LIVE NOW
Published : Aug 04, 2026, 06:45 AM ISTUpdated : Aug 04, 2026, 09:50 AM IST

Karnataka News Live: ಬರಗಾಲದಲ್ಲಿಯೂ ಕಷ್ಟಪಟ್ಟು ಬೆಳೆದಿದ್ದ ಒಂದೂವರೆ ಎಕರೆ ಬೆಳ್ಳುಳ್ಳಿ ಕದ್ದ ಕಳ್ಳರು; ರೈತ ಕಣ್ಣೀರು

ಸಾರಾಂಶ

ಬೆಂಗಳೂರು: ನಾನು ಮತ್ತು ಸಿದ್ದರಾಮಯ್ಯ ಅವರು ಸೇರಿ ಚರ್ಚೆ ಮಾಡಿಯೇ ಸಂಪುಟ ವಿಸ್ತರಣೆಗೆ ಹೊಸ ಸಚಿವರ ಪಟ್ಟಿಯ ತೀರ್ಮಾನ ಮಾಡಿದ್ದೇವೆ. ಈ ವಿಚಾರದಲ್ಲಿ ಅವರಿಗೆ ಯಾವುದೇ ಅಸಮಾಧಾನ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಚಿವ ಸಂಪುಟ ವಿಸ್ತರಣೆಗೆ ಸಿದ್ದರಾಮಯ್ಯ ಗೈರಾಗಿದ್ದು, ಅವರಿಗೆ ಅಸಮಾಧಾನವಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಈ ಉತ್ತರ ನೀಡಿದರು.

ಸಿದ್ದರಾಮಯ್ಯ ಯಾಕೆ ಅಸಮಾಧಾನಗೊಳ್ಳುತ್ತಾರೆ? ಅವರ ಹುಟ್ಟುಹಬ್ಬ ಇತ್ತು. ಅನೇಕ ಅತಿಥಿಗಳು, ಅಭಿಮಾನಿಗಳು ಶುಭಾಶಯ ಕೋರಲು ಬರುತ್ತಿರುತ್ತಾರೆ. ನಾನೂ ಶುಭ ಕೋರಿದ್ದೇನೆ. ಸಚಿವ ಸ್ಥಾನ ಸಿಗದವರ ಜತೆಗೂ ಅವರು ಮಾತನಾಡಿ ಸಮಾಧಾನ ಮಾಡುತ್ತಿರುತ್ತಾರೆ. ಅವರು ನಮ್ಮ ಪಕ್ಷದ ಕೆಲಸ ಮಾಡುತ್ತಿದ್ದಾರೆ. ನಾನು, ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ಪಕ್ಷದ 139 ಶಾಸಕರೂ ಒಂದೇ ತಂಡ. ಒಗ್ಗಟಾಗಿ ಕೆಲಸ ಮಾಡುತ್ತಿದ್ದೇವೆ. ನಾನೂ ಸೇರಿ ಎಲ್ಲರೂ ಸಿದ್ದರಾಮಯ್ಯನವರ ಕಡೆಯವರೆ. ನಾವು ಒಂದಾಗಿದ್ದೇವೆ. ನೀವುಗಳು ಹೊಸದಾಗಿ ಏನೋ ಹುಡುಕುತ್ತಿದ್ದೀರಿ ಎಂದರು.

ನೀವು ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೀರಾ ಎಂದು ಕೇಳಿದಾಗ, ಖಂಡಿತವಾಗಿ ಮಾತನಾಡಿದ್ದೇನೆ. ಒಟ್ಟು ಐದು ಬಾರಿ ಚರ್ಚೆ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

09:50 AM (IST) Aug 04

ಬರಗಾಲದಲ್ಲಿಯೂ ಕಷ್ಟಪಟ್ಟು ಬೆಳೆದಿದ್ದ ಒಂದೂವರೆ ಎಕರೆ ಬೆಳ್ಳುಳ್ಳಿ ಕದ್ದ ಕಳ್ಳರು; ರೈತ ಕಣ್ಣೀರು

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ರೈತರೊಬ್ಬರು ಬೆಳೆದಿದ್ದ ಕಟಾವಿಗೆ ಸಿದ್ಧವಾಗಿದ್ದ ಬೆಳ್ಳುಳ್ಳಿ ಬೆಳೆಯನ್ನು ಕಳ್ಳರು ಕದ್ದೊಯ್ದಿದ್ದಾರೆ. ಈ ಘಟನೆಯಿಂದಾಗಿ ರೈತ ಸಿದ್ದರಾಜು ಅವರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಕಳ್ಳರನ್ನು ಪತ್ತೆ ಹಚ್ಚುವಂತೆ ಇತರ ರೈತರು ಆಗ್ರಹಿಸಿದ್ದಾರೆ.
Read Full Story

09:36 AM (IST) Aug 04

ಸ್ವಾತಂತ್ರ್ಯ ನಂತರ ಗ್ರಾಮಕ್ಕೆ ಮೊದಲ ಬಸ್; ಮಿಣ್ಯಂ ಗ್ರಾಪಂನ ಕೊಪ್ಪಕ್ಕೆ ಬಂತು KSRTC

ಹನೂರು ತಾಲೂಕಿನ ಕೊಪ್ಪ ಗ್ರಾಮಕ್ಕೆ ಗ್ರಾಮಸ್ಥರು ಹಾಗೂ ರೈತ ಸಂಘದ ಮನವಿಯ ಮೇರೆಗೆ ಮೊದಲ ಬಾರಿಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಿದೆ. ಇದರಿಂದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಗೆ ಅನುಕೂಲವಾಗಿದ್ದು, ಗ್ರಾಮಸ್ಥರು ಪೂಜೆ ಸಲ್ಲಿಸಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.
Read Full Story

09:14 AM (IST) Aug 04

ಮಂಡ್ಯ ಕಾರು ಅಪಘಾತಕ್ಕೆ ಟ್ವಿಸ್ಟ್ - ಮೃತ ಯುವತಿ ತಾಯಿ ಬಿಚ್ಚಿಟ್ಲು ಶಾಕಿಂಗ್‌ ವಿಷಯ

ಮಂಡ್ಯದಲ್ಲಿ ನಡೆದ ಕಾರು ಅಪಘಾತದಲ್ಲಿ ಯುವತಿಯೊಬ್ಬಳು ಮೃತಪಟ್ಟಿದ್ದು, ಇದೊಂದು ಪೂರ್ವನಿಯೋಜಿತ ಕೊಲೆ ಎಂದು ಮೃತೆಯ ತಾಯಿ ಆರೋಪಿಸಿದ್ದಾರೆ. ಹುಟ್ಟುಹಬ್ಬದ ನೆಪದಲ್ಲಿ ಕರೆದೊಯ್ದು ಕೊಲೆ ಮಾಡಿ, ಅಪಘಾತವೆಂದು ಬಿಂಬಿಸಲು ಯತ್ನಿಸಲಾಗಿದೆ ಎಂದು ಸ್ನೇಹಿತರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Read Full Story

09:03 AM (IST) Aug 04

ಸಂಪುಟದಲ್ಲಿ ಮಹಿಳೆಗೆ ತಪ್ಪಿದ ಸ್ಥಾನ, ಸಿದ್ದುಗೂ ಗೊತ್ತಿಲ್ಲ ಡಿಕೆಶಿಗೂ ತಿಳಿದಿಲ್ಲ, ಗೊತ್ತೇ ಆಗದ ಕಾಣದ ಕೈ ಯಾರದ್ದು?

ರಾಜ್ಯ ಕಾಂಗ್ರೆಸ್ ಸಚಿವ ಸಂಪುಟ ವಿಸ್ತರಣೆಯು ತೀವ್ರ ಆಂತರಿಕ ಭಿನ್ನಾಭಿಪ್ರಾಯಕ್ಕೆ ಕಾರಣವಾಯಿತು. ಹೈಕಮಾಂಡ್‌ನಿಂದ ಅಂತಿಮಗೊಂಡ ಮಹಿಳಾ ಅಭ್ಯರ್ಥಿಯ ಹೆಸರಿಗೆ ರಾಜ್ಯ ನಾಯಕರ ವಿರೋಧ ವ್ಯಕ್ತವಾದ ಕಾರಣ, ಕೊನೆ ಕ್ಷಣದಲ್ಲಿ ಅವರನ್ನು ಕೈಬಿಡಲಾಯಿತು. ಇದರ ಪರಿಣಾಮವಾಗಿ, ನೂತನ ಸಂಪುಟದಲ್ಲಿ ಯಾವುದೇ ಮಹಿಳೆಗೆ ಸ್ಥಾನ ಸಿಗದಿರುವುದು ಚರ್ಚೆಗೆ ಗ್ರಾಸವಾಗಿದೆ.
Read Full Story

09:02 AM (IST) Aug 04

DK Shivakumar - ತಾಳ್ಮೆ ಇರಲಿ, ಎಲ್ಲರಿಗೂ ಅವಕಾಶ ಕಲ್ಪಿಸುತ್ತೇವೆ; ಸಚಿವ ಸ್ಥಾನ ಸಿಗದ ನಾಯಕರಿಗೆ ಸಿಎಂ ಭರವಸೆ

ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಇದ್ದೇನೆ. ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

Read Full Story

08:50 AM (IST) Aug 04

ಬೆಂಗಳೂರಿನ ಎರಡು ಪ್ರಮುಖ ರಸ್ತೆಯಲ್ಲಿ ಮೊದಲ ಬಾರಿಗೆ 'ಫೈರ್ ಹೈಡ್ರೆಂಟ್’ ವ್ಯವಸ್ಥೆ

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ನಗರದ ಮೊದಲ 'ಫೈರ್ ಹೈಡ್ರೆಂಟ್' ವ್ಯವಸ್ಥೆಯುಳ್ಳ ಆರ್.ಟಿ.ಸ್ಟ್ರೀಟ್ ಮತ್ತು ಮೆಜೆಸ್ಟಿಕ್ ಟ್ಯಾಂಕ್ ಬಂಡ್ ವೈಟ್ ಟಾಪಿಂಗ್ ರಸ್ತೆಯನ್ನು ಉದ್ಘಾಟಿಸಿದರು.

Read Full Story

08:33 AM (IST) Aug 04

Udupi - ಕಾರ್ಕಳ ತಾಲೂಕಿ ಪುಟ್ಟ ಗ್ರಾಮದಲ್ಲಿ ಪತ್ತೆಯಾಯ್ತು 400 ವರ್ಷಗಳ ಹಿಂದಿನ ರಹಸ್ಯ

ಕಾರ್ಕಳ ತಾಲೂಕಿನ ಮಾಳ ಗ್ರಾಮದಲ್ಲಿ ಕ್ರಿ.ಶ. 1616ರ ಕಾಲದ ಅಪ್ರಕಟಿತ ಶಿಲಾಶಾಸನವೊಂದು ಪತ್ತೆಯಾಗಿದೆ. ಪ್ರಾಚ್ಯಸಂಚಯ ಸಂಶೋಧನ ಕೇಂದ್ರದ ತಂಡವು ಅಧ್ಯಯನ ನಡೆಸಿದ್ದು, 15 ಸಾಲುಗಳ ಈ ಕನ್ನಡ ಶಾಸನವು ಸಾಂತೈಯನಯ್ಯನ ಪುತ್ರ ಮಲೈಯ ಎಂಬಾತನಿಂದ ರಚಿಸಲ್ಪಟ್ಟಿದೆ ಎಂದು ತಿಳಿದುಬಂದಿದೆ.
Read Full Story

08:22 AM (IST) Aug 04

ಪೀಣ್ಯ ಮೇಲ್ಸೇತುವೆ ಮೇಲೆ ರಾತ್ರಿ ಸಂಚರಿಸುವ ಪ್ರಯಾಣಿಕರೇ ಗಮನಿಸಿ; 10 ದಿನ ಫ್ಲೈಓವರ್ ಬಂದ್, ಈ ರಸ್ತೆ ಬಳಸಿ

ಡಾಂಬರೀಕರಣ ಕಾಮಗಾರಿಯ ಕಾರಣದಿಂದಾಗಿ ಬೆಂಗಳೂರಿನ ಪೀಣ್ಯ ಮೇಲ್ಸೇತುವೆ ಮೇಲೆ ಆಗಸ್ಟ್ 3 ರಿಂದ 12 ರವರೆಗೆ ರಾತ್ರಿ ವೇಳೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ತುಮಕೂರು ಕಡೆಗೆ ಹೋಗುವ ವಾಹನಗಳಿಗೆ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ಸಂಚಾರ ನಿರ್ಬಂಧವಿದ್ದು, ಪರ್ಯಾಯ ಮಾರ್ಗವನ್ನು ಸೂಚಿಸಲಾಗಿದೆ.
Read Full Story

07:57 AM (IST) Aug 04

Cabinet expansion - ಸಂಪುಟ ವಿಸ್ತರಣೆಯ ಕೊನೆ ಕ್ಷಣದಲ್ಲಿ ಗಾಯತ್ರಿ ಶಾಂತೇಗೌಡರ ಹೆಸರು ಕೈಬಿಟ್ಟಿದ್ದೇಕೆ?

ಸಂಪುಟ ವಿಸ್ತರಣೆಯ ಕೊನೆಯ ಕ್ಷಣದಲ್ಲಿ ಗಾಯತ್ರಿ ಶಾಂತೇಗೌಡ ಅವರ ಹೆಸರು ಕೈಬಿಡಲಾಗಿದೆ. ಸಿದ್ದರಾಮಯ್ಯನವರ ಆಕ್ಷೇಪದಿಂದಾಗಿ ಈ ಬದಲಾವಣೆಯಾಗಿದ್ದು, ಇದೀಗ ಖಾಲಿ ಇರುವ ಒಂದು ಸ್ಥಾನವನ್ನು ಕುರುಬ ಅಥವಾ ಮಹಿಳಾ ಕೋಟಾದಡಿ ತುಂಬುವುದು ಹೈಕಮಾಂಡ್‌ಗೆ ದೊಡ್ಡ ಸವಾಲಾಗಿದೆ.
Read Full Story

07:44 AM (IST) Aug 04

ಮಂಗಳೂರು-ಬೆಂಗಳೂರು ರೈಲು - ಕೊನೆಗೂ ಹಳಿಗೆ ಮರಳಿದ ಸಂಚಾರ, ತಾತ್ಕಾಲಿಕ ವೇಗದ ನಿರ್ಬಂಧ

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಎಡಕುಮೇರಿ-ಸಿರಿಬಾಗಿಲು ನಡುವೆ ಮಣ್ಣು ಕುಸಿತದಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರವು, ತೆರವು ಕಾರ್ಯಾಚರಣೆ ಪೂರ್ಣಗೊಂಡ ನಂತರ ಪುನರಾರಂಭಗೊಂಡಿದೆ. ಸುರಕ್ಷತೆಗಾಗಿ ತಾತ್ಕಾಲಿಕ ವೇಗ ನಿರ್ಬಂಧ ವಿಧಿಸಲಾಗಿದೆ. ಇದೇ ವೇಳೆ, ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
Read Full Story

07:27 AM (IST) Aug 04

SWRಯಿಂದ ಜುಲೈನಲ್ಲಿ ದಾಖಲೆ! 4.69 ಮಿಲಿಯನ್ ಟನ್ ಸರಕು ಸಾಗಣೆಗೆ ಬಂದ ಆದಾಯ ಎಷ್ಟು?

ನೈಋತ್ಯ ರೈಲ್ವೆಯು ಜುಲೈ ತಿಂಗಳಲ್ಲಿ 4.69 ಮಿಲಿಯನ್ ಟನ್ ಸರಕು ಸಾಗಣೆ ಮಾಡುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದೆ. ಈ ಅವಧಿಯಲ್ಲಿ ಸರಕು ಸಾಗಣೆ ಮತ್ತು ಪ್ರಯಾಣಿಕರ ಸೇವೆಯಿಂದ ಒಟ್ಟು ₹793.31 ಕೋಟಿ ಆದಾಯ ಗಳಿಸಿದೆ.

Read Full Story

07:16 AM (IST) Aug 04

ಮುಗಿಯದ ಶಿರಸಿ ಹಾವೇರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರ; ಪ್ರತಿನಿತ್ಯ ತೊಂದರೆ

ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿಯ ಅಪೂರ್ಣ ಕಾಮಗಾರಿಯಿಂದಾಗಿ ಸಾರ್ವಜನಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಇತ್ತೀಚಿನ ಮಳೆಯಿಂದ ಸೋಮನಹಳ್ಳಿ ರಸ್ತೆ ಬಂದ್ ಆಗಿದ್ದು, ರಸ್ತೆ ಪಕ್ಕದ ನಿವಾಸಿಗಳು ಅಪಘಾತ, ಆರೋಗ್ಯ ಸಮಸ್ಯೆ ಹಾಗೂ ಪ್ರವಾಹದ ಭೀತಿಯಲ್ಲಿದ್ದಾರೆ.

Read Full Story

07:05 AM (IST) Aug 04

Bengaluru - ಪಂಚಪಾಲಿಕೆ ತರ 5 ಹೋಳಾದ ಬೆಂಗಳೂರು ಪೊಲೀಸ್ ಕಮೀಷನರೇಟ್‌? 7648 ಕೋಟಿ ವೆಚ್ಚ

ಬೆಂಗಳೂರು ಪೊಲೀಸ್ ಕಮೀಷನರೇಟ್‌ ಅನ್ನು ಐದು ಪ್ರತ್ಯೇಕ ಕಮೀಷನರೇಟ್‌ಗಳಾಗಿ ವಿಭಜಿಸಲು ನಗರ ಪೊಲೀಸ್ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಯೋಜನೆಯಡಿ, ಮುಖ್ಯ ಆಯುಕ್ತರ ಹುದ್ದೆ ಸೃಜನೆಯಾಗಲಿದ್ದು, ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ ಹಾಗೂ ದಕ್ಷಿಣ ಎಂಬ ಐದು ಘಟಕಗಳು ಉದಯವಾಗಲಿವೆ. ಈ ಬದಲಾವಣೆಗೆ ಸುಮಾರು 7,648 ಕೋಟಿ ರೂ. ವೆಚ್ಚವಾಗಲಿದ್ದು, 6,633 ಹೊಸ ಹುದ್ದೆಗಳ ಸೃಜನೆಗೆ ಮನವಿ ಮಾಡಲಾಗಿದೆ.
Read Full Story

More Trending News