀರ್ದಾರ್ ಅವರು ಉಪ ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ.

Read Full Story

07:56 AM (IST) Aug 30

Jarkiholi - 'ಪಕ್ಷಕ್ಕೆ ಮುಜುಗರವಾಗಿದ್ದು ನಿಜ..' ಬಿ ನಾಗೇಂದ್ರ ರಾಜೀನಾಮೆ, ಡಿಸಿಎ ಸ್ಥಾನದ ಬಗ್ಗೆ ಸಚಿವ ಜಾರಕಿಹೊಳಿ ಮಹತ್ವದ ಹೇಳಿಕೆ

ಸಚಿವ ನಾಗೇಂದ್ರ ಅವರು ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದು, ಈ ವಿಚಾರ ಈಗ ಮುಕ್ತಾಯವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿಲ್ಲ, ಆದರೆ ಸಮಯ ಬಂದಾಗ ಎಲ್ಲವೂ ನಿರ್ಧಾರವಾಗಲಿದೆ ಎಂದರು.

Read Full Story

07:52 AM (IST) Aug 30

Bengaluru - ನೆಕ್ಸಸ್ ಮಾಲ್‌ನಲ್ಲಿ ಮುಂದುವರಿದ ಶೋಧ; 6 ಮಳಿಗೆಗಳಲ್ಲಿ 45 ಸಾವಿರ ದಂಡ

ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಕೋರಮಂಗಲ ನೆಕ್ಸಸ್ ಮಾಲ್‌ನಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘಿಸಿದ 6 ಮಳಿಗೆಗಳಿಗೆ ಅಧಿಕಾರಿಗಳು ಒಟ್ಟು 45 ಸಾವಿರ ರೂ. ದಂಡ ವಿಧಿಸಿದ್ದಾರೆ. ಕಸ ವಿಂಗಡಿಸದಿರುವುದು ಮತ್ತು ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಬಳಕೆ ಮಾಡಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.
Read Full Story

07:28 AM (IST) Aug 30

Gruha Lakshmi re-verify - ಗೃಹಲಕ್ಷ್ಮಿಯರಿಗಾಗಿ ಮನೆಮನೆ ಸಮೀಕ್ಷೆ; ಅನರ್ಹ ಫಲಾನುಭವಿಗಳ ಪತ್ತೆಗೆ ಬೇಟೆ ಶುರು!

ಗೃಹಲಕ್ಷ್ಮಿ ಯೋಜನೆಯ ಅನರ್ಹ ಫಲಾನುಭವಿಗಳನ್ನು ಕೈಬಿಡಲು ಸರ್ಕಾರವು ಬಯೋಮೆಟ್ರಿಕ್‌ ಮತ್ತು ಫೇಶಿಯಲ್‌ ಅಥೆಂಟಿಕೇಷನ್‌ ಮೂಲಕ ಮರುಪರಿಶೀಲನೆಗೆ ಆದೇಶಿಸಿದೆ. ಈ ಪ್ರಕ್ರಿಯೆಯಲ್ಲಿ, ಮನೆಮನೆ ಸಮೀಕ್ಷೆ ನಡೆಸಿ ಅರ್ಹರನ್ನು ಗುರುತಿಸಲಾಗುವುದು ಮತ್ತು ಒಂದು ತಿಂಗಳೊಳಗೆ ಈ ಅಭಿಯಾನವನ್ನು ಪೂರ್ಣಗೊಳಿಸಲು ಸೂಚನೆ.

Read Full Story

07:22 AM (IST) Aug 30

ಬೆಂಗಳೂರಿನ ಈ 20 ರಸ್ತೆಗಳಲ್ಲಿ ಶೀಘ್ರ ಪಾರ್ಕಿಂಗ್ ಶುಲ್ಕ - ಬೈಕ್, ಕಾರ್‌ಗೆ ಎಷ್ಟು ಹಣ?

ಬೆಂಗಳೂರಿನ ಕೇಂದ್ರ ಭಾಗದ 20 ಪ್ರಮುಖ ರಸ್ತೆಗಳಲ್ಲಿ ಶೀಘ್ರದಲ್ಲೇ 'ಪೇಯ್ಡ್ ಪಾರ್ಕಿಂಗ್' ವ್ಯವಸ್ಥೆ ಜಾರಿಯಾಗಲಿದೆ. ಈ ಯೋಜನೆಯಿಂದ ಪಾಲಿಕೆಗೆ ವಾರ್ಷಿಕ 3 ಕೋಟಿ ರೂ. ಆದಾಯ ನಿರೀಕ್ಷಿಸಲಾಗಿದೆ. ‘ಪೇಯ್ಡ್ ಪಾರ್ಕಿಂಗ್ ವ್ಯವಸ್ಥೆ’ ಶೀಘ್ರದಲ್ಲೇ ಜಾರಿಯಾಗಲಿದೆ.

Read Full Story

More Trending News