ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಚಂಬಲ್ ಕಣಿವೆಯ ದರೋಡೆಕೋರರನ್ನು ಮೀರಿಸುವಂತೆ ಜನಸಾಮಾನ್ಯರ ಸುಲಿಗೆಗೆ ಮುಂದಾಗಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕಟಣೆ ನೀಡಿದ ಅವರು, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್, ಪಾರ್ಕಿಂಗ್ ಟ್ಯಾಕ್ಸ್, ನೀರಿನ ದರ ಹೆಚ್ಚಳ ಸೇರಿದಂತೆ ಹಲವಾರು ರೀತಿಯಲ್ಲಿ ಸಿದ್ದರಾಮಯ್ಯ ಸರ್ಕಾರ ‘ತೆರಿಗೆ ಭಯೋತ್ಪಾದನೆ’ ನಡೆಸುತ್ತಿದೆ ಎಂದು ಆರೋಪಿಸಿದರು. ಗಣೇಶ ಹಬ್ಬದ ಸಂಭ್ರಮದ ಮರುದಿನವೇ ದಸ್ತಾವೇಜುಗಳ ನೋಂದಣಿ ಹಾಗೂ ಮುದ್ರಾಂಕ ಶುಲ್ಕವನ್ನು ಶೇ.1ರಿಂದ 2ಕ್ಕೆ ಏರಿಸಲಾಗಿದ್ದು, ಸೋಮವಾರದಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ ಎಂದರು.

11:36 PM (IST) Aug 31
ಕಾರವಾರದಲ್ಲಿ ಊಟ ಮಾಡುವಾಗ ಅನ್ನದ ಅಗಳು ಗಂಟಲಿಗೆ ಸಿಲುಕಿ ಯುವಕ ಸಾವನ್ನಪ್ಪಿದ್ದಾನೆ. ಅಮಿತ್ ಮಾಳಸೇರ್ ಎಂಬ 38 ವರ್ಷದ ಯುವಕನಿಗೆ ಉಸಿರುಗಟ್ಟಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ. ಈ ಘಟನೆ ಕುಟುಂಬದಲ್ಲಿ ದುಃಖ ತಂದಿದೆ.
11:23 PM (IST) Aug 31
11:17 PM (IST) Aug 31
ಧರ್ಮಸ್ಥಳ ಬುರುಡೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ)ಗೆ ವಹಿಸುವಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.
10:32 PM (IST) Aug 31
10:23 PM (IST) Aug 31
Actor Chikkanna Marriage: ನಟ ಚಿಕ್ಕಣ್ಣ ಬದುಕು ಈಗ ಪಾವನಾಮಯವಂತೆ. ಹೌದು ಸಿಂಗಲ್ ಆಗಿದ್ದ ಚಿಕ್ಕಣ್ಣ ಈಗ ಫ್ಯಾಮಿಲಿ ಮ್ಯಾನ್ ಆಗೋಕೆ ರೆಡಿಯಾಗಿದ್ದಾರಂತೆ. ಹಾಗಾದರೆ ಹುಡುಗಿ ಯಾರು?
10:04 PM (IST) Aug 31
09:43 PM (IST) Aug 31
ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಈ ಆರೋಗ್ಯ ಕೇಂದ್ರವನ್ನು ನಿರ್ವಹಿಸಲಿದೆ. ಈ ಆರೋಗ್ಯ ಕೇಂದ್ರವು 'ಒಂದು ಜಗತ್ತು ಒಂದು ಕುಟುಂಬದ ಸಾಯಿ ಸ್ವಾಸ್ಥ್ಯ ಚಿಕಿತ್ಸಾಲಯ' ಸಮೂಹದ ಭಾಗವಾಗಲಿದೆ.
09:29 PM (IST) Aug 31
ರಾಜ್ಯ ಕಾಂಗ್ರೆಸ್ ಸರ್ಕಾರ ಚಂಬಲ್ ಕಣಿವೆಯ ದರೋಡೆಕೋರರನ್ನು ಮೀರಿಸುವಂತೆ ಜನಸಾಮಾನ್ಯರ ಸುಲಿಗೆಗೆ ಮುಂದಾಗಿದೆ ಎಂದು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
09:14 PM (IST) Aug 31
ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದನ್ನು ವಿರೋಧಿಸಿ ಹಲವು ಮಠಾಧೀಶರು ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೀಗ ರಾಜಣ್ಣ ಅವರನ್ನು ಪುನಃ ರಾಜ್ಯದ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಿದ್ಧತೆ ನಡೆಸಿದ್ದಾರೆ.
08:48 PM (IST) Aug 31
ಸಕ್ಕರೆ ಕಾರ್ಖಾನೆಯವರು ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಬೇಕು. ರೈತರ ಹಿತರಕ್ಷಣೆ ಮರೆಯಬಾರದು ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.
07:39 PM (IST) Aug 31
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನೃತ್ಯ ಮಾಡುತ್ತಿದ್ದ ಲಕ್ಷ್ಮೀಪತಿ (40) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಘಟನೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.
06:47 PM (IST) Aug 31
06:33 PM (IST) Aug 31
06:19 PM (IST) Aug 31
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಗಿರುವ ಬೆಳವಣಿಗೆ ಬಗ್ಗೆ ತಿಳಿದುಕೊಂಡು ಮಾಧ್ಯಮಕ್ಕೆ ತಿಳಿಸುತ್ತೇನೆ. ಚಾಮುಂಡಿ ಚಲೋ ಮಾಡುವ ಚಿಂತನೆಯಿದೆ. ರಾಜ್ಯಾದ್ಯಂತ ಎಲ್ಲಾ ಹಿಂದೂ ಸಂಘಟನೆಗಳು ಈ ಚಲೋದಲ್ಲಿ ಸೇರಲಿದ್ದಾರೆ.
06:12 PM (IST) Aug 31
05:57 PM (IST) Aug 31
ಅತಿವೃಷ್ಟಿಯಿಂದ ನಷ್ಟ ಅನುಭವಿಸಿದ ರೈತರಿಗೆ ಸರ್ಕಾರ ನಿಯಮಾನುಸಾರ ಪರಿಹಾರ ನೀಡುತ್ತದೆ. ಪರಿಹಾರ ಕಾರ್ಯಗಳಲ್ಲಿ ಯಾವುದೇ ಲೋಪದೋಷಗಳಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು.
05:49 PM (IST) Aug 31
ಡೇಟಿಂಗ್ಗೆ ಮಡಿಕೇರಿಯಲ್ಲಿ ಹುಡುಗಿಯರು, ಆಂಟಿಯರು ಸಿಗುತ್ತಾರೆ ಎಂದು ಇನ್ಸ್ಟಾಗ್ರಾಂನಲ್ಲಿ ಹಾಕಿ ಜನರನ್ನು ವಂಚಿಸುತ್ತಿದ್ದ ಯುವಕನನ್ನು ಮಡಿಕೇರಿ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
05:35 PM (IST) Aug 31
ಆಂಟಿಯರು ಬೇಕಾ, ಹುಡುಗಿಯರು ಬೇಕಾ ಎಂದು ವಿವಿಧೆಡೆ ಜಾಹೀರಾತು ನೀಡಿ ಹಲವರಿಗೆ ಟೋಪಿ ಹಾಕಿರುವ ಭೂಪನೊಬ್ಬ ಮಡಿಕೇರಿಯವರ ತಂಟೆಗೆ ಹೋಗಿ ಅರೆಸ್ಟ್ ಆಗಿದ್ದಾನೆ. ಈತನ ಕುತೂಹಲದ ಸ್ಟೋರಿ ಕೇಳಿ...
05:32 PM (IST) Aug 31
04:52 PM (IST) Aug 31
ಮೋಹನ್ ಭಾಗವತ್ ಅವರ 'ನಾವಿಬ್ಬರು ನಮಗೆ ಮೂವರು' ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೆಂಬಲ ವ್ಯಕ್ತಪಡಿಸಿದ್ದಾರೆ. ವೋಟ್ ಬಚಾವ್ ಆಂದೋಲನವನ್ನು ನುಸುಳುಕೋರರ ಬಚಾವ್ ಆಂದೋಲನ ಎಂದು ಕರೆದ ಜೋಶಿ, ಕಾಂಗ್ರೆಸ್ ಮತ್ತು ಮಹುವಾ ಮೈತ್ರಾ ವಿರುದ್ಧ ವಾಗ್ದಾಳಿ ನಡೆಸಿದರು.
04:51 PM (IST) Aug 31
ಬಿಗ್ ಬಾಸ್ ಸೀಸನ್ 11ರಲ್ಲಿ ಕಿಚ್ಚ ಸುದೀಪ್ ಗರಡಿಯಲ್ಲಿ ಪಳಗಿದ ನಟಿ ಅನುಷಾ ರೈ ಅವರು ಇದೀಗ ವಿಜಯಲಕ್ಷ್ಮೀ ದರ್ಶನ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ದರ್ಶನ್ ಕುಟುಂಬದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಕಾಮೆಂಟ್ ಬಂದಿರುವುದಕ್ಕೆ ಅನುಷಾ ರೈ ಖಂಡನೆ ವ್ಯಕ್ತಪಡಿಸಿದ್ದಾರೆ.
04:01 PM (IST) Aug 31
03:51 PM (IST) Aug 31
03:07 PM (IST) Aug 31
02:01 PM (IST) Aug 31
ಕಾಂಗ್ರೆಸ್ ಪಕ್ಷವು ಬೇರೆ ಧರ್ಮದವರ ಜನಸಂಖ್ಯಾ ಬೆಳವಣಿಗೆಯನ್ನು ಒಪ್ಪಿಕೊಂಡರೂ, ಹಿಂದೂಗಳಿಗೆ ಮಕ್ಕಳನ್ನು ಹೊಂದುವ ಬಗ್ಗೆ ಸಲಹೆ ನೀಡಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಟೀಕಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
01:35 PM (IST) Aug 31
01:14 PM (IST) Aug 31
ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡುತ್ತಿದೆ, ಚಾಮುಂಡೇಶ್ವರಿ ದೇವಾಲಯವನ್ನು ಟೂಲ್ಕಿಟ್ ಆಗಿ ಬಳಸುತ್ತಿದೆ ಎಂದು ಆರ್. ಅಶೋಕ್ ಆರೋಪಿಸಿದ್ದಾರೆ. ದಸರಾ ಉದ್ಘಾಟಕರಾಗಿ ಭಾನು ಮುಸ್ತಾಕ್ ಆಯ್ಕೆ ವಿಚಾರವಾಗಿಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
12:38 PM (IST) Aug 31
ವಿದ್ಯುತ್ ಕಳ್ಳತನ ಪ್ರಕರಣದ ವಿಚಾರಣೆಯನ್ನು ವಿಶೇಷ ನ್ಯಾಯಾಲಯ ಮಾತ್ರ ನಡೆಸಬೇಕೆಂದು ಹೈಕೋರ್ಟ್ ತೀರ್ಪು ನೀಡಿದೆ. ಬೀದರ್ ನಿವಾಸಿಗಳೊಬ್ಬರ ಅರ್ಜಿಯನ್ನು ವಜಾಗೊಳಿಸಿದೆ
12:37 PM (IST) Aug 31
11:27 AM (IST) Aug 31
Raichur Crime News: ರಾಯಚೂರಿನಲ್ಲಿ ಪತ್ನಿಯನ್ನು ಕೊ*ಲೆಗೈದ ಪತಿಯ ಬಂಧನ. ಮಂಚಕ್ಕೆ ಬರಲು ನಿರಾಕರಿಸಿದ್ದಕ್ಕೆ ಕುಡುಗೋಲಿನಿಂದ ಕೊ*ಲೆ. ಮೂರು ಮಕ್ಕಳ ತಾಯಿ ಬರ್ಬರವಾಗಿ ಕೊ*ಲೆಯಾದ ಘಟನೆ.
11:21 AM (IST) Aug 31
11:18 AM (IST) Aug 31
Actress Sudha Rani Daughter Nidhi Education: ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿ ಸುಧಾರಾಣಿಗೆ ಬಿಪಿ, ಶುಗರ್ ಏನೇ ಸಮಸ್ಯೆ ಬಂದರೂ ಅದಕ್ಕೆ ಅವರ ಮಗಳೇ ಕಾರಣವಂತೆ, ಬರುವ ಡಿಸೆಂಬರ್ಗೆ ದೇಶಾಂತರ ಹೋಗೋ ಯೋಚನೆಯೂ ಇದೆಯಂತೆ. ಯಾಕೆ ಎಂದು ಅವರೇ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
09:53 AM (IST) Aug 31
09:19 AM (IST) Aug 31
08:56 AM (IST) Aug 31
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದಕ್ಕೆ ಬಿಜೆಪಿ ಅನಗತ್ಯ ಅಪಪ್ರಚಾರ ಮಾಡುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿಂದೂಗಳಿಗೆ ಸೇರಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಬಿಜೆಪಿಯವರಿಗೆ ಚೇಷ್ಟೆ ಮಾಡದಿದ್ದರೆ ನಿದ್ದೆ ಬರಲ್ಲ ಎಂದು ಕಿಡಿ
08:37 AM (IST) Aug 31
08:21 AM (IST) Aug 31
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮಶಿ ಕಾಲಿಮಣಿ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ವಿವಾಹವಾದ ಆರೋಪದ ಮೇಲೆ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
08:11 AM (IST) Aug 31
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ನಿಗದಿತ ಅವಧಿಯೊಳಗೆ ಪ್ರಕಟಿಸದಿದ್ದರೆ ಹಾಲಿ ರೋಸ್ಟರ್ ಪ್ರಕಾರವೇ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಲಾಗುವುದು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮೌಖಿಕವಾಗಿ ಎಚ್ಚರಿಸಿದೆ.
07:56 AM (IST) Aug 31
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೈಸೂರು ಪ್ರವಾಸದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
07:50 AM (IST) Aug 31
ಲಕ್ಷಾಂತರ ಜನರ ತ್ಯಾಗ, ಬಲಿದಾನಗಳಿಂದ ಗಳಿಸಿದ ಸ್ವಾತಂತ್ರ್ಯ ಹೇಗೆ ಕಾಪಾಡಿಕೊಳ್ಳಬೇಕು. ಸ್ವತಂತ್ರ ಭಾರತವನ್ನು ಹೇಗೆ ಇಟ್ಟುಕೊಳ್ಳಬೇಕು ಎಂಬುದರ ಬಗ್ಗೆ ಇಂದಿನ ಯುವಜನತೆ ಯೋಚನೆ ಮಾಡುತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬೇಸರ ವ್ಯಕ್ತಪಡಿಸಿದರು.