ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದ್ದು, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿದಂತೆ ಶನಿವಾರ ವಿವಿಧೆಡೆ ಉತ್ತಮ ಮಳೆಯಾಗಿದೆ. ಶೃಂಗೇರಿಯಲ್ಲಿ ಮಳೆ ಆರ್ಭಟ ಹೆಚ್ಚಾಗಿದ್ದು, ಅಪಾಯದ ಮಟ್ಟ ಮೀರಿ ತುಂಗಾ ನದಿ ಹರಿಯುತ್ತಿದ್ದೆ.
ಬೆಳಗಾವಿ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಧಾರಾಕಾರ ಮಳೆಯಿಂದಾಗಿ ಬೃಹತ್ ಗಿಡಮರಗಳು ಹಾಗೂ ವಿದ್ಯುತ್ ಕಂಬಗಳು ರಸ್ತೆಗೆ ಉರುಳಿವೆ. ನಗರದ ರಾಣಿ ಚನ್ನಮ್ಮ ವೃತ್ತ ಸೇರಿ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಚಿಕ್ಕೋಡಿ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಇರುವ ನ್ಯಾಯಾಲಯದ ಆವರಣ ಸಂಪೂರ್ಣ ಕೆರೆಯಂತಾಗಿದೆ. ಜೋಡಕುರುಳಿ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ 7 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶೃಂಗೇರಿ ತಾಲೂಕಿನಾದ್ಯಂತ ಅಬ್ಬರದ ಮಳೆಯಾಗಿದೆ. ತುಂಗಾನದಿ ಉಗಮಸ್ಥಳ ಪಶ್ಚಿಮಘಟ್ಟಗಳ ತಪ್ಪಲು ಸುತ್ತಮುತ್ತಲ ಪ್ರದೇಶಗಳಲ್ಲಿ ತುಂಗಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ.
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದಿದೆ. ಇನ್ನು ಜು.5ರಂದು ಭಾನುವಾರ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜು.6ರ ನಂತರ 3 ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
11:50 PM (IST) Jul 05
Gadag: ಇಲ್ಲಿನ ವೀರೇಶ್ವರ ಪುಣ್ಯಾಶ್ರಮದ ಜಾತ್ರೆ ಅಂದ್ರೆ ಅದು ಬರೀ ಜನ ಜಂಗುಳಿಯ ಜಾತ್ರೆಯಲ್ಲ. ಅದು ಸಂಗೀತದ ಜಾತ್ರೆ. ಕಲಾವಿದರ, ಕಲೆಯ ಸಂಭ್ರಮದ ಉತ್ಸವ. ಹೌದು! ಐದು ದಿನಗಳ ಕಾಲ ನಡೆಯುವ..
11:24 PM (IST) Jul 05
ಎರಡು ದಶಕಗಳ ಹಿಂದೆ ನಟ ಶಿವರಾಜ್ಕುಮಾರ್ ಅಭಿನಯದ 'ಗಂಡುಗಲಿ ಕುಮಾರರಾಮ' ಚಿತ್ರದಲ್ಲಿ ಮಿಂಚಿದ್ದ ಈ ತೆಲುಗು ನಟಿ ಲಯ, ಈಗ ಮತ್ತೆ ಧ್ಯಾನ್ ಯೋಗೇಶ್ವರ್ ನಟನೆಯ ಕನ್ನಡ ಚಿತ್ರದಲ್ಲಿ ನಟಿಸಲು ಬಂದಿದ್ದಾರೆ.
11:13 PM (IST) Jul 05
SIR ಪ್ರಕ್ರಿಯೆಯಲ್ಲಿ ರಾಜ್ಯದಲ್ಲಿ ಅಕ್ರಮ ನಡೆಯುತ್ತಿವೆ. ಹೀಗಾಗಿ ಈಗ ಆಗಿರುವ ಪ್ರಕ್ರಿಯೆಯನ್ನು ರದ್ದು ಮಾಡಿ, ಹೊರರಾಜ್ಯದ ದಕ್ಷ ಅಧಿಕಾರಿಗೆ ಉಸ್ತುವಾರಿ ನೀಡಲಿ ಎಂದು ಸಚಿವ ಯು.ಟಿ. ಖಾದರ್ ತಿರುಗೇಟು ನೀಡಿದ್ದಾರೆ.
10:44 PM (IST) Jul 05
Big message from the Centre: ಮಿಡಲ್ ಈಸ್ಟ್ನನಲ್ಲಿ ಹೆಚ್ಚಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯಲ್ಲಿನ ಅನಿಶ್ಚಿತತೆಯು ವಿಶ್ವಾದ್ಯಂತ ವಿವಿಧ ವಸ್ತುಗಳ ಪೂರೈಕೆ ಮೇಲೆ ಪರಿಣಾಮ ಬೀರಿದೆ. ಈ ನಿಟ್ಟಿನಲ್ಲಿ ರೈತರಿಗೆ ಸಿಹಿ ಸುದ್ದಿಯೊಂದು ಬಂದಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
09:42 PM (IST) Jul 05
ಸಮೀಪದ ಚಿರ್ಚನಗುಡ್ಡ ತಾಂಡಾ ಬಳಿ ಅಪರಚಿತ ಯುವಕನನ್ನು ದುಷ್ಕರ್ಮಿಗಳು ಕೊಲೆ ಮಾಡಿ ಬೆಂಕಿ ಹಚ್ಚಿ ಪರಾರಿಯಾಧ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕನಕಗಿರಿ ತಾಲೂಕಿನ ಚಿರ್ಚನ ಗುಡ್ಡ ತಾಂಡಾದ ಬಳಿ ನಡೆದಿದೆ.
09:12 PM (IST) Jul 05
ಬಿಗ್ ಬಾಸ್ ಕನ್ನಡ ಸೀಸನ್ 13 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ದೊಡ್ಮನೆಗೆ ಯಾರೆಲ್ಲಾ ಎಂಟ್ರಿ ಕೊಡಬಹುದು ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವಾರು ಸೆಲೆಬ್ರಿಟಿಗಳ ಹೆಸರುಗಳು ಚರ್ಚೆಯಲ್ಲಿವೆ.
07:53 PM (IST) Jul 05
movie with 92 awards: 2000ರಲ್ಲಿ ಬಿಡುಗಡೆಯಾದ ಈ ಚಿತ್ರ ಒಬ್ಬ ಹೀರೋವನ್ನು ರಾತ್ರೋರಾತ್ರಿ ಸೂಪರ್ಸ್ಟಾರ್ ಮಾಡಿತು. ತಿರಸ್ಕೃತ ರಾಗಗಳಿಂದ ಹಿಟ್ ಹಾಡುಗಳು ಸೃಷ್ಟಿಯಾಗಿದ್ದು ಮತ್ತು 92 ಪ್ರಶಸ್ತಿಗಳನ್ನು ಗೆದ್ದು ಗಿನ್ನೆಸ್ ದಾಖಲೆ ಬರೆದಿದ್ದು ಈ ಚಿತ್ರದ ವಿಶೇಷತೆ.
07:15 PM (IST) Jul 05
Jaggesh Wishes Komal Kumar: ಸ್ಯಾಂಡಲ್ವುಡ್ನ ಜನಪ್ರಿಯ ಹಾಸ್ಯ ನಟ ಹಾಗೂ ನಾಯಕ ನಟ ಕೋಮಲ್ ಕುಮಾರ್ ಅವರು ಜುಲೈ 4ರಂದು ತಮ್ಮ 53ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ.
06:45 PM (IST) Jul 05
ಈ ಎರಡೂ ಬಹುನಿರೀಕ್ಷಿತ ಚಿತ್ರಗಳ ಜಂಟಿ ಮುಹೂರ್ತ ಸಮಾರಂಭವು ಇಂದು ಭಾನುವಾರ ಅತ್ಯಂತ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆಗಮಿಸಿ ಚಿತ್ರದ ಮುುಹೂರ್ತಕ್ಕೆ ಚಾಲನೆ ನೀಡಿ ಹೀರೋ ಧ್ಯಾನ್ ಅವರಿಗೆ ಶುಭ ಹಾರೈಸಿದರು.
06:28 PM (IST) Jul 05
ಬೆಂಗಳೂರಲ್ಲಿ ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ 31 ಕಿಲೋಮೀಟರ್ ಪ್ರಯಾಣಿಸಿದ್ದಾರೆ. ಪ್ರಯಾಣದ ಬಳಿಕ 3 ಪ್ರಮುಖ ವಿಚಾರಗಳನ್ನಿಟ್ಟುಕೊಂಡು ಪೋಸ್ಟ್ ಮಾಡಿದ್ದಾರೆ. ಅಷ್ಟಕ್ಕೂ ಗೋಪಾಲಕೃಷ್ಣನ್ ಹೇಳಿದ್ದೇನು?
06:27 PM (IST) Jul 05
ಬೆಂಗಳೂರು ವಿಶ್ವವಿದ್ಯಾಲಯದ 2026ನೇ ಸಾಲಿನ ಪಿಹೆಚ್.ಡಿ. ಪ್ರವೇಶ ಪರೀಕ್ಷೆಯನ್ನು ಭಾನುವಾರ ಯಶಸ್ವಿಯಾಗಿ ನಡೆಸಲಾಯಿತು. ಒಟ್ಟು 1,299 ಅರ್ಜಿಗಳು ಅನುಮೋದನೆಗೊಂಡಿದ್ದು, 870 ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದರು.
06:25 PM (IST) Jul 05
ರಾಜಸ್ಥಾನದಲ್ಲಿ ಆನ್ಲೈನ್ ಆರ್ಡರ್ ಮೂಲಕ ಲಕ್ಷಾಂತರ ರೂಪಾಯಿ ವಂಚಿಸಿದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ದುಬಾರಿ ವಸ್ತುಗಳನ್ನು ತಪ್ಪು ವಿಳಾಸಕ್ಕೆ ಆರ್ಡರ್ ಮಾಡಿ, ರಿಟರ್ನ್ ಪ್ರಕ್ರಿಯೆಯಲ್ಲಿ ಅಸಲಿ ವಸ್ತುಗಳನ್ನು ಕದಿಯುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
06:08 PM (IST) Jul 05
Jyothi Rai 41st Birthday: ಕನ್ನಡ ಕಿರುತೆರೆಯ ಜನಪ್ರಿಯ ನಟಿಯರಲ್ಲಿ ಕನ್ನಡಿಗರ ಮನ ಗೆದ್ದಿದ್ದ ಜ್ಯೋತಿ ರೈ ಹಲವು ವರ್ಷಗಳ ಕಾಲ ನಾಯಕಿಯಾಗಿ ಅಭಿನಯಿಸಿ ಅಪಾರ ಅಭಿಮಾನಿ ಬಳಗವನ್ನು ಗಳಿಸಿದ್ದಾರೆ.
05:21 PM (IST) Jul 05
Bishnoi bowling controversy: ಡ್ರೆಸ್ಸಿಂಗ್ ರೂಂ ಮಾತ್ರವಲ್ಲ, ಕ್ರಿಕೆಟ್ ವಲಯದಲ್ಲೂ ಒಂದು ಮಾತು ಕೇಳಿ ಬರುತ್ತಿದೆ, ಅದೇನೆಂದರೆ, ನಿನ್ನೆ ಸೋಲಿಗೆ ಬಿಷ್ಣೋಯಿ ಟಾರ್ಗೆಟ್ ಮಾಡಲಾಗುತ್ತಿದೆ. ಆದರೆ ಅಯ್ಯರ್ ಮಾಡಿದ್ದೇನು? ಎಂಬ ಮಾತು ಹರಿದಾಡುತ್ತಿದೆ. ಏನಿದು ವಿವಾದ ಎನ್ನುವುದನ್ನು ನೋಡೊಣ ಬನ್ನಿ.
04:48 PM (IST) Jul 05
04:12 PM (IST) Jul 05
New Postal Scheme 2026 ಪೋಸ್ಟ್ ಆಫೀಸ್ನಲ್ಲಿ ಹೂಡಿಕೆ ಮಾಡುವುದರಿಂದ ಹಣಕ್ಕೆ 100% ಆರ್ಥಿಕ ಭದ್ರತೆ ಮತ್ತು ಅದೇ ಸಮಯದಲ್ಲಿ ಸ್ಥಿರ ಆದಾಯ ದೊರೆಯುತ್ತದೆ. ಹಾಗಾದರೆ 1 ರೂಪಾಯಿಯನ್ನೂ ಕಳೆದುಕೊಳ್ಳದೆ, ಬಡ್ಡಿಯ ರೂಪದಲ್ಲೇ ರೂ.7 ಲಕ್ಷ ಗಳಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ.
03:04 PM (IST) Jul 05
ಇತ್ತಿಚಿಗಷ್ಟೇ ಕರಾವಳಿ, ಮಲೆನಾಡು ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಕಗೊಂಡಿರುವ ಕನ್ನಡದ ನಟ-ನಿರ್ದೇಶಕ ರಿಷಬ್ ಶೆಟ್ಟಿಯವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ. ಈ ವೇಳೆ ರಿಷಬ್ ಶೆಟ್ಟಿಯವರು ಸಿಎಂ ಡಿಕೆ ಶಿವಕುಮಾರ್ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ.
02:57 PM (IST) Jul 05
02:21 PM (IST) Jul 05
02:16 PM (IST) Jul 05
ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿನ ಭಾರಿ ಮಳೆಯಿಂದಾಗಿ ಕೃಷ್ಣಾ, ದೂದಗಂಗಾ ಮತ್ತು ವೇದಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ, ಚಿಕ್ಕೋಡಿ, ನಿಪ್ಪಾಣಿ ತಾಲೂಕುಗಳ ಹಲವು ಪ್ರಮುಖ ಸಂಪರ್ಕ ಸೇತುವೆಗಳು ಜಲಾವೃತಗೊಂಡಿದ್ದು, ಜಿಲ್ಲಾಡಳಿತವು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
01:22 PM (IST) Jul 05
01:07 PM (IST) Jul 05
ಕಲರ್ಸ್ ಕನ್ನಡದ ಕ್ವಾಟ್ಲೆ ಕಿಚನ್ ಸೀಸನ್ 2 ಶೋನಲ್ಲಿ, ಗಾಯಕ ಹನುಮಂತ 'ಅರುಂಧತಿ' ಸಿನಿಮಾದ ಪಶುಪತಿ ಪಾತ್ರದಲ್ಲಿ ಕಾಣಿಸಿಕೊಂಡು ನಗೆಗಡಲಲ್ಲಿ ತೇಲಿಸಿದ್ದಾರೆ. ಅವರ ತಮಾಷೆಯ ಸಂಭಾಷಣೆಗಳು, ತುಕಾಲಿ ಸಂತೋಷ್ ಅವರ ಅನ್ನಾಬೆಲ್ಲಾ ಗೆಟಪ್ ಮತ್ತು ಇತರ ಸ್ಪರ್ಧಿಗಳ ಕ್ವಾಟ್ಲೆಗಳು ಸಂಚಿಕೆಯನ್ನು ರಂಜನೀಯವಾಗಿಸಿವೆ.
01:02 PM (IST) Jul 05
12:16 PM (IST) Jul 05
ಬೆಂಗಳೂರಿನ ಈ ಪ್ರದೇಶಗಳು ವೀಕೆಂಡ್ಗಳಲ್ಲಿ ರಾತ್ರಿಯಾಗುತ್ತಿದ್ದಂತೆ ಪಬ್ಗಳು ಮತ್ತು ಬಣ್ಣಬಣ್ಣದ ಲೈಟ್ಗಳಿಂದ ಕಂಗೊಳಿಸುತ್ತವೆ. ಈ ನೈಟ್ಲೈಫ್, ಸ್ಟ್ರೀಟ್ ಫುಡ್ ಮತ್ತು ಜನಜಂಗುಳಿಯಿಂದಾಗಿ, ಸಾಮಾಜಿಕ ಮಾಧ್ಯಮಗಳಲ್ಲಿ ಈ ಪ್ರದೇಶವನ್ನು 'ಮಿನಿ ಥೈಲ್ಯಾಂಡ್' ಎಂದು ಕರೆಯಲಾಗುತ್ತಿದೆ.
12:06 PM (IST) Jul 05
ಶ್ರೀರಸ್ತು ಚಿತ್ರತಂಡದ ಕಡೆಯಿಂದ ಅಧಿಕೃತವಾಗಿ ಹೊರಗೆ ಬಂದಿರುವುದು ಒಂದು ವಿಡಿಯೋ ತುಣುಕು ಮಾತ್ರ. ಆದರೆ ಅದರ ಹಿನ್ನೆಲೆ ಸಂಗೀತವನ್ನು ಗಮನಿಸಿರುವ ಅಭಿಮಾನಿಗಳು ಹಾಡುಗಳ ಬಗ್ಗೆ ತೀವ್ರ ಕುತೂಹಲ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ಚಿತ್ರದ ಸಂಗೀತ ನಿರ್ದೇಶಕ ಶೇಖರ್ ಚಂದ್ರ ಎನ್ನುವ ಸತ್ಯವೂ ಅರಿವಾಗಿದೆ.
11:14 AM (IST) Jul 05
10:32 AM (IST) Jul 05
ಚಿಕ್ಕಮಗಳೂರಿನಲ್ಲಿ ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು ಗ್ರಾಮದಲ್ಲಿ ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂಗೊಂಡಿದೆ. ಅದೃಷ್ಟವಶಾತ್ Yಆವುದೇ ಸಾವು ನೋವು ಸಂಭವಿಸಿಲ್ಲ>
10:24 AM (IST) Jul 05
10:11 AM (IST) Jul 05
ಬೆಳಗಾವಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಖಾಸಬಾಗ ಪ್ರದೇಶದಲ್ಲಿ ಬೃಹತ್ ಹುಣಸೆ ಮರವೊಂದು ನಾಲ್ಕು ಮನೆಗಳ ಮೇಲೆ ಉರುಳಿಬಿದ್ದಿದೆ. ಈ ಘಟನೆಯಲ್ಲಿ ಮನೆಗಳು ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
08:50 AM (IST) Jul 05
08:36 AM (IST) Jul 05
08:24 AM (IST) Jul 05
ಮೈಸೂರು ದಸರಾದ ಅಂಬಾರಿ ಆನೆ ಅಭಿಮನ್ಯುವಿನ ದಂತ ಭಗ್ನವಾಗಿದೆ. ಮತ್ತಿಗೋಡು ಸಾಕಾನೆ ಶಿಬಿರದ ಅಭಿಮನ್ಯು ಆನೆ ಇತ್ತೀಚೆಗೆ ಮರದ ದಿಮ್ಮಿ ಸಾಗಿಸುವ ವೇಳೆ ಎಡ ಭಾಗದ ದಂತದ ತುದಿ ಭಾಗ ಮುರಿದಿದೆ.
08:08 AM (IST) Jul 05
07:58 AM (IST) Jul 05
ಜಿಲ್ಲೆಯಲ್ಲಿ ಶೇ.29ರಷ್ಟು ಮಳೆ ಕೊರತೆಯಾಗಿದ್ದರೂ, ಇತ್ತೀಚಿನ ಮಳೆಯಿಂದ ಜಲಾಶಯಗಳಿಗೆ ನೀರು ಹರಿದುಬರುತ್ತಿದೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಮಳೆ ಕೈಕೊಟ್ಟರೆ ಸರ್ಕಾರದ ಮಟ್ಟದಲ್ಲಿ ಮೋಡ ಬಿತ್ತನೆ ಬಗ್ಗೆ ತೀರ್ಮಾನಿಸಲಾಗುವುದು ಹಾಗೂ ನಗರದ ರಸ್ತೆ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವುದಾಗಿ ಅವರು ಭರವಸೆ ನೀಡಿದರು.
07:54 AM (IST) Jul 05
ಪುತ್ರಿಯರಿಗೆ ಸರ್ಕಾರಿ ಉದ್ಯೋಗ ಕೊಡಿಸಲು ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಸಿ ಪಕ್ಷಪಾತ, ಅಕ್ರಮ ಎಸಗಿದ ಆರೋಪ ಹೊತ್ತಿರುವ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಅವರ ಭವಿಷ್ಯ ರಾಜ್ಯಪಾಲರು ನಿರ್ಧರಿಸುವ ನಿರ್ಣಾಯಕ ಹಂತ ತಲುಪಿದೆ. ರಾಜ್ಯಪಾಲರ ನಿರ್ಧಾರವೇನು?
07:44 AM (IST) Jul 05
ಹುಟ್ಟು ಕುರುಡಿಯಾದ ಅನಾಥ ಯುವತಿ ಹುಲಿಗೆಮ್ಮಳನ್ನು, ತಾನೂ ಅನಾಥನಾದ ನಾಗರಾಜ ಎಂಬ ಯುವಕ ಮದುವೆಯಾಗಿದ್ದಾನೆ. ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜದವರು ಈ ಮದುವೆಯ ಸಂಪೂರ್ಣ ಖರ್ಚು ವಹಿಸಿ, ನವ ದಂಪತಿಗೆ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
07:35 AM (IST) Jul 05
ರೈತ ಮಲ್ಲಪ್ಪ ರೊಟ್ಟಿ ಅವರು ಸತತ 11 ಗಂಟೆಗಳಲ್ಲಿ 18 ಎಕರೆ ಜಮೀನು ಬಿತ್ತನೆ ಮಾಡಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಈ ಸಾಧನೆಯನ್ನು ಗೌರವಿಸಿ, ಗ್ರಾಮಸ್ಥರು ರೈತ ದಂಪತಿಯನ್ನು ಚಕ್ಕಡಿಬಂಡಿಯಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಿದರು. ಈ ಘಟನೆಯು ಕೃಷಿಯಿಂದ ವಿಮುಖರಾಗುತ್ತಿರುವ ಯುವ ಸಮುದಾಯಕ್ಕೆ ಪ್ರೇರಣೆಯಾಗಿದೆ ಎಂದು ಪ್ರಗತಿಪರ ರೈತರು ಶ್ಲಾಘಿಸಿದ್ದಾರೆ.
07:23 AM (IST) Jul 05
Avendus Wealth Hurun U30 List ಅವೆಂಡಸ್ ವೆಲ್ತ್ ಹುರೂನ್ ಇಂಡಿಯಾ ಲಿ. ಬಿಡುಗಡೆ ಮಾಡಿದ 2026ನೇ ಸಾಲಿನ 30 ಮತ್ತು ಅದಕ್ಕಿಂತ ಕೆಳಗಿನ ವಯಸ್ಸಿನ ಯುವ ಉದ್ಯಮಿಗಳ ಪಟ್ಟಿಯಲ್ಲಿ ಬೆಂಗಳೂರು ನಗರ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಮುಂಬೈ ಹಿಂದಕ್ಕಿ ಬೆಂಗಳೂರು ಈ ಸ್ಥಾನ ಪಡೆದಿದೆ.
07:23 AM (IST) Jul 05
ಬೆಂಗಳೂರಿನಲ್ಲಿ ಬಿಬಿಎಂಪಿ ಬೃಹತ್ ಕಾರ್ಯಾಚರಣೆ ನಡೆಸಿ ಫುಟ್ಪಾತ್ ಒತ್ತುವರಿ ತೆರವುಗೊಳಿಸಿದೆ. ಈ ಕ್ರಮಕ್ಕೆ ಬೀದಿ ಬದಿ ವ್ಯಾಪಾರಿಗಳಿಂದ ವಿರೋಧ ವ್ಯಕ್ತವಾಗಿದ್ದು, ಪಾದಚಾರಿಗಳ ಸುರಕ್ಷತೆಗಾಗಿ ಇದು ಅನಿವಾರ್ಯ ಮತ್ತು ಫುಟ್ಪಾತ್ ದುರಸ್ತಿಗೆ ₹70 ಕೋಟಿ ಮೀಸಲಿಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ.