Published : Mar 31, 2026, 06:58 AM ISTUpdated : Mar 31, 2026, 10:30 PM IST

Karnataka News Live: ಖೇಲೋ ಇಂಡಿಯಾ ಕಿಕ್ ಬಾಕ್ಸಿಂಗ್ - ಕನ್ನಡ ಕುವರಿ ದಾನ್ವಿ ಸುರೇಶ್ ಗೌಡಗೆ ಬೆಳ್ಳಿ ಪದಕ

ಸಾರಾಂಶ

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್‌ ಪರ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಭಾಗಿ ಆಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಎಂಪಿಎಸ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕ ಆಗಿರುವ ಚಂದ್ರು ನುಗ್ಲಿ ಅವರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿಯೂ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಬಾಗಲಕೋಟೆ ತಾಲೂಕಿನ ಸುತಗುಂಡಾರ ಗ್ರಾಮದಲ್ಲಿ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ಸಿದ್ದರಾಮಯ್ಯ ನಡೆಸಿದ ಪ್ರಚಾರ ಸಭೆಯಲ್ಲಿ ಚಂದ್ರು ನುಗ್ಲಿ ಭಾಗಿಯಾಗಿದ್ದರು. 

ಮಾಧ್ಯಮವರು ವಿಡಿಯೋ ಮಾಡುವುದನ್ನು ಕಂಡು ಮುಖಕ್ಕೆ ಮಾಸ್ಕ್‌ ಹಾಕಿಕೊಂಡು ಕಬ್ಬಿನ ಗದ್ದೆಯ ಕಡೆಗೆ ಹೋಗಿ ಮರೆಯಾದರು. ಮುಖ ಮುಚ್ಚಿಕೊಂಡು ಮಾಸ್ಕ್ ಹಾಕಿಕೊಂಡು ಹೋಗುವ ದೃಶ್ಯ ಸಹ ಕಂಡಿದೆ. ಸರ್ಕಾರಿ ನೌಕರರು ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುವುದು ನಿಷಿದ್ಧವಾಗಿದೆ.

10:30 PM (IST) Mar 31

ಖೇಲೋ ಇಂಡಿಯಾ ಕಿಕ್ ಬಾಕ್ಸಿಂಗ್ - ಕನ್ನಡ ಕುವರಿ ದಾನ್ವಿ ಸುರೇಶ್ ಗೌಡಗೆ ಬೆಳ್ಳಿ ಪದಕ

ಚೆನ್ನೈನಲ್ಲಿ ನಡೆದ ಅಸ್ಮಿತಾ ಖೇಲೋ ಇಂಡಿಯಾ ಕಿಕ್‌ಬಾಕ್ಸಿಂಗ್ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬೆಂಗಳೂರಿನ ಪ್ರತಿಭೆ ದಾನ್ವಿ ಸುರೇಶ್ ಗೌಡ ಬೆಳ್ಳಿ ಪದಕ ಲಭಿಸಿದೆ. ಎಂಟನೇ ತರಗತಿಯ ಈ ವಿದ್ಯಾರ್ಥಿನಿ ಬೆಳ್ಳಿ ಪದಕ ಗಳಿಸಿದ್ದಾರೆ.

Read Full Story

09:57 PM (IST) Mar 31

ಸಚಿವ ಡಿ ಸುಧಾಕರ್ ಆರೋಗ್ಯದಲ್ಲಿ ಏರುಪೇರು, ಮಣಿಪಾಲ ಆಸ್ಪತ್ರೆ ತೀವ್ರ ನಿಘಾ ಘಟಕಕ್ಕೆ ದಾಖಲು

ಸಚಿವ ಡಿ ಸುಧಾಕರ್ ಆರೋಗ್ಯದಲ್ಲಿ ಏರುಪೇರು, ಮಣಿಪಾಲ ಆಸ್ಪತ್ರೆ ತೀವ್ರ ನಿಘಾ ಘಟಕಕ್ಕೆ ದಾಖಲು, ವೈದ್ಯರ ತಂಡ ಸಚಿವರಿಗೆ ಚಿಕಿತ್ಸೆ ನೀಡುತ್ತಿದೆ.  ಡಿ ಸುಧಾಕರ್ ಆರೋಗ್ಯದ ಅಪ್‌ಡೇಟ್ ಇಲ್ಲಿದೆ.

Read Full Story

08:53 PM (IST) Mar 31

ಹಿಂದೂ-ದಲಿತರ ಶೋಷಣೆಗಳು ಕಾಂಗ್ರೆಸ್ ದುರಾಡಳಿತದ ಸಾಧನೆ - ಬಿ.ವೈ.ವಿಜಯೇಂದ್ರ

ಹಿಂದೂ ಮತ್ತು ದಲಿತರ ಶೋಷಣೆಗಳು ಕಾಂಗ್ರೆಸ್ ದುರಾಡಳಿತದ ಸಾಧನೆಯಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

Read Full Story

07:55 PM (IST) Mar 31

ನಟನಾಗದಿದ್ರೆ ಪವನ್​ ಕಲ್ಯಾಣ್​ ನಕ್ಸಲ್​ ಆಗ್ತಿದ್ರಾ? ಶಾಕಿಂಗ್ ವಿಷ್ಯ ತೆರೆದಿಟ್ಟ ಅಣ್ಣ ಚಿರಂಜೀವಿ

ಟಾಕ್ ಶೋವೊಂದರಲ್ಲಿ ಮೆಗಾಸ್ಟಾರ್ ಚಿರಂಜೀವಿ, ತಮ್ಮ ತಮ್ಮ ಪವನ್ ಕಲ್ಯಾಣ್ ಬಗ್ಗೆ ಆಘಾತಕಾರಿ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ಗನ್‌ಗಳ ಮೇಲೆ ವಿಪರೀತ ಆಸಕ್ತಿ ಹೊಂದಿದ್ದ ಪವನ್, ನಕ್ಸಲೈಟ್ ಆಗಿಬಿಡುತ್ತಾನೇನೋ ಎಂದು ತಾವು ಭಯಪಟ್ಟಿದ್ದಾಗಿ ಚಿರಂಜೀವಿ ಹೇಳಿಕೊಂಡಿದ್ದಾರೆ.

Read Full Story

07:45 PM (IST) Mar 31

'ನನ್ನ ರಾಮ ಯಾರು..' ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಯ್ತು ನಟ ಕಿಶೋರ್‌ ಪೋಸ್ಟ್‌

ನಟ ಕಿಶೋರ್ ಅವರು ರಾಮನ ಕುರಿತು ತಮ್ಮ ವಿಭಿನ್ನ ದೃಷ್ಟಿಕೋನವನ್ನು ಹಂಚಿಕೊಂಡಿದ್ದಾರೆ. ವ್ಯವಸ್ಥೆಗಾಗಿ ವಾಲಿಯನ್ನು ಕೊಂದ, ಸೀತೆಯನ್ನು ಕಾಡಿಗಟ್ಟಿದ ರಾಮನಿಗಿಂತ, ಸಹಾನುಭೂತಿಯಿಂದ ಎಲ್ಲವನ್ನೂ ಪ್ರಶ್ನಿಸುವ, ಸಂವಾದಕ್ಕೆ ಒತ್ತು ನೀಡುವ ಮಾನವೀಯ ರಾಮನೇ 'ನನ್ನ ರಾಮ' ಎಂದು ಅವರು ಪ್ರತಿಪಾದಿಸಿದ್ದಾರೆ.

Read Full Story

07:01 PM (IST) Mar 31

ಕೆಡಿ ಧ್ರುವ ಸರ್ಜಾಗೆ ಸಮಂತಾ ಸವಾಲ್ - ‘ಮಾ ಇಂಟಿ ಬಂಗಾರಂ’ ಕದನಕ್ಕಿಳಿದ ಸ್ಯಾಮ್

ಸಮಂತಾ ರುತ್ ಪ್ರಭು.. ಈ ಹೆಸ್ರು ಸೌತ್ ಸಿನಿ ಇಂಡಸ್ಟ್ರಿಯ ಪ್ರೈಡ್​.. ಯಾಕಂದ್ರೆ ಕಳೆದ 15 ವರ್ಷದಿಂದ ಸಮಂತಾ ತೆಲುಗು ಚಿತ್ರರಂಗವನ್ನ ಆಳುತ್ತಿದ್ದಾರೆ. ರಶ್ಮಿಕಾರಂತಹ ಸ್ಟ್ರಾಂಗೆಸ್ಟ್​​ ನಟಿಯರು ಬಂದ್ರು ಅವರಿಗಿಂತ ಗಟ್ಟಿಗಿತ್ತಿ.

Read Full Story

06:59 PM (IST) Mar 31

ಕ್ರಿಶ್ಚಿಯನ್‌ ಸಂಪ್ರದಾಯದಂತೆ ಪ್ರಕಾಶ್‌ ರಾಜ್‌ ತಾಯಿ ಅಂತಿಮ ಸಂಸ್ಕಾರ, ಬೆಂಗಳೂರಲ್ಲಿ ಅಂತ್ಯಕ್ರಿಯೆ ನಡೆದಿದ್ದೆಲ್ಲಿ?

ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ಹೈದರಾಬಾದ್‌ನಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತಂದು, ಚರ್ಚ್‌ನಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿ, ಆಡುಗೋಡಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.

Read Full Story

06:55 PM (IST) Mar 31

ಮಗು ಅಕಸ್ಮಾತ್​ ಏನಾದ್ರೂ ತಿಂದುಬಿಟ್ರೆ ತಕ್ಷಣ ಹೀಗೆ ಮಾಡಿ - ವಿಡಿಯೋ ಮೂಲಕ ವೈದ್ಯರ ಮಾಹಿತಿ

ಮೈಸೂರಿನಲ್ಲಿ ಪೂಜೆಗೆ ಇಟ್ಟಿದ್ದ ದಾಸವಾಳ ಹೂವನ್ನು ತಿಂದು ಮಗುವೊಂದು ಉಸಿರುಗಟ್ಟಿ ಮೃತಪಟ್ಟಿದೆ. ಈ ರೀತಿಯ ಘಟನೆಗಳು ನಡೆದಾಗ ಮಗುವಿನ ಜೀವ ಉಳಿಸಲು ತಕ್ಷಣವೇ ಮನೆಯಲ್ಲಿ ಯಾವ ಪ್ರಥಮ ಚಿಕಿತ್ಸೆ ನೀಡಬೇಕು ಎಂದು ವೈದ್ಯರು ವಿವರಿಸಿದ್ದಾರೆ.
Read Full Story

06:30 PM (IST) Mar 31

ಕುಚಿಕುಗಳಾದ ವಿಜಯ್​ ಸೇತುಪತಿ-ರಿಷಬ್ ಶೆಟ್ಟಿ - ಆತ್ಮೀಯರನ್ನ ಸಾಮಾಜಿಕ ಜಾಲತಾಣದಿಂದ ಅನ್‌ಫಾಲೋ!

ತನ್ನ ಸಾಮಾಜಿಕ ಜಾಲತಾಣದಲ್ಲಿ ಇದ್ದ ಬದ್ದ ಸ್ನೇಹಿತರನ್ನೆಲ್ಲಾ ಅನ್​ಫಾಲೋ ಮಾಡಿ ಬಿಟ್ರು. ಅರೆ ಇನ್ಮುಂದೆ ಶೆಟ್ರು ಒಬ್ಬೊಂಟಿಯಾ..? ರಿಷಬ್​ಗೆ ಯಾವ್ ಸ್ನೇಹಿತ ಬಳಗವೂ ಬೇಡವಾ ಅಂತೆಲ್ಲಾ ಚರ್ಚೆ ಆಗಿದ್ದು ಸುಳ್ಳಲ್ಲ.

Read Full Story

06:06 PM (IST) Mar 31

ಕಾಲಿಟ್ಟಲ್ಲೆಲ್ಲಾ ಧೂಳು.. ಕಟ್ಟಿದ್ದು ಹೇಗೆ ಕೋಟಿಗಳ ಕೋಟೆ..? ಇದು ರಿಯಲ್ ರಾಕಿ ಭಾಯ್ ರೋಚಕ ಕಥೆ!

ಕನ್ನಡದ ನಟ ರಾಕಿಂಗ್ ಸ್ಟಾರ್ ಯಶ್ ಈಗ ಜಗತ್ತೇ ಮೆಚ್ಚಿದ ರಾಕಿ ಭಾಯ್. ಯಶ್ ಸಿನಿಮಾ ಅಥವಾ ಜೀವನವನ್ನು ನೋಡುವುದಾದರೆ 'ಕೆಜಿಎಫ್‌'ಗೂ ಮೊದಲು ಮತ್ತು ಕೆಜಿಎಫ್ ನಂತರ ಅಂತ ಡಿವೈಡ್ ಮಾಡಬೇಕು.

Read Full Story

05:57 PM (IST) Mar 31

ಬೆಳ್ತಂಗಡಿ ದುರಂತ! ಚಲಿಸ್ತಿದ್ದ KSRTC ಬಸ್​ ಡೋರ್​ ಓಪನ್​ - ರಸ್ತೆಗೆ ಬಿದ್ದ ವಿದ್ಯಾರ್ಥಿನಿಯರು- CCTVಯಲ್ಲಿ ಸೆರೆ

ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ, ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಅಕ್ಕ-ತಂಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಭಯಾನಕ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Read Full Story

04:32 PM (IST) Mar 31

ಮೈಸೂರಿನಲ್ಲಿ ಮಂಗಳಮುಖಿಯರ ಮೇಲೆ ಕ್ರೂರ ಹಲ್ಲೆ - ಮೂವರು ಆರೋಪಿಗಳು ವಶಕ್ಕೆ

ಮುಸ್ಲಿಂ ಯುವಕರು ಕೇಳಿದ ಹಣವನ್ನು ಕೊಡಲು ನಿರಾಕರಿಸಿದ ಕೋಪಕ್ಕೆ ಮಂಗಳಮುಖಿಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾನುವಾರ ರಾತ್ರಿ 9.30 ರ ಸುಮಾರಿಗೆ ಘಟನೆ ನಡೆದಿದೆ.

Read Full Story

04:23 PM (IST) Mar 31

ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನಗಳು ಇನ್ಮುಂದೆ ದುಬಾರಿ - 100% ರೋಡ್ ಟ್ಯಾಕ್ಸ್ ವಿನಾಯಿತಿಗೆ ರಾಜ್ಯ ಸರ್ಕಾರ ಬ್ರೇಕ್!

ಕರ್ನಾಟಕ ಸರ್ಕಾರವು ಎಲೆಕ್ಟ್ರಿಕ್ ವಾಹನಗಳಿಗೆ ನೀಡಲಾಗುತ್ತಿದ್ದ ಸಂಪೂರ್ಣ ರಸ್ತೆ ತೆರಿಗೆ ವಿನಾಯಿತಿಯನ್ನು ಅಂತ್ಯಗೊಳಿಸಲು ನಿರ್ಧರಿಸಿದೆ. ಇನ್ನು ಮುಂದೆ, ವಾಹನದ ಬೆಲೆಗೆ ಅನುಗುಣವಾಗಿ 5% ರಿಂದ 10% ವರೆಗೆ ಜೀವಿತಾವಧಿ ತೆರಿಗೆ ವಿಧಿಸಲಾಗುವುದು. 

Read Full Story

04:01 PM (IST) Mar 31

IPL 2026 - ಪಂಜಾಬ್ ಕಿಂಗ್ಸ್ ಚಾಲೆಂಜ್ ಗೆಲ್ಲುತ್ತಾ ಗುಜರಾತ್ ಟೈಟಾನ್ಸ್?

ಮುಲ್ಲಾನ್‌ಪುರದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿವೆ. ರಾಷ್ಟ್ರೀಯ ತಂಡಕ್ಕೆ ಮರಳಲು ಯತ್ನಿಸುತ್ತಿರುವ ಹೊಸ ನಾಯಕರಾದ ಶ್ರೇಯಸ್ ಅಯ್ಯರ್ ಮತ್ತು ಶುಭಮನ್ ಗಿಲ್ ಮೇಲೆ ಎಲ್ಲರ ಕಣ್ಣಿದ್ದು, ಎರಡೂ ತಂಡಗಳು ಗೆಲುವಿನ ಆರಂಭದ ನಿರೀಕ್ಷೆಯಲ್ಲಿವೆ.
Read Full Story

03:07 PM (IST) Mar 31

'ಪ್ರತಿ ಕಚ್ಚುವಿಕೆಯಲ್ಲಿ ಆನಂದ..' ಕನ್ನಡ ಕುಲಗೆಡಿಸಿದ ಬ್ಯಾಟರ್‌ ಬ್ಯಾಕ್ಸ್‌ಗೆ ನೆಟ್ಟಿಗರ ಛೀಮಾರಿ

ಬೆಂಗಳೂರಿನಲ್ಲಿ 'ಬ್ಯಾಟರ್ ಬಾಕ್ಸ್' ಎಂಬ ಕಂಪನಿಯು ತನ್ನ ಜಾಹೀರಾತಿನಲ್ಲಿ "Enjoyment in every bite" ಎಂಬುದನ್ನು 'ಪ್ರತಿ ಕಚ್ಚುವಿಕೆಯಲ್ಲಿ ಆನಂದ' ಎಂದು ತಪ್ಪಾಗಿ ಭಾಷಾಂತರಿಸಿದೆ. ಈ ಭಾಷಾ ಪ್ರಮಾದವು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Read Full Story

01:41 PM (IST) Mar 31

ಐಪಿಎಲ್ ಪಂದ್ಯಗಳಿಗೆ 3, ಅಂತಾರಾಷ್ಟ್ರೀಯ ಪಂದ್ಯಗಳಿಗೆ 2, ಶಾಸಕರಿಗೆ ಉಚಿತ ಟಿಕೆಟ್ ನೀಡಲು ಕೆಎಸ್‌ಸಿಎ ಒಪ್ಪಿಗೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಭೆಯಲ್ಲಿ, ಐಪಿಎಲ್ ಪಂದ್ಯಗಳಿಗೆ ಶಾಸಕರಿಗೆ ಮೂರು ಮತ್ತು ಅಂತಾರಾಷ್ಟ್ರೀಯ ಪಂದ್ಯಗಳಿಗೆ ಎರಡು ಉಚಿತ ಟಿಕೆಟ್‌ ನೀಡಲು ಕೆಎಸ್‌ಸಿಎ ಒಪ್ಪಿಗೆ ಸೂಚಿಸಿದೆ. ಇದರೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣದ ಆಸನ ಸಾಮರ್ಥ್ಯ ಹೆಚ್ಚಳ, ಹೊಸ ಕ್ರೀಡಾಂಗಣದ ಬಗ್ಗೆಯೂ ಚರ್ಚೆ.

Read Full Story

12:53 PM (IST) Mar 31

'ನಿಮ್ಮಂಥ ಕಳ್ಳೆತ್ತು ದೇಶದಲ್ಲೇ ಇಲ್ಲ.." ಬಿಜೆಪಿ ಕಳ್ಳೆತ್ತು ಎಂಬ ಸಿಎಂ ಹೇಳಿಕೆಗೆ ಚಲವಾದಿ ನಾರಾಯಣಸ್ವಾಮಿ ತಿರುಗೇಟು

ಬಾಗಲಕೋಟೆ ಉಪಚುನಾವಣೆ ಪ್ರಚಾರದ ವೇಳೆ, ಬಿಜೆಪಿ ಮುಖಂಡ ಚಲುವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಸ್ತೆ ಗುಂಡಿ ಮುಚ್ಚಲು ಯೋಗ್ಯತೆ ಇಲ್ಲದ ಈ ಸರ್ಕಾರಕ್ಕೆ ಜನರೇ ಮಣ್ಣು ಮುಚ್ಚಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Read Full Story

12:51 PM (IST) Mar 31

Tumakuru - ಹೆಂಡ್ತಿಯೊಂದಿಗೆ ಅಕ್ರಮ ಸಂಬಂಧ ಶಂಕೆ - ತಮ್ಮನ ಹೊಟ್ಟೆಗೆ ಚಾಕು ಚುಚ್ಚಿದ ಅಣ್ಣ

 ಅಣ್ಣನೇ ತನ್ನ ತಮ್ಮನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಅಣ್ಣನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ನಡೆದ ಗಲಾಟೆಯಲ್ಲಿ ಈ ಕೃತ್ಯ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೆ ತಮ್ಮ ಮೃತಪಟ್ಟಿದ್ದಾನೆ. ಈ ಸಂಬಂಧ ಪೊಲೀಸರು ಅಣ್ಣ ಮತ್ತು ತಂದೆಯನ್ನು ಬಂಧಿಸಿದ್ದಾರೆ.

Read Full Story

12:41 PM (IST) Mar 31

2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿಕಾ - ಭಾವಿ ಪತಿಯ ಅಂಕಲ್​ ಎಂದು ಕರೆದು ಪೇಚಿಗೆ ಸಿಲುಕಿದ್ದ ಸ್ಟೋರಿ ಇಲ್ಲಿದೆ

ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸೆಪ್ಟೆಂಬರ್‌ನಲ್ಲಿ ಹೊಸ ಅತಿಥಿಯ ಆಗಮನವಾಗಲಿದ್ದು, ಈ ಸಂತಸದ ಸುದ್ದಿಯನ್ನು ಪ್ಯಾರಿಸ್​ನಿಂದ ಫೋಟೋ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ. 

Read Full Story

12:19 PM (IST) Mar 31

ಅನ್ಯಧರ್ಮಿಯರಿಂದ ತುಳುನಾಡು ದೈವಕ್ಕೆ ಅಪಮಾನ; ಮದುಮಗ ಅಬ್ದುಲ್‌ಗೆ ಕೊರಗಜ್ಜನ ವೇಷ ತೊಡಿಸಿ ಎಳೆದೊಯ್ದು ಅಪಹಾಸ್ಯ

ಕೊಡಗಿನ ಎಮ್ಮೆಮಾಡು ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ತುಳುನಾಡಿನ ಪವಿತ್ರ ದೈವವನ್ನು ಹೋಲುವ ರೀತಿಯಲ್ಲಿ ಮದುಮಗನಿಗೆ ವೇಷ ಹಾಕಿ ಅತಿರೇಕದ ವರ್ತನೆ ತೋರಿದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

 

Read Full Story

11:35 AM (IST) Mar 31

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಆಧಾರಿತ ಹಾಜರಾತಿ! 'ನಿರಂತರ' ಯೋಜನೆಗೆ ಸರ್ಕಾರ ₹2.83 ಕೋಟಿ ಅನುದಾನ

ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಎಐ ಆಧಾರಿತ ಮುಖ ಚಹರೆ ಮೂಲಕ ಹಾಜರಾತಿ ದಾಖಲಿಸುವ 'ನಿರಂತರ' ಕಾರ್ಯಕ್ರಮ ಅನುಷ್ಠಾನಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಗಾಗಿ SATS ತಂತ್ರಾಂಶದ ಉನ್ನತೀಕರಣ ಸೇರಿದಂತೆ ಒಟ್ಟು ₹2.83 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
Read Full Story

11:24 AM (IST) Mar 31

ಪೆಟ್ರೋಲ್ ಸುರಿದು ಹೊಲದಲ್ಲಿದ್ದ 37 ಕ್ವಿಂಟಲ್‌ ಮೆಣಸಿನಕಾಯಿ ರಾಶಿಗೆ ಕಿಡಿಗೇಡಿಗಳಿಂದ ಬೆಂಕಿ

ರೈತ ಮೌಲಪ್ಪ ನಾಯಕರ 37 ಕ್ವಿಂಟಲ್‌ಗೂ ಅಧಿಕ ಮೆಣಸಿನಕಾಯಿ ರಾಶಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಿಂದಾಗಿ ರೈತರಿಗೆ ಅಂದಾಜು ಏಳು ಲಕ್ಷ ರೂಪಾಯಿ ನಷ್ಟವಾಗಿದೆ.

Read Full Story

11:14 AM (IST) Mar 31

Photos - ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ ಸೆರೆ

ಶಿವಮೊಗ್ಗ ವಿಮಾನ ನಿಲ್ದಾಣದೊಳಗೆ ನುಗ್ಗಿ ಆತಂಕ ಮೂಡಿಸಿದ್ದ ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾದ ಘಟನೆ ಸೋಮವಾರ ನಡೆದಿದೆ. ಘಟನೆಯ ಫೋಟೋಗಳು ಇಲ್ಲಿವೆ.

 

Read Full Story

10:38 AM (IST) Mar 31

ಸಂಸದ ಸಾಗರ್ ಖಂಡ್ರೆ ಹೆಸರೇಳಿಕೊಂಡು ಭಗವಂತ ಖೂಬಾರಿಗೆ ಜೀವ ಬೆದರಿಕೆ! FIR

ಬೀದರ್‌ನ ಮಾಜಿ ಸಚಿವ ಭಗವಂತ ಖೂಬಾ ಅವರಿಗೆ ಫೇಸ್‌ಬುಕ್ ವಿಡಿಯೋ ಮೂಲಕ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ತುಕಾರಾಮ ದೊಡ್ಡಿ ಎಂಬ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹಾಲಿ ಸಂಸದ ಸಾಗರ್ ಖಂಡ್ರೆ ಹೆಸರಿನ ಖಾತೆಯಲ್ಲಿ ವಿಡಿಯೋ ಪೋಸ್ಟ್ ಆಗಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ.
Read Full Story

10:23 AM (IST) Mar 31

ಮಂಗಳೂರಿನ ಸುರತ್ಕಲ್‌ನಲ್ಲಿ ಅತ್ಯಾಧುನಿಕ Gen Z ಅಂಚೆ ಕಚೇರಿ ಉದ್ಘಾಟನೆ; ಏನಿದರ ವಿಶೇಷತೆ?

ಕರಾವಳಿ ಕರ್ನಾಟಕದ ಮೊದಲ ಅತ್ಯಾಧುನಿಕ ನ್ಯೂಜೆನ್ ಅಂಚೆ ಕಚೇರಿಯು ಮಂಗಳೂರಿನ ಸುರತ್ಕಲ್ ಎನ್‌ಐಟಿಕೆ ಕ್ಯಾಂಪಸ್‌ನಲ್ಲಿ ಉದ್ಘಾಟನೆಗೊಂಡಿದೆ. ಈ ಕಚೇರಿಯು ಹೈಸ್ಪೀಡ್ ವೈಫೈ, ಸ್ವಯಂ ಬುಕಿಂಗ್ ಕಿಯೋಸ್ಕ್, ಗೇಮ್ ಝೋನ್ ಮತ್ತು ಸೆಲ್ಫಿ ಪಾಯಿಂಟ್‌ನಂತಹ ಆಧುನಿಕ ಸೌಲಭ್ಯಗಳನ್ನು ಹೊಂದಿದೆ.
Read Full Story

10:09 AM (IST) Mar 31

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್‌ - ತಾನೇ ಬೆಳೆದ ನಾಲ್ಕು ಎಕರೆ ಹೂಕೋಸು ನಾಶಪಡಿಸಿದ ರೈತ!

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ರೈತರ ಬೆಳೆಗಳಿಗೂ ತಟ್ಟಿದೆ. ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಇಳಿಕೆ ಹಿನ್ನೆಲೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ರೈತ ಬಸವಣ್ಣ ಎಂಬುವವರು ತಾವೇ ಕಷ್ಟಪಟ್ಟು ಬೆಳೆದಿದ್ದ ಸಮೃದ್ಧ ಹೂಕೋಸಿನ ಬೆಳೆಯನ್ನು ನಾಶಪಡಿಸಿದ ಘಟನೆ ನಡೆದಿದೆ.

Read Full Story

08:26 AM (IST) Mar 31

SSLC ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡಿಂಗ್, ಕೈ ಸರ್ಕಾರಕ್ಕೆ ಜ್ಞಾನದ ಕೊರತೆ - ಹೊರಟ್ಟಿ ಕಿಡಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಅಂಕಗಳ ಬದಲು ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಖಂಡಿಸಿದ್ದಾರೆ. ಈ ನೀತಿಯು ತಜ್ಞರೊಂದಿಗೆ ಚರ್ಚಿಸದೆ ಜಾರಿಗೆ ತಂದಿದ್ದು,  ಇದು ಹಿಂದಿ ಸೇರಿದಂತೆ ಇತರೆ ತೃತೀಯ ಭಾಷೆಗಳಿಗೂ ಹೊಡೆತ ಬೀಳಲಿದೆ ಎಂದು ಆಕ್ರೋಶ.

Read Full Story

08:16 AM (IST) Mar 31

IPL 2026 - ನಿನ್ನೆಯ ರಾಜಸ್ಥಾನ ರಾಯಲ್ಸ್ - ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?

ಚೊಚ್ಚಲ ಆವೃತ್ತಿಯ ಚಾಂಪಿಯನ್‌ ರಾಜಸ್ಥಾನ ರಾಯಲ್ಸ್‌, ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ರಾಜಸ್ಥಾನವು 12.1 ಓವರ್‌ಗಳಲ್ಲೇ 128 ರನ್‌ಗಳ ಗುರಿಯನ್ನು ಸುಲಭವಾಗಿ ತಲುಪಿತು.
Read Full Story

08:13 AM (IST) Mar 31

ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ರಥೋತ್ಸವದಲ್ಲಿ ಗರುಡ ದರ್ಶನ; ಪುಳಕಿತರಾದ ಭಕ್ತರು

ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವದ ಸಮಯಕ್ಕೆ ಸರಿಯಾಗಿ ಬಂದ ಗರುಡ ಪಕ್ಷಿಯನ್ನು ಭಕ್ತರು ಕಣ್ತುಂಬಿಕೊಂಡರು.

Read Full Story

08:13 AM (IST) Mar 31

Karnataka Bypolls - ಇಂದಿನಿಂದ ಉಪಚುನಾವಣೆ ಅಖಾಡಕ್ಕೆ ಡಿಕೆಶಿ, ದಾವಣಗೆರೆ, ಬಾಗಲಕೋಟೆ ಪ್ರಚಾರದ ಜೊತೆಗೆ ಅಸ್ಸಾಂ ಗೆಲುವಿನ ಬಗ್ಗೆ ಹೇಳಿದ್ದೇನು?

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಕೇರಳ ಪ್ರಚಾರಕ್ಕೂ ತೆರಳಲಿರುವ ಅವರು, ಅಸ್ಸಾಂನಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮೂಲಕ ಮೂರನೇ ಎರಡರಷ್ಟು ಬಹುಮತದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Read Full Story

07:51 AM (IST) Mar 31

ಲೆಕ್ಕಕ್ಕಿಲ್ಲದ ಹಿಂದಿ ಪರೀಕ್ಷೆ ಇಂದು - ಫಲಿತಾಂಶದಲ್ಲಿ ಇಳಿಕೆ ಆತಂಕ, ವಿದ್ಯಾರ್ಥಿಗಳು ಹೇಳೋದೇನು?

ರಾಜ್ಯ ಶಿಕ್ಷಣ ಇಲಾಖೆಯು ಎಸ್ಸೆಸ್ಸೆಲ್ಸಿ ಹಿಂದಿ ವಿಷಯದ ಅಂಕಗಳನ್ನು ಒಟ್ಟು ಮೊತ್ತದಿಂದ ಕೈಬಿಟ್ಟು ಗ್ರೇಡ್ ನೀಡುವ ಹಠಾತ್ ನಿರ್ಧಾರ ಕೈಗೊಂಡಿದೆ. ಈ ಕ್ರಮದಿಂದ ವರ್ಷವಿಡೀ ಶ್ರಮಪಟ್ಟು ಓದಿದ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದು, ತಮ್ಮ ಭವಿಷ್ಯದ ಬಗ್ಗೆ ಚಿಂತಿತರಾಗಿ ಶಿಕ್ಷಣ ಸಚಿವರಿಗೆ ಪತ್ರ ಚಳವಳಿ ಶುರು

Read Full Story

07:51 AM (IST) Mar 31

ಗ್ಯಾಸ್‌ ‘ಕೃತಕ’ ಕೊರತೆ - ರಿಕ್ಷಾ ಚಾಲಕರಿಗೆ ಸಂಕಷ್ಟ

ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ರಾಜ್ಯದ ಹಲವೆಡೆ ಕೃತಕ ಗ್ಯಾಸ್ ಅಭಾವ ಸೃಷ್ಟಿಯಾಗಿದೆ. ಇದರಿಂದಾಗಿ ಆಟೋ ಚಾಲಕರು ಇಂಧನಕ್ಕಾಗಿ ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲುವಂತಾಗಿದೆ.

Read Full Story

07:42 AM (IST) Mar 31

Bengaluru - ಬ್ಯಾಂಕ್‌ ಮ್ಯಾನೇಜರ್‌ ಪತ್ನಿ ಮರ್ಡರ್‌ ಕೇಸ್‌ - ಚಾರ್ಜ್‌ಶೀಟ್‌ನಲ್ಲಿ ಟೆಕ್ಕಿ ಪತಿಯ ಕ್ರೌರ್ಯ ಬಯಲು

ಬೆಂಗಳೂರಿನಲ್ಲಿ ನಡೆದ ಬ್ಯಾಂಕ್ ಉದ್ಯೋಗಿ ಭುವನೇಶ್ವರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪತಿ ಸೆಲ್ವ ಬಾಲಮುರುಗನ್ ಸೇರಿದಂತೆ ಏಳು ಮಂದಿ ವಿರುದ್ಧ ಪೊಲೀಸರು 495 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 

Read Full Story

07:19 AM (IST) Mar 31

ಪೂಜೆ ಮಾಡಿ ಹೊಸ್ತಿಲು ಮೇಲೆ ಇಟ್ಟಿದ್ದ ಹೂ 6 ತಿಂಗಳ ಕಂದಮ್ಮನ ಉಸಿರಾಟ ನಿಲ್ಲಿಸ್ತು! ತಾಯಂದಿರೇ ಈ ತಪ್ಪು ಮಾಡ್ಬೇಡಿ!

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ, ಆಟವಾಡುತ್ತಿದ್ದ ಆರುವರೆ ತಿಂಗಳ ಮಗು ಮನೆಯ ಹೊಸಿಲಿಗೆ ಇಟ್ಟಿದ್ದ ಒಣ ದಾಸವಾಳ ಹೂವನ್ನು ನುಂಗಿ ಉಸಿರುಗಟ್ಟಿ ಮೃತಪಟ್ಟಿದೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.
Read Full Story

More Trending News