LIVE NOW
Published : Jan 05, 2026, 06:51 AM ISTUpdated : Jan 05, 2026, 09:52 PM IST

Karnataka News Live: Viral Video - ಬ್ಯಾಂಕಾಕ್‌ನಲ್ಲಿ 'ಕೆಲಸ' ಮುಗಿಸಿ ಹಣ ಕೊಡದ ಭಾರತೀಯ ವ್ಯಕ್ತಿ, ಟ್ರಾನ್ಸ್‌ವುಮೆನ್ಸ್‌ಗಳಿಂದ ಹಲ್ಲೆ!

ಸಾರಾಂಶ

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿ ಮೂಲದ ನಿಂಗರಾಜ್‌ ಗುಳ್ಳಪ್ಪ ತಳವಾರ(23) ಮತ್ತು ಧಾರವಾಡ ಮೂಲದ ಪ್ರಶಾಂತ್‌ ತಳವಾರ(23) ಬಂಧಿತರು. ಆರೋಪಿಗಳ ಪೈಕಿ ನಿಂಗರಾಜ್‌ ಹುಬ್ಬಳ್ಳಿಯಲ್ಲಿ ಪೆಟ್ರೋಲ್‌ ಬಂಕ್‌ನಲ್ಲಿ ಮ್ಯಾನೇಜರ್‌ ಆಗಿದ್ದು, ಪ್ರಶಾಂತ್‌ ಧಾರವಾಡದಲ್ಲಿ ಆಡಿಟರ್‌ ಆಗಿದ್ದಾನೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಚಂದ್ರಶೇಖರ್ ಹಾಗೂ ನಿತಿನ್ ಎಂಬುವರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಅಧಿಕಾರಿಗಳು

Indian Tourist Assaulted by Transwomen Pattaya

09:52 PM (IST) Jan 05

Viral Video - ಬ್ಯಾಂಕಾಕ್‌ನಲ್ಲಿ 'ಕೆಲಸ' ಮುಗಿಸಿ ಹಣ ಕೊಡದ ಭಾರತೀಯ ವ್ಯಕ್ತಿ, ಟ್ರಾನ್ಸ್‌ವುಮೆನ್ಸ್‌ಗಳಿಂದ ಹಲ್ಲೆ!

ಥಾಯ್ಲೆಂಡ್‌ನ ಪಟ್ಟಾಯದಲ್ಲಿ ಎಸ್ಕಾರ್ಟ್‌ ಸೇವೆಗಳ ಹಣ ಪಾವತಿ ವಿವಾದದ ಹಿನ್ನೆಲೆಯಲ್ಲಿ, ಟ್ರಾನ್ಸ್‌ಜೆಂಡರ್ ಮಹಿಳೆಯರ ಗುಂಪು 52 ವರ್ಷದ ಭಾರತೀಯ ಪ್ರಜೆ ರಾಜ್ ಜಸುಜಾ ಅವರ ಮೇಲೆ ಹಲ್ಲೆ ನಡೆಸಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Read Full Story

08:58 PM (IST) Jan 05

ಕುಂದಾಪುರದಲ್ಲಿ KSRTC ಬಸ್‌ಗೆ ಢಿಕ್ಕಿ ಹೊಡೆದ ಟಿಪ್ಪರ್‌, 15 ಪ್ರಯಾಣಿಕರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ!

ಕುಂದಾಪುರ ತಾಲೂಕಿನ ತಲ್ಲೂರು-ನೇರಳಕಟ್ಟೆ ರಸ್ತೆಯ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಏಳು ವಿದ್ಯಾರ್ಥಿಗಳು ಸೇರಿದಂತೆ ಹದಿನೈದು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

Read Full Story

08:57 PM (IST) Jan 05

Bigg Boss Spandana Eviction - ಈ ವಾರವೂ ಸ್ಪಂದನಾ ಹೊರಬರದಿದ್ರೆ ನಡೆದೇ ಹೋಗ್ತಿದ್ದು ದೊಡ್ಡ ಯುದ್ಧ?

ಫಿನಾಲೆಗೆ ಕೆಲವೇ ದಿನಗಳಿರುವಾಗ ಸ್ಪಂದನಾ ಸೋಮಣ್ಣ ಬಿಗ್‌ಬಾಸ್‌ ಮನೆಯಿಂದ ಹೊರಬಂದಿದ್ದಾರೆ. ವಾಹಿನಿ ಕಡೆಯವರೆಂಬ ಕಾರಣಕ್ಕೆ ಅರ್ಹತೆ ಇಲ್ಲದಿದ್ದರೂ ಮನೆಯಲ್ಲಿದ್ದಾರೆ ಎಂದು ಜಾಹ್ನವಿ, ಮಾಳು ಸೇರಿದಂತೆ ಹಲವರು ಆರೋಪಿಸಿದ್ದರು. ಇದೀಗ ಅವರ ಎಲಿಮಿನೇಷನ್‌ನಿಂದಾಗಿ ಈ ಚರ್ಚೆಗೆ ತೆರೆಬಿದ್ದಿದೆ.
Read Full Story

08:20 PM (IST) Jan 05

Century Gowda Death - ಗಡ್ಡಪ್ಪ ನಂತರ ತಿಥಿ ಸಿನಿಮಾದ ಸೆಂಚುರಿ ಗೌಡ ನಿಧನ!

'ತಿಥಿ' ಸಿನಿಮಾದ ಸೆಂಚುರಿ ಗೌಡ ಖ್ಯಾತಿಯ ಸಿಂಗ್ರಿ ಗೌಡ ಅವರು ನೂರಕ್ಕೂ ಹೆಚ್ಚು ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಇದಕ್ಕೂ ಒಂದೂವರೆ ತಿಂಗಳ ಹಿಂದೆ ಅದೇ ಚಿತ್ರದ ಗಡ್ಡಪ್ಪ ಪಾತ್ರಧಾರಿ ಚನ್ನೇಗೌಡ ಕೂಡ ನಿಧನರಾಗಿದ್ದರು. 

Read Full Story

07:57 PM (IST) Jan 05

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಇಡೀ ರಾಜ್ಯದಲ್ಲೇ ಧಾರವಾಡ ಜಿಲ್ಲೆ ಪ್ರಥಮ - ಹೆಚ್.ಎಂ.ರೇವಣ್ಣ

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಧಾರವಾಡ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಘೋಷಿಸಿದ್ದಾರೆ.  

Read Full Story

07:17 PM (IST) Jan 05

ಕನ್ನಡ ಮನೆಯಲ್ಲಿ ಮಾತಾಡಿ ಎಂದ ವಾರ್ಡನ್‌ನ ಮನೆಗೆ ಕಳುಹಿಸಿದ ಬೆಂಗಳೂರಿನ ಕಾಲೇಜು

ಕನ್ನಡ ಭಾಷೆ ಮಾತನಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಂಜಿನಿಯರಿಂಗ್ ಕಾಲೇಜೊಂದರ ಹಾಸ್ಟೆಲ್ ವಾರ್ಡನ್‌ ಒಬ್ಬರನ್ನು ಕೆಲಸದಿಂದ ವಜಾ ಮಾಡಿ ಮನೆಗೆ ಕಳುಹಿಸಲಾಗಿದೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಎಎಂಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಘಟನೆ ನಡೆದಿದೆ.

Read Full Story

06:46 PM (IST) Jan 05

ಬೆಂಗಳೂರು - ಸಿನೆಮಾ ಟಾಕೀಸ್‌ ವಾಶ್‌ರೂಂನಲ್ಲಿ ಕ್ಯಾಮಾರಾ ಪತ್ತೆ, ಅಪ್ರಾಪ್ತನ ಬಳಕೆ ಆರೋಪ, ದೂರು ಕೊಟ್ಟ ಮಹಿಳಾ ಟೆಕ್ಕಿ

ಬೆಂಗಳೂರಿನ ಮಡಿವಾಳದಲ್ಲಿರುವ ಸಂಧ್ಯಾ ಥಿಯೇಟರ್‌ನ ಲೇಡಿಸ್ ವಾಶ್ ರೂಮ್‌ನಲ್ಲಿ ಗುಪ್ತ ಕ್ಯಾಮೆರಾ ಪತ್ತೆಯಾಗಿದೆ. ಸಿನಿಮಾ ನೋಡಲು ಬಂದಿದ್ದ ಮಹಿಳಾ ಟೆಕ್ಕಿಯೊಬ್ಬರು ನೀಡಿದ ದೂರಿನ ಮೇರೆಗೆ, ಥಿಯೇಟರ್ ಸಿಬ್ಬಂದಿ ಮತ್ತು ವಿಡಿಯೋ ಚಿತ್ರೀಕರಿಸುತ್ತಿದ್ದ ಅಪ್ರಾಪ್ತ ಬಾಲಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Read Full Story

05:20 PM (IST) Jan 05

ಕೋಗಿಲು ನಿರಾಶ್ರಿತರಿಗೆ ವಸತಿ ನೀಡುವ ಬಗ್ಗೆ ಮಹತ್ವದ ಸಭೆ, ಕನ್ನಡಿಗರಿಗೆ ಮೊದಲ ಆದ್ಯತೆ, ಇನ್ನೂ ಹಲವು ವಿಚಾರ ಚರ್ಚೆ

ಕೋಗಿಲು ಕ್ರಾಸ್ ನಿರಾಶ್ರಿತರಿಗೆ ಮನೆ ನೀಡುವ ಕುರಿತು ರಾಜ್ಯ ಸರ್ಕಾರವು ಕಾನೂನುಬದ್ಧ ಹಾಗೂ ಮಾನವೀಯ ಕ್ರಮಗಳನ್ನು ಅನುಸರಿಸಲು ನಿರ್ಧರಿಸಿದೆ. ಸಚಿವ  ಸಭೆಯಲ್ಲಿ, ಅರ್ಹತೆ ಪರಿಶೀಲಿಸಿ, ಐದು ವರ್ಷಕ್ಕೂ ಹೆಚ್ಚು ಕಾಲ ವಾಸವಿರುವ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ.  

Read Full Story

04:30 PM (IST) Jan 05

ಕೊಪ್ಪಳ ರೈಲ್ವೆ ಮೇಲ್ಸೇತುವೆ ಬಂದ ಸಚಿವ ಸೋಮಣ್ಣಗೆ ಮುಖಭಂಗ, ಹೊಡೆದಾಡಿಕೊಂಡ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು!

ಕೊಪ್ಪಳದ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಶಂಕುಸ್ಥಾಪನೆ ವೇಳೆ ಪ್ರೋಟೋಕಾಲ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ಗಲಾಟೆ ನಡೆಯಿತು. ಈ ಗದ್ದಲದಿಂದಾಗಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರ್ಯಕ್ರಮವನ್ನು ಮೊಟಕುಗೊಳಿಸಿ ನಿರ್ಗಮಿಸಿದರು. 

Read Full Story

04:03 PM (IST) Jan 05

ಫ್ರಿಡ್ಜ್ ಇಲ್ಲದೆ ತರಕಾರಿ , ಸೊಪ್ಪು‌, ಹಣ್ಣುಗಳು ಹಾಳಾಗದಂತೆ ಇಡೋದು ಹೇಗೆ? ಅಜ್ಜಿಯಂದಿರ ಟಿಪ್ಸ್‌ಗಳಿವು!

Vegetable And Fruits Store: ಫ್ರಿಡ್ಜ್ ಇಲ್ಲದೆಯೂ‌ ಕೂಡ ಹಣ್ಣುಗಳು, ತರಕಾರಿಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡಲು ಹಿರಿಯರು ಅನುಸರಿಸುತ್ತಿದ್ದ ಅದ್ಭುತವಾದ ಮತ್ತು ಸುಲಭವಾದ ವಿಧಾನಗಳು ಇಲ್ಲಿವೆ.

 

Read Full Story

03:57 PM (IST) Jan 05

ಮೂರು ವರ್ಷದಲ್ಲಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ವೇನಲ್ಲಿ ಸಂಗ್ರವಾದ ಟೋಲ್ ಎಷ್ಟು?

ಮೂರು ವರ್ಷದಲ್ಲಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ವೇನಲ್ಲಿ ಸಂಗ್ರವಾದ ಟೋಲ್ ಎಷ್ಟು?, ನೀವು ಎಕ್ಸ್‌ಪ್ರೆವೇ ಮೂಲಕ ಸಂಚಾರ ಮಾಡುವಾಗ ಕಟ್ಟಿದ ಟೋಲ್ ಒಟ್ಟು ಮೊತ್ತ ಹೊಸ ದಾಖಲೆ ಬರೆದಿದೆ.

Read Full Story

03:30 PM (IST) Jan 05

ಬಳ್ಳಾರಿ ಗಲಾಟೆಗೆ ಬಿಗ್ ಟ್ವಸ್ಟ್, ರಸ್ತೆ ಬದಿ ಸಿಕ್ತು ಬುಲೆಟ್‌, ರಾಜಶೇಖರ್ ಮರಣೋತ್ತರ ಪರೀಕ್ಷೆ 2 ಸಲ ಮಾಡಿದ್ಯಾಕೆ?

ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಮತ್ತು ಫೈರಿಂಗ್ ಪ್ರಕರಣವು ಹೊಸ ತಿರುವುಗಳನ್ನು ಪಡೆದುಕೊಂಡಿದೆ. ಘಟನಾ ಸ್ಥಳದಲ್ಲಿ ಬುಲೆಟ್ ಪತ್ತೆಯಾಗಿದ್ದು, ರಾಜಶೇಖರ ಎಂಬುವವರ ಸಾವಿನ ಕುರಿತು ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.  

Read Full Story

03:23 PM (IST) Jan 05

ಅದೊಂದು ತಪ್ಪು ಮಾಡಿ Bigg Boss ಟ್ರೋಫಿಯಿಂದ ದೂರ ಆಗ್ತಿದ್ದಾರಾ Ashwini Gowda? ಕಂಪೆನಿ HR ಏನಂತಾರೆ?

Bigg Boss Kannada 12: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋ ಸ್ಪರ್ಧಿ ಅಶ್ವಿನಿ ಗೌಡ ಅವರು ಕೆಲವೊಮ್ಮೆ ಜನರ ಹೃದಯ ಗೆದ್ದರೆ, ಇನ್ನೂ ಕೆಲವೊಮ್ಮೆ ಹೃದಯವನ್ನು ಕಳೆದುಕೊಳ್ತಾರೆ. ಹೀಗೆ ಆಗುತ್ತಿರೋಕೆ ಕಾರಣ ಏನು? ನಿಜಕ್ಕೂ ಅವರ ಆಟ ಹೇಗಿದೆ? ಕಂಪೆನಿ HR ಹೇಳಿದ್ದೇನು?

 

Read Full Story

02:57 PM (IST) Jan 05

BBK 12 - ರಾಶಿಕಾ ಶೆಟ್ಟಿಗೆ ಒರಗಿಕೊಳ್ಳೋಕೆ ರಘು ತೊಡೆ, ಎದೆ ಬೇಕು - ಎಡವಟ್ಟು ಮಾಡ್ಕೊಂಡ Ashwini Gowda

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಅಶ್ವಿನಿ ಗೌಡ ಅವರನ್ನು ವೀಕ್ಷಕರು ಹೊಗಳೋಕೆ ಆರಂಭಿಸಿದರು ಎನ್ನುವಷ್ಟರಲ್ಲಿ, ರಾಶಿಕಾ ಶೆಟ್ಟಿ ಬಗ್ಗೆ ಮಾತನಾಡಿರೋದು ದೊಡ್ಡ ಅಲೆ ಎಬ್ಬಿಸಿದೆ. ಹಾಗಾದರೆ ಏನಾಯ್ತು?

 

Read Full Story

02:56 PM (IST) Jan 05

BBK 12 ರಘು ಹಾಕಿದ ಚಾಲೆಂಜ್ ಸ್ವೀಕಾರ ಮಾಡ್ತಾರಾ ಧ್ರುವಂತ್? ಚೆಂಡಾಟದಲ್ಲಿ ಸಿಡಿಗುಂಡು ಸ್ಪೋಟ

ಬಿಗ್‌ಬಾಸ್ ನಾಮಿನೇಷನ್ ಪ್ರಕ್ರಿಯೆಯಲ್ಲಿ, ಧ್ರುವಂತ್ ನೀಡಿದ ಕಾರಣಗಳಿಂದ ರಘು ತೀವ್ರವಾಗಿ ಆಕ್ರೋಶಗೊಂಡಿದ್ದಾರೆ. ತನ್ನ ಅಡುಗೆಯನ್ನು ಟೀಕಿಸಿದ್ದಕ್ಕೆ ಕೆಂಡಾಮಂಡಲರಾದ ರಘು, ಮನೆಯಿಂದ ಹೊರಗೆ ಒಬ್ಬನೇ ಬಾ ಎಂದು ಧ್ರುವಂತ್‌ಗೆ ನೇರ ಸವಾಲು ಹಾಕಿದ್ದಾರೆ.
Read Full Story

02:36 PM (IST) Jan 05

ನನಗೂ ದೇವರಾಜ ಅರಸ್ ಅವರಿಗೂ ಹೋಲಿಕೆ ಇಲ್ಲ, ದಾಖಲೆಗಳಿರುವುದೇ ಮುರಿಯಲು - ಸಿದ್ದರಾಮಯ್ಯ

ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇವರಾಜ ಅರಸ್ ಅವರ ದೀರ್ಘಾವಧಿ ಆಡಳಿತದ ದಾಖಲೆಯನ್ನು ಮುರಿಯುತ್ತಿರುವ ಬಗ್ಗೆ, ತಮ್ಮ ರಾಜಕೀಯ ಪಯಣ, ಬಳ್ಳಾರಿ ಗಲಾಟೆ ಮತ್ತು ಮೈಸೂರು ಭಾಗದ ಹುಲಿ ಸಮಸ್ಯೆ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತನಾಡಿದರು.  

Read Full Story

02:23 PM (IST) Jan 05

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಉಸಿರುಗಟ್ಟಿ ಮಂಗಳೂರಿನ ಟೆಕ್ಕಿ ಶರ್ಮಿಳಾ ಸಾವು

ಬೆಂಗಳೂರಿನ ರಾಮ ಮೂರ್ತಿನಗರದ ಅಪಾರ್ಟ್‌ಮೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು, ದಟ್ಟ ಹೊಗೆ ಆವರಿಸಿದೆ. ಈ ದುರ್ಘಟನೆಯಲ್ಲಿ ಉಸಿರುಗಟ್ಟಿ ಮಂಗಳೂರು ಮೂಲದ 34 ವರ್ಷದ ಸಾಫ್ಟ್‌ವೇರ್ ಉದ್ಯೋಗಿ ಶರ್ಮಿಳಾ ಮೃತಪಟ್ಟಿದ್ದಾರೆ.
Read Full Story

01:26 PM (IST) Jan 05

ವೈದ್ಯನ ಮೊಬೈಲ್ ಪ್ರೀತಿ, ಸ್ಟ್ರೇಚ್ಚರ್ ಮೇಲೆ‌ ರೋಗಿಯ ನರಳಾಟ! ಸರ್ಕಾರಿ ಜಿಲ್ಲಾಸ್ಪತ್ರೆಯ ವಿಡಿಯೋ ವೈರಲ್

ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಿದ ಘಟನೆ ನಡೆದಿದೆ. ರೋಗಿ ಸ್ಟ್ರೇಚ್ಚರ್ ಮೇಲೆ ನರಳುತ್ತಿದ್ದರೂ, ವೈದ್ಯರು ಮೊಬೈಲ್‌ನಲ್ಲಿ ಮಾತನಾಡುತ್ತಾ ಕುಳಿತಿದ್ದ ನಂತರ ಆಕ್ರೋಶಕ್ಕೆ ಕಾರಣವಾಗಿದೆ.

Read Full Story

01:06 PM (IST) Jan 05

ನಟಿ ರಮ್ಯಾಕೃಷ್ಣನ್ ಜೊತೆಗಿನ ಡಿವೋರ್ಸ್ ಬಗ್ಗೆ ಸ್ಪಷ್ಟನೆ ನೀಡಿದ ನಿರ್ದೇಶಕ ಕೃಷ್ಣವಂಶಿ

ನಟಿ ರಮ್ಯಾ ಕೃಷ್ಣನ್ ಮತ್ತು ನಿರ್ದೇಶಕ ಕೃಷ್ಣ ವಂಶಿ ಅವರ ವಿಚ್ಛೇದನದ ವದಂತಿ ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಮುನ್ನಲೆಗೆ ಬರುತ್ತಿರುತ್ತದೆ. ಇದೀಗ ಸಂದರ್ಶನದಲ್ಲಿ ಡಿವೋರ್ಸ್ ಬಗ್ಗೆ ರಮ್ಯಾಕೃಷ್ಣನ್ ಪತಿ ಮೊದಲ ಬಾರಿಗೆ ಮಾತನಾಡಿದ್ದಾರೆ. 

Read Full Story

12:16 PM (IST) Jan 05

BBK 12 - ಬಿಗ್‌ಬಾಸ್ ಸೀಸನ್ 12ರ ಟ್ರೋಫಿ ಯಾರಿಗೆ? ಅಚ್ಚರಿಯ ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ

ಬಿಗ್‌ಬಾಸ್ ಮನೆಯಿಂದ ಹೊರಬಂದಿರುವ ಸ್ಪಂದನಾ ಸೋಮಣ್ಣ, ಸೀಸನ್ 12ರ ವಿನ್ನರ್ ಯಾರೆಂದು ಭವಿಷ್ಯ ನುಡಿದಿದ್ದಾರೆ. ಅವರ ಪ್ರಕಾರ, ಧನುಷ್ ಗೆಲ್ಲಬೇಕಾದ ಸ್ಪರ್ಧಿಯಾದರೂ, ಗಿಲ್ಲಿ ನಟ ಈ ಬಾರಿಯ ಟ್ರೋಫಿ ಎತ್ತಲಿದ್ದಾರೆ. ಜೊತೆಗೆ ಟಾಪ್ 5 ಸ್ಪರ್ಧಿಗಳು ಯಾರೆಂಬುದನ್ನೂ ಬಹಿರಂಗಪಡಿಸಿದ್ದಾರೆ.
Read Full Story

12:00 PM (IST) Jan 05

ಸೈಟ್ ಒತ್ತುವರಿ ಆರೋಪ, ನಟ ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾರ ಕೆಲಸಗಾರನಿಂದ ದೂರು ದಾಖಲು

ನಟ ಯಶ್ ಅವರ ತಾಯಿ ಪುಷ್ಪಾ ಅವರ ಮೇಲೆ ಹಾಸನದಲ್ಲಿ ಸೈಟ್ ಒತ್ತುವರಿ ಆರೋಪ ಕೇಳಿಬಂದಿದೆ. ವೃದ್ಧೆಯೊಬ್ಬರ ಜಾಗವನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ, ಎರಡೂ ಕಡೆಯಿಂದ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದ್ದು, ಪ್ರಕರಣ ತನಿಖಾ ಹಂತದಲ್ಲಿದೆ.
Read Full Story

11:10 AM (IST) Jan 05

ಸೆಮಿಕಂಡಕ್ಟರ್‌ ಯುನಿಟ್ ಸ್ಥಾಪನೆಗೆ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲೇ 94 ಎಕರೆ ಜಾಗ ಗುರುತು

ಅಮೆರಿಕ ಮೂಲದ ಸ್ಯಾನ್ಸನ್ ಗೂಪ್ ಕಂಪನಿಯು ಮಂಡ್ಯದಲ್ಲಿ ಸೆಮಿ ಕಂಡಕ್ಟರ್ ಫ್ಯಾಬ್ರಿಕೇಷನ್ ಯೂನಿಟ್ ಸ್ಥಾಪಿಸಲು ಮುಂದಾಗಿದೆ. ಇದಕ್ಕಾಗಿ ಮಂಡ್ಯ ಮತ್ತು ಶ್ರೀರಂಗಪಟ್ಟಣ ತಾಲೂಕುಗಳಲ್ಲಿ ಸುಮಾರು 94 ಎಕರೆ ಸರ್ಕಾರಿ ಜಮೀನನ್ನು ಗುರುತಿಸಲಾಗಿದೆ. 

Read Full Story

10:43 AM (IST) Jan 05

ಅಧಿಕೃತವಾಗಿ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ರು ಪ್ರತಾಪ್ ಸಿಂಹ; ಇದುವೇ ಇವರ ವಿಧಾನಸಭಾ ಕ್ಷೇತ್ರ!

ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡುವ ಮೂಲಕ, ಅವರು ಮೈಸೂರಿನ ಒಕ್ಕಲಿಗರ ಪ್ರಾಬಲ್ಯವಿರುವ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯನ್ನು ಬಲಪಡಿಸಿದ್ದಾರೆ.
Read Full Story

09:24 AM (IST) Jan 05

ಗುರೂಜಿ ಮಾತು ನಂಬಿ 2 ಲಕ್ಷ ಕಳೆದುಕೊಂಡ ಮದುವೆ ಕನಸು ಕಂಡಿದ್ದ ಬೆಂಗಳೂರಿನ ಯುವತಿ!

ಆನ್‌ಲೈನ್‌ನಲ್ಲಿ ಭವಿಷ್ಯ ಹೇಳುವುದಾಗಿ ನಂಬಿಸಿದ ಗುರೂಜಿಯೊಬ್ಬನಿಗೆ, ಮದುವೆಯ ವಿಷಯವಾಗಿ ಯುವತಿಯೊಬ್ಬರು ₹2.05 ಲಕ್ಷ ಕಳೆದುಕೊಂಡಿದ್ದಾರೆ. ಹಣ ವಾಪಸ್ ಕೇಳಿದಾಗ ಬೆದರಿಕೆ ಹಾಕಿದ್ದು, ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್ ಸುಗತ್ ಗುರೂಜಿ ಎಂಬುವವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Read Full Story

08:58 AM (IST) Jan 05

Bengaluru - ನಕಲಿ ಬಿಲ್‌ ಸೃಷ್ಟಿಸಿ ಸರ್ಕಾರಕ್ಕೆ ₹1464 ಕೋಟಿ ವಂಚನೆ ಮಾಡಿದ್ದ ಇಬ್ಬರ ಬಂಧನ

ಕಟ್ಟಡ ಸಾಮಗ್ರಿಗಳ ಪೂರೈಕೆಯ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ₹1464 ಕೋಟಿ ವಂಚಿಸಿದ ಅಂತರಾಜ್ಯ ಜಾಲವನ್ನು ಕರ್ನಾಟಕ ಮತ್ತು ತಮಿಳುನಾಡು ವಾಣಿಜ್ಯ ತೆರಿಗೆ ಇಲಾಖೆಗಳು ಪತ್ತೆಹಚ್ಚಿವೆ. .

Read Full Story

08:46 AM (IST) Jan 05

ಬೆಂಗಳೂರಿನಲ್ಲಿ ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆದ ದುಷ್ಕರ್ಮಿಗಳು

Bengaluru Stone Pelting: ಬೆಂಗಳೂರಿನ ಜೆ.ಜೆ.ನಗರದಲ್ಲಿ ಓಂಶಕ್ತಿ ದೇವಿಯ ತೇರು ಎಳೆಯುತ್ತಿದ್ದ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಈ ಘಟನೆಯಲ್ಲಿ ಅಪ್ರಾಪ್ತ ಬಾಲಕಿ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

Read Full Story

08:27 AM (IST) Jan 05

ಇನ್ಫೋಸಿಸ್‌ನ 250 ಕೋಟಿಯ 53 ಎಕರೆ ಅಕ್ರಮ ರಿಜಿಸ್ಟರ್‌ ಕೇಸ್‌ನಲ್ಲಿ ರೋಚಕ ತಿರುವು

ಕಾವೇರಿ-2 ತಂತ್ರಾಂಶದ ನ್ಯಾಯಾಲಯ ಆದೇಶ ಆಧಾರಿತ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಅಕ್ರಮ ಆಸ್ತಿ ನೋಂದಣಿ ಮಾಡಿದ ಆರೋಪದ ಮೇಲೆ ಸರ್ಜಾಪುರ ಉಪ ನೋಂದಣಾಧಿಕಾರಿ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

Read Full Story

08:01 AM (IST) Jan 05

ರಾತ್ರಿ ಕಲಿಸಿದ ಹಿಟ್ಟಿನಿಂದ ಮಾಡಿದ ಚಪಾತಿ ಸಾಫ್ಟ್ ಆಗಿರಬೇಕಾದ್ರೆ ಈ ವಸ್ತುಗಳನ್ನು ಸೇರಿಸಿ

ಬಿಡುವಿಲ್ಲದ ಜೀವನಶೈಲಿಯಿಂದಾಗಿ ರಾತ್ರಿಯೇ ಚಪಾತಿ ಹಿಟ್ಟು ಕಲಸಿ ಫ್ರಿಡ್ಜ್‌ನಲ್ಲಿಡುವುದು ಸಾಮಾನ್ಯ. ರಾತ್ರಿ ಇಟ್ಟ ಹಿಟ್ಟಿನಿಂದ ಮಾಡಿದ ಚಪಾತಿಯೂ ಹೆಚ್ಚು ಸಮಯ ಮೃದು ಮತ್ತು ಫ್ಲಫಿಯಾಗಿರುತ್ತದೆ.

Read Full Story

07:53 AM (IST) Jan 05

BBK 12 - ತಳ್ಳಾಟ, ನೂಕಾಟ, ಕಿತ್ತಾಟ; ಇದು ರಕ್ಷಿತಾ ಶೆಟ್ಟಿ Vs ರಾಶಿಕಾ ಶೆಟ್ಟಿ; ಜಗಳದಲ್ಲಿ ಯಾರು ಸರಿ?

ಬಿಗ್‌ಬಾಸ್ ಕನ್ನಡ ಸೀಸನ್ 12ರ 15ನೇ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ ರಾಶಿಕಾ ಶೆಟ್ಟಿ ಮತ್ತು ರಕ್ಷಿತಾ ಶೆಟ್ಟಿ ನಡುವೆ ತೀವ್ರ ಜಗಳ ನಡೆದಿದೆ. ರಾಶಿಕಾ ಅವರು ರಕ್ಷಿತಾರನ್ನು ನಾಟಕಗಾರ್ತಿ ಎಂದಿದ್ದಕ್ಕೆ, ರಕ್ಷಿತಾ ಅವರು ಕುಟುಂಬದ ವಿಷಯ ಎತ್ತಿ ತಿರುಗೇಟು ನೀಡಿದ್ದಾರೆ.

Read Full Story

07:17 AM (IST) Jan 05

ಬಸ್‌ ಟಿಕೆಟ್ ಮತ್ತೊಬ್ಬರಿಗೆ ವಿತರಿಸುವಂತಿಲ್ಲ - ಹೈಕೋರ್ಟ್‌

ಮೊದಲೇ ಒಬ್ಬ ಪ್ರಯಾಣಿಕನಿಗೆ ವಿತರಿಸಿದ್ದ ಟಿಕೆಟ್‌ ಪಡೆದು ಮತ್ತೊಬ್ಬ ಪ್ರಯಾಣಿಕನಿಗೆ ಮರು ವಿತರಿಸಿ ಹಣ ಪಡೆಯುವ ನಿರ್ವಾಹಕನ ಕೃತ್ಯ ‘ಕಳ್ಳತನ’ವಾಗಲಿದೆ ಎಂದು ಹೈಕೋರ್ಟ್‌ ಆದೇಶಿಸಿದೆ.

Read Full Story

07:05 AM (IST) Jan 05

BBK 12 - ಕೊನೆಗೂ ಸುದೀಪ್ ಮುಂದೆಯೇ ಸತ್ಯ ಒಪ್ಪಿಕೊಂಡ ಗಿಲ್ಲಿ ನಟ

ಭಾನುವಾರದ ಸಂಚಿಕೆಯಲ್ಲಿ, ಸ್ಪರ್ಧಿಗಳು ಅಶ್ವಿನಿ ಗೌಡರನ್ನು ಗುರಿಯಾಗಿಸಿಕೊಂಡು ತಮ್ಮ ಕೋಪವನ್ನು ಹೊರಹಾಕಿದರು. ಗಿಲ್ಲಿ ನಟ ತಾನು ಅಶ್ವಿನಿಯಿಂದಲೇ ಫೂಟೇಜ್ ಪಡೆದಿದ್ದಾಗಿ ಒಪ್ಪಿಕೊಂಡಿದ್ದು, ಈ ವಾರ ಸ್ಪಂದನಾ ಸೋಮಣ್ಣ ಮನೆಯಿಂದ ಹೊರಬಂದಿದ್ದಾರೆ.
Read Full Story

More Trending News