ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಪರ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಭಾಗಿ ಆಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಎಂಪಿಎಸ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕ ಆಗಿರುವ ಚಂದ್ರು ನುಗ್ಲಿ ಅವರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿಯೂ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಬಾಗಲಕೋಟೆ ತಾಲೂಕಿನ ಸುತಗುಂಡಾರ ಗ್ರಾಮದಲ್ಲಿ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ಸಿದ್ದರಾಮಯ್ಯ ನಡೆಸಿದ ಪ್ರಚಾರ ಸಭೆಯಲ್ಲಿ ಚಂದ್ರು ನುಗ್ಲಿ ಭಾಗಿಯಾಗಿದ್ದರು.
ಮಾಧ್ಯಮವರು ವಿಡಿಯೋ ಮಾಡುವುದನ್ನು ಕಂಡು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕಬ್ಬಿನ ಗದ್ದೆಯ ಕಡೆಗೆ ಹೋಗಿ ಮರೆಯಾದರು. ಮುಖ ಮುಚ್ಚಿಕೊಂಡು ಮಾಸ್ಕ್ ಹಾಕಿಕೊಂಡು ಹೋಗುವ ದೃಶ್ಯ ಸಹ ಕಂಡಿದೆ. ಸರ್ಕಾರಿ ನೌಕರರು ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುವುದು ನಿಷಿದ್ಧವಾಗಿದೆ.
10:38 AM (IST) Mar 31
10:23 AM (IST) Mar 31
10:09 AM (IST) Mar 31
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ರೈತರ ಬೆಳೆಗಳಿಗೂ ತಟ್ಟಿದೆ. ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಇಳಿಕೆ ಹಿನ್ನೆಲೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ರೈತ ಬಸವಣ್ಣ ಎಂಬುವವರು ತಾವೇ ಕಷ್ಟಪಟ್ಟು ಬೆಳೆದಿದ್ದ ಸಮೃದ್ಧ ಹೂಕೋಸಿನ ಬೆಳೆಯನ್ನು ನಾಶಪಡಿಸಿದ ಘಟನೆ ನಡೆದಿದೆ.
08:26 AM (IST) Mar 31
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಅಂಕಗಳ ಬದಲು ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಖಂಡಿಸಿದ್ದಾರೆ. ಈ ನೀತಿಯು ತಜ್ಞರೊಂದಿಗೆ ಚರ್ಚಿಸದೆ ಜಾರಿಗೆ ತಂದಿದ್ದು, ಇದು ಹಿಂದಿ ಸೇರಿದಂತೆ ಇತರೆ ತೃತೀಯ ಭಾಷೆಗಳಿಗೂ ಹೊಡೆತ ಬೀಳಲಿದೆ ಎಂದು ಆಕ್ರೋಶ.
08:16 AM (IST) Mar 31
08:13 AM (IST) Mar 31
ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವದ ಸಮಯಕ್ಕೆ ಸರಿಯಾಗಿ ಬಂದ ಗರುಡ ಪಕ್ಷಿಯನ್ನು ಭಕ್ತರು ಕಣ್ತುಂಬಿಕೊಂಡರು.
08:13 AM (IST) Mar 31
07:51 AM (IST) Mar 31
ರಾಜ್ಯ ಶಿಕ್ಷಣ ಇಲಾಖೆಯು ಎಸ್ಸೆಸ್ಸೆಲ್ಸಿ ಹಿಂದಿ ವಿಷಯದ ಅಂಕಗಳನ್ನು ಒಟ್ಟು ಮೊತ್ತದಿಂದ ಕೈಬಿಟ್ಟು ಗ್ರೇಡ್ ನೀಡುವ ಹಠಾತ್ ನಿರ್ಧಾರ ಕೈಗೊಂಡಿದೆ. ಈ ಕ್ರಮದಿಂದ ವರ್ಷವಿಡೀ ಶ್ರಮಪಟ್ಟು ಓದಿದ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದು, ತಮ್ಮ ಭವಿಷ್ಯದ ಬಗ್ಗೆ ಚಿಂತಿತರಾಗಿ ಶಿಕ್ಷಣ ಸಚಿವರಿಗೆ ಪತ್ರ ಚಳವಳಿ ಶುರು
07:51 AM (IST) Mar 31
ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಎಲ್ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ರಾಜ್ಯದ ಹಲವೆಡೆ ಕೃತಕ ಗ್ಯಾಸ್ ಅಭಾವ ಸೃಷ್ಟಿಯಾಗಿದೆ. ಇದರಿಂದಾಗಿ ಆಟೋ ಚಾಲಕರು ಇಂಧನಕ್ಕಾಗಿ ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲುವಂತಾಗಿದೆ.
07:42 AM (IST) Mar 31
ಬೆಂಗಳೂರಿನಲ್ಲಿ ನಡೆದ ಬ್ಯಾಂಕ್ ಉದ್ಯೋಗಿ ಭುವನೇಶ್ವರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪತಿ ಸೆಲ್ವ ಬಾಲಮುರುಗನ್ ಸೇರಿದಂತೆ ಏಳು ಮಂದಿ ವಿರುದ್ಧ ಪೊಲೀಸರು 495 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
07:19 AM (IST) Mar 31