ಕೊಪ್ಪಳ: ಡಿಸಿಎಂ ಡಿಕೆಶಿ ಅವರು ಸಿಎಂ ಆಗುವುದು ಖಚಿತ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ನಡುವೆ ಅಧಿಕಾರ ಹಂಚಿಕೆಯ ಒಪ್ಪಂದ ಆಗಿದೆ ಎಂದು ಶಾಸಕ ಗಾಲಿ ಜನಾರ್ದನ ರಡ್ಡಿ ಹೇಳಿದ್ದಾರೆ. ತಾಲೂಕಿನ ಮುನಿರಾಬಾದನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಸಂಡೂರ ಉಪಚುನಾವಣೆಯಿಂದ ಈವರೆಗೂ ಇದೇ ಮಾತನ್ನೇ ಹೇಳುತ್ತಿದ್ದೇನೆ. ಸಿದ್ದು-ಡಿಕೆ ನಡುವೆ 50:50 ಅಧಿಕಾರ ಹಂಚಿಕೆಯಾಗಿದೆ. ಸಂಕ್ರಮಣ ನಂತರ ಒಳ್ಳೆ ದಿನ, ಒಳ್ಳೆ ಮುಹೂರ್ತ ನೋಡಿಕೊಂಡು ತೀರ್ಮಾನ ಮಾಡಬಹುದು. ನಮಗೂ ಕೆಲವು ಅವರ ಆಂತರಿಕ ವಿಚಾರ ಗೊತ್ತಾಗುತ್ತವೆ ಎಂದರು.

11:39 PM (IST) Dec 30
ಬೆಂಗಳೂರು ಹೊಸೂರು ಫ್ಲೈಓವರ್ ಮೇಲೆ ಸ್ಲೀಪರ್ ಬಸ್ ಅಪಘಾತ, ನಾಲ್ವರಿಗೆ ಗಾಯ, ಚಿತ್ರದುರ್ಗ ಬಸ್ ದುರಂತದ ಬೆನ್ನಲ್ಲೇ ಇದೀಗ ಮತ್ತೊಂದು ಸ್ಲೀಪರ್ ಬಸ್ ಅಪಘಾತಕ್ಕೀಡಾಗಿದ್ದು, ಬಸ್ ಪ್ರಯಾಣವೇ ಆತಂಕ ಹುಟ್ಟಿಸುವಂತಿದೆ.
11:05 PM (IST) Dec 30
ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಹೊಸ ವರ್ಷ ಸೆಲೆಬ್ರೇಷನ್ಗೆ ಡೆಡ್ ಲೈನ್, ಸಮಯ ಮೀರಿದರೆ ಆಪತ್ತು, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸೆಲೆಬ್ರೇಷನ್ಗೆ ಎಷ್ಟು ಗಂಟೆ ವರೆಗೆ ಅವಕಾಶ ನೀಡಲಾಗಿದೆ?
10:59 PM (IST) Dec 30
10:26 PM (IST) Dec 30
09:09 PM (IST) Dec 30
ಬೆಳಗಾವಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಜಿಲ್ಲಾ ಕೋರ್ ಕಮಿಟಿ ಸಭೆ ನಡೆದಿದೆ. ಪಕ್ಷ ಸಂಘಟನೆ, ಮುಂದಿನ ತಂತ್ರಗಾರಿಕೆ ಮತ್ತು ಭಿನ್ನಾಭಿಪ್ರಾಯಗಳ ಶಮನದ ಕುರಿತು ಚರ್ಚಿಸಲು ಜಿಲ್ಲೆಯ ಪ್ರಮುಖ ನಾಯಕರು ಭಾಗಿ.
09:02 PM (IST) Dec 30
ಬೀಚ್ನಲ್ಲಿ ಹೊಸ ವರ್ಷ ಆಚರಿಸುವವರಿಗೆ ವಾರ್ನಿಂಗ್, ಡಿ.31ರ ಸಂಜೆ 6ರ ಬಳಿಕ ಸಮುದ್ರಕ್ಕಿಳಿಯುವಂತಿಲ್ಲ, ಜಿಲ್ಲಾಧಿಕಾರಿ ಈ ಖಡಕ್ ಆದೇಶ ನೀಡಿದ್ದಾರೆ. ಬೀಚ್ನಲ್ಲಿ ಯಾವುದೇ ಸಮಾರಂಭ, ಕಾರ್ಯಕ್ರಮ ಆಯೋಜಿಸಲು ಅವಕಾಶವಿಲ್ಲ ಎಂದಿದೆ.
08:31 PM (IST) Dec 30
07:50 PM (IST) Dec 30
ಐಎಫ್ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಭಾರತದ ಅತ್ಯಂತ ವಿಷಕಾರಿ ಹಾವುಗಳಲ್ಲಿ ಒಂದಾದ ಬ್ಯಾಂಡೆಡ್ ಕ್ರೈಟ್ನ ವಿಡಿಯೋ ಹಂಚಿಕೊಂಡಿದ್ದಾರೆ. ಈ ಹಾವಿನ ಕಪ್ಪು ಮತ್ತು ಹಳದಿ ಪಟ್ಟೆಗಳ ಸೌಂದರ್ಯ, ಅದರ ನಿಶಾಚರಿ ಮತ್ತು ನಾಚಿಕೆ ಸ್ವಭಾವದ ಬಗ್ಗೆ ಲೇಖನವು ವಿವರಿಸಿದ್ದಾರೆ.
07:22 PM (IST) Dec 30
ಮದ್ದೂರು ತಾಲೂಕಿನ ಆಬಲವಾಡಿ ಗ್ರಾಮದ 'ತೋಪಿನ ತಿಮ್ಮಪ್ಪ' ದೇವಾಲಯವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ತೆಗೆದುಕೊಳ್ಳುವ ಜಿಲ್ಲಾಡಳಿತದ ಕ್ರಮಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯದ ಆದೇಶದ ಮೇರೆಗೆ ಬಂದ ಅಧಿಕಾರಿಗಳನ್ನು ಭಕ್ತರು ತಡೆದಿದ್ದಾರೆ.
07:17 PM (IST) Dec 30
06:38 PM (IST) Dec 30
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಿ, ವಂಚಕರು ಅವರ ಸಂಪರ್ಕದಲ್ಲಿರುವವರಿಂದ ಹಣ ಲಪಟಾಯಿಸಲು ಯತ್ನಿಸಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ, ವಾಟ್ಸಾಪ್ ಹ್ಯಾಕ್ ಆಗುವ ಬಗೆ ಮತ್ತು 'ಟೂ ಸ್ಟೆಪ್ ವೆರಿಫಿಕೇಶನ್' ಮೂಲಕ ಖಾತೆ ಸುರಕ್ಷಿತವಾಗಿರಿಸಿಕೊಳ್ಳುವುದು ಹೇಗೆ ತಿಳಿಯಿರಿ
06:33 PM (IST) Dec 30
ರಾಜ್ಯದಲ್ಲಿ 17.31 ಲಕ್ಷ ಜನರು ನಿವೇಶನ ರಹಿತರು ಹಾಗೂ 3 ಲಕ್ಷ ಜನರು ವಸತಿ ರಹಿತರಾಗಿದ್ದಾರೆ. ಒಟ್ಟು 37.48 ಲಕ್ಷ ಜನರು ಮನೆ ಇಲ್ಲದೆ ಅರ್ಜಿ ಹಾಕಿಕೊಂಡು ಕಾಯುತ್ತಿದ್ದಾರೆ. ಆದರೆ ಹೊರಗಿಂದ ಬಂದು ಅಕ್ರಮವಾಗಿ ವಾಸವಿದ್ದವರಿಗೆ ಸರ್ಕಾರ ಮನೆ ನಿರ್ಮಿಸಿ ಕೊಡುತ್ತಿದೆ ಎಂದು ಆರ್. ಅಶೋಕ ಆರೋಪಿಸಿದರು.
05:33 PM (IST) Dec 30
ಬೆಂಗಳೂರಿನ ಪ್ರತಿಷ್ಠಿತ ಬಯೋಕಾನ್ ಕಂಪನಿಯ ಆರನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು 26 ವರ್ಷದ ಸಾಫ್ಟ್ವೇರ್ ಇಂಜಿನಿಯರ್ ಅನಂತಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೆಳತಿಯೊಂದಿಗೆ ಮಾತನಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
05:30 PM (IST) Dec 30
ದಾವಣಗೆರೆಯ ಜೈನ್ ಕಾಲೇಜು ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ಬಸ್ ಉತ್ತರ ಕನ್ನಡದ ಶಿರಸಿ ಬಳಿಯ ಮತ್ತಿಘಟ್ಟ ತಿರುವಿನಲ್ಲಿ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಸುಮಾರು 10-12 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
05:06 PM (IST) Dec 30
ಬೆಟ್ಟಿಂಗ್ ದಂಧೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ ಷರತ್ತುಬದ್ಧ ಜಾಮೀನು. ₹2000 ಕೋಟಿ ಹಗರಣದ ವಿವರ ತಿಳಿಯಿರಿ.
05:01 PM (IST) Dec 30
Students washing car viral video ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ಶಾಲಾ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ತಮ್ಮ ಕಾರನ್ನು ತೊಳಿಸಿರುವ ಘಟನೆ ನಡೆದಿದೆ. ಈ ದೃಶ್ಯದ ವಿಡಿಯೋ ವೈರಲ್ ಆಗಿದ್ದು, ಶಿಕ್ಷಕನ ವರ್ತನೆಗೆ ಪೋಷಕರು ತೀವ್ರ ಆಕ್ರೋಶ ವ್ಯಕ್ತವಾಗಿದೆ
04:55 PM (IST) Dec 30
ಬಿಗ್ಬಾಸ್ ಮನೆಯಿಂದ ಹೊರಬಂದಿರುವ ಸೂರಜ್ ಸಿಂಗ್, ತಮ್ಮ ಆಸೆಯಂತೆ ರಾಶಿಕಾ ಅಥವಾ ಅಶ್ವಿನಿ ಗೆಲ್ಲುವುದಿಲ್ಲ ಎಂದಿದ್ದಾರೆ. ಬದಲಾಗಿ, ಕುಟುಂಬದವರು ಮನೆಗೆ ಬಂದಾಗಲೇ ಈ ಸೀಸನ್ನ ವಿಜೇತ ಯಾರು ಎಂಬುದು ತಮಗೆ ಖಚಿತವಾಗಿತ್ತು ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
04:46 PM (IST) Dec 30
ಬೆಂಗಳೂರಿನ ಕೋಗಿಲು ಗ್ರಾಮದಲ್ಲಿನ ಸರ್ಕಾರಿ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಕಳೆದ 6 ತಿಂಗಳಿನಿಂದಷ್ಟೇ ಇಲ್ಲಿ ಮನೆಗಳನ್ನು ಕಟ್ಟಲಾಗಿದ್ದು, ಕಾಂಗ್ರೆಸ್ ಪ್ರಯೋಜಿತ ಅಕ್ರಮ ಎಂದು ಗೂಗಲ್ ಮ್ಯಾಪ್ ಸಾಕ್ಷ್ಯಗಳನ್ನು ಪ್ರದರ್ಶಿಸಿ ದೂರಿದ್ದಾರೆ.
04:34 PM (IST) Dec 30
ಬೆಳಗಾವಿಯ ಅತಿವೃಷ್ಟಿ ಸಂತ್ರಸ್ತರು ರಾಜ್ಯ ಸರ್ಕಾರದ ದ್ವಂದ್ವ ನೀತಿಯ ವಿರುದ್ಧ ಬೀದಿಗಿಳಿದಿದ್ದಾರೆ. ಬೆಂಗಳೂರಿನ ವಲಸಿಗರಿಗೆ ಫ್ಲ್ಯಾಟ್ ನೀಡುವ ಸರ್ಕಾರ, 381 ಮನೆಗಳನ್ನು ಕಳೆದುಕೊಂಡ ಬೆಳಗಾವಿಯ ಸಂತ್ರಸ್ತರಿಗೆ ಕೇವಲ ₹1.20 ಲಕ್ಷ ಪರಿಹಾರ ನೀಡಿ ಭರವಸೆ ಮರೆತಿದೆ ಎಂದು ಸಂತ್ರಸ್ತರು ಆಕ್ರೋಶ
03:43 PM (IST) Dec 30
03:17 PM (IST) Dec 30
ಬಿಗ್ ಬಾಸ್ ಖ್ಯಾತಿಯ ಡಾಗ್ ಸತೀಶ್, ಸಹ ಸ್ಪರ್ಧಿ ಗಿಲ್ಲಿ ನಟನ ವಿರುದ್ಧ ಮಾತನಾಡಿದ್ದಕ್ಕೆ ಅವರ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಗಿಲ್ಲಿ ನಟನ ಅಭಿಮಾನಿಗಳು ಅವರ ಕಾರಿನ ಮೇಲೆ 'ಗಿಲ್ಲಿ ನಟ ವಿನ್ನರ್' ಎಂದು ಬರೆದು, ಘೋಷಣೆ ಕೂಗಿ ಸೇಡು ತೀರಿಸಿಕೊಂಡಿದ್ದಾರೆ.
03:09 PM (IST) Dec 30
02:55 PM (IST) Dec 30
Bigg Boss Kannada Season 12: ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಗೆಲ್ಲೋರು ಯಾರು ಎಂದು ದೊಡ್ಡ ಚರ್ಚೆ ಶುರುವಾಗಿದೆ. ಈಗ ಕಿಚ್ಚ ಸುದೀಪ್ ಅವರೇ ಗಿಲ್ಲಿ ವಿನ್ನರ್ ಎಂದು ಹೇಳಿದ್ದಾರೆ ಎಂಬ ಪೋಸ್ಟ್ ಕೂಡ ವೈರಲ್ ಆಗ್ತಿದೆ. ಹಾಗಿದ್ದರೆ ಸತ್ಯ ಏನು?
02:34 PM (IST) Dec 30
ಕೋಗಿಲು ಕ್ರಾಸ್ನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಬಯ್ಯಪ್ಪನಹಳ್ಳಿಯಲ್ಲಿ ಫ್ಲ್ಯಾಟ್ಗಳನ್ನು ಹಂಚಿಕೆ ಮಾಡಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ಬಿಜೆಪಿ ವಿರೋಧದ ನಡುವೆಯೂ, ಈ ನಿರ್ಧಾರವನ್ನು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸಮರ್ಥಿಸಿಕೊಂಡಿದ್ದಾರೆ.
02:22 PM (IST) Dec 30
01:22 PM (IST) Dec 30
ಮುಂಬರುವ ಹಣಕಾಸು ವರ್ಷದಲ್ಲಿ ಕರ್ನಾಟಕದ ಗ್ರಾಹಕರಿಗೆ ವಿದ್ಯುತ್ ದರ ಹೆಚ್ಚಾಗಲಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಇದನ್ನು 'ದರ ಏರಿಕೆ' ಎನ್ನುವ ಬದಲು 'ಟಾಪ್-ಅಪ್' ಎಂದು ಕರೆಯುತ್ತಿದ್ದು, ಪ್ರತಿ ಯೂನಿಟ್ಗೆ 8-10 ಪೈಸೆ ಹೆಚ್ಚಳವಾಗುವ ನಿರೀಕ್ಷೆಯಿದೆ.
12:54 PM (IST) Dec 30
ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ತನ್ನ ಸೈಕೋ ಪತಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ವಯಸ್ಸು ಮುಚ್ಚಿಟ್ಟು ಮದುವೆಯಾದ ಪತಿ, ಲೈಂಗಿಕ ಕಿರುಕುಳ ನೀಡಿ, ಅಶ್ಲೀಲ ವಿಡಿಯೋ ತೋರಿಸಿ ಅದೇ ರೀತಿ ಮಾಡಲು ಒತ್ತಾಯಿಸುತ್ತಿದ್ದ. ಪತ್ನಿಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದ ಎನ್ನಲಾಗಿದೆ.
12:35 PM (IST) Dec 30
12:33 PM (IST) Dec 30
ಕಿರುತೆರೆ ನಟಿ ನಂದಿನಿ ಅವರ ಆತ್ಮ*ಹತ್ಯೆ ಕುರಿತು ಅವರ ತಾಯಿ ಬಸವರಾಜೇಶ್ವರಿ ಕಣ್ಣೀರು ಹಾಕಿದ್ದಾರೆ. ಮಗಳಿಗೆ ಮುಂಗೋಪ ಜಾಸ್ತಿ ಇತ್ತು, ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ ಎಂದಿರುವ ಅವರು, ಸರ್ಕಾರಿ ಕೆಲಸದ ವಿಚಾರವಾಗಿ ಯಾವುದೇ ಒತ್ತಡವಿರಲಿಲ್ಲ ಎಂದಿದ್ದಾರೆ.
12:11 PM (IST) Dec 30
11:56 AM (IST) Dec 30
Priyanka Gandhi Family Marraige: ರಾಹುಲ್ ಗಾಂಧಿ ಕುಟುಂಬದಲ್ಲಿ ಸಂಭ್ರಮ ಶುರುವಾಗಿದೆ. 28 ವರ್ಷಗಳ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ ಶುರುವಾಗಿದೆ. ಹಾಗಾದರೆ ಯಾರ ಮದುವೆ? ಏನು ಕಥೆ? ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
11:53 AM (IST) Dec 30
ಬಿಗ್ಬಾಸ್ ಮನೆಯಲ್ಲಿ ಸೂರಜ್ ಸಿಂಗ್ ಮತ್ತು ರಾಶಿಕಾ ಶೆಟ್ಟಿ ನಡುವೆ ಪ್ರೀತಿ ಇದೆ ಎಂದು ಭಾವಿಸಲಾಗಿತ್ತು. ಎಲಿಮಿನೇಟ್ ಆಗಿ ಹೊರಬಂದ ನಂತರ ಸೂರಜ್, ತಮ್ಮಿಬ್ಬರ ನಡುವೆ ಇರುವ ಸಂಬಂಧದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಅವರು ಹೇಳಿದ್ದೇನೆ.
11:19 AM (IST) Dec 30
ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಸಿ ಗರ್ಭಿಣಿಯನ್ನಾಗಿಸಿ ವಂಚಿಸಿದ ಪ್ರಕರಣ ಇದಾಗಿದೆ. ಡಿಎನ್ಎ ಪರೀಕ್ಷೆಯಲ್ಲಿ ಮಗುವಿನ ತಂದೆ ಎಂದು ಸಾಬೀತಾದರೂ ಮದುವೆಗೆ ನಿರಾಕರಿಸುತ್ತಿದ್ದಾನೆ.
11:08 AM (IST) Dec 30
BBK 12 Episode: ಬಿಗ್ ಬಾಸ್ ಕನ್ನಡ ಸೀಸನ್ ಶೋನಲ್ಲಿ ಗಿಲ್ಲಿ ನಟ, ಒನ್ ಮ್ಯಾನ್ ಶೋ ಆಗಿ ಗುರುತಿಸಿಕೊಂಡಿದ್ದಾರೆ. ಇವರೇ ವಿನ್ನರ್ ಆಗ್ತಾರೆ ಎಂದು ಬಹುತೇಕರು ಹೇಳುತ್ತಿದ್ದಾರೆ. ದೊಡ್ಮನೆಯಿಂದ ಹೊರಬಂದಿರುವ ಮಾಳು ನಿಪನಾಳ ಅವರು ನಾನೇ ವಿನ್ನರ್ ಆಗುತ್ತಿದ್ದೆ ಎಂದಿದ್ದಾರೆ.
10:51 AM (IST) Dec 30
Free Bus Journey: ಶಕ್ತಿ ಯೋಜನೆಯ ದುರ್ಬಳಕೆಯನ್ನು ತಡೆಗಟ್ಟಲು ಮತ್ತು ಅರ್ಹ ಮಹಿಳೆಯರಿಗೆ ಮಾತ್ರ ಸೌಲಭ್ಯ ಸಿಗುವಂತೆ ಮಾಡಲು ಕರ್ನಾಟಕ ಸಾರಿಗೆ ಇಲಾಖೆಯು ಸ್ಮಾರ್ಟ್ಕಾರ್ಡ್ಗಳನ್ನು ಪರಿಚಯಿಸಲು ನಿರ್ಧರಿಸಿದೆ.
10:29 AM (IST) Dec 30
Bigg Boss Kannada 12 Grand Finale: ಕನ್ನಡ ಬಿಗ್ಬಾಸ್ 14ನೇ ವಾರಕ್ಕೆ ಕಾಲಿಟ್ಟಿದ್ದು, ಗ್ರ್ಯಾಂಡ್ ಫಿನಾಲೆ ದಿನಾಂಕದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಸದ್ಯ ಮನೆಯಲ್ಲಿ 9 ಸ್ಪರ್ಧಿಗಳಿದ್ದು, ಈ ವಾರ ನಾಲ್ವರು ನಾಮಿನೇಟ್ ಆಗಿದ್ದಾರೆ.
09:12 AM (IST) Dec 30
ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಎಚ್.ಡಿ.ದೇವೇಗೌಡ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ಗೆ ಪ್ರತಿಯಾಗಿ ಜನವರಿ 24 ರಂದು ಹಾಸನದಲ್ಲಿ ಬೃಹತ್ ಸಮಾವೇಶ ನಡೆಸಲು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
08:52 AM (IST) Dec 30
ಧರ್ಮಸ್ಥಳ ಬುರುಡೆ ಪ್ರಕರಣದ ತೀರ್ಪನ್ನು ಬೆಳ್ತಂಗಡಿ ನ್ಯಾಯಾಲಯವು ಜ.3ಕ್ಕೆ ಮುಂದೂಡಿದೆ. ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು, ತೀರ್ಪನ್ನು ಜನವರಿ 3ಕ್ಕೆ ಮುಂದೂಡಿದರು.
08:42 AM (IST) Dec 30
ಪತ್ನಿ ನೇಣುಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿದ್ದಕ್ಕೆ ನೊಂದು ಪತಿ ಕೂಡ ವಿಷ ಸೇವಿಸಿ ಆತ್ಮ*ಹತ್ಯೆಗೆ ಯತ್ನಿಸಿದ್ದಾನೆ. ಒಂದೂವರೆ ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಈ ದಂಪತಿಯ ನಡುವೆ ಕೌಟುಂಬಿಕ ಕಲಹ ಉಂಟಾಗಿತ್ತು ಎಂದು ಹೇಳಲಾಗಿದ್ದು, ಪತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
08:12 AM (IST) Dec 30