LIVE NOW
Published : Dec 31, 2025, 07:02 AM ISTUpdated : Jan 01, 2026, 12:02 AM IST

Karnataka News Live: ಬೆಂಗಳೂರು - ಎಂಜಿ ರೋಡ್ ರಷ್‌ನಲ್ಲಿ ಪತ್ನಿ ನಾಪತ್ತೆ; ಆಘಾತ ತಾಳಲಾರದೆ ಪತಿಗೆ ಪಿಟ್ಸ್!

ಸಾರಾಂಶ

ಕೊಪ್ಪಳ: ಮದುವೆಗೂ ಮುನ್ನವೇ ಜನಿಸಿದ ನವಜಾತ ಹೆಣ್ಣು ಶಿಶುವನ್ನು ಮಧ್ಯರಾತ್ರಿ ಕೊರೆಯುವ ಚಳಿಯಲ್ಲಿ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನದ ಬಳಿ ಮುಳ್ಳು ಬೇಲಿಯಲ್ಲಿ ಬಿಸಾಡಲಾಗಿದ್ದು, ಭದ್ರತಾ ಸಿಬ್ಬಂದಿ ಆ ಮಗುವನ್ನು ರಕ್ಷಿಸಿದ್ದಾರೆ. ಮಗುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಮಗು ಆರೋಗ್ಯವಾಗಿದೆ.

ಸೋಮವಾರ ಮಧ್ಯರಾತ್ರಿ 1.10ರ ಸಮಯದಲ್ಲಿ ಹುಲಿಗೆಮ್ಮ ದೇವಸ್ಥಾನದ ಹಿಂಭಾಗದಲ್ಲಿ ಭದ್ರತಾ ಸಿಬ್ಬಂದಿ ಶಿವರಾಜ ಹಿಟ್ನಾಳ ಹಾಗೂ ಮಂಜುನಾಥ ಅಗಳಿಕೇರಿ ಅವರಿಗೆ ಮಗು ಅಳುತ್ತಿರುವ ಧ್ವನಿ ಕೇಳಿಸಿತು. ತಕ್ಷಣ ಮಕ್ಕಳ ಸಹಾಯವಾಣಿ ಮತ್ತು ವೈದ್ಯರು ಹಾಗೂ ದೇವಸ್ಥಾನ ಆಡಳಿತ ಮಂಡಳಿಯನ್ನು ಸಂಪರ್ಕಿಸಿ, ಮಾಹಿತಿ ನೀಡಿದರು. ತಕ್ಷಣ ಮಗುವಿಗೆ ಪಕ್ಕದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆಗ ತಾನೆ ಜನಿಸಿದ್ದ ಮಗುವನ್ನು ಬೇಲಿಯಲ್ಲಿ ಎಸೆದಿದ್ದರಿಂದ ತರಚಿದ ಗಾಯಗಳಾಗಿವೆ. ಅಲ್ಲದೆ ಮಗುವಿನ ಮೈಗೆ ಮಣ್ಣು, ಹುಲ್ಲು, ಕಡ್ಡಿ ಮೆತ್ತಿಕೊಂಡಿದೆ. ಅದೆಲ್ಲವನ್ನು ಸ್ವಚ್ಛಗೊಳಿಸಲಾಗಿದೆ. ಮಗುವಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದ್ದು, ಜಿಲ್ಲಾಸ್ಪತ್ರೆಯ ಸಿಬ್ಬಂದಿಯ ಆರೈಕೆಯಲ್ಲಿ ಮಗು ಆರೋಗ್ಯವಾಗಿದೆ.

12:02 AM (IST) Jan 01

ಬೆಂಗಳೂರು - ಎಂಜಿ ರೋಡ್ ರಷ್‌ನಲ್ಲಿ ಪತ್ನಿ ನಾಪತ್ತೆ; ಆಘಾತ ತಾಳಲಾರದೆ ಪತಿಗೆ ಪಿಟ್ಸ್!

ಹೊಸ ವರ್ಷದ ಸಂಭ್ರಮಕ್ಕಾಗಿ ಬೆಂಗಳೂರಿನ ಎಂ.ಜಿ. ರಸ್ತೆಗೆ ಬಂದಿದ್ದ ದಂಪತಿಗಳಲ್ಲಿ, ಪತ್ನಿ ಜನದಟ್ಟಣೆಯಲ್ಲಿ ಕಳೆದುಹೋಗಿದ್ದಾರೆ. ಈ ಆಘಾತದಿಂದ ಪತಿಗೆ ಫಿಟ್ಸ್ ಬಂದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ನಾಪತ್ತೆಯಾದ ಪತ್ನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Read Full Story

11:36 PM (IST) Dec 31

ಹೊಸವರ್ಷ ಅಮಲಿನಲ್ಲಿ ಮಹಿಳಾ ಪೊಲೀಸ್, ಯುವತಿಯರ ಜೊತೆ ಅನುಚಿತ ವರ್ತನೆ, ನಾಲ್ವರು ವಶಕ್ಕೆ

ಹೊಸವರ್ಷ ಅಮಲಿನಲ್ಲಿ ಮಹಿಳಾ ಪೊಲೀಸ್, ಯುವತಿಯರ ಜೊತೆ ಅನುಚಿತ ವರ್ತನೆ, ನಾಲ್ವರು ವಶಕ್ಕೆ, ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಈ ಘಟನೆ ನಡೆದಿದೆ. ಸಿಸಿಬಿ ಪೊಲೀಸರುು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

 

Read Full Story

11:07 PM (IST) Dec 31

Bengaluru New Year 2026 - ಎಂಜಿ ರೋಡ್ ಬಿಟ್ಟು ಕೋರಮಂಗಲಕ್ಕೆ ಜನಸಾಗರ; ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಹಿಳೆ ಜೊತೆ ಟೋಯಿಂಗ್ ಚಾಲಕನ ಕಿರಿಕ್!

ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಕೇಂದ್ರ ಈ ಬಾರಿ ಬದಲಾಗಿದೆ. ಸಾಂಪ್ರದಾಯಿಕ ತಾಣವಾದ ಬ್ರಿಗೇಡ್ ರಸ್ತೆ ಕಳೆಗುಂದಿದ್ದು, ಯುವ ಸಮೂಹ ಕೋರಮಂಗಲದತ್ತ ಮುಖ ಮಾಡಿದೆ. ಜನಸಂದಣಿಯನ್ನು ನಿಯಂತ್ರಿಸಲು ಮತ್ತು ಸುರಕ್ಷತೆ ಖಚಿತಪಡಿಸಲು ಪೊಲೀಸರು ಕೋರಮಂಗಲದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
Read Full Story

10:40 PM (IST) Dec 31

ಹೊಸ ವರ್ಷಕ್ಕೆ ಕೆಲವೇ ಹೊತ್ತಲ್ಲಿ ಶಾಕ್! ಕೊಳ್ಳೇಗಾಲದಲ್ಲಿ ಭೀಕರ ಅಗ್ನಿ ಅವಘಡ; ಬೇಕರಿ ಸೇರಿದಂತೆ ಮೂರು ಅಂಗಡಿಗಳು ಭಸ್ಮ!

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಹೊಸ ವರ್ಷದ ಮುನ್ನಾದಿನದಂದು ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮಯೂರ ಬೇಕರಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯು ಪಕ್ಕದ ಅಂಗಡಿಗಳಿಗೂ ವ್ಯಾಪಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಾಶವಾಗಿದೆ. 

Read Full Story

10:25 PM (IST) Dec 31

ಬೆಂಗಳೂರು ಹೊಸವರ್ಷ ಸಂಭ್ರಮದಲ್ಲಿ ನಶೆ ಏರಿದ ಮಹಿಳೆಯರಿಗೆ ರಾತ್ರಿ ಇಡಿ ಉಚಿತ ಡ್ರಾಪ್

ಬೆಂಗಳೂರು ಹೊಸವರ್ಷ ಸಂಭ್ರಮದಲ್ಲಿ ನಶೆ ಏರಿದ ಮಹಿಳೆಯರಿಗೆ ರಾತ್ರಿ ಇಡಿ ಉಚಿತ ಡ್ರಾಪ್, ಬೆಂಗಳೂರು ಪೊಲೀಸರು ಜೊತೆ ಆಟೋ ಚಾಲಕರು ಕೈಜೋಡಿಸಿದ್ದಾರೆ. ಈ ಮೂಲಕ ಮಹಿಳೆಯರಿಗೆ ಆಟೋ ಸೇವೆ ನೀಡಲಿದ್ದಾರೆ.

 

Read Full Story

10:00 PM (IST) Dec 31

ಮಂಗಳೂರು ಕಂಬಳದಲ್ಲಿ ಹಿರಿಯ ತೀರ್ಪುಗಾರಗೆ ಅವಮಾನ, ಜಾಲತಾಣದಲ್ಲಿ ವ್ಯಾಪಕ ಅಕ್ರೋಶ

ಮಂಗಳೂರಿನಲ್ಲಿ ನಡೆದ ಕಂಬಳದಲ್ಲಿ ಹಿರಿಯ ತೀರ್ಪುಗಾರ ಗುಣಪಾಲ ಕಡಂಬ ಅವರಿಗೆ ಅವಮಾನವಾಗಿದೆ ಎಂಬ ವಿವಾದ ಭುಗಿಲೆದ್ದಿದೆ. ಇದೇ ವೇಳೆ, ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ‘ಬ್ಯಾಕ್ ಟು ಊರು’ ಪರಿಕಲ್ಪನೆಗೆ ಮೆಚ್ಚುಗೆ ವ್ಯಕ್ತವಾಗಿದ್ದು, ವಿವಿಧ ವಿಭಾಗಗಳ ಕಂಬಳದ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗಿದೆ.
Read Full Story

09:23 PM (IST) Dec 31

ಚಿಕ್ಕಮಗಳೂರು ನೂತನ ಎಸ್‌ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ

ಚಿಕ್ಕಮಗಳೂರು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಧರ್ಮಸ್ಥಳದ ಬುರುಡೆ ಪ್ರಕರಣವನ್ನು ಭೇದಿಸಿದ್ದ ಮತ್ತು ನಕ್ಸಲ್ ನಿಗ್ರಹ ಪಡೆಯಲ್ಲಿ ಸೇವೆ ಸಲ್ಲಿಸಿದ್ದ ಇವರು, ವಿಕ್ರಮ್ ಅಮಟೆ ಅವರ ಸ್ಥಾನವನ್ನು ತುಂಬಲಿದ್ದಾರೆ.
Read Full Story

09:21 PM (IST) Dec 31

2025 ಹಲವು ಘಟನೆಗಳಿಗೆ ಸಾಕ್ಷಿ, ಮದ್ದೂರು ಕೋಮುಗಲಭೆ ಮಂಡ್ಯದ ಪಾಲಿಗೆ ಕರಾಳ, ಸಕ್ಕರೆ ನಾಡಿಗೆ ಸಿಹಿಗಿಂತ ಕಹಿಯೇ ಹೆಚ್ಚು!

2025ನೇ ವರ್ಷವು ಮಂಡ್ಯ ಜಿಲ್ಲೆಯ ಪಾಲಿಗೆ ಹಲವು ಏರಿಳಿತಗಳಿಗೆ ಸಾಕ್ಷಿಯಾಯಿತು. ಮದ್ದೂರಿನಲ್ಲಿ ನಡೆದ ಕೋಮುಗಲಭೆ, ರೈತರ ಆತ್ಮಹತ್ಯೆ, ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ, ಮತ್ತು 'ತಿಥಿ' ಖ್ಯಾತಿಯ ಗಡ್ಡಪ್ಪನವರ ನಿಧನದಂತಹ ಪ್ರಮುಖ ಘಟನೆಗಳು ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದವು.  

Read Full Story

09:18 PM (IST) Dec 31

ಹೊಸ ವರ್ಷ ಪಾರ್ಟಿ ಮೂಡ್‌ನಲ್ಲಿದ್ದವರಿಗೆ ಶಾಕ್, ಬೆಂಗಳೂರಿನ ಕೆಲವೆಡೆ ಭಾರಿ ಮಳೆ

ಹೊಸ ವರ್ಷ ಪಾರ್ಟಿ ಮೂಡ್‌ನಲ್ಲಿದ್ದವರಿಗೆ ಶಾಕ್, ಬೆಂಗಳೂರಿನ ಕೆಲವೆಡೆ ಭಾರಿ ಮಳೆ, ಸಂಭ್ರಮಾಚರಣೆ ಮಾಡುತ್ತಿದ್ದವರು ಕಾರ್ಯಕ್ರಮ ಸ್ಥಗಿತಗೊಳಿಸಿದ್ದಾರೆ. ಕೆಲ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವರು ನಿರಾಸೆಗೊಂಡಿದ್ದಾರೆ.

 

Read Full Story

08:30 PM (IST) Dec 31

ಹೊಸ ವರ್ಷ 2026 - ಕರ್ನಾಟಕ ರಾಜ್ಯದ ಸಾರ್ವತ್ರಿಕ ರಜೆಗಳ ಪಟ್ಟಿ, ಕೊಡಗು ಜಿಲ್ಲೆಗೆ ಮಾತ್ರ ಸ್ಪೆಷಲ್ ರಜೆ

ಕರ್ನಾಟಕ ಸರ್ಕಾರವು 2026ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜೆಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ವರ್ಷ ಒಟ್ಟು 20 ಸಾರ್ವತ್ರಿಕ ರಜೆಗಳು ಮತ್ತು 21 ಪರಿಮಿತ ರಜೆಗಳಿದ್ದು, ಕೊಡಗು ಜಿಲ್ಲೆಗೆ ವಿಶೇಷ ಸ್ಥಳೀಯ ರಜೆಗಳನ್ನು ಘೋಷಿಸಲಾಗಿದೆ.  

Read Full Story

07:40 PM (IST) Dec 31

ಹೋರಾಟದಲ್ಲೇ ಉರುಳಿದ 2025ರ ವರ್ಷ, ಬಿಡದಿ ಟೌನ್ ಶಿಪ್ ಯೋಜನೆ ರಾಮನಗರ ಬೆಂಗಳೂರು ದಕ್ಷಿಣವಾಗಿ ಬದಲಾಗಿದ್ದೆ ಸಾಧನೆ!

2025ರಲ್ಲಿ ರಾಮನಗರ ಜಿಲ್ಲೆಯು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಬದಲಾಯಿತು. ಬಿಡದಿ ಟೌನ್ ಶಿಪ್ ಯೋಜನೆ, ರಾಜಕೀಯ ಮೇಲಾಟ, ಮಾನವ-ವನ್ಯಜೀವಿ ಸಂಘರ್ಷ, ಅಪಘಾತಗಳು ಮತ್ತು ಸಾವು-ನೋವುಗಳು ವರ್ಷವಿಡೀ ಸುದ್ದಿಯಲ್ಲಿದ್ದವು. ಇದೇ ವರ್ಷ  ನಟಿ ಬಿ. ಸರೋಜಾದೇವಿ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಮ್ಮನ್ನಗಲಿದರು.

Read Full Story

07:23 PM (IST) Dec 31

ಹೊಸ ವರ್ಷದ ಕಿಕ್‌ನಲ್ಲಿ ಡ್ರಿಂಕ್ ಆಂಡ್ ಡ್ರೈವ್ ಮಾಡಿದ್ರೆ ಅಷ್ಟೇ.. ಬೆಂಗಳೂರಿನ 50 ಫ್ಲೈ ಓವರ್‌ಗಳು ಬಂದ್; ರಸ್ತೆಗಿಳಿಯುವ ಮುನ್ನ ತಿಳಿಯಿರಿ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಂತಹ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸಂಚಾರ ದಟ್ಟಣೆ ನಿಯಂತ್ರಿಸಲು ನಗರದ ಫ್ಲೈ ಓವರ್‌ಗಳನ್ನು ಮುಚ್ಚಲಾಗಿದ್ದು, ಡ್ರಿಂಕ್ ಆಂಡ್ ಡ್ರೈವ್ ವಿರುದ್ಧ ಕಠಿಣ ತಪಾಸಣೆ ನಡೆಸಲಾಗುತ್ತಿದೆ.

Read Full Story

06:50 PM (IST) Dec 31

ಸರ್ಕಾರಕ್ಕೆ 'ಮನೆಗೆದ್ದು ಮಾರು ಗೆಲ್ಲು' ಎಂದ ಶ್ರೀಶೈಲ ಶ್ರೀಗಳು; ಹೊಸ ವರ್ಷದ ಅಬ್ಬರಕ್ಕೆ ಶ್ರೀಗಳ ಸಂದೇಶವೇನು?

ಶ್ರೀಶೈಲ ಪೀಠದ ಶ್ರೀಗಳು, ರಾಜ್ಯದ ಸಂತ್ರಸ್ತರನ್ನು ಕಡೆಗಣಿಸಿ ಬೇರೆ ರಾಜ್ಯಗಳಿಗೆ ಸಹಾಯ ಮಾಡುವ ಸರ್ಕಾರದ ನೀತಿಯನ್ನು ಟೀಕಿಸಿದ್ದಾರೆ. ಹೊಸ ವರ್ಷಾಚರಣೆಯ ದುರಾಚರಣೆಗಳ ಬದಲು ಸದಾಚರಣೆಗೆ ಕರೆ ನೀಡಿದ್ದು, ಲಿಂಗಾಯತ ಮಠಾಧೀಶರು ಬೀದಿ ರಂಪಾಟ ನಿಲ್ಲಿಸಿ ಒಗ್ಗಟ್ಟಿನಿಂದ ಇರಬೇಕೆಂದು ಮನವಿ ಮಾಡಿದ್ದಾರೆ.
Read Full Story

06:46 PM (IST) Dec 31

ಮಗನ ಅಂತರ್ಜಾತಿ ವಿವಾಹವೇ ಪ್ರಾಣಕ್ಕೆ ಮುಳುವಾಯ್ತು - ಉಮೇಶನ ಕೊಲೆಗೈದ ದಂಪತಿ ಪೊಲೀಸರಿಗೆ ಶರಣು!

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಹಳೇ ವೈಷಮ್ಯ ಹಾಗೂ ಅಂತರ್ಜಾತಿ ವಿವಾಹದ ವಿಚಾರವಾಗಿ ಉಮೇಶ್ ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ದಂಪತಿಗಳು ಇದೀಗ ಪೊಲೀಸರಿಗೆ ಶರಣಾಗಿದ್ದಾರೆ.
Read Full Story

06:18 PM (IST) Dec 31

ಕೋಲಾರದಲ್ಲಿ ಒಂದೇ ದಿನ ಬರೋಬ್ಬರಿ 21 ಮಂದಿಗೆ ಕಚ್ಚಿದ ಬೀದಿನಾಯಿ, ನಾಯಿಯನ್ನು ಹೊಡೆದು ಕೊಂದ ಗ್ರಾಮಸ್ಥರು!

ಕೋಲಾರ ನಗರದ ಆರ್‌ಟಿಒ ಕಚೇರಿ ಬಳಿ ಬೀದಿನಾಯಿಯೊಂದು ಏಕಾಏಕಿ ದಾಳಿ ನಡೆಸಿ, ಒಂದೇ ದಿನದಲ್ಲಿ 21 ಜನರನ್ನು ಕಚ್ಚಿ ಗಾಯಗೊಳಿಸಿದೆ. ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೊನೆಗೆ ಸ್ಥಳೀಯರೇ ನಾಯಿಯನ್ನು ಹೊಡೆದು ಸಾಯಿಸಿದ್ದಾರೆ.

Read Full Story

05:59 PM (IST) Dec 31

ದರ್ಶನ್ ಹೇಗಿದ್ದಾರೆ? ಜೈಲಿಂದ ಹೊರಬಂದು ಅಭಿಮಾನಿಗಳ ಆತಂಕ ದೂರಮಾಡಿದ ಶಾಸಕ ವೀರೇಂದ್ರ ಪಪ್ಪಿ!

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 4 ತಿಂಗಳ ಜೈಲುವಾಸದ ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ಜೈಲಿನಲ್ಲಿದ್ದಾಗ ನಟ ದರ್ಶನ್ ಅವರನ್ನು ಭೇಟಿಯಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಡಿಸಿಎಂ ಡಿ.ಕೆ. ಶಿವಕುಮಾರ್ ಆತ್ಮಸ್ಥೈರ್ಯ ತುಂಬಿದ್ದ ಬಗ್ಗೆ ತಿಳಿಸಿದರು.

Read Full Story

05:33 PM (IST) Dec 31

ಹೊಸ ವರ್ಷ ಗಲಾಟೆ, ಗದ್ದಲ ಇಲ್ಲದೆ ಶಾಂತಿಯಿಂದ ಆಚರಿಸಿ - ಗೃಹ ಸಚಿವ ಜಿ. ಪರಮೇಶ್ವರ್

ಹುಬ್ಬಳ್ಳಿಗೆ ಭೇಟಿ ನೀಡಿದ ಗೃಹ ಸಚಿವ ಜಿ. ಪರಮೇಶ್ವರ್, ಹೊಸ ವರ್ಷಾಚರಣೆಗೆ ಬಿಗಿ ಭದ್ರತೆ, ಮರ್ಯಾದೆ ಹತ್ಯೆ ಖಂಡನೆ ಹಾಗೂ ನೊಂದ ಕುಟುಂಬಕ್ಕೆ ಸಹಾಯದ ಭರವಸೆ ನೀಡಿದರು. 'ಸಂಕ್ರಾಂತಿ ಕ್ರಾಂತಿ' ಬಗ್ಗೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಅವರು, ದಲಿತ ಸಿಎಂ ವಿಚಾರದಲ್ಲಿ ಮೌನ ವಹಿಸಿದರು.
Read Full Story

05:29 PM (IST) Dec 31

ಬನ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನ್ಯೂಸ್‌ ಆಂಕರ್‌ ಜಯಪ್ರಕಾಶ್‌ ಶೆಟ್ಟಿ!

ಪ್ರಖ್ಯಾತ ಕನ್ನಡ ಸುದ್ದಿ ನಿರೂಪಕ ಜಯಪ್ರಕಾಶ್ ಶೆಟ್ಟಿ ಅವರು ತುಳು ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾರೆ. ನಿತಿನ್‌ ರೈ ಕುಕ್ಕುವಳ್ಳಿ ನಿರ್ದೇಶನದ 'ಬನ' ಎಂಬ ಚಿತ್ರದಲ್ಲಿ ಅವರು ವಿಶೇಷ ಪಾತ್ರವೊಂದರಲ್ಲಿ ನಟಿಸಿದ್ದು, ನಾಗಬನದ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ. 

Read Full Story

05:05 PM (IST) Dec 31

Hungund voter list scam - 'ಕೋತಿಗೆ ಹೆಂಡ ಕುಡಿಸಿದಂತಾಗಿದೆ..' ಕಾಶಪ್ಪನವರ್ ವಿರುದ್ಧ ಮಾಜಿ ಶಾಸಕ ವಾಗ್ದಾಳಿ!

ಬಾಗಲಕೋಟೆಯ ಹುನಗುಂದ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ. ಶಾಸಕ ವಿಜಯಾನಂದ ಕಾಶಪ್ಪನವರ್ ಕುಮ್ಮಕ್ಕಿನಿಂದ ಅಪ್ರಾಪ್ತರ ಹೆಸರನ್ನೂ ಸೇರಿಸಲಾಗಿದೆ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.
Read Full Story

04:54 PM (IST) Dec 31

'45' ಚಿತ್ರದಲ್ಲಿ ಶಿವರಾಜ್​ ಕುಮಾರ್​ ಮನಸೆಳೆಯುವ ಹೆಣ್ಣಿನ ವೇಷಕ್ಕೆ ಡ್ಯೂಪ್​ ಮಾಡಿದವರು ಇವರೇ ನೋಡಿ!

ಅರ್ಜುನ್ ಜನ್ಯ ನಿರ್ದೇಶನದ, ಬಹುತಾರಾಗಣದ '45' ಚಿತ್ರವು ಉತ್ತಮ ಗಳಿಕೆ ಕಾಣುತ್ತಿದೆ. ಈ ಚಿತ್ರದಲ್ಲಿನ ಶಿವರಾಜ್‌ಕುಮಾರ್ ಅವರ ಸ್ತ್ರೀ ಪಾತ್ರದ ಸಾಹಸ ದೃಶ್ಯಗಳನ್ನು ಅವರು ಮಾಡಿಲ್ಲ, ಬದಲಿಗೆ ಇಬ್ರಾಹಿಂ ಎಂಬ ಡ್ಯೂಪ್ ಮಾಡಿದ್ದಾರೆ ಎಂಬ ವಿಷಯ ಇದೀಗ ಬಹಿರಂಗವಾಗಿದೆ.
Read Full Story

04:32 PM (IST) Dec 31

ಕಾಫಿನಾಡಲ್ಲಿ ಹೊಸ ವರ್ಷದ ಸಂಭ್ರಮಕ್ಕೆ 'ಬ್ರೇಕ್' ಹಾಕುತ್ತಾ ಕಟ್ಟುನಿಟ್ಟಿನ ರೂಲ್ಸ್? ಪ್ರವಾಸಿಗರ ಹರಿವು ಇಳಿಮುಖ!

ಹೊಸ ವರ್ಷಾಚರಣೆಗಾಗಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತವು ರೇವ್ ಪಾರ್ಟಿ ನಿಷೇಧದಂತಹ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ, ಈ ಬಾರಿ ವಾರದ ಮಧ್ಯದಲ್ಲಿ ಹೊಸ ವರ್ಷ ಬಂದಿರುವುದರಿಂದ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ.

Read Full Story

04:14 PM (IST) Dec 31

ಹೊಸ ವರ್ಷಕ್ಕೆ ಮತ್ತೆ ಜೊತೆಯಾದ Shreerastu Shubhamastu ತಂಡ - ವೈಬ್ಸ್​ ಹೇಗಿದೆ ನೋಡಿ

ವೀಕ್ಷಕರ ಮನಗೆದ್ದಿದ್ದ 'ಶ್ರೀರಸ್ತು ಶುಭಮಸ್ತು' ಧಾರಾವಾಹಿ ತಂಡವು ಮತ್ತೆ ಒಂದಾಗಿದೆ. ಸೀರಿಯಲ್ ಮುಕ್ತಾಯಗೊಂಡು ನಾಲ್ಕು ತಿಂಗಳ ನಂತರ, ನಟಿ ಸುಧಾರಾಣಿ ಸೇರಿದಂತೆ ಇಡೀ ತಂಡ ಹೊಸ ವರ್ಷದ ಸಂಭ್ರಮದಲ್ಲಿ ಪಾಲ್ಗೊಂಡಿದ್ದು, ಇದರ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
Read Full Story

04:02 PM (IST) Dec 31

New Year 2026 - ಕಾಫಿನಾಡಿಗರಿಗೆ ನಿರಾಸೆ ಮೂಡಿಸಿದ ಹೊಸ ವರ್ಷ, ಉದ್ಯಮಿಗಳಿಗೆ ಆತಂಕ!

ಈ ಬಾರಿ ಹೊಸ ವರ್ಷದ ಸಂಭ್ರಮಕ್ಕೆ ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಜಿಲ್ಲಾಡಳಿತದ ನಿರ್ಬಂಧಗಳು ಮತ್ತು ವಾರದ ಮಧ್ಯದಲ್ಲಿ ಹೊಸ ವರ್ಷ ಬಂದಿರುವುದರಿಂದ, ಹೋಂ ಸ್ಟೇಗಳು ಹಾಗೂ ರೆಸಾರ್ಟ್‌ಗಳು ಖಾಲಿಯಾಗಿದ್ದು, ಪ್ರಮುಖ ಪ್ರವಾಸಿ ತಾಣಗಳು ನಿಶ್ಶಬ್ದವಾಗಿವೆ. 

Read Full Story

03:59 PM (IST) Dec 31

ಬಿಗ್‌ಬಾಸ್‌ ಮನೆಯಲ್ಲಿ ಕಾವ್ಯ-ಗಿಲ್ಲಿ ನಟ ಎಂಗೇಜ್‌ಮೆಂಟ್‌ ಮಾತು, ವೈರಲ್‌ ಆದ ವಿಡಿಯೋ!

ಬಿಗ್‌ಬಾಸ್‌ ಸೀಸನ್‌ 12 ಅಂತಿಮ ಹಂತ ತಲುಪಿದ್ದು, ಸ್ಪರ್ಧಿಗಳಾದ ಕಾವ್ಯಾ ಮತ್ತು ಗಿಲ್ಲಿ ನಡುವಿನ ನಿಶ್ಚಿತಾರ್ಥದ ಮಾತುಕತೆ ಮನೆಯಲ್ಲಿ ನಡೆದಿದೆ. ಕಾವ್ಯಾಳ ಉಂಗುರವನ್ನು ಗಿಲ್ಲಿ ತೆಗೆದು ಹಾಕುವಾಗ ನಡೆದ ಈ ತಮಾಷೆಯ ಸಂಭಾಷಣೆ, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
Read Full Story

03:25 PM (IST) Dec 31

ಪೈರಸಿ ಯುದ್ಧ, ಮಗಳಿಗೆ ಕೆಟ್ಟ ಕಾಮೆಂಟ್, ವಿಜಯಲಕ್ಷ್ಮಿ ದರ್ಶನ್ ದೂರು - ಕಿಚ್ಚ ಸುದೀಪ್ ಖಡಕ್ ಉತ್ತರ!

ನನ್ನ ಜೀವನದಲ್ಲಿ ನಾನು ಯಾವತ್ತೂ ಬೇರೆಯವರ ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡುವುದಿಲ್ಲ. ಏನಿದ್ದರೂ ನನ್ನ ಬಗ್ಗೆ ಮಾತ್ರ ಮಾತನಾಡುತ್ತೇನೆ' ಎಂದು ಹೇಳುವ ಮೂಲಕ ವಿಜಯಲಕ್ಷ್ಮಿ ದೂರು ಕುರಿತ ವಿಚಾರಕ್ಕೆ ಕಿಚ್ಚ ಸುದೀಪ್ ಮೌನದ ಪ್ರತಿಕ್ರಿಯೆ ನೀಡಿದರು.

Read Full Story

03:14 PM (IST) Dec 31

ಓಡಿ ಹೋದರೂ, ಲವ್ ಮ್ಯಾರೇಜ್‌ಗೂ ಬೇಕು ಅನುಮತಿ, ಹೊಸ ಮದುವೆ ನೀತಿ ಮಸೂದೆ

ಓಡಿ ಹೋದರೂ, ಲವ್ ಮ್ಯಾರೇಜ್‌ಗೂ ಬೇಕು ಅನುಮತಿ, ಹೊಸ ಮದುವೆ ನೀತಿ ಮಸೂದೆ, ಪೋಷಕರ ಅನುಮತಿ ಸಿಗದಿದ್ದರೆ, ಲೆವಲ್ 2 ಆಫೀಸ್ ಪರಿಶೀಲನೆ ನಡೆಸಲಿದ್ದಾರೆ. ಆಫೀಸರ್ ಅಪ್ರೋವ್ ನೀಡಿದರೆ ಮಾತ್ರ ಮದುವೆ ಸಾಧ್ಯ.

 

Read Full Story

03:02 PM (IST) Dec 31

ವಿಜಯಲಕ್ಷ್ಮಿ ದರ್ಶನ್ ಆರೋಪಕ್ಕೆ ಆಯುಕ್ತರ ಸ್ಪಷ್ಟನೆ; ಪೊಲೀಸರು ಎಲ್ಲರಿಗಾಗಿಯೂ ಇದ್ದಾರೆ, ತನಿಖೆ ವಿಳಂಬವಾಗಿಲ್ಲ!

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಆರೋಪಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ತನಿಖೆ ವಿಳಂಬವಾಗಿಲ್ಲ, ತಾಂತ್ರಿಕ ಕಾರಣಗಳಿಂದ ಸಮಯ ಬೇಕಾಗುತ್ತದೆ ಎಂದು ತಿಳಿಸಿದ್ದು, ವಿಳಂಬ ಕಂಡುಬಂದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

Read Full Story

02:57 PM (IST) Dec 31

BBK 12 - ರಾ.. ರಾ.. ಹಾಡಿಗೆ ಡಾನ್ಸ್​ ಮಾಡುತ್ತಾ ನಾಗವಲ್ಲಿಯಾದ ರಕ್ಷಿತಾ ಶೆಟ್ಟಿ - ಬೆಚ್ಚಿಬಿದ್ದ ಅಶ್ವಿನಿ ಗೌಡ

ಬಿಗ್​ಬಾಸ್​ 12ರ ಫೈನಲಿಸ್ಟ್‌ಗಳೆಂದು ಬಿಂಬಿತರಾಗಿರುವ ಅಶ್ವಿನಿ ಗೌಡ ಮತ್ತು ರಕ್ಷಿತಾ ಶೆಟ್ಟಿ ತಮ್ಮ ಜಗಳಗಳಿಂದಲೇ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಆದರೆ, ಇದೀಗ ಇಬ್ಬರೂ 'ರಾ...ರಾ...' ಹಾಡಿಗೆ ಒಟ್ಟಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದು, ರಕ್ಷಿತಾ ಡಾನ್ಸ್ ನೋಡಿ ಅಶ್ವಿನಿ ಸುಸ್ತಾಗಿ ಕುಳಿತಿದ್ದಾರೆ.
Read Full Story

02:51 PM (IST) Dec 31

ಶ್ರೀಮಂತ ಅಂಬಾನಿ ಕುಟುಂಬದ ಸರಳ ವ್ಯಕ್ತಿ, ಧೀರೂಬಾಯಿ ಟೆಕ್ಸ್‌ಸ್ಟೈಲ್ ಬಿಸಿನೆಸ್‌ ರೂವಾರಿ ವಿಮಲ್ ಅಂಬಾನಿ ಯಾರು?

ಒಂದು ಕಾಲದಲ್ಲಿ ಭಾರತೀಯ ಜವಳಿ ಮಾರುಕಟ್ಟೆಯನ್ನು ಆಳಿದ 'ಓನ್ಲಿ ವಿಮಲ್' ಬ್ರ್ಯಾಂಡ್‌ಗೆ ಸ್ಫೂರ್ತಿಯಾದವರು ವಿಮಲ್ ಅಂಬಾನಿ. ಧೀರೂಭಾಯಿ ಅಂಬಾನಿಯವರ ಅಣ್ಣನ ಮಗನಾದ ಇವರು, ಬ್ರ್ಯಾಂಡ್‌ನ ಅಪಾರ ಖ್ಯಾತಿಯ ಹೊರತಾಗಿಯೂ ಸಾರ್ವಜನಿಕ ಜೀವನದಿಂದ ದೂರ ಉಳಿದು, ಖಾಸಗಿ ಬದುಕು ನಡೆಸುತ್ತಿದ್ದಾರೆ. 

Read Full Story

02:36 PM (IST) Dec 31

BBK 12 - ಹೇಳಿದ್ದೊಂದು ಮಾಡ್ತಿರೋದು ಮತ್ತೊಂದು; WWE ಆಟಗಾರರಾದ ಸ್ಪಂದನಾ-ರಾಶಿಕಾ

ಬಿಗ್‌ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್‌ಗಾಗಿ ಸ್ಪಂದನಾ ಸೋಮಣ್ಣ ಮತ್ತು ರಾಶಿಕಾ ಶೆಟ್ಟಿ ನಡುವೆ ತೀವ್ರ ಸ್ಪರ್ಧೆ ನಡೆದಿದೆ. ಬಿಲ್ಲೆಗಳನ್ನು ಜೋಡಿಸುವ ಆಟವು ದೈಹಿಕ ಜಟಾಪಟಿಗೆ ತಿರುಗಿದ್ದು, ಇಬ್ಬರೂ ಕುಸ್ತಿಯಾಡಿದಂತೆ ಒಬ್ಬರನ್ನೊಬ್ಬರು ಲಾಕ್ ಮಾಡಿಕೊಂಡಿದ್ದಾರೆ.
Read Full Story

01:13 PM (IST) Dec 31

January 2026 ನಾಲ್ಕು ಗ್ರಹಗಳ ಸಂಯೋಗ - ವರ್ಷದ ಆರಂಭ ಯಾರಿಗೆ ಜಾಕ್​ಪಾಟ್​? ಪ್ರೇಮ ಜೀವನ ಹೇಗಿದೆ?

2026ರ ಆರಂಭವು ಧನು ರಾಶಿಯಲ್ಲಿ ಸೂರ್ಯ, ಮಂಗಳ, ಶುಕ್ರ ಮತ್ತು ಬುಧರ ನಾಲ್ಕು ಗ್ರಹಗಳ ಸಂಯೋಗದೊಂದಿಗೆ ಪ್ರಾರಂಭವಾಗುತ್ತದೆ, ಇದು ಕೆಲವು ರಾಶಿಗಳಿಗೆ ಅತ್ಯಂತ ಶುಭಕರವಾಗಿರುತ್ತದೆ. ಈ ಲೇಖನವು ಜನವರಿ 2026ರ ಮಾಸಿಕ ಜಾತಕವನ್ನು ವಿವರಿಸುತ್ತದೆ. 

Read Full Story

01:03 PM (IST) Dec 31

ಬಿಲಿಯನೇರ್ ಗೊತ್ತು ಮಿಲಿಯನೇರ್ ಗೊತ್ತು ಇದೇನಿದು ನಿಲಿಯನೇರ್‌ - ನೀವು ನಿಲಿಯನೇರಾ ಚೆಕ್ ಮಾಡಿ

ಮಿಲಿಯನೇರ್ ಆಗ್ಬೇಕು, ಆಮೇಲೆ ಬಿಲಿಯನೇರ್ ಆಗ್ಬೇಕು ಅನ್ನೋದು ಅನೇಕರ ಆಸೆ. ಆದರೆ ಎಲ್ಲರಿಗೂ ಈ ಕನಸನ್ನು ನನಸು ಮಾಡಲು ಸಾಧ್ಯವಾಗುವುದಿಲ್ಲ. ಹೀಗಿರುವಾಗ ಇತ್ತೀಚೆಗೆ ಚಾಲ್ತಿಯಲ್ಲಿರುವ ಪದವೊಂದು ಇಂಟರ್‌ನೆಟ್‌ನಲ್ಲಿ ಬಹಳ ಸಂಚಲನ ಸೃಷ್ಟಿಸುತ್ತಿದೆ. ಅದುವೇ ನಿಲಿಯನೇರ್ ಹಾಗಿದ್ರ ನಿಲಿಯನೇರ್ ಅಂದ್ರೆ ಏನು

Read Full Story

01:01 PM (IST) Dec 31

ಮುಗಿದ ವಿದ್ಯುದೀಕರಣ ಪ್ರಕ್ರಿಯೆ, ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಸಿಕ್ತು ಗ್ರೀನ್‌ಸಿಗ್ನಲ್‌!

ಭಾರತೀಯ ರೈಲ್ವೆಯು  ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಘಾಟ್ ವಿಭಾಗದ ವಿದ್ಯುದ್ದೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಮಹತ್ವದ ಮೈಲಿಗಲ್ಲಿನಿಂದಾಗಿ, ಬೆಂಗಳೂರು ಮತ್ತು ಮಂಗಳೂರು ನಡುವೆ ವಂದೇ ಭಾರತ್ ಸೇರಿದಂತೆ ಆಧುನಿಕ ಎಲೆಕ್ಟ್ರಿಕ್ ಸೂಪರ್‌ಫಾಸ್ಟ್ ರೈಲುಗಳ ಸಂಚಾರಕ್ಕೆ ದಾರಿ ಸುಗಮವಾಗಿದೆ.

Read Full Story

12:48 PM (IST) Dec 31

ಬಸ್‌ನಲ್ಲಿ ನಿದ್ದೆ ಮಾಡ್ತಿದ್ದ ಯುವತಿಗೆ ಕಾಮುಕನ ಕಿರುಕುಳ; ಗಟ್ಟಿಗಿತ್ತಿ ಹುಡುಗಿಯ ತಕ್ಕ ಶಾಸ್ತಿ ವಿಡಿಯೋ ವೈರಲ್!

ಕಾರವಾರದಿಂದ ಅಂಕೋಲಾಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರು ನಿದ್ದೆಯಲ್ಲಿದ್ದಾಗ, ಪಕ್ಕದ ಸೀಟಿನಲ್ಲಿದ್ದ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಧೈರ್ಯಗೆಡದ ಯುವತಿ ಆತನ ಕೃತ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Read Full Story

12:40 PM (IST) Dec 31

ನನಗೆ ಸಿಎಂ ಮಲಗೋ ಜಾಗ ಕೊಟ್ರು, ನನ್​ ನಾಯಿ DCM ಜಾಗದಲ್ಲಿ ಮಲಗಿತ್ತು ಎಂದ Bigg Boss ಡಾಗ್​ ಸತೀಶ್​

ಬಿಗ್​ಬಾಸ್​ ಖ್ಯಾತಿಯ ಡಾಗ್​ ಸತೀಶ್​ ಅವರು, ಡಿಸಿಎಂ ಮಲಗುವ ಜಾಗದಲ್ಲಿ ತಮ್ಮ ನಾಯಿ ಮಲಗಿತ್ತು ಮತ್ತು ತಮಗೆ ಸಿಎಂ ಮಲಗುವ ಜಾಗವನ್ನು ನೀಡಲಾಗಿತ್ತು ಎಂದು ಹೇಳುವ ಮೂಲಕ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ. ಅವರು ಹೇಳಿದ್ದೇನು ಕೇಳಿ…

Read Full Story

12:20 PM (IST) Dec 31

ಬಿಗ್ ಬಾಸ್ ಬೊಂಬೆ ಫ್ಲೋರಿಡಾದಲ್ಲಿ ಮಿಂಚಿಂಗ್; ನಿವೇದಿತಾ ಗೌಡ ಒಂಟಿ ಪ್ರವಾಸದ ಹಿಂದಿದೆ ರೋಚಕ ಸ್ಟೋರಿ!

ಬಿಗ್ ಬಾಸ್ ಖ್ಯಾತಿಯ ನಟಿ ನಿವೇದಿತಾ ಗೌಡ, ಫ್ಲೋರಿಡಾದಲ್ಲಿ ಒಂಟಿ ಪ್ರವಾಸ ಕೈಗೊಂಡಿದ್ದಾರೆ. ಡಿಸ್ನಿ ವರ್ಲ್ಡ್‌ನಂತಹ ಪ್ರಸಿದ್ಧ ಸ್ಥಳಗಳಿಗೆ ಭೇಟಿ ನೀಡಿ, ತಮ್ಮ ಪ್ರವಾಸದ ಸುಂದರ ಕ್ಷಣಗಳನ್ನು ಮತ್ತು ಹಾಟ್ ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ.

Read Full Story

12:11 PM (IST) Dec 31

ಕೋಗಿಲು ಕೇಸ್‌ ನಡುವೆ ಕೇರಳ ಸಿಎಂ ಜೊತೆ ವೇದಿಕೆ ಹಂಚಿಕೊಂಡ ಸಿದ್ದು, ಸಿಎಂ ಭಾಷಣ ಕೇಳದೇ ಎದ್ದುಹೋದ ಪಿಣರಾಯಿ!

ಬೆಂಗಳೂರಿನ ಕೋಗಿಲು ಲೇಔಟ್‌ನ ಅಕ್ರಮ ಗುಡಿಸಲು ತೆರವು ವಿಚಾರವಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ರಾಜಕೀಯ ಘರ್ಷಣೆ ನಡೆದಿತ್ತು. ಈ ವಿವಾದದ ಬೆನ್ನಲ್ಲೇ, ಇಬ್ಬರೂ ನಾಯಕರು ಕೇರಳದ ಶಿವಗಿರಿ ತೀರ್ಥಯಾತ್ರೆ ಕಾರ್ಯಕ್ರಮದಲ್ಲಿ ಒಂದೇ ವೇದಿಕೆಯನ್ನು ಹಂಚಿಕೊಂಡಿದ್ದಾರೆ.
Read Full Story

11:01 AM (IST) Dec 31

'ಬೆಂಗಳೂರು ಬಿಡ್ತಿರೋದು ಬೆಸ್ಟ್‌ ನಿರ್ಧಾರ..' ಹೈದ್ರಾಬಾದ್‌ ಯುವತಿಯ ಸೋಶಿಯಲ್‌ ಮೀಡಿಯಾ ಪೋಸ್ಟ್‌ಗೆ ಸಿಡಿದೆದ್ದ ಕನ್ನಡಿಗರು

ಹೊಸ ವರ್ಷದ ಟೈಮ್‌ನಲ್ಲಿ ಹೈದ್ರಾಬಾದ್‌ ಯುವತಿಯ ಪೋಸ್ಟ್‌ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಮೂಲಭೂತ ಸೌಕರ್ಯಗಳ ಕೊರತೆ ಹಿನ್ನಲೆಯಲ್ಲಿ ಬೆಂಗಳೂರನ್ನು ತೊರೆಯುತ್ತಿರೋದು ಈ ವರ್ಷದ ನನ್ನ ಬೆಸ್ಟ್‌ ನಿರ್ಧಾರ ಎಂದಿರೋದು ಆಕ್ರೋಶಕ್ಕೆ ಕಾರಣವಾಗಿದೆ.

 

Read Full Story

10:54 AM (IST) Dec 31

666 ‘ಕ್ರಿಮಿನಲ್‌’ ಪೊಲೀಸರ ಅಮಾನತು

ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿಕೊಡಬೇಕಾದ ಪೊಲೀಸರೇ ಅಪರಾಧ ಪ್ರಕರಣ ಮತ್ತು ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗುತ್ತಿರುವುದು ಹೆಚ್ಚಾಗುತ್ತಿದೆ. ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಮೇಲೆ ರಾಜ್ಯದಲ್ಲಿ ಕಳೆದ ಮೂರು ವರ್ಷದಲ್ಲಿ 650ಕ್ಕೂ ಹೆಚ್ಚು ಮಂದಿ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ

Read Full Story

10:12 AM (IST) Dec 31

BBK 12 - ಧನುಷ್ ತಂತ್ರಗಾರಿಕೆ ಕಂಡು ಬೆಕ್ಕಸ ಬೆರಗಾದ ಅಶ್ವಿನಿ ಗೌಡ & ಧ್ರುವಂತ್; ಅದು ನಾಲ್ವರ ಗ್ಯಾಂಗ್?

ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಸಮೀಪಿಸುತ್ತಿದ್ದಂತೆ, ಧನುಷ್ ತಮ್ಮ ಆಟದ ತಂತ್ರಗಾರಿಕೆಯನ್ನು ಬಹಿರಂಗಪಡಿಸಿದ್ದಾರೆ. ಧನುಷ್ ಅವರ ಈ ಲೆಕ್ಕಾಚಾರದ ಆಟವನ್ನು ಗಮನಿಸಿದ ಅಶ್ವಿನಿ ಗೌಡ ಮತ್ತು ಧ್ರುವಂತ್, ಅವರ ಅಸಲಿ ಆಟದ ಬಗ್ಗೆ ಚರ್ಚೆ ನಡೆಸಿದ್ದಾರೆ.

Read Full Story

More Trending News