LIVE NOW
Published : Jun 04, 2026, 06:45 AM ISTUpdated : Jun 04, 2026, 10:22 PM IST

Karnataka News Live: ಮಕ್ಕಳಿಗೆ ವಾಲಿ, ರುದ್ರ ಎಂದು ಹೆಸರಿಟ್ಟಿದ್ದೇಕೆ ಕಾಂತಾರ ನಟ ಕಿಶೋರ್‌..

ಸಾರಾಂಶ

ಬೆಂಗಳೂರು: ದೇವರು, ಜ್ಯೋತಿಷ್ಯ, ವಾಸ್ತು ವಿಚಾರಗಳಲ್ಲಿ ಅಪಾರ ನಂಬಿಕೆಯುಳ್ಳ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇನ್ನು ಮುಂದೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಗೆ ತಮ್ಮ ಕುರ್ಚಿಯನ್ನು ಉತ್ತರಕ್ಕೆ ಮುಖ ಮಾಡುವಂತೆ ವ್ಯವಸ್ಥೆ ಮಾಡಲು ಸೂಚಿಸಿದ ಘಟನೆ ನಡೆಯಿತು.

ಸಂಪುಟ ಸಭೆ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಮೊದಲ ಸುದ್ದಿಗೋಷ್ಠಿಗೆ ಆಗಮಿಸಿದ ಮುಖ್ಯಮಂತ್ರಿ ಅವರು, ತಾವು ಮತ್ತು ಸಂಪುಟ ಸಹೋದ್ಯೋಗಿಗಳು ಕುಳಿತುಕೊಳ್ಳಲು ದಕ್ಷಿಣಕ್ಕೆ ಮುಖ ಮಾಡಿರುವುದು ಕಂಡಿತು. ಇದನ್ನು ಗಮನಿಸಿದ ಶಿವಕುಮಾರ್ ಅವರು, ಬದಲಾವಣೆ ಮಾಡಲು ಸೂಚಿಸಿದರು. ಆದರೆ ವಿದ್ಯುನ್ಮಾನ ಮಾಧ್ಯಮದ ಸ್ನೇಹಿತರು ‘ಸರ್‌ ನಾವಾಗಲೇ ಲೈವ್‌ ಕವರೇಜಿಗೆ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಈಗ ಬದಲಾವಣೆ ಮಾಡುವುದು ಕಷ್ಟವಾಗುತ್ತದೆ’ ಎಂದರು. ಆಗ, ಡಿ.ಕೆ.ಶಿವಕುಮಾರ್‌ ಅವರು, ಇನ್ನು ಮುಂದೆ ಪತ್ರಿಕಾಗೋಷ್ಠಿಗೆ ಉತ್ತರಕ್ಕೆ ಮುಖ ಮಾಡಿ ಕುಳಿತುಕೊಳ್ಳುವಂತೆ ಕುರ್ಚಿ ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

10:22 PM (IST) Jun 04

ಮಕ್ಕಳಿಗೆ ವಾಲಿ, ರುದ್ರ ಎಂದು ಹೆಸರಿಟ್ಟಿದ್ದೇಕೆ ಕಾಂತಾರ ನಟ ಕಿಶೋರ್‌..

ನಟ ಕಿಶೋರ್ ಸಂದರ್ಶನವೊಂದರಲ್ಲಿ ತಮ್ಮ ಇಬ್ಬರು ಗಂಡು ಮಕ್ಕಳಾದ ವಾಲಿ ಮತ್ತು ರುದ್ರನ ಹೆಸರಿನ ಹಿಂದಿನ ಕಥೆಯನ್ನು ಹಂಚಿಕೊಂಡಿದ್ದಾರೆ. ತಾವು ಸಾಕಿದ್ದ ಕೋತಿಯ ನೆನಪಿಗಾಗಿ ಹಿರಿಯ ಮಗನಿಗೆ ವಾಲಿ ಎಂದೂ, ಕಷ್ಟಪಟ್ಟು ಜನಿಸಿದ್ದಕ್ಕಾಗಿ ಕಿರಿಯ ಮಗನಿಗೆ ರುದ್ರ ಎಂದೂ ಹೆಸರಿಟ್ಟಿರುವುದಾಗಿ ಅವರು ವಿವರಿಸಿದ್ದಾರೆ.
Read Full Story

09:54 PM (IST) Jun 04

Ballari - ರಸ್ತೆ ಕಾಮಗಾರಿ ಗುಂಡಿಗೆ ಬೈಕ್ ಬಿದ್ದು ನರ್ಸ್ ಸಾವು - ಪತಿ ಗಂಭೀರ, ನಿರ್ಲಕ್ಷ್ಯ ಆರೋಪ

ರಸ್ತೆ ಕಾಮಗಾರಿಗಾಗಿ ತೆಗೆಯಲಾಗಿದ್ದ ಗುಂಡಿಗೆ ಬೈಕ್‌ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಅವರ ಪತಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ..

Read Full Story

09:36 PM (IST) Jun 04

ರಾಜ್ಯಸಭೆಗೆ ಕಾಂಗ್ರೆಸ್‌ನ 5 ಅಭ್ಯರ್ಥಿಗಳು, ಖಾತೆ ಹಂಚಿಕೆ ಪೂರ್ಣ - ಡಿ.ಕೆ.ಶಿವಕುಮಾರ್ ಮಹತ್ವದ ಹೇಳಿಕೆ!

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಹಿರಿಯ ನಾಯಕರು ಮತ್ತು ಮಾಜಿ ಮುಖ್ಯಮಂತ್ರಿಗಳ ಅನುಭವವನ್ನು ಪಡೆದು ಆಡಳಿತ ನಡೆಸುವುದಾಗಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ..

Read Full Story

09:34 PM (IST) Jun 04

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಫೈನಲ್; ಯಾರಿಗೆ ಯಾವ ಖಾತೆ? ಇಲ್ಲಿದೆ ಪಟ್ಟಿ!

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ 13 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.  ಪ್ರಿಯಾಂಕ್ ಖರ್ಗೆಗೆ ಗೃಹ ಇಲಾಖೆ ಸಿಕ್ಕರೆ, ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾರಿಗೆ ಯಾವ ಖಾತೆ ನೀವೇ ನೋಡಿ..

Read Full Story

09:33 PM (IST) Jun 04

GBA, ನಾಯಕರ ನಿರ್ಲಕ್ಷ್ಯಕ್ಕೆ ಬೇಸತ್ತ ಜನ - ಸ್ವಂತ ಹಣದಲ್ಲಿ ರಸ್ತೆ ನಿರ್ಮಾಣ ಮಾಡ್ತಿರುವ ಅಪಾರ್ಟ್‌ಮೆಂಟ್‌ ನಿವಾಸಿಗಳು

ಜಾಲಹಳ್ಳಿ ಈಸ್ಟ್‌ನ 'ಶ್ರೀರಾಮ್ ಸಮೀಕ್ಷಾ' ಅಪಾರ್ಟ್‌ಮೆಂಟ್ ನಿವಾಸಿಗಳು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಪ್ರತಿ ವರ್ಷ ತಮ್ಮ ಸ್ವಂತ ಹಣದಿಂದ ರಸ್ತೆ ದುರಸ್ತಿ ಮಾಡಿಕೊಳ್ಳುತ್ತಿದ್ದಾರೆ. ಭೂ ವಿವಾದದ ಕಾರಣ ಅಭಿವೃದ್ಧಿ ಕಾಣದ ಈ ರಸ್ತೆಯು ಕಸದ ಡಂಪ್‌ಯಾರ್ಡ್ ಆಗಿ ಮಾರ್ಪಟ್ಟಿದೆ.

Read Full Story

08:53 PM (IST) Jun 04

Bhatkal - ಮುರಿನ್‌ಕಟ್ಟೆ ಧ್ವಂಸ ಪ್ರಕರಣ, ಹಿಂದೂ ಸಂಘಟನೆಗಳಿಂದ ನಾಳೆ ಭಟ್ಕಳ ಬಂದ್‌

ಭಟ್ಕಳದ ಐತಿಹಾಸಿಕ ಮುರಿನಕಟ್ಟೆ ಧ್ವಂಸ ಪ್ರಕರಣವನ್ನು ಖಂಡಿಸಿ ಹಿಂದೂ ಸಂಘಟನೆಗಳು ಶುಕ್ರವಾರ ಬಂದ್‌ಗೆ ಕರೆ ನೀಡಿವೆ. ಬೃಹತ್ ಪ್ರತಿಭಟನಾ ರ‍್ಯಾಲಿ ಆಯೋಜಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತವು ಮದ್ಯ ಮಾರಾಟ ನಿಷೇಧಿಸಿ, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದೆ.
Read Full Story

08:50 PM (IST) Jun 04

ಡೈರೆಕ್ಟರ್ ಕೆನ್ನೆಗೆ ಬಾರಿಸಿದ್ರು, ವಾಪಸ್ ಹೊಡೆಯೋಕೆ ಹೋಗಿದ್ದೆ - ಆ ಸತ್ಯ ಬಿಚ್ಚಿಟ್ಟ ಆ್ಯಕ್ಷನ್ ಕಿಂಗ್!

'ಬ್ಲಾಸ್ಟ್' ಸಿನಿಮಾ ಮೂಲಕ ಭರ್ಜರಿ ಕಮ್‌ಬ್ಯಾಕ್ ಮಾಡಿರುವ ನಟ ಅರ್ಜುನ್ ಸರ್ಜಾ, ತಾವು ಬಾಲನಟನಾಗಿದ್ದಾಗ ನಡೆದ ಒಂದು ಘಟನೆಯನ್ನು ಹಂಚಿಕೊಂಡಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ನಿರ್ದೇಶಕರೊಬ್ಬರು ತನಗೆ ಕಪಾಳಮೋಕ್ಷ ಮಾಡಿದ್ದರಂತೆ.

Read Full Story

08:49 PM (IST) Jun 04

25 ಲಕ್ಷ ರೂಪಾಯಿ ಕಾರ್ ಖರೀದಿ ಹಿಂದೆ Oyo ರೂಮ್ ಕಥೆ ಇದೆಯಾ? ಕೊನೆಗೂ ಮೌನ ಮುರಿದ Sonu Srinivas Gowda

ಬಿಗ್‌ ಬಾಸ್‌ ಕನ್ನಡ ಒಟಿಟಿ ಸೋನು ಶ್ರೀನಿವಾಸ್‌ ಗೌಡ ಅವರು ಹೊಸ ಕಾರ್‌ ತಗೊಂಡಿದ್ದಾರೆ. 25 ಲಕ್ಷ ರೂಪಾಯಿ ಕಾರ್‌ಗೆ ಎಲ್ಲಿಂದ ಹಣ ಬಂತು ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಕೆಲವರು ಕೆಟ್ಟದಾಗಿ ಕಾಮೆಂಟ್‌ ಮಾಡಿದ್ದು, ಈ ಬಗ್ಗೆ Sonu Srinivas Gowda ಅವರು ಮಾತನಾಡಿದ್ದಾರೆ. 

Read Full Story

08:44 PM (IST) Jun 04

Cleaning Tips - ಪ್ಲಾಸ್ಟಿಕ್ ಬಕೆಟ್ ಸಖತ್ ಕೊಳೆಯಾಗಿದ್ಯಾ? ಈ ಸಿಂಪಲ್ ಟ್ರಿಕ್ ಬಳಸಿ ನೋಡಿ, ಅದು ಪಕ್ಕಾ ಹೊಸದರಂತೆ ಹೊಳೆಯುತ್ತೆ!

ಪ್ರತಿದಿನ ಸೋಪು, ಶಾಂಪೂ ಮತ್ತು ಗಟ್ಟಿಯಾದ ನೀರಿನ (Hard water) ನಿರಂತರ ಸಂಪರ್ಕಕ್ಕೆ ಬರುವುದರಿಂದ ಪ್ಲಾಸ್ಟಿಕ್ ಬಕೆಟ್‌ಗಳ ಮೇಲೆ ಉಪ್ಪಿನಂಶದ ಬಿಳಿ ಕಲೆಗಳು ಮತ್ತು ಜಿಡ್ಡು ಕುಳಿತುಕೊಳ್ಳುವುದು ಸಾಮಾನ್ಯ. ಅನೇಕ ಬಾರಿ ನಾವು ಇವುಗಳನ್ನು ಸ್ವಚ್ಛಗೊಳಿಸಲು ಕಷ್ಟಪಟ್ಟು ಉಜ್ಜುತ್ತೇವೆ ಅಥವಾ ಹೊಸ ಬಕೆಟ್ ಖರೀದಿಸಲು ಆಲೋಚಿಸುತ್ತೇವೆ. ಆದರೆ, ಹೀಗೆ ಮಾಡಿ!

Read Full Story

08:15 PM (IST) Jun 04

ಶುಭಾ ಪೂಂಜರಂತೆ ಪ್ರೀತಿಸಿ, ಮದುವೆಯಾದ್ರೂ, ಕಡಿಮೆ ಟೈಮ್‌ನಲ್ಲಿ ಡಿವೋರ್ಸ್‌ ಪಡೆದ ಕನ್ನಡ ನಟಿಯರಿವರು!

Kannada Actress Photos: ನಟಿ ಶುಭಾ ಪೂಂಜ ಅವರು ಮದುವೆಯಾಗಿ ನಾಲ್ಕು ವರ್ಷಗಳಾಗಿತ್ತು. ಪ್ರೀತಿಸಿ ಮದುವೆಯಾದ ಈ ಜೋಡಿ ಈಗ ಕೋರ್ಟ್‌ ಮೆಟ್ಟಿಲೇರಿದೆ. ಹೀಗೆ ಬಹಳ ಕಡಿಮೆ ಟೈಮ್‌ಗೆ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿ ದೂರ ಆದ ಕನ್ನಡ ನಟಿಯರು ಇವರು! ಯಾರು? ಯಾರು? 

Read Full Story

08:13 PM (IST) Jun 04

54 ವರ್ಷದ ಬಳಿಕ ಮತ್ತೆ ಬಂದಿದೆ 'ಮಾಂಸ ತಿನ್ನುವ ಭಯಾನಕ ಹುಳ'! ಗಾಯದ ಮೂಲಕ ದೇಹ ಪ್ರವೇಶಿಸುವ ಕೀಟ!

ದಶಕಗಳ ನಂತರ 'ನ್ಯೂ ವರ್ಲ್ಡ್ ಸ್ಕ್ರೂವರ್ಮ್' ಎಂಬ ಮಾಂಸ ತಿನ್ನುವ ಪರಾವಲಂಬಿ ಹುಳ ಮತ್ತೆ ಕಾಣಿಸಿಕೊಂಡಿದೆ. ಇದು ಗಾಯಗಳಲ್ಲಿ ಮೊಟ್ಟೆಯಿಟ್ಟು, ಮಾಂಸವನ್ನು ತಿನ್ನುವ ಮೂಲಕ ಮಾರಣಾಂತಿಕವಾಗಬಲ್ಲದು. ಇದನ್ನು ನಿಯಂತ್ರಿಸಲು ಕೃಷಿ ಇಲಾಖೆ ಕ್ವಾರಂಟೈನ್ ಮತ್ತು ಸಂತಾನಶಕ್ತಿಹೀನ ನೊಣಗಳ ತಂತ್ರವನ್ನು ಬಳಸುತ್ತಿದೆ.

Read Full Story

07:06 PM (IST) Jun 04

ಡಿಕೆಶಿ ಪ್ರಮಾಣವಚನದಲ್ಲಿ ನಿರೂಪಕಿ ಬಗ್ಗೆ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆ- ಇವರೇ ಮಾಡಿದ್ಯಾಕೆ? ಇಲ್ಲಿದೆ ವಿವರ

ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನಿರೂಪಣೆ ಮಾಡಿ ಗಮನ ಸೆಳೆದವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್. ವೃತ್ತಿಪರ ನಿರೂಪಕಿ ಬದಲು ಐಎಎಸ್ ಅಧಿಕಾರಿಯೇಕೆ ನಿರೂಪಣೆ ಮಾಡಿದರು ಎನ್ನುವುದಕ್ಕೆ ಕಾರಣ ಸರ್ಕಾರದ ಶಿಷ್ಟಾಚಾರ ಮತ್ತು ಸಾಂವಿಧಾನಿಕ ನಿಯಮ.
Read Full Story

06:19 PM (IST) Jun 04

ಇದು ಟ್ರೇಲರ್ ಮಾತ್ರ, ಪಿಕ್ಚರ್ ಅಭಿ ಬಾಕಿ ಹೈ.. - ಸಿಎಂ ಡಿಕೆಶಿ ಭೇಟಿಯ ಬಳಿಕ ಹರಿಪ್ರಸಾದ್ ಹೇಳಿದ್ದೇನು?

ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು, ಇದು ಕೇವಲ ಸೌಜನ್ಯ ಭೇಟಿಯಾಗಿದ್ದು, ಯಾವುದೇ ರಾಜಕೀಯ ಅಜೆಂಡಾ ಅಥವಾ ವಿಶೇಷ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

 

Read Full Story

05:58 PM (IST) Jun 04

ಹೈಕಮಾಂಡ್ ನಿರ್ಧಾರದ ಬಳಿಕ ಗುಡ್ ಅಥವಾ ಬ್ಯಾಡ್ ಚಾಯ್ಸ್ ಪ್ರಶ್ನೆಯೇ ಇಲ್ಲ - ಮಾಜಿ ಸಚಿವ ಕೆ.ಎನ್.ರಾಜಣ್ಣ

ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ತಾವು ಈ ಹಿಂದೆ ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನು ಸಮರ್ಥಿಸಿಕೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ, ಅಂತಿಮ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್‌ನದ್ದೇ ಆಗಿದ್ದು, ಅದನ್ನು ಎಲ್ಲರೂ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

Read Full Story

05:41 PM (IST) Jun 04

ಕನಸಲ್ಲೂ ಕೂಡಾ ನಾನು ಸ್ಪೀಕರ್ ಆಗ್ತೇನಿ ಅಂತ ಬಯಸಿರಲಿಲ್ಲ - ರುದ್ರಪ್ಪ ಲಮಾಣಿ ಹೇಳಿದ್ದೇನು?

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳ ನಡುವೆಯೇ ವಿಧಾನಸಭೆ ಸ್ಪೀಕರ್ ರುದ್ರಪ್ಪ ಲಮಾಣಿ ಅವರು ಸಚಿವ ಸ್ಥಾನ ಸೇರಿದಂತೆ ಹಲವು ರಾಜಕೀಯ ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Read Full Story

05:41 PM (IST) Jun 04

ಕರ್ನಾಟಕ ಟ್ರೈನ್ ಸುದ್ದಿ - ನೈಋತ್ಯ ರೈಲ್ವೆಯ ಐತಿಹಾಸಿಕ ಸಾಧನೆ, ಮೇ ತಿಂಗಳಿನಲ್ಲಿ ದಾಖಲೆಯ ₹1481 ಕೋಟಿ ದಾಟಿದ ಆದಾಯ!

ನೈಋತ್ಯ ರೈಲ್ವೆಯು ಮೇ 2026 ರಲ್ಲಿ 4.40 ಮಿಲಿಯನ್ ಟನ್ ಸರಕು ಸಾಗಿಸುವ ಮೂಲಕ ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ. ಈ ತಿಂಗಳಿನಲ್ಲಿ ಒಟ್ಟು ₹770.71 ಕೋಟಿ ಆದಾಯ ಗಳಿಸಿದ್ದು, ಪ್ರಯಾಣಿಕರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ.
Read Full Story

05:26 PM (IST) Jun 04

ಕೊಪ್ಪಳ ಕಾಂಗ್ರೆಸ್‌ನಲ್ಲಿ ನಡೆಯಲಿರುವ ದೊಡ್ಡ ಬದಲಾವಣೆಯ ಸುಳಿವು ನೀಡಿದ ಹರಿಪ್ರಸಾದ್!

ಗಂಗಾವತಿ ಸೇರಿದಂತೆ ಕೊಪ್ಪಳ ಜಿಲ್ಲೆಯಲ್ಲಿ ಭಿನ್ನಮತಗೊಂಡಿರುವ ಕಾಂಗ್ರೆಸ್ ಘಟಕಗಳಲ್ಲಿ ಒಗ್ಗಟ್ಟಾಗಿ ಪಕ್ಷ ಸಂಘಟಿಸ ಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅದ್ಯಕ್ಷ ಬಿ.ಕೆ.ಹರಿಪ್ರಾಸದ್ ಸೂಚನೆ ನೀಡಿದರು.

Read Full Story

03:56 PM (IST) Jun 04

ಫೋರ್ಬ್ಸ್ ಏಷ್ಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಬೆಂಗಳೂರಿನ 17 ರ ಹರೆಯದ ಬಾಲಕಿ, ಜಾಗತಿಕ ಮಟ್ಟದಲ್ಲಿ ಮಿಂಚಿದವಳು ಯಾರೀಕೆ?!

ಬೆಂಗಳೂರಿನ 17 ವರ್ಷದ ವಿದ್ಯಾರ್ಥಿನಿ ದಿವಾ ಉತ್ಕರ್ಷ, ತಮ್ಮ 'ಪ್ರಾಜೆಕ್ಟ್ ಸೂರ್ಯ' ಸಂಸ್ಥೆಯ ಮೂಲಕ ಮಾಡಿದ ಸಮಾಜ ಸೇವೆಗಾಗಿ 'ಫೋರ್ಬ್ಸ್ 30 ಅಂಡರ್ 30 ಏಷ್ಯಾ' ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ತಮ್ಮ ಸಹೋದರನಿಗೆ ಟೈಪ್ 1 ಮಧುಮೇಹ ಪತ್ತೆಯಾದ ನಂತರ ಪ್ರೇರಿತರಾಗಿ ಸ್ಥಾಪಿಸಿದ ಈ ಸಂಸ್ಥೆ ನೆರವು ನೀಡಿದೆ.

Read Full Story

02:39 PM (IST) Jun 04

ಇಂದಿರಾಗಾಂಧಿ ಹೆಸರಲ್ಲಿ ಸಿನಿಮಾ ಟೆಂಟ್, ಇಂದು ಅದೆಷ್ಟು ಥಿಯೇಟರ್‌ಗೆ ಓನರ್ ಗೊತ್ತಾ ಡಿಕೆ ಶಿವಕುಮಾರ್?

ಕರ್ನಾಟಕ ಪೊಲಿಟಿಕ್ಸನಲ್ಲಿ ಡಿಕೆಶಿ ಅನ್ನೊ ಹೊಸ ಸುನಾಮಿ ಎದ್ದಿದೆ. ಇಷ್ಟು ದಿನ ಉಪ ಮುಖ್ಯಮಂತ್ರಿ ಆಗಿದ್ದ ಡಿಕೆ ಶಿವಕುಮಾರ್​, ಈಗ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ. ರಾಜಕಾರಣ ಅನ್ನೋ ಕಾರ್ಕೋಟಕವನ್ನ ಗಟ ಗಟ ಅಂತ ಕುಡಿದು ಅರಗಿಸಿಕೊಂಡಿರೋ ಕನಕಪುರದ ಬಂಡೆ ರಾಜಕಾರಣಕ್ಕೆ ಬರೋ ಮೊದಲು ಏನಾಗಿದ್ರು ಅಂತ ನೋಡಿದ್ರೆ ಅಲ್ಲಿ ಸಿಗೋದು ಸಿನಿಮಾ ನಂಟು!

Read Full Story

01:26 PM (IST) Jun 04

ಉಚಿತ ಬಸ್​ ಪಾಸ್​ಗೆ ಅರ್ಜಿ ಸಲ್ಲಿಸೋದು ಹೇಗೆ? ವಿದ್ಯಾರ್ಥಿಗಳಿಗೆ ಹಂತ ಹಂತದ ಮಾಹಿತಿ ಇಲ್ಲಿದೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಿದ್ದಾರೆ. ಈ ಮೊದಲು ಶುಲ್ಕವಿದ್ದ ಬಸ್ ಪಾಸ್‌ಗಳು ಈಗ ಎಲ್ಲ ವಿದ್ಯಾರ್ಥಿಗಳಿಗೂ ಉಚಿತವಾಗಿದ್ದು, ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಸಂಪೂರ್ಣ ವಿಧಾನವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
Read Full Story

01:13 PM (IST) Jun 04

ಮಂಡ್ಯ ಜಿಲ್ಲೆಯಲ್ಲಿದೆ ಕರ್ನಾಟಕದ ಹಾಲಿವುಡ್; ಬೆಂಗ್ಳೂರಿಗರೇ ವೀಕೆಂಡ್‌ ಟ್ರಿಪ್‌ಗೆ ಬೆಸ್ಟ್ ಪ್ಲೇಸ್

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮವು 'ಕರ್ನಾಟಕದ ಹಾಲಿವುಡ್' ಎಂದೇ ಪ್ರಸಿದ್ಧವಾಗಿತ್ತು. ಇಂದು ಈ ಹಚ್ಚಹಸಿರಿನಿಂದ ಕೂಡಿದ, ಕಾವೇರಿ ನದಿ ತೀರದ ಸುಂದರ ತಾಣವು ಪ್ರಿ-ವೆಡ್ಡಿಂಗ್ ಫೋಟೋಶೂಟ್‌ಗೆ ಮತ್ತು ವೀಕೆಂಡ್ ಟ್ರಿಪ್‌ಗೆ ಜನಪ್ರಿಯವಾಗಿದೆ.
Read Full Story

01:09 PM (IST) Jun 04

ನಾನು ಟ್ರೋಲ್ ಪೇಜ್‌ಗಳ ಕ್ರಶ್, ಸಿದ್ದರಾಮಯ್ಯ ರಾಜೀನಾಮೆ ದಿನ ಕಾರೊಳಗೆ ಕುಳಿತಿದ್ದಕ್ಕೆ ಪ್ರದೀಪ್ ಈಶ್ವರ್ ಸ್ಪಷ್ಟನೆ!

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು, ತಾವು ಟ್ರೋಲ್ ಆದ ಬಗ್ಗೆ, ಸಿದ್ದರಾಮಯ್ಯನವರ ಕಾರಿನಲ್ಲಿ ಮೌನವಾಗಿದ್ದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ಸಚಿವ ಸ್ಥಾನದ ಆಕಾಂಕ್ಷೆ ಹಾಗೂ ಬಿ.ಕೆ. ಹರಿಪ್ರಸಾದ್ ಅವರ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆಯೂ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
Read Full Story

12:51 PM (IST) Jun 04

ಮಹಿಳೆಯರೇ ಎಚ್ಚರ - ಸರ್ಕಾರಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಕೃತ್ಯ; ಟಾಯ್ಲೆಟ್‌ನಲ್ಲಿ ಕ್ಯಾಮೆರಾ ಇಟ್ಟು ವಿಡಿಯೋ ರೆಕಾರ್ಡ್, ನೌಕರ ಅರೆಸ್ಟ್

ತೋಕಸಂದ್ರ ಗ್ರಾಮದ ಸರ್ಕಾರಿ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಹೊರಗುತ್ತಿಗೆ ನೌಕರನನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮಹಿಳೆಯೊಬ್ಬರ ಸಮಯಪ್ರಜ್ಞೆಯಿಂದ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

Read Full Story

12:27 PM (IST) Jun 04

ಬೆಂಗಳೂರಿನ ಪ್ರತಿಷ್ಠಿತ ಬೌರಿಂಗ್ ಕ್ಲಬ್‌ ವಿರುದ್ಧ ಪ್ರಧಾನಿ ಕಚೇರಿಗೆ ದೂರು ಸಲ್ಲಿಕೆ

ಬೆಂಗಳೂರಿನ ಪ್ರತಿಷ್ಠಿತ ಬೌರಿಂಗ್ ಕ್ಲಬ್‌ನಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ಮೌಲ್ಯದ ಅಕ್ರಮಗಳ ಕುರಿತು ಪ್ರಧಾನಮಂತ್ರಿಗಳ ಕಚೇರಿಗೆ ದೂರು ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಕೋರಿದೆ. 

Read Full Story

11:42 AM (IST) Jun 04

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು; ಚಿನ್ನದ ಪದಕ ನೀಡಬೇಕಾದ ಗುತ್ತಿಗೆದಾರ ನಾಪತ್ತೆ, ವಿದ್ಯಾರ್ಥಿಗಳಿಗೆ ನಿರಾಸೆ

ತುಮಕೂರು ವಿಶ್ವವಿದ್ಯಾಲಯದ 19 ನೇ ಘಟಿಕೋತ್ಸವದಲ್ಲಿ ಗೋಲ್ಡ್ ಮೆಡಲಿಸ್ಟ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕದ ಬದಲು ಹಣದ ಚೆಕ್ ನೀಡಿರುವುದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿನ್ನದ ಪದಕ ತಯಾರಿಕೆ, ವಿತರಣೆಗೆ ಗುತ್ತಿಗೆ ನೀಡಿದ್ದ ಮಧ್ಯಪ್ರದೇಶ ಮೂಲದ ವ್ಯಕ್ತಿಯೊಬ್ಬರು ಹಣದೊಂದಿಗೆ ನಾಪತ್ತೆ!

Read Full Story

11:33 AM (IST) Jun 04

ಉದ್ಯೋಗಕ್ಕೆ ಅಗ್ಗದ ದುಡಿಮೆ ಅಗತ್ಯ ಎಂಬ ಕಲ್ಪನೆ, ಕರ್ನಾಟಕದಲ್ಲಿ ಕನಿಷ್ಠ ವೇತನ ಹೆಚ್ಚಳದಿಂದ ಉದ್ಯೋಗ ನಷ್ಟವಾಗುವುದೇ?

ಕರ್ನಾಟಕದ ಕನಿಷ್ಠ ವೇತನ ಹೆಚ್ಚಳವು ಉದ್ಯೋಗದಾತರಲ್ಲಿ ಆತಂಕ ಸೃಷ್ಟಿಸಿದೆ. ಆದರೆ, ಜಾಗತಿಕ ಸಂಶೋಧನೆಗಳು ಮತ್ತು ಆರ್ಥಿಕ ವಿಶ್ಲೇಷಣೆಗಳು ವೇತನ ಹೆಚ್ಚಳದಿಂದ ಉದ್ಯೋಗ ನಷ್ಟವಾಗುವುದಿಲ್ಲ, ಬದಲಿಗೆ ಸಣ್ಣ ಉದ್ಯಮಗಳ ಸಂಕಷ್ಟಕ್ಕೆ ಮಾರುಕಟ್ಟೆಯಲ್ಲಿನ ದೈತ್ಯ ಕಂಪನಿಗಳ ಏಕಸ್ವಾಮ್ಯವೇ ಪ್ರಮುಖ ಕಾರಣ 

Read Full Story

11:23 AM (IST) Jun 04

ನಟಿ ಶುಭಾ ಪೂಂಜಾ-ಸುಮಂತ್ ಬಿಲ್ಲವ ವಿಚ್ಛೇದನ ಸುದ್ದಿ ಬೆನ್ನಲ್ಲೇ ಹಳೆ ವಿಡಿಯೋ ವೈರಲ್

ನಟಿ ಶುಭಾ ಪೂಂಜಾ ಮತ್ತು ಪತಿ ಸುಮಂತ್ ಬಿಲ್ಲವ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಸುದ್ದಿಯ ಬೆನ್ನಲ್ಲೇ, ಶುಭಾ ತಮ್ಮ ಪತಿ, ಮದುವೆ ಮತ್ತು ರೊಮ್ಯಾಂಟಿಕ್ ಜೀವನದ ಬಗ್ಗೆ ಮಾತನಾಡಿದ್ದ ಹಳೆಯ ಸಂದರ್ಶನವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Read Full Story

09:57 AM (IST) Jun 04

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಚೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ

ನಟಿ ಶುಭಾ ಪೂಂಜಾ ಮತ್ತು ಉದ್ಯಮಿ ಸುಮಂತ್ ಬಿಲ್ಲವ ಅವರು ಮದುವೆಯಾದ ನಾಲ್ಕು ವರ್ಷಗಳ ನಂತರ ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪರಸ್ಪರ ಒಪ್ಪಿಗೆ ಮೇರೆಗೆ ಈ ದಂಪತಿ ವಿಚ್ಛೇದನ ಕೋರಿದ್ದು, ಈ ಬಗ್ಗೆ ಪ್ರತಿಕ್ರಿಯಿಸಲು ಇಬ್ಬರೂ ನಿರಾಕರಿಸಿದ್ದಾರೆ.
Read Full Story

08:54 AM (IST) Jun 04

ಮಂತ್ರಾಲಯ ರಾಯರ ಹುಂಡಿ ಎಣಿಕೆ - ಕೇವಲ 22 ದಿನದಲ್ಲಿ ₹4.35 ಕೋಟಿ ಕಾಣಿಕೆ! ಬೆಲೆ ಏರಿಕೆ ನಡುವೆಯೇ ಭಕ್ತರು ನೀಡಿದ ಚಿನ್ನ ಬೆಳ್ಳಿ ಎಷ್ಟು?

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಗಳ ಮಠದ ಹುಂಡಿಯಲ್ಲಿ ಈ ಬಾರಿಯೂ ದಾಖಲೆ ಕಾಣಿಕೆ ಸಂಗ್ರಹಗೊಂಡಿದ್ದು, ಕೇವಲ 22 ದಿನಗಳಲ್ಲಿ ಒಟ್ಟು 4 ಕೋಟಿ 35 ಲಕ್ಷ 25 ಸಾವಿರ 136 ರೂಪಾಯಿ ಸಂಗ್ರಹವಾಗಿದೆ. ಆದರೆ ಈ ಬಾರಿ ಚಿನ್ನ ಬೆಳ್ಳಿ ಕಾಣಿಕೆ ಇಳಿಮುಖವಾಗಿದೆ. 

Read Full Story

08:27 AM (IST) Jun 04

ಹೈಕಮಾಂಡ್‌ ಆಫರ್ ಕೊಟ್ರು ಕೆಪಿಸಿಸಿ ಪಟ್ಟ ಬಿಟ್ಟಿದ್ಯಾಕೆ ಸಚಿವ ಸತೀಶ್ ಜಾರಕಿಹೊಳಿ?

ಡಿಕೆ ಶಿವಕುಮಾರ್ ಬಳಿಕ ಕೆಪಿಸಿಸಿ ಅಧ್ಯಕ್ಷರು ಯಾರು ಎಂಬ ಪ್ರಶ್ನೆಗೆ ಸತೀಶ್ ಜಾರಕಿಹೊಳಿ ಎಂಬ ಉತ್ತರ ರಾಜಕೀಯ ವಲಯದಲ್ಲಿ  ಚರ್ಚೆಯಲ್ಲಿತ್ತು. ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನದ ಜೊತೆ ಕೆಪಿಸಿಸಿ ಸ್ಥಾನವನ್ನು ಸಹ ಜಾರಕಿಹೊಳಿ ಕೇಳಿದ್ರು ಎನ್ನಲಾಗಿತ್ತು. 

Read Full Story

08:10 AM (IST) Jun 04

ಶಿವಮೊಗ್ಗ-ಶೃಂಗೇರಿ-ಮಂಗಳೂರು ರೈಲು ಸಂಪರ್ಕದಿಂದ ಹೊರಗುಳಿದ ಅರಸಾಳು, ರಿಪ್ಪನ್‌ಪೇಟೆ, ಹೊಸನಗರ, ತೀರ್ಥಹಳ್ಳಿ

ಶಿವಮೊಗ್ಗ-ಶೃಂಗೇರಿ-ಮಂಗಳೂರು ನಡುವಿನ ಹೊಸ ರೈಲು ಸಂಪರ್ಕ ಯೋಜನೆಯಲ್ಲಿ ಹೊಸನಗರ ತಾಲೂಕನ್ನು ಸೇರಿಸದೆ ಅನ್ಯಾಯ ಮಾಡಲಾಗುತ್ತಿದೆ ಎಂದು ವರ್ತಕರ ಸಂಘ ಆರೋಪಿಸಿದೆ. ಅನ್ಯಾಯ ಸರಿಪಡಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಆಗ್ರಹಿಸಲಾಗಿದೆ.

Read Full Story

08:00 AM (IST) Jun 04

ಬಿಜೆಪಿಗೆ SDPI ಸಹಕಾರ ಆರೋಪ; ಕಾಂಗ್ರೆಸ್ ನಾಯಕರಿಗೆ ಅಫ್ಸರ್ ಕೊಡ್ಲಿಪೇಟೆ ಎಚ್ಚರಿಕೆ!

ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ 19 ಸಾವಿರಕ್ಕೂ ಅಧಿಕ ಮತ ಪಡೆದ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ, ತಮ್ಮ ಪಕ್ಷ ಬಿಜೆಪಿಗೆ ಸಹಕರಿಸಿದೆ ಮತ್ತು ಹಣಬಲವಿಲ್ಲದೆ ಇಷ್ಟು ಮತ ಹೇಗೆ ಬಂದವು ಎಂಬ ಕಾಂಗ್ರೆಸ್ ನಾಯಕರ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

Read Full Story

07:58 AM (IST) Jun 04

ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ನಡೆಸುತ್ತಿದ್ದ ಯಾದಗಿರಿ ಯುವಕನಿಗೆ ಹೃದಯಾಘಾತ

ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯಾದಗಿರಿ ಮೂಲದ ಯುವಕನೊಬ್ಬ ಧಾರವಾಡದಲ್ಲಿ ಹೃದಯಾಘಾತದಿಂದ ಮೃತಪಟ್ಟರೆ, ಮತ್ತೊಂದು ಘಟನೆಯಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕನಕಗಿರಿ ತಾಲೂಕಿನ ಯುವತಿಯೊಬ್ಬಳು ಆತ್ಮ*ಹತ್ಯೆಗೆ ಶರಣಾಗಿದ್ದಾಳೆ. ಈ ಎರಡೂ ದುರಂತ ಘಟನೆಗಳು ಕುಟುಂಬದಲ್ಲಿ ಶೋಕವನ್ನುಂಟು ಮಾಡಿವೆ.

Read Full Story

07:42 AM (IST) Jun 04

ಬೆಲಗೂರು-ಶೃಂಗೇರಿ - ಸಂಚಾರ ಆರಂಭಿಸಿದ ಹೊಸ ಬಸ್‌ನ ವಿಶೇಷವೇನು? ಯಾರಿಗೆಲ್ಲಾ ಅನುಕೂಲ

ಬೆಲಗೂರಿನಿಂದ ಶೃಂಗೇರಿಗೆ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭಗೊಂಡಿದ್ದು, ಎನ್.ಆರ್.ಪುರ ಬಸ್ ನಿಲ್ದಾಣದಲ್ಲಿ ಪೂಜೆ ಸಲ್ಲಿಸಿ ಸಂಭ್ರಮಿಸಲಾಯಿತು. ಈ ಹೊಸ ಸೇವೆಯು ಶಕ್ತಿ ಯೋಜನೆಯಡಿ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಮತ್ತು ಇತರ ಪ್ರಯಾಣಿಕರಿಗೆ ಹೆಚ್ಚು ಅನುಕೂಲಕರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Read Full Story

07:32 AM (IST) Jun 04

'ನಿಮ್ಮನ್ನ ಸುಮ್ನೆ ಬಿಡೋಲ್ಲ..' ಮಂಡ್ಯ ಭ್ರಷ್ಟ ಪಿಡಿಒ ನಿವಾಸಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!

ಉಪ ಲೋಕಾಯುಕ್ತ ಬಿ.ವೀರಪ್ಪ ಅವರ ಆದೇಶದ ಮೇರೆಗೆ ಮಂಡ್ಯ ಲೋಕಾಯುಕ್ತ ಪೊಲೀಸರು ಬೇಲೂರು ಮತ್ತು ಬೇವಿನಹಳ್ಳಿ ಗ್ರಾಮ ಪಂಚಾಯ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಪಿಡಿಒಗಳ ನಿವಾಸ ಹಾಗೂ ಕಚೇರಿಗಳಲ್ಲಿ ಇ-ಸ್ವತ್ತು, ತೆರಿಗೆ ಸಂಗ್ರಹ, ಲೇ-ಔಟ್ ಶುಲ್ಕ ಸೇರಿದಂತೆ ಹಲವು ದಾಖಲೆಗಳು ಪತ್ತೆಯಾಗಿವೆ.

Read Full Story

07:24 AM (IST) Jun 04

Mangaluru - ರಸ್ತೆ ಅಭಿವೃದ್ಧಿ ಅವಾಂತರ, ಮರಗಳು ಉರುಳುವ ಭೀತಿ; ಹೆದ್ದಾರಿಯಲ್ಲಿ ಮೃತ್ಯುಪಾಶ

ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಬಳಿ ರಸ್ತೆ ವಿಸ್ತರಣೆ ಕಾಮಗಾರಿಯಿಂದ ಮರಗಳ ಬುಡ ಸಡಿಲಗೊಂಡಿದೆ. ಇದರಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ರಸ್ತೆಗೆ ಉರುಳುವ ಭೀತಿ ಎದುರಾಗಿದ್ದು, ಮಳೆಗಾಲದಲ್ಲಿ ಇದು ಪ್ರಯಾಣಿಕರಿಗೆ ದೊಡ್ಡ ಅಪಾಯವನ್ನುಂಟುಮಾಡುವ ಸಾಧ್ಯತೆಯಿದೆ.
Read Full Story

07:10 AM (IST) Jun 04

RCB ಕಪ್‌ ತುಳಿತ ದುರಂತಕ್ಕೆ ಒಂದು ವರ್ಷ; ಸಿಐಡಿ ತನಿಖೆ ಎಲ್ಲಿಗೆ ಬಂತು? ಹೊಣೆಗಾರರು ಯಾರು?

ಆರ್‌ಸಿಬಿ ಮೊದಲ ಬಾರಿಗೆ ಐಪಿಎಲ್ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಒಂದು ವರ್ಷವಾಗಿದೆ. ಈ ಘಟನೆಯಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದರು.

Read Full Story

More Trending News