LIVE NOW
Published : Jul 30, 2026, 06:57 AM ISTUpdated : Jul 30, 2026, 11:48 AM IST

Karnataka News Live: ಗೊರಗುಂಟೆಪಾಳ್ಯ ಟ್ರಾಫಿಕ್‌ ನಿಯಂತ್ರಣಕ್ಕೆ ಮಾಸ್ಟರ್‌ ಪ್ಲಾನ್‌ - ಮೂರು ಸ್ಥಳಗಳು ಶಿಫ್ಟ್?

ಸಾರಾಂಶ

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಹಾಗೂ ನೆರೆಯ ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೃಷ್ಣಾ, ವೇದಗಂಗಾ ಹಾಗೂ ದೂಧಗಂಗಾ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಬೆಳಗಾವಿ ಜಿಲ್ಲೆಯ ಕೆಲವೆಡೆ ನೆರೆ ಭೀತಿ ಎದುರಾಗಿದೆ. ಮಹಾರಾಷ್ಟ್ರದ ಜಲಾಶಯಗಳಿಂದ ಕೃಷ್ಣಾ ನದಿಗೆ ಸುಮಾರು 80 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಇದರಿಂದಾಗಿ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕು ವ್ಯಾಪ್ತಿಯ ಕೆಳಹಂತದ ಐದು ಸೇತುವೆಗಳು ಜಲಾವೃತವಾಗಿವೆ.

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ನಿಪ್ಪಾಣಿ ನಗರ ವ್ಯಾಪ್ತಿಯಲ್ಲಿ ಹಾದು ಹೋಗುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕುಸಿದಿದ್ದು, ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವಂತಾಗಿದೆ. ಕೇಂದ್ರ ಸರ್ಕಾರ ಇದನ್ನು 6 ಪಥದ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿದ್ದು, ಕಳೆದೆರಡು ವರ್ಷಗಳಿಂದ ಕಾಮಗಾರಿ ಭರದಿಂದ ಸಾಗಿದೆ. ಕೋಟ್ಯಂತರ ರುಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ಇನ್ನೂ ಪೂರ್ಣಗೊಳ್ಳುವ ಮುನ್ನವೇ ಹೆದ್ದಾರಿ ಕುಸಿದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

11:48 AM (IST) Jul 30

ಗೊರಗುಂಟೆಪಾಳ್ಯ ಟ್ರಾಫಿಕ್‌ ನಿಯಂತ್ರಣಕ್ಕೆ ಮಾಸ್ಟರ್‌ ಪ್ಲಾನ್‌ - ಮೂರು ಸ್ಥಳಗಳು ಶಿಫ್ಟ್?

ಬೆಂಗಳೂರಿನ ಗೊರಗುಂಟೆಪಾಳ್ಯ ಜಂಕ್ಷನ್‌ನಲ್ಲಿನ ಟ್ರಾಫಿಕ್ ದಟ್ಟಣೆ ನಿವಾರಿಸಲು, ರಸ್ತೆ ವಿಸ್ತರಣೆ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಮೂರು ಸ್ಥಳಾಂತರಗಳ ಸಾಧ್ಯತೆಗಳಿದ್ದು, ಗೋದ್ರೇಜ್ ಪ್ರಾಪರ್ಟೀಸ್ ಮತ್ತು ತಾಜ್ ಹೋಟೆಲ್ ನೀಡಿದ ಭೂಮಿಯನ್ನು ಬಳಸಿ ಹೆಚ್ಚುವರಿ ಲೇನ್‌ಗಳನ್ನು ನಿರ್ಮಿಸಲು ಪಾಲಿಕೆ ಮುಂದಾಗಿದೆ.

Read Full Story

10:25 AM (IST) Jul 30

BWSSB water restrictions - ಕುಡಿಯುವ ನೀರಲ್ಲಿ ಬೈಕ್, ಕಾರು ತೊಳೆದರೆ ಬೀಳುತ್ತೆ ₹5000 ದಂಡ! ಜಲಮಂಡಳಿ ಕಠಿಣ ಆದೇಶ!

ಮುಂಗಾರು ಕೈಕೊಟ್ಟಿದ್ದರಿಂದ ಬೆಂಗಳೂರಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಜಲಮಂಡಳಿ ಕಠಿಣ ಕ್ರಮ ಕೈಗೊಂಡಿದೆ. ವಾಹನ ತೊಳೆಯಲು, ಈಜು ಕೊಳಗಳಿಗೆ ಕುಡಿಯುವ ನೀರು ಬಳಸುವುದನ್ನು ನಿಷೇಧಿಸಿದ್ದು, ನಿಯಮ ಉಲ್ಲಂಘಿಸಿದವರಿಗೆ 5,000 ರೂ. ದಂಡ ವಿಧಿಸುವುದಾಗಿ ಎಚ್ಚರಿಸಿದೆ.
Read Full Story

10:16 AM (IST) Jul 30

Ramayana Trailer - 'ರಾಮಾಯಣ' ಟ್ರೇಲರ್ ರಿಲೀಸ್ ಬಳಿಕ ಜಗತ್ತಿನ ರೆಸ್ಪಾನ್ಸ್ ಹೇಗಿದೆ? ನೆಟ್ಟಿಗರು ಹೇಳ್ತಿರೋದೇನು? ಇಲ್ಲಿ ನೋಡಿ..

ರಾಮಾಯಣ ಚಿತ್ರದ ಬಗ್ಗೆ ಅಂತರ್ಜಾಲದಲ್ಲಿ ಸಿಕ್ಕಾಪಟ್ಟೆ ಚರ್ಚೆ ಶುರುವಾಗಿದೆ. ಅದಕ್ಕೆ ಕಾರಣ ಹಲವು. ರಾಮಾಯಣ ಚಿತ್ರ ಬರುತ್ತೆ ಅಂದಾಗ, ಅದರಲ್ಲಿ ರಾಮನ ಪಾತ್ರವನ್ನು ರಣಬೀರ್ ಕಪೂರ್, ರಾವಣನಾಗಿ ಯಶ್ ಹಾಗೂ ಸೀತೆಯಾಗಿ ಸಾಯಿ ಪಲ್ಲವಿ ನಟಿಸುತ್ತಾರೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ, ಹಲವರು ಪ್ರಶ್ನೆ ಎತ್ತಿದ್ದರು.

Read Full Story

08:57 AM (IST) Jul 30

KPSC Scam - ಕೆಪಿಎಸ್‌ಸಿ ನೇಮಕಾತಿ ಹಗರಣ - ಸಿಬಿಐಗೆ ವಹಿಸಲು ಹೈಕೋರ್ಟ್‌ ಇಂಗಿತ, ಹೇಳಿದ್ದೇನು?

ಬೃಹತ್ ಪ್ರಮಾಣದಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರ ನಡೆದಿರುವ ಹಿನ್ನೆಲೆಯಲ್ಲಿ ಪಶು ವೈದ್ಯಾಧಿಕಾರಿ (ಗ್ರೂಪ್-ಬಿ) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ತನಿಖೆಯನ್ನು ಸಿಐಡಿಗೆ ಸರ್ಕಾರ ವಹಿಸಿದ ಮರುದಿನವೇ, ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ತನಿಖೆಗೆ ವಹಿಸಲು ಹೈಕೋರ್ಟ್ ಇಂಗಿತ ವ್ಯಕ್ತಪಡಿಸಿದೆ.

Read Full Story

08:37 AM (IST) Jul 30

Cabinet Expansion - ರಾಯಚೂರು ಸಚಿವ ಸ್ಥಾನಕ್ಕಾಗಿ ಬೋಸರಾಜು-ಹಂಪನಗೌಡ ಬಾದರ್ಲಿ ನಡುವೆ ತೀವ್ರ ಪೈಪೋಟಿ

ಹೊಸ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಸ್ಥಾನ ಪಡೆಯಲು ತೀವ್ರ ಪೈಪೋಟಿ ನಡೆದಿದೆ. ಮಾಜಿ ಸಚಿವ ಎನ್‌.ಎಸ್‌.ಭೋಸರಾಜು ಮತ್ತು ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ನಡುವೆ ಸಚಿವ ಸ್ಥಾನಕ್ಕಾಗಿ ಸ್ಪರ್ಧೆ ಏರ್ಪಟ್ಟಿದ್ದು, ಹೈಕಮಾಂಡ್ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
Read Full Story

08:05 AM (IST) Jul 30

KPSC Scam - ಈ ಎರಡು ಜಿಲ್ಲೆಗಳಲ್ಲಿ 120 ಎಕರೆ ಭೂ ಖರೀದಿ! ಕೆಪಿಎಸ್‌ಸಿ ಸಾಹುಕಾರನ ವಿರುದ್ಧ ಮತ್ತೊಂದ ದೂರು!

ಅಮಾನತುಗೊಂಡಿರುವ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ವಿರುದ್ಧ ರಾಜ್ಯಪಾಲರಿಗೆ ಹೊಸ ದೂರು ಸಲ್ಲಿಕೆಯಾಗಿದೆ. ಸಾಹುಕಾರ್ ಕುಟುಂಬವು ಆದಾಯ ಮೀರಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 120 ಎಕರೆ ಭೂಮಿ ಖರೀದಿಸಿದೆ ಎಂದು ಆರೋಪಿಸಿ, ತನಿಖೆಗೆ ಆಗ್ರಹಿಸಲಾಗಿದೆ.
Read Full Story

07:26 AM (IST) Jul 30

UT Khader - ಅಮೆರಿಕದ ಸಂಸತ್‌ ಇತಿಹಾಸದಲ್ಲಿ ಸಚಿವ ಯು.ಟಿ. ಖಾದರ್‌ ಹೆಸರು ದಾಖಲು

ಕರ್ನಾಟಕದ ಆರೋಗ್ಯ ಸಚಿವ ಯು. ಟಿ. ಖಾದರ್ ಅವರ ಸಾರ್ವಜನಿಕ ಸೇವೆ ಮತ್ತು ನಾಯಕತ್ವವನ್ನು ಗುರುತಿಸಿ ಅಮೆರಿಕದ ಸಂಸತ್ ಗೌರವಿಸಿದೆ. ಈ ಗೌರವ 'ಫಾರ್ ದಿ ಕಾಂಗ್ರೆಸ್ಸಿನಲ್ ರೆಕಾರ್ಡ್' ಆಗಿ ಅಧಿಕೃತವಾಗಿ ದಾಖಲಾಗಿದ್ದು, ಅವರಿಗೆ ಕಾಂಗ್ರೆಸ್ಸಿನಲ್ ಚಾಲೆಂಜ್ ಮೆಡಲಿಯನ್ನು ಸಹ ಪ್ರದಾನ ಮಾಡಲಾಗಿದೆ.
Read Full Story

07:26 AM (IST) Jul 30

Harangi Reservoir - ಹಾರಂಗಿ ಜಲಾಶಯದಿಂದ ತಮಿಳುನಾಡಿಗೆ ಕದ್ದು ನೀರು ಬಿಡುಗಡೆ? ಆರ್ ಅಶೋಕ್ ಗಂಭೀರ ಆರೋಪ

ವಿಪಕ್ಷ ನಾಯಕ ಆರ್. ಅಶೋಕ ಅವರು, ಹಾರಂಗಿ ಜಲಾಶಯದಿಂದ ತಮಿಳುನಾಡಿಗೆ ಸರ್ಕಾರ ಕದ್ದುಮುಚ್ಚಿ ನೀರು ಬಿಡುತ್ತಿದೆ ಎಂದು ಆರೋಪಿಸಿದ್ದಾರೆ. ಇದರಿಂದ ಬೆಂಗಳೂರು, ಮೈಸೂರು, ಮಂಡ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದೆ ಎಂದು ಎಚ್ಚರಿಸಿದ್ದು, ಬಿಜೆಪಿ ಕೆಆರ್‌ಎಸ್‌ ಡ್ಯಾಂ ಬಳಿ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.
Read Full Story

More Trending News