ಬೆಂಗಳೂರು (ಏ.3): ಗ್ಯಾಸ್ಗಾಗಿ ರಾಜ್ಯದಲ್ಲಿ ಆಟೋ ಚಾಲಕರ ಯುದ್ಧ ಆರಂಭವಾಗಿದ್ದು, ಬಂಕ್ಗಳ ಮುಂದೆ ರಾತ್ರಿ ಇಡೀ ಜಾಗರಣೆ ಮಾಡುತ್ತಿದ್ದಾರೆ. ಬಹುತೇಕ ಕಡೆ ‘ನೋ ಸ್ಟಾಕ್’ ಬೋರ್ಡ್ ಬಿದ್ದಿದೆ. ಬೆಂಗಳೂರಲ್ಲಿ ಗ್ಯಾಸ್ಗಾಗಿ ಬಂಕ್ಗಳ ಮುಂದೆ ಕಿ.ಮೀ. ಗಟ್ಟಲೇ ಆಟೋಗಳ ಕ್ಯೂ ಕಾಣುತ್ತಿದೆ. ರಿಕ್ಷಾ ಡ್ರೈವರ್ಗಳಿಂದ ಪ್ರತಿಭಟನೆ ಕೂಡ ನಡೆದಿದ್ದು, ದುಡಿಮೆ ಮಾಡಲಾಗದೆ ಬಂಕ್ ಮುಂದೆ ಸಮಯ ದೂಡುವ ಪರಿಸ್ಥಿತಿ ನೆನೆದು ಕಣ್ಣೀರು ಹಾಕುತ್ತಿದ್ದಾರೆ.ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್ಲೈವ್ ಬ್ಲಾಗ್
07:40 AM (IST) Apr 03
ಬಹುನಿರೀಕ್ಷಿತ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (ಬಿಬಿಸಿ- ಪಿಆರ್ಆರ್1) ಯೋಜನೆಗೆ ಸಂಬಂಧಿಸಿದಂತೆ ತುಮಕೂರು ರಸ್ತೆ ಮತ್ತು ನಗರದ ಹೊರ ವಲಯದಲ್ಲಿರುವ ಬಳ್ಳಾರಿ ರಸ್ತೆ ಸಂಪರ್ಕಿಸುವ 19.80 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಟೆಂಡರ್
07:36 AM (IST) Apr 03
06:54 AM (IST) Apr 03
ರೇಣುಕಾಸ್ವಾಮಿ ಕೊಲೆ ಪ್ರಕರಣದ ವರದಿಗಳನ್ನು ಪ್ರಸಾರ ಮಾಡುತ್ತಿರುವ ಮಾಧ್ಯಮಗಳ ವಿರುದ್ಧ ನಟ ದರ್ಶನ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿ, ಕೇಂದ್ರ ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಅವರು ಮನವಿ ಮಾಡಿದ್ದಾರೆ.
06:38 AM (IST) Apr 03
ವಿವಾಹವಾಗುವುದಾಗಿ ಯುವತಿಗೆ ಮೋಸ ಮಾಡಿದ್ದ ವ್ಯಕ್ತಿಗೆ ಅದೇ ಹುಡುಗಿಯ ಜೊತೆ ಮದುವೆಯಾಗಲು ಕರ್ನಾಟಕ ಹೈಕೋರ್ಟ್ 23 ದಿನ ಜಾಮೀನು ನೀಡಿದೆ. ಕೇಸ್ ದಾಖಲು ಬಳಿಕ ಇಬ್ಬರ ಮಧ್ಯೆ ರಾಜಿ ಸಂಧಾನ ನಡೆದಿತ್ತು.
06:23 AM (IST) Apr 03
ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವವು ವೈಭವದಿಂದ ಸಂಪನ್ನಗೊಂಡಿದ್ದು, ಈ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ತಮ್ಮ ವರ್ಗಾವಣೆ ವಿಘ್ನ ನಿವಾರಣೆಗೆ ಹರಕೆ ಹೊತ್ತಿರುವುದು ವೈರಲ್ ಆಗಿದೆ. ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿ ಕರಗವು ಮಸ್ತಾನ್ ಸಾಬ್ ದರ್ಗಾಕ್ಕೆ ಭೇಟಿ ನೀಡಿತು.
06:17 AM (IST) Apr 03
50 ವರ್ಷಗಳ ಬಳಿಕ ಚಂದ್ರನ ಬಳಿಗೆ ಹೋಗುವ ಹುಮ್ಮಸ್ಸಿನಲ್ಲಿ ನಾಲ್ವರು ಗಗನಯಾನಿಗಳನ್ನು ಹೊತ್ತ ಓರಿಯನ್ ಕ್ಯಾಪ್ಸ್ಯೂಲ್ ಜತೆ 33 ಅಡಿಯ ಎಸ್ಎಲ್ಎಸ್ ರಾಕೆಟ್ ಗುರುವಾರ ಮುಂಜಾನೆ 4.05ಕ್ಕೆ(ಭಾರತೀಯ ಕಾಲಮಾನ) ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ
06:09 AM (IST) Apr 03
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಕಾನೂನು ಆದಷ್ಟು ಶೀಘ್ರ ಜಾರಿಗೊಳಿಸಲುದ್ದೇಶಿಸಿರುವ ಕೇಂದ್ರ ಸರ್ಕಾರವು ಏ.16ರಿಂದ ಮೂರು ದಿನಗಳ ಕಾಲ ನಡೆಸಲುದ್ದೇಶಿಸಿದೆ
06:06 AM (IST) Apr 03
ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಸಂಪೂರ್ಣವಾಗಿ ಕಾನೂನುಬಾಹಿರವಾಗಿತ್ತು ಎಂದು ಪರಾಜಿತ ಅಭ್ಯರ್ಥಿ ಸೌಮ್ಯರೆಡ್ಡಿ ಹೈಕೋರ್ಟ್ನಲ್ಲಿ ದೂರಿದ್ದಾರೆ. ಸಿ.ಕೆ. ರಾಮಮೂರ್ತಿ ಅವರ 16 ಮತಗಳ ಗೆಲುವಿಗೆ ಕಾರಣವಾದ ಮರು ಎಣಿಕೆ ಪ್ರಕ್ರಿಯೆಯನ್ನು ಪ್ರಶ್ನಿಸಿ ಅವರು ಅರ್ಜಿಸಲ್ಲಿಸಿದ್ದಾರೆ.
05:43 AM (IST) Apr 03
ಮಧ್ಯಪ್ರಾಚ್ಯ ಯುದ್ಧದ ಹಿನ್ನೆಲೆಯಲ್ಲಿ ಆಟೋ ಗ್ಯಾಸ್ಗಾಗಿ ಚಾಲಕರ ಪರದಾಟ ಗುರುವಾರವೂ ಮುಂದುವರೆದಿದ್ದು ರಾತ್ರಿಯೆಲ್ಲಾ ಸರದಿ ಸಾಲಿನಲ್ಲಿ ನಿಂತರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಇದರಿಂದ ಸಿಟ್ಟಿಗೆದ್ದ ಚಾಲಕರು ಕಣ್ಣೀರು ಹಾಕುತ್ತಾ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾರವಾರದಲ್ಲಿ ಇರುವ ಏಕೈಕ ಬಂಕ್ ಬಂದ್ ಆಗಿದ್ದರಿಂದ ಆಕ್ರೋಶಗೊಂಡ ಆಟೋ ಚಾಲಕರು, ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು. ಬಳ್ಳಾರಿಯಲ್ಲಿ 7 ಸಾವಿರ ಆಟೋಗಳು ಮೂಲೆ ಸೇರಿದ್ದು, ಚಾಲಕರು ಇತರ ಕೆಲಸಗಳತ್ತ ಮುಖ ಮಾಡುತ್ತಿದ್ದಾರೆ.