LIVE NOW
Published : May 30, 2026, 06:57 AM ISTUpdated : May 30, 2026, 09:04 AM IST

Karnataka News Live: Bengaluru - ಕುರಿ ಮಟನ್ ಬದಲಾಗಿ ದನದ ಮಾಂಸ ನೀಡ್ತಿದ್ದ ರೆಸ್ಟೋರೆಂಟ್‌ಗೆ ಬೀಗ; ಇಬ್ಬರ ಬಂಧನ

ಸಾರಾಂಶ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಅವರು ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಪದಗ್ರಹಣದ ಬಳಿಕ ‘ಕುಮಾರ ಕೃಪ’ದ ಕಲ್ಲಿನ ಕಟ್ಟಡವನ್ನು ಗೃಹ ಕಚೇರಿ ಆಗಿ ಬಳಸುವರೇ ಎಂಬ ಪ್ರಶ್ನೆ ಉದ್ಬವವಾಗಿದೆ. 125 ವರ್ಷಗಳ ಹಿಂದೆ ಮೈಸೂರಿನ ದಿವಾನರಾಗಿದ್ದ ಕೆ.ಶೇಷಾದ್ರಿ ಅಯ್ಯರ್ ಅವರ ನಿವಾಸವಾಗಿದ್ದ ಕುಮಾರಕೃಪ ಅತಿಥಿ ಗೃಹ ಈಗ ರಾಜ್ಯ ಸರ್ಕಾರದ ಆಸ್ತಿ. ಮಹಾತ್ಮಗಾಂಧೀಜಿ, ರಾಜೀವ್‌ಗಾಂಧಿ ಹಾಗೂ ಇಂದಿರಾಗಾಂಧಿ ಅವರು ಸಹ ತಂಗಿದ್ದರು ಎನ್ನಲಾದ ಈ ಕಟ್ಟಡವನ್ನು ಡಿ.ಕೆ.ಶಿವಕುಮಾರ್‌ ಅವರು ಗೃಹ ಕಚೇರಿ ಆಗಿ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಏಕೆಂದರೆ, ಈ ಕಟ್ಟಡದ ಇನ್ ಹಾಗೂ ಔಟ್ ಗೇಟುಗಳ ಬದಲಾವಣೆ ಹಾಗೂ ದುರಸ್ತಿ ಕಾರ್ಯಕ್ಕೆ ಸೂಚನೆ ಬಂದಿದೆ, ಕಟ್ಟಡದಲ್ಲೂ ಸಣ್ಣ ಪುಟ್ಟ ಬದಲಾವಣೆಗಳ ಮೂಲಕ ವಾಸ್ತು ಪರಿಹಾರಕ್ಕೆ ಲೋಕೋಪಯೋಗಿ ಇಲಾಖೆಗೆ ಸೂಚನೆ ಹೋಗಿದೆ ಎನ್ನಲಾಗುತ್ತಿದೆ.

09:04 AM (IST) May 30

Bengaluru - ಕುರಿ ಮಟನ್ ಬದಲಾಗಿ ದನದ ಮಾಂಸ ನೀಡ್ತಿದ್ದ ರೆಸ್ಟೋರೆಂಟ್‌ಗೆ ಬೀಗ; ಇಬ್ಬರ ಬಂಧನ

ಬೆಂಗಳೂರಿನ ಬೂದಿಗೆರೆ ಕ್ರಾಸ್‌ನಲ್ಲಿರುವ ಕಾಯಲೋರಂ ರೆಸ್ಟೋರೆಂಟ್‌ನಲ್ಲಿ ಮಟನ್ ಎಂದು ನಂಬಿಸಿ ಗ್ರಾಹಕರಿಗೆ ದನದ ಮಾಂಸವನ್ನು ನೀಡಲಾಗುತ್ತಿತ್ತು. ಅನುಮಾನಗೊಂಡ ಯುವಕರು ಪೊಲೀಸರಿಗೆ ಮಾಹಿತಿ ನೀಡಿದಾಗ ಈ ವಂಚನೆ ಬಯಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿ ರೆಸ್ಟೋರೆಂಟ್‌ಗೆ ಬೀಗ ಹಾಕಿದ್ದಾರೆ.
Read Full Story

08:41 AM (IST) May 30

Job - ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ, ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರೊಂದಿಗೆ, ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೂ ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ನಿಗದಿತ ದಿನಾಂಕದೊಳಗೆ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.
Read Full Story

08:21 AM (IST) May 30

ಜೂನ್ 1ರಿಂದ ಯಶವಂತಪುರ-ವಿಜಯಪುರ ನಡುವೆ ಹೊಸ ಎಕ್ಸ್‌ಪ್ರೆಸ್‌; ಗದಗ ಬೈಪಾಸ್ ಮೂಲಕ ನೇರ ಪ್ರಯಾಣ

ಬೆಂಗಳೂರಿನ ಯಶವಂತಪುರ ಮತ್ತು ವಿಜಯಪುರ ನಡುವೆ ಹೊಸ ದ್ವಿಸಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು ಸಂಚಾರ ಜೂನ್ 1 ರಿಂದ ಆರಂಭವಾಗಿದೆ. ಗದಗ, ಬಾದಾಮಿ, ಬಾಗಲಕೋಟೆ ಮೂಲಕ ಸಂಚರಿಸುವ ಈ ರೈಲಿನ ಸಮಯ ಬದಲಾವಣೆಗೆ ಪ್ರಯಾಣಿಕರು ಮನವಿ ಮಾಡಿದ್ದಾರೆ.

Read Full Story

08:02 AM (IST) May 30

Gadag - ಅಪಾಯದಂಚಿನ ಮಾರ್ಗ - ಜೀವ ಪಣಕ್ಕಿಟ್ಟು ಸಾಗುವ 1 ಕಿ.ಮೀ ರಸ್ತೆ ಪಯಣ, ಆಟೋಗಷ್ಟೇ ದಾರಿ

2019ರಿಂದ ಮಲಪ್ರಭಾ ಮತ್ತು ಬೆಣ್ಣಿಹಳ್ಳ ಪ್ರವಾಹದಿಂದಾಗಿ ಹೊಳೆಆಲೂರು-ಅಮರಗೋಳ ಸಂಪರ್ಕ ರಸ್ತೆ ತೀವ್ರವಾಗಿ ಹದಗೆಟ್ಟಿದೆ. ಸುಮಾರು 1 ಕಿ.ಮೀ ರಸ್ತೆಯು ಬಿರುಕು ಬಿಟ್ಟು ಕುಸಿಯುವ ಹಂತದಲ್ಲಿದ್ದು, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಜೀವ ಭಯದಿಂದ ಸಂಚರಿಸುವಂತಾಗಿದೆ. ಇದಕ್ಕೆ ಶಾಶ್ವತ ಪರಿಹಾರವಾಗಿ ತಡೆಗೋಡೆ ಅಥವಾ ಸೇತುವೆ ನಿರ್ಮಿಸಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
Read Full Story

More Trending News