ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದ್ದು, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿದಂತೆ ಶನಿವಾರ ವಿವಿಧೆಡೆ ಉತ್ತಮ ಮಳೆಯಾಗಿದೆ. ಶೃಂಗೇರಿಯಲ್ಲಿ ಮಳೆ ಆರ್ಭಟ ಹೆಚ್ಚಾಗಿದ್ದು, ಅಪಾಯದ ಮಟ್ಟ ಮೀರಿ ತುಂಗಾ ನದಿ ಹರಿಯುತ್ತಿದ್ದೆ.
ಬೆಳಗಾವಿ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಧಾರಾಕಾರ ಮಳೆಯಿಂದಾಗಿ ಬೃಹತ್ ಗಿಡಮರಗಳು ಹಾಗೂ ವಿದ್ಯುತ್ ಕಂಬಗಳು ರಸ್ತೆಗೆ ಉರುಳಿವೆ. ನಗರದ ರಾಣಿ ಚನ್ನಮ್ಮ ವೃತ್ತ ಸೇರಿ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಚಿಕ್ಕೋಡಿ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಇರುವ ನ್ಯಾಯಾಲಯದ ಆವರಣ ಸಂಪೂರ್ಣ ಕೆರೆಯಂತಾಗಿದೆ. ಜೋಡಕುರುಳಿ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ 7 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶೃಂಗೇರಿ ತಾಲೂಕಿನಾದ್ಯಂತ ಅಬ್ಬರದ ಮಳೆಯಾಗಿದೆ. ತುಂಗಾನದಿ ಉಗಮಸ್ಥಳ ಪಶ್ಚಿಮಘಟ್ಟಗಳ ತಪ್ಪಲು ಸುತ್ತಮುತ್ತಲ ಪ್ರದೇಶಗಳಲ್ಲಿ ತುಂಗಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ.
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದಿದೆ. ಇನ್ನು ಜು.5ರಂದು ಭಾನುವಾರ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜು.6ರ ನಂತರ 3 ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
10:32 AM (IST) Jul 05
ಚಿಕ್ಕಮಗಳೂರಿನಲ್ಲಿ ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು ಗ್ರಾಮದಲ್ಲಿ ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂಗೊಂಡಿದೆ. ಅದೃಷ್ಟವಶಾತ್ Yಆವುದೇ ಸಾವು ನೋವು ಸಂಭವಿಸಿಲ್ಲ>
10:24 AM (IST) Jul 05
10:11 AM (IST) Jul 05
ಬೆಳಗಾವಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಖಾಸಬಾಗ ಪ್ರದೇಶದಲ್ಲಿ ಬೃಹತ್ ಹುಣಸೆ ಮರವೊಂದು ನಾಲ್ಕು ಮನೆಗಳ ಮೇಲೆ ಉರುಳಿಬಿದ್ದಿದೆ. ಈ ಘಟನೆಯಲ್ಲಿ ಮನೆಗಳು ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
08:50 AM (IST) Jul 05
08:36 AM (IST) Jul 05
08:24 AM (IST) Jul 05
ಮೈಸೂರು ದಸರಾದ ಅಂಬಾರಿ ಆನೆ ಅಭಿಮನ್ಯುವಿನ ದಂತ ಭಗ್ನವಾಗಿದೆ. ಮತ್ತಿಗೋಡು ಸಾಕಾನೆ ಶಿಬಿರದ ಅಭಿಮನ್ಯು ಆನೆ ಇತ್ತೀಚೆಗೆ ಮರದ ದಿಮ್ಮಿ ಸಾಗಿಸುವ ವೇಳೆ ಎಡ ಭಾಗದ ದಂತದ ತುದಿ ಭಾಗ ಮುರಿದಿದೆ.
08:08 AM (IST) Jul 05
07:58 AM (IST) Jul 05
ಜಿಲ್ಲೆಯಲ್ಲಿ ಶೇ.29ರಷ್ಟು ಮಳೆ ಕೊರತೆಯಾಗಿದ್ದರೂ, ಇತ್ತೀಚಿನ ಮಳೆಯಿಂದ ಜಲಾಶಯಗಳಿಗೆ ನೀರು ಹರಿದುಬರುತ್ತಿದೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಮಳೆ ಕೈಕೊಟ್ಟರೆ ಸರ್ಕಾರದ ಮಟ್ಟದಲ್ಲಿ ಮೋಡ ಬಿತ್ತನೆ ಬಗ್ಗೆ ತೀರ್ಮಾನಿಸಲಾಗುವುದು ಹಾಗೂ ನಗರದ ರಸ್ತೆ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವುದಾಗಿ ಅವರು ಭರವಸೆ ನೀಡಿದರು.
07:54 AM (IST) Jul 05
ಪುತ್ರಿಯರಿಗೆ ಸರ್ಕಾರಿ ಉದ್ಯೋಗ ಕೊಡಿಸಲು ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಸಿ ಪಕ್ಷಪಾತ, ಅಕ್ರಮ ಎಸಗಿದ ಆರೋಪ ಹೊತ್ತಿರುವ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಅವರ ಭವಿಷ್ಯ ರಾಜ್ಯಪಾಲರು ನಿರ್ಧರಿಸುವ ನಿರ್ಣಾಯಕ ಹಂತ ತಲುಪಿದೆ. ರಾಜ್ಯಪಾಲರ ನಿರ್ಧಾರವೇನು?
07:44 AM (IST) Jul 05
ಹುಟ್ಟು ಕುರುಡಿಯಾದ ಅನಾಥ ಯುವತಿ ಹುಲಿಗೆಮ್ಮಳನ್ನು, ತಾನೂ ಅನಾಥನಾದ ನಾಗರಾಜ ಎಂಬ ಯುವಕ ಮದುವೆಯಾಗಿದ್ದಾನೆ. ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜದವರು ಈ ಮದುವೆಯ ಸಂಪೂರ್ಣ ಖರ್ಚು ವಹಿಸಿ, ನವ ದಂಪತಿಗೆ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
07:35 AM (IST) Jul 05
ರೈತ ಮಲ್ಲಪ್ಪ ರೊಟ್ಟಿ ಅವರು ಸತತ 11 ಗಂಟೆಗಳಲ್ಲಿ 18 ಎಕರೆ ಜಮೀನು ಬಿತ್ತನೆ ಮಾಡಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಈ ಸಾಧನೆಯನ್ನು ಗೌರವಿಸಿ, ಗ್ರಾಮಸ್ಥರು ರೈತ ದಂಪತಿಯನ್ನು ಚಕ್ಕಡಿಬಂಡಿಯಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಿದರು. ಈ ಘಟನೆಯು ಕೃಷಿಯಿಂದ ವಿಮುಖರಾಗುತ್ತಿರುವ ಯುವ ಸಮುದಾಯಕ್ಕೆ ಪ್ರೇರಣೆಯಾಗಿದೆ ಎಂದು ಪ್ರಗತಿಪರ ರೈತರು ಶ್ಲಾಘಿಸಿದ್ದಾರೆ.
07:23 AM (IST) Jul 05
Avendus Wealth Hurun U30 List ಅವೆಂಡಸ್ ವೆಲ್ತ್ ಹುರೂನ್ ಇಂಡಿಯಾ ಲಿ. ಬಿಡುಗಡೆ ಮಾಡಿದ 2026ನೇ ಸಾಲಿನ 30 ಮತ್ತು ಅದಕ್ಕಿಂತ ಕೆಳಗಿನ ವಯಸ್ಸಿನ ಯುವ ಉದ್ಯಮಿಗಳ ಪಟ್ಟಿಯಲ್ಲಿ ಬೆಂಗಳೂರು ನಗರ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಮುಂಬೈ ಹಿಂದಕ್ಕಿ ಬೆಂಗಳೂರು ಈ ಸ್ಥಾನ ಪಡೆದಿದೆ.
07:23 AM (IST) Jul 05
ಬೆಂಗಳೂರಿನಲ್ಲಿ ಬಿಬಿಎಂಪಿ ಬೃಹತ್ ಕಾರ್ಯಾಚರಣೆ ನಡೆಸಿ ಫುಟ್ಪಾತ್ ಒತ್ತುವರಿ ತೆರವುಗೊಳಿಸಿದೆ. ಈ ಕ್ರಮಕ್ಕೆ ಬೀದಿ ಬದಿ ವ್ಯಾಪಾರಿಗಳಿಂದ ವಿರೋಧ ವ್ಯಕ್ತವಾಗಿದ್ದು, ಪಾದಚಾರಿಗಳ ಸುರಕ್ಷತೆಗಾಗಿ ಇದು ಅನಿವಾರ್ಯ ಮತ್ತು ಫುಟ್ಪಾತ್ ದುರಸ್ತಿಗೆ ₹70 ಕೋಟಿ ಮೀಸಲಿಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ.