LIVE NOW
Published : Feb 04, 2026, 06:44 AM ISTUpdated : Feb 04, 2026, 10:38 PM IST

Karnataka News Live: ಟ್ರಂಪ್ ವೀಸಾ ನೀತಿಗೆ ಗೂಗಲ್ ಚೆಕ್-ಮೇಟ್; ಬೆಂಗಳೂರಿನಲ್ಲಿ 20,000 ಉದ್ಯೋಗಿಗಳಿಗೆ ಹೊಸ ಕಚೇರಿ!

ಸಾರಾಂಶ

ಬೆಂಗಳೂರು: ಪ್ರಸಕ್ತ ಸಾಲಿನ ಕ್ಷೀರಭಾಗ್ಯ ಮತ್ತು ಮಧ್ಯಾಹ್ನದ ಬಿಸಿಯೂಟ ಯೋಜನೆಗೆ 3 ಮತ್ತು 4 ನೇ ಕಂತಿನ 443.25 ಕೋಟಿ ರು. ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲ ಜಿಪಂ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಮುಖ್ಯ ಲೆಕ್ಕಾಧಿಕಾರಿಗಳಿಗೆ ಜಿಲ್ಲಾವಾರು ಅನುದಾನ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ (ಯೋಜನೆ) ಆದೇಶ ಹೊರಡಿಸಿದ್ದಾರೆ. ಯೋಜನೆಗಳಿಗೆ ಸಂಬಂಧಿಸಿ ಪ್ರತಿ ಜಿಲ್ಲಾವಾರು ಅವಲೋಕನ ಮಾಡಿ ಮಾಹಿತಿಯನ್ನು ತಂತ್ರಾಂಶದಲ್ಲಿ ಅಪ್‌ಡೇಟ್ ಮಾಡುವಂತೆ ಸೂಚಿಸಲಾಗಿದೆ.

google ananta

10:38 PM (IST) Feb 04

ಟ್ರಂಪ್ ವೀಸಾ ನೀತಿಗೆ ಗೂಗಲ್ ಚೆಕ್-ಮೇಟ್; ಬೆಂಗಳೂರಿನಲ್ಲಿ 20,000 ಉದ್ಯೋಗಿಗಳಿಗೆ ಹೊಸ ಕಚೇರಿ!

ಅಮೆರಿಕದ ವೀಸಾ ನಿಯಮಗಳು ವಿದೇಶಗಳಲ್ಲಿ ತಾಂತ್ರಿಕ ನೇಮಕಾತಿಗಳನ್ನು ಬಿಗಿಗೊಳಿಸುತ್ತಿರುವುದರಿಂದ, ಬೆಂಗಳೂರಿನಲ್ಲಿ 20,000 ಉದ್ಯೋಗಿಗಳಿಗೆ ಅವಕಾಶ ಕಲ್ಪಿಸಬಹುದಾದ ಹೊಸ ಕಚೇರಿ ಸ್ಥಳದೊಂದಿಗೆ ಆಲ್ಫಾಬೆಟ್ ಭಾರತದಲ್ಲಿ ಪ್ರಮುಖ ವಿಸ್ತರಣೆಯನ್ನು ಯೋಜಿಸುತ್ತಿದೆ.

 

Read Full Story

10:13 PM (IST) Feb 04

Bhagyalakshmi Serial - 2 ನೇ ಮದುವೆಯಾಗೋ ಖುಷಿಯಲ್ಲಿದ್ದ ಭಾಗ್ಯಗೆ ಭೂಮಿ ಇಬ್ಭಾಗವಾಗುವಂಥ ನ್ಯೂಸ್‌ ಸಿಕ್ಕಿತು!

Bhagyalakshmi Serial: 'ಭಾಗ್ಯಲಕ್ಷ್ಮಿ' ಈಗ ರೋಚಕ ಘಟ್ಟ ತಲುಪಿದೆ. ಭಾಗ್ಯಳ ಬದುಕಿಗೆ ಹಳೆಯ ಪತಿ ತಾಂಡವ್ ಕೂಡ ಬಂದಿದ್ದಾನೆ, ಇಷ್ಟುದಿನಗಳ ಕಾಲ ಕಷ್ಟದಲ್ಲಿ ಜೊತೆಗಿದ್ದು, ಆಕೆಯನ್ನು ಗೌರವಿಸುವ ಆದೀಶ್ವರ್ ಕಾಮತ್ ಇದ್ದಾನೆ. ಆದೀಶ್ವರ್‌ ಜೊತೆ ಮದುವೆ ಆಗಬೇಕು ಎಂದುಕೊಂಡ ಭಾಗ್ಯಗೆ ಧರ್ಮಸಂಕಟ ಬಂದಿದೆ.

 

Read Full Story

09:36 PM (IST) Feb 04

Photos - 8 ವರ್ಷ ಕಾದು ಮದುವೆಯಾಗಿರೋ ನಟ ಮಂಡ್ಯ ರಮೇಶ್‌ ಮಗಳು ದಿಶಾ; ಈಗ ಆ ರಹಸ್ಯ ಬಿಚ್ಚಿಟ್ರು

Actor Mandya Ramesh Daughter Disha: ನಟ ಮಂಡ್ಯ ರಮೇಶ್‌ ಮಗಳು ದಿಶಾ ಅವರು ಮದುವೆಯ ಫೋಟೋಗಳನ್ನು ಶೇರ್‌ ಮಾಡಿದ್ದಲ್ಲದೆ, ಲವ್‌ಸ್ಟೋರಿ ರಹಸ್ಯದ ಬಗ್ಗೆ ಫಸ್ಟ್‌ ಟೈಮ್‌ ರಿವೀಲ್‌ ಮಾಡಿದ್ದಾರೆ. ಸುಂದರ ಫೋಟೋಗಳನ್ನು ನೋಡಿ.

 

Read Full Story

08:14 PM (IST) Feb 04

ಹೃದಯಕ್ಕೆ ಹೊಸ ಕವಾಟ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿನೂತನ ಯಶಸ್ವಿ ಟಿಎಂವಿಆರ್‌ ಚಿಕಿತ್ಸೆ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ, ದಕ್ಷಿಣ ಕರ್ನಾಟಕದ ಮೊದಲ  ಟಿಎಂವಿಆರ್  ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಅಪಾಯದಲ್ಲಿದ್ದ 72ವರ್ಷದ ರೋಗಿಗೆ ಈ ಅತ್ಯಾಧುನಿಕ,ಕನಿಷ್ಠ ಆಕ್ರಮಣಕಾರಿ ವಿಧಾನದ ಮೂಲಕ ಚಿಕಿತ್ಸೆ ನೀಡಿ, ಮೂರೇ ದಿನಗಳಲ್ಲಿ ಬಿಡುಗಡೆ ಮಾಡಲಾಯಿತು.

Read Full Story

07:56 PM (IST) Feb 04

ಬೆಂಗಳೂರು ಮೆಟ್ರೋ ಟಿಕೆಟ್ ದರ ಹೆಚ್ಚಳ - ಫೆಬ್ರವರಿ 9ರಿಂದ ಶೇ. 5ರಷ್ಟು ದರ ಏರಿಕೆ ಅನ್ವಯ - ಇಲ್ಲಿದೆ ಹೊಸ ದರಪಟ್ಟಿ!

ಬೆಂಗಳೂರಿನ 'ನಮ್ಮ ಮೆಟ್ರೋ' ಪ್ರಯಾಣ ದರವನ್ನು ಶೇ. 5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಫೆ.9, ಸೋಮವಾರದಿಂದ ಹೊಸ ದರಗಳು ಜಾರಿಗೆ ಬರಲಿದ್ದು, ನಿರ್ವಹಣಾ ವೆಚ್ಚದ ಹೆಚ್ಚಳವಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ದರ ಏರಿಕೆಗೆ ಮೆಟ್ರೋ ಪ್ರಯಾಣಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

Read Full Story

07:53 PM (IST) Feb 04

Serial BTS - ಕೆನ್ನೆಗೆ ಹೊಡೆಯುವ ದೃಶ್ಯಕ್ಕೆ ಎಷ್ಟೊಂದು ಸರ್ಕಸ್​ ಮಾಡ್ತಾರೆ ನೋಡಿ ಸೀರಿಯಲ್​ಗಳಲ್ಲಿ!

'ಶ್ರಾವಣಿ ಸುಬ್ರಹ್ಮಣ್ಯ' ಸೀರಿಯಲ್‌ನ ಶೂಟಿಂಗ್ ವಿಡಿಯೋವೊಂದು ವೈರಲ್ ಆಗಿದೆ. ಇದರಲ್ಲಿ ನಟಿ ರಕ್ಷಿತಾ ಭಾಸ್ಕರ್, ಸಹನಟ ಅಥರ್ವ ಅವರ ಕೆನ್ನೆಗೆ ಹೊಡೆಯುವ ದೃಶ್ಯದ ಚಿತ್ರೀಕರಣದ ಹಿಂದಿನ ಸವಾಲುಗಳು ಮತ್ತು ತಮಾಷೆಯ ಕ್ಷಣಗಳನ್ನು ತೋರಿಸಲಾಗಿದೆ.

Read Full Story

07:47 PM (IST) Feb 04

ಸೈನಿಕರ ಅನುಕೂಲಕ್ಕೆ ಘಟಪ್ರಭಾದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆ, ಕರಾವಳಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ

ಸೈನಿಕರ ಅನುಕೂಲಕ್ಕಾಗಿ ಘಟಪ್ರಭಾ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಸಂಸದ ಈರಣ್ಣ ಕಡಾಡಿ ಮನವಿ ಸಲ್ಲಿಸಿದ್ದಾರೆ. ಹಾಗೆಯೇ, ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲನ್ನು ಕರಾವಳಿ ಜಿಲ್ಲೆಗಳಿಗೆ ವಿಸ್ತರಿಸಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ.
Read Full Story

07:17 PM (IST) Feb 04

ಹಾಟ್​ ಅವತಾರದಲ್ಲಿ ಪಡ್ಡೆಗಳ ನಶೆ ಏರಿಸಿದ Bigg Boss ತನಿಷಾ ಕುಪ್ಪಂಡ - ಥಹರೇವಾರಿ ಕಮೆಂಟ್ಸ್​

ಬಿಗ್​ಬಾಸ್​ ಖ್ಯಾತಿಯ ನಟಿ ತನಿಷಾ ಕುಪ್ಪಂಡ, ನಟನೆ ಮಾತ್ರವಲ್ಲದೆ 'ಕೋಣ' ಚಿತ್ರದ ಮೂಲಕ ನಿರ್ಮಾಪಕಿಯಾಗಿಯೂ ಯಶಸ್ಸು ಕಂಡಿದ್ದಾರೆ. ಇತ್ತೀಚೆಗೆ ತಮ್ಮ ಹಾಟ್​ ಫೋಟೋಶೂಟ್​ ಮೂಲಕವೂ ಅವರು ಸದ್ದು ಮಾಡುತ್ತಿದ್ದಾರೆ.

Read Full Story

07:15 PM (IST) Feb 04

ಜ್ಯೋತಿಷಿ ಕಮಲಾಕರ್‌ ಭಟ್‌ & ಸುಚಿತ್ರಾ ಆಂಟಿ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್‌!

Kamalakar Bhat Case: 7 Accused Sent to Judicial Custody Till Feb 11 ಸಿದ್ದಾಪುರದಲ್ಲಿ ನಡೆದ ಚಾಕು ಇರಿತ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಏಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

Read Full Story

07:09 PM (IST) Feb 04

ಬಿಜೆಪಿಗೆ ಮಾನ ಮರ್ಯಾದೆ ಇಲ್ಲ, ಥೂ ನಿಮ್ಮ ಜನ್ಮಕ್ಕೆ ಬೆಂಕಿ ಹಾಕ, ನಾಯಿಗಿಂತ ಕಡೆ ನೀವು, ಕೆಟ್ಟ RSS - ಶಿವಲಿಂಗೇಗೌಡ ಕೆಂಡಾಮಂಡಲ

ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ವಿಪಕ್ಷ ನಾಯಕ ಅಶೋಕ್ ಆಗ್ರಹಿಸಿದ್ದರಿಂದ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಯಿತು. ಈ ವೇಳೆ ಶಾಸಕ ಶಿವಲಿಂಗೇಗೌಡ, ವಿಪಕ್ಷಗಳ ವಿರುದ್ಧ ಅಸಭ್ಯ ಹಾಗೂ ಅವಾಚ್ಯ ಪದಗಳನ್ನು ಬಳಸಿ, ವೈಯಕ್ತಿಕ ನಿಂದನೆ ನಡೆಸಿದ್ದು ಸದನದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.
Read Full Story

07:04 PM (IST) Feb 04

Bigg Boss Gilli Nata - ಭೇಟಿ ಮಾಡಿಲ್ಲವೆಂದು ಮುನಿಸಿಕೊಂಡ ಟ್ಯಾಟೋ ಕುಮಾರಣ್ಣನಿಗೆ ಕ್ಷಮೆ ಕೇಳಿದ ಗಿಲ್ಲಿ ನಟ!

ಬಿಗ್ ಬಾಸ್ ಸೀಸನ್ 12ರ ವಿಜೇತ ಗಿಲ್ಲಿ ನಟ, ತನ್ನ ಟ್ಯಾಟೋ ಹಾಕಿಸಿಕೊಂಡಿದ್ದ ಮಂಡ್ಯದ ಅಭಿಮಾನಿಯನ್ನು ಭೇಟಿಯಾಗದ ಕಾರಣ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಗೆದ್ದ ನಂತರ ಅಭಿಮಾನಿಗಳನ್ನು ಮರೆತಿದ್ದಾರೆ ಎಂದು ಅಭಿಮಾನಿ ಕುಮಾರ್ ಬೇಸರ ವ್ಯಕ್ತಪಡಿಸಿದ್ದು, ಈ ಘಟನೆಯಿಂದ ನೊಂದ ಗಿಲ್ಲಿ ನಟ ಕ್ಷಮೆಯಾಚಿಸಿದ್ದಾರೆ.

Read Full Story

06:17 PM (IST) Feb 04

ಓಡಿ ಹೋದ ಆಟೋರಾಜನ ಹೆಂಡತಿ, ಬಂದು ಬಿಡು ಶೀಲಾ ಅಂತ ಗೋಗರೆದಾಗ ಬರ್ತಾಳಾ?

ನೀನು ನನ್ನ ಪ್ಲೇವರ್, ಬಂದು ಬಿಡು ಬಂಗಾರಿ, ನಿನ್ನ ರಾಣಿ ಥರ ನೋಡ್ಕೋತೀನಿ ಬಂದು ಬಿಡು ಲೀಲಾ ಹೀಗೆ ಮಂಜು ಗೋಳಾಡಿದ್ದು ನೀವೆಲ್ಲರೂ ನೋಡಿದ್ದೀರ. ಇದೀಗ ಅದೇ ರೀತಿಯ ಸನ್ನಿವೇಷ ಶಾಂತಂ ಪಾಪಂನಲ್ಲಿ ಮೂಡಿ ಬಂದಿದೆ. ಆಟೋ ರಾಜ ಬಂದು ಬಿಡು ಶೀಲಾ ಅಂದ್ರೆ ಬರ್ತಾಳಾ?

 

Read Full Story

05:40 PM (IST) Feb 04

ಕಂಡೋರ ಹೆಂಡ್ತಿ ರೀಲ್ಸ್ ಮಾಡೋದನ್ನ ಕದ್ದು ನೋಡಿದ ಕ(ಮ)ಲಾಕರ ಗುರೂಜಿ ಈಗ ಕಂಬಿ ಹಿಂದೆ!

ಖ್ಯಾತ ಟಿವಿ ಜ್ಯೋತಿಷಿ ಕಮಲಾಕರ್ ಭಟ್, ರೀಲ್ಸ್ ಮಾಡುವ ವಿವಾಹಿತೆ ಸುಚಿತ್ರಾಳ ವ್ಯಾಮೋಹಕ್ಕೆ ಬಿದ್ದು ಅನೈತಿಕ ಸಂಬಂಧ ಬೆಳೆಸಿಕೊಂಡಿದ್ದರು. ಈ ಸಂಬಂಧವು ಘೋರ ದುರಂತಕ್ಕೆ ಕಾರಣವಾಗಿ, ಮಹಿಳೆಯ ಸಂಬಂಧಿಕರ ಮೇಲೆ ನಡೆದ ದಾಳಿಯಲ್ಲಿ ಓರ್ವ ವ್ಯಕ್ತಿ ಕೊಲೆಯಾಗಿದ್ದು, ಇದೀಗ ಜ್ಯೋತಿಷಿ ಕಂಬಿ ಎಣಿಸುತ್ತಿದ್ದಾರೆ.

Read Full Story

05:14 PM (IST) Feb 04

ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿಗಳಿಂದಲೇ ಬರೋಬ್ಬರಿ 23 ಲಕ್ಷ ರೂ ಗುಳುಂ! ವೈಯಕ್ತಿಕ ಯುಪಿಐ ಪಾವತಿ ಕೋಡ್ ಬಳಕೆ!

ಪ್ರತಿಷ್ಠಿತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಯುಪಿಐ ಪಾವತಿ ವ್ಯವಸ್ಥೆಯನ್ನು ದುರುಪಯೋಗಪಡಿಸಿ 23 ಲಕ್ಷಕ್ಕೂ ಅಧಿಕ ಹಣದ ವಂಚನೆ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿಗಳು ವೈಯಕ್ತಿಕ ಕೋಡ್ ಬಳಸಿ ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಈ ಸಂಬಂಧ ವೈದ್ಯಕೀಯ ಅಧೀಕ್ಷಕರು ದೂರು ದಾಖಲಿಸಿದ್ದಾರೆ.

Read Full Story

05:11 PM (IST) Feb 04

ZEE Kannada ಹೊಸ ಸೀರಿಯಲ್ಸ್​​ ಕೃಷ್ಣ ರುಕ್ಕು, ಜಗದ್ಧಾತ್ರಿ ಶೀಘ್ರದಲ್ಲಿ - ಯಾವ ಧಾರಾವಾಹಿಗಳ ಅಂತ್ಯ?

'ಪುಟ್ಟಕ್ಕನ ಮಕ್ಕಳು' ಧಾರಾವಾಹಿ ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದ್ದು, 'ಕೃಷ್ಣ ರುಕ್ಕು' ಮತ್ತು 'ಜಗದ್ಧಾತ್ರಿ' ಎಂಬ ಹೊಸ ಸೀರಿಯಲ್‌ಗಳು ಬರಲಿವೆ. ಇದರಿಂದಾಗಿ, 'ಅಮೃತಧಾರೆ' ಅಥವಾ 'ಬ್ರಹ್ಮಗಂಟು' ಧಾರಾವಾಹಿ ಅಥವಾ ಬೇರೆ ಸೀರಿಯಲ್​ ಯಾವುದು ಅಂತ್ಯವಾಗಲಿದೆ ಎಂಬ ಕುತೂಹಲ ವೀಕ್ಷಕರಲ್ಲಿ ಮೂಡಿದೆ.  

Read Full Story

05:08 PM (IST) Feb 04

ಟಾಕ್ಸಿಕ್ ಸಿನಿಮಾ 'ಧುರಂಧರ್-2' ಸಿನಿಮಾವನ್ನು ನುಂಗಿ ಹಾಕಿದೆ.. ಹೀಗಂತ ಮುಂಬೈ ಮುಂದಿ ಹೇಳ್ತಿರೋದು ಯಾಕೆ?

‘ಟಾಕ್ಸಿಕ್’ ಸಿನಿಮಾ ಈಗಾಗಲೇ ‘ಧುರಂಧರ್ 2’ ಚಿತ್ರವನ್ನು ನುಂಗಿ ಹಾಕಿಯಾಗಿದೆ. ಮತ್ತೆ ಈ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಟಾಕ್ಸಿಕ್ ಸಿನಿಮಾ ಮುಂದೆ ಹೋಗುತ್ತದೆ' ಎಂದು ಹಿಂದಿಯ ಕೆಲವು ಫ್ಯಾನ್ಸ್ ಹೇಳಿಕೊಂಡಿದ್ದಾರೆ. 'ಟಾಕ್ಸಿಕ್' ಹಾಗೂ 'ಧುರಂಧರ್ 2' ಚಿತ್ರಗಳು ಮಾರ್ಚ್ 19ರಂದು ತೆರೆಗೆ ಬರಲಿವೆ.

Read Full Story

04:57 PM (IST) Feb 04

ಬೆಳಗಾವಿ ಅಪರಾಧ ಸುದ್ದಿ - ಕೇವಲ ಎರಡು ಸಿಗರೇಟ್ ಹಣಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ!

ಬೆಳಗಾವಿ ತಾಲೂಕಿನ ಘೋಡಕೆನಟ್ಟಿ ಗ್ರಾಮದಲ್ಲಿ, ಕೇವಲ ಎರಡು ಸಿಗರೇಟ್ ಮತ್ತು ನೀರಿನ ಬಾಟಲಿ ಹಣ ಕೇಳಿದ್ದಕ್ಕೆ ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್ ಅವರನ್ನು ಯುವಕರ ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿದೆ. ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

Read Full Story

04:39 PM (IST) Feb 04

ಸಿಎಂ ಸಿದ್ದರಾಮಯ್ಯ ಜೊತೆ ಕಮಲಾಕರ್‌ ಭಟ್‌ ಇರೋ ಫೋಟೋ ಟ್ವೀಟ್‌ ಮಾಡಿದ ಶಾಸಕ ಸುರೇಶ್‌ಕುಮಾರ್‌!

ಕೊಲೆ ಪ್ರಕರಣದ ಆರೋಪಿ ಕಮಲಾಕರ್ ಭಟ್ ಜೊತೆಗಿನ ಸಂಬಂಧದ ಬಗ್ಗೆ ಶಾಸಕ ಸುರೇಶ್ ಕುಮಾರ್‌ ಮೇಲೆ ಬಿ.ಕೆ. ಹರಿಪ್ರಸಾದ್ ಆರೋಪ ಮಾಡಿದ್ದರು. ಇದಕ್ಕೆ ಫೇಸ್‌ಬುಕ್‌ನಲ್ಲಿ ತಿರುಗೇಟು ನೀಡಿರುವ ಸುರೇಶ್ ಕುಮಾರ್, ಸಿದ್ದರಾಮಯ್ಯ ಜೊತೆಗಿನ ಭಟ್ ಫೋಟೋವನ್ನು ಹಂಚಿಕೊಂಡಿದ್ದಾರೆ.

Read Full Story

04:19 PM (IST) Feb 04

ಬೆಂಗಳೂರು ಕಾಮಗಾರಿ ನಡೆಯುತ್ತಿರುವಾಗಲೇ 20 ಅಡಿ ಕುಸಿದ ರಸ್ತೆ; ಸುತ್ತಲಿನ ಏರಿಯಾದಲ್ಲಿ ಭಾರೀ ಟ್ರಾಫಿಕ್ ಜಾಮ್!

ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಹಳೇ ಚಂದಾಪುರದ ಬಳಿ ನಡೆಯುತ್ತಿದ್ದ ಅಂಡರ್ ಪಾಸ್ ಕಾಮಗಾರಿಯಿಂದಾಗಿ ರಸ್ತೆ ಸುಮಾರು 20 ಅಡಿ ಆಳಕ್ಕೆ ಕುಸಿದಿದೆ. ಈ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.

Read Full Story

04:18 PM (IST) Feb 04

ದತ್ತಪೀಠದಲ್ಲಿ ಹೊಸ ವಿವಾದ, ಸುಪ್ರೀಂ ಆದೇಶ ಉಲ್ಲಂಘಿಸಿ ಗುಹೆಯೊಳಗೆ ಹೊಸ ಆಚರಣೆ, ಮುಜಾವರ್‌ಗಳು ವಿವಾಹಿತರಾಗಿರಬಾರದು!

ಚಿಕ್ಕಮಗಳೂರಿನ ವಿವಾದಿತ ದತ್ತಪೀಠದ ಗುಹೆಯೊಳಗೆ 'ಕಲಮೆ ತಯ್ಯಬಾ' ಎಂಬ ಹೊಸ ಆಚರಣೆ ನಡೆಸಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಇದು ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೆ, ನಿಯಮಬಾಹಿರವಾಗಿ ಮುಜಾವರ್‌ಗಳು ಕಾರ್ಯನಿರ್ವಹಿಸುತ್ತಿದ್ದಾರೆಂದು ಆರೋಪಿಸಿವೆ.

Read Full Story

04:08 PM (IST) Feb 04

ಜ್ಯೋತಿಷ್ಯ ಹೇಳು ಅಂದ್ರೆ ಆಂಟಿಯ ಹಿಂದೆ ಬಿದ್ದ..! ಪತ್ನಿಯ ಕಾ*ಮಕಾಂಡಕ್ಕೆ ಸಹೋದರನನ್ನು ಕಳೆದುಕೊಂಡ ಪತಿ!

ಟಿವಿಯಲ್ಲಿ ಜ್ಯೋತಿಷ್ಯ ಹೇಳುತ್ತಿದ್ದ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್, ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ವಿವಾಹಿತ ಮಹಿಳೆ ಸುಚಿತ್ರಾ ಜೊತೆಗಿನ ಅನೈತಿಕ ಸಂಬಂಧವೇ ಈ ಘೋರ ಕೃತ್ಯಕ್ಕೆ ಕಾರಣವಾಗಿದ್ದು, ಈ ಕೊಲೆಯ ಹಿಂದಿನ ಸಂಪೂರ್ಣ ಕಥೆ ಇಲ್ಲಿದೆ.
Read Full Story

04:01 PM (IST) Feb 04

ಗಂಡನ ಅಕ್ರಮ ಸಂಬಂಧಕ್ಕೆ ಸೋಶಿಯಲ್‌ ಮೀಡಿಯಾದಲ್ಲಿ ಕಣ್ಣೀರಿಟ್ಟ ಬಿಗ್‌ಬಾಸ್‌ ಸ್ಪರ್ಧಿ!

'ವಡಾ ಪಾವ್ ಗರ್ಲ್' ಖ್ಯಾತಿಯ ಚಂದ್ರಿಕಾ ದೀಕ್ಷಿತ್, ತಮ್ಮ ಪತಿ ಯುಗಮ್ ಗೆರಾ ಅಕ್ರಮ ಸಂಬಂಧ ಹೊಂದಿದ್ದಾರೆಂದು ಆರೋಪಿಸಿ ಕಣ್ಣೀರಿನ ವಿಡಿಯೋ ಹಂಚಿಕೊಂಡಿದ್ದಾರೆ. ತನ್ನ ಬಳಿ ಸಾಕ್ಷಿಗಳಿವೆ ಎಂದು ಹೇಳಿಕೊಂಡಿರುವ ಅವರು, ಎರಡು ತಿಂಗಳಿಂದ ಈ ನೋವನ್ನು ಸಹಿಸಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. 

Read Full Story

03:31 PM (IST) Feb 04

ದಾಸನಿಗಿಲ್ಲ ಬಿಡುಗಡೆ ಭಾಗ್ಯ, ಜೈಲಲ್ಲೇ ಹುಟ್ಟುಹಬ್ಬ! ಮುಂದಿನ ವರ್ಷ ಸಿಗೋಣ ಎಂದಿದ್ದ ದರ್ಶನ್

ನಟ ದರ್ಶನ್ ಅವರ 49ನೇ ಹುಟ್ಟುಹಬ್ಬವನ್ನು ಈ ಬಾರಿ ಜೈಲಿನಲ್ಲಿ ಕಳೆಯುವುದು ಬಹುತೇಕ ಖಚಿತವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಅವರು, ಬಿಡುಗಡೆಯಾಗುತ್ತಾರೆಂಬ ಅಭಿಮಾನಿಗಳ ನಿರೀಕ್ಷೆ ಹುಸಿಯಾಗಿದ್ದು, ದಾಸನಿಲ್ಲದ ಹುಟ್ಟುಹಬ್ಬ ಆಚರಣೆಗೆ ಫ್ಯಾನ್ಸ್ ಸಜ್ಜಾಗುತ್ತಿದ್ದಾರೆ.
Read Full Story

03:01 PM (IST) Feb 04

Viral Video - ಮಧ್ಯಾಹ್ನ ನಿದ್ದೆ ಮಲಗಿ ಸಂಜೆ ಎಚ್ಚರಗೊಂಡ ಬಾಲಕ; ಬೆಳಗ್ಗೆ ಆಯ್ತು ಅನ್ಕೊಂಡು ಶಾಲೆಗೆ ಹೊರಟೇಬಿಟ್ಟ!

ಮಧ್ಯಾಹ್ನದ ನಿದ್ದೆಯಿಂದ ಎದ್ದ ಶಾಲಾ ಬಾಲಕನೊಬ್ಬ, ಸಂಜೆ 7 ಗಂಟೆಯನ್ನು ಬೆಳಗ್ಗೆ 7 ಎಂದು ಭಾವಿಸಿ ಯೂನಿಫಾರ್ಮ್ ಧರಿಸಿ ಶಾಲೆಗೆ ಹೊರಟಿದ್ದಾನೆ. ಈ ದೃಶ್ಯದ ವಿಡಿಯೋ ವೈರಲ್ ಆಗಿದ್ದು, ಹುಡುಗನ ಮುಗ್ಧತೆ ಮತ್ತು ಗಂಭೀರತೆಗೆ ನೆಟ್ಟಿಗರು ನಕ್ಕು ಸುಸ್ತಾಗಿದ್ದಾರೆ.
Read Full Story

02:36 PM (IST) Feb 04

Airtel Plans - ಏರ್‌ಟೆಲ್‌ನಿಂದ ಬಂಪರ್ ಆಫರ್! ಕಡಿಮೆ ಬೆಲೆ ರಿಚಾರ್ಜ್ ಪ್ಲಾನ್‌ಗಳಲ್ಲಿ ಅನ್‌ಲಿಮಿಟೆಡ್ 4G, 5G ಡೇಟಾ!

ಭಾರ್ತಿ ಏರ್‌ಟೆಲ್ ತನ್ನ ರಿಚಾರ್ಜ್ ಪ್ರೀಪೇಯ್ಡ್ ಪ್ಲಾನ್‌ಗಳನ್ನು ನವೀಕರಿಸಿದ್ದು, ಇನ್ನು ಮುಂದೆ ಅನ್‌ಲಿಮಿಟೆಡ್ 4G ಮತ್ತು 5G ಡೇಟಾ ಲಭ್ಯವಾಗಲಿದೆ. ಈ ಅನ್‌ಲಿಮಿಟೆಡ್ ಡೇಟಾಗೆ 300 GB ಫೇರ್ ಯೂಸೇಜ್ ಪಾಲಿಸಿ (FUP) ಅನ್ವಯವಾಗಲಿದ್ದು, 28 ದಿನಗಳ ವ್ಯಾಲಿಡಿಟಿಯೊಂದಿಗೆ ಈ ಪ್ಲಾನ್‌ಗಳು ಬರುತ್ತವೆ.

Read Full Story

02:34 PM (IST) Feb 04

ರಾಜ್ಯದಲ್ಲಿ ಬೀದಿನಾಯಿಗಳಷ್ಟೇ ಅಲ್ಲ, ಹುಚ್ಚರ ದಾಳಿಗಳು ಹೆಚ್ಚಳ, ಸೈಡ್‌ ಬಿಡದ್ದಕ್ಕೆ ಬಸ್ ಚಾಲಕನನಿಗೆ ಥಳಿತ!

ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಸೈಡ್ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬೈಕ್ ಸವಾರನೊಬ್ಬ ಕೆಕೆಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಚಾಲಕ ಚಂದ್ರಶೇಖರ ಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ.
Read Full Story

02:22 PM (IST) Feb 04

ಕಾಳಿಯಾಗಿ ಬದಲಾದ Karna Serial ನಿತ್ಯಾ! ಭಯಂಕರ ಗೆಟಪ್​ನಲ್ಲಿ ನಟಿ ನಮ್ರತಾ ಗೌಡ

ಬಿಗ್ ಬಾಸ್ ಖ್ಯಾತಿಯ ಹಾಗೂ 'ಕರ್ಣ' ಧಾರಾವಾಹಿ ನಟಿ ನಮ್ರತಾ ಗೌಡ ಇದೀಗ ತಮ್ಮ ಕಾಳಿ ಅವತಾರದ ವಿಡಿಯೋ ಮೂಲಕ ಸದ್ದು ಮಾಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಈ ರೌದ್ರಾವತಾರದ ರೂಪವು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

 

Read Full Story

02:02 PM (IST) Feb 04

ಕಲಬುರಗಿ ಜೈಲಿನ ಶೌಚಾಲಯದಲ್ಲಿ ಮೊಬೈಲ್, ಇಯರ್ ಬಡ್ಸ್ ಪತ್ತೆ!

ಕಲಬುರಗಿ ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ನಡೆಸಿದ ಅನಿರೀಕ್ಷಿತ ದಾಳಿಯಲ್ಲಿ, ಕೈದಿಗಳು ಬಳಸುತ್ತಿದ್ದ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಶೌಚಾಲಯದಲ್ಲಿ ಬಚ್ಚಿಟ್ಟಿದ್ದ ಮೂರು ಸ್ಮಾರ್ಟ್‌ಫೋನ್‌ಗಳು ಇಯರ್ ಬಡ್ಸ್‌ ವಶಪಡಿಸಿಕೊಳ್ಳಲಾಗಿದ್ದು, ಈ ಕುರಿತು ತನಿಖೆ ಮುಂದುವರೆದಿದೆ.

Read Full Story

01:48 PM (IST) Feb 04

Sushma Rao - ಡಿವೋರ್ಸ್​ ಆಗಿದ್ದು, ಮರು ಮದ್ವೆಯಾಗಿದ್ದು ಟಾಂ ಟಾಂ ಮಾಡಬೇಕಿತ್ತಾ? ಏನಿದು ಕೆಟ್ಟ ಮನಸ್ಥಿತಿ?

'ಭಾಗ್ಯಲಕ್ಷ್ಮಿ' ಸೀರಿಯಲ್ ಖ್ಯಾತಿಯ ನಟಿ ಸುಷ್ಮಾ ಕೆ. ರಾವ್ ಅವರು  ಪತಿ ಮತ್ತು ಮಗನನ್ನು ಪರಿಚಯಿಸುತ್ತಲೇ  ಸೋಷಿಯಲ್ ಮೀಡಿಯಾದಲ್ಲಿ ಎದ್ದಿರುವ ಚರ್ಚೆ ಮತ್ತು ಅವರ ಖಾಸಗಿತನದ ಹಕ್ಕಿನ ಕುರಿತು ಈ ಲೇಖನ ವಿವರಿಸುತ್ತದೆ.

Read Full Story

01:42 PM (IST) Feb 04

ವಂಟಮೂರಿ - ತಾಯಿಯನ್ನು ವಿವಸ್ತ್ರಗೊಳಿಸಿ, ಕಟ್ಟಿ ಹಾಕಿ ಹಲ್ಲೆ ನಡೆಸಿದ 12 ಮಂದಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ

ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 12 ಆರೋಪಿಗಳಿಗೆ ಐದು ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ. ಮಗ ಪ್ರೀತಿಸಿದ ಯುವತಿಯೊಂದಿಗೆ ಓಡಿಹೋದ ಕಾರಣಕ್ಕೆ ಯುವಕನ ತಾಯಿಯ ಮೇಲೆ ಈ ಅಮಾನವೀಯ ಕೃತ್ಯ ಎಸಗಲಾಗಿತ್ತು.  

Read Full Story

01:39 PM (IST) Feb 04

ಆಟವಾಡುತ್ತಾ ಆಟಿಕೆಯನ್ನೇ ನುಂಗಿದ ಮಗು - ಶಸ್ತ್ರಚಿಕಿತ್ಸೆ ನಡೆಸದೇ ಆಟಿಕೆ ಹೊರತೆಗೆದ ವೈದ್ಯರು..!

ಹಾಲುಗಲ್ಲದ ಪುಟ್ಟ ಮಕ್ಕಳು ಕೈಗೆ ಸಿಕ್ಕಿದ್ದನ್ನು ಬಾಯಿಗೆ ಹಾಕಿ ಬಿಡುವ ಅಭ್ಯಾಸವನ್ನು ಹೊಂದಿರುತ್ತಾರೆ. ಹಾಗೆಯೇ ಇಲ್ಲೊಂದು ಮಗು ಆಟಿಕೆಯೊಂದನ್ನು ನುಂಗಿ ಪೋಷಕರಿಗೆ ಜೀವ ಬಾಯಿಗೆ ಬರುವಂತೆ ಮಾಡಿದೆ. ವೈದ್ಯರ ಸಮಯಪ್ರಜ್ಞೆಯಿಂದ ಮಗು ಬದುಕುಳಿದಿದೆ.

Read Full Story

01:36 PM (IST) Feb 04

ಮಂಡ್ಯದಲ್ಲಿ ಬಾರ್ ಲೈಸೆನ್ಸ್‌ಗೆ ₹60 ಲಕ್ಷ ಲಂಚಕ್ಕೆ ಬೇಡಿಕೆ; ಅಬಕಾರಿ ಡಿಸಿ ನಾಗಶಯನ ಸಸ್ಪೆಂಡ್!

ಮಂಡ್ಯದಲ್ಲಿ ಬಾರ್ ಲೈಸೆನ್ಸ್ ನೀಡಲು ₹60 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಜಿಲ್ಲಾ ಅಬಕಾರಿ ಉಪ ಆಯುಕ್ತ ನಾಗಶಯನ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ಅರ್ಜಿದಾರ ಸುಂದರ್ ಅವರು ನೀಡಿದ ಲೋಕಾಯುಕ್ತ ದೂರು ಮತ್ತು ಸದನದಲ್ಲಿ ನಡೆದ ಚರ್ಚೆಯ ಹಿನ್ನೆಲೆಯಲ್ಲಿ ಈ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.
Read Full Story

01:24 PM (IST) Feb 04

Mandya - ಪಂಚಾಯ್ತಿಗೆ ಬರುತ್ತಿದ್ದಂತೆ 3 ದಿನದಲ್ಲಿ 54 ಲಕ್ಷ ಮಾಯ ಮಾಡಿದ ಪಿಡಿಒ ಶ್ರೀನಿವಾಸಯ್ಯ

ಮಂಡ್ಯದ ತಗ್ಗಹಳ್ಳಿ ಪಂಚಾಯ್ತಿಯಲ್ಲಿ ಪ್ರಭಾರಿಯಾಗಿ ಅಧಿಕಾರ ವಹಿಸಿಕೊಂಡ ಪಿಡಿಒ ಕೇವಲ ಮೂರು ದಿನಗಳಲ್ಲಿ 54 ಲಕ್ಷಕ್ಕೂ ಹೆಚ್ಚು ಹಣವನ್ನು ಅಕ್ರಮವಾಗಿ ಪಾವತಿಸಿದ್ದಾರೆ. ಗ್ರಾಮಸ್ಥರ ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ಹಿರಿಯ ಅಧಿಕಾರಿಗಳು, ಹೆಚ್ಚಿನ ಹಣ ಪಾವತಿಯಾಗುವುದನ್ನು ತಡೆದು ತನಿಖೆ ಆರಂಭಿಸಿದ್ದಾರೆ.

Read Full Story

01:03 PM (IST) Feb 04

ಲಕ್ಕುಂಡಿ ಸರ್ಪಗಳೊಂದಿಗೆ ವಾಸವಿದ್ದ ಮಹಾದೇವಿ ಮನೆ ತೋರಿಸಿದ ಅಜ್ಜ; ಇಲ್ಲಿರೋ ನಿಧಿ 7 ಹೆಡೆ ಸರ್ಪ ಕಾಯೋದು ನೋಡಿದ್ದೇನೆ!

ಕಲ್ಯಾಣಿ ಚಾಲುಕ್ಯರ ಟಂಕಸಾಲೆಯಾಗಿದ್ದ ಲಕ್ಕುಂಡಿಯಲ್ಲಿ ಅಪಾರ ನಿಧಿ ಅಡಗಿದೆ ಎಂದು ನಂಬಲಾಗಿದೆ. ಈ ನಿಧಿಯನ್ನು 7 ಹೆಡೆ ಸರ್ಪಗಳು ಕಾಯುತ್ತಿದ್ದು, ಮಹಾದೇವಿ ಎಂಬ ಮಹಿಳೆ ಈ ಹಾವುಗಳೊಂದಿಗೇ ವಾಸಿಸುತ್ತಿದ್ದಳು ಎಂಬ ಮಾಹಿತಿಯನ್ನ ಹಿರಿಯ ವ್ಯಕ್ತಿ ಬಿಚ್ಚಿಟ್ಟಿದ್ದಾರೆ.

Read Full Story

01:01 PM (IST) Feb 04

Naa Ninna Bidalaare - ಶರತ್​ ಮೇಲೆ ಲವ್​ ಆಗ್ತಿದ್ದಂತೆಯೇ ಲುಕ್ಕೇ ಬದಲಾಯಿಸಿ ಹಾಟ್​ ಅವತಾರದಲ್ಲಿ ದುರ್ಗಾ!

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಶರತ್‌ಗೆ ದುರ್ಗಾ ಮೇಲೆ ಅರಿವಿಲ್ಲದೆ ಪ್ರೀತಿ ಮೂಡುತ್ತಿದ್ದು, ಇದರಿಂದ ದುರ್ಗಾ ಸಂತಸಗೊಂಡಿದ್ದಾಳೆ. ಈ ನಡುವೆ ದುರ್ಗಾ ಪಾತ್ರಧಾರಿ ರಿಷಿಕಾ, ಸೀರೆ ಬಿಟ್ಟು ಮಾಡರ್ನ್ ಡ್ರೆಸ್‌ನಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

Read Full Story

12:59 PM (IST) Feb 04

ರಾಯಚೂರು - ಎಲ್ಲಮ್ಮ ದೇವಿ ಜಾತ್ರೆಯಲ್ಲಿ ಬಾಡೂಟ ಸವಿದು ಹೊರಟಿದ್ದವ ಭೀಕರ ರಸ್ತೆ ಅಪಘಾತಕ್ಕೆ ಬಲಿ!

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬಳಿ ಯಲ್ಲಮ್ಮ ಜಾತ್ರೆಯಿಂದ ಬಾಡೂಟ ಮುಗಿಸಿ ಹಿಂತಿರುಗುತ್ತಿದ್ದ ಬೈಕ್ ಸವಾರನಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಟಿಪ್ಪರ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕ ಪರಾರಿಯಾಗಿದ್ದಾನೆ.

Read Full Story

12:54 PM (IST) Feb 04

Kitchen Tips - 5 ನಿಮಿಷದಲ್ಲಿ 20ಕ್ಕೂ ಅಧಿಕ ಪುರಿ ಲಟ್ಟಿಸೋ ಟೈಮ್ ಉಳಿಸುವ ಸೂಪರ್ ಟಿಪ್ಸ್

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋವೊಂದು, ಕಡಿಮೆ ಸಮಯದಲ್ಲಿ 20ಕ್ಕೂ ಅಧಿಕ ಪುರಿಗಳನ್ನು ಮಾಡುವ ಸುಲಭ ತಂತ್ರವನ್ನು ತೋರಿಸುತ್ತದೆ. ಬಟರ್ ಪೇಪರ್ ಮತ್ತು ಪಾತ್ರೆಯನ್ನು ಬಳಸಿ, ಒಂದೇ ಬಾರಿಗೆ ಹಲವು ಪುರಿಗಳನ್ನು ಲಟ್ಟಿಸುವ ಈ ವಿಧಾನದಿಂದ ಅಡುಗೆ ಸಮಯ ಉಳಿತಾಯವಾಗುತ್ತದೆ.
Read Full Story

12:20 PM (IST) Feb 04

ಸಿದ್ದಾಪುರ ಕೊಲೆ ಪ್ರಕರಣ - ಜ್ಯೋತಿಷಿ ಜೊತೆ ಬಿಜೆಪಿ ನಾಯಕರ ನಂಟು? ಬಿಕೆ ಹರಿಪ್ರಸಾದ್ ಗಂಭೀರ ಆರೋಪ!

ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಭಾಗಿಯಾಗಿದ್ದಾರೆ ಎನ್ನಲಾದ ಕೊಲೆ ಪ್ರಕರಣವು ರಾಜಕೀಯ ತಿರುವು ಪಡೆದುಕೊಂಡಿದೆ. ಆರೋಪಿಯೊಂದಿಗೆ ಬಿಜೆಪಿ ನಾಯಕರ ಫೋಟೋಗಳು ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಪೋಸ್ಟ್ ಮಾಡಿ ಶಾಸಕ ಎಸ್‌ ಸುರೇಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

Read Full Story

12:07 PM (IST) Feb 04

ಮೈಸೂರು ಸ್ಯಾಂಡಲ್ ಸೋಪು ಉತ್ಪನ್ನ - ದಾಖಲೆ ಬರೆದ ಕೆಎಸ್‌ಡಿಎಲ್‌

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ಈ ವರ್ಷದ ಜನವರಿಯಲ್ಲಿ ಒಟ್ಟು 4,894 ಮಟ್ರಿಕ್‌ ಟನ್‌ ಸೋಪು ಉತ್ಪನ್ನ ಉತ್ಪಾದಿಸಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಮಾಹಿತಿ ನೀಡಿದ್ದಾರೆ.

Read Full Story

12:04 PM (IST) Feb 04

ಮನೆ ಕಟ್ಟಿಕೊಳ್ಳುಲು ಹೋರಾಟ, ಮಗಳ ಸಾವಿಗೂ ನ್ಯಾಯ ಸಿಗದ ದುರಂತ, ಹೈಕೋರ್ಟ್ ಆದೇಶಕ್ಕೆ ಪೊಲೀಸರು ಡೋಂಟ್ ಕೇರ್!

ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ, ಮನೆ ಕಟ್ಟಲು ಯತ್ನಿಸಿದ ಬಡ ಕುಟುಂಬಕ್ಕೆ ಸಂಬಂಧಿಕರಿಂದ ಕಿರುಕುಳ ಮತ್ತು ಪೊಲೀಸ್ ನಿರ್ಲಕ್ಷ್ಯ ಎದುರಾಗಿದೆ. ಹೈಕೋರ್ಟ್ ಆದೇಶವಿದ್ದರೂ ನ್ಯಾಯ ಸಿಗದ ಕಾರಣ ಉಂಟಾದ ಮಾನಸಿಕ ಒತ್ತಡದಿಂದ ಕುಟುಂಬದ ಮಗಳು ಸಾವನ್ನಪ್ಪಿದ್ದು, ಇದೀಗ ಕುಟುಂಬ ನ್ಯಾಯಕ್ಕಾಗಿ ಹೋರಾಟ ಮುಂದುವರೆಸಿದೆ.

Read Full Story

More Trending News