ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ನಾಯಕರು ಮೊಯ್ಲಿ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಇದು ಆ ಕ್ಷಣಕ್ಕೆ ಡಿ.ಕೆ. ಶಿವಕುಮಾರ್ ಅವರಿಗೆ ಖುಷಿ ನೀಡಲು ನೀಡಿದ ಹೇಳಿಕೆಯಷ್ಟೇ ಎಂದು ತಳ್ಳಿ ಹಾಕುತ್ತಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಈವರೆಗೆ ಕಿರಿಯ ಶಾಸಕರು ಮಾತ್ರ ಹೇಳಿಕೆ ನೀಡುತ್ತಿದ್ದರು. ಇದೀಗ ವೀರಪ್ಪ ಮೊಯ್ಲಿ ಅವರು ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ಹೊರತಾಗಿಯೂ ಬಹಿರಂಗ ಹೇಳಿಕೆ ನೀಡಿದ್ದಾರೆ. ಇದು ಡಿ.ಕೆ. ಶಿವಕುಮಾರ್ ಬಣದ ನಾಯಕರಲ್ಲಿ ಹೊಸ ಹುರುಪು ಹುಟ್ಟುಹಾಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸೂಚನೆಯನ್ನು ಧಿಕ್ಕರಿಸಿ ಎಂ.ಪಿ.ರೇಣುಕಾಚಾರ್ಯ ಅವರು ವೀರಶೈವ ಲಿಂಗಾಯತ ಮಹಾಸಂಗಮದ ಪೂರ್ವಸಿದ್ಧತಾ ಸಭೆ ಮುಂದುವರೆಸಿದ್ದಾರೆ. ಬೆಂಗಳೂರಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಲಿದ್ದು, ಸುಮಾರು ಹತ್ತು ಜಿಲ್ಲೆಗಳ ಮುಖಂಡರು ಭಾಗವಹಿಸಲಿದ್ದಾರೆ.

06:38 PM (IST) Mar 04
ಮಾವಿನ ಹಣ್ಣುಗಳಲ್ಲಿ ಅಲ್ಫಾನ್ಸೊ ಪ್ರಮುಖವಾದುದು. ಆದರೆ ಇದು ಭಾರತೀಯ ತಳಿಯಲ್ಲ. ಹಾಗಿದ್ರೆ ಇದ್ರ ಮೂಲ ಯಾವುದು?
ಪೂರ್ತಿ ಓದಿ12:31 PM (IST) Mar 04
ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಫಲಾನುಭವಿಗಳನ್ನು ಕಡಿಮೆ ಮಾಡುವ ಪ್ರಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಪೂರ್ತಿ ಓದಿ10:35 AM (IST) Mar 04
ಯುರೋಪಿಯನ್ ಒಕ್ಕೂಟದ ಆಯೋಗದ ಅಧ್ಯಕ್ಷರ ಭಾರತ ಭೇಟಿ ಭಾರತ-ಇಯು ಸಂಬಂಧದಲ್ಲಿ ಹೊಸ ಅಧ್ಯಾಯವನ್ನು ತೆರೆದಿದೆ. ಮುಕ್ತ ವ್ಯಾಪಾರ ಒಪ್ಪಂದ, ನವೀಕರಿಸಬಹುದಾದ ಇಂಧನ ಮತ್ತು ತಂತ್ರಜ್ಞಾನದ ಸಹಕಾರದ ಕುರಿತು ಸಕಾರಾತ್ಮಕ ಚರ್ಚೆಗಳು ನಡೆದಿವೆ.
ಪೂರ್ತಿ ಓದಿ10:15 AM (IST) Mar 04
ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಅವರು ತಾಲೂಕು ಪಂಚಾಯಿತಿ ಇಂಜಿನಿಯರ್ಗೆ ನಿಂದಿಸಿದ ಆಡಿಯೋ ವೈರಲ್ ಆಗಿದೆ. ಆಡಿಯೋದಲ್ಲಿ ಸಚಿವರು ಆಕ್ಷೇಪಾರ್ಹ ಪದಗಳನ್ನು ಬಳಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಪೂರ್ತಿ ಓದಿ09:04 AM (IST) Mar 04
ರಾಜ್ಯಪಾಲರ ಭಾಷಣದಲ್ಲಿ ಗ್ಯಾರಂಟಿ ಯೋಜನೆಗಳ ಸಾಧನೆ ಮತ್ತು ರಾಜ್ಯ ಸರ್ಕಾರದ ಸಮರ್ಥನೆಯನ್ನು ಎತ್ತಿ ತೋರಿಸಲಾಗಿದೆ. ಆರ್ಥಿಕತೆ, ಕಾನೂನು ಸುವ್ಯವಸ್ಥೆ, ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ.
ಪೂರ್ತಿ ಓದಿ08:35 AM (IST) Mar 04
ವಿಮರ್ಶಕ ರಂಜಾನ್ ದರ್ಗಾ ಅವರು ಬಸವ ಧರ್ಮವು ವೈದಿಕ ಸಂಸ್ಕೃತಿಯ ವಿರುದ್ಧ ಹೋರಾಡಿದೆ ಎಂದು ಹೇಳಿದರು. ಲೋಕಾಯತ, ಬೌದ್ಧ ಧರ್ಮವನ್ನು ಮನು ಸಂಸ್ಕೃತಿ ಇಲ್ಲವಾಗಿಸಿತು. ಬಸವ ಧರ್ಮಕ್ಕೆ ಗಡಿರೇಖೆಗಳಿಲ್ಲ ಎಂದರು.
ಪೂರ್ತಿ ಓದಿ08:12 AM (IST) Mar 04
ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿರ್ವಾಹಕನ ಮೇಲೆ ಮರಾಠಿಗರ ಹಲ್ಲೆ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜಭವನ ಮುತ್ತಿಗೆಗೆ ಯತ್ನಿಸಲಾಯಿತು. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು. ಮಾರ್ಚ್ 22 ರಂದು ಅಖಿಲ ಕರ್ನಾಟಕ ಬಂದ್ ಮಾಡಲಾಗುವುದು ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಪೂರ್ತಿ ಓದಿ