LIVE NOW
Published : Jun 05, 2026, 07:07 AM ISTUpdated : Jun 05, 2026, 10:47 AM IST

Karnataka News Live: ಹಿಂದೂ ಸಂಘಟನೆಗಳಿಂದ ಇಂದು ಭಟ್ಕಳ ಬಂದ್, ಮಧ್ಯಾಹ್ನ ಸಂಪೂರ್ಣ ಸ್ಥಬ್ದವಾಗಲಿದೆ ಪಟ್ಟಣ

ಸಾರಾಂಶ

ಖಾತೆ ಹಂಚಿಕೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ಯುಟಿ ಖಾದರ್ ಕಾರ್ಯಪ್ರವೃತ್ತರಾಗಿದ್ದಾರೆ. ಜಯನಗರದ ಜನರಲ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾರೆ. ಆಸ್ಪತ್ರೆಯ ಸ್ವಚ್ಛತೆ, ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿದೆಯಾ ಎಂದು ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಪಾಳಯದ ವೈದ್ಯರು ಗೈರಾಗಿರುವುದನ್ನು ಖಾದರ್ ಗಮನಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಲಾಗುತ್ತದೆ ಎಂದು ಯುಟಿ ಖಾದರ್ ಹೇಳಿದ್ದಾರೆ. ಹೊಸ ಸಚಿವರ ಕೆಲಸ, ರಾಜ್ಯ ರಾಜಕಾರಣ ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ಕ್ಷಣ ಕ್ಷಣದ ಲೈವ್ ಅಪ್‌ಡೇಟ್ ಇಲ್ಲಿದೆ.

Bhatkal Murinakatte reconstruction

10:47 AM (IST) Jun 05

ಹಿಂದೂ ಸಂಘಟನೆಗಳಿಂದ ಇಂದು ಭಟ್ಕಳ ಬಂದ್, ಮಧ್ಯಾಹ್ನ ಸಂಪೂರ್ಣ ಸ್ಥಬ್ದವಾಗಲಿದೆ ಪಟ್ಟಣ

ಮುರಿನ ಕಟ್ಟೆ ಧ್ವಂಸ ಪ್ರಕರಣ ಸಂಬಂಧ ಹಿಂದೂ ಸಂಘಟನೆಗಳು ಕೆರಳಿದೆ. ಅನ್ಯ ಕೋಮಿನ ಸಮುದಾಯದ ಉದ್ರಿಕ್ತರು ಮುರಿನ ಕಟ್ಟೆ ಧ್ವಂಸಗೊಳಿಸಿರುವುದು ಹಾಗೂ ಕಟ್ಟೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಇಂದು ಬಂದ್ ನಡೆಸಲಾಗುತ್ತಿದೆ.

Read Full Story

10:44 AM (IST) Jun 05

ಕೋಲಾರ - ಮಲಗಿದ್ದ ಕುರಿಗಳ ಮೇಲೆ ಚಾಕು-ಮಚ್ಚುಗಳಿಂದ ಇರಿದ ದುಷ್ಕರ್ಮಿಗಳು! 50 ಕುರಿಗಳ ಪೈಕಿ 5 ಸಾವು, 18 ಕುರಿಗಳ ಸ್ಥಿತಿ ಗಂಭೀರ!

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬೆಡಶೆಟ್ಟಹಳ್ಳಿಯಲ್ಲಿ ಆಘಾತಕಾರಿ, ಅಮಾನವೀಯ ಘಟನೆ ನಡೆದಿದೆ, ರಾತ್ರಿ ಶೆಡ್‌ನಲ್ಲಿ ಮಲಗಿದ್ದ 50ಕ್ಕು ಹೆಚ್ಚು ಕುರಿಗಳ ಮೇಲೆ ದುಷ್ಮರ್ಮಿಗಳು ಚಾಕು ಮಚ್ಚು ದಾಳಿಸಿದ್ದಾರೆ. ಐದು ಕುರಿಗಳು ನರಳಾಡಿ ಸತ್ತಿವೆ ಉಳಿದ ಕುರಿಗಳು ಸ್ಥಿತಿ ಗಂಭೀರವಾಗಿದೆ.

Read Full Story

10:38 AM (IST) Jun 05

ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ಡಿಮ್ಯಾಂಡಪ್ಪೋ ಡಿಮ್ಯಾಂಡ್, ಸಚಿವರ ಜಿದ್ದಾಜಿದ್ದಿಗೆ ಅಸಲಿ ಕಾರಣಗಳೇನು?

ಕರ್ನಾಟಕ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ಸಚಿವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ಖಾತೆಯು ಬೃಹತ್ ಬಜೆಟ್, ಪ್ರಮುಖ ಸಂಸ್ಥೆಗಳ ಮೇಲಿನ ನಿಯಂತ್ರಣ, ಮತ್ತು ಅಪಾರ ರಾಜಕೀಯ ಪ್ರಭಾವವನ್ನು ನೀಡುವುದರಿಂದ, ಸಚಿವರು ಇದಕ್ಕಾಗಿ ಪಟ್ಟು ಹಿಡಿಯುತ್ತಾರೆ.  

Read Full Story

10:34 AM (IST) Jun 05

ರಾಮಲಿಂಗಾ ರೆಡ್ಡಿ ಬೆನ್ನಲ್ಲೇ ಮತ್ತೊಂದು ಶಾಕ್, ಸಾಮೂಹಿಕ ರಾಜೀನಾಮೆಗೆ ಮುಂದಾದ ಕಾಂಗ್ರೆಸ್ ಕಾರ್ಯಕರ್ತರು

ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದಾರೆ. ಸರ್ಕಾರ ರಚನೆಯಾದ ಕೆಲವೇ ದಿನಕ್ಕೆ ಕೋಲಾಹಲ ತೀವ್ರಗೊಂಡಿದೆ.

Read Full Story

10:07 AM (IST) Jun 05

ಖಾತೆ ಅಲ್ಲ ತೀವ್ರ ನೋವು, ಸಚಿವ ಸ್ಥಾನಕ್ಕೆ ರಾಜೀನಾಮೆ ಹಿಂದಿನ ಕಾರಣ ಬಹಿರಂಗಪಡಿಸಿದ ರಾಮಲಿಂಗಾ ರೆಡ್ಡಿ

ಡಿಕೆ ಶಿವಕುಮಾರ್ ಸರ್ಕಾರದಲ್ಲಿ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ತಮ್ಮ ರಾಜೀನಾಮೆಗೆ ಖಾತೆ ಕಾರವಲ್ಲ, ನೋವು ಎಂದಿದ್ದಾರೆ.

Read Full Story

09:55 AM (IST) Jun 05

'ನನಗೆ ಪಕ್ಷ ಜವಾಬ್ದಾರಿ ನೀಡಿದೆ' ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಮಹತ್ವದ ಹೇಳಿಕೆ!

ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಂಡ ಸಚಿವರು, ರಾತ್ರೋರಾತ್ರಿ ಬದಲಾವಣೆ ಅಸಾಧ್ಯವೆಂದರೂ, ಕಠಿಣ ಕ್ರಮಗಳ ಮೂಲಕ ಸುಧಾರಣೆ ತರುವ ಭರವಸೆ ನೀಡಿದ್ದಾರೆ. ಇದೇ ವೇಳೆ, ಸಚಿವ ರಾಮಲಿಂಗಾ ರೆಡ್ಡಿ ಅವರ ಅಸಮಾಧಾನದ ಕುರಿತು ಪ್ರತಿಕ್ರಿಯಿಸಿ, ಸಹಕಾರ ಕೋರುವುದಾಗಿ ತಿಳಿಸಿದ್ದಾರೆ.
Read Full Story

09:42 AM (IST) Jun 05

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ, ಖಾತೆ ಹಂಚಿಕೆ ಬೆನ್ನಲ್ಲೇ ಹೊಸ ಸರ್ಕಾರದಲ್ಲಿ ತಳಮಳ

ತೀವ್ರ ಬೇಸರಗೊಂಡಿರುವ ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನನಗೆ ಕೊಡ್ತೇನೆ ಎಂದು ಕಿತ್ತುಕೊಂಡಿದ್ದಾರೆ. ಇದು ನನಗೆ ತೀವ್ರ ಬೇಸರ ತರಿಸಿದೆ. ಯಾವುದೇ ಮಾತುಕತೆಗೆ ನಾನು ಮಣಿಯುವುದಿಲ್ಲ ಎಂದಿದ್ದಾರೆ.

 

Read Full Story

09:28 AM (IST) Jun 05

ಮನವೊಲಿಕೆ ಪ್ರಯತ್ನಕ್ಕೆ ಹಿನ್ನಡೆ, ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಸಚಿವ ರಾಮಲಿಂಗಾ ರೆಡ್ಡಿ

ಮುನಿಸಿಕೊಂಡಿರುವ ಸಚಿವ ರಾಮಲಿಂಗಾ ರೆಡ್ಡಿ ಪಟ್ಟು ಬಿಗಿಗೊಳಿಸಿದ್ದಾರೆ. ಯಾವುದೇ ಮನ ಒಲಿಕೆಗೆ ರಾಮಲಿಂಗಾ ರೆಡ್ಡಿ ಜಗ್ಗಿಲ್ಲ. ಇದೀಗ ರಾಜೀನಾಮೆ ಪತ್ರಕ್ಕೆ ಅಧಿಕೃತ ಸಹಿ ಮಾಡಿದ್ದಾರೆ. ಇದೇ ವೇಳೆ ನಾನು ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ.

Read Full Story

08:59 AM (IST) Jun 05

ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಮುನಿಸು, ಇಂದು ರಾಜೀನಾಮೆ ಸಲ್ಲಿಕೆ ಸಾಧ್ಯತೆ

ಸಚಿವ ರಾಮಲಿಂಗಾ ರೆಡ್ಡಿ ತಮಗೆ ನೀಡಿರುವ ಜಲಸಂಪನ್ಮೂಲ ಖಾತೆಯಿಂದ ಮುನಿಸಿಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಪರಿಣಾಮ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

 

Read Full Story

08:40 AM (IST) Jun 05

ವಿದೇಶಿ ಶಂಕಿತ ಉಗ್ರರ ಜೊತೆ ನಿರಂತರ ಚಾಟ್ ಬಹಿರಂಗ, ತುಮಕೂರಿನ ಅಲ್ಲಾ ಬಕ್ಷು ಅರೆಸ್ಟ್

ವಿದೇಶಿ ಶಂಕಿತ ಉಗ್ರರ ಜೊತೆ ನಿರಂತರ ಸಂಪರ್ಕದಲ್ಲಿದ್ದ ತುಮಕೂರಿನ 24ರ ಹರೆಯದ ಯುವಕ ಅಲ್ಲಾ ಬಕ್ಷುವನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ಚಾಟ್‌ಗಳು, ಉಗ್ರರ ಚಟುವಟಿಕೆ ಕುರಿತು ಚಾಟ್ ಮಾಡಿರುವುದು ಬಯಲಾಗಿದೆ.

 

Read Full Story

07:54 AM (IST) Jun 05

ಡಿವೋರ್ಸ್ ಹೋರಾಟ ಗೆದ್ದ ಭಾರತದ ಮಹಿಳೆಗೆ ಬರೋಬ್ಬರಿ 85 ಕೋಟಿ ರೂಪಾಯಿ ಜೀವನಾಂಶ

ಕಳೆದ 2 ದಶಕಗಳಿಂದ ನಡೆಸುತ್ತಿದ್ದ ಡಿವೋರ್ಸ್ ಹೋರಾಟದಲ್ಲಿ ಕೊನೆಗೂ ಭಾರತೀಯ ಮಹಿಳೆ ಗೆದ್ದಿದ್ದಾರೆ. ಪರಿಣಾಮ ಇದೀಗ ಜೀವನಾಂಶವಾಗಿ ಬರೋಬ್ಬರಿ 85 ಕೋಟಿ ರೂಪಾಯಿ ಪಡೆದಿದ್ದಾರೆ. ಆರಂಭದಲ್ಲಿ ಕೋರ್ಟ್ 3.5 ಕೋಟಿ ರೂ ಪಡೆದಿದ್ದರು. ಏನಿದು ಪ್ರಕರಣ?

Read Full Story

07:50 AM (IST) Jun 05

Karnataka Politics - ಹೊಸ ಸರ್ಕಾರ ರಚನೆ ಬೆನ್ನಲ್ಲೇ ಡಿಕೆ-ಬಿಕೆ ಬಗ್ಗೆ ರಾಜಣ್ಣ ಹೇಳಿಕೆ ವೈರಲ್!

ಮಾಜಿ ಸಚಿವ ಕೆ.ಎನ್‌. ರಾಜಣ್ಣ ಅವರ ಪ್ರಕಾರ, ಕಾಂಗ್ರೆಸ್ ಪಕ್ಷದ ಶಕ್ತಿ ಅಹಿಂದ ವರ್ಗಗಳಲ್ಲಿದ್ದು, ಅವರ ವಿಶ್ವಾಸ ಗಳಿಸುವುದರ ಮೇಲೆ ಸರ್ಕಾರದ ಭವಿಷ್ಯ ನಿಂತಿದೆ. ಮುಖ್ಯಮಂತ್ರಿ ಆಯ್ಕೆ ಮತ್ತು ಬಿ.ಕೆ. ಹರಿಪ್ರಸಾದ್ ನೇಮಕದ ಬಗ್ಗೆಯೂ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
Read Full Story

07:07 AM (IST) Jun 05

ಗರ್ಭಿಣಿ ನೆಲದ ಕುಳಿತಿರುವುದು ಕಂಡು ಗರಂ ಆದ ಖಾದರ್

ಜಯನಗರ ಜನರಲ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ವೇಳೆ ಆರೋಗ್ಯ ಸಚಿವ ಯುಟಿ ಖಾದರ್, ವೈದ್ಯಾಧಿಕಾರಿಗಳು, ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗರ್ಭಿಣಿಯೊಬ್ಬರು ನೆಲದ ಮೇಲೆ ಕುಳಿತಿರುವುದು ಕಂಡಿದ್ದಾರೆ. ಸ್ಥಳದಲ್ಲೆ ಸಿಬ್ಬಂದಿಗಳನ್ನು, ವೈದ್ಯರನ್ನು ಪ್ರಶ್ನಿಸಿದ್ದಾರೆ.


More Trending News