LIVE NOW
Published : Aug 31, 2026, 05:04 AM ISTUpdated : Aug 31, 2026, 07:03 AM IST

Karnataka News Live 31 August 2026: Bengaluru - 5 ಫ್ಲೈಓವರ್‌ಗಳಿಗೆ ಹೊಸ ನಿಯಮ; ಇನ್ಮುಂದೆ ಈ ವಾಹನಗಳಿಗೆ ಸಂಚಾರ ನಿಷೇಧ!

ಸಾರಾಂಶ

ವಿಜಯಪುರ: ಪಾದಯಾತ್ರೆ ಬಿಜೆಪಿಯ ನಿರ್ಧಾರವಾಗಿದೆ. ನಾಗೇಂದ್ರ ರಾಜೀನಾಮೆಗೆ ಅವರೂ ಕಾರಣವಾಗಿರಬಹುದು, ಜೊತೆಗೆ ರಾಜೀನಾಮೆ ನಮ್ಮ ಪಕ್ಷದ ನಿರ್ಧಾರವೂ ಆಗಿರುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಬಿಜೆಪಿಗೆ ಟಾಂಗ್ ನೀಡಿದರು.

ಸಚಿವ ನಾಗೇಂದ್ರ ರಾಜೀನಾಮೆ ಬಳಿಕವೂ ಬಿಜೆಪಿ ಪಾದಯಾತ್ರೆ ಮಾಡುತ್ತಿರುವ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಅಷ್ಟೇ ಅಲ್ಲ ವಾಲ್ಮೀಕಿ ಹಗರಣದ ಹಣ ಎಲ್ಲಿ ಹೋಯ್ತು ಎಂದು ಬಿಜೆಪಿ ಪ್ರಶ್ನೆ ಮಾಡಿದ್ದು, ಹಣದ ಕುರಿತು ಸದನದಲ್ಲೇ ಮಾಹಿತಿ ನೀಡಲಾಗಿದೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಹಾಗೂ ಈಗ ಸಿಎಂ ಆಗಿರುವ ಡಿ.ಕೆ.ಶಿವಕುಮಾರ್‌ ಅವರು ಸಹ ಹೇಳಿದ್ದಾರೆ ಎಂದರು.

ಎರಡು ಸಚಿವ ಸ್ಥಾನ ಖಾಲಿ ಹಾಗೂ ಮಹಿಳೆಯರಿಗೆ ಅವಕಾಶ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ. ಯಾರಿಗೆ ಏನು ಕೊಡಬೇಕೆಂದು ತೀರ್ಮಾನಿಸಲಾಗುತ್ತದೆ ಎಂದರು. ವಿಜಯಪುರಕ್ಕೆ ಮತ್ತೊಂದು ಸಚಿವ ಸ್ಥಾನ ನೀಡಬೇಕೆಂದು ಒತ್ತಾಯದ ವಿಚಾರವಾಗಿ ಮಾತನಾಡಿ, ಹಿಂದೆ ಎರಡು ಸಚಿವ ಸ್ಥಾನ ನೀಡಲಾಗಿತ್ತು. ಈ ಬಾರಿ ಒಂದು ಸಚಿವ ಸ್ಥಾನ ಮಾತ್ರ‌ ನೀಡಲಾಗಿದೆ. ಇನ್ನೊಂದು ಸಚಿವ ಸ್ಥಾನ ಸಿಗಬೇಕಿತ್ತು, ಕಾರಣಾಂತರಗಳಿಂದ ನೀಡಿಲ್ಲ. ಎಲ್ಲದಕ್ಕೂ ಕಾಯಬೇಕಾಗುತ್ತದೆ, ಸಮಯ ಬಂದಾಗ ಅವಕಾಶ ಸಿಗುತ್ತದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

07:03 AM (IST) Aug 31

Bengaluru - 5 ಫ್ಲೈಓವರ್‌ಗಳಿಗೆ ಹೊಸ ನಿಯಮ; ಇನ್ಮುಂದೆ ಈ ವಾಹನಗಳಿಗೆ ಸಂಚಾರ ನಿಷೇಧ!

ರಸ್ತೆ ಸುರಕ್ಷತೆ ಹೆಚ್ಚಿಸಲು ಮತ್ತು ಟ್ರಾಫಿಕ್ ದಟ್ಟಣೆ ನಿಯಂತ್ರಿಸಲು, ಬೆಂಗಳೂರು ಸಂಚಾರ ಪೊಲೀಸರು ನಗರದ 5 ಪ್ರಮುಖ ಫ್ಲೈಓವರ್‌ಗಳಲ್ಲಿ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಈ ನಿಯಮಗಳ ಅಡಿಯಲ್ಲಿ, ಕೆಲವು ಫ್ಲೈಓವರ್‌ಗಳಲ್ಲಿ ದ್ವಿಚಕ್ರ ವಾಹನಗಳು ಮತ್ತು ಆಟೋ ರಿಕ್ಷಾಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
Read Full Story

06:44 AM (IST) Aug 31

5 ವಿಧಾನ ಪರಿಷತ್‌, 2 ಸಂಪುಟ ಹೆಸರು ಫೈನಲ್‌ಗೆ ಕಸರತ್ತು; ರವಿಚಂದ್ರನ್‌ಗೆ MLC ಸ್ಥಾನ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದು, ವಿಧಾನ ಪರಿಷತ್‌ನ ಐದು ನಾಮನಿರ್ದೇಶನ ಸ್ಥಾನಗಳು ಮತ್ತು ಎರಡು ಸಚಿವ ಸ್ಥಾನಗಳ ಭರ್ತಿ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಎಂಎಲ್ಸಿ ಸ್ಥಾನಕ್ಕೆ ನಟ ರವಿಚಂದ್ರನ್ ಹಾಗೂ ಸಚಿವ ಸ್ಥಾನಕ್ಕೆ ಅನ್ನಪೂರ್ಣ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವರ ಹೆಸರುಗಳು ಚರ್ಚೆಯಲ್ಲಿವೆ.
Read Full Story

06:17 AM (IST) Aug 31

ಕಾರಂತ ಬಡಾವಣೆ - 17 ಹಳ್ಳಿ, 3069 ಎಕರೆ ಪ್ರದೇಶ; 600 ಮಾಲೀಕರಿಗೆ ಇಂದು ನಿವೇಶನ ಹಂಚಿಕೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಡಾ.ಕೆ.ಶಿವರಾಮ ಕಾರಂತ ಬಡಾವಣೆಯ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು ಆರಂಭಿಸಿದೆ. ಮೊದಲಿಗೆ, ಜಮೀನು ನೀಡಿದ ಭೂಮಾಲೀಕರಿಗೆ ನಿವೇಶನಗಳನ್ನು ವಿತರಿಸಲಾಗುತ್ತಿದ್ದು, ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಗೂ ಚಾಲನೆ ನೀಡಲಾಗುತ್ತಿದೆ.
Read Full Story

06:07 AM (IST) Aug 31

Bengaluru - ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಯುವಕನಿಂದ 3.75 ಲಕ್ಷ ದೋಚಿದ ಯುವತಿ

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಪೂನಂ ಎಂಬ ಯುವತಿಯು, ಶೇಬಿನ್ ಬೇಬಿ ಎಂಬ ಯುವಕನನ್ನು ಪಬ್‌ಗೆ ಆಹ್ವಾನಿಸಿ ಅಪಹರಿಸಿದ್ದಾಳೆ. ನಂತರ ತನ್ನ ಸಹಚರರೊಂದಿಗೆ ಸೇರಿ ಯುವಕನಿಂದ ಸುಮಾರು ₹3.75 ಲಕ್ಷ ದೋಚಿ ಪರಾರಿಯಾಗಿದ್ದು, ಈ ಸಂಬಂಧ ಹೆಬ್ಬಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Full Story

05:59 AM (IST) Aug 31

ನಾಳೆಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ 10 ದಿನ, 175 ಕಿ.ಮೀ. ದೂರ ಕಾಲ್ನಡಿಗೆ

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ದುರ್ಬಳಕೆಯಾದ ₹187 ಕೋಟಿ ಹಣವನ್ನು ಮರಳಿ ಜಮೆ ಮಾಡುವಂತೆ ಆಗ್ರಹಿಸಿ ರಾಜ್ಯ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿದೆ. ಲಿಂಗಸುಗೂರಿನಿಂದ ಬಳ್ಳಾರಿವರೆಗೆ 10 ದಿನಗಳ ಕಾಲ ನಡೆಯಲಿರುವ ಈ ಪಾದಯಾತ್ರೆಯು, ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳನ್ನು ವಿರೋಧಿಸುವ ಗುರಿಯನ್ನೂ ಹೊಂದಿದೆ.
Read Full Story

05:49 AM (IST) Aug 31

ಹನೂರು ಹಿಂಸಾಚಾರ ಬಗ್ಗೆ ನಕ್ಸಲ್‌ ನಿಗ್ರಹ ದಳ ತನಿಖೆ?ತನಿಖಾ ಅಖಾಡಕ್ಕೆ NIA ಪ್ರವೇಶ?

ಹನೂರಿನ ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಶೂಟೌಟ್‌ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಗುಂಡಿನ ದಾಳಿಯ ನಂತರ ಜಿಲೆಟಿನ್‌ ಬಳಸಿ ಅರಣ್ಯ ಇಲಾಖೆ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ಕೃತ್ಯದ ಹಿಂದೆ ನಕ್ಸಲ್ ಕೈವಾಡದ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ, ಸಿಐಡಿ ತನಿಖೆಯ ಬಳಿಕ ಪ್ರಕರಣವನ್ನು ನಕ್ಸಲ್‌ ನಿಗ್ರಹ ಪಡೆ (ಎಎನ್‌ಎಫ್‌) ಮತ್ತು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನಿಖೆ ನಡೆಸುವ ಸಾಧ್ಯತೆ ದಟ್ಟವಾಗಿದೆ.
Read Full Story

05:42 AM (IST) Aug 31

ನನಗೀಗ 80, ಎಷ್ಟು ವರ್ಷ ಬದುಕಿರ್‍ತೀನೋ? ಚುನಾವಣೆಗಳು ಈಗ ತುಂಬಾ ದುಬಾರಿ - ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಹದಗೆಟ್ಟಿರುವ ಮತ್ತು ದುಬಾರಿಯಾಗಿರುವ ಚುನಾವಣಾ ವ್ಯವಸ್ಥೆಯಿಂದಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿರುವುದಾಗಿ ತುಮಕೂರಿನಲ್ಲಿ ಹೇಳಿದ್ದಾರೆ. ಆದರೆ, ತಾವು ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುವುದಾಗಿಯೂ, ವ್ಯವಸ್ಥೆಯ ಸುಧಾರಣೆಗಾಗಿ ಹೋರಾಡುವುದಾಗಿಯೂ ಸ್ಪಷ್ಟಪಡಿಸಿದ್ದಾರೆ.
Read Full Story

05:33 AM (IST) Aug 31

ನೀಟ್ ರೋಷ - ಬಿಜೆಪಿ ಕಚೇರಿ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ಪ್ರತಿಭಟನೆ

ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಆತ್ಮ*ಹತ್ಯೆ ಖಂಡಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು, ನೂರಾರು ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

Read Full Story

More Trending News