ಬೆಂಗಳೂರು: ನೀವು ಯಾವ ರೀತಿ ಆಟ ಆಡುತ್ತಿದ್ದೀರಾ ಅಂತ ಗೊತ್ತಿದೆ. ಎಲ್ಲದಕ್ಕೂ ದೇವರು ತಕ್ಕ ಉತ್ತರ ಕೊಟ್ಟೆ ಕೊಡುತ್ತಾನೆ. ನೀವು ಮುಂದೆ ಜೈಲಿಗೆ ಹೋಗುವ ದಿನ ಬಂದೇ ಬರುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಬಿಲ್ಲುಕೆಂಪನಹಳ್ಳಿಯಲ್ಲಿ ಒಬ್ಬ ವ್ಯಕ್ತಿಯ ಭೂಮಿ ಲಪಟಾಯಿಸಿ ಬಿಲ್ಡಿಂಗ್ ಕಟ್ಟಿಕೊಂಡರು. ನಿವೃತ್ತ ಯೋಧನ ಜಮೀನು ಕಬಳಿಸಿದರು. ಅವರಿಗೆ ದೇವೇಗೌಡರು ಹಾಗೂ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು. ನಾನು ಯಾವುದೇ ಭೂಸ್ವಾಧೀನ ಪ್ರಕ್ರಿಯೆ ಮಾಡಿರಲಿಲ್ಲ. ಆಗ ರೈತರು ಬೇಡ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು. ನಾನು ಯಾವ ರೈತರಿಗೂ ಅನ್ಯಾಯ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

11:45 PM (IST) Sep 30
ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ನಿರೂಪಕಿ, ನಟಿ ಜಾಹ್ನವಿ ಅವರು 12 ವರ್ಷ ಸಂಸಾರ ಮಾಡಿ ಯಾಕೆ ಡಿವೋರ್ಸ್ ಕೊಟ್ಟರು ಎಂದು ಮೊದಲ ಬಾರಿಗೆ ಮುಕ್ತವಾಗಿ ಮಾತನಾಡಿದ್ದಾರೆ, ಹಾಗಾದರೆ ಅಸಲಿ ಕಾರಣ ಏನು?
11:23 PM (IST) Sep 30
ಅಮೃತಧಾರೆ ಧಾರಾವಾಹಿಯಲ್ಲಿ ಐದು ವರ್ಷಗಳ ಕಾಲ ಹುಡುಕಾಟದಿಂದ ಕೊನೆಗೂ ಗೌತಮ್ಗೆ ಭೂಮಿ ಕಾಣಿಸಿದ್ದಳು. ಈಗ ಮತ್ತೆ ಭೂಮಿ, ಗೌತಮ್ನಿಂದ ದೂರ ಆಗಿದ್ದಾಳೆ. ಹೀಗಾದರೆ ಭೂಮಿ-ಗೌತಮ್ ಒಂದಾಗೋದು ಕನಸಾಗಿ ಉಳಿಯತ್ತಾ?
11:01 PM (IST) Sep 30
ಬಿಗ್ ಬಾಸ್ ಸೀಸನ್ 12 ಆರಂಭವಾಗುತ್ತಿದ್ದಂತೆ, ಮಾಜಿ ಸ್ಪರ್ಧಿಗಳಾದ ಧನರಾಜ್ ಆಚಾರ್ ಮತ್ತು ಹನುಮಂತ ವಿಡಿಯೋ ಕಾಲ್ನಲ್ಲಿ ಮಾತನಾಡಿದ್ದಾರೆ. ಬಿಗ್ ಬಾಸ್ ಶೋ ನೋಡುವುದರಿಂದ ಏನು ಸಿಗುತ್ತದೆ ಎಂದು ಧನರಾಜ್ ಉಡಾಫೆಯಿಂದ ಕೇಳಿದ್ದಾನೆ. ಇದಕ್ಕೆ ದೋಸ್ತ ಹನುಮಂತ ಸರಿಯಾಗಿ ತಿರುಗೇಟು ಕೊಟ್ಟಿದ್ದಾನೆ.
10:36 PM (IST) Sep 30
ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಅಶ್ವಿನಿ ಗೌಡ ಅವರು ಭಾಗಿಯಾಗಿದ್ದಾರೆ. 25 ಧಾರಾವಾಹಿ, 100 ಸಿನಿಮಾಗಳಲ್ಲಿ ನಟಿಸಿರುವ ಅಶ್ವಿನಿ, ಕನ್ನಡಪರ ಹೋರಾಟಗಳನ್ನು ಮಾಡಿ ಗುರುತಿಸಿಕೊಂಡಿದ್ದಾರೆ. ಇವರ ಮನೆ, ಸೀರೆ ಕಲೆಕ್ಷನ್, ವಾಚ್ ಕಲೆಕ್ಷನ್ ಮುಂತಾದ ವಿಷಯಗಳ ಬಗ್ಗೆ ಕುತೂಹಲಕರ ಮಾಹಿತಿ ಇಲ್ಲಿದೆ.
10:32 PM (IST) Sep 30
Actress Vaishnavi Gowda Watches Huli Dance in Mangaluru ನಟಿ ವೈಷ್ಣವಿ ಗೌಡ ತಮ್ಮ ಪತಿ ಅನುಕೂಲ್ ಮಿಶ್ರಾ ಅವರೊಂದಿಗೆ ಮಂಗಳೂರಿಗೆ ಭೇಟಿ ನೀಡಿ ಸಂತಸದ ಕ್ಷಣಗಳನ್ನು ಕಳೆದಿದ್ದಾರೆ. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
10:25 PM (IST) Sep 30
09:57 PM (IST) Sep 30
09:26 PM (IST) Sep 30
ಬೆಂಗಳೂರು ಮಡಿವಾಳದಲ್ಲಿ ಕಟ್ಟಡ ನಿರ್ಮಾಣದ ವೇಳೆ ಅಡಿಪಾಯಕ್ಕಾಗಿ ತೆಗೆದಿದ್ದ ಗುಂಡಿಯಲ್ಲಿ ಮಣ್ಣು ಕುಸಿದು ಭಾರಿ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಜಾರ್ಖಂಡ್ ಮೂಲದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
09:09 PM (IST) Sep 30
09:05 PM (IST) Sep 30
ಬ್ರಹ್ಮಗಂಟು ಸೀರಿಯಲ್ನಲ್ಲಿ ದೀಪಾ ಈಗ ದಿಶಾ ಆಗಿ ಸಂಪೂರ್ಣ ಬದಲಾಗಿದ್ದು, ಪ್ರೇಕ್ಷಕರು ಖುಷಿಪಟ್ಟಿದ್ದಾರೆ. ಆದರೆ, ಒಂದೇ ವಾರದಲ್ಲಿ ಇಂಗ್ಲಿಷ್ ಕಲಿತಿದ್ದು ಮತ್ತು ಗಂಡನಿಗೇ ಗುರುತು ಸಿಗದಿರುವುದು ಹೇಗೆ ಎಂದು ನೆಟ್ಟಿಗರು ಪ್ರಶ್ನಿಸಿ, ಇದೊಂದು ಜಗತ್ತಿನ 8ನೇ ಅದ್ಭುತ ಎಂದು ಟ್ರೋಲ್ ಮಾಡುತ್ತಿದ್ದಾರೆ.
08:53 PM (IST) Sep 30
ಅಮೆರಿಕದ ಚಿನ್ನದ ಮೀಸಲು ನಿಧಿಯ ಮೌಲ್ಯವು ಇತಿಹಾಸದಲ್ಲೇ ಮೊದಲ ಬಾರಿಗೆ 1 ಟ್ರಿಲಿಯನ್ ಡಾಲರ್ ತಲುಪಿದ್ದು, ಜಾಗತಿಕ ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ. ಈ ಬೆಳವಣಿಗೆಯು ಚಿನ್ನದ ಪ್ರಮುಖ ಆಮದುದಾರ ದೇಶವಾದ ಭಾರತದ ಮೇಲೆ ನೇರ ಪರಿಣಾಮ ಬೀರಲಿದೆ.
08:30 PM (IST) Sep 30
ಅಲ್ಪಸಂಖ್ಯಾತರ ನಿರ್ದೇಶನಾಲಯವು 2025-26ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ನಗರ ಜಿಲ್ಲೆಯ ಮದರಸಾಗಳಲ್ಲಿ ಕನ್ನಡ, ಇಂಗ್ಲಿಷ್, ವಿಜ್ಞಾನ ಮತ್ತು ಗಣಿತ ಬೋಧಿಸಲು ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅ.04, 2025 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
07:54 PM (IST) Sep 30
KMDC Santhwana Scheme ಈ ಯೋಜನೆಯಡಿ, ಕಾನೂನುಬಾಹಿರ ಘಟನೆಗಳು ಅಥವಾ ನೈಸರ್ಗಿಕ ವಿಕೋಪಗಳಿಂದ ಆಸ್ತಿಪಾಸ್ತಿ ಕಳೆದುಕೊಂಡ ಅಲ್ಪಸಂಖ್ಯಾತ ಸಮುದಾಯದವರಿಗೆ ಮನೆ ಅಥವಾ ಅಂಗಡಿ ಪುನರ್ನಿರ್ಮಾಣಕ್ಕಾಗಿ ₹5 ಲಕ್ಷದವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ.
07:42 PM (IST) Sep 30
07:33 PM (IST) Sep 30
Darshan Lawyer Cites Rapist Umesh Reddy Privileges ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೂಕ್ತ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂದು ಆರೋಪಿಸಿ ಅವರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
05:43 PM (IST) Sep 30
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ, ಜಂಟಿಗಳು ನಿಯಮ ಮುರಿದಿದ್ದಕ್ಕೆ ಮೇಲ್ವಿಚಾರಕರಾದ ಒಂಟಿಗಳಿಗೆ ಶಿಕ್ಷೆ ನೀಡಲಾಗಿದೆ. ಒಂಟಿಗಳು ಗೆದ್ದಿದ್ದ ದಿನಸಿ ಸಾಮಾಗ್ರಿ ವಾಪಸ್ ಪಡೆದಿದ್ದು, ಇದು ಅವರನ್ನು ಉಪವಾಸಕ್ಕೆ ತಳ್ಳಿದೆ. ಈ ಶಿಕ್ಷೆಗೆ ಜಂಟಿ ಸದಸ್ಯ ಗಿಲ್ಲಿನಟ ಸಂಭ್ರಮಿಸಿದ್ದು ಚರ್ಚೆಗೆ ಕಾರಣವಾಗಿದೆ.
05:35 PM (IST) Sep 30
Darshan Thoogudeepa jail facilities ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ತಮಗೆ ಸೂಕ್ತ ಸೌಲಭ್ಯ ನೀಡುತ್ತಿಲ್ಲವೆಂದು ಆರೋಪಿಸಿದ್ದಾರೆ. ಈ ಸಂಬಂಧ ನಡೆದ ಕೋರ್ಟ್ ವಿಚಾರಣೆಯಲ್ಲಿ, ಜೈಲು ಅಧಿಕಾರಿಗಳು ನಿಯಮ ಪಾಲಿಸುತ್ತಿರುವುದಾಗಿ ಹೇಳಿದ್ದಾರೆ.
05:06 PM (IST) Sep 30
ನೈಋತ್ಯ ಮಾನ್ಸೂನ್ ವಾಪಸ್ಸಾಗುತ್ತಿದ್ದರೂ, ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಬಂಗಾಳಕೊಲ್ಲಿಯಲ್ಲಿ ಹೊಸ ವಾಯುಭಾರ ಕುಸಿತದ ಸಾಧ್ಯತೆಯಿದ್ದು, ಅಕ್ಟೋಬರ್ 2ರಂದು ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗಲಿದೆ.
04:45 PM (IST) Sep 30
ಬಿಜೆಪಿ ನಾಯಕ ಸುನೀಲ್ ಕುಮಾರ್, ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಯ ಪೂರ್ವ ಸಿದ್ಧತೆ ಇಲ್ಲದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಮೀಕ್ಷೆಯು ಸಿದ್ದರಾಮಯ್ಯನವರ ರಾಜಕೀಯ ಲಾಭಕ್ಕಾಗಿ ಆಗಿದ್ದು, ಸಮಾಜವನ್ನು ವಿಭಜಿಸುವ ಹುನ್ನಾರವಾಗಿದೆ ಎಂದು ಅವರು ಆರೋಪಿಸಿದ್ದಾರೆ.
03:55 PM (IST) Sep 30
ಮಾಜಿ ಡಿಸಿಎಂ ಆರ್. ಅಶೋಕ್ ಅವರು ರಾಜ್ಯ ಸರ್ಕಾರದ ಪ್ರವಾಹ ನಿರ್ವಹಣಾ ವೈಫಲ್ಯವನ್ನು ತೀವ್ರವಾಗಿ ಟೀಕಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ವೈಮಾನಿಕ ಸಮೀಕ್ಷೆಯನ್ನು ವ್ಯಂಗ್ಯವಾಡಿದ ಅವರು, ಅಕ್ಟೋಬರ್ನಲ್ಲೇ ಸರ್ಕಾರದಲ್ಲಿ ಕ್ರಾಂತಿಯಾಗುವ ಮುನ್ಸೂಚನೆ ನೀಡಿದ್ದಾರೆ.
03:44 PM (IST) Sep 30
ಬಿಗ್ ಬಾಸ್ ಕನ್ನಡ ಸೀಸನ್ 12ರ ಮೊದಲ ದಿನವೇ ಸ್ಪರ್ಧಿಗಳಾದ ಅಶ್ವಿನಿ ಗೌಡ ಮತ್ತು ಗಿಲ್ಲಿ ನಟ ನಡುವೆ ಜಗಳ ಶುರುವಾಗಿದೆ. ತಮಾಷೆ ಮಾತಿನಿಂದ ಆರಂಭವಾದ ವಿವಾದ, ಗಿಲ್ಲಿ ನಟ 'ಹೋಗೆ ಬಾರೆ' ಎಂದು ಏಕವಚನದಲ್ಲಿ ಮಾತನಾಡಿದ್ದರಿಂದ ತಾರಕಕ್ಕೇರಿದೆ. ಅಶ್ವಿನಿ, ಗಿಲ್ಲಿಗೆ ಮರ್ಯಾದೆ ಪಾಠ ಮಾಡಿದ್ದಾರೆ.
03:43 PM (IST) Sep 30
ಏಷ್ಯಾಕಪ್ ಗೆದ್ದರೂ, ನಾಯಕ ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್ ಫಾರ್ಮ್ ತಂಡಕ್ಕೆ ಚಿಂತೆಯಾಗಿದೆ. ಏಷ್ಯಾಕಪ್ ಫೈನಲ್ ಸೇರಿದಂತೆ ಪ್ರಮುಖ ಫೈನಲ್ಗಳಲ್ಲಿ ಸತತವಾಗಿ ವಿಫಲರಾಗುತ್ತಿರುವ ಸೂರ್ಯ, ಈ ಟೂರ್ನಿಯಲ್ಲಿ ಕೇವಲ 72 ರನ್ ಗಳಿಸಿದ್ದಾರೆ.
03:08 PM (IST) Sep 30
ಬೆಂಗಳೂರಿನ ವಿಜಯನಗರದಲ್ಲಿ, 12 ವರ್ಷದ ಬಾಲಕಿಯನ್ನು ವಾಟ್ಸಾಪ್ ಗ್ರೂಪ್ ಮೂಲಕ ಮಾರಾಟಕ್ಕಿಟ್ಟಿದ್ದ ಸೆಕ್ಸ್ ಮಾಫಿಯಾ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಮೂಢನಂಬಿಕೆಯನ್ನು ಬಳಸಿ 20 ಲಕ್ಷಕ್ಕೆ ಬಾಲಕಿಯನ್ನು ಮಾರಲು ಯತ್ನಿಸುತ್ತಿದ್ದ ಇಬ್ಬರನ್ನು ಎನ್ಜಿಒ ಸಹಾಯದಿಂದ ಮೈಸೂರಿನಲ್ಲಿ ಬಂಧಿಸಲಾಗಿದೆ.
02:04 PM (IST) Sep 30
ನಗರದ ಜಿಆರ್.ಎಸ್. ಸ್ನೋ ಪಾರ್ಕ್ನಲ್ಲಿರುವ ಸ್ನೋ ಅಂಬಾರಿಯ ಆನೆಗೆ ಐರಾವತ ಎಂದು ನಟಿ ರಂಜನಿ ರಾಘವನ್ ಹೆಸರಿಟ್ಟರು. ಮಾವುತರ ಕುಟುಂಬಗಳಿಂದ ಕಳೆದ ವಾರ ಭವ್ಯವಾಗಿ ಅನಾವರಣಗೊಂಡ ಜನತ್ತಿನ ಮೊದಲ ಸ್ನೋ ಅಂಬಾರಿ ವೀಕ್ಷಿಸಲು ಆಗಮಿಸಿದ್ದರು.
01:44 PM (IST) Sep 30
ಜಾತಿ ಗಣತಿ ಹೆಸರಿನಲ್ಲಿ ಹಿಂದೂ ಸಮಾಜವನ್ನು ಛಿದ್ರ ಮಾಡಲು ಸಿದ್ದರಾಮಯ್ಯ ಸರ್ಕಾರ ಹೊರಟಿದೆ. ಶೇ.99 ರಷ್ಟು ಈ ವರದಿ ಬಿಡುಗಡೆಯಾಗಲ್ಲ. ಒಂದು ವೇಳೆ ವರದಿ ಜಾರಿಗೊಳಿಸಿದರೆ ಸಿದ್ದರಾಮಯ್ಯ ತಮ್ಮ ಸ್ಥಾನ ಕಳೆದುಕೊಳ್ಳುವುದು ನಿಶ್ಚಿತ ಎಂದು ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.
01:21 PM (IST) Sep 30
ರಾಜ್ಯ ಸರ್ಕಾರ ಶೇ.80ರಷ್ಟು ಕಮಿಷನ್ ಪಡೆಯುತ್ತಿರುವುದು ಸಾಬೀತಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
12:49 PM (IST) Sep 30
ಈವರೆಗೆ 8.60 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯ ಅಂದಾಜು ಮಾಡಲಾಗಿದೆ, ಇನ್ನೂ ಮಳೆ ಮುಂದುವರೆದಿರುವುದರಿಂದ ಭೂಮಿ ಒಣಗಿದ ಬಳಿಕ ಜಿಲ್ಲಾಧಿಕಾರಿಗಳು ಜಂಟಿ ಸಮೀಕ್ಷೆ ಮುಂದುವರೆಸಲಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
12:41 PM (IST) Sep 30
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕದ ಪ್ರವಾಹ ಪರಿಸ್ಥಿತಿ ಕುರಿತು ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ತೀವ್ರವಾಗಿ ಟೀಕಿಸಿದ್ದಾರೆ. ಬೆಳೆ ಹಾನಿ, ಜನರ ಸಂಕಷ್ಟದ ಬಗ್ಗೆ ಗಮನಹರಿಸದೆ, ಜಾತಿ ಗಣತಿಯಂತಹ ವಿಷಯಗಳಲ್ಲಿ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿದರು.
12:16 PM (IST) Sep 30
ತಮಿಳುನಾಡಿನ ಕರೂರಿನಲ್ಲಿ ವಿಜಯ್ ರಾಜಕೀಯ ರ್ಯಾಲಿ ವೇಳೆ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಚೆನ್ನೈಯಲ್ಲಿ ನಡೆಯಬೇಕಿದ್ದ ‘ಕಾಂತಾರ ಚಾಪ್ಟರ್ 1’ ಪ್ರೀ ರಿಲೀಸ್ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.
11:58 AM (IST) Sep 30
ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಮಾಡೋದು ಸಿಎಂ ವಿವೇಚನೆಗೆ ಬಿಟ್ಟ ವಿಚಾರ. ಇದೆಲ್ಲ ನಮ್ಮ ವ್ಯಾಪ್ತಿಗೆ ಬರೋದಿಲ್ಲ, ನಮಗೆ ಗೊತ್ತೇ ಆಗೋದಿಲ್ಲ ಎಂದು ಜಮೀರ್ ಅಹಮದ್ ಹೇಳಿಕೆ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು.
11:19 AM (IST) Sep 30
ರಿಷಬ್ ಒಬ್ಬ ಅಪರೂಪದ ನಟ, ನಿರ್ದೇಶಕ. ಅವರು ಈ ಚಿತ್ರಕ್ಕಾಗಿ ಎಷ್ಟು ಕಷ್ಟಪಟ್ಟಿದ್ದಾರೆ ಅಂತ ನನಗೆ ಗೊತ್ತು. ಸಿನಿಮಾದ ಎಲ್ಲಾ ಡಿಪಾರ್ಟ್ಮೆಂಟ್ಗಳೂ ಅವರಿಗೆ ಗೊತ್ತು ಎಂದು ಜೂ.ಎನ್ಟಿಆರ್ ಹೇಳಿದ್ದಾರೆ.
10:24 AM (IST) Sep 30
ಬಡವರು, ಹಿಂದುಳಿದವರ ಸಮೀಕ್ಷೆ ಪ್ರಲ್ಹಾದ್ ಜೋಶಿ ಅವರಿಗೆ ಬೇಕಾಗಿಲ್ಲ. ಈ ಕಾರಣಕ್ಕಾಗಿಯೇ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಸಚಿವ ಶಿವರಾಜ ತಂಗಡಗಿ ಕಿಡಿಕಾರಿದ್ದಾರೆ.
08:44 AM (IST) Sep 30
Bigg Boss Kannada two finales twist: ಈ ಅನಿರೀಕ್ಷಿತ ಟ್ವಿಸ್ಟ್ನಿಂದ ಸ್ಪರ್ಧಿಗಳು ಆಘಾತಕ್ಕೊಳಗಾಗಿದ್ದು, ಯಾವಾಗ ಯಾರು ಎಲಿಮಿನೇಟ್ ಆಗುತ್ತಾರೆಂಬ ಭಯದಲ್ಲಿದ್ದಾರೆ. ಮೊದಲ ದಿನವೇ ಎಲಿಮಿನೇಟ್ ಆದ ರಕ್ಷಿತಾ ಶೆಟ್ಟಿ ಸೀಕ್ರೆಟ್ ರೂಮ್ನಲ್ಲಿರುವ ಸಾಧ್ಯತೆಯೂ ಇದೆ.
08:15 AM (IST) Sep 30
ಏತ ನೀರಾವರಿ ಯೋಜನೆಗಳಿಂದ ಕೊನೆ ಮತ್ತು ಕೆಳ ಭಾಗದ ರೈತರ ಬದುಕು ಹಸನಾಗುತ್ತದೆ ಎಂದು ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
07:56 AM (IST) Sep 30
Bigg Boss Kannada: ಕನ್ನಡ ಬಿಗ್ಬಾಸ್ 'ಒಂಟಿ ವರ್ಸಸ್ ಜಂಟಿ' ಥೀಮ್ನೊಂದಿಗೆ ಆರಂಭವಾಗಿದ್ದು, ಒಂಟಿ ಸ್ಪರ್ಧಿಗಳಿಗೆ ವಿಶೇಷ ಸವಲತ್ತುಗಳನ್ನು ನೀಡಲಾಗಿದೆ. ಮೊದಲ ದಿನವೇ, ಬಿಗ್ಬಾಸ್ ನಿಯಮ ಮುರಿಯಲು ಯತ್ನಿಸಿದ ಗಿಲ್ಲಿ ನಟ, ಮಲ್ಲಮ್ಮನವರ ಜಾಣತನದಿಂದ ಬಕ್ರಾ ಆದರು.
07:31 AM (IST) Sep 30
Today’s top 5 news in kannada: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರೆ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದು, ನವೆಂಬರ್ ನಂತರ ಸಂಪುಟ ವಿಸ್ತರಣೆಯಾಗುವ ಸುಳಿವನ್ನು ಸಚಿವ ಜಮೀರ್ ಅಹ್ಮದ್ ನೀಡಿದ್ದಾರೆ.
07:24 AM (IST) Sep 30
ಬ್ಯಾಕ್ಟೀರಿಯಾದಿಂದಾಗಿ ವಿಶ್ವಾದ್ಯಂತ ಹಲವು ಹೊಸಹೊಸ ರೋಗಗಳು ಉದ್ಭವಿಸುತ್ತಿರುವ ಹೊತ್ತಿನಲ್ಲಿ, ಸ್ಟಾನ್ಫರ್ಡ್ ವಿವಿಯ ವಿಜ್ಞಾನಿಗಳು ಕೃತಕ ಬುದ್ಧಿಮತ್ತೆ (ಎಐ) ಬಳಸಿ ಬ್ಯಾಕ್ಟೀರಿಯಾಗಳನ್ನು ಕೊಲ್ಲಬಲ್ಲ ವೈರಸ್ಗಳನ್ನು ಸೃಷ್ಟಿಸಿದ್ದಾರೆ.
06:55 AM (IST) Sep 30
2008ರ ಮುಂಬೈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲೇಬೇಕು ಎಂದು ನನಗೆ ಬಲವಾಗಿ ಅನ್ನಿಸಿತ್ತು. ಈ ಬಗ್ಗೆ ಪ್ರಧಾನಿ ಹಾಗೂ ಸಂಬಂಧಿಸಿದವರ ಬಳಿ ಚರ್ಚಿಸಿದ್ದೆ. ಆದರೆ ಸರ್ಕಾರದ ಹಿರಿಯರು ಒಪ್ಪಿರಲಿಲ್ಲ’ ಎಂದು ಪಿ.ಚಿದಂಬರಂ ಸ್ಫೋಟಕ ಹೇಳಿಕೆ ನೀಡಿದ್ದಾರೆ.