ನಿರೀಕ್ಷೆಯಂತೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶನಿವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ರಾಜ್ಯಪಾಲರು ಸರ್ಕಾರ ರಚಿಸಲು ಅವರಿಗೆ ಆಹ್ವಾನ ನೀಡಿದ್ದು, ಜೂ.3ರ ಸಂಜೆ 4.05ಕ್ಕೆ ಲೋಕಭವನದಲ್ಲಿ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

09:03 AM (IST) May 31
08:44 AM (IST) May 31
ಚಿತ್ತಾಪುರದ ಶಾಸಕ ಪ್ರಿಯಾಂಕ್ ಖರ್ಗೆಯವರು ತಮ್ಮ ಖಡಕ್ ನಾಯಕತ್ವ, ದಕ್ಷ ಆಡಳಿತ ಹಾಗೂ ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆಳೆದ ಹೋರಾಟದಿಂದ ಗುರುತಿಸಿಕೊಂಡಿದ್ದಾರೆ. ಸಚಿವರಾಗಿ ಹಲವು ಜನಪರ ಯೋಜನೆ, ಅವರ ಸಾಮರ್ಥ್ಯ, ಪಕ್ಷ ನಿಷ್ಠೆಗಾಗಿ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಕೂಗು ಬಲವಾಗಿ ಕೇಳಿಬರುತ್ತಿದೆ.
07:50 AM (IST) May 31
07:39 AM (IST) May 31
ಬೆಂಗಳೂರಿನ ಬಸವನಗುಡಿಯಲ್ಲಿ ಬೆಳೆದ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ವಿಜಯಪುರದ ಸೈನಿಕ ಶಾಲೆಯಲ್ಲಿ ಶಿಕ್ಷಣ ಪಡೆದ ಇವರು, ಈ ಹಿಂದೆ ಐಎನ್ಎಸ್ ವಿಕ್ರಮಾದಿತ್ಯ ಕಮಾಂಡರ್ ಸೇರಿ ಹಲವು ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದಾರೆ.