ಬೆಂಗಳೂರು: ಪ್ರಸಕ್ತ ಸಾಲಿನ ಕ್ಷೀರಭಾಗ್ಯ ಮತ್ತು ಮಧ್ಯಾಹ್ನದ ಬಿಸಿಯೂಟ ಯೋಜನೆಗೆ 3 ಮತ್ತು 4 ನೇ ಕಂತಿನ 443.25 ಕೋಟಿ ರು. ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲ ಜಿಪಂ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಮುಖ್ಯ ಲೆಕ್ಕಾಧಿಕಾರಿಗಳಿಗೆ ಜಿಲ್ಲಾವಾರು ಅನುದಾನ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ (ಯೋಜನೆ) ಆದೇಶ ಹೊರಡಿಸಿದ್ದಾರೆ. ಯೋಜನೆಗಳಿಗೆ ಸಂಬಂಧಿಸಿ ಪ್ರತಿ ಜಿಲ್ಲಾವಾರು ಅವಲೋಕನ ಮಾಡಿ ಮಾಹಿತಿಯನ್ನು ತಂತ್ರಾಂಶದಲ್ಲಿ ಅಪ್ಡೇಟ್ ಮಾಡುವಂತೆ ಸೂಚಿಸಲಾಗಿದೆ.

09:26 AM (IST) Feb 04
ವಡೋದರಾ: ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯ ನಾಲ್ಕನೇ ಆವೃತ್ತಿಯಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಈ ಬಾರಿಯಾದರೂ ಡೆಲ್ಲಿ ಟ್ರೋಫಿ ಬರ ನೀಗಿಸಿಕೊಳ್ಳುತ್ತಾ ಕಾದು ನೋಡಬೇಕಿದೆ.
09:14 AM (IST) Feb 04
09:06 AM (IST) Feb 04
ಟ್ಯೂಷನ್ಗೆ ಹೋಗದ್ದಕ್ಕೆ ಪೋಷಕರು ಬೈದಿದ್ದಕ್ಕೆ ಮನನೊಂದ 13 ವರ್ಷದ ಬಾಲಕಿ ಮತ್ತು 9 ವರ್ಷದ ತಮ್ಮ ಬೆಂಗಳೂರಿನಿಂದ ಮನೆಬಿಟ್ಟು ಹೋಗಿದ್ದಾರೆ. ಸರ್ಕಾರದ ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣವನ್ನು ಬಳಸಿಕೊಂಡು ಶಿವಮೊಗ್ಗ, ಚಿತ್ರದುರ್ಗ ಸುತ್ತಾಡಿದ ಮಕ್ಕಳನ್ನು ಪೊಲೀಸರು ಕೊನೆಗೂ ಪತ್ತೆಹಚ್ಚಿದ್ದಾರೆ.
09:05 AM (IST) Feb 04
ಅಭಿವೃದ್ಧಿ ಹೊಂದಿದ ದೇಶಗಳಿಗಿಂತ ಅಭಿವೃದ್ಧಿ ಹೊಂದುತ್ತಿರುವ ಭಾರತದಂತಹ ರಾಷ್ಟ್ರಗಳಲ್ಲಿ ಹೆಚ್ಚು ಹೆಚ್ಚು ಜನರು ಅರ್ಬುದ ರೋಗಕ್ಕೆ ಬಲಿಯಾಗುತ್ತಿರುವುದು ತುಂಬಾ ಆತಂಕಕಾರಿಯಾದ ಬೆಳವಣಿಗೆಯಾಗಿದೆ.
08:51 AM (IST) Feb 04
ಜನಾಂಗೀಯ ಸಂಘರ್ಷದ ಕಾರಣ ಕಳೆದ ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಬಿಜೆಪಿ ನಾಯಕ ಖೇಮಚಂದ್ ಸಿಂಗ್ ಶಾಸಕಾಂಗ ಪಕ್ಷದ ನಾಯಕರಾಗಿ ಮಂಗಳವಾರ ಆಯ್ಕೆ
08:44 AM (IST) Feb 04
ರಾಯಚೂರಿನ ಮಸ್ಕಿ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯಿಂದಾಗಿ ಮಸ್ಕಿ ನಾಲಾದ ದಿಕ್ಕು ಬದಲಾಗುವ ಆತಂಕ ಎದುರಾಗಿದೆ. ದೂರಿನನ್ವಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಜಿಲ್ಲಾಧಿಕಾರಿಗಳು ಕಠಿಣ ಕ್ರಮದ ಭರವಸೆ ನೀಡಿದ್ದಾರೆ.
08:35 AM (IST) Feb 04
08:30 AM (IST) Feb 04
ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದಿರುವ ಬೆಂಗಳೂರಿನ ತಿಗಳರ ಪೇಟೆ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕರಣ ವರದಿಯಾಗಿದೆ. ‘ಮುಜರಾಯಿ ಇಲಾಖೆಯಿಂದ ಹುಂಡಿ ಎಣಿಕೆ ವೇಳೆ ಬ್ಯಾಂಕ್ನಲ್ಲಿ ದೃಢೀಕರಣ ಮಾಡುವ ನೆಪದಲ್ಲಿ ಚಿನ್ನದ ನೆಕ್ಲೆಸ್ ಕಳವು ಮಾಡಲಾಗಿತ್ತು.
08:08 AM (IST) Feb 04
ಇಂದಿನ ಪಂಚಾಂಗದ ಪ್ರಕಾರ, ಅತಿಗಂಡ ಯೋಗ ಮತ್ತು ಸಿಂಹ ರಾಶಿಯಲ್ಲಿ ಚಂದ್ರನ ಸಂಚಾರವು ಕೆಲವು ರಾಶಿಗಳ ಮೇಲೆ ನೇರ ಪ್ರಭಾವ ಬೀರಲಿದೆ. ವಿಶೇಷವಾಗಿ 4 ಸಮಯದಲ್ಲಿ ತಮ್ಮ ನಿರ್ಧಾರಗಳು, ಮಾತುಗಳು ಮತ್ತು ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು ಎಂದು ಜ್ಯೋತಿಷ್ಯ ಶಾಸ್ತ್ರ ಎಚ್ಚರಿಸಿದೆ.
07:57 AM (IST) Feb 04
ಪ್ರತಿಪಕ್ಷಗಳ ಬಿಗಿಪಟ್ಟು ಹಾಗೂ ಸಭಾಪತಿಗಳ ಆದೇಶಕ್ಕೆ ಮಣಿದ ಕಾಂಗ್ರೆಸ್ ಸದಸ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೋಮವಾರ ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿ ಕುರಿತು ಆಡಿದ ಮಾತಿಗೆ ವಿಷಾದ ವ್ಯಕ್ತಪಡಿಸಿದರು.
07:52 AM (IST) Feb 04
07:32 AM (IST) Feb 04
ಸಚಿವರು, ಅಧಿಕಾರಿಗಳ ವಿರುದ್ಧ ಆಗಾಗ ಕಮಿಷನ್ ಆರೋಪ ಮಾಡುತ್ತಿದ್ದ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ವಿರುದ್ಧವೇ ಈಗ ಕಮಿಷನ್ಗೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ. ಕಮಿಷನ್ ವಸೂಲಿಗೆ ಯತ್ನಿಸಿದ ಆರೋಪದಲ್ಲಿ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಹಾಗೂ ಸಂಘಟನಾ ಕಾರ್ಯದರ್ಶಿ ಹನುಮಂತು ಅಮಾನತು
07:23 AM (IST) Feb 04
ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣ ಉದ್ದಿಮೆ ನಿಯಮಬದ್ಧಗೊಳಿಸುವ ಯೋಜನೆ (ಪಿಎಂಎಫ್ಎಂಇ) ಅನುಷ್ಠಾನದಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದುಕೊಂಡಿದೆ. ಕೆಪೆಕ್ ಎಂದೇ ಹೆಸರಾದ ಕರ್ನಾಟಕ ಆಹಾರ ಸಂಸ್ಕರಣೆ ಮತ್ತು ರಫ್ತು ನಿಗಮ ಈ ಗಣನೀಯ ಸಾಧನೆ ಮಾಡಿದೆ.
07:17 AM (IST) Feb 04
07:12 AM (IST) Feb 04
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಣಯವೊಂದರ ಮೇಲೆ ಮಾತನಾಡುತ್ತಿದ್ದಾಗ, ಬಿಜೆಪಿ ಸದಸ್ಯರು 'ಹೂಂ...ಆ...' ಎಂದು ಮೂದಲಿಸಿ ಗದ್ದಲ ಸೃಷ್ಟಿಸಿದರು. ಇದರಿಂದ ತೀವ್ರ ವಾಗ್ವಾದ ಉಂಟಾಗಿ, ಸ್ಪೀಕರ್ ಯು.ಟಿ. ಖಾದರ್ ಅವರು ಅಶಿಸ್ತಿನಿಂದ ವರ್ತಿಸಿದ ಸದಸ್ಯರನ್ನು ಸದನದಿಂದ ಹೊರಹಾಕುವುದಾಗಿ ಖಡಕ್ ಎಚ್ಚರಿಕೆ
07:03 AM (IST) Feb 04
Bengaluru Flyover: ಬೆಂಗಳೂರಿನ ಹೊರ ವರ್ತುಲ ರಸ್ತೆಯ ಇಬ್ಬಲೂರು ಜಂಕ್ಷನ್ನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಹೆಚ್ಚುವರಿ ಮೇಲ್ಸೇತುವೆ ನಿರ್ಮಿಸಲು ಬಿಬಿಎಂಪಿ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ.