ಬೆಂಗಳೂರು (ಏ.3): ಗ್ಯಾಸ್ಗಾಗಿ ರಾಜ್ಯದಲ್ಲಿ ಆಟೋ ಚಾಲಕರ ಯುದ್ಧ ಆರಂಭವಾಗಿದ್ದು, ಬಂಕ್ಗಳ ಮುಂದೆ ರಾತ್ರಿ ಇಡೀ ಜಾಗರಣೆ ಮಾಡುತ್ತಿದ್ದಾರೆ. ಬಹುತೇಕ ಕಡೆ ‘ನೋ ಸ್ಟಾಕ್’ ಬೋರ್ಡ್ ಬಿದ್ದಿದೆ. ಬೆಂಗಳೂರಲ್ಲಿ ಗ್ಯಾಸ್ಗಾಗಿ ಬಂಕ್ಗಳ ಮುಂದೆ ಕಿ.ಮೀ. ಗಟ್ಟಲೇ ಆಟೋಗಳ ಕ್ಯೂ ಕಾಣುತ್ತಿದೆ. ರಿಕ್ಷಾ ಡ್ರೈವರ್ಗಳಿಂದ ಪ್ರತಿಭಟನೆ ಕೂಡ ನಡೆದಿದ್ದು, ದುಡಿಮೆ ಮಾಡಲಾಗದೆ ಬಂಕ್ ಮುಂದೆ ಸಮಯ ದೂಡುವ ಪರಿಸ್ಥಿತಿ ನೆನೆದು ಕಣ್ಣೀರು ಹಾಕುತ್ತಿದ್ದಾರೆ.ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್ಲೈವ್ ಬ್ಲಾಗ್
09:55 PM (IST) Apr 03
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿಗರಿಗೆ ಯಾವುದೇ ನೈತಿಕ ಹಕ್ಕಿಲ್ಲ. ರಾಹುಲ್ ಗಾಂಧಿ ಆದಿಯಾಗಿ ಕಾಂಗ್ರೆಸ್ಸಿಗರೆಲ್ಲರೂ ಮೋದಿ ಕಾಲಿನ ಧೂಳು ಆಗಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು.
09:35 PM (IST) Apr 03
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರಿಗೆ ಧೈರ್ಯವಿದ್ದರೆ, ಶಿಕ್ಷಣದಲ್ಲಿ ಮತ್ತೆ ಹಿಂದಿಗೆ ಮಹತ್ವ ನೀಡುತ್ತೇವೆ ಎಂದು ಘೋಷಿಸಲಿ ಎಂದು ಸಚಿವ ಮಧು ಬಂಗಾರಪ್ಪ ಸವಾಲು ಹಾಕಿದ್ದಾರೆ.
08:49 PM (IST) Apr 03
ಬಾಗಲಕೋಟೆಯ ಐಹೊಳೆ ಗ್ರಾಮದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಭಾಷಣ ಮಾಡುವಾಗ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದರು. ಬೈಕ್ ರೇಸ್ ಮತ್ತು ಕೇಕೆ ಹಾಕಿ ಗದ್ದಲ ಸೃಷ್ಟಿಸಿದ್ದರಿಂದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.
08:34 PM (IST) Apr 03
ನಮ್ಮ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಕ್ಷೇತ್ರವೂ ಬಿಜೆಪಿಯ ಐತಿಹಾಸಿಕ ಗೆಲುವು ಸಾಕ್ಷಿಯಾಗುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
08:08 PM (IST) Apr 03
ಬೇಸಿಗೆಯಲ್ಲಿ ತೆಳುವಾದ, ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸುವುದು ಉತ್ತಮ. ಕಡು ಬಣ್ಣದ ಬಟ್ಟೆಗಳನ್ನು ಬಿಟ್ಟು, ತಿಳಿ ಬಣ್ಣದ ಬಟ್ಟೆಗಳನ್ನು ಧರಿಸಿ. ಆಹಾರದಲ್ಲಿ, ಸುಲಭವಾಗಿ ಜೀರ್ಣವಾಗುವ ಮತ್ತು ಹೆಚ್ಚು ನೀರಿನಂಶವಿರುವ ಆಹಾರಗಳನ್ನು ಸೇರಿಸಿಕೊಳ್ಳಬೇಕು.
07:43 PM (IST) Apr 03
ಗೆಲುವಿಗೆ ಚಲಾಯಿತ ಮತಗಳ ಪೈಕಿ ಶೇ.50ರಷ್ಟನ್ನು ನಿಗದಿಪಡಿಸಬೇಕು. ಮತದಾರರಿಗೆ ಚುನಾಯಿತ ಪ್ರತಿನಿಧಿಗಳನ್ನು ವಾಪಸ್ ಕರೆಸಿಕೊಳ್ಳುವ ಅಧಿಕಾರ ಇರಬೇಕು ಎಂದು ಖ್ಯಾತ ಚಲನಚಿತ್ರ ನಟ ಡಾ.ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟರು.
07:29 PM (IST) Apr 03
ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಮತ್ತು ಸುನಿ ಮದುವೆ ನಡೆದಿದೆ. ಈ ನಡುವೆ ಸುನಿ ಪಾತ್ರಧಾರಿ ಯಶ್ವಂತ್, ತಮ್ಮ ಮತ್ತು ಮಲ್ಲಿ ಪಾತ್ರಧಾರಿ ಅನ್ವಿತಾ ನಡುವಿನ ವಯಸ್ಸಿನ ಅಂತರದ ಬಗ್ಗೆ ಹಾಗೂ ತಮಗೆ ಬಂದ ನೆಗೆಟಿವ್ ಕಮೆಂಟ್ಗಳ ಬಗ್ಗೆ ಮಾತನಾಡಿದ್ದಾರೆ.
07:27 PM (IST) Apr 03
ಸಿಎಂ, ಡಿಸಿಎಂ ಮಾತು ಕೇಳಿದರೆ ದೇಶಕ್ಕೆ ಗಂಡಾಂತರ ಬಂದಂತಾಗಿದೆ. ಬಾಗಲಕೋಟೆ ಉಪಚುನಾವಣೆಯಲ್ಲಿ ಸಿಎಂ, ಡಿಸಿಎಂ ಅವರ ಮಾತು ಕೇಳಿದರೆ ದೇಶಕ್ಕೆ ಗಂಡಾಂತರ ಬಂದಂತಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
07:14 PM (IST) Apr 03
Natural Snake Repellent Plant: ಮನೆಯ ಸುತ್ತಮುತ್ತ ಹಾವುಗಳು ಓಡಾಡುತ್ತಿದ್ದರೆ ಅಥವಾ ಮನೆಗೆ ನುಗ್ಗಿದರೆ, ಆ ಭಯದಲ್ಲೇ ಮನೆಯಲ್ಲಿ ಇರಲು ಹೆದರಿಕೆಯಾಗುತ್ತದೆ. ಬೇಸಿಗೆ ಕಾಲದಲ್ಲಿ ಈ ಹಾವಳಿ ಇನ್ನಷ್ಟು ಹೆಚ್ಚಾಗಿರುತ್ತದೆ. ಹಾಗಾದರೆ ಏನು ಮಾಡಬಹುದು? ಇಲ್ಲಿದೆ ಟಿಪ್ಸ್.
06:48 PM (IST) Apr 03
ಇನ್ಸ್ಟಾಗ್ರಾಮ್ ರೀಲ್ಸ್ ಮೂಲಕ ವೀಕ್ಷಕರ ಗಮನ ಸೆಳೆದಿದ್ದ ಲಕ್ಷ್ಮೀ ಅಜ್ಜಿ ಅವರು ನಿಧನರಾಗಿದ್ದಾರೆ. ಇವರು ಯಲ್ಲಾಪುರದ ಮಂಚಿಕೇರಿಯವರು. ಡ್ರಾಮಾ ಜೂನಿಯರ್ ಶೋನಲ್ಲಿ ಭಾಗವಹಿಸಿದ್ದ ಸೂರಜ್ ಜೊತೆ ಲಕ್ಷ್ಮೀ ನಾಯ್ಕ್ ರೀಲ್ಸ್ ಮಾಡುತ್ತಿದ್ದರು. ಈಗ ಸೂರಜ್ ಅವರು ಅಜ್ಜಿಯ ಕೊನೇ ವಿಡಿಯೋ ಹಂಚಿಕೊಂಡಿದ್ದಾರೆ.
05:45 PM (IST) Apr 03
Actor Ramesh Bhat: ಯಜಮಾನ ಧಾರಾವಾಹಿ ಮೂಲಕ ಇತ್ತೀಚೆಗೆ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದ, ಖ್ಯಾತ ಸಿನಿಮಾ ನಟ ರಮೇಶ್ ಭಟ್ ಅವರು ಆಂಬ್ರಾಯಡರಿ ಫ್ಯಾಕ್ಟರಿ ಕಟ್ಟಿದ್ದು, ಆರು ಕೋಟಿ ರೂಪಾಯಿ ಕಳೆದುಕೊಂಡ ಕಥೆಯನ್ನು Beyond Limits ಯುಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.
05:40 PM (IST) Apr 03
ಬಿಗ್ಬಾಸ್ 12ರ ಕ್ಯೂಟ್ ಜೋಡಿ ಸೂರಜ್ ಸಿಂಗ್ ಮತ್ತು ರಾಶಿಕಾ ಶೆಟ್ಟಿ ತಮ್ಮಿಬ್ಬರ ನಡುವೆ ಸ್ನೇಹವಷ್ಟೇ ಇದೆ ಎಂದು ಹೇಳುತ್ತಾ ಬಂದಿದ್ದಾರೆ. ಆದರೆ, 'ಗಿಚ್ಚಿ ಗಿಲಿಗಿಲಿ ಜ್ಯೂನಿಯರ್' ಶೋನಲ್ಲಿ ನಿರೂಪಕಿ ಅನುಪಮಾ ಗೌಡ ಕೇಳಿದ ಪ್ರಶ್ನೆಯೊಂದಕ್ಕೆ ಇಬ್ಬರೂ ಉತ್ತರಿಸಲಾಗದೆ ಮೌನಕ್ಕೆ ಶರಣಾಗಿದ್ದಾರೆ.
05:13 PM (IST) Apr 03
ಮಡಿಕೇರಿಯ ಭಾಗಮಂಡಲದಲ್ಲಿ ನಡೆಯೋ ರೋಚಕ ಕಥೆಯನ್ನು ನೋಡಿ ತಲ್ಲೀನರಾಗಬೇಕು. ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡು, ಹೈದ್ರಾಬಾದ್ನಲ್ಲಿಯೂ ಪೀಟರ್ ಚಿತ್ರದ ಪ್ರಚಾರ ಕೆಲಸ ನಡೆಯುತ್ತಿದೆ.
05:08 PM (IST) Apr 03
ಅಮೃತಧಾರೆ ಧಾರಾವಾಹಿಯ ಮಲ್ಲಿ ಪಾತ್ರಧಾರಿ ಅನ್ವಿತಾ ಸಾಗರ್ ಅವರ ತೆರೆಯ ಮೇಲಿನ ಮತ್ತು ನಿಜ ಜೀವನದ ನಡುವಿನ ವ್ಯತ್ಯಾಸವನ್ನು ಈ ಲೇಖನ ವಿವರಿಸುತ್ತದೆ. ಧಾರಾವಾಹಿಯಲ್ಲಿ ಮಧುಚಂದ್ರದ ಸಂಭ್ರಮದಲ್ಲಿದ್ದರೆ, ನಿಜ ಜೀವನದಲ್ಲಿ ಅವರು ತಮ್ಮ ಪ್ರೀತಿಯಲ್ಲಿನ ನೋವು ಮತ್ತು ಬ್ರೇಕಪ್ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ
04:53 PM (IST) Apr 03
ನಟಿ ಸಪ್ತಮಿ ಗೌಡ ಅವರು, ನಟಿಯರ ಫೋಟೊ ಮತ್ತು ವಿಡಿಯೋಗಳನ್ನು ಅಸಭ್ಯವಾಗಿ ಚಿತ್ರೀಕರಿಸುವವರ ವಿರುದ್ಧ ಗರಂ ಆಗಿದ್ದಾರೆ. ಕಾಂಟ್ರವರ್ಸಿ ಮಾಡುವವರ ವಿರುದ್ಧ ಯುದ್ಧಕ್ಕೆ ನಿಂತರೆ ಅವರಿಗೆ ನರಕ ತೋರಿಸುವುದಾಗಿ ಸಂದರ್ಶನವೊಂದರಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
04:40 PM (IST) Apr 03
ಒಂದು ಚಿತ್ರರಂಗ ಉಳಿಯುವುದು ಕತೆಯಿಂದ, ಬೆಳೆಯುವುದು ಸ್ಟಾರ್ಗಳಿಂದ. ಆದರೆ ಸದ್ಯ ಕತೆಗಾರರಿಗೂ ಮರ್ಯಾದೆ ಇಲ್ಲ, ಸ್ಟಾರ್ಗಳಿಗೆ ಅಂಥಾ ದೊಡ್ಡ ಹುಮ್ಮಸ್ಸು ಇದ್ದಂತೆ ಕಾಣಿಸುತ್ತಿಲ್ಲ. ಅದಕ್ಕೆ ಯಾರು ಕಾರಣ, ಏನು ಕಾರಣ, ಪರಿಹಾರ ಏನು?
04:25 PM (IST) Apr 03
03:54 PM (IST) Apr 03
03:44 PM (IST) Apr 03
Kannada Youtuber Sam Sameer GF Neha Gupta: ಕನ್ನಡ ಯುಟ್ಯೂಬರ್ ಸ್ಯಾಮ್ ಸಮೀರ್, ಈಗಾಗಲೇ ಮದುವೆ ಆಗೋಕೆ ಹುಡುಗಿ ಫಿಕ್ಸ್ ಮಾಡಿಕೊಂಡಿದ್ದಾರೆ. 1 ವಾರದ ಹಿಂದೆ ಇವರು ಹುಡುಗಿ ನೋಡೋ ಶಾಸ್ತ್ರ ಮಾಡಿ, ಮದುವೆ ಫಿಕ್ಸ್ ಮಾಡಿಕೊಂಡಿದ್ದಾರೆ. ನೇಹಾ ಗುಪ್ತ ಸಾಧನೆ ಅನೇಕರಿಗೆ ಗೊತ್ತಿಲ್ಲ.
03:34 PM (IST) Apr 03
01:58 PM (IST) Apr 03
01:52 PM (IST) Apr 03
ಬಿಗ್ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿ ಮತ್ತು 'ಮಜಾ ಭಾರತ' ಖ್ಯಾತಿಯ ರಾಘವೇಂದ್ರ ಅವರು 'ಸೇವಂತಿಯೇ ಸೇವಂತಿಯೇ' ಹಾಡಿಗೆ ಜೊತೆಯಾಗಿ ಡಾನ್ಸ್ ಮಾಡಿದ್ದಾರೆ. ಸ್ತ್ರೀವೇಷದಿಂದಲೇ ಪರಿಚಿತರಾದ ರಾಘವೇಂದ್ರ ಅವರು ತಮ್ಮ ನಿಜ ವೇಷದಲ್ಲಿ ಕಾಣಿಸಿಕೊಂಡಿದ್ದು, ಇವರಿಬ್ಬರ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ
01:29 PM (IST) Apr 03
01:20 PM (IST) Apr 03
01:00 PM (IST) Apr 03
12:25 PM (IST) Apr 03
11:37 AM (IST) Apr 03
ಭಾರತೀಯ ನೌಕಾಪಡೆಯು ಸ್ವದೇಶಿ ನಿರ್ಮಿತ ಅಣ್ವಸ್ತ್ರ ಚಾಲಿತ ಜಲಾಂತರ್ಗಾಮಿ ಐಎನ್ಎಸ್ ಅರಿಧಮನ್ ಮತ್ತು ಅತ್ಯಾಧುನಿಕ ಯುದ್ಧನೌಕೆ 'ತಾರಾಗಿರಿ'ಯನ್ನು ಶೀಘ್ರದಲ್ಲೇ ಸೇರ್ಪಡೆಗೊಳಿಸಲಿದೆ. ಈ ಸೇರ್ಪಡೆಯು ಭಾರತದ ನ್ಯೂಕ್ಲಿಯರ್ ಟ್ರೈಡ್ ಸಾಮರ್ಥ್ಯವನ್ನು ಬಲಪಡಿಸುವುದೆ.
11:18 AM (IST) Apr 03
10:29 AM (IST) Apr 03
09:55 AM (IST) Apr 03
Hombale Films: ನಟ ರಿಷಬ್ ಶೆಟ್ಟಿ ಅವರು ಆರಂಭದಲ್ಲಿ ರಾಜ್ ಬಿ ಶೆಟ್ಟಿ, ರುಕ್ಮಿಣಿ ವಸಂತ್ ಅವರನ್ನು ಇನ್ಸ್ಟಾಗ್ರಾಮ್ನಲ್ಲಿ ಅನ್ಫಾಲೋ ಮಾಡಿದ್ದರು. ಆ ಬಳಿಕ ಎಲ್ಲ ಸ್ನೇಹಿತರು, ಹೊಂಬಾಳೆ ಫಿಲ್ಮ್ಸ್ ಗ್ಯಾಂಗ್ನ್ನು ಅನ್ಫಾಲೋ ಮಾಡಿದ್ದರು. ಈಗ ಈ ಬಗ್ಗೆ ಪ್ರಮೋದ್ ಶೆಟ್ಟಿ ಮಾತನಾಡಿದ್ದಾರೆ.
09:33 AM (IST) Apr 03
ಮಧ್ಯಪ್ರಾಚ್ಯ ಯುದ್ಧದಿಂದಾಗಿ ಪೆಟ್ರೋಲಿಯಂ ಉಪ ಉತ್ಪನ್ನಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಸಿರಿಂಜ್ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳ ಕೊರತೆ ಉಂಟಾಗಿದೆ. ಇದರಿಂದ ಹುಬ್ಬಳ್ಳಿಯ ಪ್ರಮುಖ ಸಿರಿಂಜ್ ತಯಾರಿಕಾ ಘಟಕ ಸೇರಿದಂತೆ ದೇಶದ ಹಲವೆಡೆ ಉತ್ಪಾದನೆ ತೀವ್ರವಾಗಿ ಕುಂಠಿತಗೊಂಡಿದೆ.
09:15 AM (IST) Apr 03
09:06 AM (IST) Apr 03
07:40 AM (IST) Apr 03
ಬಹುನಿರೀಕ್ಷಿತ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (ಬಿಬಿಸಿ- ಪಿಆರ್ಆರ್1) ಯೋಜನೆಗೆ ಸಂಬಂಧಿಸಿದಂತೆ ತುಮಕೂರು ರಸ್ತೆ ಮತ್ತು ನಗರದ ಹೊರ ವಲಯದಲ್ಲಿರುವ ಬಳ್ಳಾರಿ ರಸ್ತೆ ಸಂಪರ್ಕಿಸುವ 19.80 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಟೆಂಡರ್
07:36 AM (IST) Apr 03
06:54 AM (IST) Apr 03
ರೇಣುಕಾಸ್ವಾಮಿ ಕೊಲೆ ಪ್ರಕರಣದ ವರದಿಗಳನ್ನು ಪ್ರಸಾರ ಮಾಡುತ್ತಿರುವ ಮಾಧ್ಯಮಗಳ ವಿರುದ್ಧ ನಟ ದರ್ಶನ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿ, ಕೇಂದ್ರ ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಅವರು ಮನವಿ ಮಾಡಿದ್ದಾರೆ.
06:38 AM (IST) Apr 03
ವಿವಾಹವಾಗುವುದಾಗಿ ಯುವತಿಗೆ ಮೋಸ ಮಾಡಿದ್ದ ವ್ಯಕ್ತಿಗೆ ಅದೇ ಹುಡುಗಿಯ ಜೊತೆ ಮದುವೆಯಾಗಲು ಕರ್ನಾಟಕ ಹೈಕೋರ್ಟ್ 23 ದಿನ ಜಾಮೀನು ನೀಡಿದೆ. ಕೇಸ್ ದಾಖಲು ಬಳಿಕ ಇಬ್ಬರ ಮಧ್ಯೆ ರಾಜಿ ಸಂಧಾನ ನಡೆದಿತ್ತು.
06:23 AM (IST) Apr 03
ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವವು ವೈಭವದಿಂದ ಸಂಪನ್ನಗೊಂಡಿದ್ದು, ಈ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ತಮ್ಮ ವರ್ಗಾವಣೆ ವಿಘ್ನ ನಿವಾರಣೆಗೆ ಹರಕೆ ಹೊತ್ತಿರುವುದು ವೈರಲ್ ಆಗಿದೆ. ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿ ಕರಗವು ಮಸ್ತಾನ್ ಸಾಬ್ ದರ್ಗಾಕ್ಕೆ ಭೇಟಿ ನೀಡಿತು.
06:17 AM (IST) Apr 03
50 ವರ್ಷಗಳ ಬಳಿಕ ಚಂದ್ರನ ಬಳಿಗೆ ಹೋಗುವ ಹುಮ್ಮಸ್ಸಿನಲ್ಲಿ ನಾಲ್ವರು ಗಗನಯಾನಿಗಳನ್ನು ಹೊತ್ತ ಓರಿಯನ್ ಕ್ಯಾಪ್ಸ್ಯೂಲ್ ಜತೆ 33 ಅಡಿಯ ಎಸ್ಎಲ್ಎಸ್ ರಾಕೆಟ್ ಗುರುವಾರ ಮುಂಜಾನೆ 4.05ಕ್ಕೆ(ಭಾರತೀಯ ಕಾಲಮಾನ) ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ
06:09 AM (IST) Apr 03
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಕಾನೂನು ಆದಷ್ಟು ಶೀಘ್ರ ಜಾರಿಗೊಳಿಸಲುದ್ದೇಶಿಸಿರುವ ಕೇಂದ್ರ ಸರ್ಕಾರವು ಏ.16ರಿಂದ ಮೂರು ದಿನಗಳ ಕಾಲ ನಡೆಸಲುದ್ದೇಶಿಸಿದೆ