ಬೆಂಗಳೂರು: ದೇವರು, ಜ್ಯೋತಿಷ್ಯ, ವಾಸ್ತು ವಿಚಾರಗಳಲ್ಲಿ ಅಪಾರ ನಂಬಿಕೆಯುಳ್ಳ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇನ್ನು ಮುಂದೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಗೆ ತಮ್ಮ ಕುರ್ಚಿಯನ್ನು ಉತ್ತರಕ್ಕೆ ಮುಖ ಮಾಡುವಂತೆ ವ್ಯವಸ್ಥೆ ಮಾಡಲು ಸೂಚಿಸಿದ ಘಟನೆ ನಡೆಯಿತು.
ಸಂಪುಟ ಸಭೆ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಮೊದಲ ಸುದ್ದಿಗೋಷ್ಠಿಗೆ ಆಗಮಿಸಿದ ಮುಖ್ಯಮಂತ್ರಿ ಅವರು, ತಾವು ಮತ್ತು ಸಂಪುಟ ಸಹೋದ್ಯೋಗಿಗಳು ಕುಳಿತುಕೊಳ್ಳಲು ದಕ್ಷಿಣಕ್ಕೆ ಮುಖ ಮಾಡಿರುವುದು ಕಂಡಿತು. ಇದನ್ನು ಗಮನಿಸಿದ ಶಿವಕುಮಾರ್ ಅವರು, ಬದಲಾವಣೆ ಮಾಡಲು ಸೂಚಿಸಿದರು. ಆದರೆ ವಿದ್ಯುನ್ಮಾನ ಮಾಧ್ಯಮದ ಸ್ನೇಹಿತರು ‘ಸರ್ ನಾವಾಗಲೇ ಲೈವ್ ಕವರೇಜಿಗೆ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಈಗ ಬದಲಾವಣೆ ಮಾಡುವುದು ಕಷ್ಟವಾಗುತ್ತದೆ’ ಎಂದರು. ಆಗ, ಡಿ.ಕೆ.ಶಿವಕುಮಾರ್ ಅವರು, ಇನ್ನು ಮುಂದೆ ಪತ್ರಿಕಾಗೋಷ್ಠಿಗೆ ಉತ್ತರಕ್ಕೆ ಮುಖ ಮಾಡಿ ಕುಳಿತುಕೊಳ್ಳುವಂತೆ ಕುರ್ಚಿ ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
09:57 AM (IST) Jun 04
08:54 AM (IST) Jun 04
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಗಳ ಮಠದ ಹುಂಡಿಯಲ್ಲಿ ಈ ಬಾರಿಯೂ ದಾಖಲೆ ಕಾಣಿಕೆ ಸಂಗ್ರಹಗೊಂಡಿದ್ದು, ಕೇವಲ 22 ದಿನಗಳಲ್ಲಿ ಒಟ್ಟು 4 ಕೋಟಿ 35 ಲಕ್ಷ 25 ಸಾವಿರ 136 ರೂಪಾಯಿ ಸಂಗ್ರಹವಾಗಿದೆ. ಆದರೆ ಈ ಬಾರಿ ಚಿನ್ನ ಬೆಳ್ಳಿ ಕಾಣಿಕೆ ಇಳಿಮುಖವಾಗಿದೆ.
08:27 AM (IST) Jun 04
ಡಿಕೆ ಶಿವಕುಮಾರ್ ಬಳಿಕ ಕೆಪಿಸಿಸಿ ಅಧ್ಯಕ್ಷರು ಯಾರು ಎಂಬ ಪ್ರಶ್ನೆಗೆ ಸತೀಶ್ ಜಾರಕಿಹೊಳಿ ಎಂಬ ಉತ್ತರ ರಾಜಕೀಯ ವಲಯದಲ್ಲಿ ಚರ್ಚೆಯಲ್ಲಿತ್ತು. ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನದ ಜೊತೆ ಕೆಪಿಸಿಸಿ ಸ್ಥಾನವನ್ನು ಸಹ ಜಾರಕಿಹೊಳಿ ಕೇಳಿದ್ರು ಎನ್ನಲಾಗಿತ್ತು.
08:10 AM (IST) Jun 04
ಶಿವಮೊಗ್ಗ-ಶೃಂಗೇರಿ-ಮಂಗಳೂರು ನಡುವಿನ ಹೊಸ ರೈಲು ಸಂಪರ್ಕ ಯೋಜನೆಯಲ್ಲಿ ಹೊಸನಗರ ತಾಲೂಕನ್ನು ಸೇರಿಸದೆ ಅನ್ಯಾಯ ಮಾಡಲಾಗುತ್ತಿದೆ ಎಂದು ವರ್ತಕರ ಸಂಘ ಆರೋಪಿಸಿದೆ. ಅನ್ಯಾಯ ಸರಿಪಡಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಆಗ್ರಹಿಸಲಾಗಿದೆ.
08:00 AM (IST) Jun 04
ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ 19 ಸಾವಿರಕ್ಕೂ ಅಧಿಕ ಮತ ಪಡೆದ ಎಸ್ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ, ತಮ್ಮ ಪಕ್ಷ ಬಿಜೆಪಿಗೆ ಸಹಕರಿಸಿದೆ ಮತ್ತು ಹಣಬಲವಿಲ್ಲದೆ ಇಷ್ಟು ಮತ ಹೇಗೆ ಬಂದವು ಎಂಬ ಕಾಂಗ್ರೆಸ್ ನಾಯಕರ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
07:58 AM (IST) Jun 04
ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯಾದಗಿರಿ ಮೂಲದ ಯುವಕನೊಬ್ಬ ಧಾರವಾಡದಲ್ಲಿ ಹೃದಯಾಘಾತದಿಂದ ಮೃತಪಟ್ಟರೆ, ಮತ್ತೊಂದು ಘಟನೆಯಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕನಕಗಿರಿ ತಾಲೂಕಿನ ಯುವತಿಯೊಬ್ಬಳು ಆತ್ಮ*ಹತ್ಯೆಗೆ ಶರಣಾಗಿದ್ದಾಳೆ. ಈ ಎರಡೂ ದುರಂತ ಘಟನೆಗಳು ಕುಟುಂಬದಲ್ಲಿ ಶೋಕವನ್ನುಂಟು ಮಾಡಿವೆ.
07:42 AM (IST) Jun 04
ಬೆಲಗೂರಿನಿಂದ ಶೃಂಗೇರಿಗೆ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭಗೊಂಡಿದ್ದು, ಎನ್.ಆರ್.ಪುರ ಬಸ್ ನಿಲ್ದಾಣದಲ್ಲಿ ಪೂಜೆ ಸಲ್ಲಿಸಿ ಸಂಭ್ರಮಿಸಲಾಯಿತು. ಈ ಹೊಸ ಸೇವೆಯು ಶಕ್ತಿ ಯೋಜನೆಯಡಿ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಮತ್ತು ಇತರ ಪ್ರಯಾಣಿಕರಿಗೆ ಹೆಚ್ಚು ಅನುಕೂಲಕರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
07:32 AM (IST) Jun 04
ಉಪ ಲೋಕಾಯುಕ್ತ ಬಿ.ವೀರಪ್ಪ ಅವರ ಆದೇಶದ ಮೇರೆಗೆ ಮಂಡ್ಯ ಲೋಕಾಯುಕ್ತ ಪೊಲೀಸರು ಬೇಲೂರು ಮತ್ತು ಬೇವಿನಹಳ್ಳಿ ಗ್ರಾಮ ಪಂಚಾಯ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಪಿಡಿಒಗಳ ನಿವಾಸ ಹಾಗೂ ಕಚೇರಿಗಳಲ್ಲಿ ಇ-ಸ್ವತ್ತು, ತೆರಿಗೆ ಸಂಗ್ರಹ, ಲೇ-ಔಟ್ ಶುಲ್ಕ ಸೇರಿದಂತೆ ಹಲವು ದಾಖಲೆಗಳು ಪತ್ತೆಯಾಗಿವೆ.
07:24 AM (IST) Jun 04
07:10 AM (IST) Jun 04
ಆರ್ಸಿಬಿ ಮೊದಲ ಬಾರಿಗೆ ಐಪಿಎಲ್ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಒಂದು ವರ್ಷವಾಗಿದೆ. ಈ ಘಟನೆಯಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದರು.