ಬೆಂಗಳೂರು: ವಿಧಾನಪರಿಷತ್ ನೇಮಕ, ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಹಾಗೂ ಹನಿಟ್ರ್ಯಾಪ್ ಪ್ರಕರಣ ಸೇರಿದಂತೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಗುರುವಾರ ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿ 300 ದಿನಗಳು ಕಳೆದಿವೆ. ಇತ್ತ ರಾಜ್ಯದಲ್ಲಿನ ಬೆಲೆ ಏರಿಕೆ ಖಂಡಿಸಿ ಬಿಜೆಪಿ ದೊಡ್ಡಮಟ್ಟದ ಪ್ರತಿಭಟನೆ ನಡೆಸಿತ್ತು. ಇಂದಿನ ರಾಜ್ಯ ಮತ್ತು ರಾಜಕೀಯ ಕುರಿತ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

11:35 PM (IST) Apr 04
ರಾಜಕಾರಣಿಗಳು ಸೇರಿದಂತೆ ಅಕ್ಷರಸ್ಥರೇ ಸಮಾಜಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ತು ಸದಸ್ಯ ಎಚ್. ವಿಶ್ವನಾಥ್ ಕಳವಳ ವ್ಯಕ್ತಪಡಿಸಿದರು.
ಪೂರ್ತಿ ಓದಿ10:27 PM (IST) Apr 04
ಹನ್ನೊಂದು ದಿನ ಕಾಲ ನಡೆಯುವ ವಿಶ್ವ ವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ (ಶುಕ್ರವಾರ) ಇಂದು ರಾತ್ರಿ 11 ಗಂಟೆಗೆ ಧ್ವಜಾರೋಹಣ ಮುಖಾಂತರ ಅಧಿಕೃತ ಚಾಲನೆ ದೊರೆಯಲಿದ್ದು, ಏ.12ರ ಚೈತ್ರ ಪೌರ್ಣಮಿಯಂದು ಕರಗ ಉತ್ಸವ ನಡೆಯಲಿದೆ.
ಪೂರ್ತಿ ಓದಿ10:13 PM (IST) Apr 04
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದ ಗದ್ದುಗೆಗಾಗಿ ಅವ್ಶೆಜ್ಞಾನಿಕವಾಗಿ ಪಂಚ ಗ್ಯಾರಂಟಿಗಳನ್ನು ಕೊಟ್ಟು ಈಗ ಅಗತ್ಯ ವಸ್ತುಗಳ ಬೆಲೆ ಏರಿಸಿ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಗೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ವಾಗ್ದಾಳಿ ಮಾಡಿದರು.
ಪೂರ್ತಿ ಓದಿ10:06 PM (IST) Apr 04
ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಪೂರ್ತಿ ಓದಿ09:10 PM (IST) Apr 04
ಬಿಜೆಪಿ ತತ್ವ ಸಿದ್ಧಾಂತವನ್ನು ಉಳಿಸಿಕೊಂಡಿಲ್ಲ. ಯಡಿಯೂರಪ್ಪ ಅವರ ಹಡಬೆ ದುಡ್ಡಿನಿಂದ ವಿಜಯೇಂದ್ರ ಅಧ್ಯಕ್ಷನಾಗಿದ್ದಾನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.
ಪೂರ್ತಿ ಓದಿ08:58 PM (IST) Apr 04
ಲೋಕಸಭೆಯಲ್ಲಿ ಐತಿಹಾಸಿಕ ಮಸೂದೆಗೆ ಅಂಗೀಕಾರ ಲಭಿಸಿದ್ದು, ಕಾಂಗ್ರೆಸ್ ಪಕ್ಷ ವಕ್ಫ್ ಕಾಯ್ದೆ ತಿದ್ದುಪಡಿಯನ್ನು ರಾಜ್ಯ ಮತ್ತು ದೇಶದಲ್ಲಿ ವಿರೋಧಿಸುವುದು ಒಂದು ದುರಂತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಪೂರ್ತಿ ಓದಿ08:45 PM (IST) Apr 04
ವಿಧಾನಪರಿಷತ್ ನೇಮಕ, ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಹಾಗೂ ಹನಿಟ್ರ್ಯಾಪ್ ಪ್ರಕರಣ ಸೇರಿದಂತೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.
08:01 PM (IST) Apr 04
ಅಡುಗೆಮನೆಯ ಚಿಮಣಿಯನ್ನು ಸ್ವಚ್ಛಗೊಳಿಸಲು ವಿನೆಗರ್, ಡಿಶ್ ವಾಶ್ ಲಿಕ್ವಿಡ್, ಬೇಕಿಂಗ್ ಸೋಡಾ ಮತ್ತು ಸೋಪು ಪುಡಿಯಂತಹ ವಸ್ತುಗಳನ್ನು ಬಳಸಬಹುದು. ಈ ವಸ್ತುಗಳು ಚಿಮಣಿಯಲ್ಲಿರುವ ಎಣ್ಣೆಯಂಶ ಮತ್ತು ಕೊಳೆಯನ್ನು ತೆಗೆದುಹಾಕಲು ಸಹಾಯ ಮಾಡುತ್ತವೆ.
ಪೂರ್ತಿ ಓದಿ07:20 PM (IST) Apr 04
ಕರ್ನಾಟಕದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ. ಪರಿಣಾಮ ಕರ್ನಾಟಕ ಸರ್ಕಾರ, ರಾತ್ರಿ ಸಂಚಾರ ತೆರವುಗೊಳಿಸಲು ಮುಂದಾಗಿದೆ ಎಂದು ಸಂಸದ ಯದುವೀರ್ ಒಡೆಯರ್ ಆರೋಪಿಸಿದ್ದಾರೆ.
ಪೂರ್ತಿ ಓದಿ07:07 PM (IST) Apr 04
ತೆಲಂಗಾಣದ 400 ಎಕರೆ ಅರಣ್ಯ ಪ್ರದೇಶವನ್ನು ಮಾರಾಟ ಮಾಡುವ ಕಾಂಗ್ರೆಸ್ ಸರ್ಕಾರದ ಯೋಜನೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೈದರಾಬಾದ್ ವಿಶ್ವವಿದ್ಯಾಲಯದ ಬಳಿಯ ಅರಣ್ಯದಲ್ಲಿ ಅಪರೂಪದ ಪ್ರಾಣಿ ಪಕ್ಷಿಗಳಿವೆ, ಆದರೆ ಸರ್ಕಾರವು ಶೇ.40ರಷ್ಟು ಮರಗಳನ್ನು ಕಡಿದಿದೆ.
ಪೂರ್ತಿ ಓದಿ06:28 PM (IST) Apr 04
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತ ನಟಿ ರನ್ಯಾ ರಾವ್ ಕಳೆದ ನಾಲ್ಕು ತಿಂಗಳಲ್ಲಿ ಸುಮಾರು 38.39 ಕೋಟಿ ರು. ಹಣವನ್ನು ಹವಾಲಾ ಮೂಲಕ ದುಬೈಗೆ ವರ್ಗಾಹಿಸಿ 49.6 ಕೆ.ಜಿ. ಚಿನ್ನ ಖರೀದಿಸಿದ್ದರು.
ಪೂರ್ತಿ ಓದಿ06:16 PM (IST) Apr 04
ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಪೂರ್ತಿ ಓದಿ02:24 PM (IST) Apr 04
ಮಡಿಕೇರಿಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ನೋಟ್ನಲ್ಲಿ ಕಾಂಗ್ರೆಸ್ ಶಾಸಕ ಪೊನ್ನಣ್ಣ ಹೆಸರು ಉಲ್ಲೇಖಿಸಿದ್ದಾರೆ. ರಾಜಕೀಯ ಪ್ರೇರಿತ ಎಫ್ಐಆರ್ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.
ಪೂರ್ತಿ ಓದಿ10:08 AM (IST) Apr 04
Karnataka BJP: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಬಳಿಕ ಬಿಜೆಪಿ ಅಂಗಳದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯುತ್ತಿವೆ. ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿದ್ದ ನಾಯಕರ ಮುಂದಿನ ನಡೆ ತೀವ್ರ ಕುತೂಹಲ ಕೆರಳಿಸಿದೆ.
ಪೂರ್ತಿ ಓದಿ08:55 AM (IST) Apr 04
Karnataka Summer Rain: ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರದಲ್ಲಿ ಮಳೆಯಿಂದ ಬಾಳೆ ಬೆಳೆ ನಾಶವಾಗಿದೆ.
ಪೂರ್ತಿ ಓದಿ