LIVE NOW
Published : Apr 04, 2026, 06:13 AM ISTUpdated : Apr 04, 2026, 09:04 AM IST

Karnataka News Live: ಓದಿದ ಶಾಲೆಗೆ 25 ವರ್ಷದ ಬಳಿಕ ಮರಳಿದ 1999-2001 ಬ್ಯಾಚ್‌ನ ವಿದ್ಯಾರ್ಥಿಗಳು - ಭಾವನಾತ್ಮಕ ಸಮಾರಂಭ

ಸಾರಾಂಶ

ಉಪ್ಪಿನಂಗಡಿ: ಹಾಸನದಿಂದ ಕೇರಳಕ್ಕೆ ಕಂಟೈನರ್ ವಾಹನದಲ್ಲಿ ಅತ್ಯಂತ ಅಮಾನವೀಯವಾಗಿ ತುಂಬಿ ಸಾಗಿಸುತ್ತಿದ್ದ 20 ಜಾನುವಾರುಗಳನ್ನು ಕಡಬ ಪೊಲೀಸರು ರಕ್ಷಿಸಿ, ಒಬ್ಬನನ್ನು ವಶಕ್ಕೆ ಪಡೆಡುಕೊಂಡಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹೊಸೂರು ಗ್ರಾಮದ ಇರ್ಪಾನ್ ವಶಕ್ಕೆ ಪಡೆಯಲಾಗಿದೆ. ವಾಹನ ಚಾಲಕ ನಯಾಝ್ ಪರಾರಿ ಆಗಿದ್ದಾನೆ. ಲಾರಿ ಮಾಲೀಕ‌ ಅಬ್ದುಲ್ ರಹಿಮಾನ್ ವಿರುದ್ದ ಪ್ರಕರಣ ದಾಖಲಾಗಿದೆ.

ಶುಕ್ರವಾರ ಬೆಳಗ್ಗೆ ಜಾನುವಾರು ಸಾಗಿಸುತ್ತಿರುವ ಮಾಹಿತಿ ತಿಳಿದು ಪೊಲೀಸರು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕನ್ವಾರೆ ಎಂಬಲ್ಲಿ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಕಂಟೈನರ್ ಒಳಗಡೆ ಅಮಾನವೀಯ ರೀತಿಯಲ್ಲಿ ತುಂಬಿಸಲಾಗಿದ್ದ 20 ಜಾನುವಾರುಗಳು ಪತ್ತೆಯಾಗಿವೆ.

09:04 AM (IST) Apr 04

ಓದಿದ ಶಾಲೆಗೆ 25 ವರ್ಷದ ಬಳಿಕ ಮರಳಿದ 1999-2001 ಬ್ಯಾಚ್‌ನ ವಿದ್ಯಾರ್ಥಿಗಳು - ಭಾವನಾತ್ಮಕ ಸಮಾರಂಭ

1999-2001ನೇ ಸಾಲಿನ ಹಳೆ ವಿದ್ಯಾರ್ಥಿಗಳು ತಮ್ಮ 25ನೇ ವರ್ಷದ ಬೆಳ್ಳಿ ಮಹೋತ್ಸವವನ್ನು ಆಚರಿಸಿದರು. ಈ ಭಾವನಾತ್ಮಕ ಸಮಾರಂಭದಲ್ಲಿ ಹಳೆಯ ಸ್ನೇಹಿತರು ಮತ್ತು ಗುರುಗಳನ್ನು ಭೇಟಿಯಾಗಿ, ಶಾಲಾ ದಿನಗಳ ನೆನಪುಗಳನ್ನು ಮೆಲುಕು ಹಾಕಿದರು. ಈ ವೇಳೆ ಶಿಕ್ಷಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Read Full Story

09:01 AM (IST) Apr 04

ನಾಳೆ ಒಂದೇ ವೇದಿಕೆಯಲ್ಲಿ ಅಜ್ಜಿ, ಮಗಳು, ಮೊಮ್ಮಗಳ ಮೂರು ತಲೆಮಾರಿನ ಕೃತಿಗಳ ಲೋಕಾರ್ಪಣೆ

ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಭವನದಲ್ಲಿ ಅಜ್ಜಿ, ಮಗಳು ಮತ್ತು ಮೊಮ್ಮಗಳ ಕೃತಿಗಳು ಒಂದೇ ವೇದಿಕೆಯಲ್ಲಿ ಲೋಕಾರ್ಪಣೆಗೊಳ್ಳುವ ಅಪರೂಪದ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ್ಲಲಿ ತಾಯಿ, ಮಗಳು, ಮೊಮ್ಮಗಳ ಕೃತಿಗಳು ಒಂದೇ ವೇದಿಕೆಯಲ್ಲಿ ಬಿಡುಗಡೆಯಾಗುತ್ತಿರುವುದು ವಿಶೇಷ.

Read Full Story

08:42 AM (IST) Apr 04

ಎಲ್‌ಪಿಜಿ ಕೊರತೆ; ಪ್ರಯಾಣಿಕರಿಂದ 10% ಹೆಚ್ಚಿಗೆ ಬಾಡಿಗೆ ಕೇಳುತ್ತಿರುವ ಆಟೋ ಚಾಲಕರು!

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಬೆಂಗಳೂರಿನಲ್ಲಿ ಆಟೋ ಗ್ಯಾಸ್‌ಗೆ ತೀವ್ರ ಅಭಾವ ಸೃಷ್ಟಿಯಾಗಿದೆ. ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ಕಾಯುತ್ತಿರುವ ಚಾಲಕರು, ಕೆಲವು ಬಂಕ್‌ಗಳ ದುಬಾರಿ ದರ ವಸೂಲಿಯಿಂದ ಕಂಗೆಟ್ಟಿದ್ದು, ಪ್ರಯಾಣಿಕರಿಂದ ಶೇ.10 ರಷ್ಟು ಹೆಚ್ಚುವರಿ ಬಾಡಿಗೆ ಕೇಳುತ್ತಿದ್ದಾರೆ.
Read Full Story

08:36 AM (IST) Apr 04

ವರದಕ್ಷಿಣೆಗಾಗಿ ಪೆಟ್ರೋಲ್ ಸುರಿದು ಗರ್ಭಿಣಿ ಸೊಸೆಯನ್ನೇ ಕೊಂದ್ರು - ನಾಲ್ವರು ಅರೆಸ್ಟ್

ಹೊಡಬಟ್ಟೆ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳದ ಹಿನ್ನೆಲೆಯಲ್ಲಿ ಐದು ತಿಂಗಳ ಗರ್ಭಿಣಿ ಸೊಸೆಯನ್ನು ಪೆಟ್ರೋಲ್ ಸುರಿದು ಕೊಲೆ ಮಾಡಲಾಗಿದೆ. ವೃತ್ತಿಯಲ್ಲಿ ನರ್ಸ್ ಆಗಿದ್ದ ಶ್ವೇತಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಈ ಸಂಬಂಧ ಮೃತರ ಅತ್ತೆ, ಮಾವ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

Read Full Story

07:53 AM (IST) Apr 04

ಚಪ್ಪಲಿ ಬಿಟ್ರು ಬಂದ್ರೆ ಮಾತ್ರ ಚಿಕಿತ್ಸೆ? ಪ್ರಾಥಮಿಕ ಆರೋಗ್ಯ ಕೇಂದ್ರದ ವಿಚಿತ್ರ ನಿಯಮ

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಪ್ಪಲಿ ಧರಿಸಿ ಬರುವ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ವೈದ್ಯರೇ ಈ ನಿಯಮವನ್ನು ಸಮರ್ಥಿಸಿಕೊಳ್ಳುತ್ತಿದ್ದು, ಬರಿಗಾಲಿನಲ್ಲಿ ನಡೆಯುವುದರಿಂದ ಸೋಂಕಿನ ಅಪಾಯ ಹೆಚ್ಚಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read Full Story

07:45 AM (IST) Apr 04

Kerala Woman Missing - ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳದ ಯುವತಿ ನಿಗೂಢ ನಾಪತ್ತೆ, ಮುಂದುವರಿದ ಕಾರ್ಯಾಚರಣೆ

ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿ ಶರಣ್ಯ ನಾಪತ್ತೆಯಾಗಿದ್ದಾರೆ. ಪೊಲೀಸ್, ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರನ್ನೊಳಗೊಂಡ ನಾಲ್ಕು ತಂಡಗಳು ತೀವ್ರ ಶೋಧ ನಡೆಸುತ್ತಿದ್ದರೂ, ಯುವತಿಯ ಸುಳಿವು ಇನ್ನೂ ಪತ್ತೆಯಾಗಿಲ್ಲ. ಈ ಘಟನೆಯು ಸ್ಥಳೀಯರಲ್ಲಿ ಆತಂಕವನ್ನು ಸೃಷ್ಟಿಸಿದೆ.
Read Full Story

07:05 AM (IST) Apr 04

Siddaramaiah - ಕಾಂಗ್ರೆಸ್ ಪರ ಮಾತ ಯಾಚನೆ ಮಾಡಲು ನಾಳೆ ಸಿಎಂ ಕೇರಳಕ್ಕೆ

ಕೇರಳ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಯ ಪರ ಪ್ರಚಾರ ನಡೆಸಲು ಕೇರಳಕ್ಕೆ ತೆರಳಲಿದ್ದಾರೆ. ಅವರು ಮಂಜೇಶ್ವರ ವಿಧಾನಸಭೆ ಕ್ಷೇತ್ರದ ವೊರ್ಕಾಡಿ ಮತ್ತು ಮುಲ್ಲೇರಿಯದಲ್ಲಿ ನಡೆಯುವ ಬಹಿರಂಗ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
Read Full Story

06:46 AM (IST) Apr 04

Davanagere Bypoll 2026 - ನಾವೊಬ್ಬರೇ ಅಲ್ಲ ಮೋದಿನೂ ಸಾಲಗಾರ ಎಂದ ಡಿಸಿಎಂ; ₹15 ಲಕ್ಷದ ಭರವಸೆ ಏನಾಯ್ತು? ಡಿಕೆಶಿ ಪ್ರಶ್ನೆ

ಪ್ರಧಾನಿ ಮೋದಿ ಸರ್ಕಾರ ಸಾಲ ಮಾಡಿಲ್ಲವೇ ಎಂದು ಪ್ರಶ್ನಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರದ ಸಾಲವನ್ನು ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ಸರ್ಕಾರದ ವೈಫಲ್ಯಗಳು, ಈಡೇರದ ಭರವಸೆಗಳನ್ನು ಟೀಕಿಸಿದ ಅವರು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದರು.

Read Full Story

06:40 AM (IST) Apr 04

ಮಧುಗಿರಿ ಬೆಟ್ಟದಲ್ಲಿ ನೀಳ ದೇಹ, ಮೊನಚಾದ ತಲೆಯುಳ್ಳ 'ನಾಗಾರ್ಜುನ ಸಾಗರ ರೇಸರ್' ಹಾವು ಪತ್ತೆ

ಅಪರೂಪದ ನಾಗಾರ್ಜುನ ಸಾಗರ ರೇಸರ್ ಹಾವು ಪತ್ತೆಯಾಗಿದೆ. ದಕ್ಷಿಣ ಭಾರತದಲ್ಲಿ ಮಾತ್ರ ಕಂಡುಬರುವ ಈ ಹಾವು, ತನ್ನ ವೇಗದ ಚಲನೆಯಿಂದ 'ರೇಸರ್' ಎಂದು ಹೆಸರುವಾಸಿಯಾಗಿದೆ. ಇದು ರಸೆಲ್ಸ್ ಕುಕ್ರಿ ಹಾವನ್ನು ಹೋಲುತ್ತದೆಯಾದರೂ, ವಿಶಿಷ್ಟ ದೈಹಿಕ ಲಕ್ಷಣಗಳಿಂದ ಭಿನ್ನವಾಗಿದೆ.

Read Full Story

More Trending News