ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ಚರ್ಚೆಯ ವೇಳೆ ರಾಹುಲ್ ಗಾಂಧಿ ಅವರು, ರಾಜ್ಯದ ವಿದ್ಯಮಾನಗಳ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಅವರ ಪ್ರಶ್ನೆಗಳಿಗೆ ಮಲ್ಲಿಕಾರ್ಜುನ ಖರ್ಗೆ ಮಾಹಿತಿ ನೀಡಿದ್ದಾರೆ. ಸೋನಿಯಾ ಗಾಂಧಿ ಅವರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಮಾಡೋಣ ಎಂದು ಮುಖಂಡರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಕೇವಲ ಸಿಎಂ- ಡಿಸಿಎಂ ಬದಲಾವಣೆ ಮಾತ್ರ ಅಲ್ಲ, ಕೆಪಿಸಿಸಿ ಅಧ್ಯಕ್ಷರ ಆಯ್ಕೆಗಳ ಬಗ್ಗೆ ರಾಹುಲ್ ಗಾಂಧಿ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ಸೋನಿಯಾ ಗಾಂಧಿ ಜೊತೆ ಚರ್ಚೆ ನಡೆಸಿ ಬಳಿಕ ಸಿಎಂ- ಡಿಸಿಎಂ ಅವರಿಗೆ ಮಾಹಿತಿ ನೀಡಿ ಒಂದೆರಡು ದಿನದಲ್ಲೇ ಇಬ್ಬರನ್ನೂ ದೆಹಲಿಗೆ ಕರೆಸಿಕೊಳ್ಳುವ ಸಾಧ್ಯತೆ ಇದೆ ಎಂದು ಎಐಸಿಸಿ ಉನ್ನತ ಮೂಲಗಳು ಮಾಹಿತಿ ನೀಡಿವೆ.

12:07 AM (IST) Dec 01
ಬೆಂಗಳೂರು ಸಾಮಾನ್ಯವಾಗಿ ಚಳಿಗಾಲದಲ್ಲೂ ಬೆಚ್ಚಗಿರುತ್ತದೆ. ಆದರೆ ಈ ಬಾರಿ ಚಳಿ ಹೆಚ್ಚಾಗಿದೆ. ಭಾನುವಾರ, ನವೆಂಬರ್ 30 ರಂದು, ಇಲ್ಲಿ ಅತಿ ಹೆಚ್ಚು ಚಳಿಯ ದಿನ ದಾಖಲಾಗಿದೆ. ಈ ನಡುವೆ, ಬಳಕೆದಾರರು 'ಫ್ರಿಡ್ಜ್ನೊಳಗಿನ ಬೆಂಗಳೂರು' ಎಂದು ಕರೆದಿದ್ದಾರೆ. ಲಂಡನ್ನ ವಾತಾವರಣಕ್ಕೆ ಹೋಲಿಸಿದ್ದಾರೆ.
11:42 PM (IST) Nov 30
11:02 PM (IST) Nov 30
ನೆನಪಿನ ಶಕ್ತಿ ಹೆಚ್ಚಿಸಲು ಮತ್ತು ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಲು ವಿಟಮಿನ್ಗಳು, ಖನಿಜಗಳು, ಆ್ಯಂಟಿಆಕ್ಸಿಡೆಂಟ್ಗಳು ಮತ್ತು ಒಮೆಗಾ 3 ಫ್ಯಾಟಿ ಆಸಿಡ್ ಇರುವ ಆಹಾರಗಳನ್ನು ತಿನ್ನಬೇಕು.
10:42 PM (IST) Nov 30
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಎಕ್ಸ್ ಖಾತೆಯಿಂದ 'ದಿ ಡೆವಿಲ್' ಚಿತ್ರದ ಟ್ರೈಲರ್ ಘೋಷಣೆ ಪೋಸ್ಟ್ ವೈರಲ್ ಆಗಿದೆ. ದರ್ಶನ್ ಜೈಲಿನಿಂದಲೇ ಪೋಸ್ಟ್ ಮಾಡಿದ್ದಾರೆಯೇ ಎಂದು ಅಭಿಮಾನಿಗಳಲ್ಲಿ ಕುತೂಹಲ ಮತ್ತು ಚರ್ಚೆ ಹುಟ್ಟುಹಾಕಿದೆ.
10:18 PM (IST) Nov 30
G Parameshwara on cabinet reshuffle: ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಅಥವಾ ಸಂಪುಟ ಪುನಾರಚನೆ ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.
10:04 PM (IST) Nov 30
ವಿರಾಟ್ ಕೊಹ್ಲಿಯವರ ಭರ್ಜರಿ ಶತಕ (135) ಹಾಗೂ ಬೌಲರ್ಗಳ ಸಂಘಟಿತ ಪ್ರದರ್ಶನದ ನೆರವಿನಿಂದ, ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 57 ರನ್ಗಳ ಭರ್ಜರಿ ಜಯ ಸಾಧಿಸಿದೆ. 350 ರನ್ಗಳ ಗುರಿ ಬೆನ್ನತ್ತಿದ ಹರಿಣಗಳ ಪಡೆ 332 ರನ್ಗಳಿಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು.
09:41 PM (IST) Nov 30
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಣಗಳ್ಳಿದೊಡ್ಡಿ ಗ್ರಾಮದಲ್ಲಿ, ತಂದೆಯ ಅಂತ್ಯಕ್ರಿಯೆ ಮುಗಿಸಿದ ಮರುದಿನವೇ ಶಿಕ್ಷಕ ಮಗ ಸಾವನ್ನಪ್ಪಿದ್ದಾರೆ. ತಂದೆ ದೊಡ್ಡಲಿಂಗಯ್ಯ ಅವರ ನಿಧನದ ದುಃಖದಲ್ಲಿದ್ದ ಮಗ ಮಲ್ಲಣ್ಣ ಅವರೂ ಸಾವನ್ನಪ್ಪಿದ್ದು, ಈ ಹೃದಯವಿದ್ರಾವಕ ಘಟನೆಯಿಂದ ಇಡೀ ಗ್ರಾಮ ಮರುಗಿದೆ.
08:39 PM (IST) Nov 30
'ಯೆಜ್ಡಿ' ಟ್ರೇಡ್ಮಾರ್ಕ್ ಹಕ್ಕು ವಿವಾದದಲ್ಲಿ ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಕ್ಲಾಸಿಕ್ ಲೆಜೆಂಡ್ಸ್ ಕಂಪನಿಗೆ 'ಯೆಜ್ಡಿ' ಬ್ರಾಂಡ್ ಬಳಸಲು ಅನುಮತಿ ನೀಡಿದೆ. ಈ ಮೂಲಕ, ಏ ಸಹ-ಸಂಸ್ಥಾಪಕ ಬೊಮನ್ ಇರಾನಿ ಅವರ ಪರಂಪರೆಯ ಹಕ್ಕನ್ನು ನ್ಯಾಯಾಲಯ ಎತ್ತಿಹಿಡಿದಿದೆ.
08:09 PM (IST) Nov 30
ದೆಹಲಿಯ ಜಂಡೇವಾಲನ್ನಲ್ಲಿರುವ 1500 ವರ್ಷಗಳಷ್ಟು ಹಳೆಯ ಗೋರಖನಾಥ್ ದೇವಾಲಯವನ್ನು ಸರ್ಕಾರಿ ಅಧಿಕಾರಿಗಳ ಪಾರ್ಕಿಂಗ್ಗಾಗಿ ನೆಲಸಮಗೊಳಿಸಲಾಗುತ್ತಿದೆ ಎಂಬ ಆರೋಪ. ಈ ಘಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ₹300 ಕೋಟಿ ಮೌಲ್ಯದ RSS ಕಚೇರಿ ಹಣಕಾಸಿನ ಮೂಲ ಪ್ರಶ್ನಿಸಿದ್ದಾರೆ.
07:08 PM (IST) Nov 30
06:50 PM (IST) Nov 30
06:39 PM (IST) Nov 30
05:55 PM (IST) Nov 30
ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರದ ಮೆಕ್ಕೆಜೋಳ ನೀತಿಯನ್ನು ಟೀಕಿಸಿದ ಅವರು, ಮಂಗನ ಕಾಯಿಲೆಗೆ ಲಸಿಕೆ ಅಭಿವೃದ್ಧಿ, ಬಾಣಂತಿ ಸಾವು ಪ್ರಕರಣ ತಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
05:53 PM (IST) Nov 30
ಕಳೆದ ಎರಡು-ಮೂರು ತಿಂಗಳುಗಳಿಂದ ಸಂಬಳ ನೀಡದ ಕಾರಣಕ್ಕೆ ಕುಪಿತಗೊಂಡ ಲಾರಿ ಚಾಲಕನೊಬ್ಬ, ಬೆಂಗಳೂರಿನ ಸೋಮನಹಳ್ಳಿ ಟೋಲ್ ಬಳಿ ತನ್ನ ಮಾಲೀಕನ ಲಾರಿಗೆ ಬೆಂಕಿ ಹಚ್ಚಿದ್ದಾನೆ. ಬೆಂಕಿ ಹಚ್ಚಿ ಪರಾರಿಯಾಗಲು ಯತ್ನಿಸಿದ ಚಾಲಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
05:36 PM (IST) Nov 30
ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ನಡೆದ ಶರಣಮ್ಮ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದುವೆ ಪ್ರಸ್ತಾಪಕ್ಕೆ ಸಂಬಂಧಿಸಿದ ಆಘಾತಕಾರಿ ಕಾರಣವನ್ನು ಪತ್ತೆಹಚ್ಚಿದ್ದಾರೆ. ಮೃತಳ ತಂಗಿಯನ್ನು ಪ್ರೀತಿಸುತ್ತಿದ್ದ ಆರೋಪಿ, ಆಕೆಯ ವಿಳಾಸ ನೀಡದಿದ್ದಕ್ಕೆ ಅಕ್ಕ ಶರಣಮ್ಮಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
05:25 PM (IST) Nov 30
ಬಿಗ್ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿಯವರ ಕನ್ನಡ ಭಾಷೆಯ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಇತ್ತೀಚೆಗೆ, ಮನೆಯಲ್ಲಿ ಅವರಿಗೆ ಸಿಂಹದ ಬಗ್ಗೆ ಓದುವ ಟಾಸ್ಕ್ ನೀಡಲಾಯಿತು, ಅವರ ಓದುವ ಶೈಲಿ ಮತ್ತು ತಡಬಡಾಯಿಸುವಿಕೆ ಎಲ್ಲರಿಗೂ, ವಿಶೇಷವಾಗಿ ಸುದೀಪ್ ಅವರಿಗೂ ನಗುವಿನ ಹೊನಲು ಹರಿಸಿತು.
05:13 PM (IST) Nov 30
ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಅವರಿಗೆ ಆಂತರಿಕ ಸಂಘರ್ಷ ಬದಿಗಿಟ್ಟು ರಾಜ್ಯದ ಅಭಿವೃದ್ಧಿಗೆ ಗಮನ ನೀಡುವಂತೆ ಸಲಹೆ ನೀಡಿದ್ದಾರೆ. ಜೊತೆಗೆ, ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಆಗ್ರಹಿಸಿದರು..
04:52 PM (IST) Nov 30
ರಾಯಚೂರು ಜಿಲ್ಲೆಯ ಸಿಂಧನೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪನ್ಯಾಸಕಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಮುಗಿಸಿ ವಾಪಸಾಗುತ್ತಿದ್ದಾಗ ಹುಲ್ಲು ತುಂಬಿದ ಟ್ರ್ಯಾಕ್ಟರ್ಗೆ ಅವರ ಕಾರು ಡಿಕ್ಕಿ ಹೊಡೆದಿದ್ದು, ಪತಿ ಮತ್ತು ಮಕ್ಕಳು ಗಾಯಗೊಂಡಿದ್ದಾರೆ.
04:40 PM (IST) Nov 30
ಗೌತಮ್ ಮತ್ತು ಭೂಮಿಕಾಳ ರಹಸ್ಯವನ್ನು ಆನಂದ್ ದಂಪತಿ ಮಾತನಾಡುತ್ತಿರುವುದನ್ನು ಭಾಗ್ಯಮ್ಮ ಕೇಳಿಸಿಕೊಂಡು ಮನೆ ಬಿಟ್ಟಿದ್ದಾಳೆ. ಇತ್ತ ಮಿಂಚು ಮತ್ತು ಆಕಾಶ್ ಅಪ್ಪ-ಅಮ್ಮನನ್ನು ಹೇಗೆ ಒಂದು ಮಾಡುವುದು ಎಂದು ನೋಡುತ್ತಿದ್ದಾರೆ. ಭಾಗ್ಯಮ್ಮ ಮಕ್ಕಳ ಕಣ್ಣಿಗೆ ಬೀಳ್ತಾಳಾ?
04:09 PM (IST) Nov 30
ಬಿಗ್ ಬಾಸ್ ಕನ್ನಡ ಸೀಸನ್ 12 ರಲ್ಲಿ, ಸ್ಪರ್ಧಿ ಒಬ್ಬರು ಅವರು ನಿಂದನೀಯ ಪದ ಬಳಕೆಯ ಆರೋಪ ಮತ್ತು ಇತರ ಸ್ಪರ್ಧಿಗಳೊಂದಿಗೆ ತೀವ್ರ ಜಗಳದ ನಂತರ ತಾವೇ ಶೋ ತೊರೆಯುವ ಬಗ್ಗೆ ಮಾತನಾಡಿದ್ದಾರೆ. ಅವರ ಈ ವರ್ತನೆಯು ಮನೆಯಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಯಾರವರು?
03:59 PM (IST) Nov 30
ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಪ್ರಯುಕ್ತ ಹಿಂದೂ ಸಂಘಟನೆಗಳು ಅಳವಡಿಸಿದ್ದ ಬ್ಯಾನರ್ಗಳನ್ನು ಕಿಡಿಗೇಡಿಗಳು ಬ್ಲೇಡ್ನಿಂದ ಹರಿದು ಹಾನಿಗೊಳಿಸಿದ್ದಾರೆ. ಈ ಘಟನೆಯು ನಗರದಲ್ಲಿ ಉದ್ವಿಗ್ನತೆ ಸೃಷ್ಟಿಸಿದ್ದು, ಧಾರ್ಮಿಕ ಸೌಹಾರ್ದತೆ ಕದಡುವ ಯತ್ನದ ವಿರುದ್ಧ ಪೊಲೀಸರು ಸುಮೋಟೋ ಕೇಸು ದಾಖಲಿಸಿದ್ದಾರೆ.
03:28 PM (IST) Nov 30
ಗೆಳೆಯರೊಂದಿಗೆ ಪ್ರವಾಸಕ್ಕೆ ಹೋಗಿದ್ದಕ್ಕೆ ಮನೆಯವರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು, ಗದಗಿನ ಖಾಸಗಿ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಚಂದ್ರಿಕಾ ನಡುವಿನಮನಿ ಭೀಷ್ಮ ಕೆರೆಗೆ ಹಾರಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಸಹೋದರನ ಬುದ್ಧಿವಾದದಿಂದ ನೊಂದ ಯುವತಿ ಈ ದುಡುಕಿನ ನಿರ್ಧಾರ.
03:06 PM (IST) Nov 30
Bigg Boss ಮನೆಯಲ್ಲಿ ಕಾಮಿಡಿ ಮಾಡುವವರು ಇರಲೇಬೇಕು. ಯಾವಾಗಲೂ ಜಗಳ ಆಗುತ್ತಿದ್ದರೆ, ವೀಕ್ಷಕರಿಗೆ ನೋಡಲು ಬೇಸರ ಆಗುವುದು. ಆದರೆ ಈ ಬಾರಿ ಕಾಮಿಡಿ ಮಾಡುತ್ತಿರುವವರನ್ನೇ ಹೊರಗಡೆ ಕಳಿಸಿದ್ದಾರೆ.
02:49 PM (IST) Nov 30
CM Mohan Yadav Son Abhimanyu Marraige: ಇಂದು ಮದುವೆಗೋಸ್ಕರ ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಾರೆ. ಆದರೆ ಇಲ್ಲೊಬ್ಬ ಸಿಎಂ ಮಾತ್ರ ಸಾಮೂಹಿಕ ಮದುವೆಯಲ್ಲಿ ತಮ್ಮ ಮಗನ ಮದುವೆ ಮಾಡಿಸಿ, ಎಲ್ಲರಿಗೂ ಮಾದರಿ ಆಗಿದ್ದಾರೆ.
02:29 PM (IST) Nov 30
ಬಿಗ್ಬಾಸ್ ಕನ್ನಡ ಸೀಸನ್ 12ರ ಪ್ರಬಲ ಸ್ಪರ್ಧಿ ರಾಶಿಕಾ ಶೆಟ್ಟಿ, ಕ್ಯಾಪ್ಟನ್ಸಿ ಟಾಸ್ಕ್ನಿಂದ ಹೊರಗುಳಿದಿದ್ದಾರೆ. ಮನೆಯೊಳಗಿನ ರಾಜಕೀಯದಿಂದಾಗಿ ಇತರ ಸ್ಪರ್ಧಿಗಳು ಸ್ಪಂದನಾಗೆ ಪಾಯಿಂಟ್ಸ್ ನೀಡಿದ್ದರಿಂದ ತಮಗೆ ಅವಕಾಶ ತಪ್ಪಿತು ಎಂದು ರಾಶಿಕಾ ಬೇಸರ ವ್ಯಕ್ತಪಡಿಸಿದ್ದಾರೆ.
01:55 PM (IST) Nov 30
ತಮಿಳು ಚಿತ್ರರಂಗದ ಪ್ರಮುಖ ನಟ ಅಜಿತ್ ಕುಮಾರ್ ಅವರು ವಿಮಾನ ನಿಲ್ದಾಣದಲ್ಲಿ ವಯಸ್ಸಾದವರೊಬ್ಬರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
01:25 PM (IST) Nov 30
01:24 PM (IST) Nov 30
ಸಂದೀಪ್ ರೆಡ್ಡಿ ವಂಗಾ ನಿರ್ದೇಶನದಲ್ಲಿ ಪ್ರಭಾಸ್ ನಾಯಕನಾಗಿ ನಟಿಸುತ್ತಿರುವ 'ಸ್ಪಿರಿಟ್' ಸಿನಿಮಾ ಸೆಟ್ಟೇರಿದೆ. ಈ ಬೃಹತ್ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಬಾಲಿವುಡ್ನ ಹಿರಿಯ ನಟಿಯೊಬ್ಬರು ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಆ ವಿವರಗಳನ್ನು ಈ ಲೇಖನದಲ್ಲಿ ತಿಳಿಯಿರಿ.
12:56 PM (IST) Nov 30
ಮಹೇಶ್ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್ನಲ್ಲಿ ತಯಾರಾಗುತ್ತಿರುವ 'ವಾರಣಾಸಿ' ಚಿತ್ರದ ಟೈಟಲ್ ಬದಲಾಗಿದೆ. ಇತ್ತೀಚೆಗೆ ಹೆಸರಿನ ಬಗ್ಗೆ ವಿವಾದ ಎದ್ದಿದ್ದರಿಂದ ಶೀರ್ಷಿಕೆಯನ್ನು ಬದಲಾಯಿಸಲಾಗಿದೆ.
12:36 PM (IST) Nov 30
ಬಿಗ್ಬಾಸ್ ವೀಕೆಂಡ್ ಸಂಚಿಕೆಯಲ್ಲಿ, ಅತಿಥಿಗಳು ಗಿಲ್ಲಿಯನ್ನು ಟಾರ್ಗೆಟ್ ಮಾಡಿದ್ದರು ಎಂಬ ಕಾವ್ಯಾ ಅವರ ಅಭಿಪ್ರಾಯವನ್ನು ಸುದೀಪ್ ಪ್ರಶ್ನಿಸಿದ್ದಾರೆ. ಸುದೀಪ್ ಅವರ ಮಧ್ಯಪ್ರವೇಶದಿಂದ ಕಾವ್ಯಾ ತಮ್ಮ ಹೇಳಿಕೆಯನ್ನು ಬದಲಿಸಿದರೇ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.
12:28 PM (IST) Nov 30
ಈ ಮೊದಲೊಮ್ಮೆ ಅವರು ತಮ್ಮ ತಂಗಿಯ ಬಗ್ಗೆ ಮಾತನ್ನಾಡಿದ್ದು ಭಾರೀ ವೈರಲ್ ಆಗಿತ್ತು. ಇದೀಗ ಅವರು ಪ್ರತಿಯೊಬ್ಬರ 'ಲೈಫ್ ಪಾರ್ಟ್ನರ್' ಬಗ್ಗೆ ಮಾತನ್ನಾಡಿದ್ದಾರೆ. ಅದೀಗ ಸಖತ್ ವೈರಲ್ ಆಗಿದೆ. ಹಾಗಿದ್ದರೆ ರಶ್ಮಿಕಾ ಮಂದಣ್ಣ ಅವರು ಜೀವನದಲ್ಲಿ 'ಪಾರ್ಟ್ನರ್' ಪ್ರಾಮುಖ್ಯತೆ ಬಗ್ಗೆ ಅದೇನು ಹೇಳಿದ್ದಾರೆ ನೋಡಿ..
12:25 PM (IST) Nov 30
OTT Release This Week: ಕನ್ನಡದಲ್ಲಿ ಈಗಾಗಲೇ ಸಾಕಷ್ಟು ಸಿರೀಸ್ಗಳು ಮೂಡಿ ಬರುತ್ತಿವೆ. ಅದರಂತೆ ಹಾರ್ಟ್ಬೀಟ್ ಎನ್ನುವ ಸಿರೀಸ್ ಕೂಡ ಪ್ರಸಾರ ಆಗಿದೆ, ಇದರಲ್ಲಿ ಮೆಡಿಕಲ್ ಲೋಕ ಹಾಗೂ ಅಲ್ಲಿನ ಸಿಬ್ಬಂದಿಗಳ ಕುರಿತ ಕಥೆಯಿದೆ.
12:23 PM (IST) Nov 30
ಸದ್ದಿಲ್ಲದೆ ಚಿತ್ರರಂಗದಲ್ಲಿ ಸಾಯಿ ಪಲ್ಲವಿ ಮುನ್ನುಗ್ಗುತ್ತಿದ್ದಾರೆ. ಯಾವುದೇ ಅಬ್ಬರವಿಲ್ಲದೆ ದೊಡ್ಡ ದೊಡ್ಡ ಸಿನಿಮಾಗಳನ್ನು ಮಾಡುತ್ತಾ ಸಾಗುತ್ತಿದ್ದಾರೆ. ತಂಡೇಲ್ ಬೆಡಗಿ ತನ್ನ ಸಂಭಾವನೆಯನ್ನು ಕೂಡ ಅತಿಯಾಗಿ ಹೆಚ್ಚಿಸಿದ್ದಾರಂತೆ. ರಜನಿಕಾಂತ್ ಸಿನಿಮಾಗೆ ಎಷ್ಟು ತೆಗೆದುಕೊಳ್ಳುತ್ತಿದ್ದಾರೆ ಗೊತ್ತಾ?
12:21 PM (IST) Nov 30
12:15 PM (IST) Nov 30
ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ, ಇಂಜಿನಿಯರಿಂಗ್ ಪದವೀಧರೆ ಅಚಲಾ ಬೆಂಗಳೂರಿನಲ್ಲಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿಸಿದ ಯುವಕ ಮಯಾಂಕ್ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿದ್ದೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.
11:57 AM (IST) Nov 30
Movies Release List: 2025ರ ಡಿಸೆಂಬರ್ ಬಂದಿದೆ. ಈ ಬಾರಿ ವರ್ಷದ ಅಂತ್ಯ ಧಮಾಕಾದಿಂದ ಕೂಡಿರಲಿದೆ. ಹೌದು, ಒಂದಕ್ಕಿಂತ ಒಂದು ಸೂಪರ್ ಸಿನಿಮಾಗಳು ರಿಲೀಸ್ ಆಗಲಿವೆ. ಡಿಸೆಂಬರ್ನಲ್ಲಿ ಮೊದಲು ರಣವೀರ್ ಸಿಂಗ್ ಅವರ 'ಧುರಂಧರ್' ಸಿನಿಮಾ ಜೊತೆಗೆ ಕೆಲವು ಕಾಮಿಡಿ, ರೊಮ್ಯಾಂಟಿಕ್ ಸಿನಿಮಾಗಳು ಕೂಡಾ ಬರ್ತಿವೆ.
11:50 AM (IST) Nov 30
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿ ನಿವಾಸದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಶರತ್ ಬಚ್ಚೇಗೌಡ ಅವರೊಂದಿಗೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಭೆ ನಡೆಸಿದ್ದಾರೆ.
11:47 AM (IST) Nov 30
'ನಾ ನಿನ್ನ ಬಿಡಲಾರೆ' ಧಾರಾವಾಹಿಯ ಕ್ಯೂಟ್ ದೆವ್ವ ಅಂಬಿಕಾ ಪಾತ್ರದಿಂದ ಖ್ಯಾತರಾದವರು ನಟಿ ನೀತಾ ಅಶೋಕ್. 'ವಿಕ್ರಾಂತ್ ರೋಣ' ಚಿತ್ರದ ಮೂಲಕ ಸಿನಿಮಾರಂಗದಲ್ಲೂ ಗುರುತಿಸಿಕೊಂಡಿರುವ ಇವರು, ಇತ್ತೀಚೆಗೆ ಸತೀಶ್ ಎಂಬುವವರನ್ನು ವಿವಾಹವಾಗಿದ್ದಾರೆ.
11:41 AM (IST) Nov 30
ರಾಜಕಾರಣಿಗಳಷ್ಟೇ ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
11:15 AM (IST) Nov 30
Umesh liver cancer: ಹಿರಿಯ ನಟ ಉಮೇಶ್ ಭಾನುವಾರ ಬೆಳಗ್ಗೆ ನಗರದ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅವರು 4 ನೇ ಹಂತದ ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಆದ್ದರಿಂದ ಎಂದಿಗೂ ನಿರ್ಲಕ್ಷಿಸಬಾರದ ಲಿವರ್ ಕ್ಯಾನ್ಸರ್ ನ ಆರಂಭಿಕ ಲಕ್ಷಣಗಳನ್ನು ನೋಡೋಣ.