ದಾವಣಗೆರೆ: ಜಾತಿಗಣತಿ ಸಮೀಕ್ಷೆ ಮಾಡಿ, ವರದಿ ಜಾರಿಗೊಳಿಸಲು ಬಯಸಿದ್ದ ಸಿದ್ದರಾಮಯ್ಯ ಅವರು ಇನ್ನೂ 2 ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದುಕೊಂಡಿದ್ದೆವು, ಆದರೆ ಅನಿರೀಕ್ಷಿತವಾಗಿ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯಬೇಕಾಯಿತು ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ದಾವಣಗೆರೆಯಲ್ಲಿ ಶುಕ್ರವಾರ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಸಮೀಕ್ಷೆ ಮಾಡಿ, ಅದನ್ನು ಜಾರಿಗೊಳಿಸಲು ಸಿದ್ದರಾಮಯ್ಯ ಬಯಸಿದ್ದರು. ಆದರೆ, ಅನಿರೀಕ್ಷಿತವಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವರು ಕೆಳಗಿಳಿಯಬೇಕಾಯಿತು. ಸಿಎಂ ಸ್ಥಾನದಿಂದ ಕೆಳಗಿಳಿದರೂ, ಅದಕ್ಕೆ ಮುಂಚೆ ಕೊನೆಯ ದಿನ ಜಾತಿ ಜನಗಣತಿ ವರದಿಯನ್ನು ಸಿದ್ದರಾಮಯ್ಯ ಪಡೆದಿದ್ದರು. ಜಾತಿ ಜನಗಣತಿ ವರದಿಯನ್ನು ಜಾರಿಗೊಳಿಸುವ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲೂ ಪ್ರಸ್ತಾಪ ಮಾಡಿದ್ದೆವು. ಅದನ್ನು ಈಡೇರಿಸಬೇಕಾಗಿರುವುದು ನಮ್ಮ ಪಕ್ಷದ ಜವಾಬ್ದಾರಿಯಾಗಿದೆ ಎಂದು ಹೇಳಿದರು.
11:31 AM (IST) Jul 04
15 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಇಂಗ್ಲೆಂಡ್ ವಿರುದ್ಧದ ಎರಡನೇ ಪಂದ್ಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡುವ ಕುರಿತು ಹಿಂಟ್ ನೀಡಿದ್ದಾರೆ. ಅಲ್ಲದೇ ಅವರ ಇನಸ್ಟಾಗ್ರಾಂ ಸಂಚಲನ ಮೂಡಿಸಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
11:15 AM (IST) Jul 04
Chamarajanaagar wildlife ಕಾಡನ್ನೇ ಹಾಸುಹೊದ್ದಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಾರೇಮಾಳ ಗ್ರಾಮದಲ್ಲಿ ಅಪರೂಪದ ಕತ್ತೆಕಿರುಬ (ಹೈನಾ) ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
10:33 AM (IST) Jul 04
ಬೆಂಗಳೂರಿನ ತೀವ್ರ ಸಂಚಾರ ದಟ್ಟಣೆಯಲ್ಲಿ ಸಕಾಲಕ್ಕೆ ಚಿಕಿತ್ಸೆ ನೀಡಲು ಕರ್ನಾಟಕ ಆರೋಗ್ಯ ಇಲಾಖೆಯು 'ಬೈಕ್ ಆಂಬುಲೆನ್ಸ್' ಸೇವೆಯನ್ನು ಮರುಪ್ರಾರಂಭಿಸುತ್ತಿದೆ. ಮೊದಲ ಹಂತದಲ್ಲಿ 100 ಹೈಟೆಕ್ ಬೈಕ್ಗಳು ರಸ್ತೆಗಿಳಿಯಲಿವೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
09:55 AM (IST) Jul 04
09:52 AM (IST) Jul 04
ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ರಾಜ್ಯದ 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಕರಾವಳಿಯ ಮೂರು ಮತ್ತು ಮಲೆನಾಡು ಹಾಗೂ ಉತ್ತರ ಒಳನಾಡಿನ ಆರು ಜಿಲ್ಲೆಗಳು ಸೇರಿ ಒಟ್ಟು 9 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ.
09:27 AM (IST) Jul 04
09:03 AM (IST) Jul 04
08:22 AM (IST) Jul 04
08:19 AM (IST) Jul 04
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ (ಎಸ್ಐಆರ್) ಅಕ್ಷರ ದೋಷದಿಂದ ನಾಗರಿಕರು ತಮ್ಮ ಮತದಾನದ ಹಕ್ಕನ್ನೇ ಕಳೆದುಕೊಳ್ಳಲಿದ್ದಾರೆ. ಆದ್ದರಿಂದ ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಆಗ್ರಹಿಸಿದೆ.
08:07 AM (IST) Jul 04
ಕಕ್ಕೇರಾ ಗ್ರಾಮೀಣ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಮುದ್ದೇಬಿಹಾಳ–ರಾಯಚೂರು-ಮಂತ್ರಾಲಯ ನೂತನ ಬಸ್ ಸಂಚಾರ ಸೇವೆಗೆ ಚಾಲನೆ ದೊರೆತಿದೆ. ವಿದ್ಯಾರ್ಥಿಗಳು, ಕಾರ್ಮಿಕರು, ಮತ್ತು ವ್ಯಾಪಾರಿಗಳಿಗೆ ಅನುಕೂಲವಾಗಲಿದೆ.
07:56 AM (IST) Jul 04
ಕಾರು ಚಲಾಯಿಸುವಾಗ ದಿಢೀರನೇ ಉಸಿರಾಟ ಸಮಸ್ಯೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಸಾಫ್ಟ್ವೇರ್ ಕಂಪನಿ ಮಹಿಳಾ ಉದ್ಯೋಗಿಯನ್ನು ಮಡಿವಾಳ ಸಂಚಾರ ಠಾಣೆ ಹೆಡ್ ಕಾನ್ಸ್ಟೇಬಲ್ವೊಬ್ಬರು ರಕ್ಷಿಸಿದ್ದಾರೆ. ಪೇದೆಯ ಸಮಯಪ್ರ
07:55 AM (IST) Jul 04
07:38 AM (IST) Jul 04
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಭಿವೃದ್ಧಿಪಡಿಸುತ್ತಿರುವ ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಸಂಬಂಧ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲು ಸರ್ಕಾರಕ್ಕೆ ಅನುಮತಿ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.
07:20 AM (IST) Jul 04
07:19 AM (IST) Jul 04
ಅಧಿಕಾರ ದುರ್ಬಳಕೆ ಮಾಡಿಕೊಂಡು ಕುಟುಂಬ ಸದಸ್ಯರು ಹಾಗೂ ಆಪ್ತರಿಗೆ ಸುಮಾರು 30 ಮದ್ಯದಂಗಡಿಗಳ ಪರವಾನಗಿಗಳನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ಭಾವ ಹಾಗೂ ಅಬಕಾರಿ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ್ ವಿತರಿಸಿದ್ದರು ಎಂಬ ಸಂಗತಿಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ.
07:07 AM (IST) Jul 04
06:52 AM (IST) Jul 04
06:42 AM (IST) Jul 04
06:42 AM (IST) Jul 04
ಬೆಂಗಳೂರಿನಲ್ಲಿ ಫುಟ್ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ಮುಂದುವರೆದಿದೆ. ನಗರದ ಹಲವು ವಲಯಗಳಲ್ಲಿ ಜೆಸಿಬಿ ಬಳಸಿ ಪೆಟ್ಟಿ ಅಂಗಡಿ, ತಳ್ಳುವ ಗಾಡಿ, ಕಟ್ಟಡ ತ್ಯಾಜ್ಯ ತೆರವುಗೊಳಿಸಲಾಗುತ್ತಿದೆ. ಈ ಕಾರ್ಯಾಚರಣೆಗೆ ಕೆಲವೆಡೆ ವಿರೋಧ ವ್ಯಕ್ತವಾಗಿದ್ದು, ಕೆಲವರು ಮತ್ತೆ ವ್ಯಾಪಾರ ಶುರು ಮಾಡಿದ್ದಾರೆ.