LIVE NOW
Published : Apr 03, 2026, 05:43 AM ISTUpdated : Apr 03, 2026, 07:40 AM IST

State News Live: ಬ್ಯುಸಿನೆಸ್‌ ಕಾರಿಡಾರ್‌ ಯೋಜನೆಗೆ ಬಿಡಿಎದಿಂದ ಟೆಂಡರ್‌

ಸಾರಾಂಶ

ಬೆಂಗಳೂರು (ಏ.3): ಗ್ಯಾಸ್‌ಗಾಗಿ ರಾಜ್ಯದಲ್ಲಿ ಆಟೋ ಚಾಲಕರ ಯುದ್ಧ ಆರಂಭವಾಗಿದ್ದು, ಬಂಕ್‌ಗಳ ಮುಂದೆ ರಾತ್ರಿ ಇಡೀ ಜಾಗರಣೆ ಮಾಡುತ್ತಿದ್ದಾರೆ. ಬಹುತೇಕ ಕಡೆ ‘ನೋ ಸ್ಟಾಕ್‌’ ಬೋರ್ಡ್‌ ಬಿದ್ದಿದೆ. ಬೆಂಗಳೂರಲ್ಲಿ ಗ್ಯಾಸ್‌ಗಾಗಿ ಬಂಕ್‌ಗಳ ಮುಂದೆ ಕಿ.ಮೀ. ಗಟ್ಟಲೇ ಆಟೋಗಳ ಕ್ಯೂ ಕಾಣುತ್ತಿದೆ. ರಿಕ್ಷಾ ಡ್ರೈವರ್‌ಗಳಿಂದ ಪ್ರತಿಭಟನೆ ಕೂಡ ನಡೆದಿದ್ದು, ದುಡಿಮೆ ಮಾಡಲಾಗದೆ ಬಂಕ್‌ ಮುಂದೆ ಸಮಯ ದೂಡುವ ಪರಿಸ್ಥಿತಿ ನೆನೆದು ಕಣ್ಣೀರು ಹಾಕುತ್ತಿದ್ದಾರೆ.ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್‌ಲೈವ್‌ ಬ್ಲಾಗ್‌

 

07:40 AM (IST) Apr 03

ಬ್ಯುಸಿನೆಸ್‌ ಕಾರಿಡಾರ್‌ ಯೋಜನೆಗೆ ಬಿಡಿಎದಿಂದ ಟೆಂಡರ್‌

ಬಹುನಿರೀಕ್ಷಿತ ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ (ಬಿಬಿಸಿ- ಪಿಆರ್‌ಆರ್‌1) ಯೋಜನೆಗೆ ಸಂಬಂಧಿಸಿದಂತೆ ತುಮಕೂರು ರಸ್ತೆ ಮತ್ತು ನಗರದ ಹೊರ ವಲಯದಲ್ಲಿರುವ ಬಳ್ಳಾರಿ ರಸ್ತೆ ಸಂಪರ್ಕಿಸುವ 19.80 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಟೆಂಡರ್‌

Read Full Story

07:36 AM (IST) Apr 03

ಕಲಬುರಗಿಯಲ್ಲಿ ಮಾಜಿ ಸಚಿವರ ಅಳಿಯನ ಬರ್ಬರ ಹ*ತ್ಯೆ - ಕಚೇರಿಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿದ ದುಷ್ಕರ್ಮಿಗಳು!

ಕಲಬುರಗಿಯಲ್ಲಿ ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರ ಸಂಬಂಧಿ, ಉದ್ಯಮಿ ಅನಿಲ್ ರಾಠೋಡ್ ಅವರನ್ನು ಅವರ ಕಚೇರಿಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಹಣಕಾಸಿನ ವೈಷಮ್ಯವೇ ಹತ್ಯೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
Read Full Story

06:54 AM (IST) Apr 03

ಮಾಧ್ಯಮಗಳ ವಿರುದ್ಧ ಪರಪ್ಪನ ಅಗ್ರಹಾರ ಜೈಲಿನಿಂದಲೇ ಸೇಡು ತೀರಿಸಿಕೊಳ್ಳುವ ಯತ್ನದಲ್ಲಿ ದರ್ಶನ್‌!

ರೇಣುಕಾಸ್ವಾಮಿ ಕೊಲೆ ಪ್ರಕರಣದ ವರದಿಗಳನ್ನು ಪ್ರಸಾರ ಮಾಡುತ್ತಿರುವ ಮಾಧ್ಯಮಗಳ ವಿರುದ್ಧ ನಟ ದರ್ಶನ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿ, ಕೇಂದ್ರ ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಅವರು ಮನವಿ ಮಾಡಿದ್ದಾರೆ.

Read Full Story

06:38 AM (IST) Apr 03

ಸಂತ್ರಸ್ತೆ ಜತೆ ಮದುವೆಯಾಗಲು ಆರೋಪಿಗೆ 23 ದಿನ ಜಾಮೀನು!

ವಿವಾಹವಾಗುವುದಾಗಿ ಯುವತಿಗೆ ಮೋಸ ಮಾಡಿದ್ದ ವ್ಯಕ್ತಿಗೆ ಅದೇ ಹುಡುಗಿಯ ಜೊತೆ ಮದುವೆಯಾಗಲು ಕರ್ನಾಟಕ ಹೈಕೋರ್ಟ್‌ 23 ದಿನ ಜಾಮೀನು ನೀಡಿದೆ. ಕೇಸ್‌ ದಾಖಲು ಬಳಿಕ ಇಬ್ಬರ ಮಧ್ಯೆ ರಾಜಿ ಸಂಧಾನ ನಡೆದಿತ್ತು.

 

Read Full Story

06:23 AM (IST) Apr 03

ಬೆಂಗಳೂರು ಕರಗದಲ್ಲಿ ಇನ್ಸ್‌ಪೆಕ್ಟರ್‌ ವರ್ಗಾವಣೆ ಕೋರಿ ಹರಕೆ ಬಾಳೆಹಣ್ಣು ಎಸೆದ ಪೊಲೀಸ್‌ ಸಿಬ್ಬಂದಿ!

ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವವು ವೈಭವದಿಂದ ಸಂಪನ್ನಗೊಂಡಿದ್ದು, ಈ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ವರ್ಗಾವಣೆ ವಿಘ್ನ ನಿವಾರಣೆಗೆ ಹರಕೆ ಹೊತ್ತಿರುವುದು ವೈರಲ್ ಆಗಿದೆ. ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿ ಕರಗವು ಮಸ್ತಾನ್ ಸಾಬ್ ದರ್ಗಾಕ್ಕೆ ಭೇಟಿ ನೀಡಿತು.

Read Full Story

06:17 AM (IST) Apr 03

ಚಂದ್ರನತ್ತ 4 ಗಗನಯಾನಿಗಳ ಐತಿಹಾಸಿಕ ಪ್ರಯಾಣ ಆರಂಭ

50 ವರ್ಷಗಳ ಬಳಿಕ ಚಂದ್ರನ ಬಳಿಗೆ ಹೋಗುವ ಹುಮ್ಮಸ್ಸಿನಲ್ಲಿ ನಾಲ್ವರು ಗಗನಯಾನಿಗಳನ್ನು ಹೊತ್ತ ಓರಿಯನ್‌ ಕ್ಯಾಪ್ಸ್ಯೂಲ್‌ ಜತೆ 33 ಅಡಿಯ ಎಸ್‌ಎಲ್‌ಎಸ್‌ ರಾಕೆಟ್‌ ಗುರುವಾರ ಮುಂಜಾನೆ 4.05ಕ್ಕೆ(ಭಾರತೀಯ ಕಾಲಮಾನ) ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ

Read Full Story

06:09 AM (IST) Apr 03

ಲೋಕಸಭಾ ಸ್ಥಾನ ಹೆಚ್ಚಳ, ಮಹಿಳಾ ಮೀಸಲಿಗೆ 3 ದಿನ ಅಧಿವೇಶನ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಕಾನೂನು ಆದಷ್ಟು ಶೀಘ್ರ ಜಾರಿಗೊಳಿಸಲುದ್ದೇಶಿಸಿರುವ ಕೇಂದ್ರ ಸರ್ಕಾರವು ಏ.16ರಿಂದ ಮೂರು ದಿನಗಳ ಕಾಲ ನಡೆಸಲುದ್ದೇಶಿಸಿದೆ

Read Full Story

06:06 AM (IST) Apr 03

ಜಯನಗರ ವಿಧಾನಸಭಾ ಕ್ಷೇತ್ರದ ಮತಗಳ ಮರುಎಣಿಕೆ ಪ್ರಕ್ರಿಯೆ ಕಾನೂನುಬಾಹಿರ - ಸೌಮ್ಯರೆಡ್ಡಿ

ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಸಂಪೂರ್ಣವಾಗಿ ಕಾನೂನುಬಾಹಿರವಾಗಿತ್ತು ಎಂದು ಪರಾಜಿತ ಅಭ್ಯರ್ಥಿ ಸೌಮ್ಯರೆಡ್ಡಿ ಹೈಕೋರ್ಟ್‌ನಲ್ಲಿ ದೂರಿದ್ದಾರೆ. ಸಿ.ಕೆ. ರಾಮಮೂರ್ತಿ ಅವರ 16 ಮತಗಳ ಗೆಲುವಿಗೆ ಕಾರಣವಾದ ಮರು ಎಣಿಕೆ ಪ್ರಕ್ರಿಯೆಯನ್ನು ಪ್ರಶ್ನಿಸಿ ಅವರು ಅರ್ಜಿಸಲ್ಲಿಸಿದ್ದಾರೆ.

Read Full Story

05:43 AM (IST) Apr 03

ಗ್ಯಾಸ್‌ಗಾಗಿ ಆಟೋ ಚಾಲಕರ ಯುದ್ಧ,ಬಂಕ್‌ಗಳ ಮುಂದೆ ರಾತ್ರಿ ಇಡೀ ಜಾಗರಣೆ ।

ಮಧ್ಯಪ್ರಾಚ್ಯ ಯುದ್ಧದ ಹಿನ್ನೆಲೆಯಲ್ಲಿ ಆಟೋ ಗ್ಯಾಸ್‌ಗಾಗಿ ಚಾಲಕರ ಪರದಾಟ ಗುರುವಾರವೂ ಮುಂದುವರೆದಿದ್ದು ರಾತ್ರಿಯೆಲ್ಲಾ ಸರದಿ ಸಾಲಿನಲ್ಲಿ ನಿಂತರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಇದರಿಂದ ಸಿಟ್ಟಿಗೆದ್ದ ಚಾಲಕರು ಕಣ್ಣೀರು ಹಾಕುತ್ತಾ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾರವಾರದಲ್ಲಿ ಇರುವ ಏಕೈಕ ಬಂಕ್‌ ಬಂದ್‌ ಆಗಿದ್ದರಿಂದ ಆಕ್ರೋಶಗೊಂಡ ಆಟೋ ಚಾಲಕರು, ಗುರುವಾರ ಬೃಹತ್‌ ಪ್ರತಿಭಟನೆ ನಡೆಸಿದರು. ಬಳ್ಳಾರಿಯಲ್ಲಿ 7 ಸಾವಿರ ಆಟೋಗಳು ಮೂಲೆ ಸೇರಿದ್ದು, ಚಾಲಕರು ಇತರ ಕೆಲಸಗಳತ್ತ ಮುಖ ಮಾಡುತ್ತಿದ್ದಾರೆ.

 

Read Full Story

More Trending News