ಬೆಂಗಳೂರು: ಐಟಿ ಇಲಾಖೆ ಅಧಿಕಾರಿಗಳು ಪರಿಶೀಲನೆ ವೇಳೆ ಅನೇಕ ಪ್ರಶ್ನೆಗಳನ್ನ ಕೇಳುವಾಗ 5 ನಿಮಿಷ ಸಮಯಕೊಡಿ ಅಂತ ಕೇಳಿ ಒಳಗಡೆ ಹೋದ ಉದ್ಯಮಿ ಸಿ.ಜೆ.ರಾಯ್ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಮ್ಮ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಜನರಿಗೆ ಸತ್ಯಾಂಶ ತಿಳಿಸುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉದ್ಯಮಿ ಸಿ.ಜೆ.ರಾಯ್ ಒಬ್ಬ ಒಳ್ಳೆಯ ಉದ್ಯಮಿ. ಹೀಗೆ ಆಗಬಾರದಿತ್ತು. ಐಟಿ ತಂಡ ಕೇರಳದಿಂದ ಬಂದಿತ್ತು ಎಂಬ ಮಾಹಿತಿ ಇದೆ. ಈ ಘಟನೆ ಕುರಿತು ನಮಗೆ ದೆಹಲಿಯಿಂದ ಕೂಡ ವರದಿ ಕೇಳಲಾಗಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಿ, ಜನರಿಗೆ ಸತ್ಯಾಂಶ ತಿಳಿಸುವ ಕೆಲಸವನ್ನ ನಮ್ಮ ಸರ್ಕಾರ ಮಾಡುತ್ತದೆ. ಐಟಿ ಬಗ್ಗೆ ನಾನು ಮಾತನಾಡಿದರೆ ರಾಜಕೀಯ ಆಗುತ್ತದೆ. ಈ ಕಿರುಕುಳವನ್ನ ನಾನು ಖಂಡಿಸುತ್ತೇನೆ. ಇದು ಸರಿಯಲ್ಲ ಎಂದಿದ್ದಾ
12:36 PM (IST) Jan 31
12:21 PM (IST) Jan 31
6 Injured in Mysterious Blast at Molakera Village in Bidar ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಶಾಲಾ ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಳೆದ ಆರು ತಿಂಗಳಲ್ಲಿ ಇದು ಐದನೇ ಸ್ಫೋಟವಾಗಿದೆ.
12:20 PM (IST) Jan 31
ಉದ್ಯಮಿ ಸಿ.ಜೆ.ರಾಯ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಅವರು ಉಳಿದುಕೊಳ್ಳುತ್ತಿದ್ದ ಬೆಂಗಳೂರಿನ ಕಾನ್ರಾಡ್ ಹೋಟೆಲ್ನ ಖಾಯಂ ಕೋಣೆಯನ್ನು ಪರಿಶೀಲಿಸಿದ್ದಾರೆ. ಈ ತನಿಖೆಯಲ್ಲಿ, ರಾಯ್ ಅವರ ಐಷಾರಾಮಿ ಜೀವನ ಮತ್ತು ಸಾವಿನ ಹಿಂದಿನ ಸಂಭಾವ್ಯ ಕಾರಣಗಳನ್ನು ಶೋಧಿಸಲಾಗುತ್ತಿದೆ.
12:15 PM (IST) Jan 31
ಹಿರಿಯ ಇತಿಹಾಸ ತಜ್ಞ ಹಾಗೂ ಲಕ್ಕುಂಡಿ ಉತ್ಖನನ ನಿರ್ದೇಶಕ ಟಿ.ಎನ್. ಕೇಶವ್ (74) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಂಪಿ, ಅಜಂತಾ-ಎಲ್ಲೋರಾದಲ್ಲಿ ಮಹತ್ವದ ಸೇವೆ ಸಲ್ಲಿಸಿದ್ದ ಅವರ ಅಗಲಿಕೆಗೆ ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
12:14 PM (IST) Jan 31
ಕಾನ್ಫಿಡೆಂಟ್ ಗ್ರೂಪ್ನ ಸಂಸ್ಥಾಪಕ ಸಿ.ಜೆ.ರಾಯ್ ಅವರ ಸಾವಿನ ಸುತ್ತ ಹಲವು ಸಂದೇಹಗಳು ಮೂಡಿವೆ. ಈ ನಡುವೆ, ತಮ್ಮ ಸಾವಿರಾರು ಕೋಟಿ ಸಾಮ್ರಾಜ್ಯಕ್ಕೆ 'ಕಾನ್ಫಿಡೆಂಟ್' ಎಂದು ಹೆಸರು ಬಂದಿದ್ದು ಹೇಗೆ ಎಂಬುದನ್ನು ಅವರು ಹಳೆಯ ಸಂದರ್ಶನವೊಂದರಲ್ಲಿ ವಿವರಿಸಿದ್ದರು.
12:02 PM (IST) Jan 31
Yash's Mother Pushpa Confronts GPA Holder Over Site Dispute in Hassan ಹಾಸನದ ವಿದ್ಯಾನಗರದಲ್ಲಿ ನಟ ಯಶ್ ಅವರ ತಾಯಿ ಪುಷ್ಪಾ ಅರುಣ್ಕುಮಾರ್ ಹಾಗೂ ಜಿಪಿಎ ಹೋಲ್ಡರ್ ದೇವರಾಜ್ ನಡುವೆ ನಡೆಯುತ್ತಿರುವ ಸೈಟ್ ವಿವಾದ ಮತ್ತೆ ಸದ್ದು ಮಾಡಿದೆ.
11:56 AM (IST) Jan 31
11:40 AM (IST) Jan 31
ಗ್ರಾಮದ ಸಮಸ್ಯೆ ಬಗ್ಗೆ ಪ್ರಶ್ನೆ ಮಾಡಿದ ಕಾರಣಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷನೇ ಸಾರ್ವಜನಿಕವಾಗಿ ಯುವಕನೋರ್ವನ ಬೆನ್ನು ಕಚ್ಚಿ ಹಲ್ಲೆ ನಡೆಸಿ ವಿಕೃತ ವರ್ತನೆ ತೋರಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿಂಧೋಗಿ ಗ್ರಾಮದಲ್ಲಿ ನಡೆದಿದೆ.
11:36 AM (IST) Jan 31
ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರು ಪದೇ ಪದೇ ನಡೆಯುತ್ತಿದ್ದ ಐಟಿ ದಾಳಿಯಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. , ರಿಯಾಲಿಟಿ ಶೋಗಳ ಮೂಲಕ ಹಲವರಿಗೆ ನೆರವಾಗಿದ್ದ ಅವರ ನಿಧನಕ್ಕೆ ಗಾಯಕ ಹನುಮಂತ ಲಮಾಣಿ ಕಂಬನಿ ಮಿಡಿದಿದ್ದಾರೆ.
11:25 AM (IST) Jan 31
11:22 AM (IST) Jan 31
ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ. ರಾಯ್, ಐಟಿ ದಾಳಿಯ ನಂತರ ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಈ ದುರಂತಕ್ಕೆ ಬಿಗ್ ಬಾಸ್ ವಿಜೇತ ಹನುಮಂತ ಲಮಾಣಿ ಕಂಬನಿ ಮಿಡಿದಿದ್ದು, ತಮಗೆ ಫ್ಲಾಟ್ ಹಾಗೂ ತಂಗಿಯ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿದ್ದನ್ನು ಸ್ಮರಿಸಿದ್ದಾರೆ.
10:40 AM (IST) Jan 31
ಖ್ಯಾತ ಉದ್ಯಮಿ ಡಾ. ಸಿ.ಜೆ. ರಾಯ್ ಅವರು ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಬಳಸಿದ 0.25 ಎನ್ಪಿ ಬೋರ್ ಪಿಸ್ತೂಲ್ನಿಂದ ಕಡಿಮೆ ಶಬ್ದ ಬಂದಿದ್ದರಿಂದ, ಘಟನೆ ನಡೆದ 15 ನಿಮಿಷಗಳ ನಂತರವಷ್ಟೇ ಈ ವಿಷಯ ಬೆಳಕಿಗೆ ಬಂದಿದೆ.
10:13 AM (IST) Jan 31
09:47 AM (IST) Jan 31
ನನ್ನ ಮೇಲೆ ಬಂದಿರುವ ಎಲ್ಲಾ ಆರೋಪಗಳು ಆಧಾರ ರಹಿತ. ಯಾರೋ ಅಧಿಕಾರಿ ಹೇಳಿದ್ದಾನೆಂಬ ಆರೋಪ ಹೊರಿಸಿ ರಾಜೀನಾಮೆ ಕೇಳುವುದು ಸರಿಯಲ್ಲ. ನಾನು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದೇನೆ ಎನ್ನುವುದಕ್ಕೆ ಸಾಕ್ಷ್ಯಾಧಾರ ಕೊಟ್ಟರೆ ಈ ಕ್ಷಣದಲ್ಲಿ ರಾಜೀನಾಮೆ ಕೊಡುತ್ತೇನೆ ಎಂದು ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
09:20 AM (IST) Jan 31
ಸೋಲಾರ್ ಪ್ಲಾಂಟ್ನಲ್ಲಿ ಕಾಣಿಸಿಕೊಂಡಿದ್ದ 12 ಅಡಿ ಉದ್ದದ, 42 ಕೆಜಿ ತೂಕದ ಬೃಹತ್ ಹೆಣ್ಣು ಹೆಬ್ಬಾವನ್ನು ಉರಗ ತಜ್ಞ ಬಾಣಸಂದ್ರ ರವೀಶ್ ಅವರು ರಕ್ಷಿಸಿದ್ದಾರೆ. ಸಂತಾನೋತ್ಪತ್ತಿ ಕಾಲವಾದ್ದರಿಂದ ಸಂಗಾತಿಯನ್ನು ಅರಸಿ ಬಂದಿರುವ ಸಾಧ್ಯತೆಗಳಿವೆ.
09:00 AM (IST) Jan 31
ಯಶಸ್ವಿ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್, ಜನರ ಕನಸಿನ ಮೇಲೆ ಸಾಲ ಮಾಡದೆ ಸ್ವಂತ ಬಂಡವಾಳದಿಂದ 'ಕಾನ್ಫಿಡೆಂಟ್' ಸಾಮ್ರಾಜ್ಯವನ್ನು ಕಟ್ಟಿದರು. ಆದರೆ, ಐ.ಟಿ. ಅಧಿಕಾರಿಗಳ ಕಿರುಕುಳದಿಂದಾಗಿ ಅವರ ಬದುಕು ದುರಂತ ಅಂತ್ಯ ಕಂಡಿದೆ ಎಂದು ಅವರ ಸಹೋದರ ಆರೋಪಿಸಿದ್ದಾರೆ.
08:59 AM (IST) Jan 31
ಹಿರಿಯ ರಂಗಕರ್ಮಿ ಮಾಜಿ ರಾಜ್ಯಸಭಾ ಸದಸ್ಯೆ ಬಿ. ಜಯಶ್ರೀ ಅವರನ್ನು ಸರ್ಕಾರಿ ಅಧಿಕಾರಿಗಳು ಕಚೇರಿಗೆ ಮೂರನೇ ಬಾರಿ ಅಲೆದಾಡಿಸಿದ ಘಟನೆ ಗುಬ್ಬಿ ತಾಲೂಕಿನ ಭೂಮಾಪನ ಕಚೇರಿಯಲ್ಲಿ ನಡೆದಿದೆ.
08:27 AM (IST) Jan 31
ಅಮೆರಿಕದ ಅನೂಹ್ಯ ಅಪಾಯಕಾರಿ ನಿರ್ಧಾರಗಳು, ನಿಲ್ಲದ ರಷ್ಯಾ-ಉಕ್ರೇನ್ ಸಮರ, ಮಧ್ಯಪ್ರಾಚ್ಯ ಬಿಕ್ಕಟ್ಟುಗಳಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯು ಪ್ರಕ್ಷುಬ್ಧ ಸಾಗರದಂತಾಗಿದ್ದರೂ ಅದರಲ್ಲಿ ಧೈರ್ಯವಾಗಿ ಈಜಬಲ್ಲೆ ಎಂಬ ಸಂದೇಶವನ್ನು ''ಇಂಡಿಯಾ ಎನರ್ಜಿ ವೀಕ್'' ಮೂಲಕ ಭಾರತ ಜಗತ್ತಿಗೆ ಸಾರುವಲ್ಲಿ ಸಫಲವಾಯಿತು.
08:18 AM (IST) Jan 31
ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಹೋಂ ವರ್ಕ್ ಮಾಡಿಲ್ಲವೆಂಬ ಕಾರಣಕ್ಕೆ 4ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕಿಯೊಬ್ಬರು ಬಾಸುಂಡೆ ಬರುವಂತೆ ಥಳಿಸಿದ್ದಾರೆ. ಈ ಸಂಬಂಧ ವಿದ್ಯಾರ್ಥಿಯ ತಾಯಿ ಶಿಕ್ಷಕಿ ಹಾಗೂ ಶಾಲಾ ಆಡಳಿತದ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ.
08:07 AM (IST) Jan 31
07:39 AM (IST) Jan 31
ಶಬರಿಮಲೆ ದೇಗುಲದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ವಿಗ್ರಹಗಳ ಕವಚದ ಚಿನ್ನಕ್ಕೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕನ್ನಡದ ‘ಕಾಂತಾರ’ ಸೇರಿ ಹಲವು ಚಿತ್ರಗಳಲ್ಲಿ ನಟಿಸಿರುವ ಬಹುಭಾಷಾ ನಟ ಜಯರಾಮ್ರನ್ನು ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಶುಕ್ರವಾರ ವಿಚಾರಣೆ ನಡೆಸಿದ್ದಾರೆ.
07:33 AM (IST) Jan 31
ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಶನಿವಾರ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
07:27 AM (IST) Jan 31
07:25 AM (IST) Jan 31
ಕೆಲದಿನಗಳಿಂದ ಏರುಗತಿಯಲ್ಲಿ ಸಾಗುತ್ತಿದ್ದ ಅಮೂಲ್ಯ ಲೋಹಗಳ ಹಾದಿ ಬದಲಾಗಿದ್ದು, ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಕೆ.ಜಿ.ಗೆ 15,000 ರು. ಕಡಿಮೆಯಾಗಿದ್ದು, 3,95,000 ರು. ಆಗಿದೆ.