LIVE NOW
Published : Jul 04, 2026, 06:09 AM ISTUpdated : Jul 04, 2026, 11:31 AM IST

Karnataka News Live: Vaibhav Sooryavanshi - ಇಂಗ್ಲೆಂಡ್ ವಿರುದ್ಧದ 2ನೇ ಪಂದ್ಯಕ್ಕೆ ಸೂರ್ಯವಂಶಿ ಕ್ರೀಸ್‌ಗಿಳಿಯೋದು ಫಿಕ್ಸ್? ಎರಡೇ ಮಾತಲ್ಲಿ ರಹಸ್ಯ ಬಿಚ್ಚಿಟ್ಟ ವೈಭವ್!

ಸಾರಾಂಶ

ದಾವಣಗೆರೆ: ಜಾತಿಗಣತಿ ಸಮೀಕ್ಷೆ ಮಾಡಿ, ವರದಿ ಜಾರಿಗೊಳಿಸಲು ಬಯಸಿದ್ದ ಸಿದ್ದರಾಮಯ್ಯ ಅವರು ಇನ್ನೂ 2 ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದುಕೊಂಡಿದ್ದೆವು, ಆದರೆ ಅನಿರೀಕ್ಷಿತವಾಗಿ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯಬೇಕಾಯಿತು ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ದಾವಣಗೆರೆಯಲ್ಲಿ ಶುಕ್ರವಾರ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಸಮೀಕ್ಷೆ ಮಾಡಿ, ಅದನ್ನು ಜಾರಿಗೊಳಿಸಲು ಸಿದ್ದರಾಮಯ್ಯ ಬಯಸಿದ್ದರು. ಆದರೆ, ಅನಿರೀಕ್ಷಿತವಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವರು ಕೆಳಗಿಳಿಯಬೇಕಾಯಿತು. ಸಿಎಂ ಸ್ಥಾನದಿಂದ ಕೆಳಗಿಳಿದರೂ, ಅದಕ್ಕೆ ಮುಂಚೆ ಕೊನೆಯ ದಿನ ಜಾತಿ ಜನಗಣತಿ ವರದಿಯನ್ನು ಸಿದ್ದರಾಮಯ್ಯ ಪಡೆದಿದ್ದರು. ಜಾತಿ ಜನಗಣತಿ ವರದಿಯನ್ನು ಜಾರಿಗೊಳಿಸುವ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲೂ ಪ್ರಸ್ತಾಪ ಮಾಡಿದ್ದೆವು. ಅದನ್ನು ಈಡೇರಿಸಬೇಕಾಗಿರುವುದು ನಮ್ಮ ಪಕ್ಷದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

11:31 AM (IST) Jul 04

Vaibhav Sooryavanshi - ಇಂಗ್ಲೆಂಡ್ ವಿರುದ್ಧದ 2ನೇ ಪಂದ್ಯಕ್ಕೆ ಸೂರ್ಯವಂಶಿ ಕ್ರೀಸ್‌ಗಿಳಿಯೋದು ಫಿಕ್ಸ್? ಎರಡೇ ಮಾತಲ್ಲಿ ರಹಸ್ಯ ಬಿಚ್ಚಿಟ್ಟ ವೈಭವ್!

15 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಇಂಗ್ಲೆಂಡ್ ವಿರುದ್ಧದ ಎರಡನೇ ಪಂದ್ಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಕುರಿತು ಹಿಂಟ್‌ ನೀಡಿದ್ದಾರೆ. ಅಲ್ಲದೇ ಅವರ ಇನಸ್ಟಾಗ್ರಾಂ ಸಂಚಲನ ಮೂಡಿಸಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. 

Read Full Story

11:15 AM (IST) Jul 04

Hyena - ಚಾಮರಾಜನಗರದಲ್ಲಿ ಅಪರೂಪದ ಹೈನಾ ಪ್ರತ್ಯಕ್ಷ! ಗ್ರಾಮದಲ್ಲಿ ಆತಂಕ, ರಾತ್ರಿ ಸಂಚಾರಕ್ಕೆ ಡವಡವ!

Chamarajanaagar wildlife ಕಾಡನ್ನೇ ಹಾಸುಹೊದ್ದಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಾರೇಮಾಳ ಗ್ರಾಮದಲ್ಲಿ ಅಪರೂಪದ ಕತ್ತೆಕಿರುಬ (ಹೈನಾ) ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

 

Read Full Story

10:33 AM (IST) Jul 04

Bike Ambulance - ಟ್ರಾಫಿಕ್ ನಡುವೆ ಜೀವ ರಕ್ಷಕ; ಬೈಕ್ ಆಂಬುಲೆನ್ಸ್‌ಗೆ ಮರುಜೀವ ನೀಡಿದ ಸರ್ಕಾರ!

ಬೆಂಗಳೂರಿನ ತೀವ್ರ ಸಂಚಾರ ದಟ್ಟಣೆಯಲ್ಲಿ ಸಕಾಲಕ್ಕೆ ಚಿಕಿತ್ಸೆ ನೀಡಲು ಕರ್ನಾಟಕ ಆರೋಗ್ಯ ಇಲಾಖೆಯು 'ಬೈಕ್ ಆಂಬುಲೆನ್ಸ್' ಸೇವೆಯನ್ನು ಮರುಪ್ರಾರಂಭಿಸುತ್ತಿದೆ. ಮೊದಲ ಹಂತದಲ್ಲಿ 100 ಹೈಟೆಕ್ ಬೈಕ್‌ಗಳು ರಸ್ತೆಗಿಳಿಯಲಿವೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. 

Read Full Story

09:55 AM (IST) Jul 04

ಬೆಂಗಳೂರು - ಅಪಾರ್ಟ್‌ಮೆಂಟ್‌ ಒಂದರಲ್ಲಿ ಅಕ್ರಮ ಪೈಥಾನ್ ಹಾವುಗಳ ಸಾಕಣೆ ಪತ್ತೆ! ಆಂಧ್ರ ಮೂಲದ ವ್ಯಕ್ತಿ ವಶಕ್ಕೆ

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಅಕ್ರಮವಾಗಿ ಹೆಬ್ಬಾವುಗಳನ್ನು ಸಾಕುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳೀಯರ ದೂರಿನ ಮೇರೆಗೆ ಅರಣ್ಯ ಇಲಾಖೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಕಾರ್ಡ್‌ಬೋರ್ಡ್ ಬಾಕ್ಸ್‌ನಲ್ಲಿ ಅಡಗಿಸಿಟ್ಟಿದ್ದ ಹಾವುಗಳನ್ನು ರಕ್ಷಿಸಲಾಗಿದೆ.
Read Full Story

09:52 AM (IST) Jul 04

Rain Alert - ಮನೆಯಿಂದ ಹೊರಡುವ ಮುನ್ನ ಎಚ್ಚರ; ರಾಜ್ಯದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಮುಂದಿನ ಕೆಲ ಗಂಟೆಗಳಲ್ಲಿ ಭಾರೀ ಮಳೆ!

ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ರಾಜ್ಯದ 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಕರಾವಳಿಯ ಮೂರು ಮತ್ತು ಮಲೆನಾಡು ಹಾಗೂ ಉತ್ತರ ಒಳನಾಡಿನ ಆರು ಜಿಲ್ಲೆಗಳು ಸೇರಿ ಒಟ್ಟು 9 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ. 

Read Full Story

09:27 AM (IST) Jul 04

ಬೆಂಗಳೂರು - KR Circle ಬಳಿ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ, ಪ್ರಯಾಣಿಕರ ರಕ್ಷಣೆಗೆ ಹರಸಾಹಸ!

ಬೆಂಗಳೂರಿನ ಕೆ.ಆರ್. ಸರ್ಕಲ್ ಬಳಿ ಬೆಳ್ಳಂಬೆಳಗ್ಗೆ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ವೋಲ್ವೋ ಬಸ್‌ಗೆ ಹಿಂಬದಿಯಿಂದ ಬಂದ ಮತ್ತೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯಿಂದಾಗಿ ಆ ಪ್ರದೇಶದಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು.
Read Full Story

09:03 AM (IST) Jul 04

ಕರ್ನಾಟಕ ಹೈಕೋರ್ಟ್ ನೇಮಕಾತಿ - ಡೇಟಾ ಎಂಟ್ರಿ ಹುದ್ದೆಗಳು, 80 ಸಾವಿರದವರೆಗೆ ವೇತನ

ಕರ್ನಾಟಕ ಉಚ್ಚ ನ್ಯಾಯಾಲಯವು ಬೆಂಗಳೂರಿನಲ್ಲಿ ಖಾಲಿ ಇರುವ 21 ಡೇಟಾ ಎಂಟ್ರಿ ಸಹಾಯಕ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಪದವಿ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ಮಾಸಿಕ ₹25,500 ರಿಂದ ₹81,100 ವರೆಗೆ ವೇತನ ನೀಡಲಾಗುತ್ತದೆ.
Read Full Story

08:22 AM (IST) Jul 04

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್‌ಗೆ ಜೀವಭಯ? ಗುಪ್ತಚರ ವರದಿಯಲ್ಲಿ ಶಾಕಿಂಗ್ ಮಾಹಿತಿ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ನಡೆದ ಗದ್ದಲದ ನಂತರ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಜೀವಭಯದ ಆತಂಕ ಎದುರಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಗುಪ್ತಚರ ಇಲಾಖೆಯು ಅವರಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸುವಂತೆ ಗೃಹ ಇಲಾಖೆಗೆ ವರದಿ ಸಲ್ಲಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
Read Full Story

08:19 AM (IST) Jul 04

Karnataka SIR - ಮುರಾ ಗ್ರಾಮ ಮರ, ಟ್ರೀ ಬರೆದು ಎಡವಟ್ಟು, ಎಸ್‌ಐಆರ್ ಕನ್ನಡಲ್ಲೇ ನಡೆಸಲು ಕರವೇ ಆಗ್ರಹ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ಅಕ್ಷರ ದೋಷದಿಂದ ನಾಗರಿಕರು ತಮ್ಮ ಮತದಾನದ ಹಕ್ಕನ್ನೇ ಕಳೆದುಕೊಳ್ಳಲಿದ್ದಾರೆ. ಆದ್ದರಿಂದ ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಆಗ್ರಹಿಸಿದೆ.

Read Full Story

08:07 AM (IST) Jul 04

ಮುದ್ದೇಬಿಹಾಳದಿಂದ ಮಂತ್ರಾಲಯಕ್ಕೆ ಬಸ್ ಆರಂಭ; ಈ ರೂಟ್‌ನಲ್ಲಿ ಸಂಚರಿಸಲಿದೆ ನೂತನ ಬಸ್

ಕಕ್ಕೇರಾ ಗ್ರಾಮೀಣ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಮುದ್ದೇಬಿಹಾಳ–ರಾಯಚೂರು-ಮಂತ್ರಾಲಯ ನೂತನ ಬಸ್ ಸಂಚಾರ ಸೇವೆಗೆ ಚಾಲನೆ ದೊರೆತಿದೆ. ವಿದ್ಯಾರ್ಥಿಗಳು, ಕಾರ್ಮಿಕರು, ಮತ್ತು ವ್ಯಾಪಾರಿಗಳಿಗೆ ಅನುಕೂಲವಾಗಲಿದೆ.

Read Full Story

07:56 AM (IST) Jul 04

ಕಾರು ಚಲಾಯಿಸುವಾಗ ದಿಢೀರ್ ಉಸಿರಾಟ ಸಮಸ್ಯೆ, ಮಹಿಳೆಯ ಜೀವ ಉಳಿಸಿದ ಮಡಿವಾಳ ಸಂಚಾರಿ ಪೊಲೀಸ್ ಪೇದೆ

ಕಾರು ಚಲಾಯಿಸುವಾಗ ದಿಢೀರನೇ ಉಸಿರಾಟ ಸಮಸ್ಯೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಸಾಫ್ಟ್‌ವೇರ್ ಕಂಪನಿ ಮಹಿಳಾ ಉದ್ಯೋಗಿಯನ್ನು ಮಡಿವಾಳ ಸಂಚಾರ ಠಾಣೆ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬರು ರಕ್ಷಿಸಿದ್ದಾರೆ. ಪೇದೆಯ ಸಮಯಪ್ರ

Read Full Story

07:55 AM (IST) Jul 04

50 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹೊಸ ಬಡಾವಣೆ - ಜನರಿಗೆ ಕೈಗೆಟುಕುವ ಬೆಲೆಗೆ ನಿವೇಶನ

ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ 50 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹೊಸ ಬಡಾವಣೆ ನಿರ್ಮಿಸಿ, ಜನರಿಗೆ ಕೈಗೆಟುಕುವ ದರದಲ್ಲಿ ನಿವೇಶನ ನೀಡಲು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ, ಪೌರಕಾರ್ಮಿಕರ ನೇಮಕಾತಿ, ಪಾರ್ಕ್ ಅಭಿವೃದ್ಧಿ ಮತ್ತು ಇ-ಖಾತಾ ಪ್ರಕ್ರಿಯೆ ಸರಳೀಕರಣಗೊಳಿಸುವಂತೆಯೂ ಅವರು ಸೂಚನೆ ನೀಡಿದರು.
Read Full Story

07:38 AM (IST) Jul 04

ಶಿವರಾಮ ಕಾರಂತ ಬಡಾವಣೆ ಫಲಾನುಭವಿಗಳಿಗೆ ಗುಡ್‌ನ್ಯೂಸ್! ನಿವೇಶನ ಹಂಚಿಕೆಗೆ ಹೈಕೋರ್ಟ್‌ ಗ್ರೀನ್ ಸಿಗ್ನಲ್

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಭಿವೃದ್ಧಿಪಡಿಸುತ್ತಿರುವ ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಸಂಬಂಧ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲು ಸರ್ಕಾರಕ್ಕೆ ಅನುಮತಿ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

Read Full Story

07:20 AM (IST) Jul 04

ಅಮೆರಿಕದ ವಿಶೇಷ ವಿಮಾನದಿಂದ ಹಾವೇರಿ ಜಿಲ್ಲೆಯಲ್ಲಿ 3 ದಿನ ಮೋಡ ಬಿತ್ತನೆ - ಶಾಸಕರಿಂದಲೇ ವೆಚ್ಚ

ಹಾವೇರಿ ಜಿಲ್ಲೆಯಲ್ಲಿನ ಮಳೆ ಕೊರತೆ ನೀಗಿಸಲು ಶಾಸಕ ಪ್ರಕಾಶ ಕೋಳಿವಾಡ ನೇತೃತ್ವದಲ್ಲಿ ಮೋಡ ಬಿತ್ತನೆ ಮಾಡಲು ನಿರ್ಧರಿಸಲಾಗಿದೆ. ಜುಲೈ 7 ರಿಂದ ಮೂರು ದಿನಗಳ ಕಾಲ ನಡೆಯಲಿರುವ ಈ ಕಾರ್ಯಾಚರಣೆಗೆ ಅಮೆರಿಕದಿಂದ ವಿಶೇಷ ವಿಮಾನ ತರಿಸಲಾಗುತ್ತಿದ್ದು, ಇದರ ಸಂಪೂರ್ಣ ವೆಚ್ಚವನ್ನು ಜಿಲ್ಲೆಯ ಶಾಸಕರೇ ಭರಿಸಲಿದ್ದಾರೆ.
Read Full Story

07:19 AM (IST) Jul 04

ನೆಂಟರಿಗೆ, ಆಪ್ತರಿಗೆ 30 ಬಾರ್‌ ಲೈಸೆನ್ಸ್ ಕೊಟ್ಟಿದ್ದ ಜಾರಕಿಹೊಳಿ ಭಾವ! - ಇ.ಡಿ. ದಾಳಿ ಬೆನ್ನಲ್ಲೇ ಲೋಕಾಯುಕ್ತರಿಂದ ಶಾಕ್

ಅಧಿಕಾರ ದುರ್ಬಳಕೆ ಮಾಡಿಕೊಂಡು ಕುಟುಂಬ ಸದಸ್ಯರು ಹಾಗೂ ಆಪ್ತರಿಗೆ ಸುಮಾರು 30 ಮದ್ಯದಂಗಡಿಗಳ ಪರವಾನಗಿಗಳನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ಭಾವ ಹಾಗೂ ಅಬಕಾರಿ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ್‌ ವಿತರಿಸಿದ್ದರು ಎಂಬ ಸಂಗತಿಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ.

Read Full Story

07:07 AM (IST) Jul 04

ಸಿಎಂ ಗೂಟ ಹೊಡೆದುಕೊಂಡು ಇರಲ್ಲ - ಅಧಿಕಾರಿಗಳಿಗೆ ನಿಖಿಲ್ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ರಾಮನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಜೆಡಿಎಸ್-ಬಿಜೆಪಿ ನೇತೃತ್ವದಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿಗಳು ಶಾಶ್ವತರಲ್ಲ, ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡಬೇಕು ಎಂದು ಎಚ್ಚರಿಸಿದ ಅವರು, ಈ ಅಕ್ರಮದ ಬಗ್ಗೆ ದೆಹಲಿಯಲ್ಲಿಯೂ ದೂರು ನೀಡುವುದಾಗಿ ತಿಳಿಸಿದರು.
Read Full Story

06:52 AM (IST) Jul 04

ಕುಶಾಲನಗರ - ಕಾವೇರಿ ನದಿ ಹರಿವು ಪ್ರಮಾಣ ಏರಿಕೆ; 205.69 ಮಿಲಿ ಮೀಟರ್ ಪ್ರಮಾಣದ ಮಳೆ

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕುಶಾಲನಗರದಲ್ಲಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಉಂಟಾಗಿದ್ದ ಆತಂಕದ ಪರಿಸ್ಥಿತಿಯನ್ನು ಸ್ಮರಿಸಲಾಗಿದ್ದು, ಹಾರಂಗಿ ಜಲಾಶಯದ ಒಳಹರಿವು ಮತ್ತು ನೀರಿನ ಸಂಗ್ರಹದ ಬಗ್ಗೆಯೂ ವರದಿಯಾಗಿದೆ.
Read Full Story

06:42 AM (IST) Jul 04

ಅಂತಾರಾಷ್ಟ್ರೀಯ ಗುಣಮಟ್ಟದ ಸರ್ಕಾರಿ ಶಾಲೆಯ ಕಟ್ಟಡ ಉದ್ಘಾಟನೆ; ₹3.25 ಕೋಟಿ ವೆಚ್ಚದಲ್ಲಿ ನಿರ್ಮಾಣ

ವಿಜಯಪುರದ ಕೋಟ್ಯಾಳ ಗ್ರಾಮದಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಸಿ.ಎಸ್.ಆರ್ ಅನುದಾನದಡಿ ₹3.25 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸರ್ಕಾರಿ ಪ್ರೌಢಶಾಲಾ ಕಟ್ಟಡವನ್ನು ಸಚಿವ ಎಂ.ಬಿ. ಪಾಟೀಲರು ಲೋಕಾರ್ಪಣೆಗೊಳಿಸಿದರು. ಈ ಸುಸಜ್ಜಿತ ಶಾಲೆಯು ಗ್ರಾಮೀಣ ಪ್ರತಿಭೆಗಳಿಗೆ, ವಿಶೇಷವಾಗಿ ಹೆಣ್ಣುಮಕ್ಕಳ ಶಿಕ್ಷಣಕ್ಕೆ ವರದಾನವಾಗಲಿದೆ ಎಂದು ಅವರು ಹೇಳಿದರು.
Read Full Story

06:42 AM (IST) Jul 04

GBA Clear footpath encroachments - ತೆರವು ಮಾಡಿದ ಫುಟ್‌ಪಾತಲ್ಲಿ ಮತ್ತೆ ವ್ಯಾಪಾರ ಶುರು!

ಬೆಂಗಳೂರಿನಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ಮುಂದುವರೆದಿದೆ. ನಗರದ ಹಲವು ವಲಯಗಳಲ್ಲಿ ಜೆಸಿಬಿ ಬಳಸಿ ಪೆಟ್ಟಿ ಅಂಗಡಿ, ತಳ್ಳುವ ಗಾಡಿ, ಕಟ್ಟಡ ತ್ಯಾಜ್ಯ ತೆರವುಗೊಳಿಸಲಾಗುತ್ತಿದೆ. ಈ ಕಾರ್ಯಾಚರಣೆಗೆ ಕೆಲವೆಡೆ ವಿರೋಧ ವ್ಯಕ್ತವಾಗಿದ್ದು, ಕೆಲವರು ಮತ್ತೆ ವ್ಯಾಪಾರ ಶುರು ಮಾಡಿದ್ದಾರೆ.

Read Full Story

More Trending News