LIVE NOW
Published : Jun 30, 2026, 06:41 AM ISTUpdated : Jun 30, 2026, 08:49 PM IST

Karnataka News Live: Kayadu Lohar - 'ಕೋಪದಲ್ಲಿ ಕಲ್ಲು ಎಸೆದಿದ್ದೆ' - ಶಾಲಾ ದಿನಗಳ ಕಿರುಕುಳ ನೆನೆದು ಭಾವುಕರಾದ ಮುಗಿಲ್‌ ಪೇಟೆ ಬ್ಯೂಟಿ!

ಸಾರಾಂಶ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದ್ದು, ಸೋಮವಾರ ಉತ್ತರ ಕನ್ನಡ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಸೇರಿ ವಿವಿಧೆಡೆ ಮಳೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿಂದ ತೀವ್ರ ಮಳೆ ಕೊರತೆಯಾಗಿತ್ತು. ಸೋಮವಾರ ಉತ್ತಮ ಮಳೆಯಾಗಿದೆ. ಹಿಂದಿನ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ 32.30 ಮಿ.ಮೀ. ಮಳೆ ಸುರಿದಿದೆ. 7 ದಿನಗಳ ಕಾಲ ಸಮುದ್ರ ಮೇಲೆ 45 - 55 ಕಿ.ಮಿ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ನಿಧಾನಗತಿಯಿಂದ ಮಳೆ ಬಿರುಸು ಪಡೆಯುತ್ತಿದ್ದು, ಸೋಮವಾರ ಮಂಗಳೂರು ಸೇರಿದಂತೆ ಜಿಲ್ಲೆಯ ಸುಳ್ಯ, ಕಡಬ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಉಳ್ಳಾಲ, ಮೂಡುಬಿದಿರೆ, ಮೂಲ್ಕಿ, ಮಂಗಳೂರು ತಾಲೂಕಿನ ವಿವಿಧೆಡೆ ಧಾರಕಾರ ಮಳೆಯಾಗಿದೆ. ಜೂ.30, ಜು.1ರಂದು ಜಿಲ್ಲೆಗ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಶೃಂಗೇರಿ ತಾಲೂಕಿನಾದ್ಯಂತ ಮಳೆ ಮುಂದುವರಿದಿದ್ದು, ತಾಲೂಕಿನ ಕೆರೆಕಟ್ಟೆ,ನೆಮ್ಮಾರು ಸುತ್ತಮುತ್ತಲ ಪ್ರದೇಶಗಳಲ್ಲಿ ಬಿಡುವು ನೀಡದೇ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವುದರಿಂದ ತುಂಗಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ.

08:49 PM (IST) Jun 30

Kayadu Lohar - 'ಕೋಪದಲ್ಲಿ ಕಲ್ಲು ಎಸೆದಿದ್ದೆ' - ಶಾಲಾ ದಿನಗಳ ಕಿರುಕುಳ ನೆನೆದು ಭಾವುಕರಾದ ಮುಗಿಲ್‌ ಪೇಟೆ ಬ್ಯೂಟಿ!

Mugilpete Actress: ಕಯಾದು ಲೋಹರ್ ತಮ್ಮ ಶಾಲಾ ದಿನಗಳಲ್ಲಿ ಎದುರಿಸಿದ್ದ ಕಹಿ ಅನುಭವವೊಂದನ್ನು ಬಹಿರಂಗಪಡಿಸಿದ್ದು, ಅವರ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Read Full Story

08:19 PM (IST) Jun 30

Bengaluru Racecourse ಕುಣಿಗಲ್ ಸ್ಟಡ್ ಫಾರ್ಮ್‌ಗೆ ಶಿಫ್ಟ್ ಮಾಡಲು ಹೈಕೋರ್ಟ್ ಬ್ರೇಕ್?; ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್!

ಬೆಂಗಳೂರು ರೇಸ್‌ಕೋರ್ಸ್ ಅನ್ನು ಕುಣಿಗಲ್ ಸ್ಟಡ್ ಫಾರ್ಮ್‌ಗೆ ಸ್ಥಳಾಂತರಿಸುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 

Read Full Story

07:25 PM (IST) Jun 30

Monsoon Failure - ಚಾಮರಾಜನಗರದಲ್ಲಿ ಏನಾಗುತ್ತಿದೆ? 70 ಸಾವಿರ ಹೆಕ್ಟೇರ್ ಭೂಮಿ ಇನ್ನೂ ಖಾಲಿ!

Monsoon Failure: ಸಾಮಾನ್ಯವಾಗಿ ಜೂನ್ ತಿಂಗಳು ಆರಂಭವಾಗುತ್ತಿದ್ದಂತೆ ಹಸಿರಿನಿಂದ ಕಂಗೊಳಿಸಬೇಕಿದ್ದ ಚಾಮರಾಜನಗರ ಜಿಲ್ಲೆಯ ಕೃಷಿ ಭೂಮಿ ಈ ಬಾರಿ ಬಿಸಿಲಿನ ಝಳಕ್ಕೆ ಒಣಗಿ ಬಿರುಕು ಬಿಡುತ್ತಿದೆ.

Read Full Story

06:29 PM (IST) Jun 30

Hampi ಸೊಬಗು ಈಗ ಗಂಗಾವತಿಗೆ - ಶಾಸಕ ಜನಾರ್ದನ ರೆಡ್ಡಿ ಘೋಷಿಸಿದ ಹೊಸ ಯೋಜನೆ ಏನು?

Gangavathi: ಕನಕಗಿರಿ ರಸ್ತೆಯ ಮಾರ್ಗದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣದ ಮುಂಭಾಗದಲ್ಲಿ ಐತಿಹಾಸಿಕ ಹಂಪೆಯ ಸ್ಮಾರಕಗಳ ಮಾದರಿಯಲ್ಲಿ ಬಸ್ ನಿಲ್ದಾಣ ಚಿತ್ರಣಗೊಳ್ಳಲಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

Read Full Story

06:19 PM (IST) Jun 30

ಬೆಂಗಳೂರಿಗೆ ಶಾಕ್, ನಮ್ಮ ಮೆಟ್ರೋ 3ನೇ ಹಂತದ ಡಬಲ್ ಡೆಕ್ಕರ್ ಅಪಾಯಕಾರಿ - ಐಐಎಸ್‌ಸಿ ವರದಿ

ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಜೊತೆಗಿನ ಡಬಲ್ ಡೆಕ್ಕರ್ ಮೇಲ್ಸೇತುವೆ ಯೋಜನೆಯು ಆರ್ಥಿಕ ನಷ್ಟ, ಪರಿಸರ ಮಾಲಿನ್ಯ ಮತ್ತು ಸಂಚಾರ ದಟ್ಟಣೆ ಹೆಚ್ಚಳಕ್ಕೆ ಕಾರಣವಾಗಲಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ (IISc) ಅಧ್ಯಯನ ವರದಿ ಎಚ್ಚರಿಸಿದೆ. ಈ ಯೋಜನೆಯು ಸಾರ್ವಜನಿಕ ಸಾರಿಗೆ ಬಳಕೆಯನ್ನು ಕಡಿಮೆ ಮಾಡಿ, ಖಾಸಗಿ ವಾಹನಗಳ ಸಂಖ್ಯೆಯನ್ನು ಹೆಚ್ಚಿಸಲಿದೆ.
Read Full Story

06:12 PM (IST) Jun 30

VTU Results 2026 - ಪರೀಕ್ಷೆ ಮುಗಿದ ಐದೇ ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ಇತಿಹಾಸ ಸೃಷ್ಟಿಸಿದ ವಿಟಿಯು!

VTU Results 2026: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) 6ನೇ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 5 ನಿಮಿಷದೊಳಗೆ ಫಲಿತಾಂಶ ಪ್ರಕಟಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ.

Read Full Story

05:55 PM (IST) Jun 30

Kodagu - ಮಗು, ವಿವಾಹಿತೆ ಮತಾಂತರ ಆರೋಪ - ಕುಶಾಲನಗರ ಬಂದ್, ಸಾವಿರಾರು ಕಾರ್ಯಕರ್ತರ ಪ್ರತಿಭಟನೆ

Kodagu: ಟೂರಿಸಂ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ರಾಜೀವ್ ಎಂಬುವರ ಪತ್ನಿಯನ್ನು ಇಲ್ಲಿಯೇ ವ್ಯಾಪಾರ ಮಾಡುತ್ತಿದ್ದ ಕೇರಳಂ ಮೂಲದ ಸಲೀಂ ಎಂಬಾತ ಮೇ ತಿಂಗಳ ಆರಂಭದಲ್ಲಿಯೇ ಕರೆದೊಯ್ದು ವಿವಾಹವಾಗಿದ್ದಾನೆ.

Read Full Story

05:39 PM (IST) Jun 30

Karna ನಟಿ ಭವ್ಯಾ ಗೌಡ ಬಾಲ್ಯದ ಅಪರೂಪದ ಫೋಟೋ ವೈರಲ್ - ಮುಗ್ಧ ನಗುವಿಗೆ ಫ್ಯಾನ್ಸ್ ಫಿದಾ

Bhavya Gowda: ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವುದು ಸಾಮಾನ್ಯವಾಗಿದೆ. ತಮ್ಮ ನೆಚ್ಚಿನ ನಟ-ನಟಿಯರ ಬಾಲ್ಯದ ನೆನಪುಗಳನ್ನು ನೋಡಲು ಅಭಿಮಾನಿಗಳು ಯಾವಾಗಲೂ ಕಾತರರಾಗಿರುತ್ತಾರೆ.

Read Full Story

05:38 PM (IST) Jun 30

LPG - ಹಾರ್ಮುಜ್ ಸಂಕಟಕ್ಕೆ ಫುಲ್‌ಸ್ಟಾಫ್‌ ಇಡಲು ಮುಂದಾದ ಭಾರತದ! ಮೋದಿ ಸರ್ಕಾರದಿಂದ ಮಹಾಪ್ಲಾನ್‌! ಅಷ್ಟಕ್ಕೂ ಆಗಿದ್ದೇನು ಗೊತ್ತಾ?

ಇರಾನ್‌-ಅಮೆರಿಕ ಯುದ್ಧದಂತಹ ಬಿಕ್ಕಟ್ಟುಗಳಿಂದಾಗುವ ಇಂಧನ ಕೊರತೆ ತಡೆಯಲು ಭಾರತ ಮಹಾ ಯೋಜನೆಯೊಂದನ್ನು ರೂಪಿಸಿದೆ.  ಇದಕ್ಕಾಗಿ ವಿಶೇಷ ಸಮಿತಿ ರಚಿಸಲಾಗಿದ್ದು, ಸಂಗ್ರಹಣೆಯ ಸವಾಲುಗಳನ್ನು ಎದುರಿಸಲು ಸಿದ್ಧತೆ ನಡೆಸಲಾಗುತ್ತಿದೆ.

Read Full Story

05:12 PM (IST) Jun 30

Mahaan - ಹಿರಿಯ ವಕೀಲರಾಗಿ ಚಿನ್ನಾರಿ ಮುತ್ತನ ಸಿನಿಮಾಗೆ ಎಂಟ್ರಿ ಕೊಟ್ಟ ಶಿವಣ್ಣ - ಅಭಿಮಾನಿಗಳಿಗೆ ಸರ್ಪ್ರೈಸ್

Mahaan: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ವಿಜಯ್ ರಾಘವೇಂದ್ರ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಮಹಾನ್' ದಿನದಿಂದ ದಿನಕ್ಕೆ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ವಿಭಿನ್ನ ಕಥಾಹಂದರ ಮತ್ತು ಬಲಿಷ್ಠ..

Read Full Story

04:44 PM (IST) Jun 30

Floor Cleaning - ಟೈಲ್ಸ್‌ ನೆಲವಿರಲೀ, ಸಿಮೆಂಟ್‌ ನೆಲವಾಗಲೀ ಹೀಗೆ ಮಾಡಿದ್ರೆ ಪಳ ಪಳ ಹೊಳೆಯುತ್ತೆ!

How to clean tiles at home easily: ಮನೆಯನ್ನು ಕ್ಲೀನ್‌ ಮಾಡೋದು ದೊಡ್ಡ ಟಾಸ್ಕ್‌ ಆಗಿದೆ. ಒಮ್ಮೊಮ್ಮೆ ಅಡುಗೆ ಮನೆ ಆಹಾರ ಪದಾರ್ಥಗಳು, ಎಣ್ಣೆ ಅಥವಾ ಇನ್ನಿತರ ದ್ರವದಿಂದ ಮನೆ ಗಲೀಜು ಆಗುವುದು. ಟೈಲ್ಸ್‌ ನೆಲವನ್ನು ಕ್ಲೀನ್‌ ಮಾಡೋದು ಹೇಗೆ? ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

Read Full Story

04:13 PM (IST) Jun 30

Toxic ಅಪ್‌ಡೇಟ್ ಕೊಟ್ಟ ರಾಕಿಂಗ್ ಸ್ಟಾರ್ ಯಶ್ - ನಾಳೆ ಬೆಳಗ್ಗೆ 11 - 33ಕ್ಕೆ ಏನಾಗಲಿದೆ?

Toxic: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ದಿನದಿಂದ ದಿನಕ್ಕೆ ಸಿನಿಪ್ರಿಯರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸುತ್ತಿದೆ.

Read Full Story

04:13 PM (IST) Jun 30

Pradeep Eswar - ಪ್ರದೀಪ್‌ ಮೇಲೆ ಚಪ್ಪಲಿ ಎಸೆದ ಪ್ರಕರಣ ಬಿಗ್‌ ಟ್ವಿಸ್ಟ್‌; ಅಚ್ಚರಿ ಮೂಡಿಸಿದ ಮಾಜಿ ಸಿಎಂ ಸಿದ್ದು ನಡೆ!

ಪ್ರದೀಪ್ ಮೇಲೆ ಚಪ್ಪಲಿ ಎಸೆದ ಪ್ರಕರಣ ಹೊಸ ಹಾದಿ ಹಿಡಿದಿದೆ. ಜೆಡಿಎಸ್‌ ಶಾಸಕರ ಸುದ್ದಿಗೋಷ್ಠಿ ನಂತರ ಸಿಎಂ ನಡೆ ಕೂತುಹಲ ಸೃಷ್ಟಸಿದೆ. ಶಾಸಕ ಪ್ರದೀಪ್‌ ಈಶ್ವರ ಅವರನ್ನು ಮನೆಗೆ ಕರೆಸಿದ ಸಿದ್ದು, ಕೇಳಿದ್ದೇನು ಗೊತ್ತಾ?  ಇಲ್ಲಿದೆ ಕಂಪ್ಲೀಟ್ ಸ್ಟೋರಿ.

Read Full Story

03:53 PM (IST) Jun 30

ಅಡ್ಡಮತದಾನದ ಆರೋಪ - ಬೇಲೂರು ಚನ್ನಕೇಶವ , ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಶಾಸಕ ಸುರೇಶ್ ಆಣೆ ಪ್ರಮಾಣ!

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಹೆಚ್.ಕೆ. ಸುರೇಶ್, ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. ತಮ್ಮ ನಿಷ್ಠೆಯನ್ನು ಸಾಬೀತುಪಡಿಸಲು, ಅವರು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡಿ, ತನಿಖೆಗಾಗಿ ಮಂಪರು ಪರೀಕ್ಷೆಗೂ ಸಿದ್ಧ ಎಂದು ಸವಾಲು ಹಾಕಿದ್ದಾರೆ.
Read Full Story

01:32 PM (IST) Jun 30

ದಾವಣಗೆರೆ ಜಿಲ್ಲಾಸ್ಪತ್ರೆ OTಯಲ್ಲಿ ಭಾರೀ ಸ್ಫೋಟ, ರೋಗಿಗಳನ್ನು ಸ್ಟ್ರೆಚರ್ ನಲ್ಲಿ ಹೊರತಂದು ಪ್ರಾಣ ಉಳಿಸಿದ ಸಿಬ್ಬಂದಿ!

ದಾವಣಗೆರೆಯ ಚಿಗಟೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಅನೆಸ್ತೇಶಿಯಾ ಸಿಲಿಂಡರ್ ಸ್ಫೋಟಗೊಂಡು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಯಂತ್ರೋಪಕರಣಗಳು ನಾಶವಾಗಿದ್ದರೂ, ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
Read Full Story

01:19 PM (IST) Jun 30

ಸಭೆಗೆ ಬರಿಗೈಲಿ ಬಂದ ಅಧಿಕಾರಿಗೆ ಸಚಿವ ಕೃಷ್ಣ ಬೈರೇಗೌಡ ಕ್ಲಾಸ್; GBA ಕರ್ತವ್ಯದಿಂದ ಬಿಡುವಂತೆ ಖಡಕ್ ಸೂಚನೆ

ಇಲಾಖಾ ಪರಿಶೀಲನೆ ಸಭೆ ವೇಳೆ ಯಾವುದೇ ಅಂಕಿ-ಅಂಶಗಳಿಲ್ಲದೆ ಬರಿಗೈಲಿ ಬಂದ ಅಧಿಕಾರಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಅಲ್ಲದೇ ಸರಿಯಾದ ಉತ್ತರ ನೀಡಲು ವಿಫಲರಾದ ಅಧಿಕಾರಿಯನ್ನ ಜಿಬಿಎಂ ಕರ್ತವ್ಯದಿಂದ ಬಿಡುಗಡೆಗೊಳಿಸಲು ಸೂಚಿಸಿದರು.

Read Full Story

12:40 PM (IST) Jun 30

ಯೋಗೀಶ್ ಗೌಡ ಕೊಲೆ ಪ್ರಕರಣ - ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ವೇಳೆ ಕರ್ನಾಟಕ ರಾಜಕಾರಣಿಗಳ ಬಗ್ಗೆ ಹೈಕೋರ್ಟ್ ಹೇಳಿದ್ದೇನು?

ಧಾರವಾಡದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ವೇಳೆ, ಕರ್ನಾಟಕದಲ್ಲಿ ರಾಜಕಾರಣಿಗಳು ಹೀನಾಯ ಅಪರಾಧಗಳಲ್ಲಿ ಭಾಗಿಯಾಗುವುದು ವಿರಳ ಎಂದು ಹೈಕೋರ್ಟ್ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ. ಸಿಬಿಐ ವಾದವನ್ನು ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿದೆ.
Read Full Story

12:03 PM (IST) Jun 30

TikTok ನಿಷೇಧಕ್ಕೆ ಇಂದಿಗೆ 6 ವರ್ಷ - 40M ಫಾಲೋವರ್ಸ್‌, ಟಾಪ್-5 ಟಿಕ್‌ಟಾಕ್ ಸ್ಟಾರ್‌ಗಳು ಈಗ ಏನು ಮಾಡುತ್ತಿದ್ದಾರೆ?

ಜೂನ್ 30, 2020 ರಂದು, ಭಾರತ ಸರ್ಕಾರವು ರಾಷ್ಟ್ರೀಯ ಭದ್ರತೆಯ ಕಾರಣಗಳಿಗಾಗಿ ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಿತು. ಈ ನಿರ್ಧಾರದಿಂದ Tiktok ಟಾಪ್-5 ಸ್ಟಾರ್‌ ಗಳ ಬದುಕು ಬದಲಾಯಿತು. ಈಗ ಅವರು ಎಲ್ಲಿದ್ದಾರೆ ಏನು ಮಾಡುತ್ತಿದ್ದಾರೆ ನೋಡಿ!

Read Full Story

10:47 AM (IST) Jun 30

ಭ್ರಷ್ಟಾಚಾರ-ಲಂಚಕ್ಕೆ ಬೇಡಿಕೆ ಪ್ರಕರಣ - ಹಣ ಸಿಕ್ಕರೂ ಸರ್ಕಾರಿ ನೌಕರ ಖುಲಾಸೆ! ಹೈಕೋರ್ಟ್ ಹೇಳಿದ್ದೇನು?

ಭ್ರಷ್ಟಾಚಾರ, ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಆರೋಪಿ ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸಿದ ಬಗ್ಗೆ ಸಾಕ್ಷ್ಯ ಇರುವುದು ಕಡ್ಡಾಯ ಎಂದಿದೆ. ರೈತನಿಗೆ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ ಸರ್ಕಾರಿ ನೌಕರ ಖುಲಾಸೆ ಪ್ರಕರಣದ ಬಗ್ಗೆ ತಿಳಿಯಿರಿ.

Read Full Story

10:08 AM (IST) Jun 30

ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳಕ್ಕೆ ತೆರಳುತ್ತಿದ್ದ ಚಿನ್ನದ ವ್ಯಾಪಾರಿಯ ಕಾರು ತಡೆದು ಪತ್ನಿ-ಮಗನ ಅಪಹರಣ, ಚಿನ್ನ ದರೋಡೆ!

ಮಂಗಳೂರಿನ ಬೈಕಂಪಾಡಿ ಬಳಿ, ಮಹಾರಾಷ್ಟ್ರದಿಂದ ಕೇರಳಕ್ಕೆ ತೆರಳುತ್ತಿದ್ದ ಚಿನ್ನದ ವ್ಯಾಪಾರಿಯ ಕುಟುಂಬವನ್ನು ಅಡ್ಡಗಟ್ಟಿದ ದರೋಡೆಕೋರರು, ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ, ಅವರ ಪತ್ನಿ ಮತ್ತು ಮಗನನ್ನು ಕಾರು ಸಮೇತ ಅಪಹರಿಸಿ, 180 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಈ ಘಟನೆಯ ಹಿಂದೆ ಆಪ್ತರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.
Read Full Story

09:10 AM (IST) Jun 30

ನಿವೃತ್ತಿ ಹೊಂದಿದ ಶಿಕ್ಷಕನಿಗೆ ಬೈಕ್ ನೀಡಿದ ವಿದ್ಯಾರ್ಥಿಗಳು; ಅಮ್ಮನ ಜೊತೆ ಮೊದಲ ರೈಡ್

ಕೊಪ್ಪಳ ಜಿಲ್ಲೆಯ ಮಸಬಹಂಚಿನಾಳ ಗ್ರಾಮದ ನಿವೃತ್ತ ಶಿಕ್ಷಕ ಜಿ.ಎಂ. ನದಾಫ್ ಅವರಿಗೆ, ಅವರ ಹಳೆಯ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮದಲ್ಲಿ ಬೈಕ್ ಉಡುಗೊರೆಯಾಗಿ ನೀಡಿದ್ದಾರೆ. 31 ವರ್ಷಗಳ ಸೇವೆ ಸಲ್ಲಿಸಿದ ಗುರುವಿನ ಈ ಉಡುಗೊರೆಗೆ ಭಾವುಕರಾದ ನದಾಫ್, ತಮ್ಮ 85 ವರ್ಷದ ತಾಯಿಯನ್ನು ಕೂರಿಸಿಕೊಂಡು ಮೊದಲ ಸವಾರಿ ಮಾಡಿದರು.
Read Full Story

09:06 AM (IST) Jun 30

ಮಂಗಳೂರು - ಅಲೆಗಳ ಅಬ್ಬರಕ್ಕೆ ಅರಬ್ಬಿಯ ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, 6 ಮಂದಿ ಬೆಸ್ತರ ರಕ್ಷಣೆ

ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ಹವಾಮಾನದಿಂದಾಗಿ 'ಐಎಫ್‌ಬಿ ಮಂಜುಮಾತಾ' ಎಂಬ ಮೀನುಗಾರಿಕಾ ಬೋಟ್‌ ಮುಳುಗಡೆಯಾಗಿದೆ. ಭಾರತೀಯ ಕೋಸ್ಟ್ ಗಾರ್ಡ್‌ನ 'ಐಸಿಜಿಎಸ್ ಸಚೇತ್' ಹಡಗು, ರಿಮೋಟ್ ಚಾಲಿತ ಲೈಫ್‌ಬಾಯ್‌ಗಳನ್ನು ಬಳಸಿ ಬೋಟ್‌ನಲ್ಲಿದ್ದ ಎಲ್ಲಾ ಆರು ಮೀನುಗಾರರನ್ನು ಯಶಸ್ವಿಯಾಗಿ ರಕ್ಷಿಸಿದೆ. ರಕ್ಷಿಸಲ್ಪಟ್ಟ ಮೀನುಗಾರರನ್ನು ಸುರಕ್ಷಿತವಾಗಿ ನ್ಯೂ ಮಂಗಳೂರು ಬಂದರಿಗೆ ಕರೆತರಲಾಗಿದೆ.
Read Full Story

08:51 AM (IST) Jun 30

ಭಾರಿ ಮಳೆಗೆ ತಾತ್ಕಾಲಿಕ ರಸ್ತೆಗೆ ಹಾನಿ, ಸೇತುವೆ ನಿರ್ಮಾಣ ಸ್ಥಳದಲ್ಲಿ ಸಂಕಷ್ಟ, ಸುತ್ತು ಬಳಸು ದಾರಿಯೇ ಗತಿ

ಬೆಳ್ತಂಗಡಿಯ ಅಂಬಡಬೆಟ್ಟು ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ಸೇತುವೆಯ ಬಳಿ ನಿರ್ಮಿಸಿದ್ದ ತಾತ್ಕಾಲಿಕ ರಸ್ತೆಯು ಭಾರಿ ಮಳೆಗೆ ಕೊಚ್ಚಿಹೋಗಿದೆ. ಇದರಿಂದಾಗಿ ಗುರಿಪಳ್ಳ, ನಡ, ಇಂದಬೆಟ್ಟು ಸೇರಿದಂತೆ ಸುತ್ತಮುತ್ತಲಿನ ಸಾವಿರಾರು ಕುಟುಂಬಗಳು ಉಜಿರೆ, ಬೆಳ್ತಂಗಡಿ ಮತ್ತು ಮುಂಡಾಜೆಗೆ ತೆರಳಲು ಕಿಲೋಮೀಟರ್‌ಗಟ್ಟಲೆ ಸುತ್ತು ಬಳಸಿ ಪ್ರಯಾಣಿಸುವ ಅನಿವಾರ್ಯತೆ ಎದುರಾಗಿದೆ.
Read Full Story

08:28 AM (IST) Jun 30

'ರಾಜಕೀಯದಲ್ಲಿ ಓಡ್ತಿರಬೇಕು, ಓಡದಿದ್ರೆ ಹಿಂದೆ ಬೀಳ್ತೀವಿ..' ಸಿದ್ದರಾಮಯ್ಯ ಕಡೆಗಣನೆ ಬಗ್ಗೆ ಸತೀಶ್ ಜಾರಕಿಹೊಳಿ ಹಿಂಗ್ಯಾಕ ಅಂದ್ರು!?

‘ರಾಜಕೀಯದಲ್ಲಿ ಓಡುತ್ತಲೇ ಇರಬೇಕು, ಇಲ್ಲದಿದ್ರೆ ಹಿಂದೆ ಬೀಳ್ತೀವಿ’ ಒಂದು ಕಾಲದಲ್ಲಿ ಸಿದ್ದರಾಮಯ್ಯರ ಅತ್ಯಂತ ಆಪ್ತರಾಗಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರು ಕೆಂಪೇಗೌಡ ಜಯಂತಿಯಲ್ಲಿ ಸಿದ್ದರಾಮಯ್ಯರ ಕಡೆಗಣನೆ ಕುರಿತಂತೆ ಅಚ್ಚರಿ ಗೊಂದಲಮಯ ಹೇಳಿಕೆ ನೀಡಿದ್ದಾರೆ.ಅವರ ಮಾತಿನ ಹಿಂದಿನ ಅರ್ಥವೇನು?

Read Full Story

08:19 AM (IST) Jun 30

ಈ ವರ್ಷ ಮೊದಲ ಬಾರಿಗೆ ತುಂಗಾ & ಭದ್ರಾ ನದಿ ನೀರಿನ ಮಟ್ಟದಲ್ಲಿ ಏರಿಕೆ; ಮಲೆನಾಡಿನಲ್ಲಿ ಮಳೆ

ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ತುಂಗಾ ಮತ್ತು ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ದಿಢೀರ್ ಏರಿಕೆಯಾಗಿದೆ. ಶೃಂಗೇರಿಯಲ್ಲಿ ಪ್ರವಾಹದ ಆತಂಕ ಸೃಷ್ಟಿಯಾಗಿದ್ದು, ಸೇತುವೆ ಕಾಮಗಾರಿಯ ಕ್ರೇನ್ ಒಂದು ನದಿಯಲ್ಲಿ ಮುಳುಗಡೆಯಾಗಿದೆ.

Read Full Story

07:49 AM (IST) Jun 30

Belagavi - ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸಗೊಳಿಸಿದ ಮಹಿಳೆ ಕುಟುಂಬಸ್ಥರು

ವಿವಾಹಿತ ಮಹಿಳೆಯೊಂದಿಗೆ ಯುವಕನೊಬ್ಬ ಪರಾರಿಯಾದ ಘಟನೆ ನಡೆದಿದೆ. ಇದರಿಂದ ಆಕ್ರೋಶಗೊಂಡ ಮಹಿಳೆಯ ಸಂಬಂಧಿಕರು ಯುವಕನ ಮನೆ ಮೇಲೆ ದಾಳಿ ನಡೆಸಿ, ಧ್ವಂಸಗೊಳಿಸಿದ್ದಾರೆ. ಸಂತ್ರಸ್ತ ಕುಟುಂಬವು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

Read Full Story

07:44 AM (IST) Jun 30

ಒಕ್ಕಲಿಗರ ಸಂಘದ ಹಗರಣ - ನನ್ನ ಬಳಿ ದಾಖಲೆ ಇವೆ, ಇಂಚಿಂಚು ಬಿಚ್ಚಿಡ್ತೇನೆ - ಉಮಾಪತಿ ಶ್ರೀನಿವಾಸಗೌಡ

ರಾಜ್ಯ ಒಕ್ಕಲಿಗರ ಸಂಘದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪ ಸಂಬಂಧ ನಿರ್ಮಾಪಕ, ಸಂಘದ ನಿರ್ದೇಶಕರೂ ಆಗಿರುವ ಉಮಾಪತಿ ಶ್ರೀನಿವಾಸಗೌಡ ಮತ್ತೆ ಗಂಭೀರ ಆರೋಪ ಮಾಡಿದ್ದು, ಎಲ್ಲ ಹಗರಣಗಳ ದಾಖಲೆ ನನ್ನ ಬಳಿ ಇವೆ. ಇಂಚಿಂಚು ಬಿಚ್ಚಿಡುತ್ತೇನೆ ಎಂದು ಎಚ್ಚರಿಸಿದ್ದಾರೆ. ಏನಿದು ಹಗರಣ? 

Read Full Story

07:30 AM (IST) Jun 30

ಬೆಂಗಳೂರು-ಮಂಗಳೂರು ಚತುಷ್ಪಥ ರೈಲ್ವೆ ಮಾರ್ಗ - ವಿಜಯಪುರಕ್ಕೆ ವಂದೇ ಭಾರತ್ ಸ್ಲೀಪರ್

ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಚನ್ನಪಟ್ಟಣದಲ್ಲಿ ಮೇಲ್ಸೇತುವೆ ಉದ್ಘಾಟಿಸಿ, ಬೆಂಗಳೂರಿನಿಂದ ಮಂಗಳೂರಿಗೆ ಚತುಷ್ಪಥ ರೈಲು ಮಾರ್ಗ ಅಭಿವೃದ್ಧಿಪಡಿಸುವ ಮಹತ್ವದ ಯೋಜನೆಯನ್ನು ಪ್ರಕಟಿಸಿದರು. ಇ

Read Full Story

07:15 AM (IST) Jun 30

Karnataka SIR - ಎಸ್‌ಐಆರ್‌ನಲ್ಲಿ ಮತಹಕ್ಕು ಕಳೆದುಕೊಂಡ್ರೆ ಗ್ಯಾರಂಟಿ ಇಲ್ಲ, ಪಿಂಚಣಿ, ಸರ್ಕಾರಿ ಮನೆ ಕೂಡ ಸಿಗೋಲ್ಲ! ಸಿಎಂ ಹೇಳಿದ್ದೇನು?

ರಾಜ್ಯದಲ್ಲಿ ಇಂದಿನಿಂದ ಎಸ್‌ಐಆರ್ ನಡೆಯಲಿರುವ ಹಿನ್ನೆಲೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಎಲ್ಲ ಮತದಾರರು ಕಡ್ಡಾಯವಾಗಿ ಬೂತ್ ಮಟ್ಟದ ಅಧಿಕಾರಿಗಳಿಂದ ಭರ್ತಿ ಮಾಡಿ ಅಗತ್ಯ ದಾಖಲೆ ನೀಡುವಂತೆ ಮನವಿ ಮಾಡಿದ್ದಾರೆ. ಮತಹಕ್ಕು ಕಳೆದುಕೊಂಡರೆ ಏನಾಗುತ್ತೆ?

Read Full Story

07:13 AM (IST) Jun 30

ಯಲಹಂಕದಲ್ಲಿ ಕೊಯಮತ್ತೂರು-ಮುಂಬೈ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ; ಮೆಗಾ ರೈಲ್ವೆ ಟರ್ಮಿನಲ್!

ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರು ಯಲಹಂಕ ರೈಲು ನಿಲ್ದಾಣದಲ್ಲಿ ಕೊಯಮತ್ತೂರು-ಮುಂಬೈ ಎಕ್ಸ್‌ಪ್ರೆಸ್‌ ರೈಲಿಗೆ ಹೊಸ ನಿಲುಗಡೆಗೆ ಚಾಲನೆ ನೀಡಿದರು. ಈ ಸೌಲಭ್ಯದಿಂದ ಸ್ಥಳೀಯ ಪ್ರಯಾಣಿಕರಿಗೆ ಅನುಕೂಲವಾಗಲಿದ್ದು, ಬೆಂಗಳೂರಿನ ಇತರ ನಿಲ್ದಾಣಗಳ ಮೇಲಿನ ಒತ್ತಡ ಕಡಿಮೆ ಮಾಡಲು ಯಲಹಂಕದಲ್ಲಿ ಹೊಸ ಮೆಗಾ ರೈಲ್ವೆ ಟರ್ಮಿನಲ್ ನಿರ್ಮಿಸಲು ಯೋಜಿಸಲಾಗಿದೆ.
Read Full Story

More Trending News